Author: kannadanewsnow05

ನವದೆಹಲಿ : ದೇಶ ಒಡೆಯುವ ಕೂಗೆಬ್ಬಿಸಿರುವ ಸಂಸದ ಡಿ.ಕೆ. ಸುರೇಶ್ ಅವರನ್ನು ಮೊದಲು ಕಾಂಗ್ರೆಸ್ ವಜಾಗೊಳಿಸಬೇಕು.ಡಿ.ಕೆ. ಸುರೇಶ್ ಅವರ ದೇಶ ವಿಭಜನೆ ಹೇಳಿಕೆ ಸಂಬಂಧ ಕಾನೂನಾತ್ಮಕ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸಂಸದೀಯ ಸಚಿವ ಜೋಶಿ ಒತ್ತಾಯಿಸಿದ್ದಾರೆ. ಸಂಸದ ಸುರೇಶ್ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಜೋಶಿ ಅವರು, ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದ್ದರೆ ಮೊದಲು ಅವರನ್ನು ಪಕ್ಷದಿಂದ ಹೊರ ಹಾಕಲಿ ಎಂದು ಆಗ್ರಹಿಸಿದ್ದಾರೆ. ಇವರದ್ದು ದೇಶ ದ್ರೋಹದ ಮನಸ್ಥಿತಿ. ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ ಎಂದು ಬಣ್ಣಿಸಿದ ಕವಿ ಕುವೆಂಪುಗೆ ಮಾಡಿದ ಅವಮಾನವಾಗಿದೆ. ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕುಳಿತು ದೇಶ ಒಡೆಯುವ ಹುನ್ನಾರ ಮಾಡುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ನೈತಿಕತೆ ಇದ್ದರೆ ಮೊದಲು ಅವರನ್ನು ಪಕ್ಷದಿಂದ ವಜಾಗೊಳಿಸಲಿ ಎಂದು ಹೇಳಿದರು.

Read More

ಬೆಂಗಳೂರು : ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಸಿಹಿ ನೀಡಿದ್ದು, ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಿಗೂ ಅನ್ವಯ ವಾಗುವಂತೆ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ ಕಲ್ಪಿಸುವ ಕುರಿತ ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) ತಿದ್ದುಪಡಿ ನಿಯಮಗಳು -2024ರ ಕರಡಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ತನ್ಮೂಲಕ ರಾಜ್ಯಪತ್ರದ ಅಧಿಸೂಚನೆ ಪ್ರಕಟಿಸಿ 15 ದಿನಗಳೊಳಗಾಗಿ ಸಾರ್ವಜನಿಕರಿಂದ ಆಕೇಪಣೆ ಆಹ್ವಾನಿಸಲು ಹಾಗೂ ಗುರುತರ ಆಕ್ಷೇಪಣೆ ಬಾರದಿದ್ದರೆ ಮತ್ತೆ ಸಚಿವ ಸಂಪುಟಕ್ಕೆ ಮಂಡಿಸದೆ ಮೀಸಲಾತಿ ಜಾರಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಸಂಪುಟ ಅನುಮತಿ ನೀಡಿದೆ. ಮಾನದಂಡವೇನು?: ರಾಷ್ಟ್ರಮತ್ತು ಅಂತರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಭಾಗವಹಿಸಿ ಗಣನೀಯ ಸಾಧನೆ ಮಾಡಿದಪ್ರತಿಭಾವಂತ ಕ್ರೀಡಾಪಟುಗಳಿಗೆಶೇ.2ರಷ್ಟು ಸಮತಳ ಮೀಸಲಾತಿ ದೊರೆಯಲಿದೆ. ಇದಕ್ಕಾಗಿ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) 1977ರ ನಿಯಮ 9ಕ್ಕೆ ತಿದ್ದುಪಡಿ ತರಲು ತೀರ್ಮಾನ ಮಾಡಲಾಗಿದೆ. ತನ್ಮೂಲಕ ಪ್ರಸ್ತುತ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯಲ್ಲಿನ ನೇಮಕಾತಿಗೆ ಮಾತ್ರ…

