Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್ ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆ ನೋಡಿದರೆ ದರ್ಶನ್ ಅವರೇ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ ಎಂಬ ಅನುಮಾನಗಳು ಈಗ ದಟ್ಟವಾಗಿವೆ. ಹೌದು ಈ ಹಿಂದೆ ಮಾಜಿ ಸಂಸದ ಡಿಕೆ ಸುರೇಶ ರವರು ಚನ್ನಪಟ್ಟಣ ಕ್ಷೇತ್ರದಿಂದ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಸಭೆಯೊಂದರಲ್ಲಿ ಹೇಳಿಕೆ ನೀಡಿದರು ಈ ಒಂದು ಹೇಳಿಕೆಗೆ ಸಿಪಿ ಯೋಗೇಶ್ವರ ಸ್ಫೋಟಕ ಹೇಳಿಕೆ ನೀಡಿದ್ದು ಆ ಒಂದು ಅಚ್ಚರಿಯ ಅಭ್ಯರ್ಥಿ ಇದೀಗ ಜೈಲು ಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದಿದ್ದ ಡಿ.ಕೆ.ಸುರೇಶ್ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದ ಸಿಪಿವೈ ನಟರೊಬ್ಬರು ಕಾಂಗ್ರೆಸ್ ಪರವಾಗಿ ಹೆಚ್ಚು ಪ್ರಚಾರ ಮಾಡಿದ್ರು ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಂಡು ಚುನಾವಣೆಗೆ ನಿಲ್ಲಿಸಲು ಪ್ಲ್ಯಾನ್ಚುನಾವಣೆಗೆ…
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇದೀಗ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.ಹಾಗಾಗಿ ಕೆಲ ಹೊತ್ತಿನಲ್ಲಿ ಹೈಕೋರ್ಟ್ ಅರ್ಜಿಯ ವಿಚಾರಣೆ ನಡೆಸಲಿದೆ ನ್ಯಾ. ಕೃಷ್ಣ ಎಸ್ ದೀಕ್ಷಿತರ ಪೀಠವು ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಕುರಿತು ವಿಚಾರಣೆ ನಡೆಸಲಿದ್ದಾರೆ. ಹೌದು ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪಗೆ ಬಂಧನ ಭೀತಿ ಇರುವುದರಿಂದ ನೀರಿಕ್ಷಣಾ ಜಾಮೀನು ಕೋರಿಯು ಕೂಡ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಕೂಡ ಅರ್ಜಿಯನ್ನು ಸಲ್ಲಿಸಿದ್ದಾರೆ, ಇದರ ಬಳಿಕ ಇದೀಗ ಆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ ತಿಂಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಫೆಬ್ರವರಿಯಲ್ಲಿ…
ಉತ್ತರಕನ್ನಡ : ನನಗೆ ಪಿಎಸ್ಐ ಅಧಿಕಾರಿಯೊಬ್ಬರು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಮದ್ಯದ ಅಮಲಿನಲ್ಲಿ ಪೊಲೀಸ್ ಠಾಣೆಯ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದಲ್ಲಿ ನಡೆದಿದೆ. ಹೌದು ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಭಾಸ್ಕರ್ ಬೋಂಡೆಲ್ಕರ್ (36) ಎಂದು ಹೇಳಲಾಗುತ್ತಿದ್ದು, ಆತ ಠಾಣೆಯ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಾಸಿದ್ದಾನೆ ಎಂದು ಹೇಳಲಾಗುತ್ತಿದೆ.