Author: kannadanewsnow05

ಬೆಂಗಳೂರು : ಎದೆಹಾಲು ಸಂಗ್ರಹ ಮತ್ತು ಸಂಸ್ಕರಿಸಿ ಮಾರಾಟ ಮಾಡಲು ಖಾಸಗಿ ಕಂಪನಿಗಳಿಗೆ ನೀಡಿರುವ ಪರವಾನಗಿಯನ್ನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಬುಧವಾರ ಹೈಕೋರ್ಟ್‌ಗೆ ತಿಳಿಸಿದೆ.ಎದೆಹಾಲಿನ ವಾಣಿಜ್ಯಕರಣವನ್ನು ತಡೆಯುವಂತೆ ಕೋರಿ ಮುನೇಗೌಡ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠವು ಎದೆಹಾಲು ಸಂಗ್ರಹಕ್ಕೆ ಅನುಮತಿಸಿ ನೀಡಿರುವ ಪರವಾನಗಿಗಳನ್ನು ರದ್ದು ಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಆಯುಷ್ ಸಚಿವಾಲಯವು ಇತ್ತೀಚೆಗೆ ನಿರ್ದೇಶಿಸಿದೆ. ಈಗಾಗಲೇ ಒಂದು ಕಂಪನಿಯ ಲೈಸನ್ಸ್‌ ರದ್ದಾಗಿದ್ದು, ಆ ಕಂಪನಿ ಅದನ್ನು ಹೈಕೋರ್ಟ್‌ನಲ್ಲಿ ಕಾಮತ್, ಖಾಸಗಿ ಕಂಪನಿಗಳಿಗೆ ಪ್ರಶ್ನಿಸಿದೆ ಎಂದು ವಿವರಿಸಿದರು. ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟ‌ರ್ ಜನರಲ್ ಅರವಿಂದ್ ಎದೆಹಾಲು ಸಂಗ್ರಹಕ್ಕೆ ಅನುಮತಿಸಿ ನೀಡಿರುವ ಪರವಾನಗಿಗಳನ್ನು ರದ್ದು ಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಆಯುಷ್ ಸಚಿವಾಲಯವು ಇತ್ತೀಚೆಗೆ…

Read More

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರ ಜನತೆಗೆ ಮತ್ತೊಂದು ಬಿಗ್ ಶಾಕ್ ನೀಡಿದ್ದು, ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಹುಟ್ಟುವ ನದಿಗಳಿಂದ ಕುಡಿಯುವ ನೀರು ಪಡೆಯುತ್ತಿರುವ ನಗರ ಹಾಗೂ ಪಟ್ಟಣಗಳಲ್ಲಿ ಹಸಿರು ಸೆಸ್ ವಿಧಿಸಲು ಅರಣ್ಯ ಇಲಾಖೆ ಪ್ರಸ್ತಾವನೆ ಸಿದ್ಧಪಡಿಸಲು ಮುಂದಾಗಿದೆ.ಪಶ್ಚಿಮಘಟ್ಟ ಅರಣ್ಯ ಪ್ರದೇಶದಿಂದಲೇ ತುಂಗಾ-ಭದ್ರಾ, ಕಾವೇರಿ, ಕೃಷ್ಣಾ, ಮಲಪ್ರಭ, ಘಟಪ್ರಭ, ಹೇಮಾವತಿ ಸೇರಿದಂತೆ 15ಕ್ಕೂ ಹೆಚ್ಚಿನ ನದಿಗಳು ಉಗಮವಾಗುತ್ತವೆ. ಹಾಗಾಗಿ ಈ ನದಿಗಳ ನೀರನ್ನು ಬೆಂಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ, ಮಂಗ ಳೂರು, ಚಿಕ್ಕಮಗಳೂರು, ಬೆಳಗಾವಿ, ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆಗಳ ನಗರ ಮತ್ತು ಪಟ್ಟಣಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಪೂರೈಸ ಲಾಗುತ್ತಿದೆ. ಅಲ್ಲಿನ ಸ್ಥಳೀಯ ಜಲ ಮಂಡಳಿಯಿಂದ ನೀರಿನ ಸಂಪರ್ಕ ಪಡೆದವರಿಗೆ ನೀರಿನ ಬಿಲ್‌ನಲ್ಲಿ ಹಸಿರು ಸೆಸ್ ವಿಧಿಸುವ ಪ್ರಸ್ತಾವನೆ ಸಿದ್ಧಪಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ. 3 ರೂ. ವಿಧಿಸುವ ಸಾಧ್ಯತೆ ಸದ್ಯ ಅರಣ್ಯ ಇಲಾಖೆ ಅಧಿಕಾರಿಗಳು ಹಸಿರು ಸೆಸ್ ವಿಧಿಸುವ ಕುರಿತಂತೆ ಚರ್ಚೆ ನಡೆಸುತ್ತಿದ್ದಾರೆ. ಹಸಿರು ಸೆಸ್…

