Author: kannadanewsnow05

ಬೆಂಗಳೂರು : ನಿನ್ನೆ ಮೈಸೂರಿನಲ್ಲಿ ಟಿ ನರಸೀಪುರದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಕಾರ್ಯಕ್ರಮದಲ್ಲಿ ನಾನು ಸಿಎಂ ಸ್ಥಾನದಲ್ಲಿ ಇರಬೇಕಾ ಬೇಡ್ವಾ ಎಂಬ ಹೇಳಿಕೆಯನ್ನು ನೀಡಿದರು ಅದಕ್ಕೆ ಇಂದು ಅವರು ಸ್ಪಷ್ಟನೆಯನ್ನು ನೀಡಿದ್ದಾರೆ. https://kannadanewsnow.com/kannada/india-is-a-role-model-for-many-countries-jaishankar/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವರುಣ ಕ್ಷೇತ್ರದ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ಪರ ಮತಯಾಚನೆ ವೇಳೆ ನಾನು ಇರಬೇಕಾಗಿ ಬೇಡುವ ನಾನು ಇರಬೇಕೆಂದರೆ ಸುನಿಲ್ ಬಸ್ಸಿಗೆ 60 ಸಾವಿರ ಲೀಡ್ನಿಂದ ಗೆಲ್ಲಿಸಿ ಎಂದು ಹೇಳಿಕೆ ನೀಡಿದರು. https://kannadanewsnow.com/kannada/gst-collection-swells-11-5-to-21-35-billion-in-march/ ಈಗ ಈ ಒಂದು ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಎಲ್ಲಾ ಕೆಲಸಗಳು ಮುಂದುವರಿಯಬೇಕೆಂದರೆ ಇರಬೇಕು ಎಂದು ನಾನು ಆ ಧಾಟಿಯಲ್ಲಿ ನಾನು ಹೇಳಿದ್ದು. ಬಿಜೆಪಿಯವರು ಬಂದರೆ ಇವೆಲ್ಲ ನಿಲ್ಲಿಸಿ ಬಿಡುತ್ತಾರೆ ಅಸೆಂಬ್ಲಿಯಲ್ಲಿ ನನಗೆ 48000 ಲೀಡ್ ಬಂದಿದೆ ಇದಕ್ಕಿಂತ ಜಾಸ್ತಿ ಕೊಡಿ ಅಂತ ಕೇಳಿದ್ದೇನೆ. ಸುನಿಲ್ ಬಾರಿಗೆ 60000 ಲೀಡ್ ಕೊಡಿ ಅಂತ ಹೇಳಿದ್ದೇನೆ ಎಂದು ಅವರು ತಿಳಿಸಿದರು.

Read More

ಬೆಂಗಳೂರು : ಕೋವಿಡ್ ಸಂದರ್ಭದಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪ ಎದುರಿಸುತ್ತಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣದ ಮಾಜಿ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವ‌ರ್, ರಾಜ್ಯ ಸರಕಾರದ ಕಾರ್ಯದರ್ಶಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಕುಮಾರ್ ಎಂಬುವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/breaking-vistara-cuts-flights-to-meet-pilot-shortage-reimburses-passengers/ ಬಿಜೆಪಿ ಸರಕಾರದ ಅವಧಿಯಲ್ಲಿ ಕೆ.ಸುಧಾಕ‌ರ್ ಅವರು ನಡೆಸಿದ್ದಾರೆ ಎನ್ನಲಾದ ಕೋವಿಡ್ ಹಗರಣದ ಬಗ್ಗೆ ತನಿಖೆಗೆ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. 2021ರ ಜುಲೈ-ಆಗಸ್ಟ್ ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿರುವಂತೆ ಕೋವಿಡ್ ನಿರ್ವಹಣೆ ತಡೆಗಟ್ಟಲು ಔಷಧ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳ ಕುರಿತು ತನಿಖೆಗೆ ನ್ಯಾಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿ, 3 ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿತ್ತು. https://kannadanewsnow.com/kannada/bidar-rs-3-lakh-cash-seized-from-car-without-proper-documents/ ಈ ನಡುವೆ ಕೋವಿಡ್ ಅಕ್ರಮದ…

