Author: kannadanewsnow05

ಚಿಕ್ಕಮಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಕ್ಸಲರಿಗೆ ಶರಣಾಗತಿ ಆಗುವಂತೆ ಸೂಚಿಸಿದ ಬೆನ್ನಲ್ಲೆ ಕರ್ನಾಟಕದ ನಾಲ್ವರು ಹಾಗೂ ಕೇರಳ, ತಮಿಳುನಾಡಿನ ತಲಾ ಒಬ್ಬೊಬ್ಬರಂತೆ ಒಟ್ಟು ಆರು ಜನ ನಕ್ಸಲರು ನಾಳೆ ಚಿಕ್ಕಮಗಳೂರು ಜಿಲ್ಲಾ ಆಡಳಿತದ ಮುಂದೆ ಶರಣಾಗಲಿದ್ದಾರೆ. ಹೌದು ಕರ್ನಾಟಕದ ನಾಲ್ವರು ನಕ್ಸಲರು ಸೇರಿದಂತೆ ನಾಳೆ 6 ನಕ್ಸಲರು ಶರಣಾಗತಿ ಆಗಲಿದ್ದಾರೆ. ಕೇರಳದ ದೀಪ, ತಮಿಳುನಾಡಿನ ವಸಂತ ಅಲಿಯಾಸ್ ರಮೇಶ, ರಾಯಚೂರು ಮೂಲದ ಜಯಣ್ಣ ಅಲಿಯಾಸ್ ಮಾರಪ್ಪ ಅರೋಲಿ, ಮೂಲತಃ ಚಿಕ್ಕಮಂಗಳೂರು ಜಿಲ್ಲೆಯ ಮುಂಡಗರು ಲತಾ, ವನಜಾಕ್ಷಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಂದರಿ ನಾಳೆ ಶರಣಾಗತಿ ಅಗಲಿದ್ದಾರೆ. ಆರು ನಕ್ಸಲರ ಜೊತೆ ಶಾಂತಿಗಾಗಿ ನಾಗರೀಕ ವೇದಿಕೆಯಿಂದ ಮಾತುಕತೆ ನಡೆಸಲಾಗಿದೆ. ಕಳೆದ ವರ್ಷ ಚಿಕ್ಕಮಂಗಳೂರು ಭಾಗದಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿತ್ತು.ಈ ಹಿನ್ನೆಲೆಯಲ್ಲಿ, ANF ಚಿಕ್ಕಮಂಗಳೂರು ಸೇರಿದಂತೆ ಇತರೆ ಭಾಗಗಳಲ್ಲಿ ಕಾರ್ಯಚರಣೆ ನಡೆಸಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿತ್ತು. ಬಳಿಕ ನಕ್ಸಲರಿಗೆ ಶರಣಾಗಲು ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ…