Read More

ಬೆಂಗಳೂರು : ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀ‌ರ್ ಅಹ್ಮದ್‌ ಖಾನ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಹಾಗೂ ಧರ್ಮ, ಜಾತಿ ನಿಂದನೆ ಮಾಡಿದ್ದ ಆರೋಪದಡಿ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಬುಧವಾರ ತಡರಾತ್ರಿ ಚಾಮರಾಜಪೇಟೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಸಚಿವರ ಆಪ್ತ ಸಹಾಯಕ ಬಿ. ಎಸ್.ಅಶೋಕ್‌ ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಅಗತ್ಯ ಬಿದ್ದರೆ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ವೇಳೆ ಜಮೀ‌ರ್ ಅವರು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ‘ಕರಿಯ’ ಎಂದು ನಿಂದಿಸಿದ್ದರು. ಇದಕ್ಕೆ ಪ್ರತಿಯಾಗಿ ಪುನೀತ್‌ ಕೆರೆಹಳ್ಳಿ ಅವರು ನ.11ರಂದು ಫೇಸ್‌ಬುಕ್‌ನಲ್ಲಿ ಸಚಿವರನ್ನು ನಿಂದಿಸಿದ್ದರು ಎನ್ನಲಾಗಿದೆ. ನವೆಂಬರ್ 11 ರಂದು ಪುನೀತ್ ಕೆರೆ ಹಳ್ಳಿ ಅವರು ಯಾವುದೋ ಸ್ಥಳದಲ್ಲಿ ತಮ್ಮ ಸಾಮಾಜಿಕ ಜಾಲ ತಾಣದ ಫೇಸ್ ಬುಕ್ ಲಿಂಕ್ ನಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್…

Read More

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಸುಮಾರು 5 ಸಾವಿರಕ್ಕೂ ಹೆಚ್ಚು ಮಾಲೀಕರು ಇ-ಖಾತಾ ಡೌನ್ ಲೋಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಫೇಸ್‌ಲೆಸ್‌, ಸಂಪರ್ಕರಹಿತ ಹಾಗೂ ಆನ್‌ಲೈನ್ ಮೂಲಕ ಬಿಬಿಎಂಪಿ ಇ-ಖಾತಾ ವಿತರಣಾ ವ್ಯವಸ್ಥೆಯನ್ನು ಅಕ್ಟೋಬ‌ರ್ 1ರಿಂದ ಆರಂಭಿಸಲಾಗಿದೆ. ಆರಂಭದಲ್ಲಿ ಹಲವು ತಾಂತ್ರಿಕ ತೊಂದರೆಗಳಿದ್ದು, ಅವುಗಳನ್ನು ಬಿಬಿಎಂಪಿ ಸಿಬ್ಬಂದಿ ನಿವಾರಿಸಿದ್ದಾರೆ. ಇ-ಖಾತಾ ಪಡೆಯಲು ಪ್ರಮುಖ ತೊಡಕಾಗಿದ್ದ ಋಣಭಾರ ಪ್ರಮಾಣಪತ್ರಕ್ಕಾಗಿ (ಇ.ಸಿ) ಮಾಲೀಕರು ಸಾಕಷ್ಟು ಹಣ ವ್ಯಯಮಾಡಬೇಕಾಗಿತ್ತು. ಆಸ್ತಿ ಮಾರಾಟ ಮಾಡುವ ಉದ್ದೇಶಕ್ಕಾಗಿ ಇ-ಖಾತಾ ಪಡೆಯುವವರಿಗೆ ಮಾತ್ರ ಇ.ಸಿ ಅಗತ್ಯವಿದೆ. ಈಗಿರುವ ದಾಖಲೆಯಂತೆ ಇ-ಖಾತಾ ಪಡೆಯಲು ಇ.ಸಿ ಸಲ್ಲಿಕೆಯಿಂದ ವಿನಾಯಿತಿ ನೀಡಲಾಗಿದೆ. ಹೀಗಾಗಿ, ಉಳಿದ ಎಲ್ಲ ದಾಖಲೆಗಳು ಸರಿಯಾಗಿದ್ದರೆ, ಅಪ್‌ಲೋಡ್ ಮಾಡಿದ ಕೂಡಲೇ ಇ-ಖಾತಾ ಲಭ್ಯವಾಗುತ್ತಿದೆ. ಇದೀಗ ಬೆಂಗಳೂರು ಒನ್ ಕೇಂದ್ರದಲ್ಲಿ ಇ-ಖಾತಾ ಶುಲ್ಕವಾಗಿ 45 ರೂ. ಶುಲ್ಕ ಪಾವತಿಸಬೇಕು. ನಂತರ ಪ್ರತಿ ದಾಖಲೆಯ ಪ್ರತಿ ಪುಟ ಸ್ಕ್ಯಾನ್ ಮಾಡಲು ₹5 ನೀಡಬೇಕು. ಅಂತಿಮ ಇ-ಖಾತಾ ಮುದ್ರಣಕ್ಕೆ ಸಿದ್ಧವಾದಾಗ ಅದರ ಶುಲ್ಕ 125 ರೂ.ಅನ್ನು ಬಿಬಿಎಂಪಿಗೆ…

