Author: kannadanewsnow05

ಹುಬ್ಬಳ್ಳಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯಾದ್ಯಂತ ಬರೋಬ್ಬರಿ 490 ಕೊಲೆಗಳು ನಡೆದಿವೆ. ಜೊತೆಗೆ, 600ಕ್ಕೂ ಅಧಿಕ ರೈತರ ಆತ್ಮಹತ್ಯೆಗಳಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದರು. ಹುಬ್ಬಳ್ಳಿಯಲ್ಲಿ ಕೆಲವು ದಿನಗಳ ಹಿಂದೆ ಭೀಕರವಾಗಿ ಕೊಲೆಯಾದ ಅಂಜಲಿ ಮನೆಗೆ ಭೇಟಿ ನೀಡಿದ‌ ಬಳಿಕ‌ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯ ಸರ್ಕಾರಕ್ಕೆ ಗಂಭೀರತೆ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ 490 ಕೊಲೆ ಹಾಗೂ 600 ರೈತರ ಆತ್ಮಹತ್ಯೆಗಳಾಗಿವೆ. ಇದನ್ನ ಪ್ರಶ್ನೆ ಮಾಡಿದರೆ, ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಪ್ರಕರಣಗಳಾಗಿವೆ ಅಂತಾ ಹುಡುಕಲು ಅಧಿಕಾರಿಗಳನ್ನು ನೇಮಿಸುತ್ತಾರೆ ಎಂದರು. ರಾಜ್ಯದಲ್ಲಿ ಅನೇಕ‌ ಬಡ‌ಜನರು ತಮ್ಮ‌ ಮಕ್ಕಳನ್ನ ಕಾಲೇಜಿಗೆ ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ. ಗಂಭೀರ ಘಟನೆ ನಡೆದಾಗ ಯಾರೋ ಒಬ್ಬ ಅಧಿಕಾರಿ‌ಯನ್ನು ಸಸ್ಪೆಂಡ್ ಮಾಡಿ‌ ಕೈತೊಳೆದುಕೊಳ್ಳಬಾರದು. ಇಂತಹ ಘಟನೆಗಳಿಂದ ಜನರು ಭಯಗೊಂಡದ್ದಾರೆ. ಜನರೇ ಬಂದು‌ ಹೋರಾಟ ಮಾಡುವ ಪರಿಸ್ಥಿತಿಯನ್ನ‌ ಸರ್ಕಾರ ತಂದುಕೊಳ್ಳಬಾರದು. ಇವರೆಲ್ಲರೂ…

Read More

ಹುಬ್ಬಳ್ಳಿ : ಇತ್ತೀಚಿಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಕೊಲೆಯಾದ ಅಂಜಲಿ ಅಂಬಿಗೇರ ಸಹೋದರಿ ಯಶೋಧ ಅಕ್ಕನ ಸಾವಿನಿಂದ ಮನನೊಂದು ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೆ ಅವರನ್ನು ಕಿಮ್ಸ್​ (KIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಯಶೋಧ ಗುಣಮುಖವಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇದೆ ವೇಳೆ ನಿನ್ನೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಅಂಜಲಿ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಘಟನೆ ನಡೆದು ನಾಲ್ಕು ದಿನಗಳ ಬಳಿಕ ಸಚಿವರು ಹಾಗೂ ಶಾಸಕರು ಆಗಮಿಸಿದ್ದಕ್ಕೆ ಸ್ಥಳೀಯರು ಆಕ್ರೋಶಗೊಂಡಿದ್ದರು.ಈ ವೇಳೆ ಸ್ಥಳೀಯ ನಾಯಕರು ಜನರನ್ನು ಸಮಾಧಾನಗೊಳಿಸಿದರು. ಅಲ್ಲದೆ ಸಂತೋಷ್​ ಲಾಡ್ ಫೌಂಡೇಶನ್ ವತಿಯಿಂದ ಸಚಿವರು ಎರಡು ಲಕ್ಷ ರೂಪಾಯಿ ನೀಡಿದರು.ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಶನಿವಾರ ರಂದು ಅಂಬಿಗರ ಚೌಡಯ್ಯ ಪೀಠದ ಶ್ರೀ ಶಾಂತಭೀಷ್ಮ ಸ್ವಾಮೀಜಿ, ದಿಂಗಾಲೇಶ್ವರ ಶ್ರೀ, ಮನಸೂರಿನ ಬಸವರಾಜ ದೇವರು ಶ್ರೀ ಸೇರಿದಂತೆ ವಿವಿಧ ಮಠಾಧೀಶರು ಮತ್ತು ಸಾರ್ವಜನಿಕರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ,…

