Author: kannadanewsnow05

ದಾವಣಗೆರೆ : ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದ ಮನೆಯೊಂದರಲ್ಲಿ ದೇವರ ಮುಂದೆ ಹಚ್ಚಿಟ್ಟಿದ್ದ ದೀಪ ಇಡೀ ಮನೆಯನ್ನೇ ಸುಟ್ಟು ಹಾಕಿರುವಂತ ಘಟನೆ ನಡೆದಿದೆ. ನಿನ್ನೆ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ತಗುಲಿ ಮನೆಯಲ್ಲಿದ್ದ ವಸ್ತು, ಧಾನ್ಯ, ಹಣ ಭಸ್ಮವಾಗಿದೆ. ಬಡಪ್ಪ ಎಂಬುವವರು ಮನೆ ಬಾಗಿಲು ಹಾಕಿಕೊಂಡು ತಮ್ಮ ಕುಟುಂಬಸ್ಥರೊಂದಿಗೆ ಕಾರ್ಯಕ್ರಮಕ್ಕೆ ಹೋಗಿದ್ದರು. ಈ ವೇಳೆ ಮನೆಯಲ್ಲಿದ್ದ ದೀಪದಿಂದ ಆಕಸ್ಮಿಕವಾಗಿ ಬೆಂಕಿ ಹಚ್ಚಿಕೊಂಡಿದೆ. ಉರಿಯುತ್ತಿದ್ದ ದೀಪದ ಜ್ವಾಲೆ ಬಟ್ಟೆಗೆ ಹತ್ತಿಕೊಂಡು ಇಡೀ ಮನೆ ಹೊತ್ತಿ ಉರಿದಿದೆ. ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ಹಣ, ಚಿನ್ನಾಭರಣ, ಬಟ್ಟೆ, ದಾಖಲೆಗಳು ಬೆಂಕಿಗೆ ಅಹುತಿಯಾಗಿದೆ. ಘಟನಾ ಸ್ಥಳಕ್ಕೆ ಜಗಳೂರು ತಾಲೂಕು ದಂಡಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದಿಂದ ಆದ ನಷ್ಟಕ್ಕೆ ಪರಿಹಾರ ನೀಡಲು ಬಡಪ್ಪ ಅವರು ಮನವಿ ಮಾಡಿದ್ದಾರೆ. ಸದ್ಯ ತಾಲೂಕು ದಂಡಧಿಕಾರಿಗಳು ಪರಿಸರ ವಿಕೋಪ ನಿಧಿಯಿಂದ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