Read More

ಹೊಸಪೇಟೆ: ಮೂರು ದಿನಗಳ ಹಂಪಿ ಉತ್ಸವಕ್ಕೆ ಶುಕ್ರವಾರ ಚಾಲನೆ ದೊರೆಯ ಲಿದ್ದು, ವಿಜಯನಗರದ ಗತವೈಭವ ಮರುಕಳಿಸಲು ಹಂಪಿ ಸಜ್ಜುಗೊಳ್ಳುತ್ತಿದೆ. ಸಂಜೆ 7.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಅಶ್ವಿನಿ ಪುನೀತ್‌ ರಾಜಕುಮಾ‌ರ್, ಶಾಸಕ ಗವಿಯಪ್ಪ, ಸಚಿವರಾದ ಜಮೀರ್, ತಂಗಡಗಿ ಸೇರಿ ಗಣ್ಯರು ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಹಂಪಿಯ ಗಾಯತ್ರಿ ಪೀಠ ವೇದಿಕೆ, ಬಸವಣ್ಣ ವೇದಿಕೆ, ವಿರೂಪಾಕ್ಷೇಶ್ವರ ವೇದಿಕೆ ಮತ್ತು ಸಾಸಿವೆಕಾಳು ಗಣಪತಿ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಉತ್ಸವದಲ್ಲಿ ಟಗರು, ಎತ್ತು, ಶ್ವಾನಗಳ ಪ್ರದರ್ಶನ, ಪುಸ್ತಕ ಮೇಳ, ವಸ್ತು ಪ್ರದರ್ಶನ, ಸಿರಿಧಾನ್ಯ ಮೇಳ ನಡೆಯಲಿದೆ. ಧ್ವನಿ ಮತ್ತು ಬೆಳಕು ಕಾರ್ಯಕ್ರಮ, ಕುಸ್ತಿ ಪಂದ್ಯಾವಳಿ, ಎತ್ತಿನ ಬಂಡಿಗಳ ಗಾಲಿ ಜೋಡಣೆ ಸೇರಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಗಸದಿಂದ ಹಂಪಿ ಸ್ಮಾರಕಗಳ ವೀಕ್ಷಣೆಗೆ ಹಂಪಿ ಬೈ ಸೈ ಯೋಜನೆ ರೂಪಿಸಲಾಗಿದೆ.

Read More

ಹಾವೇರಿ :ಈಗಾಗಲೇ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್, ಹಾಗೂ ಕೆ ಆರ್ ಪಿ ಪಿ ಶಾಸಕ ರೆಡ್ಡಿ ಕೂಡ ಬಿಜೆಪಿಗೆ ಬೆಂಬಲವನ್ನು ಸೂಚಿಸಿದ್ದಾರೆ ಇದರ ಬೆನ್ನಲ್ಲೆ, ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ನಿಂದ ಮತ್ತಷ್ಟು ನಾಯಕರು ಬಿಜೆಪಿಗೆ ಮರಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್‌ನಿಂದ ಮತ್ತಷ್ಟು ನಾಯಕರು ಬಿಜೆಪಿಗೆ ಬರಲಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಿಂತ ಮೋದಿ ಗ್ಯಾರಂಟಿ ಶ್ರೇಷ್ಠವಾಗಿದೆ. ಹೀಗಾಗಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ದಲ್ಲಿ 28ಕ್ಕೆ 28 ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಇಲ್ಲಿ ಪಕ್ಷದ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ ದಲ್ಲಿ ಮಾತನಾಡಿ, ರಾಜ್ಯಾದ್ಯಂತ ನಾನು ಪ್ರವಾಸ ಮಾಡುತ್ತಿದ್ದು, ಪಕ್ಷದ ಕಾರ್ಯಕರ್ತರು ರಣೋತ್ಸಾಹದಲ್ಲಿದಾರೆ. ವಿಧಾನಸಭೆ ಚುನಾವಣೆಯಲ್ಲಿ ನಮಗೆ ಅನಿರೀಕ್ಷಿತ ಸೋಲಾಯಿತು. ಕಳೆದ ಏಳೆಂಟು ತಿಂಗಳಿಂದ ಕಾರ್ಯಕರ್ತರ ಉತ್ಸಾಹ ಕುಗ್ಗಿತ್ತು.…