Read More

ದಕ್ಷಿಣಕನ್ನಡ : ಪ್ರತಿವರ್ಷ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕದ ಭಾಗದ ಎಲ್ಲಾ ವಿದ್ಯಾರ್ಥಿಗಳು ಮಾಸ್ ಕಾಪಿ ಮಾಡುತ್ತಿದ್ದರು ಎಂದು ಎಂಎಲ್ಸಿ ಬೋಜೆ ಗೌಡ ಗಂಭೀರವಾದಂತ ಆರೋಪವನ್ನು ಮಾಡಿದ್ದಾರೆ. ಮಂಗಳೂರಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಇದು ವಿದ್ಯಾರ್ಥಿಗಳ ಭವಿಷ್ಯದ ವಿದ್ಯಾಭ್ಯಾಸಕ್ಕೆ ಮಾರಕವಾಗುತ್ತಿತ್ತು. ಈ ಹಿನ್ನಲೆ ನೈರುತ್ಯ ಕ್ಷೇತ್ರಗಳಿಗೆ ಪರೀಕ್ಷೆ ಸಮಯ ಅನ್ಯಾಯ ಆಗುತ್ತಿರುವ ಬಗ್ಗೆ ವಿಧಾನ ಪರಿಷತ್‌ನಲ್ಲಿ ಹೇಳಿದ್ದೆ. ಜೊತೆಗೆ ಪರೀಕ್ಷೆ ವೇಳೆ ಸಿಸಿಟಿವಿ ಅಳವಡಿಕೆ ಕುರಿತು ಪರಿಷತ್​​ನಲ್ಲಿ ಆಗ್ರಹಿಸಿದ್ದೆ ಎಂದರು. ಉತ್ತರ ಕರ್ನಾಟಕ ಭಾಗದಲ್ಲಿ ಮಾಸ್ ಕಾಪಿ ಆಗ್ತಿತ್ತು. ಪರೀಕ್ಷೆ ವೇಳೆ ಸಿಸಿಟಿವಿ ಅಳವಡಿಕೆ ಬಗ್ಗೆ ನಾನು ಪರಿಷತ್ ನಲ್ಲಿ ಆಗ್ರಹಿಸಿದ್ದೆ. ಆಗ ಆ ಭಾಗದಲ್ಲಿ ಮಾಸ್ ಕಾಪಿ‌ ಆಗ್ತಾ ಇತ್ತು. ಅದನ್ನು ತಡೆದು ಮಾಸ್ ಕಾಪಿ ನಿಲ್ಲಿಸಲು‌ ಕ್ಯಾಮಾರ ಹಾಕಲು ಹೇಳಿದ್ದೆ. ನಿಜವಾದ ಶಿಕ್ಷಣ ಸಿಗಬೇಕು ಅಂತ ಪರಿಷತ್ ನಲ್ಲಿ‌ ಆಗ್ರಹಿಸಿದ್ದೆ. ಬಹಳ ಹಿಂದಿನಿಂದಲೂ ಅನ್ಯಾಯ ಆಗ್ತಾ ಇದೆ ಎಂದು ಹೋರಾಟ ಮಾಡಿದ್ದೆ. ಅದರ…

Read More

ದಾವಣವೆರೆ : ಕಳೆದ ಎರಡು ದಿನಗಳ ಹಿಂದೆ ದಾವಣಗೆರೆಯಲ್ಲಿ ಹಣಕ್ಕಾಗಿ ಸ್ವಂತ ಅಳಿಯನನ್ನೇ ಚಾಕುವಿನಿಂದ ಹಿಡಿದು ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಗ್ರಾಮಾಂತರ ಪೊಲೀಸರಿಂದ ಮನೋಹರ್ (27) ಬಂಧನ ಮೇ 16ರಂದು ಚಾಕುವಿನಿಂದ ಇರಿದು ಸುದೀಪ್ (24) ಎನ್ನುವ ಯುವಕನ ಕೊಲೆ ಕೊಲೆಮಾಡಿದ್ದ . ದಾವಣಗೆರೆ ತಾಲೂಕಿನ ಓಬಜ್ಜಿಹಳ್ಳಿ ಸಮೀಪ ಈ ಒಂದು ಕೊಲೆ ಪ್ರಕರಣ ನಡೆದಿತ್ತು. ಕೊಲೆಯಾದ ಸುದೀಪ್ ತಂದೆಯ ತಂಗಿ ಪುತ್ರ ಆರೋಪಿ ಮನೋಹರ್ ಎಂದು ಹೇಳಲಾಗುತ್ತಿದೆ. ಇಬ್ಬರು ದಾವಣಗೆರೆಯ ಬೂದಿಹಾಳ ರಸ್ತೆಯ ಎಸ್ ಪಿ ಎಸ್ ನಗರದ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಸಹೋದರರಿಬ್ಬರ ಜೊತೆ ಸೇರಿ ಸುದೀಪ್ ನನ್ನು ಹತ್ಯೆಗೈದಿದ್ದ. ಇದೀಗ ಮನೋಹರ್ ಹಾಗೂ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸುದೀಪ್ ಪತ್ನಿ ಒತ್ತಾಯ ಮಾಡಿದ್ದಾರೆ.

Read More

ಯಾದಗಿರಿ : ಕಲ್ಯಾಣಕರ್ನಾಟಕ ಭಾಗದಲ್ಲಿ ಪ್ರಮುಖವಾಗಿ ಕಲಬುರಗಿ, ರಾಯಚೂರು, ಬಳ್ಳಾರಿ ಮುಂತಾದ ಕಡೆ ಅಕ್ರಮ ಮರಳು ಸಾಗಾಟ ದಂಧೆ ನಡೆಯುತ್ತಿದೆ.ಮಳೆ ಬಾರದೆ ಇರುವುದರಿಂದ ನದಿಗಳಲ್ಲಿನ ನೀರು ಬತ್ತಿ ಹೋಗಿವೆ.ಹಾಗಾಗಿ ಮರಳು ದಂಧೆ ಬಹಳ ಜೋರಾಗಿ ನಡೆಯುತ್ತಿದೆ. ನದಿಯಲ್ಲಿ ನೀರು ಬತ್ತಿದ ನಂತರ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿಕ್ಕರಾಯಕುಂಪಿಯಲ್ಲಿ ಇದಿಗ ಅಕ್ರಮ ಮರಳು ಅಡ್ಡಾದ ಮೇಲೆ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ ಸುಮಾರು 1.58 ಕೋಟಿ ರೂ. ಮೌಲ್ಯದ ಅಕ್ರಮ ಮರಳು ಜಪ್ತಿ ಮಾಡಲಾಗಿದೆ. ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 20,033 ಮೆಟ್ರಿಕ್ ಟನ್ ನಷ್ಟು ಮರಳನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜಮೀನು ಮಾಲೀಕರಾದ ಚಂದ್ರಮ್ಮ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ. ಗಣಿ ಮತ್ತು ಭೂ ವಿಜ್ಞಾನಿ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದರಿಂದ ಇದೀಗ ಅಧಿಕಾರಿಗಳು ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎಪ್ರಿಲ್ 27 ರಂದು ವಿದೇಶದಲ್ಲಿ ಇದ್ದು ತಲೆಮರಿಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಇದೀಗ ಎಸ್ಐಟಿ ಹಿರಿಯ ಅಧಿಕಾರಿಗಳು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ ಆ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರೆಂಟ್ ಜಾರಿ ವಿಚಾರವಾಗಿ ಮಾಹಿತಿ ಹಂಚಿಕೊಂಡ ಅಧಿಕಾರಿಗಳು, ಎಸ್ಐಟಿ ಮನವಿ ಪುರಸ್ಕರಿಸಿ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ.ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ. ಹಲವು ಸಲ ನೋಟಿಸ್ ನೀಡಿದರು ಕೂಡ ಪ್ರಜ್ವಲ್ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಅರೆಸ್ಟ್ ವಾರೆಂಟ್ ಜಾರಿಗೆ ಎಸ್ಐಟಿ ಮನವಿ ಮಾಡಿತ್ತು.ಪ್ರಜ್ವಲ್ ರೇವಣ್ಣ ಭಾರತಕ್ಕೆ ಬಂದು ಇಳಿದರೆ ಮಾತ್ರ ಅರೆಸ್ಟ್ ಮಾಡಬಹುದು ಎಂದು ವಿಶೇಷ ತನಿಖಾ ತಂಡದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು. ಬಂದಿದ್ದೆ ಏಕಾಏಕಿ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಸಾಧ್ಯವಾಗಲ್ಲ. ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಚಾರ್ಜ್ ಶೀಟ್ ಸಲ್ಲಿಸಬೇಕು. ಚಾರ್ಜ್ ಶೀಟ್…