Read More

ವಾರಣಾಸಿ: ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಪೂಜೆ ನಡೆಸಲು ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಆಚಾರ್ಯ ವೇದವ್ಯಾಸ ಪೀಠದ ದೇವಸ್ಥಾನದ ಪ್ರಧಾನ ಅರ್ಚಕ ಶೈಲೇಂದ್ರ ಕುಮಾರ್ ಪಾಠಕ್ ವ್ಯಾಸ್ ಅವರು ಪ್ರಕರಣದ ಫಿರ್ಯಾದಿಯಾಗಿದ್ದಾರೆ. ಅವರ ಕುಟುಂಬ ಮತ್ತು ಎಲ್ಲಾ ಸನಾತನಿಗಳು ಸಂತೋಷದ ಕ್ಷಣವಾಗಿತ್ತು. “ನಮ್ಮ ಪೂರ್ವಜರು ಶತಮಾನಗಳಿಂದ ‘ಪೂಜೆ’ ಸಲ್ಲಿಸಿದ ದಕ್ಷಿಣ ನೆಲಮಾಳಿಗೆಯಲ್ಲಿ ಪೂಜೆಯನ್ನು ಅನುಮತಿಸುವ ನ್ಯಾಯಾಲಯದ ಆದೇಶವು ನಮ್ಮ ಕುಟುಂಬಕ್ಕೆ ಮತ್ತು ಎಲ್ಲಾ ಸನಾತನಿಗೆ ಅತ್ಯಂತ ಆಹ್ಲಾದಕರ ಕ್ಷಣವಾಗಿದೆ” ಎಂದು ಶೃಂಗಾರ್ ಗೌರಿ ಮತ್ತು ಇತರ ಗೋಚರ ಮತ್ತು ಅದೃಶ್ಯ ದೇವತೆಗಳ ಆರಾಧನೆಯನ್ನು ಕೋರಿದ ವ್ಯಾಸ ಹೇಳಿದರು. ಅವರು ತಮ್ಮ ತಾಯಿಯ ಅಜ್ಜ ಸೋಮನಾಥ ವ್ಯಾಸರೊಂದಿಗೆ ದಕ್ಷಿಣದ ನೆಲಮಾಳಿಗೆಗೆ ಭೇಟಿ ನೀಡುತ್ತಿದ್ದ ದಿನಗಳನ್ನು ಅವರು ಅಲ್ಲಿ ಧಾರ್ಮಿಕ ವಿಧಿಗಳನ್ನು ನಡೆಸುತ್ತಿದ್ದರು ಎಂದು ನೆನಪಿಸಿಕೊಂಡರು. ದಿವಂಗತ ಸೋಮನಾಥ್ ವ್ಯಾಸ್ ಅವರು ಮೂಲ ದಾವೆ ನಂ. 610/1991 ದೇವಸ್ಥಾನದ ಭೂಮಿಯಿಂದ ಮಸೀದಿಯನ್ನು ತೆಗೆದುಹಾಕಲು ಕೋರಿ. 1880 ರಿಂದ ಅವರ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ಅಡುಗೆಯಲ್ಲಿ ಹುಳು ಪತ್ತೆಯಾಗಿರುವ ಘಟನೆ, ಮಾಸುವ ಮುನ್ನವೇ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಜಾಜೂರಾಯನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಆಹಾರ ಪದಾರ್ಥಗಳಲ್ಲಿ ಹುಳು ಪತ್ತೆಯಾಗಿದ್ದು ಇದರಿಂದ ವಿದ್ಯಾರ್ಥಿಗಳು ತೀವೃ ಆತಂಕಕ್ಕೀಡಾದ ಘಟನೆ ನಡೆದಿದೆ. ತಾಲೂಕು ಕಸಬಾ ಹೋಬಳಿ ವ್ಯಾಪ್ತಿಯ ಜಾಜೂರಾಯನಹಳ್ಳಿ ಗಡಿ ಪ್ರದೇಶದಲ್ಲಿದ್ದು ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 200ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ಬಿಸಿಯೂಟದ ಅಡುಗೆಯ ಹಳೆ ಗೋಧಿ, ಬೇಳೆ ಇತರೆ ಆಹಾರ ಪದಾರ್ಥಗಳಲ್ಲಿ ಪದೇ ಪದೇ ಹುಳುಗಳು ಪತ್ತೆಯಾಗುತ್ತಿದ್ದು, ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ಫೋಷಕರು ಆನೇಕ ಭಾರಿ ಇಲ್ಲಿನ ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಇನ್ನೂ ಘಟನೆಯ ವಿಷಯ ಹೊರಬೀಳುತ್ತಿದ್ದಂತೆ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಂಕರಪ್ಪ ಶಾಲೆಗೆ ಭೇಟಿ ನೀಡಿ ಆಹಾರ ಧಾನ್ಯಗಳನ್ನು ಪರಿಶೀಲನೆ ನಡೆಸಿದ್ದು, ಆಹಾರ ಪದಾರ್ಥಗಳನ್ನು ಸರಿಯಾದ ರೀತಿಯಲ್ಲಿ ಸಂರಕ್ಷಿಸಿ ಅಡುಗೆ ಮಾಡಬೇಕು. ಇದೇ…

