Author: kannadanewsnow05

ಹುಬ್ಬಳ್ಳಿ : ದೇಶದಲ್ಲಿ ಕಾಂಗ್ರೆಸ್ ಅಯೋಮಯ ಸ್ಥಿತಿಗೆ ತಲುಪಿದೆ. ದೆಹಲಿ ವಿಧಾನಸಭೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಲಿದೆ. ಕಾಂಗ್ರೆಸ್ ಪ್ರಾದೇಶಿಕ ಪಕ್ಷ ಆಗುವ ಹಂತಕ್ಕೆ ತಲುಪಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಒಳ ಜಗಳದಿಂದ ಆಡಳಿತದ ಮೇಲೆ ಪರಿಣಾಮ ಬೀರಿದೆ. ಈ ಸರ್ಕಾರದಲ್ಲಿ ಅನೇಕ ಭ್ರಷ್ಟಾಚಾರ ಹಗರಣಗಳು ನಡೆಯುತ್ತಿವೆ. ಸರ್ಕಾರ ಆಡಳಿತ ಯಂತ್ರದ ನಿಯಂತ್ರಣ ಕಳೆದುಕೊಂಡಿದೆ. ಕೆಎಸ್ಆರ್ಟಿಸಿ ಅಂಗ ಸಂಸ್ಥೆಗಳು ಬಾಗಿಲು ಹಾಗೂ ಹಂತಕ್ಕೆ ಬಂದಿವೆ. ಅಲ್ಲದೆ ಕಲಬುರ್ಗಿಯಲ್ಲಿ ಗುತ್ತಿಗೆದಾರನ ಆತ್ಮಹತ್ಯೆಯಾಗಿದೆ. ಬಸ್ ಅದರ ಏರಿಸಿ ಜನರ ಮೇಲೆ ಹೊರೆ ಹೊರೆಸಿದ್ದಾರೆ ಎಂದರು. ಡಿಸಿಎಂ ಡಿಕೆ ಶಿವಕುಮಾರ್ ಶತ್ರುಸಂಹಾರ ಮಾಡುತ್ತಾರೆ. ಹಾಗಾದರೆ ಅವರ ಪ್ರಕಾರ ಅವರ ಶತ್ರುಗಳು ಯಾರು? ರಾಜಕಾರಣದಲ್ಲಿ ಯಾರು ಶತ್ರುಗಳಲ್ಲ ಎಲ್ಲರೂ ಪ್ರತಿಸ್ಪರ್ಧಿಗಳು. ಶತ್ರುಗಳು ಯಾರು ಅಂತ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಬೇಕು. ಸಿಎಂ ಸಿದ್ದರಾಮಯ್ಯನವರ, ಡಾ. ಜಿ ಪರಮೇಶ್ವರರಾ?…

