Subscribe to Updates
Get the latest creative news from FooBar about art, design and business.
Author: kannadanewsnow05
ಬಳ್ಳಾರಿ : ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಐಎಸ್ ಅಧಿಕಾರಿ ಕೆ.ಶ್ರೀನಿವಾಸ ಅವರನ್ನು ಔಷಧ ನಿಯಂತ್ರಣ ಇಲಾಖೆಗೆ ಆಡಳಿತಾತ್ಮಕ ಮುಖ್ಯಸ್ಥರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಬಾಣಂತಿಯರ ಸರಣಿ ಸಾವುಗಳು ಸಂಭವಿಸಿದ್ದವು. ಈ ಹಿನ್ನೆಲೆ ಇದೀಗ ಔಷಧ ನಿಯಂತ್ರಣ ಇಲಾಖೆಗೆ ಆಡಳಿತಾತ್ಮಕ ಮುಖ್ಯಸ್ಥರನ್ನು ನೇಮಕ ಮಾಡಿದ್ದು, ಮುಖ್ಯಸ್ಥರಾಗಿರುವಂತಹ ಕೆ ಶ್ರೀನಿವಾಸ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರಾಗಿರುವ ಕೆ. ಶ್ರೀನಿವಾಸ್ ಅವರಿಗೆ ಮುಂದಿನ ಆದೇಶದವರೆಗೂ ಶ್ರೀನಿವಾಸ್ ಅವರಿಗೆ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ಹಾಗಾಗಿ ಅವರು ಔಷಧ ನಿಯಂತ್ರಣ ಇಲಾಖೆಯ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಚಿವ ಜಮೀರ್ ಅಹ್ಮದ್ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಜಮೀರ್ ಅಹ್ಮದ್ ಅವರಿಗೆ ನೋಟಿಸ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಸಚಿವ ಜಮೀರ್ ಅಹ್ಮದ್ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆ ಪ್ರಕರಣ ದಾಖಲಾದಾಗ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ದಾಳಿ ನಡೆಸಿತ್ತು. ಜಮೀರ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿತ್ತು. ಈ ವೇಳೆ ಪ್ರಕರಣ ರದ್ದು ಕೋರಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಗೆ ಜಮೀರ್ ಮೊರೆಹೋಗಿದ್ದರು. ಆದ್ರೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ಜಮೀರ್ ಅರ್ಜಿ ವಜಾಗೊಳಿಸಿತ್ತು.ಆ ಮೂಲಕ ಸುಪ್ರೀಂ ಕೋರ್ಟ್ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿತ್ತು. ಈ ಹಿಂದೆ ಪ್ರಕರಣ ದಾಖಲಾದಾಗ ಎಸಿಬಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು. ಅಸಮತೋಲನ ಆಸ್ತಿಗಳಿಕೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿತ್ತು. ನಂತರ ಎಸಿಬಿ ರದ್ದು ಮಾಡಿ ರಾಜ್ಯ…
