Subscribe to Updates
Get the latest creative news from FooBar about art, design and business.
Author: kannadanewsnow05
ಬಾಗಲಕೋಟೆ : ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಆಕ್ಷೇಪಾರ್ಹ ಪದ ಬಳಸಿದ ಆರೋಪದ ಹಿನ್ನೆಲೆಯಲ್ಲಿ ಎಂಎಲ್ಸಿ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಮೂರು ಜಿಲ್ಲೆಗಳನ್ನು ಸುತ್ತಾಡಿಸಿಕೊಂಡು ಬಂದಿದ್ದಾರೆ ಈ ಸಂದರ್ಭದಲ್ಲಿ ಸಿಟಿ ರವಿ ಅವರನ್ನು ಫೇಕ್ ಎನ್ಕೌಂಟರ್ ಮೂಲಕ ಮುಗಿಸುವ ಉದ್ದೇಶ ಪೊಲೀಸರು ಹೊಂದಿದ್ದರೋ ಏನೋ ಎಂದು ಕೇಂದ್ರ ಸಚಿವ ಪ್ರವಾಹ ಜೋಶಿ ಗಂಭೀರವಾದ ಆರೋಪ ಮಾಡಿದ್ದಾರೆ. ಅವಕಾಶ ಸಿಕ್ಕರೆ ಸಿಟಿ ರವಿ ಮುಗಿಸಬೇಕು ಎಂಬ ಉದ್ದೇಶವಿತ್ತು. ಆದರೆ ಸರಿಯಾದ ಅವಕಾಶ ಸಿಕ್ಕಿಲ್ಲ ಎಂದು ಬಾಗಲಕೋಟೆಯಲ್ಲಿ ಕೇಂದ್ರ ಸಚಿವರು ಗಂಭೀರವಾದ ಆರೋಪ ಮಾಡಿದರು. ನಮ್ಮ ಎಂಎಲ್ಸಿ ಕೇಶವ ಪ್ರಸಾದ್ ಕೂಡ ಅವರ ಹಿಂದೆ ಇದ್ದರೂ ನಮಗೆ ಸಿಟಿ ರವಿ ಅವರ ಲೈವ್ ಲೊಕೇಶನ್ ಸಿಗುತ್ತಿತ್ತು ಎಂದು ಹೇಳಿದರು. ಕೆಲವು ಮಾಧ್ಯಮದವರು ಕೂಡ ಅವರ ಬೆನ್ನು ಹತ್ತಿದ್ದರು. ಇಲ್ಲದಿದ್ದರೆ ಸಿಟಿ ರವಿ ಅವರನ್ನು ಫೇಕ್ ಎನ್ಕೌಂಟರ್ ಮಾಡುತ್ತಿದ್ದರು ಏನು ಫೇಕ್ ಎನ್ಕೌಂಟ ಮಾಡುವ ವಿಚಾರ ಪೊಲೀಸರಿಗೆ ಇತ್ತು ಅನಿಸುತ್ತದೆ. ಈ ಬಗ್ಗೆ…
ಬೆಂಗಳೂರು : ಭಾರತದಲ್ಲಿ ಅರಣ್ಯ ಹಾಗೂ ಹಸಿರು ಹೊದಿಕೆ ಪ್ರಮಾಣವು 2021 ರಿಂದ 2023ರ ಅವಧಿಯಲ್ಲಿ 1445 ಚದರ ಕಿ.ಮೀ.ನಷ್ಟು ವೃದ್ಧಿಸಿದೆ. ಅಂದರೆ ದೇಶದ ಒಟ್ಟು ಭೂಭಾಗದಶೇ.25.17 ಪ್ರದೇಶದಲ್ಲೀಗ ಅರಣ್ಯವಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಆದರೆ ಕಳವಳಕಾರಿ ವಿಷಯವೆಂದರೆ, ಇದೇ ಅವಧಿಯಲ್ಲಿ ಕರ್ನಾಟಕದಲ್ಲಿ ಅರಣ್ಯ ಪ್ರದೇಶ ಕುಸಿತದ ಪ್ರಮಾಣದಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನ ಪಡೆದಿದೆ. ಹೌದು ಈ ಕುರಿತಂತೆ ಇಂಡಿಯಾ ಸ್ಟೇಟ್ ಆಫ್ ಫಾರೆಸ್ಟ್ (ISFR) ಬಿಡುಗಡೆ ಮಾಡಿರುವ ವರದಿ ಅನ್ವಯ, ‘ಕಳೆದ 2 ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚು ಅರಣ್ಯ ಮತ್ತು ಮರಗಳು ನಾಶವಾದ ರಾಜ್ಯಗಳ ಮೇಲೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. 