Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಂತ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 20 ಮಂದಿ ಇಡಿ ಅಧಿಕಾರಿಗಳಿಂದ ಮುಡಾ ಕಚೇರಿಯ ಮೇಲೆ ದಾಳಿ ನಡೆದಿದೆ.ಈ ವೇಳೆ ಹಲವು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಮೊದಲು ಲೋಕಾಯುಕ್ತಕ್ಕೆ ದೂರ ನೀಡಿದ್ದರು. ಬಳಿಕ ಅವರು ನನಗೆ ಲೋಕಾಯುಕ್ತ ಅಧಿಕಾರಿಗಳ ಮೇಲೆ ನಂಬಿಕೆ ಇಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದರು. ಈ ಒಂದು ದೂರು ಹಿನ್ನೆಲೆಯಲ್ಲಿ ಇಂದು ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುಡಾದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಕ್ರಮ ನಿವೇಶನ ಹಂಚಿಕೆ ಆರೋಪದ ಅಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಅಲ್ಲದೆ 50:50 ಅನುಪಾತದಲ್ಲಿ ಬದಲಿ ನಿವೇಶನ ಪಡೆದುಕೊಳ್ಳುವ ಅದರಬದಲ್ಲಿ 5000 ಕೋಟಿಗೂ…
ರಾಮನಗರ : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅಲ್ಲದೆ ಅದರಲ್ಲೂ ಪ್ರಮುಖವಾಗಿ ಚೆನ್ನಪಟ್ಟಣ ಕ್ಷೇತ್ರ ಅತ್ಯಂತ ಪ್ರಾಮುಖ್ಯತೆ ಪಡೆದುಕೊಂಡಿದ್ದು ಈ ಒಂದು ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡುವೆ ತೀವ್ರ ಹಗ್ಗ ಜಗ್ಗಾಟ ನಡೆದಿತ್ತು. ಇದೇ ವಿಚಾರವಾಗಿ ಇದೀಗ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆಯ ಅಭ್ಯರ್ಥಿ ಆಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಹೀಗಾಗಿ ಬಿಜೆಪಿಯ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಅವರನ್ನು ಒಲಿಸಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾತುಕತೆ ನಡೆಸಲಿದ್ದಾರೆ. ಇನ್ನೊಂದು ಕಡೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಪುತ್ರ ನಿಗೆ ಟಿಕೆಟ್ ಕೊಡಿಸುವ ವಿಚಾರವಾಗಿ ಬಿಎಸ್ ಯಡಿಯೂರಪ್ಪ ಅವರ ಜೊತೆ ಚರ್ಚಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ನಲ್ಲೇ…