Read More

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿಪಕ್ಷ ನಾಯಕ ಆರ್ ಅಶೋಕ್ ಪ್ರಕರಣದ ಕುರಿತಂತೆ ಸಿವಿಐತನಿಕೆ ಆದರೆ ಸರ್ಕಾರದವರು ಒಳಗೆ ಹೋಗುತ್ತಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ ಆದರೆ ಪೆನ್ ಡ್ರೈವ್ ಹಂಚಿದ ಅವರ ಬಗ್ಗೆಯೂ ತನಿಖೆಯಾಗಲಿ. ನ್ಯಾಯಾಂಗ ತನಿಖೆ ಆದರೆ ಮಾತ್ರ ಸತ್ಯ ಹೊರಬರುತ್ತದೆ ಇಲ್ಲದಿದ್ದರೆ ಸತ್ಯ ಮುಚ್ಚಿ ಹಾಕುವ ಕೆಲಸ ಆಗುತ್ತದೆ ಎಂದರು. ಬೆಂಕಿ ಇಲ್ಲದೆ ಹೊಗೆ ಆಡಲ್ಲ. ಮೋದಿಗೆ ಕೆಟ್ಟ ಹೆಸರು ತರಲು ಮಾಡಿರುವ ಪ್ಲಾನ್ ಆಗಿದೆ. ಒಕ್ಕಲಿಗರನ್ನು ಮುಗಿಸಲು ಕಾಂಗ್ರೆಸ್ ಪಕ್ಷ ಹೊರಟಿದೆ. ದೇವರಾಜೇಗೌಡ ಹೇಳಿರುವುದು ನೂರಕ್ಕೆ ನೂರು ಸತ್ಯ. ಪೆನ್ ಡ್ರೈವ್ ಕೇಸ್ ತನಿಖೆಗೆ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು. ಗೃಹ ಸಚಿವರ ಅನತಿಯಂತೆ ಏನೋ ನಡೆಯುತ್ತಿಲ್ಲ. ಹುಬ್ಬಳ್ಳಿಯಲ್ಲಿ ನೇಹ ಹತ್ಯೆ ಮಾಸುವ ಮುನ್ನವೇ ಮತ್ತೊಂದು ಕೊಲೆ…