Read More

ಬೆಂಗಳೂರು : ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂದು ನಿನ್ನೆ ಪ್ರಿಯಕರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಇದರಿಂದ ಮನನೊಂದ ವಿವಾಹಿತೆ ಪ್ರಿಯತಮೆ ಒಬ್ಬಳು ಇಂದು ತಾನು ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಮೃತ ಹಳ್ಳಿಯಲ್ಲಿ ನಡೆದಿದೆ. ಹೌದು ಅಮೃತಹಳ್ಳಿಯ ಶ್ರೀರಾಮಪುರದಲ್ಲಿ ಪ್ರಿಯತಮೆ ದಿಲ್ಶಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿನ್ನೆ ಆಕೆಯ ಪ್ರಿಯಕರ ಜಾನ್ಸನ್ (25) ಆತ್ಮಹತ್ಯೆ ಮಾಡಿಕೊಂಡಿದ್ದು ಇಂದು ದಿಲ್ಶಾದ್ (23) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದಿಲ್ಶಾದ್ ಈಗಾಗಲೇ ಮದುವೆಯಾಗಿತ್ತು. ಜಾನ್ಸನ್ಗೆ ಮದುವೆಯಾಗಿರಲಿಲ್ಲ. ಆದರೂ ಕೂಡ ಪರಸ್ಪರವಾಗಿ ಜಾನ್ಸನ್ ಹಾಗೂ ದಿಲ್ಶಾದ್ ಪ್ರೀತಿಸುತ್ತಿದ್ದರು. ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂದು ನಿನ್ನೆ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದ. ರಾಜೇನಹಳ್ಳಿಯಲ್ಲಿ ನಿನ್ನೆ ಪ್ರಿಯಕರ ಜಾನ್ಸನ್ ನೇಣಿಗೆ ಶರಣಾಗಿದ್ದ. ಜಾನ್ಸನ್ ಸಾವಿನ ವಿಚಾರ ತಿಳಿದು ಇಂದು ದಿಲ್ಶಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಕುರಿತು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಮುಡಾದಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ತಮ್ಮ ಮಗಳು ಅಳಿಯನ ಹೆಸರಲ್ಲಿ ಅಕ್ರಮ ಸೈಟ್ ಖರೀದಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಇಂದು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಇದೇ ವಿಚಾರವಾಗಿ ಮೈಸೂರಿನಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು, ಸ್ನೇಹಮಹಿ ಕೃಷ್ಣ ಅವರಿಗೆ ಯಶಸ್ಸು ಸಿಗಲಿ ಎಂದು ತಿಳಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ನಮ್ಮ ಹುಡುಗನೇ, ಒಳ್ಳೆ ಕೆಲಸ ಮಾಡುತ್ತಿದ್ದಾನೆ. ರಾಜಕಾರಣಿಗಳು ಅಧಿಕಾರಿಗಳು ತಪ್ಪು ಮಾಡಿದ್ದರೆ ಶಿಕ್ಷೆ ಆಗಬೇಕು ಅಂತ ಹೇಳುತ್ತಾನೆ. ತಪ್ಪು ಮಾಡದೆ ಇದ್ದರೂ ಕೂಡ ಎಚ್ಚರಿಕೆಯಿಂದ ಹೋಗಲಿ ಎನ್ನುವ ರೀತಿ ಕೆಲಸ ಮಾಡುತ್ತಿದ್ದಾನೆ. ಅವನಿಗೆ ಯಶಸ್ಸು ಸಿಗಲಿ ಎಂದು ಶುಭ ಹಾರೈಸುತ್ತೇನೆ ಎಂದರು. ನನ್ನ ಮಗಳು ಅನ್ನಪೂರ್ಣ ಅಳಿಯ ವಿಶ್ವೇಶ್ವರಯ್ಯ ಅವರು ನಿವೇಶನ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ನಾನು ನೋಡಿರಲಿಲ್ಲ ಈಗ ತೋರಿಸಿದ್ದಾರೆ ಯಾರು 50:50 ಅನುಪಾತದಲ್ಲಿ ಜಮೀನ್ದಾರರು ಸೈಟ್ ತೆಗೆದುಕೊಂಡಿದ್ದಾರೋ ಅವರಿಂದ ವೇಟ್ ಮನಿ ಕೊಟ್ಟು ಖರೀದಿಸಿದ್ದಾರೆ…

Read More

ಚಿಕ್ಕಮಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಡಿನ್ನರ್ ಪಾಲಿಟಿಕ್ಸ್ ಭಾರಿ ಸದ್ದು ಮಾಡುತ್ತಿದ್ದು, ಇದರ ನಡುವೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಶಿವಕುಮಾರ್ ಅವರು ಮುಂದಿನ ಸಿಎಂ ಎಂದು ಘೋಷಣೆ ಕೂಗಿದ ಘಟನೆ ಜರುಗಿತು. ಇಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬೆ ಪೀಠಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಠದಲ್ಲಿ ಆಯೋಜನೆ ಮಾಡಿದಂತಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕರ್ತರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಜೈ ಕಾಂಗ್ರೆಸ್ ಪಕ್ಷಕ್ಕೆ ಜೈ ಎಂದು ಘೋಷಣೆ ಕೂಗಿದರು. ಇದಕ್ಕೂ ಮುನ್ನ ಮೆಣಸೆ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಯಾರ ಬೆಂಬಲವೂ ಕೂಡ ಬೇಡ ಯಾವ ಘೋಷಣೆಯೂ ಬೇಡ. ಹೈಕಮಾಂಡ್ ಸೂಚಿಸಿದಂತೆ ನಾವು ನಡೆದುಕೊಳ್ಳುತ್ತೇವೆ. ನಮ್ಮ ಸರ್ಕಾರ ಜನರ ಪರವಾಗಿ ಕೆಲಸ ಮಾಡುತ್ತದೆ.ಪಕ್ಷಕ್ಕಾಗಿ ನಾನು ಕೆಲಸ ಮಾಡುತ್ತೇನೆ ಪ್ರತಿಫಲ ನೀಡುವುದು ದೇವರಿಗೆ ಬಿಟ್ಟಿರುವ ವಿಷಯ ಎಂದು ತಿಳಿಸಿದರು.

Read More

ಚಿಕ್ಕಮಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಡಿನ್ನರ್ ಪಾಲಿಟಿಕ್ಸ್ ಭಾರಿ ಸದ್ದು ಮಾಡುತ್ತಿದ್ದು, ಒಂದು ಕಡೆಗೆ, ಎಸ್ಸಿ, ಎಸ್ ಟಿ ಸಮುದಾಯದ ಅನ್ಯಾಯ ಆಗುತ್ತಿರುವ ಕುರಿತು ಹಲವು ಕಾಂಗ್ರೆಸ್ ನಾಯಕರು ಸಭೆ ನಡೆಸುತ್ತಿದ್ದರೆ, ಇನ್ನೊಂದು ಕಡೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ದೇವರ ಮೊರೆ ಹೋಗಿದ್ದಾರೆ. ಇದೀಗ ರಾಜಕೀಯದಲ್ಲಿ ಯಾವುದೇ ತಿರುವಿಲ್ಲ ಐದು ವರ್ಷಗಳ ಕಾಲ ನಮ್ಮದೇ ಸರ್ಕಾರ ಇರುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಬಳಿಯ ಮೆಣಸೆ ಹೆಲಿಪ್ಯಾಡ್ ಬಳಿ ಡಿಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ರಾಜಕೀಯದಲ್ಲಿ ಯಾವುದೇ ತಿರುವಿಲ್ಲ. ಜನರು ಅಧಿಕಾರ ನೀಡಿದ್ದಾರೆ. ಐದು ವರ್ಷ ನಮ್ಮ ಸರ್ಕಾರನೇ ಇರುತ್ತದೆ.ನಮ್ಮ ಸರ್ಕಾರ ಜನರ ಪರವಾಗಿ ಕೆಲಸ ಮಾಡುತ್ತದೆ. ಎಂದು ಡಿಕೆ ಶಿವಕುಮಾರ್ ತಿಳಿಸಿದರು. ಹೈಕಮಾಂಡ್ ಹೇಳಿದಂತೆ ನಾವೆಲ್ಲರೂ ಕೆಲಸ ಮಾಡುತ್ತೇವೆ ನನಗೆ ಯಾರ ಬೆಂಬಲ ಬೇಡ ಯಾರ ಘೋಷಣೆಯು ಬೇಡ. ಪಕ್ಷಕ್ಕಾಗಿ ನಾನು ಕೆಲಸ ಮಾಡುತ್ತೇನೆ. ಪ್ರತಿಫಲ ನೀಡುವುದು…

Read More

ಉತ್ತರಕನ್ನಡ : ಕಳೆದ ಮೂರು ದಿನಗಳ ಹಿಂದೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಜಮೀರ್ ಅಹ್ಮದ್ ದರ್ಗಾವಾಲೆ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಮಿಂಚಿನ ಕಾರ್ಯಚರಣೆ ನಡೆಸಿ ಸಿನಿಮಾ ಸ್ಟೈಲ್ ನಲ್ಲಿ ಒಟ್ಟು 10 ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಜಮೀರ್ ಅಹಮದ್ ದರ್ಗಾ ವಲೆ ಕಿಡ್ನಾಪ್ ಕೇಸ್ ಗೆ ಸಂಬಂಧಪಟ್ಟಂತೆ ಸಿನಿಮಾ ಸ್ಟೈಲಲ್ಲಿ 10 ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 18 ಲಕ್ಷ ರೂಪಾಯಿ ಹಣವನ್ನು ಪೊಲೀಸರು ಇದೆ ವೇಳೆ ಜಪ್ತಿ ಮಾಡಿಕೊಂಡಿದ್ದಾರೆ. ಶಿರಸಿ ಡಿವೈಎಸ್ಪಿ ಗಣೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಚಿಕ್ಕೋಡಿಯಲ್ಲಿ ನಿನ್ನೆ ಬೆಳಿಗ್ಗೆ 5 ಜನರನ್ನು ಅರೆಸ್ಟ್ ಮಾಡಲಾಗಿದ್ದು, ಇನ್ನು ನಿನ್ನೆ ರಾತ್ರಿ ಯಲ್ಲಾಪುರದ ಬಳಿ ಇನ್ನುಳಿದ ಐವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜಮೀರ್ ಅಹ್ಮದ್ ದರ್ಗಾವಾಲೆ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಹಾಗೂ ಹಣವಿದ್ದ ಕಾರು ಪ್ರತ್ಯೇಕವಾಗಿ ಪರಾರಿಯಾಗಿದ್ದರು. ಸಿಕ್ಕ ಆರೋಪಿಗಳ ಮೂಲಕ ಪ್ರಮುಖ ಆರೋಪಿ ಜಾಗ ಪತ್ತೆಯಾಗಿತ್ತು. ಪ್ರಮುಖ ಆರೋಪಿ…

