Author: kannadanewsnow05

ಚಿತ್ರದುರ್ಗ : ಇಟ್ಟಿಗೆ ತುಂಬಿದ ಟ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಅಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಜನರಿಗೆ ಗಂಭೀರವಾದಂತ ಗಾಯಗಳಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಘಟನೆ ಸಂಭವಿಸಿದೆ. ಮದುವೆ ಮುಗಿಸಿಕೊಂಡು ಮಾಗಡಿಗೆ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತಂತೆ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವಾಗಿದೆ ಹಣಕಾಸಿನ ವಿಚಾರಕ್ಕೆ ವ್ಯಕ್ತಿಯ ಬರ್ಬರ ಕೊಲೆ ಹಣದ ವಿಷಯಕ್ಕೆ ಸಂಬಂಧಿಸಿದಂತೆ ಶ್ರೀನಿವಾಸ್ (28) ಎನ್ನುವ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಹೊಸ್ಕುರು ಎಂಬಲ್ಲಿ ಈ ಕೊಲೆ ನಡೆದಿದೆ. ಲಾಂಗ್ ನಿಂದ ಕೊಚ್ಚಿ ಶ್ರೀನಿವಾಸ್ ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಗೈಯ್ಯಲಾಗಿದೆ.ಬೆಂಗಳೂರು ಉತ್ತರ ತಾಲೂಕಿನ ಹೊಸ್ಕುರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.ಕೊಲೆಗೆ ಈಡಾದ ಶ್ರೀನಿವಾಸ್ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ…

Read More

ರಾಯಚೂರು : ಜಿಲ್ಲೆಯ ಸಿರಿವಾರ ಪಟ್ಟಣದಲ್ಲಿ ಕಿಡಿಗೇಡಿಗಳು ಟಿಪ್ಪು ಸುಲ್ತಾನ್​ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದರು. ಈ ಪ್ರಕರಣ ಸಂಬಂಧ ಸಿರವಾರ ಪಟ್ಟಣ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನ ಮಾನ್ವಿ ತಾಲೂಕಿನ ಸಿರವಾರ ಪಟ್ಟಣದ ನಿವಾಸಿ ಆಕಾಶ್ (23) ಎಂದು ಹೇಳಲಾಗುತ್ತಿದೆ. ಜನವರಿ 31ರಂದು ಮಾನ್ವಿ ತಾಲೂಕಿನ ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್‌ನಲ್ಲಿ ಹಾಕಲಾಗಿರುವ ಟಿಪ್ಪು ಸುಲ್ತಾನ್​ ಭಾವಚಿತ್ರಕ್ಕೆ ಕಿಡಿಗೇಡಿಗಳು ರಾತ್ರೋರಾತ್ರಿ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದರು. ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡ ಮುಸ್ಲಿಮರು ತೀವ್ರ ಆಕ್ರೋಶ ಹೊರ ಹಾಕಿದ್ದರು. ಅಲ್ಲದೆ ರಾಜ್ಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದ್ದರು. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ದರು. ಸಿರವಾರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗಾಗಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ನಿಖಿಲ್ ಎರಡು ವಿಶೇಷ ತಂಡ ರಚಿಸಿದ್ದರು.…