Read More

ಯಾದಗಿರಿ : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರೆಂಟಿ ಯೋಜನೆಗಳು ರದ್ದಾಗಲಿವೆ ಎಂದು ಕೈ ಶಾಸಕ ಬಾಲಕೃಷ್ಣ ಹೇಳಿಕೆ ಸಂಚಲನ ಮೂಡಿಸಿತ್ತು. ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಕೂಡ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೂ ಸೋತರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ತಿಳಿಸಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಮಾತ್ರವೇ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಮುಂದಾಲೋಚನೆ ಇಲ್ಲದೆ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದರು. ಅವುಗಳ ಅನುಷ್ಠಾನ ಮಾಡಿ 8 ತಿಂಗಳಿಗೆ ಹಲವು ಸಮಸ್ಯೆ ಉಂಟಾಗಿದೆ. 100 ಪ್ರತಿಶತ ಗ್ಯಾರಂಟಿಗಳ ಅನುಷ್ಠಾನ ಮಾಡಿಲ್ಲ. ಅನುದಾನಗಳನ್ನು ಕೊಡದೇ ಮೋಸ ಮಾಡಿದ್ದಾರೆ ಎಂದು ಕಿಡಿ ಕಾರಿದರು. ನಿಮ್ಮ ಗುಲಾಮರಾಗಿ ಕೆಲಸ ಮಾಡ್ತೀವಿ ಎಂದು ಮತ ಪಡೆದು ಇಂದು ಜನರನ್ನೇ ಗುಲಾಮರನ್ನಾಗಿ ಮಾಡಿಕೊಂಡಿದ್ದಾರೆ. ಅವರ ತೆರಿಗೆ ಹಣದಲ್ಲೇ ಗ್ಯಾರಂಟಿ ಕೊಟ್ಟು, ಈಗ ಚುನಾವಣೆ ಗೆಲ್ಲದಿದ್ದರೆ ನಿಲ್ಲಿಸುತ್ತೇವೆ ಎನ್ನುವುದು ಮೋಸ ಆಮ್ ಆದ್ಮಿ ಪಕ್ಷದ ಯೋಜನೆಗಳನ್ನು ಕದ್ದು ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು…

Read More

ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡಿ ಸಿದ್ದು ಈ ವಿಚಾರವಾಗಿ ಸಂಸದ ಅಡಿಕೆ ಸುರೇಶ್ ಅವರು, ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದಕ್ಷಿಣ ಭಾರತದ ಹಣ ಉತ್ತರ ಭಾರತಕ್ಕೆ ಹಂಚುತ್ತಿದ್ದಾರೆ.ಇದೇ ರೀತಿ ಮುಂದುವರೆದರೆ ಪ್ರತ್ಯೇಕ ರಾಷ್ಟ್ರದ ಕೂಗು ಬೇಡಿಕೆ ಇಡಬೇಕಾಗುತ್ತದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ದಕ್ಷಿಣ ಭಾರತ ಹಣವನ್ನು ಉತ್ತರ ಭಾರತಕ್ಕೆ ಕಳುಹಿಸುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ.ಹೀಗೆ ಮುಂದುವರೆದರೆ ದಕ್ಷಿಣ ಭಾರತದ ಕೂಗು ಎತ್ತಬೇಕಾಗುತ್ತದೆ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಪ್ರತ್ಯೇಕ ದೇಶದ ಕೂಗು ಎತ್ತಿದ್ದಾರೆ. ದಕ್ಷಿಣ ಭಾರತಕ್ಕೆ ಬಹಳಷ್ಟು ಅನ್ಯಾಯ ಆಗುತ್ತಿರುವುದನ್ನು ನಾವು ಪ್ರತಿಯೊಂದು ಹಂತದಲ್ಲಿ ನೋಡುತ್ತಿದ್ದೇವೆ. ನಮ್ಮ ಪಾಲು ಏನು ಸಿಗಬೇಕಾಗಿದೆ ಅಭಿವೃದ್ಧಿಯ ಹಣ ಸಿಗಬೇಕಾಗಿರುವುದು ಉತ್ತರ ಭಾರತದಲ್ಲಿ ಹಂಚುತ್ತಿದ್ದಾರೆ.ನಮಗೆ ಎಲ್ಲಾ ವಿಚಾರಗಳು ಕೂಡ ಅನ್ಯಾಯ ಆಗುತ್ತಿದೆ. ಮುಂದಿನ ದಿನಗಳಲ್ಲಿ ನಾವು ಖಂಡಿಸಲಿಲ್ಲವಾದರೆ ಪ್ರತ್ಯೇಕವಾದ ರಾಷ್ಟ್ರ ಬೇಡಿಕೆ ಇಡಬೇಕಾಗುತ್ತದೆ ಎಂದರು. ಇವತ್ತಿನ ಹಣಕಾಸು ಹಂಚುತ್ತಿರುವ ಪರಿಸ್ಥಿತಿ ನೋಡಬೇಕಾದರೆ…