Read More

ಬೆಂಗಳೂರು : ಭ್ರಷ್ಟ ಅಧಿಕಾರಿಗಳನ್ನು ಬಲೆ ಹಾಕುವಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಾಸರಹಳ್ಳಿ ವಲಯ ಕಚೇರಿ ಮೇಲೆ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಯದುಕೃಷ್ಣ ಹೆಸರಿನ ಅಧಿಕಾರಿಯೊಬ್ಬರನ್ನು ಲಂಚದ ದುಡ್ಡು ಸಮೇತ ಬಲೆಗೆ ಕೆಡವಿದ್ದಾರೆ. ಹೌದು ಕಾಮಗಾರಿ ಟೆಂಡರ್ ವಿಭಾಗದಲ್ಲಿ ಎಕ್ಸಿಕ್ಯೂಟಿವ್ ಇಂಜಿನೀಯರ್ ಆಗಿ ಯದುಕೃಷ್ಣ ಕೆಲಸ ಮಾಡುತ್ತಿದ್ದರು. ಈ ವೇಳೆ ಕಚೇರಿಯ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಅವರಿಗೆ ಸೇರಿದಂತಹ ಕಾರಿನಿಂದ ದಾಖಲೆ ಇಲ್ಲದ ಸುಮಾರು 2.6 ಲಕ್ಷ ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದೆ ವೇಳೆ ಯದುಕೃಷ್ಣ ಅವರನ್ನು ವಶಕ್ಕೆ ಪಡೆದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Read More

ಚಿಕ್ಕಮಗಳೂರು : ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಸಿದ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಇದೀಗ ಅನಾಮಧೆಯ ಪತ್ರ ಒಂದು ಬಂದಿದ್ದು, ಪತ್ರದಲ್ಲಿ 15 ದಿನದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕ್ಷಮೆ ಕೇಳದೆ ಹೋದರೆ ನಿನ್ನ ಹತ್ಯೆ ಮಾಡಲಾಗುತ್ತದೆ ಎಂದು ಸಿಟಿ ರವಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ ಎಂದು ತಿಳಿದು ಬಂದಿದೆ. ಹೌದು ಎಂಎಲ್ಸಿ ಸಿಟಿ ರವಿಗೆ ಕೊಲೆ ಬೆದರಿಕೆ ಪತ್ರ 15 ದಿನದೊಳಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕ್ಷಮೆಯಾಚಿಸಿ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಹತ್ಯೆ ಮಾಡುತ್ತೇವೆ ಎಂದು ಚಿಕ್ಕಮಗಳೂರಿನ ಬಸವನಹಳ್ಳಿಯ ಎಂಎಲ್ಸಿ ಸಿಟಿ ರವಿ ನಿವಾಸಕ್ಕೆ ಬೆದರಿಕೆ ಪತ್ರ ಬಂದಿದೆ. ಪತ್ರದ ಕುರಿತು ಇದೀಗ ಬಸವನಹಳ್ಳಿ ಪೊಲೀಸ್ ಠಾಣೆಗೆ ಎಂಎಲ್‌ಸಿ ಸಿಟಿ ರವಿ ಪಿಎ ಚೇತನ್ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಪತ್ರ ಎಲ್ಲಿಂದ ಬಂದಿದೆ ಎಂದು ತನಿಖೆ ಕೈಗೊಂಡಿದ್ದಾರೆ.