ಪಿಎಸ್ಐ ಬಸವರಾಜ್ ಮಗನೂರು ಜೂಜಾಟ ಆರೋಪದಡಿ ಭಾಸ್ಕರ್ ಬೋಂಡೆಲ್ಕರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪಿಎಸ್ಐ ವಿರುದ್ಧ ವಿಡಿಯೋ ಮಾಡಿ ಭಾಸ್ಕರ್ ಆರೋಪ ಮಾಡಿದ್ದಾನೆ. ಜೂಜಾಟದಲ್ಲಿ ಸಿಕ್ಕಿ ಬಿದ್ದಾಗ 3,60,00 ರೂ. ಅನ್ನು 36,000 ರೂ. ಎಂದು ಪೊಲೀಸರು ತೋರಿಸಿದ್ರು. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೂ ದೂರು ಸಲ್ಲಿಸಿದ್ದೆ. ತಾನೀಗ ಚಾಲಕ ವೃತ್ತಿ ನಡೆಸುತ್ತಿದ್ದು, ರಾಮನಗರ ತೆರಳಿದಾಗ ಮತ್ತೆ ಪೊಲೀಸರು ಕಿರುಕುಳ ನೀಡಿದ್ದಾರೆ. ಈ ಕಾರಣದಿಂದ ಆತ್ಮಹತ್ಯೆ ನಡೆಸಲು ಯತ್ನಿಸಿದ್ದೇನೆ ಎಂದು ಭಾಸ್ಕರ್ ಹೇಳಿದ್ದಾನೆ. ನಿನ್ನೆ ದಿನ ಜಮೀನು…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಏನಾಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಇದೀಗ ಮತ್ತೊಂದು ಸ್ಫೋಟಕ ಸಿಕ್ಕಿದ್ದು, ಆರೋಪಿಗಳು 94.73 ಕೋಟಿ ರೂ. ಹಣವನ್ನುಬಾರ್, ವೈನ್ ಶಾಪ್, ಚಿನ್ನದ ಮಳಿಗೆಗಳು ಹಾಗೂ ಸಣ್ಣಸಣ್ಣ ಕಂಪನಿಗಳ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ ಎಂಬ ಸ್ಪೋಟಕ. ಮಾಹಿತಿ ಬಹಿರಂಗವಾಗಿದೆ. ಈ ಒಂದು ಪ್ರಕರಣದಲ್ಲಿ ಹೈದರಾಬಾದ್ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ನಕಲಿ ಖಾತೆಗಳನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪಿಗಳಾದ ಸತ್ಯನಾರಾಯಣ ವರ್ಮಾ ಮತ್ತು ಚಂದ್ರಮೋಹನ್ ಎಂಬವರನ್ನು ಎಸ್ಐಟಿ ವಿಚಾರಣೆಗೊಳಪಡಿಸಿದಾಗ ಈ ವಿಚಾರ ಬಯಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿ ಸತ್ಯನಾರಾಯಣ ವರ್ಮಾ ನನ್ನು ಪೊಲೀಸರು ಬಂಧಿಸಿದ್ದು ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಆತನೇ 18 ನಕಲಿ ಖಾತೆಗಳನ್ನು ತೆರೆದು ಬೆಂಗಳೂರಿನ ವೈನ್ ಶಾಪ್ಗಳು, ಬಾರ್ಗಳು, ಚಿನ್ನಾಭರಣ ಮಾರಾಟ ಮಳಿಗೆಗಳು ಹಾಗೂ ಸಣ್ಣ ಕಂಪನಿಗಳು ಸೇರಿದಂತೆ ನೂರಕ್ಕೂ ಅಧಿಕ ಖಾತೆಗಳಿಗೆ ವರ್ಗಾಯಿಸಿಕೊಂಡು ಬಳಿಕ ನಗದು ರೂಪದಲ್ಲಿ ಪಡೆದಿರುವುದು ತಿಳಿದು ಬಂದಿದೆ. ಸತ್ಯನಾರಾಯಣನನ್ನು…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆಯ ನಂತರ ಆತನ ಶವ ಸಾಗಿಸಲು ದರ್ಶನ್ ಅವರೆ ಕೊಟ್ಟಿದ್ದಾರೆ ಎನ್ನಲಾದ 30 ಲಕ್ಷ ಡೀಲ್ ಗೆ ಸಂಬಂಧಿಸಿದಂತೆ ಇದೀಗ ಪೊಲೀಸರು 30 ಲಕ್ಷ ಹಣವನ್ನು ಇಟ್ಟ ಜಾಗದಲ್ಲಿಯೇ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹತ್ಯೆಯ ಬಳಿಕ ರೇಣುಕಾಸ್ವಾಮಿ ಶವ ಸಾಗಿಸಲು ದರ್ಶನ ನೀಡಿದ 30 ಲಕ್ಷ ರೂಪಾಯಿ ಮನೆಯಲ್ಲೆ ಇದೀಗ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. ಶವ ಸಾಗಿಸಲು ಆರೋಪಿ ಪ್ರದೋಷ ದರ್ಶನ್ ಯಿಂದ ಹಣ ಪಡೆದಿದ್ದ , ಕಾರ್ತಿಕ್ ಮೂಲಕ ತಲಾ 5 ಲಕ್ಷ ಕೊಡಲು ಪ್ಲಾನ್ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ 30 ಲಕ್ಷ ಹಣವನ್ನು ಒಂದು ಮನೆಯಲ್ಲಿ ಇಡಲಾಗಿತ್ತು. ಇದೀಗ ಆ 30 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ರೇಣುಕಾ ಸ್ವಾಮಿ ಶವ ಸಾಗಿಸಲು 30 ಲಕ್ಷಕ್ಕೆ ಡಿಲ್ ಮಾಡಲಾಗಿತ್ತು ಹೀಗಾಗಿ ಮೊದಲು ಶವವನ್ನು ಪಟ್ಟಣಗೆರೆ ಷಡ್ ನಿಂದ ಆಟೋದಲ್ಲಿ ಸಾಗಿಸಿ ನಂತರ ಸ್ಕಾರ್ಪಿಯೋ ಕಾರಿನಲ್ಲಿ ಶಿಫ್ಟ್ ಮಾಡಿದ್ದರು. ಅದಾದ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರ ಗೌಡ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ಆದರೆ ಪ್ರಕರಣದ 13ನೇ ಆರೋಪಿ ಆಗಿರುವ ದೀಪಕ್ ಪೊಲೀಸರ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಒಂದನ್ನು ಬಾಯಿಬಿಟ್ಟಿದ್ದಾನೆ. ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿದ ನಂತರ ರೇಣುಕಾ ಸ್ವಾಮಿಯನ್ನು ನೇರವಾಗಿ ಬೆಂಗಳೂರಿನ ಆರ್. ಆರ್. ನಗರದಲ್ಲಿರುವ ಪಟ್ಟಣಗೆರೆ ಶೆಡ್ಡಿಗೆ ಕರೆದುಕೊಂಡು ಬರಲಾಗಿದೆ. ಈ ವೇಳೆ ದರ್ಶನ್ ಆ ಒಂದು ಶೆಡ್ಡುಗೆ ಆಗಮಿಸಕ್ಕೂ ಮುಂಚೆ ಆತನಿಗೆ ಹಲವರು ತೀವ್ರವಾದಂತ ಹಿಂಸೆ ಕಿರುಕುಳ ನೀಡಿದ್ದಾರೆ. ರೇಣುಕಾಸ್ವಾಮಿ ಸಸ್ಯಹಾರಿ ಅಂದರೂ ಬಿಡದೆ ಆತನಿಗೆ ಬಿರಿಯಾನಿ ತಿನ್ನಿಸಿದ ಗ್ಯಾಂಗ್. ಕಿಡ್ನಾಪ್ ಆದ ಮಧ್ಯಾಹ್ನ ಡಿ ಬಾಸ್ ಗ್ಯಾಂಗ್ ರೇಣುಕಾ ಸ್ವಾಮಿಗೆ ಊಟ ಕೊಡಿಸಿದರು. ನಾನು ಸಸ್ಯಹಾರಿ ಅಂದರು ಬಿರಿಯಾನಿ ಮೂಳೆ ಬಾಯಿಗೆ ತುರುಕಿದ್ರು. ಈ ವೇಳೆ ಬಿರಿಯಾನಿಯನ್ನು ತಿನ್ನದೇ ಕೆಳಗೆ ಉಗುಳಿದ್ದ ರೇಣುಕಾಸ್ವಾಮಿ ಬಿರಿಯಾನಿ ಉಗುಳಿದಾಗ ಹಿಗ್ಗಾಮುಗ್ಗ ಥಳಿಸಿದ್ದರು. ಬಾಸ್ ಬರ್ತಾರೆ ಒದೆ ತಿನ್ನಲು