Read More

ಬೆಂಗಳೂರು : ಕಾಂಗ್ರೆಸ್ಸಿನ ಮಾಜಿ ಸಂಸದ ಡಿಕೆ ಸುರೇಶ್ ಅವರ ಹೆಸರು ಹೇಳಿ ವಂಚನೆ ಎಸಗಿದ್ದ ಐಶ್ವರ್ಯಗೌಡ ವಿರುದ್ಧ ಇದೀಗ ಮತ್ತೊಂದು FIR ದಾಖಲಾಗಿದ್ದು, ಸ್ತ್ರೀ ರೋಗ ತಜ್ಞೆ ಮಂಜುಳಾ ಪಾಟೀಲ್ ಅವರ ಬಳಿ 2.52 ಕೋಟಿ ಹಣ ಅಲ್ಲದೇ 2 ಕೆಜಿಗು ಅಧಿಕ ಚಿನ್ನ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೌದು ವೈದ್ಯೆ ಮಂಜುಳ ಪಾಟೀಲ್ ಅವರ ಕ್ಲಿನಿಕ್‌ಗೆ ಬಂದು ಐಶ್ವರ್ಯಗೌಡ ತಾನು ಡಿಕೆ ಸುರೇಶ್ ತಂಗಿ ಎಂದು ಹೇಳಿ ವೈದ್ಯೆಯನ್ನು ಪರಿಚಯ ಮಾಡಿಕೊಂಡಿದ್ದರು. ಜೊತೆಗೆ ಗೋಲ್ಡ್ ಬಿಸಿನೆಸ್, ಕೆಸಿನೊ, ಹಾಗೂ ದೊಡ್ಡ ಮಟ್ಟದಲ್ಲಿ ಬಿಸಿನೆಸ್ ಮಾಡುತ್ತಿರುವುದಾಗಿ ತಿಳಿಸಿದ್ದಳು. 2022ರಿಂದ ಹಂತ ಹಂತವಾಗಿ ಹೂಡಿಕೆ ನೆಪದಲ್ಲಿ ಐಶ್ವರ್ಯಾಗೌಡ ಹಣ ಪಡೆದಿರುತ್ತಾಳೆ. ಒಟ್ಟು 2.52 ಕೋಟಿ ಹಣ ಹಾಗೂ 2.350 ಕೆಜಿ ಚಿನ್ನಾಭರಣ ಪಡೆದು ವಂಚನೆ ಮಾಡಿದ್ದಾಳೆ ಎಂದು ವೈದ್ಯೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಚಂದ್ರಲೇಔಟ್‌ನಲ್ಲಿ ಎಫ್‌ಐಆರ್ ದಾಖಲಾಗಿದ್ದ ಬಗ್ಗೆ ತಿಳಿದು ವೈದ್ಯೆ ಶಾಕ್‌ಗೆ ಒಳಗಾಗಿದ್ದರು. ಬಳಿಕ ವೈದ್ಯೆ ಮನೆ ಬಳಿ ಹೋಗಿ…

Read More

ಬೆಂಗಳೂರು : 2028 ರ ಚುನಾವಣೆಯಲ್ಲಿ ಬಿಜೆಪಿಗೆ 40 ಸೀಟ್ ಸಹ ಬರುವುದಿಲ್ಲ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕೆಲಸ ಮಾಡಿಲ್ಲ. ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಯಾವುದು ಇಲ್ಲ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದರು. ಕಾಂಗ್ರೆಸ್ ನಲ್ಲಿ ಸಾಲು ಸಾಲು ಡಿನ್ನರ್ ಮೀಟಿಂಗ್ ವಿಚಾರವಾಗಿ ಊಟಕ್ಕೆ ಆಹ್ವಾನ ಮಾಡುತ್ತಾರೆ ಹಾಗಾಗಿ ಎಲ್ಲ ನಾಯಕರು ಹೋಗುತ್ತಾರೆ. ಪಾರ್ಟಿ ಔತಣಕೂಟ ಏನು ಇಲ್ಲ ನನ್ನನ್ನು ಸಹ ಯಾರು ಕರೆದಿಲ್ಲ. 2028 ರ ಚುನಾವಣೆಯಲ್ಲಿ ಬಿಜೆಪಿಗೆ 40 ಸೀಟ್ ಸಹ ಬರುವುದಿಲ್ಲ. ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಕೆಲಸ ಮಾಡಿಲ್ಲ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಯಾವುದು ಇಲ್ಲ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದರು. 60 ಪರ್ಸೆಂಟ್ ಅಂತ ಹೆಚ್ ಡಿ ಕುಮಾರಸ್ವಾಮಿ ಹತಾಶರಾಗಿ ಮಾತನಾಡುತ್ತಿದ್ದಾರೆ. ಹಿಂದೆ ಕೆಂಪಣ್ಣ 40 ಪರ್ಸೆಂಟ್ ಕಮಿಷನ್ ಅಂತ ಆರೋಪ ಮಾಡಿದ್ದರು. ಕುಮಾರಸ್ವಾಮಿ ಕನಸು ಕಾಣುವುದನ್ನು ಬಿಡಬೇಕು. 32 ಸಾವಿರ ಕೋಟಿ…