2021-23ರ ಅವಧಿಯಲ್ಲಿ ಕರ್ನಾಟಕದಲ್ಲಿ 459.36 ಚದರ ಕಿ.ಮೀ.ನಷ್ಟು ಅರಣ್ಯ ನಾಶವಾಗಿದೆ. ಮೊದಲ ಸ್ಥಾನದಲ್ಲಿರುವ ಮಧ್ಯಪ್ರದೇಶದಲ್ಲಿ 612.41 ಚ.ಕಿ.ಮೀ. ಮತ್ತು ಲಡಾಖ್ನಲ್ಲಿ 159.26 ಚ.ಕಿ.ಮೀ. ಅರಣ್ಯ ನಾಶವಾಗಿದೆ. ಇವು ಟಾಪ್ 3 ರಾಜ್ಯ ಛತ್ತೀಸ್ಗಢ, ಉತ್ತರಪ್ರದೇಶ, ಒಡಿಶಾ ಅತಿ ಹೆಚ್ಚು ಪ್ರಮಾಣದಲ್ಲಿ ಅರಣ್ಯ…
ಬಳ್ಳಾರಿ : ಈಗಾಗಲೇ ಮಂಡ್ಯದಲ್ಲಿ ಕಳೆದ 2 ದಿನಗಳಿಂದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ ಬೀಳಲಿದೆ. ಇನ್ನು ಮುಂದಿನ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 68 ವರ್ಷಗಳ ಬಳಿಕ ಗಣಿನಾಡಿಗೆ ನುಡಿತೇರು ಎಳೆಯುವ ಅವಕಾಶ ಸಿಕ್ಕಂತಾಗಿದೆ. ಹೌದು ಬಳ್ಳಾರಿಯಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು, ನಗರದಲ್ಲಿ ಶನಿವಾರ ರಾತ್ರಿ ಖಾಸಗಿ ಹೋಟೆಲ್ನಲ್ಲಿ ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ನೇತೃತ್ವದಲ್ಲಿ ಜರುಗಿದ ಎಲ್ಲ ಜಿಲ್ಲೆಗಳ ಕಸಾಪ ಪ್ರತಿನಿಧಿಗಳ ಸಭೆಯಲ್ಲಿ ಗಡಿನಾಡು ಬಳ್ಳಾರಿಯಲ್ಲಿ ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಸರ್ವಾನುಮತದಿಂದ ನಿರ್ಣಯಿಸಲಾಯಿತು. 1926 ಹಾಗೂ 1938ರಲ್ಲಿ ಬಳ್ಳಾರಿಯಲ್ಲಿ ಸಮ್ಮೇಳನ ನಡೆದಿತ್ತು. ಸ್ವಾತಂತ್ರ್ಯಾನಂತರ 1958 ರಲ್ಲಿ ವಿ.ಕೃ.ಗೋಕಾಕ್ ಅವರ ಅಧ್ಯಕ್ಷತೆಯಲ್ಲಿ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸಮ್ಮೇಳನ ಅರ್ಥಪೂರ್ಣವಾಗಿ ನಡೆದಿತ್ತು. ಸುದೀರ್ಘ…
ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಘೋಷಣೆ ಬೆನ್ನಲ್ಲೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಾಲ್ಕೂ ನಿಗಮಗಳ ನಿವೃತ್ತ ಸಿಬ್ಬಂದಿಗೆ ನೀಡಬೇಕಾದ ಬಾಕಿ ಉಪ ಧನ ಮತ್ತು ಗಳಿಕೆ ರಜೆ ನಗದೀಕರಣ ಪಾವತಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ನೀಡಿದ್ದಾರೆ. ವೇತನ ಹೆಚ್ಚಳ, ಹೆಚ್ಚುವರಿ ವೇತನ ಸಹಿತ ನಿವೃತ್ತ ನೌಕರರ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಬಾಕಿ ಉಳಿದಿರುವಂತೆ ನೌಕರರಿಗೆ ಸಾರಿಗೆ ನೌಕರರು ಡಿ.31 ರಿಂದ ಕರ್ತವ್ಯ ಬದ್ಧರಾಗಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಮುಷ್ಕರ ತಡೆಯುವ ಉದ್ದೇಶದಿಂದ ರಾಮಲಿಂಗಾರೆಡ್ಡಿ, 11,694 ನಿವೃತ್ತ ಸಿಬ್ಬಂದಿಗೆ ರೂ.224.05 ಕೋಟಿ ಬಾಕಿ ಉಪಧನ ಮತ್ತು ಗಳಿಗೆ ರಜೆ ನಾಗದೀಕರಣ ಪಾವತಿಗೆ ಆದೇಶ ನೀಡಲಾಗಿದೆ. ಶನಿವಾರ ಮೂವರು ನಿವೃತ್ತ ಸಿಬ್ಬಂದಿಗೆ ಸಾಂಕೇತಿಕವಾಗಿ ಚೆಕ್ ವಿತರಿಸಲಾಗಿದೆ. ಉಳಿದವರಿಗೆ ಹಣ ನೀಡಲು ಸೂಚಿಸಿದ್ದಾರೆ. ನೌಕರರು ಮುಷ್ಕರದಿಂದ ಹಿಂದೆ ಸರಿಯುವ ಕುರಿತು ಇನ್ನೂ ಸ್ಪಷ್ಟತೆ ನೀಡಿಲ್ಲ. ಒಂದು ವೇಳೆ ಮುಷ್ಕರ ನಡೆಸಿದರೆ ನೌಕರರ ವಿರುದ್ಧ ಎಸ್ಮಾ…
ಮಂಡ್ಯ : ದರೋಡೆ ಮಾಡಲು ಬಂದ ದುರುಳ ವ್ಯಕ್ತಿಯೊಬ್ಬರನ್ನು ಮರ ಕತ್ತರಿಸುವ ಯಂತ್ರದಿಂದ ವ್ಯಕ್ತಿಯ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯ ತೋಟದ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.ಮರ ಕತ್ತರಿಸುವ ಯಂತ್ರದಿಂದ 60 ವರ್ಷದ ರಮೇಶ್ ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ನಿನ್ನೆ ಸಂಜೆ 7:00ಗೆ ತೋಟಕೆ ಮನೆಗೆ ವ್ಯಕ್ತಿ ಆಗಮಿಸಿ ವ್ಯಕ್ತಿಗೆ ಮರ ಕತ್ತರಿಸುವ ಯಂತ್ರದಿಂದ ರಮೇಶ್ ಅವರನ್ನು ಭೀಕರ ಮವಾಗಿ ಹತ್ಯೆ ಮಾಡಿದ್ದಾನೆ. ಈ ವೇಳೆ ರಮೇಶ್ ಪತ್ನಿ ಯಶೋಧಮ್ಮಗೆ ಮರ ಕತ್ತರಿಸುವ ಯಂತ್ರ ಬಂದಿದೆ ಆರ್ಡರ್ ಮಾಡಿದ್ದೀರಿ ಅಂತ ಹೇಳಿದಾಗ ನಾವು ಮಾಡಿಲ್ಲ ಅಂದಾಗ ಅವರ ಕುತ್ತಿಗೆ ಹಿಡಿದು ತಳ್ಳಿದ್ದಾನೆ. ಈ ವೇಳೆ ಯಶೋದಮ್ಮ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಆಮೇಲೆ ರಮೇಶ್ ಅವರನ್ನು ಮರ ಕತ್ತರಿಸುವ ಯಂತ್ರದಿಂದ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಸೀನಿಮಿಯ ರೀತಿಯಲ್ಲಿ ಹಂತಕ…