Read More

ಬೀದರ್ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಕ್ರಮ ತಡೆಗಟ್ಟಲು ಪ್ರತಿಯೊಂದು ಸ್ಥಳದಲ್ಲೂ ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಬೀದರ್ ಜಿಲ್ಲೆಯಲ್ಲಿ ಕಾರಿನಲ್ಲಿ ಆಕ್ರಮವಾಗಿ ಸಾಗಿಸುತ್ತಿದ್ದ ಮೂರು ಲಕ್ಷ ರೂಪಾಯಿಗಳನ್ನು ಅಧಿಕಾರಿಗಳು ಸೀಜ್ ಮಾಡಿಕೊಂಡಿದ್ದಾರೆ. ಹೌದು ಕಾರಿನಲ್ಲಿ ಸೂಕ್ತದ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಮೂರು ಲಕ್ಷ ನಗದು ಜಪ್ತಿ ಮಾಡಿಕೊಳ್ಳಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನಹಳ್ಳಿ ಗ್ರಾಮದ ಚಂಡಕಾಪುರ ಚಿಕ್ಕ ಪೋಸ್ಟ್ ನಲ್ಲಿ ನಗದನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಗೋವಾದಿಂದ ತೆಲಂಗಾಣಕ್ಕೆ ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

Read More

ಬೆಂಗಳೂರು : ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇದ್ದರೂ ಕೂಡ ಬಿಜೆಪಿ ಚಿನ್ಹೆ ಹಾಗೂ ಮೋದಿ ಫೋಟೋ ಅಳವಡಿಸಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಡು ವಿರುದ್ಧ ಇದೀಗ ಚುನಾವಣೆ ಅಧಿಕಾರಿಗಳ ದೂರಿನ ಮೇರೆಗೆ ಕೋರಮಂಗಲದ ಠಾಣೆಯಲ್ಲಿ ದಾಖಲಾಗಿದೆ. https://kannadanewsnow.com/kannada/%e0%b2%b8%e0%b2%bf%e0%b2%8e%e0%b2%82-%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af%e0%b2%97%e0%b3%81-%e0%b2%a4%e0%b2%9f%e0%b3%8d%e0%b2%9f%e0%b2%bf/ ಕೋರಮಂಗಲ ಠಾಣೆಯಲ್ಲಿ ರಾಘವೇಂದ್ರ ನಾಯ್ಡು ವಿರುದ್ಧ FIR ದಾಖಲಾಗಿದೆ. ರಾಘವೇಂದ್ರ ನಾಯ್ಡು ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಂದು ಹೇಳಲಾಗುತ್ತಿದೆ.ಅನುಮತಿ ಇಲ್ಲಿದೆ ಬಿಜೆಪಿ ಚಿನ್ಹೆ ಪ್ರಧಾನಿ ಫೋಟೋ ಅಂಟಿಸಲಾಗಿತ್ತು. ಈ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ಸ್ಥಳೀಯರು ದೂರು ನೀಡಿದ್ದರು. https://kannadanewsnow.com/kannada/97-69-of-rs-2000-notes-returned-since-may-2023-another-rs-8202-crore-yet-to-be-returned-rbi/ ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೋರಮಂಗಲ ಠಾಣೆಗೆ ದೂರು ನೀಡಿದ್ದರು. ಚುನಾವಣೆ ಅಧಿಕಾರಿಗಳ ದೂರಿನಂತೆ ರಾಘವೇಂದ್ರ ನಾಯ್ಡು ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.

