Subscribe to Updates
Get the latest creative news from FooBar about art, design and business.
Author: kannadanewsnow05
ಬೀದರ್ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಜಾತ್ರೆಯಲ್ಲಿ ಭಾಗವಹಿಸಿದ್ದ ದಲಿತರ ಮೇಲೆ ಸವರ್ಣೀಯರು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಜಾತ್ರೆಗೆ ಬಂದಿದ್ದಕ್ಕೆ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ ನ.1ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ದಲಿತ ಸಮುದಾಯದ ಹಲವು ಯುವಕರಿಗೆ ಗಾಯಗಳಾಗಿವೆ. ನ.1ರಂದು ಹನುಮಾನ್ ದೇವರ ಜಾತ್ರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ದಲಿತರು ಮತ್ತು ಸವರ್ಣೀಯರ ನಡುವೆ ವಾಗ್ವಾದ ನಡೆದಿದೆ. ಸವರ್ಣೀಯ ಯುವಕರು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆಂದು ದಲಿತ ಯುವಕರು ಗಂಭೀರ ಆರೋಪ ಮಾಡಿದ್ದಾರೆ.ಕಟಕ ಚಿಂಚೋಳಿ ಪೊಲೀಸ್ ಠಾಣೆಗೆ ಯುವಕರು ದೂರು ನೀಡಿದ್ದು, ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಿಸುವಂತೆ ಮನವಿ ಮಾಡಲಾಗಿದೆ.
ಯಾದಗಿರಿ : ಸಂಬಂಧಿಕರ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಲು ಆಗಮಿಸಿದ್ದ ಯುವಕ, ಕೃಷ್ಣಾ ನದಿಯಲ್ಲಿ ಸ್ಥಾನಕ್ಕೆಂದು ತೆರಳಿದ ವೇಳೆ ಕಾಲು ಜಾರಿ ಬಿದ್ದು ಸಾವನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಮಂಗಳೇಶ್ ಬಡಿಗೇರ್ (26) ಎಂದು ತಿಳಿದುಬಂದಿದೆ. ಈತ ಕೊಪ್ಪಳ ಜಿಲ್ಲೆಯ ಕುಕನೂರ್ ತಾಲೂಕಿನ ಮಂಗಳೂರು ಮೂಲದ ನಿವಾಸಿ ಎಂದು ಹೇಳಲಾಗುತ್ತಿದೆ. ತಿಂಥಣಿ ಮೌನೇಶ್ವರ ದೇವಸ್ಥಾನದಲ್ಲಿ ಸಂಬಂಧಿಕರ ಜವಳ ಕಾರ್ಯಕ್ರಮಕ್ಕೆ ಆಗಮಿಸಿದ್ದಾಗ ಈ ಒಂದು ದುರಂತ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪೋಲಿಸರು ಆಗಮಿಸಿದ್ದು, ಸ್ಥಳೀಯ ಅಂಬಿಗರ ಸಹಾಯದಿಂದ ಸತತ ಮೂರು ಗಂಟೆಗಳ ಶೋಧ ಕಾರ್ಯ ನಡೆಸಿ, ಮೃತ ದೇಹವನ್ನು ಹೊರತೆಗೆದಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸುರಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸುರಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 6 ರಂದು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣದ ತನಿಖೆಗೆ ಸಿಬಿಐ ತನಿಖೆ ನಡೆಸಿ ಎಂದು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅವರು ಸಲ್ಲಿಸಿರುವ ರಿಟ್ ಅರ್ಜಿ ನಾಳೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರಿರುವ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಾಗುತ್ತದೆ. ಲೋಕಾಯುಕ್ತ ಪೊಲೀಸರಿಂದ ಸೂಕ್ತ ತನಿಖೆ ಸಾಧ್ಯವಿಲ್ಲ ಎಂದು ಸ್ನೇಹಮಯಿ ಕೃಷ್ಣ ರಿಟ್ ಅರ್ಜಿ ಸಲ್ಲಿಸಿದ್ದರು. ಇನ್ನು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಬಿಗ್ ಶಾಕ್ ನೀಡಿದ್ದು, ಇಂದು ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 6 ರಂದು…
ತುಮಕೂರು : ತುಮಕೂರಿನಲ್ಲಿ ವಸತಿ ನಿಲಯದ 8 ತರಗತಿ ವಿದ್ಯಾರ್ಥಿ ಒಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಜಬ್ಬನಹಳ್ಳಿಯ ಏಕಲವ್ಯ ವಸತಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಜಬ್ಬನಹಳ್ಳಿಯ ವಸತಿ ಶಾಲೆ ವಿದ್ಯಾರ್ಥಿ ಅಭಿಲಾಶ್ (13) ಎನ್ನುವ ವಿದ್ಯಾರ್ಥಿ ಸಾವನಪ್ಪಿದ್ದಾನೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಜಬ್ಬನಹಳ್ಳಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ವಸತಿಯ ಶಾಲೆ ಪ್ರಿನ್ಸಿಪಾಲ್ ವಾರ್ಡನ್ ನಿರ್ಲಕ್ಷದಿಂದ ಸಾವನಪ್ಪಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. 8ನೇ ತರಗತಿಯ ವಿದ್ಯಾರ್ಥಿ ಅಭಿಲಾಶ್ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಮೃತ ವಿದ್ಯಾರ್ಥಿಯ ಅಭಿಲಾಶ್ಸ ಶಕುನಿ ತಿಮ್ಮನಹಳ್ಳಿಯ ನಿವಾಸಿ ಎಂದು ಹೇಳಲಾಗುತ್ತಿದೆ. ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಘಟನೆ ಕುರಿತಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರ : ರಾಜ್ಯದ ರಾಮನಗರ ಜಿಲ್ಲೆಯ ಮಾಗಡಿ ಪೋಲೀಸರು ಮುಂಬೈನಲ್ಲಿ ಬಹುದೊಡ್ಡ ಕಾರ್ಯಾಚರಣೆ ನಡೆಸಿದ್ದು, ರಾಜ್ಯದ ಪೊಲೀಸರ ಕಾರ್ಯಾಚರಣೆಗೆ ಸ್ವತಃ ಮುಂಬೈ ಪೊಲೀಸರೇ ಬಿಗ್ ಶಾಕ್ ಗೆ ಒಳಗಾಗಿದ್ದಾರೆ. ಹೌದು ಮುಂಬೈ ಏರ್ಪೋರ್ಟ್ ಮುಖಾಂತರ ಬಹ್ರೆನ್ ಗೆ ಪರಾರಿಯಾಗಲು ಯತ್ನಿಸಿದ್ದ ಇಬ್ಬರೂ ಕುಖ್ಯಾತಿ ಕಳ್ಳರನ್ನು ರಾಜ್ಯದ ರಾಮನಗರ ಜಿಲ್ಲೆಯ ಮಾಗಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಹ್ರೆನ್ ಗೆ ಪರಾರಿ ಆಗಲು ಯತ್ನಿಸುತ್ತಿದ್ದ ಕುಖ್ಯಾತಿ ಕಳ್ಳರಿಬ್ಬರ ಬಂಧನವಾಗಿದ್ದು, ಬಂಧಿತರನ್ನು ಕಡೂರು ಸಾಧಿಕ್ (40) ಹಾಗೂ ಹಮ್ಜಾ ಅಲಿಯಾಸ್ ಅಮೀರ್ (39) ಎಂದು ತಿಳಿದುಬಂದಿದೆ. ಕಳೆದ 1 ತಿಂಗಳಿಂದ ಇಬ್ಬರು ಕಳ್ಳರನ್ನು ಪೊಲೀಸರು ಚೇಸ್ ಮಾಡಿದ್ದಾರೆ. ಬಿಎಂಡಬ್ಲ್ಯು, ಸ್ಕೋಡಾ, ಎಸ್ಯುವಿ ಕಾರು ಖರೀದಿಸಿದ್ದರು. ಕಾರುಗಳ ನಂಬರ್ ಪ್ಲೇಟ್ ಬದಲಾಯಿಸಿ ತಲೆಮರೆಸಿಕೊಂಡಿದ್ದರು. ಮುಂಬೈ, ಗೋವಾ, ರಾಜಸ್ಥಾನ, ಮಹಾರಾಷ್ಟ್ರ ಸೇರಿ ಅನೇಕ ಕಡೆ ಸುತ್ತಾಟ ನಡೆಸಿದ್ದರು. ಬಳಿಕ ಬಹ್ರೇನ್ ದೇಶಕ್ಕೆ ತೆರಳಲು ಮುಂದಾಗಿದ್ದಾರೆ. ಸೆ.22ರಂದು ಮಾಗಡಿ ಪಟ್ಟಣದ ದೇವಸ್ಥಾನವೊಂದರಲ್ಲಿ ಕಳ್ಳತನ ನಡೆದಿತ್ತು. ದೇವಸ್ಥಾನದಲ್ಲಿದ್ದ 5 ಕೆಜಿ ಬಂಗಾರ…