Read More

ಬೆಂಗಳೂರು : ಬಿಗ್ ಬಾಸ್ ಹತ್ತರ ಸೀಸನ್ ನಲ್ಲಿ ಕಾರ್ತಿಕ್ ಮಹೇಶ್ ಅವರು ವಿನ್ನರಾಗಿ ಹೊರಹಮ್ಮಿದ್ದು, ಅದೇ ರೀತಿಯಾಗಿ ಮೊದಲ ರನ್ನರ್ ಅಪ್ ಆಗಿ ಡ್ರೋನ್ ಪ್ರತಾಪ್ ಅವರು ಹೊರ ಹೊಮ್ಮಿದ್ದಾರೆ. ಇದರ ಬೆನ್ನಲ್ಲೇ ಡ್ರೋನ್ ಪ್ರತಾಪಗೆ ಒಂದಾದರೋಂದ ಮೇಲಂತೆ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಹೌದು ಬಿಗ್ ಬಾಸ್ ಮೊದಲನೇ ರನ್ನರ್ ಅಪ್ ಆದ ಬೆನ್ನಲ್ಲೇ ಕಲರ್ಸ್ ಕನ್ನಡ ವಾಹಿನಿಯು ಡ್ರೋನ್ ಪ್ರತಾಪ್ ಅವರಿಗೆ ಮತ್ತೊಂದು ಬಿಗ್ ಆಫರ್ ನೀಡಿದೆ. ವಾಹಿನಿಯ ಅತ್ಯಂತ ಜನಪ್ರಿಯ ಶೋ ಗಿಚ್ಚಿಗಿಲಿಗಿಲಿ ಕಾರ್ಯಕ್ರಮದಲ್ಲಿ ಡ್ರೋನ್ ಪ್ರತಾಪ್ ಕಂಟೆಸ್ಟೆಂಟ್ ಆಗಿ ಆಯ್ಕೆಯಾಗಿದ್ದಾರೆ. ಇಂದಿನಿಂದ ರಿಯಾಲಿಟಿ ಶೋದ ಚಿತ್ರೀಕರಣ ಕೂಡ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಡ್ರೋನ್ ಪ್ರತಾಪ್ ಮಾತ್ರವಲ್ಲ, ತುಕಾಲಿ ಸಂತೋಷ್, ಮೈಕಲ್ ಮತ್ತು ಇಶಾನಿ ಕೂಡ ಈ ಬಾರಿ ಗಿಚ್ಚಿಗಿಲಿಗಿಲಿಯಲ್ಲಿ ಪ್ರೇಕ್ಷಕರನ್ನು ನಕ್ಕು ನಗಿಸಲಿದ್ದಾರೆ. ಮೂವರು ಕೂಡ ಇಂದಿನಿಂದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಶ್ರುತಿ, ಕೋಮಲ್, ಸಾಧು ಕೋಕಿಲಾ ನಿರ್ಣಾಕರಾಗಿದ್ದಾರೆ. ಇದೆಲ್ಲದರ ನಡುವೆ ಡ್ರೋನ್ ಪ್ರತಾಪ್ ಗೆ ಸಂಕಷ್ಟ…

Read More

ದಾವಣಗೆರೆ : ಗ್ರಾಮ ದೇವತೆಯ ಜಾತ್ರೆಯ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಜಾತ್ರೆಯ ಆಚರಣೆ ಮಾಡುತ್ತಿದ್ದಾಗ ಗಂಡನೊಬ್ಬ ಕಂಠಪೂರ್ತಿ ಕುಡಿದು ಬಂದು ಪತ್ನಿಯ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಹೆಂಡತಿಯ ತಲೆ ಹಾಗೂ ಕಿವಿಯ ಭಾಗಕ್ಕೆ ಗಂಭೀರ ಪೆಟ್ಟು ಬಿದ್ದು, ಕಿವಿಯಲ್ಲಿ ರಸ್ತಸ್ರಾವ ಉಂಟಾಗಿ ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲ್ಲೂಕಿನ ಶಿರಮಗೊಂಡನಹಳ್ಳಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಬೇಡಿ ಎಂದು ಹಿರಿಯರು ಹೇಳುತ್ತಾರೆ. ಆದರೆ, ಇಲ್ಲೊಬ್ಬ ಕುಡುಕ ಗಂಡ ತನ್ನ ಗ್ರಾಮದೇವತೆಯ ಜಾತ್ರೆಯ ವೇಳೆಮದ್ಯವ್ಯಸನಿ ಗಂಡ ಕಂಠಪೂರ್ತಿ ಕುಡಿದು ಬಂದು ಮನೆಯಲ್ಲಿದ್ದ ಹೆಂಡ್ತಿಯನ್ನು ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಅರ್ಪಿತಾ (24) ಕೊಲೆಯಾದ ದುರ್ದೈವಿ ಮಹಿಳೆಯಾಗಿದ್ದಾಳೆ. ಹನಮಂತ (28) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.ಕಳೆದ ಐದು ವರ್ಷಗಳ ಬಳಿಕ ಬಂದ ಗ್ರಾಮದೇವತೆ ಹಬ್ಬಕ್ಕೆ ಎಲ್ಲ ಮನೆಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇನ್ನು ಎಲ್ಲ ಮನೆಗಳಲ್ಲಿಯೂ ಮಾಂಸಾಹಾರದ ಊಟವನ್ನೂ ಮಾಡಲಾಗಿರುತ್ತದೆ. ಜಾತ್ರೆ ಹಿನ್ನೆಲೆ ಕಂಠಪೂರ್ತಿ ಮದ್ಯಪಾನ ಮಾಡಿದ್ದ ಹನುಮಂತ, ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ…

