Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಳಗಾವಿಯಲ್ಲಿ ಅಧಿವೇಶನದ ಕೊನೆಯ ದಿನದಂದು ನಡೆದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಎಂಎಲ್ಸಿ ಸಿಟಿ ರವಿಯವರನ್ನು ಅರೆಸ್ಟ್ ಮಾಡಲಾಗಿತ್ತು. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿಯು ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಿತ್ತು. ಇದಕ್ಕೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಬೆಳಗಾವಿ ಜಿಲ್ಲೆಗೆ ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಬೆಳಗಾವಿ ಚಲೋಗೆ ಅನುಮತಿ ಇಲ್ಲ. ನಾವು ಕಾನೂನು ಸುವ್ಯವಸ್ಥೆ ಸರಿ ಮಾಡುತ್ತೇವೆ ಬಿಜೆಪಿ ಚೊಲೋಗೆ ಪರ್ಮಿಷನ್ ಕೊಡಲ್ಲ ಎಂದಿದ್ದೇವೆ ಅದಕ್ಕೂ ಮೀರಿ ಏನಾದರೂ ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಗೃಹ ಸಚಿವರು ಇಲ್ವಾ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು ಪೊಲೀಸರಿಗೆ ಅವರದ್ದೇ ಆಗಿರುವಂತಹ ನಿಯಮಗಳಿವೆ. ಉನ್ನತ ಅಧಿಕಾರಿಗಳು ಇರುತ್ತಾರೆ ಅವರೇ ತೀರ್ಮಾನ ಮಾಡುತ್ತಾರೆ. ಎಲ್ಲವನ್ನು ನಮ್ಮನ್ನೇ ಕೇಳಬೇಕಿಲ್ಲ.…
ಬೆಳಗಾವಿ : ಮೇವು ಹಾಕಲು ತೆರಳಿದ್ದ ವೇಳೆ ಮಾವುತನನ್ನೇ ತುಳಿದು ದೇವಸ್ಥಾನದ ಆನೆಯೊಂದು ಭೀಕರವಾಗಿ ಕೊಂದಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಖನೂರ್ ಗ್ರಾಮದ ಕರಿ ಸಿದ್ದೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಖನುರನಲ್ಲಿ ಕರಿಸಿದ್ದೇಶ್ವರ ದೇವಸ್ಥಾನದಲ್ಲಿ ಆನೆಯ ದಾಳಿಗೆ ಅಲಕನೂರು ಗ್ರಾಮದ ಧರೆಪ್ಪ ಬೇವನೂರು (32) ಮೃತಪಟ್ಟ ಮಾವುತ ಎಂದು ತಿಳಿದು ಬಂದಿದೆ. ಬೆಳಿಗ್ಗೆ ಮೇವು ಹಾಕಲು ತೆರಳಿದಾಗ ಮಾವುತನ ಮೇಲೆ ಆನೆ ದಾಳಿ ಮಾಡಿದೆ. ಮಾವುತ ಧರೆಪ್ಪನನ್ನು ತುಳಿದು 21 ವರ್ಷದ ಆನೆ ಧ್ರುವ ಕೊಂದಿದೆ . ಕಳೆದ 10 ದಿನದ ಹಿಂದೆ ಅಷ್ಟೆ ಧರೆಪ್ಪ ಗಂಡು ಮಗುವಿನ ತಂದೆಯಾಗಿದ್ದ. ಘಟನಾ ಸ್ಥಳಕ್ಕೆ ಹಾರೂಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸುತ್ತಿದ್ದಾರೆ.