Read More

ಬೆಳಗಾವಿ : ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಒತ್ತಡ ವಿಚಾರಕ್ಕೆ ಕಾಂಗ್ರೆಸ್ MLC ಪ್ರಕಾಶ್ ಹುಕ್ಕೇರಿ ಸಿಟ್ಟಾಗಿದ್ದು ನಾನು ಏನಾದರೂ ಫುಟ್ಬಾಲ? ಎಂದು ಪ್ರಕಾಶ್ ಹುಕ್ಕೇರಿ ಪ್ರಶ್ನಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ಈ ಹೇಳಿಕೆಯನ್ನು ನೀಡಿದ ಅವರು, ಈ ಹಿಂದೆ ನನ್ನನ್ನು ದೆಹಲಿಗೆ ಹೋಗಿ ಎಂದು ಒಗೆದರು ಎಂದು ಕೆರೂರು ಗ್ರಾಮದಲ್ಲಿ ಕಾಂಗ್ರೆಸ್ ಎಂಎಲ್ಸಿ ಪ್ರಕಾಶ್ ಹುಕ್ಕೇರಿ ಸ್ವಪಕ್ಷದ ವಿರುದ್ಧವೇ ಸಿಟ್ಟಾಗಿರುವ ಘಟನೆ ಜರುಗಿತು. ಈ MP ಚುನಾವಣೆಗೆ ನಿಲ್ಲು ಅಂತಿದಾರೆ. ಮತ್ತೆ ದಿಲ್ಲಿಗೆ ಹೋಗಿ ಬೀಳಬೇಕು ನಾನೇನು ಫುಟ್ಬಾಲ? ಎಂದರೂ. ಸಿಎಂ ನಿಲ್ಲಬೇಕು ಅಂತ ಹೇಳಿದರೆ ಅವರಿಗೆ ಏನಾದರೂ ನಾನು ಬರೆದು ಕೊಟ್ಟಿದ್ದನಾ? ನನ್ನನ್ನು ಏನಾದರೂ ಫುಟ್ಬಾಲ್ ಆಗಿ ಮಾಡಿಕೊಂಡಿದ್ದೀರಾ? ನಾನು ಲೋಕಸಭಾ ರಾಜ್ಯಸಭಾ ಚುನಾವಣೆಗೆ ನಿಲ್ಲುವುದಿಲ್ಲ. ಚಿಕ್ಕೋಡಿ ಅಭ್ಯರ್ಥಿ ಯಾರು ಅಂತ ಹೈಕಮಾಂಡ್ ಹೇಳಬೇಕು. ನನಗೆ ಎಷ್ಟೇ ಒತ್ತಡ ಹೇರಿದರೂ ಕೂಡ ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ನಾನು ಶಿಕ್ಷಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತೇನೆ. ಶಿಕ್ಷಕರ…

Read More

ಬೆಂಗಳೂರು : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಚಿನ್ನ ಜಪ್ತಿ ಮಾಡಿಕೊಂಡಿದ್ದು, ಸಿಂಗಾಪುರದಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕರನ್ನು ಈ ವೇಳೆ ಬಂಧಿಸಲಾಗಿದೆ. ಬಂಧಿತನಿಂದ 47.89 ಲಕ್ಷ ಮೌಲ್ಯದ 77 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಟೋಪಿಯಲ್ಲಿ ಚಿನ್ನವನ್ನು ವೇಸ್ಟ್ ರೂಪದಲ್ಲಿ ಆರೋಪಿ ಅಡಗಿಸಿಟ್ಟಿದ್ದ ಎಂದು ಹೇಳಲಾಗುತ್ತಿದ್ದು, ಸಿಂಗಾಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ್ದ. ಆದರೆ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ತಪಾಸಣೆ ವೇಳೆ ಆರೋಪಿ ಹಾಕಿಕೊಂಡಿದ್ದ ಟೋಪಿಯಲ್ಲಿ ಚಿನ್ನ ಪತ್ತೆಯಾಗಿದೆ. ಇದೀಗ ಚಿನ್ನದ ಸಮೇತ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಳೆಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಈ ಪ್ರಕರಣ ನಡೆದಿದ್ದು, ಕೆಐಡಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ವ್ಯಕ್ತಿಯೊಬ್ಬರ ಮೊಬೈಲ್‌ಗೆ ವರ್ಕ್ ಫ್ರಮ್ ಹೋಂ ಜಾಹೀರಾತು ಸಂದೇಶ ಕಳುಹಿಸಿ ಸೈಬರ್ ವಂಚಕರು ಆತನಿಂದ ರೂ.1.63 ಲಕ್ಷ ಪಡೆದು ವಂಚಿಸಿರುವ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎಜಿಎಸ್ ಲೇಔಟ್ ನಿವಾಸಿ ಅಭಿಜಿತ್ ಕಬಾದ್ ಹಣ ಕಳೆದುಕೊಂಡವರು ಎಂದು ತಿಳಿದುಬಂದಿದೆ. ಇತ್ತೀಚೆಗೆ ಅಭಿಜಿತ್ ಅವರ ಮೊಬೈಲ್ ಫೋನ್‌ಗೆ ವರ್ಕ್ ಪ್ರಮ್ ಹೋಮ್ ಜಾಹೀರಾತು ಸಂದೇಶ ಬಂದಿದೆ. ಗೂಗಲ್‌ನಲ್ಲಿ ರಿವ್ಯೂ ಕೊಟ್ಟು ರೂ.150 ಗಳಿಸಬಹುದು ಎಂದು ಆ ಸಂದೇಶದಲ್ಲಿ ತಿಳಿಸಲಾಗಿದೆ. ಅದರಂತೆ ಅಭಿಜಿತ್ ಮೊದಲಿಗೆ ಗೂಗಲ್ ರಿವ್ಯೂ ಕೊಟ್ಟು ರೂ.150 ಪಡೆದುಕೊಂಡಿದ್ದಾರೆ. ದೊಡ್ಡ ಮೊತ್ತ ಪಡೆದು ವಂಚನೆ: ಮಾರನೇ ದಿನ ಸೈಬ‌ರ್ ವಂಚಕರು ಟೆಲಿಗ್ರಾಮ್ ಆ್ಯಪ್‌ನಲ್ಲಿ ಅಭಿಜಿತ್ ಗೆ ಒಂದು ಲಿಂಕ್ ಕಳುಹಿಸಿದ್ದಾರೆ. ಆ ಲಿಂಕ್ ತೆರೆದು ಅಭಿಜಿತ್ ಗೂಗಲ್ ರಿವ್ಯೂ ಕೊಟ್ಟಿದ್ದಾರೆ. ಇದರಿಂದ ಅವರ ಖಾತೆಗೆ ₹150 ಬಂದಿದೆ. ಬಳಿಕ ಆ ಲಿಂಕ್ ಮೂಲಕ ₹1,300 ಪಾವತಿಸಿ, ₹1,950 ಮರಳಿ ಪಡೆದಿದಾರೆ. ಇದೇ ರೀತಿ ₹5 ಸಾವಿರ…

