Author: kannadanewsnow05

ನವದೆಹಲಿ: ಗಂಭೀರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿನ್ನೆ ನಿಧನರಾಗಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರನ್ನ ಸ್ಯಾನ್ ಅವರ ಸಹೋದರಿ ಖುರ್ಷಿದ್ ಔಲಿಯಸ್ಪಷ್ಟನೆ ನೀಡಿದ್ದಾರೆ. ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ. ವಿಶ್ವಪ್ರಸಿದ್ಧ ತಬಲಾ ವಾದಕ ಝಾಕಿರ್ ಹುಸೈನ್ ರವಿವಾರ ನಿಧನರಾಗಿದ್ದಾರೆ ಎಂಬ ವರದಿ ಬೆನ್ನಲ್ಲೇ ಝಾಕಿರ್ ಅವರ ಸಹೋದರಿ ಖುರ್ಶಿದ್‌ ಔಲಿಯಾ ಸ್ಪಷ್ಟನೆ ನೀಡಿದ್ದು, ಅವರು ಇನ್ನೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ಝಾಕಿರ್ ಹುಸೈನ್ ನಿಧನ ಕುರಿತ ವರದಿಗೆ ಪ್ರತಿಕ್ರಿಯಿಸಿದ ಅವರು, ನನ್ನ ಸಹೋದರನ ಸ್ಥಿತಿ ಗಂಭೀರವಾಗಿದೆ. ಜಗತ್ತಿನಾದ್ಯಂತ ಇರುವ ಅವರ ಅಭಿಮಾನಿಗಳು ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ಖುರ್ಶಿದ್ ಹೇಳಿದ್ದಾರೆ. ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾದ ತಾಳವಾದ್ಯಗಾರ 1988 ರಲ್ಲಿ ಪದ್ಮಶ್ರೀ, 2002ರಲ್ಲಿ ಪದ್ಮಭೂಷಣ ಮತ್ತು 2023ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಗಳನ್ನು…

Read More

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಕೃಷಿಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಪೋಟಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಈ ಒಂದು ಸ್ಫೋಟದ ದೃಶ್ಯವನ್ನು ಚಿತ್ರಿಕರಣ ಮಾಡಿದ ಕ್ಯಾಮೆರಾ ಮ್ಯಾನ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹೌದು ದೃಶ್ಯ ಚಿತ್ರೀಕರಿಸಿದ್ದ ಕ್ಯಾಮೆರಾ ಮ್ಯಾನ್ ವಶಕ್ಕೆ ಪಡೆದು ಇದೀಗ ವಿಚಾರಣೆ ನಡೆಸುತ್ತಿದ್ದಾರೆ. ಡ್ರೋನ್ ಪ್ರತಾಪ್ ಜೊತೆಗೆ ಕ್ಯಾಮೆರಾ ಮ್ಯಾನ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ಪೋಟದ ದೃಶ್ಯವನ್ನು ಚಿತ್ರಿಕರಣಕ್ಕೆ ಬಳಸಿದಂತಹ ಕ್ಯಾಮೆರಾ ಸಹ ಇದೀಗ ಪೊಲೀಸರು ಸೀಸ್ ಮಾಡಿದ್ದಾರೆ. ಬೆಂಗಳೂರಿನ ಜೆಪಿ ನಗರದ ಸಂಜು ಎಂಬುವವರ ಮನೆಯಲ್ಲಿದ್ದ ಕ್ಯಾಮೆರಾವನ್ನು ಸೀಜ್ ಮಾಡಲಾಗಿದೆ. ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಅಂಗಡಿಯೊಂದರಲ್ಲಿ ಸೋಡಿಯಂ ಖರೀದಿ ಮಾಡಲಾಗಿತ್ತು. ವಾಸ ಸೈಂಟಿಸ್ಟ್ ಶಾಪ್ ನಲ್ಲಿ ಡ್ರೋನ್ ಪ್ರತಾಪ್ ಸೋಡಿಯಂ ಖರೀದಿಸಿದ್ದ ಎಂದು ತಿಳಿದುಬಂದಿದೆ. 75 ವರ್ಷದಿಂದ ಅಧಿಕೃತವಾಗಿ ಸೋಡಿಯಂ ಕೆಮಿಕಲ್ ಶಾಪ್ ನಡೆಸುತ್ತಿದ್ದರು. ಶಾಲಾ ಕಾಲೇಜುಗಳ ಪ್ರಯೋಗಾಲಗಳಿಗೆ ಈ ಒಂದು ಸೋಡಿಯಂ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಹಾವಳಿ ತೀವ್ರ ಹೆಚ್ಚಾಗಿದ್ದು, ಇದೀಗ ಮೊಬೈಲ್ ಕಳ್ಳತನ ಮಾಡಿ ಪರಾರಿ ಆಗಲು ಯತ್ನಿಸಿದ್ದ ಇಬ್ಬರೂ ಕಳ್ಳರನ್ನು ಮಾಜಿ ಕಾರ್ಪೊರೇಟರ್ ಗಣೇಶ್ ರೆಡ್ಡಿ ಅವರು ಚೇಸಿಂಗ್ ಮಾಡಿ ದಿಗಳು ಹಿಡಿಸಿರುವ ಘಟನೆ ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ಬಳಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಹಾವಳಿ ನಿಲ್ಲುತ್ತಿಲ್ಲ. ಲಾಂಗ್ ತೋರಿಸಿ ಮೊಬೈಲ್ ಕದ್ದು ಕಳ್ಳರು ಪರಾರಿಯಾಗಲು ಯತ್ನಿಸಿರುವ ಘಟನೆ ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ. ಬೈಕ್ ನಲ್ಲಿ ಬಂದು ಕಳ್ಳರು ಮೊಬೈಲ್ ಕದ್ದು ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಈ ವೇಳೆ ಮಾಜಿ ಕಾರ್ಪೊರೇಟರ್ ಕಳ್ಳರನ್ನು ಚೇಸಿಂಗ್ ಮಾಡಿದ್ದಾರೆ. ಚೇಸ್ ಮಾಡಿದ ಮಾಜಿ ಕಾರ್ಪೊರೇಟರ್ ಗಣೇಶ್ ರೆಡ್ಡಿ ಕಳ್ಳರನ್ನು ಚೇಸಿಂಗ್ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತಮ್ಮ ಸ್ಕಾರ್ಪಿಯೋ ಕಾರಿನಲ್ಲಿ ಚೇಸ್ ಮಾಡಿ ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆ ಕುರಿತಂತೆ ಹೆಚ್…

