Subscribe to Updates
Get the latest creative news from FooBar about art, design and business.
Author: kannadanewsnow05
ತುಮಕೂರು : ಭಕ್ತರಿಗೆ ತಿಳಿಸದೆ ಮಠದ ಜಮೀನನ್ನು ಮಾರಾಟ ಮಾಡಿದ ಆರೋಪದ ಹಿನ್ನೆಲೆಯಲ್ಲಿ ತುಮಕೂರು ತಾಲೂಕಿನ ಹೆಬ್ಬೂರು ಬಳಿಯಿರುವ ರಾಮೇನಹಳ್ಳಿ ಮಠದ ಶಿವಪಂಚಾಕ್ಷರಿ ಸ್ವಾಮೀಜಿ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದಾರೆ. ಹೌದು ಮಠದ ಉಸ್ತುವಾರಿ ನೋಡಿಕೊಳ್ಳುತ್ತಿರುವುದು ಶಿವ ಪಂಚಾಕ್ಷರಿ ಸ್ವಾಮೀಜಿ. ಮಠದಲ್ಲಿ ಏನೇ ನಿರ್ಧಾರ ಮಾಡಬೇಕೆಂದರೂ ಮಠದ ಭಕ್ತರು , ಗ್ರಾಮಸ್ಥರಿಗೆ ಮಾಹಿತಿ ನೀಡಬೇಕು. ಆದರೆ ಸ್ವಾಮೀಜಿ ಗ್ರಾಮಸ್ಥರಿಗೆ ತಿಳಿಯದಂತೆ ಮಠಕ್ಕೆ ಸೇರಿದ ಹತ್ತಾರು ಎಕರೆ ಜಮೀನು ಮಾರಾಟ ಮಾಡಿರುವ ಆರೋಪ ಕೇಳಿಬಂದಿದೆ. ಇದನ್ನ ಪ್ರಶ್ನೆ ಮಾಡಿದ ಗ್ರಾಮಸ್ಥರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಅಲ್ಲದೆ ಮಠದೊಳಗೆ ಸಹೋದರನ ಕುಟುಂಬಸ್ಥರು ಕರೆತಂದು ಇಟ್ಟುಕೊಂಡಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಯಾರನ್ನ ಕೇಳಿ ಮಠದ ಜಮೀನು ಮಾರಾಟ ಮಾಡಿದ್ದೀರಿ, ಯಾರನ್ನ ಕೇಳಿ ಕುಟುಂಬಸ್ಥರನ್ನು ಮಠದೊಳಗೆ ಕರೆತಂದಿದ್ದೀರಿ? ಇದೇನು ನಿಮ್ಮ ಸ್ವಂತ ಆಸ್ತಿಯೇನು ಎಂದು ಗ್ರಾಮಸ್ಥರು ಪ್ರಶ್ನೆ ಮಾಡಿದ್ದಾರೆ. ಇದರಿಂದ ಕೋಪಗೊಂಡು ಗ್ರಾಮಸ್ಥರ ವಿರುದ್ಧವೇ ಸ್ವಾಮೀಜಿ ಅವಾಚ್ಯವಾಗಿ ನಿಂದಿಸಿದ್ದಾರೆಂದು ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ವಿಷಯ ತಿಳಿದು ಕೂಡಲೇ ಘಟನಾ ಸ್ಥಳಕ್ಕೆ…
ಕಲಬುರ್ಗಿ : ವಕ್ಫ್ ವಿವಾದ ರಾಜ್ಯದಲ್ಲಿ ತಾರಕಕ್ಕೆ ಏರಿದ್ದು, ನಾಳೆ ಕೋಲಾರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಅಲ್ಲದೆ, ಈ ನಡುವೆ ವಕ್ಫ್ ಕಾಯ್ದೆ ತಿದ್ದುಪಡಿಗೆ ಬಿಜೆಪಿ ಆಗ್ರಹಿಸಿದ್ದು, ನವೆಂಬರ್ 6 ರಂದು ರಾಜ್ಯಕ್ಕೆ ಕೇಂದ್ರದಿಂದ ವಿಶೇಷ ತಂಡ ಕೂಡ ಭೇಟಿ ನೀಡುವ ಸಾಧ್ಯತೆ ಇದೆ. ಇದರ ಬೆನ್ನಲ್ಲೆ ಸಚಿವ ಜಮೀರ್ ಅಹ್ಮದ್ ಇಂದು ನಿನ್ನೆದಲ್ಲ ಇದು ಸ್ವಾತಂತ್ರಕ್ಕೂ ಮೊದಲೇ ಇದೆ ಎಂದು ಹೇಳಿಕೆ ನೀಡಿದ್ದಾರೆ. ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಕೇಂದ್ರ ಏನು ಬೇಕಾದರೂ ತರಲಿ. ತಂದ ಬಳಿಕ ಮುಂದೆ ಏನು ಮಾಡಬೇಕೋ ಅದನ್ನ ಮಾಡುತ್ತೇವೆ.ಆದರೆ ವಕ್ಫ್ ಇಂದು ನಿನ್ನೆಯದಲ್ಲ ಸ್ವಾತಂತ್ರ್ಯಕ್ಕೂ ಮೊದಲೇ ವಕ್ಫ್ ಇದೆ ಎಂದು ತಿಳಿಸಿದರು. ಮುಂದುವರೆದು ವಕ್ಫ್ ಬಳಿ ಇರುವುದು ಸರ್ಕಾರ ಕೊಟ್ಟ ಜಮೀನಲ್ಲ. ಈ ಕುರಿತು ಹಲವರಿಗೆ ತಪ್ಪು ಕಲ್ಪನೆ ಇದೆ. ವಕ್ಫ್ ಎಂದರೆ ಅದು ಸರ್ಕಾರವೇ ಅದಕ್ಕೆ ಕೊಟ್ಟ ಜಮೀನು ಎಂದುಕೊಂಡಿದ್ದಾರೆ. ಆದರೆ…
ಚಿತ್ರದುರ್ಗ : ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ರೈತರಿಗೆ ನೀಡಿದ ನೋಟಿಸ್ ಗಳನ್ನು ಹಿಂಪಡೆಯಿರಿ ಎಂದು ಖಡಕ್ ಆಗಿ ಸೂಚನೆ ನೀಡಿದ್ದಾರೆ. ಇದೀಗ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಷ್ಟಕ್ಕೆಲ್ಲ ಮೂಲ ಕಾರಣಿಕರ್ತರಾದ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ರಾಜ್ಯದಿಂದ ಗಡಿಪಾರು ಮಾಡಿದರೆ ಒಳ್ಳೆಯದಾಗುತ್ತೆ ಎಂದು ಅಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬಿ ವೈ ವಿಜಯೇಂದ್ರ ಅವರು, ಜಮೀರ್ ಅಹ್ಮದ್ ಸಂವಿಧಾನದ ಬಗ್ಗೆ ಮಾತಾಡುತ್ತಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಅಧಿಕಾರಿಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ದಬ್ಬಾಳಿಕೆ ಮಾಡಿ ರೈತರ ಜಮೀನು, ಮಠಮಾನ್ಯಗಳ ಆಸ್ತಿ ಕಬಳಿಕೆ ಮಾಡುತ್ತಿದ್ದಾರೆ. ಜಮೀರ್ ಅಹ್ಮದ್ ಭೂಕಬಳಿಕೆ ಕೆಲಸ ಮಾಡುತ್ತಿದ್ದಾರೆ. ಜಮೀರ್ ಅಹ್ಮದರನ್ನು ಕೂಡಲೇ ಗಡಿಪಾರು ಮಾಡಿದರೆ ರಾಜ್ಯಕ್ಕೆ ಒಳಿತಾಗುತ್ತೆ. ಸಚಿವ ಜಮೀರ್ ಅಹಮದ್ ಎಲ್ಲವನ್ನು ಸೃಷ್ಟಿ ಮಾಡುತ್ತಿದ್ದಾರೆ. ಶಾಂತಿಯುತ ರಾಜ್ಯದಲ್ಲಿ ಮಂತ್ರಿಯಿಂದ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೂಡ ವಾಗ್ದಾಳಿ ನಡೆಸಿದ…