ಬೆಂಗಳೂರು : ಬೆಂಗಳೂರು : ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು. ಅವರು ಇಂದು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ ಒಳಾoಗಣ ಕ್ರೀಡಾಂಗಣ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಸಂವಿಧಾನದಲ್ಲಿ ಎಲ್ಲರೂ ಬದುಕುವ , ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಪಾರಾ ಒಲಂಪಿಕ್ಸ್ ನಲ್ಲಿ ಭಾರತದ ವಿಕಲಚೇತನ ಕ್ರೀಡಾಪಟುಗಳು ಹೆಚ್ಚಿನ ಪದಕಗಳನ್ನು ಪಡೆದಿರುವುದು ಹೆಮ್ಮೆಯ ವಿಚಾರ. ನಮ್ಮ ಸರ್ಕಾರ ಈ…
ಬೆಂಗಳೂರು : ವಿಧಾನಸಭೆಯ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಎನ್ನುವವರಿಗೆ ಬಿಗ್ ಬಾಸ್ ಸ್ಪರ್ಧಿ ಚೈತ್ರ ಅವರು 5 ಕೋಟಿ ಪಡೆದು ವಂಚನೆ ಎಸಗಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಚೈತ್ರ ಅವರು ಇಂದು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕೋರ್ಟ್ ಗೆ ಹಾಜರಾಗಿದ್ದರೆ. ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಚೈತ್ರ ಇಂದು ನ್ಯಾಯಾಲಯಕ್ಕೆ ಹಾಜರಾದರು. ಬಿಗ್ ಬಾಸ್ ಮನೆಯಿಂದ ಹೊರಬಂದು ಚೈತ್ರ ಕೋರ್ಟಿಗೆ ಹಾಜರಾದರು.ಚೈತ್ರ ಶ್ರೀಕಾಂತ್ ಸೇರಿದಂತೆ ಮೂವರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದರು. ಈ ವೇಳೆ ವಾರೆಂಟ್ ರಿ ಕಾಲ್ ಮಾಡಿಸಿಕೊಂಡು ಚೈತ್ರ ಮತ್ತೆ ಬಿಗ್ ಬಾಸ್ ಗೆ ತೆರಳಿದ್ದಾರೆ. 1ನೇ ಎಸಿಎಂ ನ್ಯಾಯಾಧೀಶರ ಮುಂದೆ ಚೈತ್ರ ಹಾಜರಾಗಿದ್ದರು.ಈ ಹಿಂದೆ ವಂಚನೆ ಕೇಸ್ ನಲ್ಲಿ ಸಿಸಿಬಿ ಅಧಿಕಾರಿಗಳು ಚೈತ್ರ ಅವರನ್ನು ಅರೆಸ್ಟ್ ಮಾಡಿದರು.ಮುಂದಿನ ವಿಚಾರಣೆ 2025 ಜನವರಿ 13ರಂದು ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.
ಬೀದರ್ : ವಕ್ಫ್ ವಿವಾದದ ಕುರಿತಂತೆ ಈಗಾಗಲೇ ವಿಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಮಾಡುತ್ತಿದ್ದು, ಇದುವರೆಗೂ ರೈತರ ಜಮೀನುಗಳು, ಶಾಲೆ, ಸರ್ಕಾರಿ ಕಚೇರಿಗಳು ಹಾಗೂ ಹಲವು ದೇವಸ್ಥಾನಗಳ ಮೇಲೆ ವಕ್ಫ್ ನ ಕರಿನೆರಳು ಬಿದ್ದಿತ್ತು. ಇದೀಗ ಬೀದರ್ ನಲ್ಲಿರುವ ವಿಶ್ವಗುರು ಬಸವಣ್ಣನವರು ಪಠಿಸುತ್ತಿದ್ದ ವಚನ ಮಹಾಮಠ ಬಸವಗಿರಿಯ ಜಾಗವು ಕೂಡ ವಕ್ಫ್ ಎಂದು ನಮೂದಾಗಿದೆ. ಹೌದು ಬೀದರ್ನ ಪಾಪನಾಶ ದೇವಸ್ಥಾನದ ಬಳಿಯಿರುವ ಬಸವಗಿರಿಯ ಸರ್ವೇ ನಂ.37ರ 5 ಎಕರೆ 19 ಗುಂಟೆ ಜಾಗ 2019ರಲ್ಲಿ ವಕ್ಫ್ಗೆ ಸೇರಿಸಿದ್ದು ಬಸವ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. 2008 ರಲ್ಲಿ ಈ ಬಸವಗಿರಿ ಉದ್ಘಾಟನೆಯಾಗಿದ್ದು, ಬಹುತೇಕ 16 ವರ್ಷದಿಂದ ಪ್ರತಿ ದಿನ ಇಲ್ಲಿಗೆ ನೂರಾರು ಭಕ್ತರು ಭೇಟಿ ನೀಡಿ ಬಸವಣ್ಣನವರ ಭಾವಚಿತ್ರಕ್ಕೆ ನಮಿಸಿ ವಚನಗಳ ಪಠಣೆ ಮಾಡುತ್ತಾರೆ. ಬೀದರ್ನಲ್ಲಿ ಇದುವರೆಗು ರೈತರ ಜಮೀನು, ಐತಿಹಾಸಿಕ ಸ್ಮಾರಕಗಳು, ಸರ್ಕಾರಿ ಜಾಗಗಳು ಸೇರಿದಂತೆ ಒಟ್ಟು 13 ಸಾವಿರಕ್ಕೂ ಅಧಿಕ ಆಸ್ತಿ ವಕ್ಫ್ ಪಾಲಾಗಿದೆ. ಇದೀಗ ಮತ್ತೆ ಬಗೆದಷ್ಟು…