ಕೊಪ್ಪಳ : ಲಂಚದ ಹಣ ಸ್ವೀಕರಿಸಿದ ಬಳಿಕ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ಲಂಚದ ಹಣವನ್ನು ಸ್ವೀಕರಿಸಿದ ಬಳಿಕ ಅಧಿಕಾರಿ ಒಬ್ಬ ನುಂಗಿದ್ದಾನೆ. ಈ ವೇಳೆ ಲೋಕಾಯುಕ್ತ ಪೊಲೀಸರು ಅಧಿಕಾರಿಗೆ ವಾಂತಿ ಮಾಡಿಸಿ ಹಣ ಕಕ್ಕಿಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಹೌದು ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಇಂದು ಸಂಜೆ ಕೊಪ್ಪಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. ದಸ್ತಗಿರ್ ಅಲಿ, ಲೋಕಾ ಬಲೆಗೆ ಬಿದ್ದ ಅಧಿಕಾರಿ ಎನ್ನಲಾಗಿದ್ದು, ಲಂಚದ ಹಣ ನುಂಗಿದ್ದನ್ನು ಲೋಕಾಯುಕ್ತ ಅಧಿಕಾರಿಗಳು ವಾಂತಿ ಮಾಡಿಸಿ ಕಕ್ಕಿಸಿರುವ ಘಟನೆ ನಡೆದಿದೆ. ಎನ್ಜಿಓಗೆ ಪ್ರಮಾಣ ಪತ್ರ ನೀಡಲು ಭೀಮನಗೌಡ ಅನ್ನೋರಿಗೆ ದಸ್ತಗಿರ್ ಅಲಿ ಎರಡು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಭೀಮನಗೌಡ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ದಸ್ತಗಿರಿ ಯನ್ನು ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸರ ಬಲೆಗೆ ಬೀಳ್ತಿದ್ದಂತೆ ದಸ್ತಗಿರ್ ಅಲಿ ಹೈಡ್ರಾಮಾವೇ ಮಾಡಿದ್ದಾರೆ.…
ಹೈದ್ರಾಬಾದ್ : ಪುಷ್ಪಾ 2 ಸಿನೆಮಾ ವೀಕ್ಷಣೆಯ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಇದೊಂದು ದುರದೃಷ್ಟಕರ ಅಪಘಾತ. ಇದರಿಂದ ಮನೆಯಲ್ಲಿ ಒಬ್ಬನೇ ಕೂರುತ್ತಿದ್ದೇನೆ. ನಾನು ಇದಕ್ಕೆ ನೇರ ಕಾರಣ ಅಲ್ಲ ಎಂದು ನನಗೆ ನಾನೇ ಹೇಳಿಕೊಳ್ಳುತ್ತಿದ್ದೇನೆ ಎಂದು ಅಲ್ಲು ಅರ್ಜುನ್ ಭಾವುಕರಾದರು. ಇಂದು ಹೈದರಾಬಾದ್ ನ ಜುಬ್ಲಿ ಹಿಲ್ಸ್ ನಲ್ಲಿ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೃತ ಮಹಿಳೆ ಮಗು ಹೇಗಿದೆ ಎಂಬುದರ ಬಗ್ಗೆ ನಾನು ಗಂಟೆಗೊಮ್ಮೆ ವೈದ್ಯರು, ಕುಟುಂಬಸ್ಥರಿಂದ ಮಾಹಿತಿ ಪಡೆಯುತ್ತಿದ್ದೇನೆ. ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ಒಂದೇ ಒಂದು ಒಳ್ಳೆಯ ವಿಷಯವೆಂದರೆ ಹುಡುಗ ಸುಧಾರಿಸುತ್ತಿದ್ದಾನೆ.ಪ್ರೇಕ್ಷಕರಿಗೆ ಉತ್ತಮ ಮನರಂಜನೆಯನ್ನು ನೀಡುವುದು ಮತ್ತು ಜನರು ನಗುವಿನೊಂದಿಗೆ ಹೊರಡಬೇಕೆಂದು ಬಯಸುವುದು ನನ್ನ ಸಂಪೂರ್ಣ ಪ್ರಯತ್ನವಾಗಿದೆ ಎಂದು ಹೇಳಿದರು. ಹೊರಗೆ ಸಾಕಷ್ಟು ಜನ ಸೇರುತ್ತಿದ್ದಾರೆ ದಯವಿಟ್ಟು ಹೊರಡಿ ಎಂದು ಪೊಲೀಸರು ಹೇಳಿದರು. ನಾನು ಆ ಕ್ಷಣವೇ ಮನೆಗೆ ನಡೆದೆ. ಮರುದಿನವೇ ಸಾವಿನ ವಿಚಾರ ತಿಳಿಯಿತು. ನನಗೆ…