Read More

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವೈಷ್ಟೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಹಾಯ ಧನ ಘೋಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ನಿನ್ನೆ ದಿನಾಂಕ 13-11-2024 ರಂದು ಮಾನ್ಯ ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅವುಗಳಲ್ಲಿ ಪ್ರಮುಖ ಅಂಶಗಳು ಈ ಕೆಳಗಿನಂತಿವೆ. * ವೈಷ್ಟೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ತಲಾ ರೂ. 5000/-ಗಳ ಸಹಾಯ ಧನ* ನೀಡಲು ತೀರ್ಮಾನಿಸಲಾಯಿತು. * ಸರ್ಕಾರದ ಬಹುಮಹಡಿಗಳ ಕಟ್ಟಡದ ಎದುರು ಇರುವ ಮುಜರಾಯಿ ಇಲಾಖೆಗೆ ಸೇರಿದ 3/4 ಎಕರೆ ಜಾಗದಲ್ಲಿ ರೂ. 10 ಕೋಟಿ ವೆಚ್ಚದಲ್ಲಿ ಧಾರ್ಮಿಕ ಸೌಧ* ನಿರ್ಮಿಸಲು ತೀರ್ಮಾನಿಸಲಾಯಿತು. * 120 ವರುಷಗಳ ಹಳೆಯದಾದ ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜಿನ ಸಂಸ್ಥೆಯ ಸಂಪೂರ್ಣ ಜೀರ್ಣೋದ್ಧಾರ ಮಾಡಲು…

Read More

ಬೆಂಗಳೂರು : ಕಳೆದ 2022 ಜೂನ್ ನಿಂದ 2023 ಜುಲೈ ವರೆಗೆ ಪ್ರಾಥಮಿಕ ಶಾಲೆಗೆ ಮಕ್ಕಳ ದಾಖಲಾತಿ ಪ್ರಮಾಣದಲ್ಲಿ ಇಡೀ ದೇಶದಲ್ಲಿ ನಮ್ಮ ಕರ್ನಾಟಕ ರಾಜ್ಯವು ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ನ್ಯಾಷನಲ್‌ ಸ್ಯಾಂಪಲ್‌ ಸರ್ವೆ ಆಫೀಸ್‌ ವರದಿಯಲ್ಲಿ ತಿಳಿಸಿದೆ. ನ್ಯಾಷನಲ್‌ ಸ್ಯಾಂಪಲ್‌ ಸರ್ವೆ ಆಫೀಸ್‌ (ಸಿಎಎಂಎಸ್‌) ವರದಿ ಪ್ರಕಾರ, 2022ರ ಜೂನ್‌ನಿಂದ – 2023ರ ಜುಲೈ ನಡುವೆ 6 ರಿಂದ 10 ವರ್ಷದವರೆಗಿನ ಮಕ್ಕಳು ಪ್ರಾಥಮಿಕ ಶಾಲೆಗೆ ಪ್ರವೇಶ ಪಡೆಯುವುದರಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. 1 ರಿಂದ 5ನೇ ತರಗತಿವರೆಗೆ ಶೇ.97.4ರಷ್ಟು ಮಕ್ಕಳು ದಾಖಲಾಗಿದ್ದಾರೆ. ಕರ್ನಾಟಕದಲ್ಲಿ ಶೇ.64.4 ರಷ್ಟು ಮಕ್ಕಳು ಸರ್ಕಾರಿ ಶಾಲೆಗಳಿಗೆ ಸೇರಿದ್ದರೆ, ಶೇ.10.1 ರಷ್ಟು ಮಕ್ಕಳು ಅನುದಾನಿತ, ಶೇ.25.5 ರಷ್ಟು ಮಕ್ಕಳು ಖಾಸಗಿ ಹಾಗೂ ಶೇ. 0.3 ರಷ್ಟು ಇತರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದಾರೆ ಎಂದು ನ್ಯಾಷನಲ್‌ ಸ್ಯಾಂಪಲ್‌ ಸರ್ವೆ ಆಫೀಸ್‌ ವರದಿಯಲ್ಲಿ ತಿಳಿಸಿದೆ. https://twitter.com/KarnatakaVarthe/status/1856696996482203671?t=F_43tRVVoMKj42j8TWzBwA&s=19