ಬೆಳಗಾವಿ : ಕೆ ಎಲ್ ಇ ಸಂಸ್ಥೆಯ ಕಾನೂನು ವಿದ್ಯಾರ್ಥಿ ಒಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಹಾಸ್ಟೆಲ್ ನಲ್ಲಿ KLE ಸಂಸ್ಥೆಯ ಕಾನೂನು ವಿದ್ಯಾರ್ಥಿ ನೇಣಿಗೆ ಶರಣು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶಶಾಂಕ್ ಬಟಕುರ್ಕಿ (19) ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಇದುವರೆಗೆ ಕಾರಣ ತಿಳಿದು ಬಂದಿಲ್ಲ. ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರ : ಯುವಕ ಚುಡಾಯಿಸಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡು ಅಪ್ರಾಪ್ತೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ. ಕಳೆದ ಹಲವಾರು ದಿನಗಳಿಂದ ಅಪ್ರಾಪ್ತೆಯ ಹಿಂದೆ ಯುವಕ ಬಿದ್ದಿದ್ದ. ಪ್ರೀತಿ ಪ್ರೇಮದ ಹೆಸರಿನಲ್ಲಿ ಬಾಲಕಿಗೆ ಸಂಗಮೇಶ್ ಜಂಜವಾರ್ ಕಿರುಕುಳ ನೀಡಿದ್ದಾನೆ. ಕಾಲೇಜಿಗೆ ತೆರಳುತ್ತಿದ್ದ ವೇಳೆ ಹಿಂಬಾಲಿಸಿ ಸಂಗಮೇಶ್ ಬಾಲಕಿಗೆ ಚುಡಾಯಿಸುತ್ತಿದ್ದ. ಅಲ್ಲದೇ ಅಪ್ರಾಪ್ತೆಯ ಜೊತೆಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ನನ್ನ ಪ್ರೀತಿಸು ಎಂದು ಬಾಲಕಿಗೆ ಸಂಗಮೇಶ್ ಬಲವಂತ ಮಾಡುತ್ತಿದ್ದ. ಸಂಗಮೇಶನನ್ನು ಪ್ರಶ್ನಿಸಿದ್ದ ಬಾಲಕಿಯ ಸಹೋದರಿಯ ಮೇಲೆ ಕೂಡ ಆತ ಹಲ್ಲೆ ಮಾಡಿದ್ದ. ಅಲ್ಲದೆ ಸಂಗಮೇಶ ವಿರುದ್ಧ ಜೀವ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದ ಆರೋಪ ಕೇಳಿ ಬಂದಿದೆ. ಈ ಕುರಿತಂತೆ ನವೆಂಬರ್ 27ರಂದು ಮುದ್ದೇಬಿಹಾಳ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ದೂರು ನೀಡಿದ್ದಾಳೆ. ಸಂಗಮೇಶ್, ಮೌನೇಶ್ ಮಾದರ ಹಾಗೂ ಚಿದಾನಂದ ಕಟ್ಟಿಮನಿ ವಿರುದ್ಧ ದೂರು ಸಲ್ಲಿಸಿದ್ದಾಳೆ. ಮೂವರ…
ಹಾವೇರಿ : ಹಾವೇರಿಯಲ್ಲಿ ಗೌರವದ ದುರಂತ ಒಂದು ನಡೆದಿದ್ದು ನೀರಿನ ಟ್ರ್ಯಾಕ್ಟರ್ ಒಂದು ನಿಯಂತ್ರಣ ತಪ್ಪಿ ಪಾದಚಾರಿಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಷಣ್ಮುಖ ಬಣಗಾರ್ (38) ಎನ್ನುವ ಪಾದಚಾರಿಯೊಬ್ಬರು ಸಾವನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರದಲ್ಲಿ ಈ ಒಂದು ಘಟನೆ ನಡೆದಿದೆ. ಚಾಲಕನ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಾದಾಚಾರಿ ಮೇಲೆ ಹರಿದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ರಾಣಿಬೆನ್ನೂರು ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಟ್ರಾಕ್ಟರ್ ಮಾಲೀಕ ಮಾಲತೇಶ್ ಹಾಗೂ ಚಾಲಕ ಮಾರುತಿ ವಿರುದ್ಧ FIR ದಾಖಲಾಗಿದೆ.
ಯಾವುದೇ ಧರ್ಮ ಮತ್ತು ಸಮಾಜವು ಕೀಳರಿಮೆ ಹಾಗೂ ಪ್ರತ್ಯೇಕತೆಯನ್ನು ಅನುಭವಿಸುವ ವಾತಾವರಣವಿರಬಾರದು. ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿಯಾಗಿದೆ ಎಂದು ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಹೇಳಿದ್ದಾರೆ. ರೋಮಿನ ವ್ಯಾಟಿಕನ್ ನಗರದಲ್ಲಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಮೊದಲ ಅಂತರರಾಷ್ಟ್ರೀಯ ಸರ್ವಧರ್ಮ ಸಮ್ಮೇಳನದ ಶತಮಾನೋತ್ಸವ ಸ್ಮರಣಾರ್ಥ “ಮಾನವೀಯತೆಗಾಗಿ ಧರ್ಮಗಳ ಒಗ್ಗಟ್ಟು” ಎಂಬ ಶೀರ್ಷಿಕೆಯೊಂದಿಗೆ ಆಯೋಜಿಸಲಾದ ಮೂರು ದಿನಗಳ ವಿಶ್ವ ಸರ್ವಧರ್ಮ ಸಮ್ಮೇಳನದಲ್ಲಿ, ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಿದ ಅವರು ನಾವು ವೈವಿಧ್ಯತೆಗಳನ್ನು ಹೊಂದಿದ್ದರೂ, ಪ್ರತಿಯೊಬ್ಬರೊಳಗಿರುವ ದೈವಿಕ ಚೇತನವು ಒಂದೇ. ಸಮಾಜವನ್ನು ಮುನ್ನಡೆಸುವ ನನ್ನ ಸಹೋದರ ಸಹೋದರಿಯರೇ, ನಾವಿಂದು ದ್ವೇಷವನ್ನು ತಿರಸ್ಕರಿಸುವ ಪ್ರತಿಜ್ಞೆ ಮಾಡೋಣ ಎಂದರು. ನಾನು ಇಲ್ಲಿ ಯಾವುದೇ ಒಂದು ಧರ್ಮದ ಪ್ರತಿನಿಧಿಯಾಗಿ ಬಂದಿಲ್ಲ. ಬದಲಾಗಿ ಮಾನವೀಯತೆಯ ವಿನಮ್ರ ಧ್ವನಿಯಾಗಿ, ಶಾಂತಿ, ಪ್ರೀತಿ ಮತ್ತು ಸೌಹಾರ್ದತೆಯಿಂದ ತುಂಬಿದ ಒಂದು ಸುಂದರ ಪ್ರಪಂಚದ ಕನಸು ಕಾಣುವ ಶತಕೋಟಿ ಜನರ ಸಾಮೂಹಿಕ ಆಶಯ, ಹೋರಾಟ ಮತ್ತು ಆಕಾಂಕ್ಷೆಗಳನ್ನು ಹೊತ್ತುಕೊಂಡು…
ಮೈಸೂರು : ಚಲಿಸುತ್ತಿದ್ದಂತಹ ಕೆಎಸ್ಆರ್ಟಿಸಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್ಡಿ ಕೋಟೆ ತಾಲೂಕಿನ ನಡಾಡಿ ಗ್ರಾಮದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಬಸ್ನಲ್ಲಿ ಸಂಚರಿಸುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಎಚ್ ಡಿ ಕೋಟೆ ಘಟಕಕ್ಕೆ ಸೇರಿದ KSRTC ಸಾರಿಗೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದೇವಲಾಪುರ ಜಕ್ಕಹಳ್ಳಿ ಗ್ರಾಮದ ಮಾರ್ಗ ಮದ್ಯ ಈ ಘಟನೆ ನಡೆದಿದೆ. ನಡಾಡಿ ಗ್ರಾಮದಿಂದ ಎಚ್ ಡಿ ಕೋಟೆಗೆ ಈ ಒಂದು ಬಸ್ ತೆರಳುತ್ತಿತ್ತು. ಎಚ್ ಡಿ ಕೋಟೆ ಘಟಕಕ್ಕೆ ಸೇರಿದ ಸಾರಿಗೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.ಬಸ್ ನಲ್ಲಿದ್ದ ಸುಮಾರು 50 ಕ್ಕೂ ಹೆಚ್ಚು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.