ಮಂಡ್ಯ : ಸದ್ಯಕ್ಕೆ ರಾಜ್ಯದಲ್ಲಿ ವಕ್ಫ್ ವಿವಾದ ನಿಲ್ಲುವಂತೆ ಕಾಣುತ್ತಿಲ್ಲ. ಈಗಾಗಲೇ ಬಿಜೆಪಿ ಕೋಲಾರದಲ್ಲಿ ನಾಳೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಇನ್ನೊಂದೆಡೆ ಬಿಜೆಪಿ ಸಂಸದ ಇದೇ ವಿಚಾರವಾಗಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಸರ್ಕಾರಿ ಶಾಲೆಯ ಒಂದು ವಕ್ಫ್ ಆಸ್ತಿಗೆ ಸೇರಿದ್ದು ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ. ಹೌದು ಸರ್ಕಾರಿ ಶಾಲೆಯ ಮೇಲು ವಕ್ಫ್ ಬೋರ್ಡ್ ಕಣ್ಣು ಹಾಕಿದೆ ಎಂಬ ಆರೋಪ ಕೇಳಿ ಬಂದಿದೆ. ಸರ್ಕಾರಿ ಶಾಲೆ ಜಾಗ ಕೂಡ ಇದೀಗ ವಕ್ಫ್ ಆಸ್ತಿ ಎಂದು ನಮೂದಗಿರುವುದು ಬೆಳಕಿಗೆ ಬಂದಿದೆ. ಶ್ರೀರಂಗಪಟ್ಟಣ ತಾಲೂಕಿನ ಚಂದಗಾಲು ಗ್ರಾಮದಲ್ಲಿ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗ್ರಾಮ ಸರ್ವೆ ನಂಬರ್ 215ರ 30ಗುಂಟೆ ಜಮೀನಿನಲ್ಲಿ ಈ ಒಂದು ಸರ್ಕಾರಿ ಶಾಲೆ ಇದೆ. ಶಾಲೆಯ ಜಾಗವನ್ನು ವಕ್ಫ್ ಆಸ್ತಿ ಎಂದು ಬದಲಾವಣೆ ಮಾಡಲಾಗಿದೆ. 2015 ರಲ್ಲಿ ಶಾಲೆ ಜಾಗ…
ಉಡುಪಿ : ರಾಜ್ಯದಲ್ಲಿ ದಿನವೊಂದಕ್ಕೆ ಹಗರಣಗಳು ಬಯಲಾಗುತ್ತಲೆ ಇವೆ. ಇಷ್ಟು ದಿನ ವಾಲ್ಮೀಕಿ, ಮುಡಾ ಆಯ್ತು, ಇದೀಗ ಬಿಜೆಪಿಯ ಸರದಿ. ಉಡುಪಿಯಲ್ಲಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಬ್ಲಾಕ್ ಮನಿ ವೈಟ್ ಮಾಡುವ ಸಲುವಾಗಿ ಗ್ರಾಹಕರಿಗೆ ಕೋಟ್ಯಾಂತರ ರೂಪಾಯಿ ಹಣ ಸಾಲದ ರೂಪದಲ್ಲಿ ನೀಡಿ ಬಡ್ಡಿಗೂ ಮೀರಿ ಹಣ ವಸೂಲಿ ಮಾಡಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೌದು ಉಡುಪಿಯ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದ್ದು, ಉಡುಪಿಯ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯಿಂದ ವಂಚನೆ ಎಸಿಗಿರುವ ಆರೋಪ ಕೇಳಿ ಬಂದಿದೆ. ಬ್ಲಾಕ್ ಮನಿಯನ್ನು ವೈಟ್ ಮಾಡಲು ಸಾಲ ನೀಡಿದ ಆರೋಪ ಕೇಳಿ ಬಂದಿದೆ. ಉಡುಪಿಯಲ್ಲಿ ಬ್ಲಾಕ್ ಟು ವೈಟ್ ಲೋನ್ ದೋಖಾ ಕೋಟಿಗಟ್ಟಲೆ ಹಣ ಸಾಲದ ರೂಪದಲ್ಲಿ ಹಂಚಲಾಗಿತ್ತ ಎಂಬ ಆರೋಪ ಕೇಳಿ ಬಂದಿದೆ. ಶಾಸಕ ಯಶ್ ಪಾಲ್ ಸುವರ್ಣ ಅವರು ಅಧ್ಯಕ್ಷರಾಗಿರುವ ಈ ಒಂದು ಮಹಾಲಕ್ಷ್ಮಿ…
ಒಬ್ಬರ ಜೀವನದಲ್ಲಿ ಹಣಕಾಸಿನ ಸಮಸ್ಯೆಗಳಿದ್ದರೆ, ಅವರು ಕೆಲವು ಸಂದರ್ಭಗಳಲ್ಲಿ ಕಟ್ಟುನಿಟ್ಟಾಗಿ ಇತರರಿಂದ ಸಾಲವನ್ನು ತೆಗೆದುಕೊಳ್ಳುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ಅವರು ಸಾಲವನ್ನು ಮರುಪಾವತಿಸಲು ಪ್ರಯತ್ನಗಳನ್ನು ಮಾಡಿದರೆ, ಆದರೆ ಆ ಪ್ರಯತ್ನಗಳಲ್ಲಿ ಯಶಸ್ವಿಯಾಗಲು ಸಾಧ್ಯವಾಗದಿದ್ದರೆ ಅಥವಾ ಸಾಲವನ್ನು ಪಾವತಿಸಲು ಯಾವುದೇ ಆರ್ಥಿಕ ಪ್ರಗತಿಯಿಲ್ಲದಿದ್ದರೆ, ಅವರು ಹಲವಾರು ರೀತಿಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಸಮಸ್ಯೆಗಳಿಂದ ಮುಕ್ತಿ ಹೊಂದಲು ಬಯಸುವವರು ಮೈತ್ರೇಯ ಮುಕುರ್ತವನ್ನು ಬಳಸಬೇಕು. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ನವೆಂಬರ್ ಮೂರನೇ ತಾರೀಖಿನಂದು ಬರಬಹುದಾದ ಮೈತ್ರೇಯ ಮುಗುರ್ತದಂದು ಪೂಜಿಸುವುದರಿಂದ ಸಾಲದ ಸಮಸ್ಯೆಗಳು ಹೇಗೆ ಪರಿಹರಿಸಲ್ಪಡುತ್ತವೆ ಎಂಬುದನ್ನು ನಾವು ನೋಡಲಿದ್ದೇವೆ. ಋಣ ಪರಿಹಾರ ಮೈತ್ರೇಯ ಮುಕುರ್ತಮ್ ಮೈತ್ರೇಯ ಮುಹೂರ್ತದ ಪ್ರತಿ ತಿಂಗಳು ಬರುತ್ತದೆ. ಸಾಲವನ್ನು ತೀರಿಸಲು ಸಹಾಯ ಮಾಡುವ ಸಲಹೆ…
ಉಡುಪಿ : ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಪ್ರವಾಸಿಗರ ಬಸ್ ಒಂದು ತೆರಳುತ್ತಿತ್ತು. ಈ ವೇಳೆ ನಸುಕಿನ ಜಾವ ರಸ್ತೆ ಬದಿಗೆ ನಿಂತಿದ್ದ ಲಾರಿಗೆ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ 17 ಪ್ರವಾಸಿಗರಿಗೆ ಗಾಯಗಳಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಲಾರಿಗೆ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದು 17 ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ.ಉದ್ಯಾವರ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಒಂದು ಅಪಘಾತ ನಡೆದಿದೆ. ಪ್ರವಾಸಿಗರ ಬಸ್ ಕೊಲ್ಲೂರು ದೇವಾಲಯಕ್ಕೆ ತೆರಳುತ್ತಿತ್ತು. ನಸುಕಿನ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಪ್ರವಾಸಿಗರ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪ್ರವಾಸಿಗರ ಬಸ್ ನುಜ್ಗುಜ್ಜಾಗಿದೆ ತಕ್ಷಣ ಗಾಯಾಳುಗಳನ್ನ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಲಿ ಪ್ರತಿಪದ, ಬಲಿ ಪಾಡ್ಯಮಿ ಅಥವಾ ಪಾಡ್ವಾವನ್ನು ದೀಪಾವಳಿ ಹಬ್ಬದ ನಾಲ್ಕನೇ ದಿನದಂದು ಆಚರಿಸಲಾಗುತ್ತದೆ. ಇದು ಹಿಂದೂ ಮಾಸವಾದ ಕಾರ್ತಿಕ ಮಾಸದಲ್ಲಿ ಪ್ರಕಾಶಮಾನವಾದ ಚಂದ್ರನ ಶುಕ್ಲ ಪಕ್ಷದ ಹದಿನೈದು ದಿನಗಳ ಮೊದಲ ದಿನವಾಗಿದೆ. ಈ ದಿನವು ವಾಮನ ಅವತಾರದಲ್ಲಿ ರಾಕ್ಷಸ-ರಾಜ ಬಲಿಯ ವಿರುದ್ಧ ಭಗವಾನ್ ವಿಷ್ಣುವಿನ ವಿಜಯವನ್ನು ಸ್ಮರಿಸುವ ದಿನವಾಗಿದೆ. ಹಾಗೆಯೇ ಜಗತ್ತಿಗೆ ರಾಕ್ಷಸ ರಾಜ ಬಲಿಯು ಹಿಂದಿರುಗುವ ಕ್ಷಣವನ್ನು ನೆನಪಿಸುತ್ತದೆ. ಈ ದಿನದಂದು ಶ್ರೀಕೃಷ್ಣನು ಗೋಕುಲದ ನಿವಾಸಿಗಳನ್ನು ಇಂದ್ರನ ಕೋಪದಿಂದ ಮುಕ್ತಗೊಳಿಸಿದನು ಎನ್ನುವ ಕಥೆಯಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ…
ಮೈಸೂರು : ಸೈಟ್ ಅಕ್ರಮವಾಗಿ ಹಂಚಲಾಗಿದೆ ಎಂದು ಈಗಾಗಲೇ ಮುಡಾದಲ್ಲಿ ಬಹುದೊಡ್ಡ ಹಗರಣ ನಡೆದಿದೆ. ಇದರ ಬೆನ್ನಲ್ಲೇ ಇದೀಗ ಮುಡಾದಲ್ಲಿ ಗ್ರಾಹಕರ ಕೋಟ್ಯಾಂತರ ಹಣವನ್ನು ಅಲ್ಲಿನ ಸಿಬ್ಬಂದಿಗಳೇ ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೌದು ಗ್ರಾಹಕರು ಕಟ್ಟುವ ಹಣವನ್ನು ಜೇಬಿಗೆಳಿಸಿದ ಮುಡಾ ನೌಕರರು, ಜನರು ಕಟ್ಟಿದ್ದ ದುಡ್ಡನ್ನೇ ಮುಡಾ ನೌಕರರು ನುಂಗಿದ ಆರೋಪ ಕೇಳಿ ಬಂದಿದೆ. ಖಾತೆ ವರ್ಗಾವಣೆ, ಕಂದಾಯ ವಿವಿಧ ಸೇವೆಗಳಿಗೆ ಕಟ್ಟುವ ಹಣ ಬ್ಯಾಂಕ್ ಚಲನ್ ಸೀಲ್ ಬಳಸಿಕೊಂಡು ಕೋಟ್ಯಾಂತರ ಹಣ ನುಂಗಿದ್ದಾರೆ ಎನ್ನಲಾಗಿದೆ. ಮುಡಾ ನೌಕರರ ಜೊತೆ ಬ್ಯಾಂಕ್ ಸಿಬ್ಬಂದಿ ಕೂಡ ಶಾಮೀಲು ಆಗಿರುವ ಆರೋಪ ಕೇಳಿ ಬಂದಿದೆ. 93 ಪ್ರಕರಣಗಳಲ್ಲಿ ಕೋಟ್ಯಂತರ ರೂಪಾಯಿ ಜಿಬಿ ಕೇಳಿಸಿರುವ ಆರೋಪ ಕೇಳಿ ಬಂದಿದೆ.ಹಣ ಪಾವತಿಸಿ ಎಂದು ಮುಡಾ ಹಣಕಾಸು ವಿಭಾಗದಿಂದ ಪತ್ರ ಬಂದಿದೆ. ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರಿಗೆ ಸಿಬ್ಬಂದಿಗಳು ಪತ್ರ ಬರೆದಿದ್ದಾರೆ. 93 ಚಲನ್ ಗಳಲ್ಲಿ 92 ಚಲನ ಬ್ಯಾಂಕ್ ಖಾತೆಗೆ ಬಂದಿಲ್ಲ…
ಬೆಂಗಳೂರು : ರಾಜ್ಯದಲ್ಲಿ ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ರೈತರಿಗೆ ಕೊಟ್ಟಿದ್ದ ನೋಟಿಸ್ ಗಳನ್ನು ಕೂಡಲೇ ಹಿಂಪಡೆಯಿರಿ ಎಂದು ಖಡಕ್ ಸೂಚನೆ ನೀಡಿದ್ದಾರೆ. ಆದರೆ ಇಷ್ಟಕ್ಕೆ ತಣ್ಣಗಾಗದ ಬಿಜೆಪಿಯು ಈ ಕುರಿತಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮುಂದಾಗಿದ್ದಾರೆ ಎನ್ನಲಾಗಿದೆ. ಹೌದು ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಅವರು ಹೈ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸೋಕೆ ಸಿದ್ಧತೆ ಮಾಡಿಕೊಂಡಿದ್ದರೆ ಎನ್ನಲಾಗಿದೆ. ಸೋಮವಾರ ತೇಜಸ್ವಿ ಸೂರ್ಯ ರಿಟ್ ಅರ್ಜಿ ಸಲ್ಲಿಸಲಿದ್ದಾರೆ. ವಕ್ಫ್ ಕಾಯ್ದೆ ತಿದ್ದುಪಡಿ ಕುರಿತ ಜೆಪಿಸಿ ಸದಸ್ಯರಾಗಿರುವ ತೇಜಸ್ವಿ ಸೂರ್ಯ ಅವರು ರೈತರ ಪಹಣಿಯಲ್ಲಿ ವಕ್ಫ್ ಎಂದು ನೋಂದಣಿ ಮಾಡಿರುವುದು ಹಾಗೂ ನಾವು ರೈತರಿಗೆ ನೋಟಿಸ್ ನೀಡಿರುವ ವಿಚಾರವಾಗಿ ರಿಟ್ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ನವೆಂಬರ್ 6 ರಂದು ರಾಜ್ಯಕ್ಕೆ JPC ಭೇಟಿ! ರಾಜ್ಯದಲ್ಲಿ ಭುಗಿಲೆದ್ದ ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ನವೆಂಬರ್…














