Subscribe to Updates
Get the latest creative news from FooBar about art, design and business.
Author: kannadanewsnow05
ಬಳ್ಳಾರಿ : ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಯ ಕನಕ ದುರ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಟ ದರ್ಶನ್ ಗೆ ಜಾಮೀನು ಮಂಜೂರಾಗುತ್ತಿದ್ದಂತೆ ಬಳ್ಳಾರಿ ಜೈಲಿಗೆ ತೆರಳಿ, ಪತಿಯನ್ನು ಭೇಟಿಯಾದ ವಿಜಯಲಕ್ಷ್ಮೀ ಬಳಿಕ ಬಳ್ಳಾರಿಯ ಕನಕ ದುರ್ಗಮ್ಮ ದೇವಾಲಯಕ್ಕೆ ಆಗಮಿಸಿದರು. ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮನಃಪೂರ್ವಕವಾಗಿ ಪ್ರಾರ್ಥಿಸಿದರು. ಇದೇ ವೇಳೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರನ್ನು ನೋಡಲು ದೇವಸ್ಥಾನಕ್ಕೆ ಆಗಮಿಸಿದ ದರ್ಶನ್ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಹರಸಾಹಸಪಟ್ಟರು. ಈ ವೇಳೆ ಮಹಿಳಾ ಹೋಂ ಗಾರ್ಡ್ ಸಿಬ್ಬಂದಿ ಒಬ್ಬರು ಕೆಳಗೆ ಬಿದ್ದಿದ್ದರು. ಇದನ್ನು ಲೆಕ್ಕಿಸಿದೆ ಅವರನ್ನು ತುಳಿದುಕೊಂಡು ಹೋಗಿ ದರ್ಶನ ಅಭಿಮಾನಿಗಳು ಮೃಗಿಯ ವರ್ತನೆ ತೋರಿದ್ದಾರೆ.
ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ರಸ್ತೆಯಲ್ಲಿ ಭೀಕರ ಅಪಘಾತ ಒಂದು ಸಂಭವಿಸಿದ್ದು, ಪಕ್ಕದಲ್ಲೇ ಬರುತ್ತಿದ್ದ ವಾಹನವೊಂದಕ್ಕೆ ಬುಲೆಟ್ ಬೈಕ್ ಟಚ್ ಆಗಿ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಯುವಕ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾನೆ ಎಂದು ಹೇಳಲಾಗುತ್ತಿದೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರ ನಗರದ ರಾಹುಲ್ (18) ಎಂದು ಗುರುತಿಸಲಾಗಿದೆ. ಬುಲೆಟ್ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಚಿಕ್ಕಬಳ್ಳಾಪುರ ನಗರದ ನಿವಾಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.ಈ ಒಂದು ಅಪಘಾತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಚಿಕ್ಕಸಣ್ಣೆ ಗೇಟ್ ಬಳಿ ನಡೆದಿದೆ.ಅಪಘಾತದ ಕುರಿತಂತೆ ಕೆಂಪೇಗೌಡ ಏರ್ ಪೋರ್ಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜಿಲ್ಲೆ ದಂತಹ ನಟ ದರ್ಶನ್ ಅವರಿಗೆ ಇಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ ಈ ಮೂಲಕ ನಟ ದರ್ಶನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ದರ್ಶನ್ ಬಿಡುಗಡೆಯಾಗುತ್ತಿರುವ ಸುದ್ದಿ ತಿಳಿದು ನಿರ್ದೇಶಕ ತರುಣ್ ಸುಧೀರ್ ತಾಯಿ ಮಾಲತಿ ಸುಧೀರ್ ರವರು ಸಂತೋಷಗೊಂಡಿದ್ದಾರೆ. ನಟ ದರ್ಶನ್ ಬಿಡುಗಡೆಯ ಸುದ್ದಿ ತಿಳಿದು ಮಾಲತಿ ಸುಧೀರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಯಾವುದೋ ಒಂದು ಕೆಟ್ಟ ಗಳಿಗೆಯಲ್ಲಿ ಇಂತಹ ಒಂದು ಅನಾಹುತ ನಡೆದಿದೆ. ಆದರೆ ನಟ ದರ್ಶನ್ ಸಾಮಾನ್ಯ ಮನುಷ್ಯನ ಅಂತೂ ಅಲ್ಲ. ಆತನು ಒಬ್ಬ ದೇವತಾ ಮನುಷ್ಯನೇ ಆಗಿದ್ದಾನೆ ಎಂದು ತರುಣ್ ಸುಧೀರ್ ತಾಯಿ ಮಾಲತಿ ಸುಧೀರ್ ಅವರು ಭಾವುಕರಾಗಿ ಮಾತನಾಡಿದ್ದಾರೆ. ನಟ ದರ್ಶನ್ ಬಿಡುಗಡೆಯಾಗಿದ್ದಕ್ಕೆ ನನಗೆ ತುಂಬಾ ಖುಷಿಯಾಗುತ್ತಿದೆ ಸದ್ಯಕ್ಕೆ ಆತನನ್ನು ಭೇಟಿಯಾಗಲ್ಲ. ಹೊರಗಡೆ ಬರಲಿ ಆಮೇಲೆ ಆರೋಗ್ಯ ಸುಧಾರಿಸಿಕೊಳ್ಳಿ ಬಳಿಕ ಆತನನ್ನು ಭೇಟಿಯಾಗುತ್ತೇನೆ. ಅಭಿಮಾನಿಗಳು ಮೊದಲು ಆತನನ್ನು ಭೇಟಿಯಾಗಲಿ. ಅವನು ನನ್ನ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು 131 ದಿನಗಳ ಕಾಲ ಜೈಲಿನಲ್ಲಿ ಕಳೆದಿರುವ ನಟ ದರ್ಶನ ಅವರಿಗೆ ಇಂದು ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಾಯಂಕಾಲ ದರ್ಶನ ಅವರು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವೇಳೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ದುರ್ಗಮ್ಮ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅಲ್ಲದೆ ಸಂಜೆ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ ರಸ್ತೆ ಮಾರ್ಗವಾಗಿ ನಟ ದರ್ಶನ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಭಿಮಾನಿಗಳನ್ನ ನಿಯಂತ್ರಿಸುವ ಸಲುವಾಗಿ ಬಳ್ಳಾರಿಯಿಂದ ಆಂಧ್ರದ ಅನಂತಪುರ ರಸ್ತೆಯಿಂದ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪತ್ನಿ ತಂದಿರುವಂತಹ ಕಾರಿನಲ್ಲೇ ಸಂಜೆ ನಟ ದರ್ಶನ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜೈಲಲ್ಲಿದ್ದ ನಟ ದರ್ಶನ ಅವರು, ಕಳೆದ 131 ದಿನಗಳ ಬಳಿಕ ಇಂದು ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನವರು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಬೆಂಗಳೂರಿನ ಸಿಸಿಹೆಚ್ 57 ರ ಜಡ್ಜ್ ಜೈಶಂಕರ್ ಅವರು ಬಳ್ಳಾರಿ ಜಿಲ್ಲೆಯಿಂದ ಬಿಡುಗಡೆ ಮಾಡುವಂತೆ ಆದೇಶ ಪ್ರತಿಯನ್ನು ಇಮೇಲ್ ಮೂಲಕ ರವಾನಿಸಲು ಸೂಚನೆ ನೀಡಿದ್ದಾರೆ. ಹಾಗಾಗಿ ರಿಲೀಸ್ ಕುರಿತಂತೆ ಆದೇಶದ ಪ್ರತಿ ಜೈಲಿನ ಅಧಿಕಾರಿಗಳಿಗೆ ತಲುಪುತ್ತಿದ್ದಂತೆ ನಟ ದರ್ಶನ ಅವರು ಬಿಡುಗಡೆಯಾಗಲಿದ್ದಾರೆ. ಇದರ ಮಧ್ಯ ನಾಳೆ ನಟ ದರ್ಶನ್ ಪುತ್ರ ವಿನೇಶ್ ನ 17ನೇ ವರ್ಷದ ಹುಟ್ಟುಹಬ್ಬ ಕೂಡ ಇದೆ. ಹಾಗಾಗಿ ನಟ ದರ್ಶನ್ ಇಂದು ಸಂಜೆನೇ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಏಕೆಂದರೆ ಕಳೆದ ನಾಲ್ಕು ತಿಂಗಳಿನಿಂದ ವಿನೇಶ್ ತಂದೆ ದರ್ಶನ ಅವರನ್ನು ಬಿಟ್ಟು ಇದ್ದಿದ್ದರಿಂದ ಬಹಳ ನೊಂದುಕೊಂಡಿದ್ದರು. ನಾಳೆ ಪುತ್ರ ವಿನೇಶ್ ಹುಟ್ಟುಹಬ್ಬದ…
ಬೆಂಗಳೂರು : ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಯವ ಆಚರಿಸಲಾಗುತ್ತದೆ. ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷವಾದ ಹಿನ್ನೆಲೆಯಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವನ್ನು ಬಹಳಷ್ಟು ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದಂತೆ, ಬೆಂಗಳೂರಿನ ಎಲ್ಲಾ ಐಟಿ ಕಂಪನಿಗಳ ಮೇಲೆ ಕನ್ನಡ ಬಾವುಟ ಹಾರಿಸುವುದು ಕಡ್ಡಾಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಹೌದು ನವೆಂಬರ್ 1ರಂದು ಎಲ್ಲ ಶಾಲೆ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳ ಕಟ್ಟಡ ಮೇಲೆ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು.ಬೆಂಗಳೂರು ಜಿಲ್ಲೆಯಲ್ಲಿ ಶೇ50 ರಷ್ಟು ಜನ ಹೊರಗಿನಿಂದ ಬಂದಿದ್ದಾರೆ. ಹೊರಗಿನಿಂದ ಬಂದವರು ಸಹ ಕನ್ನಡ ಕಲಿಯಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮಾಡಬೇಕು. ರಾಷ್ಟ್ರ ಧ್ವಜದ ರೀತಿ ಕನ್ನಡ ಬಾವುಟಕ್ಕೆ ಗೌರವ ಕೊಡಬೇಕು. ಬಾವುಟ ಹಾರಿಸುವ ಮೂಲಕ ಶ್ರದ್ಧಾ, ಭಕ್ತಿ ಗೌರವ ತೋರಿಸಬೇಕು ಎಂದು ಹೇಳಿದ್ದರು.ಆಚರಣೆ ಮಾಡದ ಸಂಸ್ಥೆ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಅಂತ ಸರ್ಕಾರ…
ಬಳ್ಳಾರಿ : ಸುಮಾರು 131 ದಿನಗಳ ಬಳಿಕ ಜೈಲಿನಿಂದ ನಟ ದರ್ಶನ ಅವರು ಇಂದು ಬಿಡುಗಡೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳ ಹರ್ಷೋದ್ಗಾರ ಮುಗಿಲುಮಟ್ಟಿದ್ದು, ಇನ್ನೊಂದೆಡೆ ಬಳ್ಳಾರಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ. ಪೊಲೀಸರ ಈ ಒಂದು ನಡೆಗೆ ವ್ಯಾಪಾರಸ್ಥರು ವಿರೋಧಿಸಿದ್ದು , ನಾವು ಬಡ್ಡಿಗೆ ಹಣ ತಂದು ಹೂವಿಗೆ ಹಣ ಹಾಕಿದ್ದೇವೆ.ದಸರಾ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚು ವ್ಯಾಪಾರ ಆಗುತ್ತಿತ್ತು. ದುರ್ಗಾ ಸರ್ಕಲ್ ಬಳಿ ಬೀದಿ ಬದಿಯ ವ್ಯಾಪಾರಿ ಅಂಗಡಿ ಮುಂಗಟ್ಟು ಬಂದ್ ಮಾಡಿಸಿದ್ದಕ್ಕಾಗಿ ಪೊಲೀಸರ ವಿರುದ್ಧ ವ್ಯಾಪಾರಸ್ಥರು ಕೆಂಡಮಂಡಲ ಆಗಿದ್ದಾರೆ.
