Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಿತು. ವಿಚಾರಣೆ ಬಳಿಕ ಹೈಕೋರ್ಟ್ ನ್ಯಾಯಮೂರ್ತಿಗಳು, ವಿಚಾರಣೆಯನ್ನು ನಾಳೆ ಸಂಜೆ 5 ಗಂಟೆಗೆ ಮುಂದೂಡಿ ಆದೇಶ ಹೊರಡಿಸಿದರು. ವಿಚಾರಣೆ ಆರಂಭದಲ್ಲಿ ಬಿಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಅವರು ವಾದ ಆರಂಭಿಸಿದರು. ಸಂತ್ರಸ್ತ ಬಾಲಕಿಯ ದೂರುದಾರ ತಾಯಿಯ ನಡವಳಿಕೆಯನ್ನು ಗಮನಿಸಬೇಕು. ಅಧಿಕಾರಿಗಳು, ಸಂಬಂಧಿಗಳು, ರಾಜಕಾರಣಿಗಳ ಮೇಲೆ ಮಹಿಳೆ 56 ದೂರನ್ನು ನೀಡಿದ್ದಾರೆ. ಘಟನೆ ನಡೆದ ಒಂದುವರೆ ತಿಂಗಳ ನಂತರ ಮಾರ್ಚ್ 14ಕ್ಕೆ ಕೇಸ್ ದಾಖಲಾಗಿದೆ ಎಂದು ವಾದಿಸಿದರು. ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಬಾಲಕಿಯ ಹೇಳಿಕೆ ಇದೆ. ಹಲವು ಜನರ ಸಮ್ಮುಖದಲ್ಲಿ ಈ ಘಟನೆ ನಡೆಯಲು ಸಾಧ್ಯವೇ? ಬಾಲಕಿಯ ಹೇಳಿಕೆಯನ್ನು ಆಧರಿಸಿ ಚಾರ್ಜ್ ಶೀಟ್ ದಾಖಲಿಸಲಾಗಿದೆ. ಎಂದು ಬಿಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ…
ಕೋಲಾರ : ಬೊಲೆರೋ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್ ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಈ ಒಂದು ಭೀಕರ ರಸ್ತೆ ಅಪಘಾತ ನಡೆದಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್ ವಡ್ಡಹಳ್ಳಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಕೋನಗುಂಟೆ ಗ್ರಾಮದ ರಾಧಪ್ಪ (45) ವೆಂಕಟರಾಮಪ್ಪ (45) ವೆಂಕಟರಾಮಪ್ಪನ ಪತ್ನಿ ಅಲುವೇಲಮ್ಮ (30) ಹಾಗೂ ಅವರ ಜೊತೆಗೆ ಇಬ್ಬರು ಅಪರಿಚಿತರು ಕೂಡ ಸಾವನ್ನಪ್ಪಿದ್ದರೆ.. ಇನ್ನೋರ್ವ ವ್ಯಕ್ತಿಗೆ ಗಂಭೀರವಾದ ಗಾಯವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರ : ರಾಮನಗರದಲ್ಲಿ ಇಂದು ಭೀಕರವಾದಂತಹ ಸರಣಿ ಅಪಘಾತ ನಡೆದಿದ್ದು, ನಿಯಂತ್ರಣ ತಪ್ಪಿ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದು ಬಳಿಕ ಹಲವು ಕಾರುಗಳಿಗೆ ಗುದ್ದಿದ ಘಟನೆ ರಾಮನಗರದ ರಾಯರದೊಡ್ಡಿ ಬಳಿ ಈ ಒಂದು ಸರಣಿ ಅಪಘಾತ ನಡೆದಿದೆ. ಹೌದು ರಾಮನಗರದ ರಾಯರ ದೊಡ್ಡಿ ಬಳಿ ಸಂಭವಿಸಿದ ಸರಣಿ ಅಪಘಾತ ಮಹಿಳೆಗೆ ಡಿಕ್ಕಿಯಾಗಿ ಬಳಿಕ ಹಲವು ವಾಹನಗಳಿಗೆ ಕಾರು ಗುದ್ದಿದೆ. ಈ ವೇಳೆ ಪರಾರಿಯಾಗಲು ಯತ್ನಿಸಿದ ಕಾರಿನ ಚಾಲಕನನ್ನು ಚೇಸ್ ಮಾಡಿ ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ಸದ್ಯ ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಬಿಬಿಎಂಪಿ ನಿರ್ಲಕ್ಷಕ್ಕೆ ಇದೀಗ ಮತ್ತೊಂದು ಅವಘಡ ಸಂಭವಿಸಿದ್ದು, ತಂದೆಯ ಜೊತೆಗೆ ಶಾಲೆಗೆ ತೆರಳುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು ಬಾಲಕನಿಗೆ ತಲೆಗೆ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಂದಿ ದುರ್ಗದ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಬಿಬಿಎಂಪಿ ನಿರ್ಲಕ್ಷಕ್ಕೆ ಮರದ ಕೊಂಬೆ ಬಿದ್ದು ಜಾಡೆಂ ಲೂಕಸ್ (14) ವರ್ಷದ ಬಾಲಕ ಐಸಿಯುನಲ್ಲಿ ಜೀವನ್ಮರಣದ ನಡುವೆ ಹೋರಾಟ ಮಾಡುತ್ತಿದ್ದಾನೆ. ಮರದ ಕೊಂಬೆ ಬಿದ್ದು ಆಸ್ಪತ್ರೆಯಲ್ಲಿ ಬಾಲಕ ಇದೀಗ ನರಳಾಟ ನಡೆಸುತ್ತಿದ್ದಾನೆ. ಬೆಳಿಗ್ಗೆ ನಂದಿ ದುರ್ಗದ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ತಂದೆ ಜೊತೆ ಸ್ಕೂಟರ್ ಜೊತೆಗೆ ತೆರಳುತ್ತಿದ್ದಾಗ ಮರದ ಕೋಂಬೆ ಮರ ಬಿದ್ದು ಜಾಡಂ ಲೂಕಸ್ ತಲೆಗೆ ಗಂಭೀರವಾದ ಗಾಯಗಳಾಗಿವೆ. ಘಟನೆ ತಿಳಿದ ತಕ್ಷಣ ಆಸ್ಪತ್ರೆಗೆ ಬಿಬಿಎಂಪಿ ಅಧಿಕಾರಿ ಜಿ.ಎಲ್.ಜಿ ಸ್ವಾಮಿ ಭೇಟಿ ನೀಡಿ ಬಾಲಕನ ಆರೋಗ್ಯವನ್ನು ವಿಚಾರಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಾಲಕನ ತಂದೆ ಡೇವಿಡ್, ಎಂದಿನಂತೆ ನನ್ನ ಮಗನನ್ನು…
ಬೆಂಗಳೂರು : ಬೆಂಗಳೂರಲ್ಲಿ ವೈಟ್ ಬೋರ್ಡ್ ಹೊಂದಿರುವಂತಹ, ಸೆಲೆಬ್ರಿಟಿಗಳಿಗೆ ಐಷಾರಾಮಿ ಕಾರುಗಳನ್ನು ಬಾಡಿಗೆಗೆ ನೀಡುತ್ತಿದ್ದ ಟ್ರಾವೆಲ್ಸ್ ಮಾಲೀಕರಿಗೆ ಇದೀಗ ಸಾರಿಗೆ ಇಲಾಖೆಯು ಬಿಗ್ ಶಾಕ್ ನೀಡಿದೆ.ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ. ಹೌದು ಬೆಂಗಳೂರಲ್ಲಿ ಇಂದು ಸಾರಿಗೆ ಇಲಾಖೆಯ ಅಧಿಕಾರಿಗಳು ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದು, ಯಶವಂತಪುರ, ರಾಜಾಜಿ ನಗರ, ಮತ್ತಿಕೆರೆ, ಪೀಣ್ಯ, ಮಲ್ಲೇಶ್ವರಂ ಸೇರಿದಂತೆ ಅಕ್ಕಪಕ್ಕದ ಏರಿಯಾಗಳಲ್ಲಿ ಪ್ರತಿ ತಂಡದಲ್ಲೂ ಸಾರಿಗೆ ಇಲಾಖೆಯ ಇನ್ಸ್ಪೆಕ್ಟರ್ ಒಳಗೊಂಡಂತೆ ಒಟ್ಟು 9 ತಂಡಗಳಿಂದ ಕಾರ್ಯಾಚರಣೆ ಮಾಡಲಾಗಿದೆ. ಈ ಮೂಲಕ, ಜಾಗ್ವಾರ್, ಬಿಎಂಡಬ್ಲೂ, ರೇಂಜ್ ರೋವರ್, ಸೇರಿದಂತೆ ಕೋಟ್ಯಂತರ ರೂ. ಬೆಲೆಬಾಳುವ 25 ಐಷಾರಾಮಿ ಕಾರುಗಳನ್ನು ಆರ್ಡಿಓ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜೊತೆಗೆ 50 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ. ಈ ಮೂಲಕ,…
ಬೆಂಗಳೂರು : ಪತ್ನಿಯ ಕಿರುಕುಳಕ್ಕೆ ಬೇಸತ್ತು, ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳ ಹಿಂದೆ ಅತುಲ್ ಪತ್ನಿ, ಅತ್ತೆ ಹಾಗೂ ಬಾಮೈದನನ್ನು ಮಾರತ್ತಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಂಧಿತ ಅತುಲ್ ಪತ್ನಿ ಪೋಲೀಸರ ವಿಚಾರಣೆ ವೇಳೆ ಸ್ಪೋಟಕ ಹೇಳಿಕೆ ನೀಡಿದ್ದಾಳೆ. ನಿಖಿತಾ ಸಿಂಘಾನಿಯ ಹೇಳಿದ್ದೇನು? ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ವಿಚಾರಣೆಗೊಳಪಡಿಸಿದ್ದು, ಈ ವೇಳೆ ಕೆಲ ಸ್ಫೋಟಕ ಅಂಶಗಳನ್ನು ಬಿಚ್ಚಿಟ್ಟಿದ್ದಾರೆ. ಘಟನೆಯಲ್ಲಿ ಅತುಲ್ ಸಂತ್ರಸ್ತ ಅಲ್ಲ. ನಾನೇ ನಿಜವಾದ ಸಂತ್ರಸ್ತೆ ಎಂದು ನಿಖಿತಾ ಪೊಲೀಸರ ಮುಂದೆ ತನ್ನ ಅಳಲು ತೋಡಿಕೊಂಡಿದ್ದಾರೆ. ನಾನು ಮತ್ತು ಅತುಲ್ ಬೇರೆ ಬೇರೆ ಕಡೆ ವಾಸ ಮಾಡುತ್ತಿದ್ದೇವೆ . ಆತ ಮಾಡಿರುವ ಆರೋಪ ಸುಳ್ಳು, ಎಲ್ಲವನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ. 2020 ರಿಂದಲೂ ನಾವು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದೇವೆ. ಆತನ ಸಾವಿಗೂ ನನಗೂ ಯಾವುದೇ ಸಂಬಂಧ…
ಬಳ್ಳಾರಿ : ಇದು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಮಂಗಳಮುಖಿಯೊಬ್ಬರು ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹೌದು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ರೇಣುಕಾ ಪೂಜಾರಿಯವರು ಅರೆಕಾಲಿಕ ಕನ್ನಡ ಪ್ರಾಧ್ಯಾಪಕಿಯಾಗಿ ನೇಮಕಗೊಂಡಿದ್ದಾರೆ. ಒಬ್ಬ ಮಂಗಳಮುಖಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿರುವುದು ಕರ್ನಾಟಕದಲ್ಲೇ ಮೊದಲು. ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ರೆಣುಕಾ ಪೂಜಾರಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಮುಗಿಸಿದ್ದರು. ಬಳ್ಳಾರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯು ಶಿಕ್ಷಣ, ಕುರುಗೋಡಿನಲ್ಲಿ ಪದವಿ ಹಾಗೂ ಕನ್ನಡ ವಿಷಯದಲ್ಲಿ ಸ್ನಾತಕ್ಕೋತ್ತರ ಪದವಿಯನ್ನು ಬಳ್ಳಾರಿಯ ವಿಜಯನಗರ ಶ್ರೀಕೃಷ್ನದೇವರಾಯ ವಿವಿಯಲ್ಲಿ ಮುಗಿಸಿದ್ದರು.ಇದೀಗ ಪ್ರಾದ್ಯಾಪಕರಾಗಿ ನೇಮಕವಾಗಿರುವುದು ಕರ್ನಾಟಕದಲ್ಲಿ ಇದೆ ಮೊದಲು . ವಿದ್ಯಾರ್ಥಿಯಾಗಿರುವ ವೇಳೆ ದೇಹದಲ್ಲಿ ನೈಸರ್ಗಿಕ ಬದಲಾವಣೆ ಆದ ಹಿನ್ನೆಲೆಯಲ್ಲಿ ಮಂಗಳಮುಖಿಯಾಗಿ ಬದಲಾಗಿದ್ದಾರೆ. ಎಸ್ಎಸ್ ಎಲ್ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ.70ರಷ್ಟು ಅಂಕಗಳನ್ನು ಪಡೆದಿದ್ದಾರೆ. ಇವರು, ವಿಶ್ವವಿದ್ಯಾಲಯದ ಪೂರ್ಣಕಾಲಿಕ ಅಧ್ಯಾಪಕಿಯಾಗಿ ಸೇವೆ ಸಲ್ಲಿಸಬೇಕು. ಉತ್ತಮ ಭವಿಷ್ಯ ರೂಪಿಸಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದಾರೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಎಚ್ಚೆತ್ತುಕೊಂಡ ಚಾಲಕ ಮತ್ತು ನಿರ್ವಾಹಕ ಬಸ್ ನಲ್ಲಿದ್ದ ಸುಮಾರು 40ಕ್ಕು ಹೆಚ್ಚು ಪ್ರಯಾಣಿಕರನ್ನು ಬಸ್ನಿಂದ ಕೆಳಗೆ ಇಳಿಸಿದ್ದಾರೆ. ಹೀಗಾಗಿ ಭಾರಿ ಅನಾಹುತ ಒಂದು ತಪ್ಪಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಹೌದು ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ಬಸ್ ನಲ್ಲಿ 40 ಜನ ಪ್ರಾಣಿಸುತ್ತಿದ್ದರು. ಕೂಡಲೇ ಸ್ಥಳಿಯರು ಪ್ರಯಾಣಿಕರನ್ನು ಹಾಗೂ ಚಾಲಕ ಮತ್ತು ನಿರ್ವಾಹಕರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ಸ್ಥಳೀಯರು ಸಾರಿಗೆ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಈ ವೇಳೆಸಾರಿಗೆ ಸಿಬ್ಬಂದಿಗಳು ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿದರು.