Read More

ರಾಯಚೂರು : ಬಳ್ಳಾರಿ, ಬೆಳಗಾವಿ ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಇದರ ಬೆನ್ನಲ್ಲೇ ಇದೀಗ ರಾಯಚೂರಿನಲ್ಲೂ ಕೂಡ ಇಂದು ಮತ್ತೋರ್ವ ಬಾಣಂತಿ ಸಾವನಪ್ಪಿದ್ದಾಳೆ. ರಾಯಚೂರು ಜಿಲ್ಲೆಯ ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಶ್ವರಿ (32) ಎನ್ನುವ ಬಾಣಂತಿ ಸಾವನ್ನಪ್ಪಿದ್ದಾರೆ. ಹೌದು ರಾಯಚೂರು ಜಿಲ್ಲೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದ್ದು, ಮೂರು ತಿಂಗಳ ಅವಧಿಯಲ್ಲಿ ಒಟ್ಟು 10 ಬಾಣಂತಿಯರ ಸಾವಾಗಿದೆ. ಗಾರಲದಿನ್ನಿ ಗ್ರಾಮದಲ್ಲಿ ಬಾಣಂತಿ ಈಶ್ವರಿ ಸಾವನ್ನಪ್ಪಿದ್ದಾಳೆ. ಜ್ವರದಿಂದ ಈಶ್ವರಿ ಬಳಲುತ್ತಿದ್ದು ಇದೀಗ ಸಾವನ್ನಪ್ಪಿದ್ದಾರೆ ಡಿಸೆಂಬರ್ 8 ರಂದು ಈಶ್ವರಿಗೆ ನಾರ್ಮಲ್ ಹೆರಿಗೆ ಆಗಿತ್ತು. ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಶ್ವರಿಗೆ ಹೆರಿಗೆ ಆಗಿತ್ತು. ಹೆರಿಗೆಯ ನಂತರ ಮನೆಗೆ ಬಂದ ಬಳಿಕ ತೀವ್ರ ರಕ್ತಸ್ರಾವ ಹಾಗೂ ತೀವ್ರ ಜ್ವರದಿಂದ ಈಶ್ವರಿ ಬಳಲುತ್ತಿದ್ದರು. ಇದರಿಂದ ತೀವ್ರವಾಗಿ ನೋವು ಅನುಭವಿಸಿ ಸಾವನಪ್ಪಿದ್ದಾರೆ. ಮಟಮಾರಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಇದೀಗ ಆರೋಪ ಕೇಳಿ ಬಂದಿದೆ.ಸರಿಯಾದ ಚಿಕಿತ್ಸೆ ನೀಡದ ಹಾಗೂ ಸ್ಪಂದಿಸದ ಆರೋಪ ಕೇಳಿ…