ರೆಡಿಯಾಗು…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಹದಿಮೂರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ಯಾವಾಗ ನಟ ದರ್ಶನ್ ಅವರ ಬಂಧನವಾಯಿತು ಆಗ ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಟ್ರೊಲರ್ ಗಳು ಕೆಟ್ಟದಾಗಿ ಪೋಸ್ಟ್ ಮಾಡಲು ಆರಂಭಿಸಿದ್ದಾರೆ. ಇದೀಗ ಟ್ರೋಲರ್ಸ್ ಗಳಿಗೆ ಪೊಲೀಸರು ಎಚ್ಚರಿಕೆ ನೀಡಬೇಕು ಎಂದು ಮೋಹಕ ತಾರೆ ನಟಿ ರಮ್ಯಾ ಟೋಲರ್ಸ್ ಗಳಿಗೆ ಚಳಿ ಬಿಡಿಸಿದ್ದಾರೆ. ಈ ಕುರಿತಂತೆ ಪೋಸ್ಟ್ ಮಾಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ಬ್ಲಾಕ್ ಅನ್ನೋ ಆಪ್ಷನ್ ಇದೆ.ನಮಗೆ ಇಷ್ಟ ಇಲ್ಲದವರು,ಟ್ರೋಲ್ ಮಾಡುವವರು, ಕೆಟ್ಟ ಕಮೆಂಟ್ ಮೂಲಕ ಕಿರುಕುಳ ಕೊಡುವವರು ಇರುತ್ತಾರೆ. ನನ್ನನ್ನು ಸೇರಿಸಿ ನಟ ನಟಿಯರನ್ನು ಟ್ರೋಲ್ ಮಾಡುವ ಜನರಿದ್ದಾರೆ. ಕೆಟ್ಟ ಮೆಸೇಜ್ ಕಳುಹಿಸಿದರೆ ಕೊಲ್ಲುವ ಶೋಷಣೆಯ ಸಮಾಜದಲ್ಲಿ ಇದ್ದೇವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಕೆಲವೊಮ್ಮೆ ಟ್ರೊಲ್ ಮಾಡುವವರಿಗೆ ಪೊಲೀಸರು ಎಚ್ಚರಿಕೆ ನೀಡಬೇಕು. ಟ್ರೋಲ್ ಮಾಡುವ ಮೂಲಕ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಯಾರು ಕಾನೂನಿಗಿಂತ ಮೇಲಲ್ಲ. ಕಾನೂನನ್ನು…
ಬೆಂಗಳೂರು : ತನ್ನ ಗೆಳತಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿಯನ್ನು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ಹಲವು ಚಿತ್ರರಂಗ ಕಲಾವಿದರು ದರ್ಶನವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ಆಗ್ರಹಿಸುತ್ತಿದ್ದಾರೆ. ಈ ಸಂಬಂಧ ಇಂದು ಕರ್ನಾಟಕ್ ಫಿಲಂ ಚೇಂಬರ್ ನಲ್ಲಿ ತುರ್ತು ಸಭೆ ನಡೆಸಿದ್ದು, ಅಧ್ಯಕ್ಷರಾದ ಎಂ.ಎನ್ ಸುರೇಶ್ ಈ ವಿಚಾರದಲ್ಲಿ ನಾವು ರಾಜಿ ಆಗಲ್ಲ ಎಂದು ತಿಳಿಸಿದ್ದಾರೆ. ಹೌದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಸ್ಯಾಂಡಲ್ವುಡ್ನಿಂದ ಬ್ಯಾನ್ ಮಾಡುವ ಕುರಿತು ಇಂದು ಕರ್ನಾಟಕ ಫಿಲಂ ಚೇಂಬರ್ ನಲ್ಲಿ ಎಂ.ಎನ್ ಸುರೇಶ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.