ಕೊಪ್ಪಳ : ಇತ್ತೀಚಿಗೆ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದಂತಹ ಗ್ರಹಲಕ್ಷ್ಮಿ ಯೋಜನೆಯಿಂದ ಬಂದಂತಹ ಹಣದಿಂದ ಅತ್ತೆ ಹಾಗೂ ಸೊಸೆ ಬೋರ್ವೆಲ್ ಕೊರೆಸಿದ್ದ ಸುದ್ದಿ, ಭಾರಿ ವೈರಲಾಗಿತ್ತು. ಇದಕ್ಕೆ ಸಿಎಂ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಹರ್ಷ ವ್ಯಕ್ತಪಡಿಸಿದ್ದರು. ಇದೀಗ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಹಿಳೆಯೊಬ್ಬರು, ಗೃಹಲಕ್ಷ್ಮಿ ಹಣ ಕೂಡಿಟ್ಟು ಮಾಂಗಲ್ಯ ಸರ ಖರೀದಿಸಿದ ಘಟನೆ ನಡೆದಿದೆ. ಹೌದು ಗಂಗಾವತಿ ತಾಲೂಕಿನ ಶ್ರೀರಾಮನಗರದ ನಿವಾಸಿಗಳಾದ ಶಂಕರಮ್ಮ ನಾಯಕ ತನಗೆ ಬರುವ ಪ್ರತಿ ತಿಂಗಳ ಹಣವನ್ನು ತನ್ನ ಅನಾಥ ಮೊಮ್ಮಗಳ ಖಾತೆಗೆ ಜಮಾ ಮಾಡುತ್ತಿದ್ದಾರೆ. ಕೆ. ನರಸಮ್ಮ ಮಾಂಗಲ್ಯ ಸರ ಖರೀದಿ ಮಾಡಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಿಂದ ಬರುವಂತಹ ಪ್ರತಿ ತಿಂಗಳು 2,000ಗಳನ್ನು, ಕುರಿತುಕೊಂಡು ಈ ಒಂದು ಮಾಂಗಲ್ಯ ಸರ ಮಾಡಿಸಿಕೊಂಡಿದ್ದೇನೆ. ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ತುಂಬಾ ಧನ್ಯವಾದಗಳು ಎಂದು ಶಂಕ್ರಮ್ಮ ನಾಯಕ್ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಗೃಹಲಕ್ಷ್ಮಿ ಹಣದಿಂದ ಮಾಂಗಲ್ಯ ಸರ ಖರೀದಿಸಿದ…
ಉತ್ತರಪ್ರದೇಶ : ಇತ್ತೀಚಿನ ದಿನಮಾನಗಳಲ್ಲಿ ಮಹಿಳೆಯರ ಹಾಗೂ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದೀಗ ಉತ್ತರ ಪ್ರದೇಶದ ನೋಯ್ಡಾದಲ್ಲಿ ಶಿಕ್ಷಕಿಯರ ಶೌಚಾಲಯದಲ್ಲಿ ಸ್ಪೈ ಕ್ಯಾಮೆರಾ ಅಳವಡಿಸಿದ್ದ ಶಾಲೆಯ ನಿರ್ದೇಶಕನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಶಿಕ್ಷಕಿಯರ ವಾಶ್ರೂಮನ್ ಬಲ್ಬ್ ಸಾಕೆಟ್ನಲ್ಲಿ ಸ್ಪೈ ಕ್ಯಾಮರಾವನ್ನು ಶಾಲಾ ನಿರ್ದೇಶಕನೊಬ್ಬ ಇಟ್ಟಿದ್ದ ಎನ್ನಲಾಗಿದೆ. ಆತ ತನ್ನ ಕಂಪ್ಯೂಟರ್ ಹಾಗೂ ಮೊಬೈಲ್ ಮೂಲಕ ವಾಶ್ರೂಂನ ವಿಡಿಯೋವನ್ನು ಲೈವ್ ಆಗಿ ವೀಕ್ಷಿಸುತ್ತಿದ್ದ. ಈ ಕುರಿತು ಶಿಕ್ಷಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು.ಶಿಕ್ಷಕಿಯ ದೂರಿನ ಮೇರೆಗೆ ಆತನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆ ಹಿನ್ನೆಲೆ? ಡಿಸೆಂಬರ್ 10 ರಂದು ನೋಯ್ಡಾದ ಸೆಕ್ಟರ್ 70 ರ ಪ್ಲೇ ಸ್ಕೂಲ್ ಆದ ಲರ್ನ್ ವಿತ್ ಫನ್ನಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿಯೊಬ್ಬರು ವಾಶ್ರೂಮ್ನ ಬಲ್ಬ್ ಹೋಲ್ಡರ್ನಲ್ಲಿ ಮಸುಕಾದ ಬೆಳಕಿರುವುದನ್ನು ಗಮನಿಸಿದರು. ಅದು ಅನುಮಾನವನ್ನು ಹುಟ್ಟುಹಾಕಿತ್ತು. ಸೂಕ್ಷ್ಮವಾಗಿ ಗಮನಿಸಿದಾಗ ಅಲ್ಲಿ ಸ್ಪೈ ಕ್ಯಾಮರಾ…