Read More

ಮೈಸೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮಗಳು ನಡೆದಂತೆ ಮಾದರಿ ನೀತಿ ಸಂಹಿತೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹಾಗಾಗಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಈ ಒಂದು ಮಾದರಿ ನೀತಿ ಸಂಹಿತೆಗೆ ಸಿಎಂ ಸಿದ್ದರಾಮಯ್ಯ ಕೂಡ ಹೊರತಾಗಿಲ್ಲ.ಹೀಗಾಗಿ ಇಂದು ಮೈಸೂರು ಹಾಗೂ ಟಿ ನರಸೀಪುರ ರಸ್ತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾರನ್ನು ತಪಾಸಣೆ ಮಾಡಲಾಯಿತು. https://kannadanewsnow.com/kannada/hassan-two-killed-as-bike-collides-with-stationary-truck/ ಹೌದು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಭಾಗದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮರಳುತ್ತಿದ್ದಾಗ ಮೈಸೂರು-ಟಿ.ನರಸೀಪುರ ರಸ್ತೆಯ ಚಿಕ್ಕಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ ತೆರಳುತ್ತಿದ್ದ ಕಾರನ್ನು ನಿಲ್ಲಿಸಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. https://kannadanewsnow.com/kannada/weather-update-imd-warns-of-heatwave-for-10-20-days-in-these-states-including-karnataka-in-april-june/ ಚೆಕ್‌ಪೋಸ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ ತೆರಳುತ್ತಿದ್ದ ಕಾರನ್ನು ನಿಲ್ಲಿಸಿ, ಅಧಿಕಾರಿಗಳು ಕಾರಿನಲ್ಲಿದ್ದ ಸೂಟಕೇಸ್, ಬ್ಯಾಗ್, ಡ್ಯಾಷ್ ಬೋರ್ಡ್ ಸೇರಿ ಎಲ್ಲಾ ಕಡೆಗಳಲ್ಲೂ ತಪಾಸಣೆ ನಡೆಸಿದ್ದಾರೆ. ಟಿ.ನರಸೀಪುರದಲ್ಲಿ ಕಾರ್ಯಕ್ರಮ ಮುಗಿಸಿ ತೆರಳುವಾಗ ತಪಾಸಣೆ ಮಾಡಲಾಗಿದೆ.

