Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಚಿಕ್ಕಬಳ್ಳಾಪುರ : ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ದರೋಡೆ ಘಟನೆಗಳು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ ಇದೀಗ ಚಿಕ್ಕಬಳ್ಳಾಪುರದಲ್ಲಿ ಅಂಗಡಿಗೆ ಖರೀದಿಗೆ ಎಂದು ನೆಪದಲ್ಲಿ ಬಂದಂತಹ ಇಬ್ಬರು ಖದೀಮರು ಹಾಡ ಹಗಲೇ ಮಾಂಗಲ್ಯ ಸರ ಕದ್ದು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ. ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗಡಿದಂ ಗ್ರಾಮದಲ್ಲಿ ಹಾಡಹಗಲೇ ಮಾಂಗಲ್ಯ ಸರ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಚಿಲ್ಲರೆ ಅಂಗಡಿ ನಡೆಸುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದಾರೆ. ಅಂಗಡಿಗೆ ಖರೀದಿ ನೆಪದಲ್ಲಿ ಬಂದಿದ್ದ ಇಬ್ಬರಿಂದ ಈ ಒಂದು ದುಷ್ಕೃತ್ಯ ನಡೆದಿದೆ. ಮಾಂಗಲ್ಯಸರ ಕಸಿದು ಪರಾರಿಯಾಗಿದ್ದಾರೆ ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳಿಂದ ಸರಗಳ್ಳತನ ನಡೆದಿದೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಧಾರವಾಡ : ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಗೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಹೈಕೋರ್ಟಿನಲ್ಲಿ ವಾದ ಪ್ರತಿವಾದ ನಡೆಯಿತು. ಸಿಎಂ ಪರವಾಗಿ ಕಪಿಲ್ ಸಿಬಲ್, ಅಭಿಷೇಕ್ ಮನಸಿಂಗ್ವಿ, ಪ್ರೊ. ರವಿವರ್ಮ ಕುಮಾರ್ ವಾದಿಸಿದರೆ, ಅತ್ತ ದೂರುದಾರ ಸ್ನೇಹಮಯಿ ಕೃಷ್ಣ ಅವರ ಪರವಾಗಿ ಮಣಿಂದರ್ ಸಿಂಗ್ ಅವರು ವಾದಿಸಿದರು. ಈ ವೇಳೆ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿ ಆದೇಶಿಸಿದೆ. ಈ ವಿಚಾರವಾಗಿ, ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದು, 50:50 ಅನುಪಾತ ದಾಖಲೆ ತೋರಿಸಿದರೆ ಜೈಲಿಗೆ ಹೋಗುತ್ತೇನೆ. ಈ ಒಂದು 50:50 ಅನುಪಾತ ದಾಖಲೆ ತೋರಿಸಿದರೆ ನಾನೇ ಹೋಗುತ್ತೇನೆ. ಈ ಒಂದು ಅಧಿಸೂಚನೆ ಉಲ್ಲೇಖ ಇಲ್ಲ. ನನ್ನ ಮೇಲೆ ಯಾವ ಕೇಸ್ ಬೇಡ ನಾನೇ ಸ್ವತಹ ಜೈಲಿಗೆ ಹೋಗುತ್ತೇನೆ. ಸಿಎಂ ಗೆ ಇದು ನನ್ನ ಬಹಿರಂಗ ಸವಾಲು. UDD-118 2024 ಉಲ್ಲೇಖಿಸಿ 50:50 ಅನುಪಾತ ಅಂತಾರೆ. ಹಾಗಾದ್ರೆ…