Read More

ಈ ಉಪಾಯವನ್ನು ಯಾವುದಾದರೂ ಶ್ರೀರಾಮನ ದೇವಸ್ಥಾನ ಅಥವಾ ಆಂಜನೇಯನ ಆಲಯಕ್ಕೆ ಹೋಗಿ ಮಾಡಬೇಕು. ಕೇವಲ ಎರಡು ವಸ್ತುಗಳು ಇದ್ದರೆ ಸಾಕು. ಮೊದಲಿಗೆ ನೀವು ವೀಳ್ಯದೆಲೆಯನ್ನು ತೆಗೆದುಕೊಳ್ಳಬೇಕು, ಒಂದು ವೇಳೆ ನಿಮ್ಮ ಹತ್ತಿರ ವೀಳ್ಯದೆಲೆ ಇಲ್ಲ ಎಂದರೆ ಅರಳಿ ಎಲೆಯನ್ನು ತೆಗೆದುಕೊಳ್ಳಬಹುದು. ಇದಾದ ನಂತರ ಎಕ್ಕದ ಗಿಡದ ಎಲೆಯನ್ನು ತೆಗೆದುಕೊಳ್ಳಬೇಕು. ಈ ಮೂರು ಎಲೆಗಳಲ್ಲಿ ಯಾವುದಾದರೂ ಎರಡು ಎಲೆಗಳನ್ನು ಮಾತ್ರ ನೀವು ಆಯ್ಕೆ ಮಾಡಿಕೊಳ್ಳಬೇಕು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ವಿದ್ವಾನ್ ವಿದ್ಯಾಧರ್ ತಂತ್ರಿ 9686268564 ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ,…

Read More

ಬೆಳಗಾವಿ : ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಬೆಳಗಾವಿ ತಾಲೂಕಿನ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಘಟನೆಗೆ ಕಾರಣೀಕರ್ತರಾದಂತಹ ಮಹಿಳೆಯ ಮಗ ಹಾಗೂ ಹಲ್ಲೆ ಮಾಡಿದವರ ಮಗಳು ಇಬ್ಬರು ಪ್ರೇಮಿಗಳ ವಿವಾಹವನ್ನು ಇದೀಗ ಪೊಲೀಸರು ನೆರವೇರಿಸಿದ್ದಾರೆ. ಬೆಳಗಾವಿ ನಗರದ ದಕ್ಷಿಣ ಉಪನೋಂದಣಿ ಕಚೇರಿಯಲ್ಲಿ ಮದುವೆ ಮಾಡಿಸಲಾಗಿದೆ. ಡಿ.10ರಂದು ಯುವಕನ ತಾಯಿಯನ್ನು ಯುವತಿಯ ಕಡೆಯವರು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. ಈ ಘಟನೆ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿತ್ತು. ಬಳಿಕ ಬೆಳಗಾವಿ ಜಿಲ್ಲಾ ಪೊಲೀಸರು ಪ್ರೇಮಿಗಳನ್ನು ರಕ್ಷಣೆ ಮಾಡಿದ್ದರು. ಇದೀಗ ಉಪನೋಂದಣಿ ಕಚೇರಿಯಲ್ಲಿ ಕಾನೂನು ಪ್ರಕಾರ ವಿವಾಹ ಮಾಡಿಸಿದ್ದಾರೆ. ದುಂಡಪ್ಪ ಅಶೋಕ ನಾಯಕ್ ಎಂಬ ವಂಟಮೂರಿ ಗ್ರಾಮದ ಯುವಕ, ಪ್ರಿಯಾಂಕಾ ಬಸಪ್ಪ ನಾಯಕ್ ಎಂಬ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವತಿಯ ಪೋಷಕರು ಇವರ ಪ್ರೀತಿಯನ್ನು ತಿರಸ್ಕರಿಸಿ ಯುವತಿಗೆ ಬೇರೊಬ್ಬರ ಜೊತೆ ಯಾದಿ ಮೇ ಶಾದಿ ಮಾಡಲು ನಿರ್ಧರಿಸಿದ್ದರು. ಈ ವಿಚಾರ ತಿಳಿದು ಯುವತಿಯ ನಿಶ್ಚಿತಾರ್ಥದ…