ಬೆಂಗಳೂರು : ಇಂದು ಬೆಂಗಳೂರಿನ ನೆಲಮಂಗಲದ ತಾಲೂಕಿನ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತದಲ್ಲಿ 6 ಜನರು ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೆಲಮಂಗಲ ಆಸ್ಪತ್ರೆಯಲ್ಲಿ ಇಬ್ಬರ ಪೋಸ್ಟ್ ಮಾರ್ಟಂ ಅಂತ್ಯವಾಗಿದ್ದು, ವಿಜಯಲಕ್ಷ್ಮಿ ಹಾಗೂ ದೀಕ್ಷಾ ಮರಣೋತ್ತರ ಪರೀಕ್ಷೆ ಅಂತ್ಯವಾಗಿದೆ. ಸದ್ಯ ಮೃತ ದೇಹ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. 6 ಮೃತದೇಹ ತೆಗೆದುಕೊಂಡು ಹೋಗಲು 3 ಆಂಬುಲೆನ್ಸ್ ಗಳು ಸಿದ್ಧವಾಗಿವೆ. ಇಂದು ಬೆಂಗಳೂರಿನ ನೆಲಮಂಗಲದ ತಾಲೂಕಿನ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದರೆ. ಇದೀಗ ಈ ಒಂದು ಪ್ರಕರಣ ವಿಶೇಷ ತನಿಖಾಧಿಕಾರಿಯಾಗಿ Dysp ಜಗದೀಶ್ ನೇಮಕವಾಗಿದ್ದರೆ. ನೆಲಮಂಗಲ ಉಪ ವಿಭಾಗದ ಡಿವೈಎಸ್ಪಿ ಜಗದೀಶ್ ನೇಮಕವಾಗಿದ್ದಾರೆ. ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿತ್ತು. ಅಪಘಾತದ ಕುರಿತ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ಹಿನ್ನೆಲೆ? ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ…
ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಸದನ ನಡಿಯೋ ವೇಳೆ ಬಿಜೆಪಿ ಎಂಎಲ್ಸಿ ಸಿಟಿ ರವಿಯವರು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪರಹ ಪದ ಬಳಸಿದರು ಈ ವಿಚಾರವಾಗಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿಯವರು ದೇಶದಲ್ಲಿ ಇಂತಹ ಘಟನೆ ಹೊಸದೇನಲ್ಲ ಎಂದು ಹೇಳಿಕೆ ನೀಡಿದ್ದು ಇದೀಗ ಭಾರಿ ಸಂಚಲನ ಮೂಡಿಸಿದೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಘಟನೆ ಆಗಿದ್ದು ಆಗಿಹೋಗಿದೆ ಮುಂದುವರಿಸೋದ್ರಲ್ಲಿ ಅರ್ಥವಿಲ್ಲ.