Read More

ಮೈಸೂರು : ಅರಮನೆ ಮೈದಾನ ಬಳಸಿಕೊಳ್ಳುವ ಸಂಬಂಧ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿರುವ ವಿಚಾರವಾಗಿ ರಾಜ್ಯ ಸರ್ಕಾರ ನಮಗೆ ಯಾವುದೇ ಪರಿಹಾರ ಕೊಡುವ ಅಗತ್ಯವಿಲ್ಲ ಎಂದು ಸುತ್ತುರಿನಲ್ಲಿ ಬಿಜೆಪಿಯ ಸಂಸದ ಯದುವೀರ್ ಒಡೆಯರ್ ಹೇಳಿಕೆ ನೀಡಿದರು. ಇಂದು ಅವರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಯದುವೀರ್ ಒಡೆಯರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಪರಿಹಾರ ಕೊಡುವ ಬದಲು ಟಿಡಿಆರ್ ಸರ್ಟಿಫಿಕೇಟ್ ಕೊಟ್ಟರೆ ಸಾಕು. ಸರ್ಕಾರ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಸುಪ್ರೀಂ ಕೋರ್ಟ್ ಆದೇಶ ಇದ್ದಾಗ ನಮ್ಮ ಮುಂದೆ ಯಾಕೆ ಬರುತ್ತಾರೆ? ಸಾರ್ವಜನಿಕ ಹಿತದೃಷ್ಟಿಗಾಗಿ ಅಂದರೆ ನಮ್ಮ ಆಸ್ತಿನೆ ಬೇಕಾ? ಎಂದು ಪ್ರಶ್ನಿಸಿದರು. ಈ ಹಿಂದೆ ಸದಾಶಿವ ನಗರ ಕೂಡ ಬೆಂಗಳೂರು ಅರಮನೆಗೆ ಸೇರಿತ್ತು. ನಾವು ಆಗಲೇ ಸಾಮಾಜಿಕ ನ್ಯಾಯದಲ್ಲಿ ಬಹಳಷ್ಟು ಜಮೀನು ಕೊಟ್ಟಿದ್ದೇವೆ. ಸಾಮಾನ್ಯರಿಗೆ ಏನು ಕಾನೂನು ಇದೆ ನಮಗೂ ಅದೇ ಕಾನೂನು ಅಲ್ವಾ. ಟಿಡಿಆರ್‌ ಬದಲು ನಗದು ರೂಪದಲ್ಲಿ ಪರಿಹಾರ ಹೇಳಬಹುದಿತ್ತು? ಸರ್ಕಾರದ ಖಜಾನೆಗೆ ಧಕ್ಕೆ ಆಗುತ್ತೆ…

Read More

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶ ನ್ಯಾ.ಎಂ ನಾಗಪ್ರಸನ್ನ ಅವರು, ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ. ಇದೆ ವೇಳೆ ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಸಲ್ಲಿಸುವ ವಿಚಾರವಾಗಿ ಆದೇಶ ಪ್ರಕಟಿಸುವವರೆಗೂ ಹೈಕೋರ್ಟ್ ಗಡುವು ವಿಸ್ತರಿಸಿದೆ. ವಿಚಾರಣೆಯ ಆರಂಭದಲ್ಲಿ ರಾಜ್ಯ ಸರ್ಕಾರದ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು. ಲೋಕಾಯುಕ್ತ ತನಿಖೆ ತಾರತಮ್ಯಪೂರಿತವಾಗಿದ್ದಾಗ ಬೇರೆ ಸಂಸ್ಥೆಯಿಂದ ತನಿಖೆ ಕೋರಬಹುದು. ಈ ಕೇಸ್ ನಲ್ಲಿ ಇದ್ಯಾವುದು ಆಗದಿದ್ದರೂ ಸಿಬಿಐ ತನಿಖೆ ಕೋರುತ್ತಿದ್ದಾರೆ. ಲೋಕಾಯುಕ್ತ ಪೊಲೀಸರ ವರದಿಯಲ್ಲಿ ಏನಿದೆ ಎಂಬುದನ್ನು ಯಾರು ನೋಡಿಲ್ಲ ಎಂದು ಅವರು ವಾದ ಮಂಡಿಸಿದರು. ಲೋಕಾಯುಕ್ತ ರಾಜ್ಯ ಸರ್ಕಾರದ ಹಿಡಿತದಲ್ಲಿದೆ ಎಂದಿದ್ದಾರೆ. ಹಾಗಾದರೆ ಸಿಬಿಐ ಕೂಡ ಕೇಂದ್ರ ಸರ್ಕಾರದ ಹಿಡಿತದಲ್ಲಿದೆ. ಹೀಗಾಗಿ ಸಿಬಿಐ ಸ್ವತಂತ್ರ ತನಿಖಾ ಸಂಸ್ಥೆ ಎನ್ನಲಾಗುವುದಿಲ್ಲ. ಪೋಲೀಸರ ಮೇಲೆ…