Read More

ಬಳ್ಳಾರಿ : ಇಂದಿರಾ ಕ್ಯಾಂಟೀನ್ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿತ್ತು.ನಂತರ ಬಿಜೆಪಿ ಸರ್ಕಾರ ಬಂದ ಬಳಿಕ ಕ್ಯಾಂಟೀನ್​ ನಿರ್ವಹಣೆ ಕುಂಟುತ್ತಾ ಸಾಗಿತ್ತು. ಆದರೆ, 2023ರಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಇಂದಿರಾ ಕ್ಯಾಂಟೀನ್​ಗಳಿಗೆ ಜೀವ ತುಂಬಲಿದೆ ಎಂಬ ನಿರೀಕ್ಷೆ ಜನರಲ್ಲಿತ್ತು. ಆದರೆ, ಇದೀಗ ಗ್ಯಾರಂಟಿ ಯೋಜನೆಗಳ ಸಲುವಾಗಿ ಅನುದಾನ ಬಿಡುಗಡೆ ಮಾಡದೆ ಇಂದಿರಾ ಕ್ಯಾಂಟೀನ್​ಗಳು ಸೊರಗುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಬಾಕಿ ಇರುವ ಬಿಲ್ ಪಾವತಿ ಮಾಡದ ಕಾರಣ ಬಳ್ಳಾರಿ ಜಿಲ್ಲೆಯಾದ್ಯಂತ 8 ಇಂದಿರಾ ಕ್ಯಾಂಟೀನ್​​ಗಳು ಬಂದ್ ಆಗಿವೆ. ಬಳ್ಳಾರಿ ನಗರದ ಐದು ಇಂದಿರಾ ಕ್ಯಾಂಟೀನ್​ಗಳು ಸೇರಿ ಒಟ್ಟು 8 ಕ್ಯಾಂಟೀನ್​ಗಳು ಕಾರ್ಯಾಚರಣೆ ಸ್ಥಗಿತಗೊಳಿಸಿವೆ. ಸರ್ಕಾರದಿಂದ 3.38 ಕೋಟಿ ರೂಪಾಯಿ ಬಿಲ್ ಬಾಕಿ ಇರುವುದರಿಂದ ನಿರ್ವಹಣೆ ಸಾಧ್ಯವಾಗದೆ ಕ್ಯಾಂಟೀನ್​ಗಳು ಮುಚ್ಚಿವೆ. ಖಾಸಗಿ ಏಜೆನ್ಸಿ ಮೂಲಕ ಇಂದಿರಾ ಕ್ಯಾಂಟೀನ್​ಗಳನ್ನು ನಡೆಸಲಾಗುತ್ತಿದೆ. ಇದೀಗ, ಬಿಲ್ ಬಿಡುಗಡೆಯಾಗದ ಕಾರಣ ಕ್ಯಾಂಟೀನ್ ನಡೆಸುವುದು ಕಷ್ಟ ಎಂದು ಖಾಸಗಿ ಏಜೆನ್ಸಿಗಳು ಅವುಗಳನ್ನು…