ನವದೆಹಲಿ : ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕರ್ನಾಟಕ ಹೈ ಕೋರ್ಟ್ ನೀಡಿದಂತಹ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಲು ನಿರಾಕರಿಸಿದೆ. ಹೌದು ಲೈಂಗಿಕ ದೌರ್ಜನಕ್ಕೆ ಒಳಗಾದ ಮಹಿಳೆಯನ್ನು ಕಿಡ್ಯಾಪ್ ಮಾಡಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ ನಿರೀಕ್ಷಣಾ ಜಾಮೀನು ಆದೇಶವನ್ನು ಪ್ರಶ್ನಿಸಿ ಎಸ್ಐಟಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಲ್ಲಿ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು ಜಾಮೀನು ರದ್ದು ಮಾಡಲು ನಿರಾಕರಿಸಿದೆ. ಆ ಮೂಲಕ ಭವಾನಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ. ಎಸ್ಐಟಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ರಾಜಕೀಯ ಕುಟುಂಬ ಕಾರಣಕ್ಕೆ ಜಾಮೀನು ನಿರಾಕರಣೆ ಸಾಧ್ಯವಿಲ್ಲ.ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ…
ದಾವಣಗೆರೆ : ಭಾರಿ ಮಳೆಗೆ ಮನೆ ಗೋಡೆ ಒಂದು ಕುಸಿತಗೊಂಡು ನಾಲ್ಕು ವರ್ಷದ ಬಾಲಕಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ. ಮಳೆಯಿಂದ ಮನೆ ಗೋಡೆ ಕುಸಿದು 4 ವರ್ಷದ ಬಾಲಕಿಗೆ ಗಂಭೀರವಾದ ಗಾಯಗಳಾಗಿದೆ. ದಾವಣಗೆರೆಯಲ್ಲಿ ಈ ಒಂದು ಘಟನೆ ನಡೆದಿದೆ. ಸದ್ಯ ಬಾಲಕಿಯನ್ನು ಬಾಪೂಜಿ ಮಕ್ಕಳ ಆಸ್ಪತ್ರೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಸ್ಪತ್ರೆಯಿಂದ ಬಾಪೂಜೆ ಮಕ್ಕಳ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ನೆನ್ನೆ ಹರಿಹರದ ಜೈಭೀಮ ನಗರದಲ್ಲಿ ಮನೆ ಗೆ ಗೋಡೆ ಕುಸಿತವಾಗಿತ್ತು.ಮನೆಗೂಡೆ ಕುಸಿತಗೊಂಡು ನಾಲ್ಕು ವರ್ಷದ ಬಾಯಕೆಗೆ ಗಾಯವಾಗಿದೆ.
ಬೆಳಗಾವಿ : ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ವರ್ಣಾರ್ಭಟಕ್ಕೆ ಇಡೀ ಬೆಂಗಳೂರಿನ ಜನತೆ ತತ್ತರಿಸಿ ಹೋಗಿದ್ದರು. ಬೆಂಗಳೂರಿನ ಹಲವು ರಸ್ತೆಗಳಂತೂ ನೀರು ತುಂಬಿ ಸಂಪೂರ್ಣವಾಗಿ ಕೆರೆಗಳಂತಾಗಿದ್ದವು. ಇದೀಗ ಇದೆ ಪರಿಸ್ಥಿತಿ ಬೆಳಗಾವಿಯಲ್ಲೂ ಕೂಡ ನಿರ್ಮಾಣವಾಗಿದೆ. ಹೌದು ಬೆಳಗಾವಿ ಜಿಲ್ಲೆಯಲ್ಲಿ ಕೂಡ ಭಾರಿ ಮಳೆಯಾಗುತ್ತಿದ್ದೂ, ಹುಕ್ಕೇರಿ ತಾಲೂಕಿನ ಬುಗಟಿ ಆಲೂರು, ಮತ್ತೆವಾಡಿ ಹಾಗೂ ಸಂಕೇಶ್ವರ ಪಟ್ಟಣದಲ್ಲೂ ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಸಂಕೇಶ್ವರ ಪಟ್ಟಣದ ತಗ್ಗು ಪ್ರದೇಶದಲ್ಲಿ ಇರುವಂತಹ ಅಂಗಡಿ ಹಾಗೂ ಮನೆಗಳಿಗೆ ನೀರು ನುಗ್ಗಿದೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಸೈಟ್ಗಳನ್ನು ವಾಪಸ್ ಕೊಟ್ಟ ಮಾತ್ರಕ್ಕೆ ಮುಗಿಯುವುದಿಲ್ಲ. ಮುಡಾ ಎಲ್ಲಾ ಸೈಟ್ಗಳನ್ನು ವಾಪಸ್ ಪಡೆಯಬೇಕು ಎಂದು ಕಾಂಗ್ರೆಸ್ಸಿಗರು