Read More

ಬೆಂಗಳೂರು : ವಕ್ಫ್ ಆಸ್ತಿ ಕುರಿತಂತೆ ಪ್ರಚೋದನಕಾರಿ ಭಾಷಣ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ವಿರುದ್ಧ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಎಫ್ಐಆರ್ ದಾಖಲಾಗಿತ್ತು ಇದೀಗ ಈ ಒಂದು ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ. ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಯಾವುದೇ ಆಕ್ಷೇಪಾರ್ಹವಾದ ಮಾತುಗಳನ್ನು ಆಡದಿದ್ದರೂ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ’ ಎಂದು ಪೀಠಕ್ಕೆ ತಿಳಿಸಿದರು. ಈ ವೇಳೆ ನಾವು ಬೇರೊಬ್ಬರ ಪರವಾಗಿ ಮಾತನಾಡಲಾಗದು. ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದಾರೆ ಎಂದು ಹೇಳುತ್ತಿಲ್ಲ. ಆದರೆ, ದೂರಿನಲ್ಲಿನ ಕೊನೆಯ ನಾಲ್ಕು ಸಾಲುಗಳಲ್ಲಿನ ಹೇಳಿಕೆಗಳು ಬೇಕಿರಲಿಲ್ಲ ಎಂದು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್‌.ಜಗದೀಶ್‌ ಪೀಠಕ್ಕೆ ವಿವರಿಸಿದರು. ಪ್ರಕರಣ ಹಿನ್ನೆಲೆ ಏನು? ಸವಣೂರಿನಲ್ಲಿ ನಿಂತು ಎಲ್ಲೇ ಕಲ್ಲು ಎಸೆದರೂ ಅದು ಬಿದ್ದ ಜಾಗ ವಕ್ಫ್‌ ಆಸ್ತಿ ಎನ್ನುವಂತಾಗಿದೆ. ಭೋವಿ ಸಮಾಜದವರಿಗೆ ಮನೆ ನಿರ್ಮಾಣ ಮಾಡಬೇಕು ಎಂದು ಮೂರು ವರ್ಷಗಳ…

Read More

ಬೆಂಗಳೂರು : ಮದುವೆಯಾಗುವಂತೆ 16 ವರ್ಷದ ಅಪ್ರಾಪ್ತೆ ಬಾಲಕಿಗೆ ಆಕೆಯ ಸೋದರ ಮಾವನೆ ಕಿರುಕುಳ ನೀಡಿದ್ದಾನೆ. ಇದರಿಂದ ಮನನೊಂದ ಬಾಲಕಿಯು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಈ ಒಂದು ಘಟನೆ ನಡೆದಿದ್ದು ಇದೀಗ ತಡವಾಗಿ ಬಳಕೆಗೆ ಬಂದಿದೆ. ನವೆಂಬರ್ 11ರಂದು 16 ವರ್ಷದ ಅಪ್ರಾಪ್ತೆ ಬಾಲಕಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿಯು ಆತ್ಮಹತ್ಯೆ ಮಾಡಿಕೊಳ್ಳೋಕೂ ಮುಂಚೆ ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿ ಸೋದರ ಮಾವನ ವಿರುದ್ಧ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಲೈಂಗಿಕ ದೌರ್ಜನ್ಯ ಎಸಗಿ, ಹಲ್ಲೆ ನಡೆಸಿದ್ದಾನೆ ಎಂದು ಬಾಲಕಿ ತಾಯಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲಿ ಪೊಲೀಸರು 28 ವರ್ಷದ ಬಾಲಕಿಯ ಸೋದರ ಮಾವನನ್ನು ಬಂಧಿಸಿದ್ದು, ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Read More