Read More

ಶಿವಮೊಗ್ಗ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿತ್ತು. ಈ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು, ರಾಜಕ್ಕೆ ಭೇಟಿ ನೀಡಿ ಬಣ ಬಡಿದಾಟ ತಣ್ಣಗಾಗಿಸಿದ್ದರು. ಇದೀಗ ಮತ್ತೆ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಕೂಗು ಎದ್ದಿದ್ದು, ಬಿಜೆಪಿಯ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಜನವರಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಹೌದು ಈ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಿ ಎಂದು ಹೇಳಿದ್ದೇನೆ. ಕಳೆದ 30 ವರ್ಷಗಳಿಂದ ನಾನು ರಾಜಕಾರಣದಲ್ಲಿ ಇದ್ದೇನೆ. ಓಬಿಸಿ ಸಮುದಾಯಕ್ಕೆ ಆದ್ಯತೆ ನೀಡಿದರೆ ನನ್ನ ಪರಿಗಣಿಸಿ ಎಂದಿದ್ದೇನೆ. ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗಬಹುದೆಂಬ ನಿರೀಕ್ಷೆ ಇದೆ ಎಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ತಿಳಿಸಿದರು. ಪಕ್ಷದಲ್ಲಿನ ಭಿನ್ನಮತದ ಬಗ್ಗೆ ವರಿಷ್ಠರು ಗಮನಹರಿಸಿದ್ದಾರೆ ವೇಗವಾಗಿ ಪಕ್ಷದ ಹೈಕಮಾಂಡ್ ತೀಕ್ಷಣವಾದಂತಹ ನಿರ್ಧಾರ…

Read More

ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರವಾದಂತಹ ಘಟನೆ ಸಂಭವಿಸಿದ್ದು ಸೊಸೆಯ ಮೇಲೆ ಪಾಪಿ ಮಾವನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದನ್ನು ವಿರೋಧಿಸಿದ್ದಕ್ಕೆ ಸಲಕೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಜುಲಮಗೇರ ಎಂಬಲ್ಲಿ ನಡೆದಿದೆ. ಹೌದು ಸಲಕೆಯಿಂದ ಹೊಡೆದು ಸೊಸೆಯನ್ನೇ ಮಾವ ಕೊಲೆ ಮಾಡಿದ್ದಾನೆ. ರಾಯಚೂರಿನ ಜುಲಮಗೆರದಲ್ಲಿ ಈ ಒಂದು ಘಟನೆ ನಡೆದಿದೆ. ಸೊಸೆ ದುಳ್ಳಮ್ಮನನ್ನು (27) ಮಾವ ರಾಮಲಿಂಗಯ್ಯ ಹತ್ಯೆಗೈದಿದ್ದಾನೆ. ಸೊಸೆ ಮೇಲೆ ಅತ್ಯಾಚಾರಕ್ಕೆ ರಾಮಲಿಂಗಯ್ಯ ಮುಂದಾಗಿದ್ದನೆ. ಈ ವೇಳೆ ವಿರೋಧ ಮಾಡಿದ್ದಕ್ಕೆ ಸೊಸೆಯನ್ನೇ ಮಾವ ಹತ್ಯೆಗೈದಿದ್ದಾನೆ. ಈ ಹಿಂದೆಯೂ ಕೂಡ ಎರಡು ಮೂರು ಬಾರಿ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದ್ದು, ಗ್ರಾಮದ ಹಿರಿಯರು ಸೇರಿ ರಾಮಾಯಲಿಂಗಯ್ಯಗೆ ಬುದ್ಧಿ ಕೂಡ ಹೇಳಿದ್ದರು. ಕೊಲೆ ಮಾಡಿ ಸದ್ಯ ಪರಾರಿಯಾಗಿರುವ ರಾಮಲಿಂಗಯ್ಯ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.ಘಟನೆ ಕುರಿತಂತೆ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯ : ಕಳೆದ ಕೆಲವು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅವರು ಹೃದಯಘಾತದಿಂದ ನಿಧನ ಹೊಂದಿದ್ದರು. ಇದೀಗ ಅವರ ಆಸ್ತಿಯನ್ನು ಎಸ್ ಎಂ ಕೃಷ್ಣ ಮೊಮ್ಮಗ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಳಿಯ ರಾದ ಅಮರ್ತ್ಯ ಹೆಗಡೆ ಅವರು ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಿದ್ದಾರೆ. ಹೌದು ಇಂದು ಎಸ್.ಎಂ ಕೃಷ್ಣ ಅವರ ಅಸ್ಥಿಯನ್ನುಮೊಮ್ಮಗ ಅಮರ್ತ್ಯ ಹೆಗಡೆ ವಿಸರ್ಜನೆ ಮಾಡಿದರು. ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಅಸ್ಥಿ ವಿಸರ್ಜನೆ ಮಾಡಿದರು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಅಸ್ತಿ ವಿಸರ್ಜನೆ ಮಾಡಿದರು. ಕಳೆದ ಡಿಸೆಂಬರ್ 10 ರಂದು ಎಸ ಎಂ ಕೃಷ್ಣ ಅವರು ಬೆಂಗಳೂರು ನಗರದ ಸದಾಶಿವನಾಗರದಲ್ಲಿ ತಡರಾತ್ರಿ ತೀವ್ರ ಹೃದಯಘಾತದಿಂದ ಸಾವನ್ನಪ್ಪಿದರು. ಇವರ ಒಂದು ಸಾವಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲ ಪಕ್ಷದ ನಾಯಕರು ತೀವ್ರ ಸಂತಾಪ ಸೂಚಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೂಡ ಎಸ್ಎಂ ಕೃಷ್ಣ ಅವರ ಅಗಲಿಕೆಗೆ…

Read More

ಹುಬ್ಬಳ್ಳಿ : ಸಮಾಜವನ್ನು ರಕ್ಷಣೆ ಮಾಡಬೇಕಾಗಿದ್ದ ಆರಕ್ಷಕರಿಂದಲೇ ಇದೀಗ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಲೈಂಗಿಕ ಕಿರುಕುಳ ನಡೆಯುತ್ತಿರುವುದು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ಇದೀಗ ಹಳೆ ಹುಬ್ಬಳ್ಳಿ ಠಾಣೆಯ ಪಿಎಸ್ಐ ಸುರೇಶ್ ಎನ್ನುವವನಿಂದ ಮಹಿಳಾ ಕಾನ್ಸ್ಟೇಬಲ್ ಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಹೌದು ಇನ್ಸ್ಪೆಕ್ಟರ್ ನಿಂದಲೇ ಮಹಿಳಾ ಕಾನ್ಸ್ಟೇಬಲ್ ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹಳೆ ಹುಬ್ಬಳ್ಳಿ ಠಾಣೆ ಇನ್ಸ್ಪೆಕ್ಟರ್ ಸುರೇಶ್ ಯಳ್ಳುರು ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದ್ದು, ಇನ್ಸ್ಪೆಕ್ಟರ್ ಸುರೇಶ್ ವಿರುದ್ಧ ಮಹಿಳಾ ಕಾನ್ಸ್ಟೇಬಲ್ ಗಳಿಂದ ಗಂಭೀರ ಆರೋಪ ಕೇಳಿ ಬಂದಿದೆ. ರಾತ್ರಿಯಾದರೆ ಮಹಿಳಾ ಸಿಬ್ಬಂದಿಗೆ ವಿಡಿಯೋ ಕಾಲ್ ಮಾಡಿ ಕಿರುಕುಳ ನೀಡುತ್ತಿದ್ದಾನೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಖಾತೆ ಸಚಿವ ಡಾ. ಜಿ ಪರಮೇಶ್ವರ್ ಮಹಿಳಾ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗಕ್ಕೆ ಇದೀಗ ಸಿಬ್ಬಂದಿಗಳು ಪತ್ರ ಬರೆದಿದ್ದಾರೆ. ಇನ್ಸ್ಪೆಕ್ಟರ್ ಕಿರುಕುಳಕ್ಕೆ ಬೇಸತ್ತು ಮಹಿಳಾ ಸಿಬ್ಬಂದಿಗಳು ಪತ್ರ ಬರೆದಿದ್ದಾರೆ. ಪಿಐ…