Read More

ರಾಯಚೂರು : ಇತ್ತೀಚಿಗೆ ಕಲಬುರ್ಗಿಯಲ್ಲಿ ಕೋಟ್ನೂರ್ ರಸ್ತೆಯಲ್ಲಿರುವ ಅಂಬೇಡ್ಕರ್ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾಕಿರುವ ಘಟನೆ ಮಾಸ ಮುನ್ನವೇ, ಟಿಪ್ಪು ಸುಲ್ತಾನ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ್ದು ಈ ಘಟನೆ ಇದೀಗ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಉದ್ವಿಗ್ನಗೊಳ್ಳುವಂತೆ ಮಾಡಿದೆ. ಕೆಲ ಕಿಡಿಗೇಡಿಗಳು ಬುಧವಾರ ಬೆಳ್ಳಂಬೆಳಗ್ಗೆ ಟಿಪ್ಪು ಸುಲ್ತಾನ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ ಘಟನೆ ಬೆಳಗ್ಗೆ ಜನರಿಗೆ ತಿಳಿಯುತ್ತಿದ್ದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಘಟನೆಯನ್ನು ಖಂಡಿಸಿ ಟಿಪ್ಪು ವೃತ್ತದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದರು. ವಿಧ್ವಂಸಕ ಕೃತ್ಯದ ಹಿಂದಿರುವವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನಾ ಸ್ಥಳದಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ದುಷ್ಕರ್ಮಿಗಳ ಸುಳಿವು ಪಡೆಯಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

Read More

ಬೆಂಗಳೂರು : ಕಳೆದ ಕೆಲ ದಿನಗಳ ಹಿಂದೆ ಆರ್‌ಪಿಸಿ ಲೇಔಟ್‌ನ ಹೋಟೆಲ್‌ನಲ್ಲಿ ಯುವಕನೊಬ್ಬ ಯುವತಿ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ ಕಿಡಿಗೇಡಿ ಕೈಗೆ ಕೊನೆಗೂ ಪೊಲೀಸರು ಕೋಳ ತೊಡಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಅಟ್ಟಿದ್ದಾರೆ. ಸುಂಕದಕಟ್ಟೆಯ ವಿಘ್ನೇಶ್ವರನಗರದ ನಿವಾಸಿ ಚಂದನ್ ಬಂಧಿತನಾಗಿದ್ದು, ಆರ್‌ಪಿಸಿ ಲೇಔಟ್‌ ಹೋಟೆಲ್‌ಗೆ ತನ್ನ ಸ್ನೇಹಿತರ ಜತೆ ಬಂದಾಗ ಆತ ಈ ಕೃತ್ಯ ಎಸಗಿದ್ದ. ಈ ಬಗ್ಗೆ ಹೋಟೆಲ್ ವ್ಯವಸ್ಥಾಪಕಿ ನೀಡಿದ ದೂರಿನ ಮೇರೆಗೆ ತನಿಖೆ ಕೈಗೆತ್ತಿಕೊಂಡ ವಿಜಯನಗರ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಗ್ಯಾಸ್ ಡೆಲಿವರಿ ಬಾಯ್ ಆಗಿದ್ದ ಚಂದನ್, ಡಿ.30 ರಂದು ರಾತ್ರಿ 7.30ರಲ್ಲಿ ತನ್ನ ಸ್ನೇಹಿತರ ಜತೆಗೆ ಆರ್‌ಪಿಸಿ ಲೇಔಟ್‌ನಲ್ಲಿರುವ ಹೋಟೆಲ್‌ಗೆ ತಿಂಡಿ ತಿನ್ನಲು ಬಂದಿದ್ದ. ಆ ವೇಳೆ ಹೋಟೆಲ್ ಕ್ಯಾಶ್ ಕೌಂಟರ್‌ನಲ್ಲಿ ನಿಂತಿದ್ದ ಯುವತಿಗೆ ಈ ಸ್ನೇಹಿತರ ಕಣ್ಣಿಗೆ ಬಿದ್ದಿದ್ದಳು. ಆ ಯುವತಿ ಮೈ ಮುಟ್ಟು ನೋಡೋಣ ಎಂದು ಚಂದನ್‌ಗೆ…