Read More

ಉಡುಪಿ : ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಮದುಮೇಹ, ರಕ್ತದೊತ್ತಡದಿಂದ ಬಳುತ್ತಿದ್ದ ತಾಯಿಯೊಬ್ಬರು ಮೃತಪ್ಪಟ್ಟಿದ್ದಾರೆ. ಇದನ್ನು ಅರಿಯದ ಬುದ್ಧಿಮಾಂದ್ಯ ಪುತ್ರಿ, ತಾಯಿ ಶವದ ಜೊತೆ ನಾಲ್ಕು ದಿನ ಕಳೆದಿದ್ದಾಳೆ. ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ದಾಸನಹಾಡಿ ಗ್ರಾಮದಲ್ಲಿ ನಡೆದಿದೆ. ಹೌದು ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ದಾಸನಹಾಡಿ ಗ್ರಾಮದ ನಿವಾಸಿಗಳಾಗಿದ್ದ ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ನಿಧನರಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಜಯಂತಿ ಶೆಟ್ಟಿ ಮಧುಮೇಹ, ರಕ್ತದೊತ್ತಡದಿಂದ ಬಳಲುತ್ತಿದ್ದರು. ಇನ್ನು ಪುತ್ರಿ ಪ್ರಗತಿ ಶೆಟ್ಟಿ ಬುದ್ಧಿಮಾಂದ್ಯರಾಗಿದ್ದರು. ಕಾಯಿಲೆಯಿಂದ ಬಳುತ್ತಿದ್ದ ಜಯಂತಿ ಶೆಟ್ಟಿ ನಾಲ್ಕು ದಿನದಿಂದೆ ಮನೆಯಲ್ಲಿ ಮೃತಪಟ್ಟಿದ್ದಾರೆ. ಇದನ್ನು ಅರಿಯದ ಬುದ್ಧಿಮಾಂದ್ಯ ಪುತ್ರಿ ಪ್ರಗತಿ ಶೆಟ್ಟಿ ತಾಯಿಯ ಶವದ ಜೊತೆಗೆ ನಾಲ್ಕು ದಿನ ಅನ್ನ, ನೀರಿಲ್ಲದೆ ಕಳೆದಿದ್ದಾರೆ. ಮನೆಯಲ್ಲಿ ಜಯಂತಿಯವರು ಸತ್ತಿದ್ದರಿಂದ ದೇಹದಿಂದ ದುರ್ವಾಸನೆ ಬರಲು ಆರಂಭಿಸಿದೆ. ಇದರಿಂದ ಅನುಮಾನ ಹಾಕೊಂಡ ಅಕ್ಕ ಪಕ್ಕದವರು ತಕ್ಷಣ ಪೊಲೀಸರಿಗೆ ಮಾಹಿತಿ…

Read More

ವಿಜಯಪುರ : ಇತ್ತೀಚಿಗೆ ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ವಿಜಯಪುರದಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆಯಾಗಿದ್ದು, ದುಷ್ಕರ್ಮಿಗಳು ಯುವಕನ ಮೇಲೆ ಮಾರಕಷ್ಟಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರಬರವಾಗಿ ಹತ್ಯೆಗೈದಿರುವ ಘಟನೆ ನಗರದ ಎಪಿಎಂಸಿ ಮೇಕೆ ಹಾಗೂ ಕುರಿ ಮಾರುಕಟ್ಟೆ ಬಳಿ ನಡೆದಿದೆ. ಕೊಲೆಯಾದ ಯುವಕನನ್ನು ರೋಹಿತ್ ವಸಂತ್ ಪವಾರ್ (23) ಎಂದು ತಿಳಿದುಬಂದಿದೆ. ವಿಜಯಪುರ ನಗರದ ಕಂಬಾರ ಓಣಿ ನಿವಾಸಿ ರೋಹಿತ್​ನನ್ನು ದುಷ್ಕರ್ಮಿಗಳು​​ ಕೊಲೆಗೈದು ಮುಳ್ಳುಕಂಟಿಯಲ್ಲಿ ಶವ ಬಿಸಾಡಿದ್ದಾರೆ. ಘಟನಾ ಸ್ಥಳದಲ್ಲಿ ಬಿಯರ್​​​ ಬಾಟಲ್​ ಹಾಗೂ​ ಚಿಪ್ಸ್​ ಪ್ಯಾಕೆಟ್​ ಪತ್ತೆಯಾಗಿದೆ. ಮೃತನ ಪರಿಚಯಸ್ಥರಿಂದಲೇ ಕೊಲೆ ನಡೆದಿರುವ ಶಂಕೆಯನ್ನು ಮೃತನ ಕುಟುಂಬ ಆರೋಪಿಸಿದೆ. ಮೇಲ್ನೋಟಕ್ಕೆ ಇದು ಯುವಕನ ಪರಿಚಯಸ್ಥರಿಂದಲೇ ಈ ಒಂದು ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ.ರೋಹಿತ್ ಕೊಲೆ ಬಗ್ಗೆ ಆತನ ಸ್ನೇಹಿತ ಖಾಲಿದ್ ಇನಾಂದಾರ್ ನಿಮ್ಮ ಮಗನ ಕೊಲೆಯಾಗಿದೆ ಎಂದು ತಿಳಿಸಿದಾಗ ಕುಟುಂಬಸ್ಥರೆಲ್ಲರೂ ಗಾಬರಿಯಾಗಿ ಎಲ್ಲೆಡೆ ರೋಹಿತ್ ಗಾಗಿ ಹುಡುಕಾಡಿದ್ದಾರೆ.ಖಾಲೀದ್ ಮನೆಗೆ ಹೋದರೂ ಖಾಲೀದ್ ಆಗಲಿ…