Read More

ಬೆಂಗಳೂರು : ಉದ್ಯಮಿಯೊಬ್ಬರಿಗೆ ಹಲ್ಲೆ ಮಾಡಿ, ಗನ್ ತೋರಿಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಮಾಜಿ ರೌಡಿಶೀಟರ್ ಸೇರಿ ಇಬ್ಬರನ್ನು ಸದಾಶಿವನಗರ ಠಾಣೆ ಪೊಲೀಸರು ಬ್ರೆಸ್ಟ್ ಮಾಡಿದ್ದರು. ಆದರೆ ಇದೀಗ ಹೈಕೋರ್ಟ್ ಫೈಟರ್ ರವಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಹೌದು ಉದ್ಯಮಿ ಒಬ್ಬರಿಗೆ ಫೈಟರ್ ಅಭಿ ಗನ್ ತೋರಿಸಿ ಬೆದರಿಕೆ ಹಾಕಿದ್ದ. ಈ ವಿಚಾರವಾಗಿ ಉದ್ಯಮಿ ಸೋಮಶೇಖರ್ ಎನ್ನುವವರು ಸದಾಶಿವನಗರ ಠಾಣೆಗೆ ದೂರು ನೀಡಿದ್ದರು.ಈ ಒಂದು ಊರಿನ ಅನ್ವಯ ಫೈಟರ್ ರವಿ ಹಾಗೂ ಆತನ ಗನ್ ಮ್ಯಾನ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಬಳಿಕ ಪೊಲೀಸರು ನಾಲ್ಕು ದಿನ ತೆಗೆದುಕೊಂಡಿದ್ದು ಇಂದು ಫೈಟರ್ ರವಿ ಪೊಲೀಸ್ ಕಸ್ಟಡಿ ಅಂತ್ಯವಾಗಿದೆ. ಹಾಗಾಗಿ ಹೈಕೋರ್ಟ್ ಕೂಡ ಫೈಟರ್ ಅವರಿಗೆ ಶರತ್ತು ಬದ್ಧ ಜಾಮೀನು ನೀಡಿದೆ. ಘಟನೆ ಹಿನ್ನೆಲೆ? ದೂರುದಾರ ಉದ್ಯಮಿ ಸೋಮಶೇಖರ್ ಅವರು ಪರಿಚಿತ ಶ್ರೀಕಾಂತ್ ಎಂಬುವವರಿಗೆ ೭೫ ಲಕ್ಷ ರೂ. ಸಾಲ ನೀಡಿದ್ದರು. ಈ ಸಾಲ ವಾಪಾಸ್ ನೀಡುವಂತೆ ಸೋಮಶೇಖರ್ ಆಗಾಗ…

Read More

ಚಾಮರಾಜನಗರ : ನೆರೆಹೊರೆ ಮನೆಯವರ ಮಾನಸಿಕ ಕಿರುಕುಳದಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಚನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ. ಹೌದು ಮೊಬೈಲ್ ಗೆ ಬರುತ್ತಿದ್ದ ಮೆಸೇಜ್ ವಿಷಯದಲ್ಲಿ ಪಕ್ಕದ ಮನೆಯವರ ಮಾನಸಿಕ ಕಿರುಕುಳದಿಂದ ಮನನೊಂದು ಮನೆ ಬಾಗಿಲಿಗೆ ನೊರೆ ಹೊರೆಯವರ ಹೆಸರು ಬರೆದು ಕವನ (24) ಎನ್ನುವ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಾಮರಾಜನಗರ ಜಿಲ್ಲೆಯ ಚೆನ್ನಮಲ್ಲಿಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಬಾಗಿಲಿಗೆ ಅಂಟಿಸಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಿರುಕುಳ ಮತ್ತು ಅವಮಾನಕ್ಕೆ ನೊಂದು ಕವನ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನನ್ನ ಮಗಳ ಸಾವಿಗೆ ವೃಷಬೇಂದ್ರೆ ಇವರ ಪತ್ನಿ ಕವಿತಾ ಮತ್ತು ಮಕ್ಕಳಾದ ಕಾವೇರಿ ಮತ್ತು ಕೀರ್ತನ ಕಾರಣರಾಗಿದ್ದಾರೆ ನನ್ನ ಮಗಳು ಡೆತ್ ನೋಟ್ ಮತ್ತು ಮನೆಯ ಬಾಗಿಲನ ಮೇಲು ತನ್ನ ಸಾವಿಗೆ ಈ ನಾಲ್ವರು ಕಾರಣ ಎಂದು ಬರೆದಿದ್ದಾಳೆ ಎಂದು ಮೃತಳ ತಾಯಿ ಗಾಯತ್ರಿ ದೂರಿನಲ್ಲಿ ತಿಳಿಸಿದ್ದಾರೆ. ಘಟನೆ ಸಂಬಂಧ ಕೇಸು…