Read More

ಬೆಂಗಳೂರು : ನಿನ್ನೆ ತಾನೆ ಬೆಂಗಳೂರಿನಲ್ಲಿ ಸಾಲದಿಂದಾಗಿ ಟೆಕ್ಕಿ ದಂಪತಿಗಳು ತಮ್ಮ ಇಬ್ಬರೂ ಮಕ್ಕಳಿಗೆ ವಿಷ ಹಾಕಿ ಕೊಂದು, ತಾವು ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಸಾಲದಿಂದ ಬಡ್ಡಿ ಟಾರ್ಚರ್ಗೆ ಬೇಸತ್ತು, ಉದ್ಯಮಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಅಕ್ಷಯ ನಗರದಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಸಾಲದಿಂದ ಬೇಸತ್ತು ಉದ್ಯಮಿ ನೇಣಿಗೆ ಶರಣಾಗಿದ್ದಾರೆ. ಹುಳಿಮಾವು ಠಾಣಾ ವ್ಯಾಪ್ತಿಯ ಅಕ್ಷಯ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ಕಲಾಲ್ ದತ್ತ (40) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ ಎಂದು ತಿಳಿದುಬಂದಿದೆ. ಸಾಲಕ್ಕೆ ಬಡ್ಡಿ ನೀಡುವ ಟಾರ್ಚರ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಇದೀಗ ಆರೋಪ ಕೇಳಿ ಬಂದಿದೆ.ನಿನ್ನೆ ಸಂಜೆ ಉದ್ಯಮಿ ಕಲಾಲ್ ದತ್ತ ನೇಣಿಗೆ ಶರಣಾಗಿದ್ದಾರೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ವಿಧಾನಸೌಧದಲ್ಲಿ ಕಾಂಗ್ರೆಸ್ ಸಚಿವರು 60 ಪರ್ಸೆಂಟ್ ಕಮಿಷನ್ ಪಡೆಯುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಅವರು ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದರು. ಇದೀಗ ಹೆಚ್ ಡಿ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರಿಕೆಗಳು ಪ್ರಕಟಿಸಿದ್ದನ್ನು ಉಲ್ಲೆಖಿಸಿ ತಿರುಗೇಟು ನೀಡಿದ್ದಾರೆ. ದಾಖಲೆ ಕೊಡಿ.. ದಾಖಲೆ ಕೊಡಿ ಎನ್ನುತ್ತಿದ್ದೀರಿ.. ಇಲ್ನೋಡಿ ಸನ್ಮಾನ್ಯ ಸಿದ್ದರಾಮಯ್ಯ ನವರೇ.. ನಿಮ್ಮ ಖೊಟ್ಟಿ ಗ್ಯಾರಂಟಿ ಸರಕಾರದ ಲೂಟಿ ಸಾಕ್ಷಿಗುಡ್ಡೆ. ಪತ್ರಿಕೆಯವರೇ ನಿಮ್ಮ ಸಾಕ್ಷಿಗುಡ್ಡೆಯ ಸಾಕ್ಷಾತ್ಕಾರ ಮಾಡಿಸಿದ್ದಾರೆ!! ನಿಮ್ಮ ಸರಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ ಸಾಕ್ಷಿಗುಡ್ಡೆ ಸಾಕ್ಷ್ಯ ಸಾಲದೇ ಮುಖ್ಯಮಂತ್ರಿಗಳೇ..? ಚೆಂಬು ಹಾಕಿ ಹಂಡೆ ಹೊಡೆದರು ಎನ್ನುವಂತೆ ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ.ಗುತ್ತಿಗೆದಾರರ ₹32,000 ಕೋಟಿಯಷ್ಟು ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು…