Read More

ಹಾಸನ : ಹಾಸನದಲ್ಲಿ ಭೀಕರ ಅಪಘಾತ ಒಂದು ಸಂಭವಿಸಿದ್ದು ರಸ್ತೆ ಬದಿಯಲ್ಲಿ ನಿಲ್ಲಿಸಿದಂತಹ ಟ್ರಕ್ಕಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಹಾಸನ ತಾಲ್ಲೂಕಿನ ಶಾಂತಿಗ್ರಾಮ ಟೋಲ್ ಬಳಿ ನಡೆದಿದೆ. https://kannadanewsnow.com/kannada/beware-women-who-drink-alcohol-have-higher-risk-of-heart-disease-study/ ಈ ಒಂದು ಅಪಘಾತದಲ್ಲಿ ಮೃತರನ್ನು ಅರಕಲಗೂಡು ತಾಲ್ಲೂಕಿನ ಚಿಕ್ಕ ಆಲದಹಳ್ಳಿ ಗ್ರಾಮದ ಅಶ್ವತ್ಥ (42) ಹಾಗೂ ಸಾಗರ್ (42) ಎಂದು ಗುರುತಿಸಲಾಗಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ಕಿಗೆ ಹಿಂಬದಿಗಯಿಂದ ಬೈಕ್ ಸವಾರರು ಗುದ್ದಿದ ಪರಿಣಾಮ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/former-cm-bs-yediyurappa-is-our-godfather-holalkere-bjp-mla-chandrappa-raghuchandan/ ಚಾಲಕ ಹಾಗೂ ನಿರ್ವಾಹಕ ಶಾಂತಿಗ್ರಾಮ ಟೋಲ್ ಬಳಿ ರಸ್ತೆ ಬದಿ ಟ್ರಕ್ ನಿಲ್ಲಿಸಿಕೊಂಡು ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಚನ್ನರಾಯಪಟ್ಟಣದ ಕಡೆಯಿಂದ ಹಾಸನದ ಕಡೆಗೆ ಬರುತ್ತಿದ್ದ ಬೈಕ್‌ ಸವಾರರು ವೇಗವಾಗಿ ಬಂದು ಟ್ರಕ್‌ಗೆ ಢಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು : ಚಿತ್ರದುರ್ಗದ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರವಾಗಿ ಈಗ ಶಾಸಕ ಹೊಳಲ್ಕೆರೆ ಚಂದ್ರಪ್ಪ ಅವರ ಮನವರಿಸಲು ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ವಿಜಯೇಂದ್ರ ಯಶಸ್ವಿಯಾಗಿದ್ದು ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ನಂತರ ಹೊಳಲ್ಕೆರೆ ಶಾಸಕ ಚಂದ್ರಪ್ಪ ಮಗ ರವಿಚಂದ್ರನ್ ಮಾತನಾಡಿ ಯಡಿಯೂರಪ್ಪ ಅವರು ನಮಗೆ ಗಾಡ್ ಫಾದರ್ ಇದ್ದಂತೆ ಎಂದು ತಿಳಿಸಿದರು. https://kannadanewsnow.com/kannada/big-update-hat-trick-hero-shivarajkumars-health-deteriorates-to-be-discharged-tomorrow/ ನರೇಂದ್ರ ಮೋದಿ ಕೈ ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ಯಡಿಯೂರಪ್ಪ ಸಾಹೇಬರನ್ನು ನಂಬಿ ನಾವು ಬಿಜೆಪಿಗೆ ಬಂದಿರುವುದು. ಬಿಎಸ್ ಯಡಿಯೂರಪ್ಪ ಕೆಜೆಪಿ ಕಟ್ಟಿದಾಗ ಮತ್ತೆ ಬಿಜೆಪಿಗೆ ಬಂದಾಗ ಅಚಲವಾಗಿ ನಿಂತಿದ್ದೆವು ಯಡಿಯೂರಪ್ಪ ತಂದೆ ಸ್ಥಾನದಲ್ಲಿದ್ದಾರೆ ಅವರ ಮಾತನ್ನು ಕೇಳುತ್ತೇವೆ. ನಾವು ಯಡಿಯೂರಪ್ಪನವರ ನೆರಳಲ್ಲಿ ರಾಜಕೀಯಕ್ಕೆ ಬಂದವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ನಮಗೆ ಗಾಡ್ ಫಾದರ್ ಇದ್ದಂತೆ ಎಂದು ಹೊಳಲ್ಕೆರೆ ಬಿಜೆಪಿ ಶಾಸಕ ಚಂದ್ರಪ್ಪ ಪತ್ರ ರಘು ಚಂದನ್ ಹೇಳಿಕೆ ನೀಡಿದರು. https://kannadanewsnow.com/kannada/do-this-betel-leaf-remedy-regularly-to-get-rid-of-debt-burden-in-your-home-and-increase-wealth-if-you-fail-now-you-will-have-to-wait-for-another-year/ ಇದೆ ವೇಳೆ ರಘುಚಂದನ್ ತಂದೆ ಚಂದ್ರಪ್ಪ ಮಾತನಾಡಿ, ಯಡಿಯೂರಪ್ಪನವರು ನನ್ನ…

Read More

ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಇದೀಗ ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ನಾಳೆ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ಪತ್ನಿ ಗೀತಾ ಪರ ಸತತವಾಗಿ ಪ್ರಚಾರ ಕೈಗೊಂಡ ಹಿನ್ನೆಲೆ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ವೈದೇಹಿ ಆಸ್ಪತ್ರೆಯಲ್ಲಿ ನಟ ಶಿವರಾಜಕುಮಾರ್ ಅವರಿಗೆ  ಚಿಕಿತ್ಸೆ ನೀಡಲಾಗುತ್ತಿದ್ದು ಬಹುಶಹ ಶಿವರಾಜಕುಮಾರ ಅವರು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವಂತಹ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Read More