ಮೈಸೂರು: ಬೆಳಗಾವಿ ಅಧಿವೇಶನದ ಕೊನೆಯ ದಿನದಂದು ಸುವರ್ಣ ಸೌಧದಲ್ಲಿ ದೊಡ್ಡ ಹೈಡ್ರಾಮಾವೇ ನಡೆದುಹೋಗಿದೆ.ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆಗೆ ಕಾಂಗ್ರೆಸ್ ಸದಸ್ಯರು ಅಂಬೇಡ್ಕರ್ ಅವರ ಫೋಟೋ ಹಿಡಿದುಕೊಂಡು ಪ್ರ ತಿಭಟಿಸುತ್ತಿದ್ದರೆ, ಅತ್ತ ಇನ್ನೊಂದು ಕಡೆ ಬಿಜೆಪಿಯವರು ಕೂಡ ಪ್ರತಿಭಟನೆ ಮಾಡುತ್ತಿದ್ದರು. ಈ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಿಟಿ ರವಿ ಅವರು ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾರೆ ಈ ವಿಚಾರವಾಗಿ ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಅವರು ಹೌದು ಸಿಟಿ ರವಿ ಆ ಪದ ಬಳಸಿದ್ದು ನಿಜ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ಬಳಸಿದ್ದ ‘ಪ್ರಾಸ್ಟಿಟ್ಯೂಟ್’ ಪದಕ್ಕೆ ನಾನೇ ಸಾಕ್ಷಿ ಈಗ ಸಿಂಪತಿ ಗಿಟ್ಟಿಸಿಕೊಳ್ಳಲು ಸಿಟಿ ರವಿ ಅವರು ಡ್ರಾಮಾ ಮಾಡುತ್ತಿದ್ದಾರೆ. ಕೊಲೆ ಮಾಡುವ ಪ್ರಯತ್ನ ನಡೆದಿತ್ತು ಎಂದು ಸಿಟಿ ರವಿ ಅವರು ನಾಟಕ ಮಾಡುತ್ತಿದ್ದಾರೆ ಈ ವಿಚಾರದಲ್ಲಿ ಬಿಜೆಪಿ ನೀಡುತ್ತಿರುವ ಹೇಳಿಕೆಗಳು ಬರೀ ನಾಟಕ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ಎಂಎಲ್ಸಿ…
ಬೆಂಗಳೂರು : ಬೆಂಗಳೂರಿನಲ್ಲಿ ವಿಶ್ವವಿದ್ಯಾಲಯದ ನಿವೃತ್ತ ರಿಜಿಸ್ಟರ್ ಒಬ್ಬರ ಜೊತೆಗೆ ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಮನನೊಂದು, ಲಾರಿ ಮಾಲೀಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ. ಹೌದು ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ತಡರಾತ್ರಿ 11 ಗಂಟೆಯ ಸುಮಾರಿಗೆ ಲಾರಿ ಮಾಲಿಕ ಸ್ವಾಮಿ (45) ಎನ್ನುವರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಠಾಣೆ ಪೋಲಿಸರು ಭೇಟಿ ನೀಡಿ ಇದೀಗ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಸ್ವಾಮಿ ಪತ್ನಿಯು ಬೆಂಗಳೂರಿನ ವಿವಿಯ ನಿವೃತ್ತ ರಿಜಿಸ್ಟರ್ ಜೊತೆಗೆ ಅಕ್ರಮ ಸಂಬಂಧ ಆರೋಪ ಕೇಳಿಬರುತ್ತಿದೆ. ಬೆಂಗಳೂರಿನ ವಿಶ್ವವಿದ್ಯಾಲಯ ನಿವೃತ್ತ ರೆಜಿಸ್ಟರ್ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಅಕ್ರಮ ಸಂಪರ್ಕದ ಬಳಿಕ ಸಂಸಾರ ಹಾಳಾಗಿದೆ. ನಿವೃತ್ತ ರಿಜಿಸ್ಟರ್ ಪತ್ನಿಗೂ ಕೂಡ ಈ ವಿಷಯ ಗೊತ್ತಾಗಿ ಬುದ್ಧಿ…