Read More

ಬೆಂಗಳೂರು : ಕಾಂಗ್ರೆಸ್ ನಾಯಕರು ಸಾಲು ಸಾಲಾಗಿ ಡಿನ್ನರ್ ಪಾರ್ಟಿ ಆಯೋಜನೆ ಮಾಡುತ್ತಿದ್ದಾರೆ ಕಳೆದ ಕೆಲವು ದಿನಗಳ ಹಿಂದೆ ಪಿಡಬ್ಲ್ಯೂಡಿ ಸಚಿವ ಸತೀಶ ಜಾರಕಿಹೊಳಿ ಅವರು ಔತಣಕೂಟ ಏರ್ಪಡಿಸಿದ್ದರು. ಈ ಒಂದು ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಇವಳು ಸಚಿವರು ಹಾಗೂ 35 ಶಾಸಕರು ಭಾಗಿಯಾಗಿದ್ದರು ಇದೀಗ ನಾಳೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಗ್ರಹ ಸಚಿವ ಜಿ ಪರಮೇಶ್ವರ್ ಅವರು ಕೂಡ ಡಿನ್ನರ್ ಆಯೋಜನೆ ಮಾಡಿದ್ದಾರೆ. ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರಾಜ್ಯ ಕಾಂಗ್ರೆಸ್ ನಾಯಕರು ವಿರುದ್ಧ ವಾಗ್ದಾಳಿ ನಡೆಸಿದ್ದು, ಒದ್ದು ಕಿತ್ತು ಕೊಳ್ಳುತ್ತೇನೆ ಅಂತ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಈ ಡಿನ್ನರ್ ಫೇರ್ವೆಲ್ ಪಾರ್ಟಿ ಇದ್ದಂತೆ. ಮೇಯರ್ ಅವಧಿ ಮುಗಿದ ಮೇಲೆ ಬೀಳ್ಕೊಡುಗೆ ಇಟ್ಟುಕೊಳ್ಳುತ್ತಿದ್ದೇವೆ ಆ ರೀತಿ ಆಗಿದೆ ಇವರ ಡಿನ್ನರ್ ಮೀಟಿಂಗ್ ಎಂದು ಅಶೋಕ್ ವ್ಯಂಗ್ಯವಾಡಿದರು. ಡಿಕೆ ಶಿವಕುಮಾರ್ ಯಾವಾಗ ಡಿನ್ನರ್ ಹಾಕಿಸುತ್ತಾರೆ ಅವಾಗ ಈ ಸರ್ಕಾರ…

Read More

ಬೀದರ್ : ಬೀದರ್ ನಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು ಮಗುವಿನ ಜನನ ಮತ್ತು ಹೆರಿಗೆ ಮುಚ್ಚಿಡುವ ಉದ್ದೇಶದಿಂದ ಗಂಡು ಮಗುವಿನ ಮರ್ತ ದೇಹವನ್ನು ಅಂಬೇಡ್ಕರ್ ವೃತ್ತದ ಬಳಿ ಬಿಸಾಡಿ ಹೋಗಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ರುದನೂರ ಗ್ರಾಮದಲ್ಲಿ ನಡೆದಿದೆ. ಹೌದು ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ರುದನೂರ ಗ್ರಾಮದಲ್ಲಿ ಅಂಬೇಡ್ಕರ್ ವೃತ್ತದ ಬಳಿ ನಿಜನ್ನೇ ಮಧ್ಯರಾತ್ರಿ ಅಪರಿಚಿತರು ಗಂಡು ಮಗುವಿನ ಮೃತ ದೇಹ ಬಿಸಾಡಿದ ಘಟನೆ ಜರುಗಿದೆ. ಘಟನೆಯ ಸಂಭಂದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯ ಆದೇಶದ ಮೇರೆಗೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೂರಿನ ಅನ್ವಯ ಭಾಲ್ಕಿ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸರ್ಕಾರದ ಸಚಿವರುಗಳು ವಿಧಾನಸೌಧದಲ್ಲೇ 60% ಕಮಿಷನ್ ಪಡೆಯುತ್ತಿದ್ದಾರೆ ಎಂದು ಗಂಭೀರವಾದ ಆರೋಪ ಮಾಡಿದ್ದರು. ಇದೀಗ ಇವರ ಒಂದು ಆರೋಪಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಧ್ವನಿಗೂಡಿಸಿದ್ದು, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಯನ್ನು ನಾನು ಸಮರ್ಥನೆ ಮಾಡಿಕೊಳ್ಳುತ್ತೇನೆ. 60% ಪಡೆಯುತ್ತಿರುವುದು ನಿಜ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಮಿಷನ್ಗಾಗಿ ಕಾಂಗ್ರೆಸ್ ರಾಜ್ಯವನ್ನು ಲೂಟಿ ಮಾಡಿದೆ. ಸ್ವಲ್ಪ ಅಡ್ಜಸ್ಟ್ ಮಾಡಿಕೊಳ್ಳಿ ಅಂತ ಶಾಸಕ ಹಿಟ್ನಾಳ್ ಹೇಳಿದ್ದಾರೆ. ಓಟ್ ಹಾಕುವಾಗ ಅಡ್ಜಸ್ಟ್ ಮಾಡಿಕೊಳ್ಳಿ ಅಂತ ಹೇಳಬೇಕಿತ್ತು. ಕಾಂಗ್ರೆಸ್ ಶಾಸಕ ರಾಜು ಕಾಗೆ ಪ್ರತಿದಿನವೂ ಕೂಗುತ್ತಿದ್ದಾರೆ. ಅಭಿವೃದ್ಧಿ ಕುಂಠಿತ ಆಗಿದೆ ಎಂದು ಕಾಂಗ್ರೆಸ್ ಶಾಸಕರು ಹೇಳುತ್ತಿದ್ದಾರೆ. ಶೇಕಡ 5ರಷ್ಟು ಕಮಿಷನ್ ಜಾಸ್ತಿ ಮಾಡಲು ಕಾಂಗ್ರೆಸ್ ಹೊರಟಿದೆ. ಮುಂದಿನ…