ಒತ್ತಾಯಿಸುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರು ಕೂಡ ಬೇನಾಮಿ ಹೆಸರಿನಲ್ಲಿ ಸೈಟ್ ಪಡೆದಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಹೌದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ಸಂಬಂಧ ತೀವ್ರ ಮುಜುಗರಕ್ಕೊಳಗಾಗಿರುವ ಕಾಂಗ್ರೆಸ್ ಇದೀಗ ಅದೇ ಅಸ್ತ್ರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳ ನಾಯಕರಿಗೂ ಬಿಸಿ ಮುಟ್ಟಿಸಲು ಮುಂದಾಗಿದೆ. ಮುಡಾದಿಂದ ಹಂಚಿಕೆಯಾಗಿರುವ 14 ಸೈಟ್ಗಳನ್ನು ಸಿಎಂ ಸಿದ್ದರಾಮಯ್ಯ ಪತ್ನಿ ಪಾವರ್ತಿ ವಾಪಸ್ ನೀಡಿರುವ ಬೆನ್ನಲ್ಲೇ, 50:50 ಅನುಪಾತದಲ್ಲಿ ಮುಡಾ ನೀಡಿದ ಎಲ್ಲಾ ನಿವೇಶನಗಳ ವಾಪಸಾಗಿಗೆ ಕಾಂಗ್ರೆಸ್ ನಾಯಕರು ಪಟ್ಟುಹಿಡಿದಿದ್ದಾರೆ. ವಿಪಕ್ಷಗಳ ತಂತ್ರಕ್ಕೆ ಸಿಎಂ ರಣತಂತ್ರ ಮುಡಾ ಹಗರಣ ವಿಚಾರ ಮುಂದಿಟ್ಟುಕೊಂಡು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಭಾರಿ ಪ್ರತಿಭಟನೆ ನಡೆಸಿವೆ. ಪಾದಯಾತ್ರೆಯನ್ನೂ ಮಾಡಿದ್ದವು. ಸದ್ಯ ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ.ಈ ಕಾರಣದಿಂದ ವಿರೋಧಿಗಳ ಹಣಿಯಲು…
ರಾಮನಗರ : ತರಕಾರಿ ಮಾರಾಟ ಮಾಡುವ ವಿಚಾರವಾಗಿ ದುಷ್ಕರ್ಮಿಗಳು ವ್ಯಕ್ತಿ ಒಬ್ಬನ ತಲೆಯ ಮೇಲೆ ಕಲ್ಲು ಹತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರವಾಗಿ ಹತ್ಯೆಗೈಯಲಾಗಿದೆ.ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಪ್ರವೀಣ್ (33) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ತರಕಾರಿ ವ್ಯಾಪಾರ ಮಾಡುತ್ತಿದ್ದ ಮಾಗಡಿ ನಿವಾಸಿ ಪ್ರವೀಣ್ ಇದೇ ವಿಚಾರಕ್ಕೆ ಗಲಾಟೆ ನಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬಿಎಂಟಿಸಿ ಬಸ್ ಒಂದು ನಿಯಂತ್ರಣ ಕಳೆದುಕೊಂಡು ರಸ್ತೆ ಬಿಟ್ಟು ಡಿವೈಡರ್ ಮೇಲೆ ಹತ್ತಿದ ಘಟನೆ ಬೆಂಗಳೂರಿನ ಬನಶಂಕರಿ ಬಸ್ ನಿಲ್ದಾಣ ಬಳಿ ಈ ಒಂದು ಘಟನೆ ನಡೆದಿದೆ. ಬನಶಂಕರಿ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಬಸ್ ಡಿಪೋದಿಂದ ಬಸ್ ಸ್ಟ್ಯಾಂಡ್ ಕಡೆ ಹೋಗುತ್ತಿದ್ದ ವೇಳೆ ಬಿಎಂಟಿಸಿ ಬಸ್ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದೆ. ಅದೃಷ್ಟವಶಾತ್ ಬಸ್ಸಿನಲ್ಲಿ ಯಾವುದೇ ಪ್ರಯಾಣಿಕರು ಇಲ್ಲವಾದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ.ಇದರಿಂದ ಕೆಲಕಾಲ ಈ ಒಂದು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕೊಡಗು : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದ್ದು ರಾಮನಗರದಲ್ಲಿ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರಿಗೆ ಮದ್ಯಪಾನ ಮಾಡಿಸಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ ಡ್ಯಾನ್ಸ್ ಮಾಡುವಂತೆ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.ಈ ಕುರಿತಂತೆ ಉಪನ್ಯಾಸಕರಾದ ವಿಶ್ವನಾಥ್, ಲಕ್ಷ್ಮೀಶ್, ನಾಗೇಶ್ ಅವರ ವಿರುದ್ಧ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಹೌದು ರಾಮನಗರ ಜಿಲ್ಲೆ ಕನಕಪುರ ಪಟ್ಟಣದ ರೂರಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಕ್ಟೋಬರ್ 5ರಿಂದ 10ರವರೆಗೆ ಕೊಡಗು ಮಡಿಕೇರಿ ಪ್ರವಾಸ ಕೈಗೊಂಡಿದ್ದಾಗ ಈ ಒಂದು ಘಟನೆ ನಡೆದಿದೆ. ಮೂರು ವಿದ್ಯಾರ್ಥಿಯನೀರನ್ನು ಕೂಡಿ ಹಾಕಿ ಮದ್ಯ ಕುಡಿಸಿದ ಆರೋಪ ಕೇಳಿ ಬಂದಿದೆ. ಕಾಲೇಜಿಗೆ ಬಂದ ಬಳಿಕ ಈ ಕುರಿತು ಮಹಿಳಾ ಉಪನ್ಯಾಸಕರಿಗೆ ಮಾಹಿತಿ ನೀಡಲಾಗಿದೆ. ಮಹಿಳಾ ಉಪನ್ಯಾಸಕಿಯರ ಬಳಿ ವಿದ್ಯಾರ್ಥಿನಿಯರು ಹೇಳಿದ್ದರು. ಆದರೆ ಕಾಲೇಜು ಅಂದಮೇಲೆ ಇದು ಕಾಮನ್ ಎಂದು ಅಧ್ಯಾಪಕಿಯರು ವಿದ್ಯಾರ್ಥಿನಿಯರಿಗೆ ತಿಳಿಸಿದ್ದಾರೆ. ನಂತರ ಮಕ್ಕಳ ಹಕ್ಕುಗಳ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಅಲ್ಲದೆ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಇದೇ ಅಕ್ಟೋಬರ್ 22ರಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇದರ ಮಧ್ಯನಟ ದರ್ಶನ್ ವಿರುದ್ಧದ ಹಳೆ ಕೇಸಿಗೆ ಮತ್ತೆ ಮರುಜೀವ ಬಂದಿದೆ. ನಿರ್ಮಾಪಕ ಭರತಗೆ ಕರೆ ಮಾಡಿ ದರ್ಶನ್ ಬೆದರಿಕೆ ಹಾಕಿದ್ದ ಕೆಸ್ ಇದೀಗ ಮರುಜೀವ ಪಡೆದುಕೊಂಡಿದೆ. ಈ ಕುರಿತಂತೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಹೊಸದಾಗಿ ಎನ್ ಸಿ ಆರ್ ದಾಖಲಾಗಿದೆ. 2022 ಆಗಸ್ಟ್ ನಲ್ಲಿ ಕೆಂಗೇರಿ ಠಾಣೆಯಲ್ಲಿ ಎನ್ಸಿಆರ್ ದಾಖಲಾಗಿತ್ತು.ನಟ ಧ್ರುವನ್ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿತ್ತು.ಸಿನಿಮಾ ವಿಚಾರವಾಗಿ ನಟ ದರ್ಶನ್ ಬಳಿ ದ್ರುವನ್ ಹೋಗಿದ್ದರು. ದರ್ಶನ್ ಮೂಲಕ ನಿರ್ಮಾಪಕ ಭರತ್ಗೆ ದ್ರುವಂತ್ ಕರೆ ಮಾಡಿಸಿದ್ದರು. ಸಿನಿಮಾ ಚಿತ್ರೀಕರಣ ಮುಗಿಸದಿದ್ದರೆ ನೀನೇ ಇರುವುದಿಲ್ಲ ಅಂತ ದರ್ಶನ್ ಬೆದರಿಕೆ ಹಾಕಿದ್ದಾರೆ. ನಿರ್ಮಾಪಕ ಭರತ್…