Read More

ನವದೆಹಲಿ : ಅಯೋಧ್ಯೆಯಲ್ಲಿ ನಿರ್ಮಿಸಲಾದ ರಾಮಮಂದಿರ ದಲ್ಲಿ ಬಾಲಕ ರಾಮನ ಪ್ರಾಣಪ್ರತಿಷ್ಠೆ ನೆರವೇರಿಸಿದ ಬಳಿಕ ಪ್ರಧಾನಿ ಮೋದಿ ದೆಹಲಿಯಲ್ಲಿ ಘೋಷಿಸಿದ್ದ 1 ಕೋಟಿ ಮನೆಗಳಿಗೆ ಸೋಲಾರ್ ಛಾವಣಿ ಅಳವಡಿಸುವ ‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ’ಗೆ ಬಜೆಟ್‌ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ. ಈ ಯೋಜನೆಯ ಫಲಾನುಭವಿಗಳಿಗೆ ಪ್ರತಿ ತಿಂಗಳು 300 ಯುನಿಟ್‌ಗಳಷ್ಟು ಉಚಿತ ವಿದ್ಯುತ್ ನೀಡಲಾಗುವುದು. ಜೊತೆಗೆ, ಅವರು ಉತ್ಪಾದಿಸಿದ ಹೆಚ್ಚುವರಿ ಸೌರವಿದ್ಯುತ್ತನ್ನು ವಿದ್ಯುತ್ ವಿತರಕ ಕಂಪನಿಗಳಿಗೆ ಮಾರಾಟ ಮಾಡಲು ಅವಕಾಶ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ಬಜೆಟ್ ಭಾಷಣದಲ್ಲಿ ರಾಮಮಂದಿರದಲ್ಲಿ ನಡೆದ ಪ್ರಾಣಪ್ರತಿಷ್ಠೆಯನ್ನು ಉಲ್ಲೇಖಿಸಿದ ಅವರು, ‘ಅಯೋಧೈಯಲ್ಲಿ ನಡೆದ ಐತಿಹಾಸಿಕ ಪ್ರಾಣಪ್ರತಿಷ್ಠೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಯೋಜನೆಯಡಿ ಈ ಕೆಳಕಂಡ ಅನುಕೂಲಗಳನ್ನು ಮಾಡಿಕೊಡಲಾಗುತ್ತಿದೆ’ ಎಂದು ಪ್ರಕಟಿಸಿದರು. ಛಾವಣಿ ಸೌರಶಕೀಕರಣ ಯೋಜನೆಯಡಿ ದೇಶದ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು ಉಚಿತವಾಗಿ ಅವರೇ ಉತ್ಪಾದಿಸಿದ 300 ಯುನಿಟ್ ಸೌರವಿದ್ಯುತ್ ಲಭಿಸಲಿದೆ. 300ಕ್ಕಿಂತ ಹೆಚ್ಚು ಯುನಿಟ್ ಸೌರವಿದ್ಯುತ್ ಉತ್ಪಾದಿಸಿದರೆ ಅದನ್ನು ಅವರು ವಿದ್ಯುತ್…