Read More

ಬೆಂಗಳೂರು : ಅರಣ್ಯ ಅಪರಾಧ ತಡೆಗೆ ರಾಜ್ಯ ಸರ್ಕಾರ ಇದೀಗ ಮಹತ್ವದ ಕ್ರಮ ಕೈಗೊಂಡಿದ್ದು, ಅರಣ್ಯ ಅಪರಾಧ ತಡೆಗೆ ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ಅವರು ಇಂದು ಚಾಲನೆ ನೀಡಿದರು.  ವಿಧಾನಸೌಧದಲ್ಲಿಂದು ಅರಣ್ಯ ಇಲಾಖೆ Wild Life Trust of India (WTI) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಗರುಡಾಕ್ಷಿ ಆನ್‌ಲೈನ್‌ / ಡಿಜಿಟಲ್ FIR ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತ್ರ ಪ್ರಯೋಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅರಣ್ಯ ಅಪರಾಧ ತಡೆಯಲು, ತಪ್ಪಿತಸ್ಥರಿಗೆ ಶಿಕ್ಷೆ ಆಗುವುದನ್ನು ಖಾತ್ರಿ ಪಡಿಸಲು ಹಾಗೂ ಆ ಮೂಲಕ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು…

Read More

ತುಮಕೂರು : ಯುವಕನೋರ್ವ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ. ಯುವಕನ ಈ ಒಂದು ಸಾಹಸ ಹಾಗೂ ಧೈರ್ಯಕ್ಕೆ ಸ್ವತಃ ಅರಣ್ಯ ಸಂಬಂಧಿಗಳೇ ಶಾಕ್ ಗೆ ಒಳಗಾಗಿದ್ದಾರೆ. ಹೌದು ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ಯುವಕನೋರ್ವ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ಜರುಗಿದೆ.ಇಂದು ಪುರಲೇಹಳ್ಳಿ ರಸ್ತೆಯಲ್ಲಿರುವ ಕುಮಾರ್ ಎಂಬವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದೆ.ಈ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬಿಟ್ಟು ಚಿರತೆ ಸೆರೆಹಿಡಿಯುವ ಸಲುವಾಗಿ ಸಕಲ ಸಲಕರಣೆಗಳೊಂದಿಗೆ ಬಂದಿದ್ದರು. ಆದರೆ ಚಿರತೆ ಸೆರೆಹಿಡಿಯಲಾಗದೇ ಕೈಚೆಲ್ಲಿ ಕುಳಿತರು. ಈ ವೇಳೆ ಗ್ರಾಮದ ಆನಂದ್ ಎಂಬವರು ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ್ದಾರೆ. 5 ವರ್ಷದ ಚಿರತೆಯನ್ನು ಯುವಕ ಸೆರೆಹಿಡಿದಿದ್ದನ್ನು ಕಂಡು ಅರಣ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.ಆನಂದ್ ಸಾಹಸಕ್ಕೆ ಇಡೀ ಸುತ್ತಮುತ್ತಲಿನ ಗ್ರಾಮಸ್ಥರೆಲ್ಲಾ ಖುಷಿಯಾಗಿದ್ದು, ಅವರ…

Read More