ಕೊಪ್ಪಳ : ತಹಶೀಲ್ದಾರ್ ಕಚೇರಿಗೆ ಏಕಾಏಕಿ ವ್ಯಕ್ತಿ ಓರ್ವ ನುಗ್ಗಿ ಕಬ್ಬಿಣದ ರಾಡ್ ನಿಂದ ಮಹಿಳಾ ಉಪತಾಶಿಲ್ದಾರ್ ಮೇಲೆ ಮೂರು ಬಾರಿ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಈ ದೃಶ್ಯ ನೋಡಿ ಸ್ವತಃ ಕಚೇರಿಯ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಹೌದು ಕೊಪ್ಪಳ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಉಪದರ್ಶಿಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ರೇಖಾ ದೀಕ್ಷಿತ್ ಎನ್ನುವ ಮಹಿಳೆಯು ಆಕೆಯ ಪರಿಚಯಸ್ತನಿಂದಲೇ ಹಲ್ಲೆಗೆ ಒಳಗಾಗಿದ್ದಾರೆ. ಹಲ್ಲೆ ಮಾಡಿದ ವ್ಯಕ್ತಿಯನ್ನು ಪ್ರಭು ಚೆನ್ನದಾಸರ್ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಕಚೇರಿಯಲ್ಲಿ ರೇಖಾ ಬ್ಯುಸಿಯಾಗಿದ್ರು. ಈ ವೇಳೆ ಪ್ರಭು, ಕಬ್ಬಿಣದ ರಾಡ್ ಹಿಡಿದು ಕಚೇರಿಗೆ ನುಗ್ಗಿ ಏಕಾಏಕಿ ರೇಖಾ ಮೇಲೆ ದಾಳಿ ಮಾಡಿದ್ದು, ರಾಡ್​ನಿಂದ ರೇಖಾಳ ತಲೆಗೆ 3 ಬಾರಿ ಹೊಡೆದಿದ್ದಾನೆ. ರೇಖಾ ಕುಸಿದು ಬಿದ್ದರೂ ಸಹ ರಾಕ್ಷಸನಂತೆ ಥಳಿಸಿದ್ದಾನೆ. ಕೂಡಲೇ ಕಚೇರಿ ಸಿಬ್ಬಂದಿ ರೇಖಾರನ್ನ ರಕ್ಷಿಸಿ, ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಭು ರೇಖಾ ಗೆ ಕಳೆದ ಮೂರು ವರ್ಷಗಳಿಂದ…

Read More

ಮೈಸೂರು : ಮನೆಯೊಂದರಲ್ಲಿ ಎಂಟು ಚೀಲಗಳಲ್ಲಿ ಗಾಂಜಾವನ್ನು ಸಂಗ್ರಹಿಸಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿ ಸುಮಾರು 154 ಕೆಜಿಗಳಷ್ಟು ಗಾಂಜಾ ಹಾಗೂ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು ಮೈಸೂರಿನಲ್ಲಿ 154 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದು, ಸೈಯದ್ ವಾಸಿಂ ಹಾಗೂ ಯಾಸ್ಮಿನ್ ತಾಜ್ ಎಂಬ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಲ್ಯಾಣಗಿರಿಯ ಕೆಎಚ್‌ಬಿ ಕಾಲೋನಿಯಲ್ಲಿ ಗಾಂಜಾ ಸಂಗ್ರಹಿಸಡಾಲಾಗಿತ್ತು.ಮನೆಯಲ್ಲಿ 8 ಚೀಲಗಳಲ್ಲಿ ಸುಮಾರು 154 ಕೆಜಿ ತುಂಬಿಸಿಡಾಲಗಿತ್ತು. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ.

Read More