ಹುಬ್ಬಳ್ಳಿ : ಹುಬ್ಬಳ್ಳಿ ನಗರದ ನಿವೃತ್ತ ವೈದ್ಯಕೀಯ ದಾಖಲೆ ಅಧಿಕಾರಿಯೊಬ್ಬರಿಗೆ, ವಂಚಕನೊಬ್ಬ CBI ಸೋಗಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡುವುದಾಗಿ ಬೆದರಿಕೆ ಒಡ್ಡಿ ಅವರಿಂದ ಕೋಟ್ಯಾಂತರ ರೂ. ಹಣವನ್ನು ಪೀಕಿರುವ ಘಟನೆ ಹುಬ್ಬಳ್ಳಿ ನಗರದ ಕೇಶ್ವಪುರದಲ್ಲಿ ನಡೆದಿದೆ. ಕೇಶ್ವಾಪುರ ವಿನಯ ಕಾಲೋನಿಯ ಮೋಹನರಾಜ್ ಕೋರಿಶೆಟ್ಟಿ ಎಂಬುವರೆ ಮೋಸಗೊಂಡವರು. ಇವರಿಗೆ ಡಿ.3ರಂದು ಅಪರಿಚಿತನು ವಾಟ್ಸ್ಆ್ಯಪ್ ವಿಡಿಯೋ ಕರೆ ಮಾಡಿ ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡು, ನಿಮ್ಮ ಬ್ಯಾಂಕ್ ಖಾತೆಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಿವೆ. ಮುಂಬೈ ಕೋರ್ಟ್ನಲ್ಲಿ PMLA ಕೇಸ್ ಆಗಿದೆ. ಬಂಧನ ವಾರಂಟ್ ಜಾರಿ ಮಾಡಲಾಗಿದೆ. ನಿಮ್ಮನ್ನು ಎಲ್ಲಿ ಯಾವಾಗ ಬೇಕಾದರೂ ಬಂಧಿಸಬಹುದು ಎಂದು ಭಯಪಡಿಸಿದ್ದಾರೆ. ಅಲ್ಲದೆ, ಬಂಧನ ವಾರಂಟ್ ತಡೆಹಿಡಿಯಲು, ಕೇಸ್ ತನಿಖೆಗೊಳಪಡಿಸಲು ಹೇಳಿದ ಖಾತೆಗಳಿಗೆ ಹಣ ವರ್ಗಾಯಿಸಬೇಕು. ಈ ಬಗ್ಗೆ ಯಾರೊಂದಿಗೂ ಚರ್ಚಿಸಬಾರದು. ಸದಾ ವಿಡಿಯೋ ಕರೆಯಲ್ಲೇ ಇರಬೇಕು. ಕಡಿತ ಮಾಡಬಾರರು. ಗಂಟೆಗೊಮ್ಮೆ ನಿಮ್ಮ ಎಲ್ಲ ಚಟುವಟಿಕೆಗಳ ವರದಿ ನೀಡುತ್ತಿರಬೇಕು ಎಂದು ಹೇಳಿ ಡಿ.6 ರಿಂದ 12ರವರೆಗೆ ಹಂತ…
ಮೈಸೂರು : ಮೈಸೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಮನೆಯಲ್ಲಿ ತಡರಾತ್ರಿ ವಿದ್ಯುತ್ ಅವಘಡ ಸಂಭವಿಸಿದ್ದರಿಂದ, ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಅದೃಷ್ಟವಶಾತ್ ಆತನ ಪತ್ನಿ ಹಾಗೂ ತಾಯಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ನಡೆದಿದೆ. ಹೌದು ಈ ಒಂದು ವಿದ್ಯುತ್ ಅವಘಡದಲ್ಲಿ ಲೋಕೇಶ್ (33) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದರೆ. ತಡರಾತ್ರಿ ಲೋಕೇಶ್ ಪತ್ನಿ ಹಾಗೂ ತಾಯಿಗೆ ವಿದ್ಯುತ್ ತಗುಲಿದೆ. ಈ ಸಂದರ್ಭದಲ್ಲಿ ತಾಯಿ ಹಾಗೂ ಪತ್ನಿಯನ್ನು ರಕ್ಷಿಸಲು ಲೋಕೇಶ್ ಮುಂದಾಗಿದ್ದಾರೆ.ಈ ವೇಳೆ ವಿದ್ಯುತ್ ಶಾಕ್ ನಿಂದ ಲೋಕೇಶ್ ಮೃತಪಟ್ಟಿದ್ದಾರೆ. ಲೋಕೇಶ್ ಪತ್ನಿ ಕಾವ್ಯ ಹಾಗೂ ತಾಯಿ ನಾಗಮ್ಮಗೆ ಗಂಭೀರವಾಗಿ ಗಾಯವಾಗಿದ್ದು, ತಕ್ಷಣ ಅವರನ್ನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಚೆಸ್ಕಾಂ ಹಾಗೂ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ. ಸಾವಾಗಿದ್ದು