ಈ ವಿಚಾರದಲ್ಲಿ ನಾವು ರಾಜಿ ಆಗಲ್ಲ. ನಾವು ಈ ಹಿಂದೆ ಎಷ್ಟೋ ಕೇಸ್ಗಳಲ್ಲಿ ಸಂಧಾನ ಮಾಡಿಸಿದ್ದೇವೆ ಎಂದು ಅವರು ತಿಳಿಸಿದರು. ಆದರೆ ಇದು ಕೊಲೆ ಪ್ರಕರಣ ಆಗಿರುವುದರಿಂದ ಎಲ್ಲವೂ ಕಾನೂನಿನ ಅಡಿಯಲ್ಲೇ ನಡೆಯಬೇಕು. ಪಾರದರ್ಶಕತೆಯಿಂದ ನಾವು ಕೆಲಸ ಮಾಡುತ್ತೇವೆ. ಯಾವ ಚಿತ್ರರಂಗದಲ್ಲೂ ನಟ-ನಟಿಯರನ್ನು…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪವಿತ್ರ ಗೌಡ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ದರ್ಶನ್ ಪುತ್ರ ವಿನೀಶ್ ಕೂಡ ಪೋಸ್ಟ್ ಹಂಚಿಕೊಂಡಿದ್ದು, ಕೆಟ್ಟದಾಗಿ ಕಮೆಂಟ್ಸ್ ಹಾಕಿದವರಿಗೆ ತಿರುಗೇಟು ನೀಡಿದ್ದಾರೆ. ಇನ್ನೊಂದಡೆ ಪತಿಯ ಒಂದು ಕೃತ್ಯದಿಂದ ಬೇಸತ್ತು ಪತ್ನಿ ವಿಜಯಲಕ್ಷ್ಮಿ ಕೂಡ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅವರ ಜೊತೆಗಿದ್ದ ಫೋಟೋ ರಿಮೂವ್ ಮಾಡಿದ್ದು ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ. ಇದರ ನಡುವೆ ದರ್ಶನ್ ಹಾಗೂ ವಿಜಯಲಕ್ಷ್ಮೀ ಅವರ ಪುತ್ರ 15 ವರ್ಷದ ವಿನೇಶ್ ಸೋಶಿಯಲ್ ಮೀಡಿಯಾದಲ್ಲಿ ಮಾಡಿರುವ ಪೋಸ್ಟ್ ಗಮನಸೆಳೆದಿದೆ. ಅವರಿಗೆ ಬರುತ್ತಿರುವ ಸೋಶಿಯಲ್ ಮೀಡಿಯಾ ಒತ್ತಡ ಹಾಗೂ ಕೆಟ್ಟ ಕಾಮೆಂಟ್ಗಳ ಬಗ್ಗೆ ಅವರು ಬರೆದುಕೊಂಡಿದ್ದಾರೆ. ವಿನೀಶ್ ಇನ್ಸ್ಟಾಗ್ರಾಮ್ ಸ್ಟೋರಿ ಹಂಚಿಕೊಂಡಿದ್ದಾರೆ.’ ನನ್ನ ತಂದೆ ಬಗ್ಗೆ ಕೆಟ್ಟ ಕಾಮೆಂಟ್ಸ್ ಮತ್ತು ಅಸಭ್ಯ ಭಾಷೆಯಲ್ಲಿ ನಿಂದನೆ ಮಾಡುತ್ತಿರುವರಿಗೆ ಧನ್ಯವಾದಗಳು. ನನಗೆ 15 ವರ್ಷ, ನನಗೂ ಮನಸಿದೆ, ಈ ಕಷ್ಟದ ಸಮಯದಲ್ಲಿ ನನ್ನ…
ದಕ್ಷಿಣಕನ್ನಡ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕೇಸ್ ನಲ್ಲಿ ಬಿಎಸ್ ಯಡಿಯೂರಪ್ಪಗೆ ಅರೆಸ್ಟ್ ವಾರೆಂಟ್ ನೀಡಿರುವ ವಿಚಾರವಾಗಿ ಕಾರವಾರದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾವೇರಿ ಆರೋಪಿಸಿದ್ದು,ಬಿಎಸ್ ಯಡಿಯೂರಪ್ಪ ಅವರಂತಹ ಹಿರಿಯ ನಾಯಕರಿಗೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು. ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮೇಲೆ ವಿಶ್ವಾಸವಿಟ್ಟು ಹೇಳಿಕೆಯನ್ನು ನೀಡುತ್ತಿದ್ದೇನೆ. ಆರೋಪ ಮಾಡಿದ್ದ ಮಹಿಳೆ ಪ್ರತಿನಿತ್ಯ ದೂರು ಕೊಡುತ್ತಿದ್ದವಳು. ಬಿಎಸ್ ಯಡಿಯೂರಪ್ಪ ಅವರಂತಹ ಹಿರಿಯ ನಾಯಕರಿಗೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು. ನಾನು ಇನ್ನೇನು ಹೆಚ್ಚು ಹೇಳಲು ಬಯಸುವುದಿಲ್ಲ. ಯಡಿಯೂರಪ್ಪ ಆರೋಪ ಮುಕ್ತರಾಗಿ ಹೊರಬರುವ ವಿಶ್ವಾಸವಿದೆ. ಇದೊಂದು ರಾಜಕೀಯ ಪ್ರೇರಿತ ಷಡ್ಯಂತ್ರದ ಭಾಗವಾಗಿದೆ ಎಂದು ಕಾರವಾರದಲ್ಲಿ ಸಂಸದ ವಿಶ್ವೇಶ್ವರಹೆಗ್ಡೆ ಕಾಗೇರಿ ಅವರು ತಿಳಿಸಿದರು.