Read More

ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ ಸಾಲು ಸಾಲು ಅಪಘಾತವಾಗುತ್ತಿದ್ದು, ವಾಹನ ಚಾಲಕರ ಹಾಗೂ ಬೈಕ್ ಸವಾರರ ನಿರ್ಲಕ್ಷತನದಿಂದಲೇ ಈ ಒಂದು ಅಪಘಾತಗಳು ಸಂಭವಿಸುತ್ತಿವೆ. ಇದೀಗ ಬೆಂಗಳೂರು ಜಿಲ್ಲೆಯ ಯಲಹಂಕ ತಾಲೂಕಿನ ಹೊನ್ನೇನಹಳ್ಳಿ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇದೀಗ ವರದಿಯಾಗಿದೆ. ಅಪಘಾತದಲ್ಲಿ ಮೃತ ಯುವಕರನ್ನು ಪ್ರೆಸಿಡೆನ್ಸಿ ವಿವಿ ಬಿಬಿಎ ವಿದ್ಯಾರ್ಥಿ ತೇಜಸ್ (20), ಪವನ್ (21) ಎಂದು ತಿಳಿದುಬಂದಿದೆ. ಎರಡು ಬೈಕ್ ಗಳ ಡಿಕ್ಕಿಯ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ವಿಶ್ವನಾಥಪುರ ಗ್ರಾಮದ ಪವನ್ ಮತ್ತು ಹಿಂದೂಪುರ ಮೂಲದ ತೇಜಸ್ ಮೃತಪಟ್ಟಿದ್ದಾರೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.

Read More

ಹುಬ್ಬಳ್ಳಿ : ಕಳೆದ ಹಲವು ದಿನಗಳ ಹಿಂದೆ ಬೆಂಗಳೂರಲ್ಲಿ ಟೆಕ್ಕಿ ಅತುಲ್ ಸುಭಾಷ್ ಪತ್ನಿಯ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಒಂದು ಘಟನೆಗೆ ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು. ಇದೀಗ ಹುಬ್ಬಳ್ಳಿಯಲ್ಲಿ ಕೂಡ ಅಂತಹದ್ದೇ ಘಟನೆ ನಡೆದಿದ್ದು ಪೀಟರ್ ಎನ್ನುವ ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಹೌದು ಹೆಂಡತಿಯ ಕಿರುಕುಳ ತಾಳಲಾರದೆ ಪತಿ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ. ಡೆತ್‌ನೋಟ್‌ ಬರೆದಿಟ್ಟು ಪೀಟರ್‌ ಎನ್ನುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಪೀಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಡೆತ್ ನೋಟ್ ನಲ್ಲಿ ನನ್ನನ್ನು ಕ್ಷಮಿಸಿ ನನ್ನ ಹೆಂಡತಿ ನನ್ನ ಸಾವನ್ನು ಬಯಸುತ್ತಿದ್ದಾಳೆ ಎಂದು ತಂದೆಯ ಹೆಸರನ್ನು ಉಲ್ಲೇಖಿಸಿ ಡೆತ್ ನೋಟ್ ಬರೆದಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡತಿದ್ದ ಪೀಟರ್ ಹಾಗೂ ಆತನ ಪತ್ನಿ ಪಿಂಕಿ ನಡುವೆ ಕಳೆದ ಕೆಲವು ದಿನಗಳಿಂದ ಜಗಳ…