ಮಡಿಕೇರಿ : ಇತ್ತೀಚಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಇತ್ತೀಚೆಗೆ ಅಮರಾವತಿಯಲ್ಲಿ ಆಂಧ್ರ ಪ್ರದೇಶದ ರಾಜಧಾನಿ ನಿರ್ಮಾಣ ಕಾರ್ಯವನ್ನು ಪುನರಾರಂಭಿಸಿದ ನಂತರ, ತಮ್ಮ ಸರ್ಕಾರವು ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿ ನೀಡುವ ಶಾಸನವನ್ನು ಪರಿಚಯಿಸಲು ಉದ್ದೇಶಿಸಲಾಗಿದೆ ಎಂದು ಘೋಷಿಸಿದ್ದರು. ಇದೀಗ ಕರ್ನಾಟಕ ರಾಜ್ಯದಲ್ಲಿ ಈ ಒಂದು ಜಿಲ್ಲೆಯಲ್ಲಿ ಒಂದು ಸಮಾಜವು ನಾಲ್ಕು ಮಕ್ಕಳನ್ನು ಹೆತ್ತರೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದೆ. ಆ ಜಿಲ್ಲೆ ಯಾವುದು ಹಾಗೂ ಆ ಸಮಾಜ ಯಾವುದು ಅಂತ ತಿಳಿದುಕೊಳ್ಳಬೇಕಾ? ಅದೇ ಮಡಿಕೇರಿ ಜಿಲ್ಲೆಯ ಕೊಡಗಿನಲ್ಲಿ ಕೊಡವ ಸಂಸ್ಕೃತಿ ಉಳಿಸಲು ವಿಶಿಷ್ಟ ಪ್ರಯತ್ನವೊಂದನ್ನು ಕೈಗೊಳ್ಳಲಾಗಿದೆ. ಮನೆ ತುಂಬಾ ಮಕ್ಕಳು ಮಾಡುವ ಪೋಷಕರಿಗೆ 25 ಸಾವಿರ ರೂ.ದಿಂದ ಒಂದು ಲಕ್ಷ ರೂ. ದವರೆಗೆ ಬಹುಮಾನ ನೀಡಲಾಗುತ್ತಿದೆ. ಹೌದು ಪೊನ್ನಂಪೇಟೆ ತಾಲ್ಲೂಕಿನ ಟಿ ಶೆಟ್ಟಿಗೇರಿ ಕೊಡವ ಸಮಾಜ ಈ ವಿಶಿಷ್ಟ ಆಫರ್ ನೀಡಿದೆ. ಯಾವ ಕೊಡವ ಕುಟುಂಬದ ಮೂರು…
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಮುಖ 5 ಗ್ಯಾರಂಟಿಗಳನ್ನು ಜಾರಿಗೆ ಮಾಡಿದೆ ಅದರಲ್ಲಿ ಮಹಿಳೆಯರಿಗೆ ವಿಶೇಷವಾಗಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡುವುದಕ್ಕೆ ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿವೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಕ್ತಿ ಯೋಜನೆ ನಿಲ್ಲಿಸಿ ಮೊದಲಿನಂತೆ ಟಿಕೆಟ್ ವ್ಯವಸ್ಥೆ ಜಾರಿ ಮಾಡುವುದರ ಕುರಿತು ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಹೌದು, ಈ ಕುರಿತಂತೆ ವಿಧಾನಸೌಧದ ಗ್ರ್ಯಾಂಡ್ ಮೆಟ್ಟಿಲು ಮೇಲೆ ನಡೆದ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಉದ್ಘಾಟನೆ ವೇಳೆ ಮಾತನಾಡಿದ ಡಿಸಿಎಂ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಮಾತನಾಡಿದ್ದು, ಮತ್ತೆ ಟಿಕೆಟ್ ವ್ಯವಸ್ಥೆ ಜಾರಿ ಆಗುವ ಸುಳಿವು ಕೊಟ್ಟಿದ್ದಾರೆ. ನನಗೆ ಅನೇಕರು ಇಮೇಲ್ ಮುಖಾಂತರ ಹಾಗೂ ಮೆಸೇಜ್ ಮಾಡಿ ನಾವು ಬಸ್ನಲ್ಲಿ ದುಡ್ಡು ಕೊಟ್ಟು ಟಿಕೆಟ್ ತೆಗೆದುಕೊಳ್ಳುತ್ತೇವೆ ಉಚಿತ ಪ್ರಯಾಣ ಬೇಡ. ನಾವು ಹಣ ಕೊಟ್ಟು ಟಿಕೆಟ್ ತೆಗೆದುಕೊಳ್ಳುತ್ತೇವೆ ಆದರೆ ಬಸ್ ನಲ್ಲಿ ಟಿಕೆಟ್ ಪಡೆದುಕೊಂಡರು ಹಣ…
ಚಾಮರಾಜನಗರ : ಮದುವೆಗೆ ಹೆಣ್ಣು ಸಿಗುತ್ತಿಲ್ಲ ದಯವಿಟ್ಟು ಕರುಣೆ ತೋರಿಸಿ ವಧುವನ್ನ ಹುಡುಕಿ ಕೊಡು ಎಂದು ಮಲೆ ಮಹದೇಶ್ವರನನ್ನು ಮನಸಲ್ಲಿ ಪ್ರಾರ್ಥಿಸಿ ಯುವಕರ ದಂಡೊಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಬರಿಗಾಲಲ್ಲಿ ಪಾದಯಾತ್ರೆ ಆರಂಭಿಸಿದ್ದಾರೆ. ಹೌದು ಇಂತಹ ಒಂದು ಅಚ್ಚರಿ ಮೂಡಿಸುವಂತಹ ಸಂಪ್ರದಾಯ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿ ದೀಪಾವಳಿಯಂದು ಈ ಒಂದು ಪ್ರಸಿದ್ಧ ಧಾರ್ಮಿಕ ಕ್ಷೇತ್ರದಲ್ಲಿ ಈ ರೀತಿ ಒಂದು ಸಂಪ್ರದಾಯವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಬಾರಿಯೂ ಕೂಡ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಸಂಭ್ರಮ ಜೋರಾಗಿದ್ದು, ಯುವಕರ ದಂಡೇ ಬೆಟ್ಟಕ್ಕೆ ಹರಿದು ಬರುತ್ತಿದೆ. ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಕೊಳ್ಳೇಗಾಲ ತಾಲೂಕಿನ ಹೊಸಮಾಲಂಗಿ ಗ್ರಾಮದ ಯುವಕರು ವಧು ಸಿಗಲೆಂದು ಇಷ್ಟಾರ್ಥ ಇಟ್ಟುಕೊಂಡು ಬರಿಗಾಲು ಪಾದಯಾತ್ರೆ ನಡೆಸಿದ್ದಾರೆ. ಹೊಸಮಾಲಂಗಿಯಲ್ಲಿ 62 ಮಂದಿ ಯುವಕರಿಗೆ ಮದುವೆಯಾಗಿಲ್ಲ, ಎಷ್ಟು ಹುಡುಕಿದರೂ ವಧು ಸಿಗುತ್ತಿಲ್ಲ. ಮಾದಪ್ಪ ಕರುಣೆ ತೋರಿಸಿ ನಮಗೆ ಮದುವೆ ಮಾಡಿಸು…