Read More

ಹೊಸದಿಲ್ಲಿ: ಅಂತ್ಯೋದಯ ಯೋಜನೆ ಅಡಿಯಲ್ಲಿ ಬರುವ ಫಲಾನುಭವಿಗಳಿಗೆ ಕೇಂದ್ರ ಸಿಹಿಸುದ್ದಿಯನ್ನು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಅಡಿಯಲ್ಲಿ ಬರುವ 1.89 ಕೋಟಿ ಕುಟುಂಬಗಳಿಗೆ ಪಡಿತರ ಅಂಗಡಿ ಮೂಲಕ ಪೂರೈಸುವ ಸಕ್ಕರೆಗೆ 2026ರ ಮಾರ್ಚ್ 31ರ ತನಕ ಸಬ್ಸಿಡಿ ವಿಸ್ತರಿಸುವ ಪ್ರಸ್ತಾವಕ್ಕೆ ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು. ಪಡಿತರ ವ್ಯವಸ್ಥೆ ಮೂಲಕ ಸಕ್ಕರೆ ವಿತರಿಸುವ ಎಲ್ಲ ರಾಜ್ಯಗಳಿಗೂ ಪ್ರತಿ ಕೆ.ಜಿ. ಸಕ್ಕರೆಗೆ 18.50 ರೂ ಸಬ್ಸಿಡಿ ಸಿಗಲಿದೆ. ಸಕ್ಕರೆಯನ್ನು ಸಂಗ್ರಹಿಸಿ ಅದನ್ನು ವಿತರಿಸುವ ಹೊಣೆ ರಾಜ್ಯಗಳ ಮೇಲಿದೆ. ಇದರಿಂದ ಬಡವರಿಗೆ ಅನುಕೂಲವಾಗುತ್ತದೆ. ಈಗಾಗಲೇ ಕೇಂದ್ರ ಸರಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂ-ಜಿಕೆಎವೈ) ಅಡಿ ಯಲ್ಲಿಉಚಿತ ಪಡಿತರವನ್ನು ನೀಡುತ್ತಿದೆ. ಇದಲ್ಲದೆ ಸಬ್ಸಿಡಿ ದರದಲ್ಲಿ ಬೇಳೆ, ಗೋಧಿ ಹಿಟ್ಟು ಮತ್ತು ಸಕ್ಕರೆಯ…

Read More

ಕಲಬುರಗಿ: ಮಹಿಳಾ ಪೊಲೀಸ್ ಸಿಬ್ಬಂದಿ ಜೊತೆಗೆ ಕರ್ನಾಟಕದ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಕಿರಿಕ್ ಮಾಡಿಕೊಂಡಿದ್ದು,ತಮಿಳುನಾಡಿನ ಗೋಬಿ ಪೊಲೀಸ್ ಠಾಣೆಯಲ್ಲಿ ಐಪಿಎಸ್ ಅಧಿಕಾರಿ ವಿರುದ್ಧ ಜಿಲ್ಲೆಯ ಮಹಿಳಾ ಪೊಲೀಸ್ ಒಬ್ಬರು ದೂರು ದಾಖಲು ಮಾಡಿದ್ದರಿಂದ ಐಪಿಎಸ್ ಅಧಿಕಾರಿಯನ್ನು ತಮಿಳುನಾಡು ಪೊಲೀಸರು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕದ ಅರುಣ್ ರಂಗರಾಜನ್ ಬಂಧಿತ ಅಧಿಕಾರಿ ಎಂದು ಹೇಳಲಾಗುತ್ತಿದ್ದು, ದೂರು ನೀಡಿದ ಮಹಿಳೆ ಚಿಂಚೋಳಿ ತಾಲೂಕಿನ ಪೊಲೀಸ್ ಠಾಣೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಾರೆ ಎಂದು ಮೂಲಗಳು ತಿಳಿಸಿವೆ. ಕೆಲವು ದಿನಗಳ ಹಿಂದೆ ಈ ಮಹಿಳೆ ಜತೆ ಐಪಿಎಸ್ ಅಧಿಕಾರಿ ಅರುಣ ರಂಗರಾಜನ್ ತಮಿ ಳುನಾಡಿನ ತಿರುಚ್ಚಿಗೆ ತೆರಳಿದ್ದರು. ಈ ವೇಳೆ ಅವರಿಬ್ಬರ ಮಧ್ಯೆ ಜಗಳವಾಗಿದೆ. ಸ್ಥಳೀಯ ಪೊಲೀಸರು ರಾಜಿ ಮಾಡಿ ಕಳಿಸಿದ್ದರು. ಕಲಬುರಗಿ ಮಹಿಳಾ ಪೊಲೀಸ್ ದೂರು ಬಳಿಕ ಅರುಣ್ ಅವರು ತಮ್ಮ ಹುಟ್ಟೂರು ತಿರುಚ್ಚಿಯ ಶ್ರೀರಂಗಂಗೆ ತಮ್ಮನ್ನು ಕರೆದೊಯ್ದಿದ್ದು, ಹಲ್ಲೆ ನಡೆಸಿದ್ದಾರೆ ಎಂದ ಮಹಿಳೆ ಗೋಬಿ ಪೊಲೀಸ್…