Read More

ಬೆಂಗಳೂರು : ಇತಿಗೆ ಬೆಂಗಳೂರಿನಲ್ಲಿ ಆಕಸ್ಮಿಕವಾಗಿ ಅಗ್ನಿ ದುರಂತಗಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಬೆಂಗಳೂರಿನ ರಾಜಾಜಿನಗರದ ರಾಜಕುಮಾರ ರಸ್ತೆಯಲ್ಲಿರುವ ಹೋಂಡಾ ಶೋ ರೂಮ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಇಡೀ ಶೋರೂಂ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಕೂಡಲೇ ಶೋರೂಮ್ನಲ್ಲಿದ್ದ ಸಿಬ್ಬಂದಿಗಳು ಹೊರಗಡೆ ಓಡಿ ಬಂದಿದ್ದು ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಹೋಂಡಾ ಶೋ ರೂಂನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ರಾಜಾಜಿನಗರದ ರಾಜಕುಮಾರ ರಸ್ತೆಯಲ್ಲಿರುವಂತಹ ಪ್ಲಾನೆಟ್ ಹೋಂಡಾ ಶೋ ರೂಮ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯಿಂದ ಪ್ಲಾನೆಟ್ ಹೋಂಡಾ ಶೋರೂಮ್ ಇದೀಗ ಹೊತ್ತಿ ಉರಿದಿದೆ. ಒಕಿನೋವಾ ಎಲೆಕ್ಟ್ರಿಕ್ ಬೈಕ್ ಶೋರೂಮ್ ನಲ್ಲಿ, ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಇರುವ ಶಂಕೆ ವ್ಯಕ್ತವಾಗಿದೆ. ಸುಮಾರು 30ಕ್ಕೂ ಹೆಚ್ಚು ಬೈಕ್ ಗಳು ಅಲ್ಲಿ ಇದ್ದವು ಎನ್ನುವ ಮಾಹಿತಿ ದೊರೆತಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.ಶೋ ರೂಂ…

Read More

ಚಿಕ್ಕಮಗಳೂರು : ಚಿಕ್ಕಮಂಗಳೂರಿನಲ್ಲಿ ಮಂಗನ ಕಾಯಿಲೆ ಸೋಂಕು ಹೆಚ್ಚುತ್ತಿದ್ದು ಇದೀಗ ಮತ್ತಿಬ್ಬರಿಗೆ ಮಂಗನ ಕಾಯಿಲೆ ರೋಗ ದೃಢವಾಗಿದ್ದು, ಇದುವರೆಗೂ ಒಟ್ಟು 6 ಜನರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಜಿಲ್ಲೆಯ ಎನ್​​ಆರ್ ​ಪುರ ತಾಲೂಕಿನ ಮೂವರಲ್ಲಿ, ಕೊಪ್ಪ ತಾಲೂಕಿನ ಇಬ್ಬರಲ್ಲಿ ಮತ್ತು ಚಿಕ್ಕಮಗಳೂರು ತಾಲೂಕಿನ ಓರ್ವನಲ್ಲಿ ಮಂಗನಕಾಯಿಲೆ ರೋಗ ಕಾಣಿಸಿಕೊಂಡಿದೆ. ಮಂಗನಕಾಯಿಲೆ ಚಿಕಿತ್ಸೆಗೆಂದು ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಕೆಎಫ್​ಡಿ ವಾರ್ಡ್ ತೆರೆದಿದೆ. ಆರೋಗ್ಯ ಇಲಾಖೆಯಿಂದ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು, ಗ್ರಾಮಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯ ಪ್ರದೇಶಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಅಧಿಕಾರಿಗಳು ಸೂಚನೆ ನೀಡುತ್ತಿದ್ದಾರೆ. ಕಳೆದ‌ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಕಾಯಿಲೆ ಕಾಣಿಸಿಕೊಂಡು ನಾಲ್ವರನ್ನು ಬಲಿ ಪಡೆದಿತ್ತು. ಕಾಡಂಚಿನ ತಾಲೂಕುಗಳಾದ ಚಿಕ್ಕಮಗಳೂರು, ಕೊಪ್ಪ, ಎನ್​ಆರ್​ಪುರ, ಶೃಂಗೇರಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ತನ್ನ ರುದ್ರರೂಪ ತಾಳುವ ಮುನ್ನ ಅರೋಗ್ಯ ಇಲಾಖೆ ಮಂಗನ ಕಾಯಿಲೆ ಅಲರ್ಟ್ ಘೋಷಣೆ ಮಾಡಲಾಗಿದೆ.

Read More