Read More

ಶಿವಮೊಗ್ಗ : ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕೊರತೆಗಳನ್ನು ನೀಗಿಸಲು ಹೆಚ್ಚುವರಿಯಾಗಿ ಶಿಕ್ಷಕರ ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತುಂಬಲು ಸಿಎಂ ಬಳಿ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಏರ್ಪಡಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ದಿನಾಚರಣೆ ಹಾಗೂ ₹2.30 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸಭಾಂಗಣ ಮತ್ತು ನೂತನ ಆಡಳಿತ ಮಂಡಳಿ ಕಚೇರಿ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.43 ಸಾವಿರ ಶಿಕ್ಷಕರ ಕೊರತೆ ಇರುವುದನ್ನು ಗಮನಿಸಿ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ. 32 ಸಾವಿರ ಶಿಕ್ಷಕರ ವರ್ಗಾವಣೆ ಮಾಡಿ ಯಶಸ್ಸು ಕಂಡಿದ್ದೇವೆ ಎಂದರು. ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರೆತಿರುವುದು ಪುಣ್ಯದ ಫಲ. ಈ ಅವಕಾಶವನ್ನು ಯಶಸ್ವಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ.ಶಿಕ್ಷಣ ಕ್ಷೇತ್ರದ ಅನುಭವವಿಲ್ಲದ ನನಗೆ ಮುಖ್ಯಮಂತ್ರಿ ಅವರು ನೀಡಿದ ಶಿಕ್ಷಣ ಸಚಿವ ಸ್ಥಾನವನ್ನು…

Read More

ಬೆಂಗಳೂರು : ರೌಡಿಶೀಟರ್ ಗಳ ಗ್ಯಾಂಗ್ ಕಟ್ಟಿಕೊಂಡು ದೊಡ್ಡ ದೊಡ್ಡ ಬಿಲ್ಡರ್ ಹಾಗೂ ದೊಡ್ಡ ದೊಡ್ಡ ವ್ಯಕ್ತಿಗಳ ಬಳಿ ಹೆದರಿಸಿ ಹಣವಸೂಲಿ ಮಾಡುತ್ತಿದ್ದ ನಕಲಿ ಆರ್‌ಟಿಐ ಕಾರ್ಯಕರ್ತರನ್ನು ಇದೀಗ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜೈಹಿಂದ್ ಸಂಘಟನೆ ಮುಖ್ಯಸ್ಥ ಎಂದು ಹೇಳಿಕೊಳ್ತಿದ್ದ ನಕಲಿ RTI ಕಾರ್ಯಕರ್ತ ದೀಪಕ್ ಗೌಡ. ಇನ್ನು ರಕ್ಷಿತ್ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು ಈ ಹಿಂದೆ RTI ಕಾರ್ಯಕರ್ತ ವೆಂಕಟೇಶ್ ಎಂಬುವರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದವನು. ಇಂತಹ ರೌಡಿ ಪಟಾಲಂ ಕಟ್ಟಿಕೊಂಡು ನಗರದ ಅನೇಕ ಬಿಲ್ಡರ್‌ಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುವ ಕಾಯಕ ಮಾಡಿಕೊಂಡಿದ್ದ ದೀಪಕ್ ಗೌಡ. ಬಿಲ್ಡಿಂಗ್ ಸರಿ ಇಲ್ಲ, ರೂಲ್ಸ್ ಪ್ರಕಾರ ಕಟ್ಟಿಲ್ಲ, ಇದನ್ನೆಲ್ಲ ಬಹಿರಂಗ ಮಾಡ್ತೀವಿ ಅಂತ ಬೆದರಿಸಿ ಬಿಲ್ಡರ್ ಗಳಿಂದ ಹಣ ಬೇಡಿಕೆ ಇಡುತ್ತಿದ್ದ ಎನ್ನಲಾಗುತ್ತಿದೆ. ಅದೇ ರೀತಿ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಬಿಂದು ವೆಂಚರ್ಸ್ ಮಾಲೀಕರಿಗೆ ಬೆದರಿಸಿ 80 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಗ್ಯಾಂಗ್. ಈ…

Read More