Read More

ವಿಜಯಪುರ : ವಿಜಯಪುರದಲ್ಲಿ ಮಸೀದಿ ಬಳಿ ದಲಿತರ ಸಮುದಾಯ ಭವನ ನಿರ್ಮಾಣ ಮಾಡುವುದಕ್ಕೆ ಮುಸ್ಲಿಂ ಸಮುದಾಯದವರಿಂದ ವಿರೋಧ ವ್ಯಕ್ತವಾಗಿದ್ದು, ಕೆಲಕಾಲ ಎರಡೂ ಸಮುದಾಯದವರ ವಾಗ್ವಾದದಿಂದ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.ವಿಜಯಪುರ ನಗರದ ಇಕ್ಲಾಸಖಾನ್ ಮಸೀದಿ ಬಳಿಯ ಜಾಗದಲ್ಲಿ ದಲಿತ ಸಮುದಾಯದ ಯುವಕರು ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗಿದ್ದರು. ಇದಕ್ಕೆ ಮುಸ್ಲಿಂ ಮುಖಂಡರು ವಿರೋಧ ವ್ಯಕ್ತ ಪಡೆಸಿದ್ದಾರೆ‌. ವಿಜಯಪುರ ನಗರದಲ್ಲಿ ಸರ್ಕಾರದ ಜಾಗದಲ್ಲಿ ಸಮುದಾಯ ಭವನ ನಿರ್ಮಾಣ ಮಾಡುವುದನ್ನು ತಡೆಯುವುದಕ್ಕೆ ನೀವ್ಯಾರು? ಇಲ್ಲಿ ನಾವು ಸಮುದಾಯ ಭವನ ನಿರ್ಮಿಸುತ್ತೇವೆ ಎಂದು ದಲಿತ ಸಮುದಾಯದ ಮುಖಂಡರು ಹೇಳಿದ್ದಾರೆ. ಮಸೀದಿ ಭಾರತೀಯ ಪುರಾತತ್ವ ಇಲಾಖಾ ವ್ಯಾಪ್ತಿಯ ಸಂರಕ್ಷಿತ ವಲಯದಲ್ಲಿದ್ದು ಇಲ್ಲಿ ಸಮುದಾಯ ಭವನ ನಿರ್ಮಾಣ ಮಾಡದಂತೆ ಮುಸ್ಲಿಂ ಮುಖಂಡರು ವಿರೋಧಿಸಿದ್ದಾರೆ. ಇದರಿಂದಾಗಿ ಎರಡು ಸಮುದಾಯಗಳ ಯುವಕರು ಜಮಾಯಿಸಿ ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಆದರೆ, ಮುಸ್ಲಿಂ ಸಮುದಾಯದ ಮುಖಂಡರು ಬಂದು ವಿಜಯಪುರದ ಎಲ್ಲ ಮಸೀದಿಗಳ ಬಳಿಯೂ ಯಾವುದೇ ಕಟ್ಟಡ ನಿರ್ಮಾಣ ಮಾಡಬೇಕೆಂದರೆ ನೀವು ಸರ್ಕಾರದ ಅನುಮತಿ ಮಾತ್ರವಲ್ಲ,…

Read More