ಇದರ ಬೆನ್ನಲ್ಲೇ, ಇದೀಗ ಮತ್ತೊಂದು ಬಾಣಂತಿಯ ಸಾವಾಗಿದೆ. ಇಂದು ಬೆಳಿಗ್ಗೆ ತಾನೇ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಅನುಷಾ ಮೃತಪಟ್ಟಿದ್ದಾರೆ. ಆದರೆ ಇದೀಗ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯು ಸಾವನ್ನಪ್ಪಿದ್ದಾಳೆ. ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೌದು ಬೆಂಗಳೂರಿನಲ್ಲಿ ಇದೀಗ ಮತ್ತೊರ್ವ ಬಾಣಂತಿ ಸಾವಾಗಿದೆ.ಕೆ ಸಿ ಜನರಲ್ ಆಸ್ಪತ್ರೆಯ ವೈದ್ಯರ ವಿರುದ್ಧ ಇದೀಗ ನಿರ್ಲಕ್ಷ ಆರೋಪ ಕೇಳಿ ಬಂದಿದೆ. ವೈದ್ಯರ ನಿರ್ಲಕ್ಷವೇ ಬಾಣಂತಿಯ ಸಾವಿಗೆ ಕಾರಣ ಎಂದು ಗಂಭೀರವಾದ ಆರೋಪ ಮಾಡುತ್ತಿದ್ದಾರೆ. ನಿನ್ನೆ ಕೇಸಿ ಜನರಲ್ ಆಸ್ಪತ್ರೆಗೆ ವಿನೂತಿ (32) ದಾಖಲಾಗಿದ್ದರು. ನಿನ್ನೆ ಸಂಜೆ ಮಗುವಿಗೆ ವಿನುತಿ ಜನ್ಮ ನೀಡಿದ್ದಾಳೆ.ಬಳಿಕ ವಾಣಿ ವಿಲಾಸ್ ಆಸ್ಪತ್ರೆಗೆ ವಿನುತಿಯನ್ನು ದಾಖಲಿಸಲಾಗಿತ್ತು. ಇಂದು ವಾಣಿವಿಲಾಸ ಆಸ್ಪತ್ರೆಯಲ್ಲಿ ವಿನಂತಿ ಸಾವನ್ನಪ್ಪಿದ್ದಾಳೆ. ಇದಕ್ಕೂ ಮುನ್ನ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಅನುಷಾ…
ಬಾಗಲಕೋಟೆ : ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ್ ಅವರ ಕ್ಷೇತ್ರದಲ್ಲಿ ಇದೀಗ ಅಕ್ರಮ ಮದ್ಯ ಮಾರಾಟವನ್ನು ಪ್ರಶ್ನಿಸಿದ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹೌದು ಅಕ್ರಮ ಮದ್ಯ ಮಾರಾಟವನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಕಟ್ಟಿಗೆಯಿಂದ ಹಲ್ಲೆ ಮಾಡಿದ್ದು ಅಲ್ಲದೆ, ವ್ಯಕ್ತಿಗೆ ಕರೆಂಟ್ ಶಾಕ್ ನೀಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಗ್ರಾಮದಲ್ಲಿ ನಡೆದಿದೆ. ಹೌದು ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದಕ್ಕೆ ಭೀಕರ ಕೊಲೆಯಾಗಿದ್ದು, ಈ ಒಂದು ಕೊಲೆ ಪ್ರಕರಣದಲ್ಲಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯ ಪೊಲೀಸರು, ಹನುಮಂತ ನೀಲರ್, ಪತ್ನಿ ಶೈಲ ನೀಲರ್, ಪರ್ವತಗೌಡ ಮುದಿಗೌಡ್ರ, ಪುಟ್ಟಪ್ಪ ಮುದಿಗೌಡ್ರ ಹಾಗೂ ಸಿದ್ದಪ್ಪ ನೀಲಗೌಡ್ರ ಎಂಬ ಆರೋಪಿಗಳನ್ನ ಕೆರೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರೆಡ್ಡಿರತಿಮ್ಮಾಪುರದಲ್ಲಿ ವೆಂಕರೆಡ್ಡಿ ಶೇಷಪ್ಪನವರ ಮೇಲೆ ಹಲ್ಲೆ ಮಾಡಿದ್ದರು ವೆಂಕರೆಡ್ಡಿ (40) ಮೇಲೆ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದು ಅಲ್ಲದೇ, ಕರೆಂಟ್…