ಹಾವೇರಿ : ಆಪರೇಷನ್ ಕಮಲದ ಮೂಲಕ ಅಧಿಕಾರದಿಂದ ನನ್ನ ಇಳಿಸಲು ಯತ್ನಿಸಲಾಗುತ್ತಿದೆ. ಒಬ್ಬ ಶಾಸಕರಿಗೆ 50 ಕೋಟಿ ಆಫರ್ ನೀಡಿ ಆಪರೇಷನ್ ಕಮಲಕ್ಕೆ ಯತ್ನಿಸಲಾಗಿದೆ. ಈಗ ನಾನು ರಾಜೀನಾಮೆ ಕೊಡಬೇಕು ಎಂದು ಅಂತಿದ್ದಾರೆ. ಆದರೆ ನಾನು ಯಾವುದೇ ತಪ್ಪು ಮಾಡಿಲ್ಲ ಹಾಗಾಗಿ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಅಂತ ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬಳ್ಳಾರಿ ಜಿಲ್ಲೆಯ ಸಮಣೂರು ತಾಲೂಕಿನ ಹುರಳಿಕುಪ್ಪಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಭಾಷಣ ಮಾಡಿದ ಅವರು, ಎಲ್ಲರೂ ಸೇರಿ ನನ್ನ ವಿರುದ್ಧ ಹುನ್ನಾರ ಮಾಡಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಗ ಭರತ್ ಬೊಮ್ಮಾಯಿನನ್ನು ಸೋಲಿಸಿ ಉತ್ತರ ಕೊಡಿ. ನನ್ನ ವಿರುದ್ಧ ನಡೆಯುತ್ತಿರುವ ಹುನ್ನಾರಕ್ಕೆ ಉತ್ತರ ಕೊಡಬೇಕಿದೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ.ಹೊಟ್ಟೆ ಕಿಚ್ಚಿನಿಂದ ಸಹಿಸದೆ ಹೇಗಾದರೂ ಮಾಡಿ ನನ್ನನ್ನು ಇಳಿಸಲು ಪ್ರಯತ್ನಿಸಲಾಗುತ್ತಿದೆ ಎಂದರು. ಆಪರೇಷನ್ ಕಮಲದ ಮೂಲಕ ಅಧಿಕಾರದಿಂದ ನನ್ನ ಇಳಿಸಲು ಯತ್ನಿಸಲಾಗುತ್ತಿದೆ. ಒಬ್ಬ ಶಾಸಕರಿಗೆ 50 ಕೋಟಿ ಆಫರ್ ನೀಡಿ ಆಪರೇಷನ್…
ಹಾವೇರಿ : ಮುಡಾದಲ್ಲಿ ನಡೆದ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಪೊಲೀಸರು ಪ್ರಕರಣದ A1 ಆರೋಪಿಯಾಗಿರುವಂತಹ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ. ಇನ್ನು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ವಿಚಾರಣೆಗೆ ನಾನು ಹಾಜರಾಗುತ್ತೇನೆ ಎಂದು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹುರಳಿಕುಪ್ಪಿಯಲ್ಲಿ ತಿಳಿಸಿದರು. ಮುಡಾದಲ್ಲಿ ನಡೆದ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವಿಚಾರಣೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳಿಂದ ನೋಟಿಸ್ ನೀಡಲಾಗಿದೆ.ನವೆಂಬರ್ 6 ರಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಲಾಗಿದೆ. ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಕಳೆದ 40ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯರ ಮೊದಲ ವಿಚಾರಣೆ ಇದಾಗಿದೆ. ನವೆಂಬರ್ ಆರರಂದು ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗಬೇಕು…
ಮೈಸೂರು : ಕಳೆದ ಮೂರು ವರ್ಷಗಳ ಹಿಂದೆ ಮೈಸೂರಿನ ಹೊರವಲಯದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಇಡೀ ದೇಶವೇ ಬೆಚ್ಚಿ ಬೀಳಿಸಿತ್ತು. ಇದೀಗ ಮೈಸೂರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಯುವತಿಯ ಮೇಲೆ ಆಕೆ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಹೌದು ಮೈಸೂರಿನಲ್ಲಿ ಇದೀಗ ಮತ್ತೊಂದು ಗ್ಯಾಂಗ್ ರೇಪ್ ನಡೆದಿದ್ದು, ಯುವತಿಯ ಮೇಲೆ ಆಕೆ ಸ್ನೇಹಿತರೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮಡಿಕೇರಿ ಮೂಲದ ಯುವತಿಯಿಂದ ಇದೀಗ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಮೈಸೂರಿನ ವಿಜಯನಗರ ಠಾಣೆಯಲ್ಲಿ ಯುವತಿ ಖುದ್ದು ಹಾಜರಾಗಿ ದೂರು ದಾಖಲಿಸಿದ್ದಾಳೆ. ನಿನ್ನೆ ಮಡಿಕೇರಿಯಿಂದ ಬಂದ ಯುವತಿ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದಳು. ಈ ವೇಳೆ ಜೊತೆಗೆ ಇದ್ದಂತಹ ಸ್ನೇಹಿತರೆ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಯುವತಿ ವಿಜಯನಗರ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪ್ರಕರಣ…
ಮೈಸೂರು : ಮುಡಾದಲ್ಲಿ ನಡೆದ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಪೊಲೀಸರು ಪ್ರಕರಣದ A1 ಆರೋಪಿಯಾಗಿರುವಂತಹ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ. ಹೌದು ಮುಡಾದಲ್ಲಿ ನಡೆದ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವಿಚಾರಣೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳಿಂದ ನೋಟಿಸ್ ನೀಡಲಾಗಿದೆ.ನವೆಂಬರ್ 6 ರಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಲಾಗಿದೆ. ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಕಳೆದ 40ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯರ ಮೊದಲ ವಿಚಾರಣೆ ಇದಾಗಿದೆ. ನವೆಂಬರ್ 6ರಂದು ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗಬೇಕು ಎಂದು ಲೋಕಾಯುಕ್ತ ಅಧಿಕಾರಿಗಳು ಸೂಚಿಸಿದ್ದಾರೆ. ಈಗಾಗಲೇ ಲೋಕಾಯುಕ್ತ ಪೊಲೀಸರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ A2 ಪಾರ್ವತಿ, A3 ಮಲ್ಲಿಕಾರ್ಜುನ್ A4 ದೇವರಾಜು ಸೇರಿದಂತೆ ಅಧಿಕಾರಿಗಳು ಹಲವರ ವಿಚಾರಣೆ ನಡೆಸಿದ್ದರು. ಇದೀಗ ನವೆಂಬರ್ 6…
ರಾಮನಗರ : ಚನ್ನಪಟ್ಟಣ ಉಪಚುನಾವಣೆಯ ಅಖಾಡದಲ್ಲಿ ಪ್ರಚಾರ ಜೋರಾಗಿದೆ. ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಅವರ ಧರ್ಮಪತ್ನಿ ರೇವತಿ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ. ಹೌದು ಇಂದು ಬೆಳಗ್ಗೆಯಿಂದಲೇ ಚನ್ನಪಟ್ಟಣದ ಬಸ್ ನಿಲ್ದಾಣ ಹಾಗೂ ಪದವಿ ಕಾಲೇಜಿನ ಸಮೀಪ ನಿಖಿಲ್ ಪರವಾಗಿ ರೇವತಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಪ್ರಯಾಣಿಕರು, ವಿದ್ಯಾರ್ಥಿಗಳು, ಪಟ್ಟಣದ ಸಾರ್ವಜನಿಕರನ್ನು ಭೇಟಿಯಾದ ರೇವತಿ ಅವರು, ಕರಪತ್ರಗಳನ್ನು ನೀಡಿ ಎನ್ಡಿಎ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಿದರು. ಉಪಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕು ಎಂಬ ಆತ್ಮವಿಶ್ವಾಸದಲ್ಲಿ ಗೌಡರ ಕುಟುಂಬ ಇದೆ. ಹಾಗಾಗಿ ನಿಖಿಲ್ ಅವರು ನಾಮಪತ್ರ ಸಲ್ಲಿಸಿದ ದಿನದಿಂದಲೂ ರೇವತಿ ಅವರೂ ಸಹ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ಕ್ಷೇತ್ರಾದ್ಯಂತ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇವರಿಗೆ ಬಿಜೆಪಿ ನಾಯಕರೂ ಸಹ ಸಾಥ್ ನೀಡಿದ್ದಾರೆ.