ಮೈಸೂರು : ಬಿಜೆಪಿ ವಿರುದ್ಧ ಯಾರೇ ಮಾತನಾಡಿದರು ಅಂಥವರ ವಿರುದ್ಧ ಇಡೀ ಹಾಗೂ ಐಟಿ ಇಲಾಖೆಗಳನ್ನು ಛೂ ಬಿಡುತ್ತಾರೆ. ಛೂ ಬಿಟ್ಟು ನಮ್ಮನ್ನು ಹೆದರಿಸುತ್ತಾರೆ ನಿಮ್ಮನ್ನು ಹೆದರಿಸೋಕೆ ಆಗುತ್ತಾ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. https://kannadanewsnow.com/kannada/bsy-succeeds-in-convincing-holalkere-mla-chandrappa-raghuchandan-drops-independent-contest/ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರಕ್ಕಾಗಿ ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿ ಹಮ್ಮಿಕೊಂಡಿದ್ದ, ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಹಾಗೂ ಬಿಜೆಪಿಯ ವಿರುದ್ಧ ತೀವ್ರವಾದ ವಾಗ್ದಾಳಿ ನಡೆಸಿದರು. https://kannadanewsnow.com/kannada/be-prepared-you-will-have-a-lot-of-work-to-do-from-the-day-after-taking-oath-pm-modi-at-rbi-event/ ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಪ್ರಧಾನಿ ಮೋದಿ ಅವರನ್ನು ಕಂಡರೆ ಭಯಪಡುವವರನ್ನು ಆಯ್ಕೆ ಮಾಡಬೇಕಾ? ಜನರ ಬಗ್ಗೆ ಮಾತನಾಡುವವರನ್ನು ಆಯ್ಕೆ ಮಾಡಬೇಕಾ? ನೀವೇ ತೀರ್ಮಾನಿಸಿ. ಅವರ ಕೊಟ್ಟ ಮಾತು ಮರೆಯುತ್ತಾರೆ ನಾವು ಕೊಟ್ಟ ಮಾತು ಈಡೇರಿಸುತ್ತೇವೆ ಎಂದರು. https://kannadanewsnow.com/kannada/pradhan-mantri-awas-yojana-centre-gives-only-rs-12000-says-siddaramaiah/ ಕೇಂದ್ರ ಸರ್ಕಾರದಿಂದ ಬರ ಪರಿಹಾರಕ್ಕಾಗಿ 18,000 ಕೋಟಿಯನ್ನು ಕೇಳಿದ್ದೆವು.ಇವರಿಗೆ ಕೇಂದ್ರ…

Read More

ಬೆಂಗಳೂರು : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರವಾಗಿ ಹೊಳಲ್ಕೆರೆ ಬಿಜೆಪಿ ಶಾಸಕ ಎಂ ಚಂದ್ರಪ್ಪ ಅವರ ಮಗ ರಘು ಚಂದನ್ ಪಕ್ಷೇತರವಾಗಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು ಆದರೆ ಅವರ ಮನವೊಲಿಕೆ ಇದೀಗ ಯಶಸ್ವಿ ಆಗಿದೆ ಎನ್ನಲಾಗಿತ್ತಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ವಿಚಾರವನ್ನು ಶಾಸಕ ಚಂದ್ರಪ್ಪ ಅವರ ಮಗ ರಘು ಚಂದನ್ ಕೈ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. https://kannadanewsnow.com/kannada/be-prepared-you-will-have-a-lot-of-work-to-do-from-the-day-after-taking-oath-pm-modi-at-rbi-event/ ಚಂದ್ರಪ್ಪ ಮನವೊಲಿಸುವಲ್ಲಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿ ವೈ ವಿಜಯೇಂದ್ರ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಬಿ ಎಸ್ ಯಡಿಯೂರಪ್ಪರನ್ನು ಶಾಸಕ ಚಂದ್ರಪ್ಪ ಭೇಟಿಯಾಗಿದ್ದರು. ಗೋವಿಂದ ಕಾರಜೋಳ ಪರ ಕೆಲಸ ಮಾಡಲು ಚಂದ್ರಪ್ಪ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪುತ್ರ ರಘು ಚಂದನ್ ಇದೀಗ ಒಪ್ಪಿಕೊಂಡಿದ್ದಾರೆ ಪಕ್ಷೇತರರಾಗಿ ಸ್ಪರ್ಧಿಸಲು ರಘು ಚಂದನ್, ಚಿಂತನೆ ನಡೆಸಿದ್ದರು ಎನ್ನಲಾಗಿದೆ. https://kannadanewsnow.com/kannada/guidelines-on-evms-vvpats-and-for-polling-staff-released/ ಬೆಂಗಳೂರಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಚಂದ್ರಪ್ಪ ಹೇಳಿಕೆ ನೀಡಿದ್ದು, ಯಡಿಯೂರಪ್ಪನವರು ನನ್ನ…

Read More