Read More

ಹಾಸನ : ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಂದ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರ ಹಳ್ಳಿ ಕೂಡಿಗೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಅಪಘಾತ ಸಂಭವಿಸಿದೆ. ಈಶ್ವರ ಹಳ್ಳಿ ಕೂಡಿಗೆ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ತೆರಳುತ್ತಿದ್ದ ಪ್ರದೀಪ್ (30) ಗುರು (25) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರಿನಲ್ಲಿದ್ದ ಮತ್ತಿಬರಿಗೆ ಗಂಭೀರವಾದಂತ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟಿಯ ಹೆದ್ದಾರಿ ರಸ್ತೆಯ ಬದಿಯಲ್ಲಿ ಟೆಂಬರ್ ತುಂಬಿರುವಂತಹ ಲಾರಿ ಕೆಟ್ಟು ನಿಂತಿದ್ದು, ಈ ವೇಳೆ ದಟ್ಟವಾದ ಮಂಜು ಆವರಿಸಿದ್ದರಿಂದ, ಕೆಟ್ಟು ನಿಂತಿದ್ದ ಲಾರಿ ಕಾಣಿಸಿಲ್ಲ ಆದ್ದರಿಂದ ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದಿದೆ ನಂತರ ಕಾರು ಹೆದ್ದಾರಿಯಲ್ಲೇ ಉರುಳಿ ಬಿದ್ದಿದೆ. ಘಟನೆ ಕುರಿತಂತೆ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ನಮ್ಮ ಮೆಟ್ರೊದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವುದು ಅಥವಾ ನಿಯಮ ಉಲ್ಲಂಘನೆ ಮಾಡಿದರೆ 10 ಸಾವಿರ ರೂ. ದಂಡ ಪಾವತಿಸಬೇಕು. ಜತೆಗೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಲಿದೆ. ಮೆಟ್ರೊದಲ್ಲಿ ಮಿತಿಮೀರುತ್ತಿರುವ ಅಸಭ್ಯ ವರ್ತನೆಗೆ ಕಡಿವಾಣ ಹಾಕಲು ಬಿಎಂಆರ್‌ಸಿಎಲ್ ಮುಂದಾಗಿದೆ. ಕೇಂದ್ರ ಸರಕಾರದ ಸೂಚನೆ ಮೇರೆಗೆ ಬಿಎಂಆರ್ ಸಿಎಲ್ ಹೊರಡಿಸಿದೆ. ಮೊದಲು ರೂ. ದಂಡ ವಿಧಿಸಲಾಗುತ್ತಿತ್ತು. ಇದೀಗ ದಂಡದ ಮೊತ್ತವನ್ನು 10 ಸಾವಿರ ರೂ.ಗಳಿಗೆ ದಂಡದ ದಂಡ ಪರಿಷ್ಕರಣೆ ಮಾಡಿ ಆದೇಶ ಮೊತ್ತ ಅನುಚಿತ ವರ್ತನೆ ತೋರಿದಲ್ಲಿ ಪರಿಷ್ಕರಣೆ ಮೆಟ್ರೊ ಕಾಯಿದೆ ಪ್ರಕಾರ 500 ಹೆಚ್ಚಿಸಲಾಗಿದೆ. ಇತ್ತೀಚೆಗೆ ನಮ್ಮ ಮೆಟ್ರೊದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ನಡೆಯುತ್ತಿರುವ ಬಗ್ಗೆ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಕೆಲ ದಿನಗಳ ಹಿಂದಷ್ಟೇ ಮೆಟ್ರೊ ಪ್ರಯಾಣದ ವೇಳೆ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಅಸಭ್ಯ ವರ್ತನೆ ತೋರಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಪದೇಪದ ಈ ರೀತಿಯ ವರ್ತನೆಗಳು ಮರುಕಳಿಸಿದ್ದರಿಂದ ಮಹಿಳಾ ಪ್ರಯಾಣಿಕರು ಬೇಸತ್ತು ಹೋಗಿದ್ದರು. ಹೀಗಾಗಿ,…

Read More