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ತಾಯೊಬ್ಬಳು ತನ್ನ ಮಗುವನ್ನು ಶಾಲಾ ಬಸ್ ಹತ್ತಿಸುವ ಸಂದರ್ಭದಲ್ಲಿ ವಿದ್ಯುತ್ ತಂತಿ ತುಳಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿ ನಗರದ ಮೋಹನ್ ಲಾಡ್ಜ್ ಎದುರುಗಡೆ ನಡೆದಿದೆ. ಹೌದು ಶಾಲಾ ಬಸ್ ಹತ್ತಿಸುತ್ತಿರುವಾಗಲೇ ತಾಯಿ ವಿದ್ಯುತ್ ತಂತಿ ತುಳಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಿದ್ಯುತ್ ಶಾಕ್ ನಿಂದ ಗಂಭೀರವಾಗಿ ಭಾಗ್ಯಶ್ರೀ ಗಾಯಗೊಂಡಿದ್ದಾರೆ. ಸ್ವಲ್ಪ ಹೆಚ್ಚು ಕಮ್ಮಿ ಆಗಿದ್ದರೂ ಕೂಡ ಘೋರ ದುರಂತ ಒಂದು ನಡೆದು ಹೋಗುತ್ತಿತ್ತು. ಅಕಸ್ಮಾತ್ ಬಸ್ ಗೆ ವಿದ್ಯುತ್ ತಾಗಿದ್ದರೆ, ಭಾರಿ ಅನಾಹುತ ನಡೆಯುತ್ತಿತ್ತು. ಶಾಲಾ ಬಸ್ ನಲ್ಲಿ ಹತ್ತಾರು ಬುದ್ಧಿಮಾಂದ್ಯ ಮಕ್ಕಳು ಇದ್ದರು. ತನ್ನ ಮಗುವನ್ನು ಶಾಲಾ ಬಸ್ ಗೆ ಹತ್ತಿಸಲು ಭಾಗ್ಯಶ್ರೀ ಬಂದಿದ್ದಾರೆ. ಮಗುವನ್ನು ಶಾಲೆಗೆ ಬಿಡಲು ಬಂದಿದ್ದ ತಾಯಿ ಭಾಗ್ಯಶ್ರೀ ವಿದ್ಯುತ್ ತಂತಿ ತುಳಿದಿದ್ದಾಳೆ. ಕೂಡಲೇ ಭಾಗ್ಯಶ್ರೀ ಮಗುವನ್ನು ಎತ್ತಿ ಪಕ್ಕಕ್ಕೆ ಎಸೆದಿದ್ದು ತಾನು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಕೂಡಲೇ ಸ್ಥಳೀಯರು ಬಡಿಗೆಯಿಂದ…
ಕಲಬುರ್ಗಿ : ಕಲ್ಯಾಣ ಕರ್ನಾಟಕ ಭಾಗದ ಕೇಂದ್ರವಾದ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯನ್ನು ಇಂದು ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ರಹೀಂ ಖಾನ್, ಶರಣಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ ಮತ್ತು ಶಾಸಕರು ಸಾಥ್ ನೀಡಿದರು. ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಕಲಬುರಗಿಯಲ್ಲಿ ರೂ.377 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಆಸ್ಪತ್ರೆಯನ್ನು ನಾಳೆ ಉದ್ಘಾಟಿಸುತ್ತಿದ್ದೇನೆ. ಹೈದರಾಬಾದ್ – ಕರ್ನಾಟಕ ವಿಶೇಷ ಪ್ರಾತಿನಿಧ್ಯ 371J ದೊರೆತು ದಶಕ ಪೂರೈಸಿದ ನೆನಪಿಗಾಗಿ 7 ಐಸಿಯು ಕೊಠಡಿ, 4 ಜನರಲ್ ವಾರ್ಡ್, 13 ಸೆಮಿ ಸ್ಪೆಷಲ್ ವಾರ್ಡ್ಗಳನ್ನು ಒಳಗೊಂಡ 371 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ.ಇದು ರಾಜ್ಯದ ಮೂರನೇ ಸರ್ಕಾರಿ ಹೃದ್ರೋಗ ಆಸ್ಪತ್ರೆಯಾಗಿ…