ದೇಶದಲ್ಲಿ ಇಂಥ ಘಟನೆಗಳು ಹೊಸದೇನಲ್ಲ, ಸಂಸತ್ತು, ವಿಧಾನಸಭೆಯಲ್ಲಿ ಬಹಳಷ್ಟು ನಡೆದಿವೆ. ಘಟನೆಗೆ ಕ್ಷಮೆ ಕೇಳಿದ ಬಳಿಕ ಮುಗಿದು ಹೋಗಿವೆ. ಈಗಲೂ ಅದೇ ರೀತಿ ಮುಗಿಸೋದು ಒಳ್ಳೆಯದು. ಸಾರ್ವಜನಿಕವಾಗಿ ಈ ಪ್ರಕರಣ ಮುಂದುವರೆಸುವುದು ಅನವಶ್ಯಕ ಎಂದರು. ನನ್ನನ್ನು ಪೊಲೀಸರು ಹತ್ಯೆ ಮಾಡಲು ಯತ್ನಿಸಿದ್ದರು ಎಂದು ಸಿಟಿ ರವಿ ಆರೋಪಿಸಿರುವ ಕುರಿತಾಗಿ, ಸಿಟಿ ರವಿ ಓರ್ವ ಶಾಸಕ ಅವರನ್ನು ಹೇಗೆ ಎನ್ಕೌಂಟರ್ ಮಾಡಲಾಗುತ್ತೆ? ತೊಂದರೆ ಕೊಡಬೇಕೆಂದು ಠಾಣೆಯಿಂದ ಠಾಣೆಗೆ ಸುತ್ತಾಡಿಸಿಲ್ಲ ಮೊದಲೆಲ್ಲ ಬಿಜೆಪಿ ಕಾರ್ಯಕರ್ತರು ಧರಣಿ ಶುರುಮಾಡಿದರು ಈ ಕಾರಣಕ್ಕೆ…
ವಿಜಯಪುರ : ಕಳೆದ ಕೆಲವು ದಿನಗಳ ಹಿಂದೆ ಮುರುಡೇಶ್ವರ ಬೀಚ್ ನಲ್ಲಿ ಸಮುದ್ರದಲ್ಲಿ ಮುಳುಗಿ ಕೋಲಾರ ಜಿಲ್ಲೆಯ ವಸತಿ ನಿಲಯದ ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದರು. ಇದೀಗ ಶಾಲಾ ಶೈಕ್ಷಣಿಕ ಪ್ರವಾಸದ ಬಳಿಕ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯದಿಂದ ಬಳಲಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಹೌದು ವಿದ್ಯಾರ್ಥಿನಿಯ ಪ್ರಾಣಕ್ಕೆ ಇದೀಗ ಶಾಲಾ ಶೈಕ್ಷಣಿಕ ಪ್ರವಾಸ ಕಂಟಕವಾಗಿದೆ ಎನ್ನಲಾಗಿದೆ. ಪ್ರವಾಸದ ಬಳಿಕ ಅನಾರೋಗ್ಯದಿಂದ ಶಂಕ್ರಮ್ಮ ಮಲ್ಲನಗೌಡ (15) ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ. ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳಿದ್ದಾಳೆ.ಪ್ರವಾಸದ ಬಳಿಕ ಅನಾರೋಗ್ಯದಿಂದ 30ಕ್ಕೂ ಹೆಚ್ಚು ಮಕ್ಕಳು ಬಳಲುತ್ತಿದ್ದರು. ಈ ಪೈಕಿ 9ನೇ ತರಗತಿಯ ವಿದ್ಯಾರ್ಥಿನಿ ಶಂಕ್ರಮ್ಮ ಮಲ್ಲನಗೌಡ ಬಿರಾದರ್ ಸಾವನ್ನಪ್ಪಿದ್ದಾಳೆ. ವಿಜಯಪುರ ತಾಲೂಕಿನ ಹೆಗಡಿಹಾಳ ಗ್ರಾಮದ ಸರ್ಕಾರಿ ಶಾಲೆಯ ಸುಮಾರು 110 ಮಕ್ಕಳನ್ನು ಕಳೆದ ಡಿಸೆಂಬರ್ 9 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸಕ್ಕೆ ಎಂದು ಕರೆದುಕೊಂಡು ಹೋಗಲಾಗಿತ್ತು. ಪ್ರವಾಸದ ಬಳಿಕ ಚಳಿ ಜ್ವರ ನೆಗಡಿ ಕೆಮ್ಮು ಕಫದಿಂದ 30ಕ್ಕೂ ಹೆಚ್ಚು…