Read More

ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸಹಕಾರ ಸಂಘಗಳ ಮೂಲಕ ರೈತರು ಪಡೆದಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳ ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಮಾಡುವ ತೀರ್ಮಾನಕ್ಕೆ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.ಈ ಮೂಲಕ ರೈತರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವ ಹಾಗಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ರೈತರಿಗೆ ತುಸು ರಿಲೀಫ್ ನೀಡಲು ಕೈಗೊಂಡಿರುವ ಈ ನಿರ್ಧಾರವು ಪ್ರಾಥಮಿಕ ಸಹಕಾರ ಸಂಘ, ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಗಳು (ಪಿಕಾರ್ಡ್) ಮತ್ತು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳಲ್ಲಿನ ಸುಸ್ತಿ ಸಾಲಗಳಿಗೆ ಅನ್ವಯವಾಗಲಿದೆ ಎಂದು ಹೇಳಲಾಗುತ್ತಿದೆ. ಸಾಲಗಳ ಅಸಲು ಪಾವತಿಸಿದರೆ ಅದರ ಮೇಲಿನ ಬಡ್ಡಿ ಮನ್ನಾ ಆಗಲಿದೆ. ರೈತರು ಈ ಬಡ್ಡಿ ಮನ್ನಾ ಸೌಲಭ್ಯ ಪಡೆಯಬೇಕಾದರೆ ಇದೇ ತಿಂಗಳ 29 ರೊಳಗೆ ಸಾಲಗಳ ಅಸಲು ಮರುಪಾವತಿಸಬೇಕಿದೆ. 2023ರ ಡಿಸೆಂಬರ್ 31ಕ್ಕೆ ಸುಸ್ತಿಯಾಗಿರುವ ರೈತರ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳಿಗೆ ಅನ್ವಯವಾಗುವಂತೆ ಕಳೆದ ಜ.20 ರಂದು ಸರಕಾರ ಆದೇಶ…

Read More

ಮಂಡ್ಯ : ಪಾಂಡವಪುರ ಪಟ್ಟಣದ ತನ್ನ ಮನೆಯ ಬಾತ್‍ರೂಂನಲ್ಲಿ (ಸ್ನಾನದ ಕೋಣೆ) ನಗ್ನ ಸ್ಥಿತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಶವ ಪತ್ತೆಯಾಗಿದ್ದು, ಪತ್ನಿ ಹಾಗೂ ಪತ್ನಿಯ ಕುಟುಂಬಸ್ಥರು ಕೊಲೆ ಮಾಡಿದ್ದಾರೆ ಎಂದು ಮೃತ ತಾಯಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪಟ್ಟಣದ ನಿವಾಸಿ ಲೇ.ಶಿವಣ್ಣರ ಪುತ್ರ ಪುತ್ರ ಟಿ.ಎಸ್.ಗಂಗಾಧರ್ (42) ಮೃತ ವ್ಯಕ್ತಿ. ತಮಿಳುನಾಡು ಮೂಲದ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮೃತ ಗಂಗಾಧರ್ ಮೂಲತಃ ಪಾಂಡವಪುರ ತಾಲೂಕಿನ ಕೆರೆತೊಣ್ಣೂರು ಗ್ರಾಮದವರು. ಅದೇ ಗ್ರಾಮದ ನಿವಾಸಿ ಬಸವೇಗೌಡರ ಪುತ್ರಿ ಭವ್ಯರನ್ನು ವಿವಾಹವಾಗಿದ್ದರು. ದಂಪತಿಗೆ ಒಂದು ಹೆಣ್ಣು ಮಗುವಿದೆ ಎಂದು ಹೇಳಲಾಗುತ್ತಿದೆ. ಗಂಗಾಧರ್ ಹಾಗೂ ಪತ್ನಿ ಭವ್ಯ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದರು. ಬಳಿಕ ಕೋರ್ಟ್ ಮೂಲಕ ರಾಜಿಸಂಧಾನ ಮಾಡಿಕೊಂಡು ಕಳೆದ ಆರು ತಿಂಗಳಿಂದ ಪಟ್ಟಣದ ಶಾಂತಿನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ. ಮೃತ ಗಂಗಾಧರ್ ಹಾಗೂ ಪತ್ನಿ ಭವ್ಯ ದಾಂಪತ್ಯದಲ್ಲಿ ಬಿರುಕು…

Read More