Read More

ಹುಬ್ಬಳ್ಳಿ : ಎರಡು ಎಕರೆ ಜಮೀನು ಆಸ್ತಿ ಗಾಗಿ ತಂದೆ ಹಾಗೂ ಮಲತಾಯಿಯನ್ನು ರಾಡ್ ನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಘಟನೆ ನಿನ್ನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ಗಂಗಾಧರಪ್ಪ ಎನ್ನುವವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಗಂಗಾಧರಪ್ಪನನ್ನು ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಿನ್ನೆ ಈ ಒಂದು ಘಟನೆ ನಡೆದಿತ್ತು. ಎರಡು ಎಕೆರೆ ಜಮೀನಿನ ವಿಚಾರವಾಗಿ ಅಪ್ಪ-ಮಗನ ನಡುವೆ ಗಲಾಟೆ ನಡೆದಿತ್ತು. ಆಸ್ತಿ ಬರೆದುಕೊಡಲು ನಿರಾಕರಿಸಿದಕ್ಕೆ ಪಾಪಿ ಮಗ ರಾಡ್ ನಿಂದ ಹೊಡೆದು ಹತ್ಯೆ ಮಾಡಿದ್ದ. ತಂದೆ ಅಶೋಕಪ್ಪ ಹಾಗೂ ಮಲತಾಯಿ ಶಾರದಮ್ಮನನ್ನು ಆರೋಪಿ ಗಂಗಾಧರಪ್ಪ ಕೊಲೆ ಮಾಡಿದ್ದ. ಮನೆಯಲ್ಲಿ ಇಬ್ಬರನ್ನು ಕೊಲೆ ಮಾಡಿ ಗಂಗಾಧರಪ್ಪ ಪರಾರಿಯಾಗಿದ್ದ.ಇದೀಗ ಗಂಗಾಧರಪ್ಪನನ್ನು ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Read More

ಮೈಸೂರು : ಮೈಸೂರಿನ ಕೆಆರ್‌ಎಸ್‌ ತೆರಳುವ ರಸ್ತೆಗೆ ಪ್ರಿನ್ಸಸ್ ರಸ್ತೆ ಎಂಬುದಕ್ಕೆ ಯಾವುದೇ ದಾಖಲೆ ಇಲ್ಲ ಇದಕ್ಕೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವ ವಿಚಾರವಾಗಿ, ನಾನು ಯಾರಿಗೂ ರಸ್ತೆಗೆ ನನ್ನ ಹೆಸರಿಡಿ ಎಂದು ಹೇಳಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು 40 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಯಾರಿಗೂ ನನ್ನ ಹೆಸರಡಿ ಎಂದು ಹೇಳಿಲ್ಲ. ಮೈಸೂರು ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಾಗಲೇ ನಾನು ಬೇಡ ಅಂದೇ. ಡಾಕ್ಟರೇಟ್ ತೆಗೆದುಕೊಳ್ಳುವಷ್ಟು ನನಗೆ ಯೋಗ್ಯತೆ ಇಲ್ಲ. ಆ ರಸ್ತೆಗೆ ಬೇರೆ ಹೆಸರಿದ್ದರೆ ಬದಲಾವಣೆ ಮಾಡುವುದು ಬೇಡ‌. ಹೆಸರಿಡುವ ವಿಚಾರವಾಗಿ ನಾನು ಯಾರ ಜೊತೆ ಚರ್ಚೆಯನ್ನ ಮಾಡಿಲ್ಲ ಎಂದು ಅವರು ಹೇಳಿದರು. ಕಾಂಗ್ರೆಸ್ ಮುಖಂಡರ ವಾದವೇನು? ಕೆಆರ್​ಎಸ್​ ರಸ್ತೆಗೆ ಪ್ರಿನ್ಸಸ್ ರಸ್ತೆ ದಾಖಲೆ ಇಲ್ಲ ಎಂದು ಕಾಂಗ್ರೆಸ್ ಮುಖಂಡರು ವಾದಿಸುತ್ತಿದ್ದಾರೆ. ಆದರೆ, ಪ್ರಿನ್ಸಸ್ ರಸ್ತೆ ಎಂದು ಹೆಸರಿರುವ ನಾಮಫಲಕ ಲಭ್ಯವಾಗಿದೆ. ಯಾದವಗಿರಿ ರೈಲ್ವೆ ಬಡಾವಣೆಯ ಮನೆಗೆ ನಾಮಫಲಕ ಅಳವಡಿಸಲಾಗಿದೆ. ಮನೆ…

Read More