Read More

ಬೆಳಗಾವಿ : ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಮ್ಯಾಶ್ರೀ ಎಂದು ತಿಳಿದುಬಂದಿದೆ. ರಮ್ಯಾಶ್ರೀ ಕಳೆದ ನಾಲ್ಕು ವರ್ಷದ ಹಿಂದೆ ಮೊದಲ ಮದುವೆಯಾಗಿತ್ತು. ಬಳಿಕ ಪಾತಿಯಿಂದ ದೂರವಾಗಿ ಕಳೆದ ಮೂರು ತಿಂಗಳಿಂದ ಮತ್ತೊಂದು ಯುವಕನನ್ನು ವರಿಸಿದ್ದಳು. ನಿಡಗುಂದಿ ಗ್ರಾಮದ ಬಸವರಾಜ ಹಂಪನ್ನವರ ಎಂಬವರನ್ನು ಮದುವೆಯಾಗಿದ್ದಳು. ಆದರೆ ಮದುವೆಯಾಗಿ ಮೂರು ತಿಂಗಳಲ್ಲಿ ರಮ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಪತಿ ಬಸವರಾಜ ಕೂಡ ಆತ್ನಹತ್ಯೆಗೆ ಯತ್ನಿಸಿದ್ದಾರೆ. ಭಯಗೊಂಡು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಪಟ್ಟಿದ್ದಾರೆ. ಕೊಡಲಿ ಅವರನ್ನು ಹಾರೂಗೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ಮಧ್ಯ ಹೋರಾಡುತ್ತಿದ್ದಾರೆ.

Read More

ಬೆಂಗಳೂರು : ಇತ್ತೀಚಿಗೆ ಕೆಪಿಎಸ್‌ಸಿ ನಡೆಸಿರುವ PDO ನೇಮಕಾತಿ ಪರೀಕ್ಷೆಯಲ್ಲಿ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ನವೆಂಬರ್ 17ರಂದು ಪರೀಕ್ಷೆ ನಡೆದಿತ್ತು. ಈ ಒಂದು ನೇಮಕಾತಿ ಪರೀಕ್ಷೆಯ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವ ಕುರಿತು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಅಭ್ಯರ್ಥಿಗಳು ಭಾರಿ ಪ್ರತಿಭಟನೆ ಮತ್ತು ಹೋರಾಟ ನಡೆಸಿದ್ದರು. ಇದೀಗ ಮೇಲ್ವಿಚಾರಕರಿಗೆ ಪ್ರಶ್ನೆ ಪತ್ರಿಕೆ ತಡವಾಗಿ ತಲುಪಿದ ಹಿನ್ನೆಲೆಯ ಕುರಿತಂತೆ ಮತ್ತೊಂದು ವಿಡಿಯೋ ಇದೀಗ ವೈರಲಾಗಿದೆ. ತುಮಕೂರಿನ ಕೇಂದ್ರದಲ್ಲಿ ಬ್ಲ್ಯೂಟೂತ್ ಬಳಸಿ ಎಕ್ಸಾಂ ಬರೆಯುತ್ತಿದ್ದ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಬೆನ್ನಲ್ಲೇ ಪಿಡಿಒ ನೇಮಕಾತಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂಬ ಆರೋಪಗಳು ಸಹ ಕೇಳಿ ಬಂದಿದ್ದವು. ಈ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದರು. ಕೆಲ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಬೇರೆ ವಿದ್ಯಾರ್ಥಿಗಳನ್ನು ಪ್ರಚೋದಿಸಿದ, ಪ್ರತಿಭಟನೆ ಮಾಡಿದ 12 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪ್ರಶ್ನೆ ಪತ್ರಿಕೆ ನೀಡುವಲ್ಲಿ ವಿಳಂಬ ಸಹ ಆಗಿಲ್ಲ.…

Read More