Author: kannadanewsnow05

ಬೆಳಗಾವಿ : ಇಂದು ದೇಶದಾದ್ಯಂತ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದ ಆಚರಿಸಲಾಗುತ್ತಿದ್ದು, ಇತ್ತ ಬೆಳಗಾವಿಯಲ್ಲಿ ಸಂಕ್ರಾಂತಿ ಹಬ್ಬದಂದೆ ಭೀಕರವಾದ ಕೊಲೆ ನಡೆದಿದೆ ಎಳ್ಳು ಬೆಲ್ಲ ಕೊಡಲು ಬಂದಿದ್ದ ಅತ್ತೆಯನ್ನೇ ಚಾಕುವಿನಿಂದ ಇರುವುದು ಅಳಿಯನೊಬ್ಬ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ನಗರದ ಖಾಸಬಾಗದಲ್ಲಿ ನಡೆದಿದೆ. ಹೌದು ಬೆಳಗಾವಿ ನಗರದ ಖಾಸಬಾಗ್ನಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಕುಡಿದ ಮತ್ತಿನಲ್ಲಿ ಅತ್ತೆ ರೇಣುಕಾ (40)ಳನ್ನು ಅಳಿಯ ಶುಭಂ ಬಿರ್ಜೆ ಕೊಲೆ ಮಾಡಿದ್ದಾನೆ. ಪತ್ನಿಯ ಚಿಕಿತ್ಸೆ ಖರ್ಚಿಗೆ ಹಣ ನೀಡುವಂತೆ ಶುಭಂ ಬಿರ್ಜೆ ಅತ್ತೆಗೆ ಆಗಾಗ ಪೀಡಿಸುತ್ತಿದ್ದ. ಇಂದು ಸಂಕ್ರಾಂತಿ ಹಬ್ಬದ ನಿಮಿತ್ಯ ಎಳ್ಳು ಬೆಲ್ಲ ಕೊಡಲು ಬಂದಿದ್ದಾಗ ಅತ್ತೆ ಬಳಿ ಅಳಿಯ ಶುಭಂ ಹಣ ಕೇಳಿದ್ದಾನೆ. ಈ ವೇಳೆ ಹಣ ಕೊಡಲ್ಲ ಎಂದಿದ್ದಕ್ಕೆ ಚಾಕುವಿನಿಂದ ಇರಿದು ರೇಣುಕಾ ಗಳನ್ನು ಭೀಕರವಾಗಿಶುಭಂ ಕೊಲೆ ಮಾಡಿದ್ದಾನೆ. ಹಬ್ಬದಂದು ಭೀಕರ ಕೊಲೆ ನೋಡಿ ಸ್ಥಳೀಯ ಜನರು ಬೆಚ್ಚಿಬಿದ್ದಿದ್ದಾರೆ. ಘಟನೆ ಕುರಿತು ಬೆಳಗಾವಿಯ ಶಹಪುರ್ ಠಾಣೆಯಲ್ಲಿ…

Read More

ಬೆಂಗಳೂರು : ಇದೇ ಜನವರಿ 26ರಂದು ಗಣರಾಜ್ಯೋತ್ಸವದಂದು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದಂತೆ ಬೆಂಗಳೂರಿನ ವಿವಿಧಡೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಹೌದು ಬಂಧಿತ ಆರೋಪಿಯನ್ನು ಶಿವಾಜಿನಗರದ ಮನ್ಸೂರ್‌ (40) ಎಂದು ತಿಳಿದುಬಂದಿದೆ. ಜನೆವರಿ 9ರಂದು ರಿಯಾಜ್‌ ಎಂದು ನಗರ ಪೊಲೀಸ್‌ ಆಯುಕ್ತರ ಕಚೇರಿಯ ಕಂಟ್ರೋಲ್‌ ರೂಮ್‌ಗೆ ಕರೆ ಮಾಡಿದ್ದ. ಬಳಿಕ ಈತ 6 ವ್ಯಕ್ತಿಗಳ ಹೆಸರು ಮತ್ತು ಅವರ ಮೊಬೈಲ್‌ ಸಂಖ್ಯೆಗಳ ಮಾಹಿತಿ ನೀಡಿ, ಈ ವ್ಯಕ್ತಿಗಳು ಗಣರಾಜ್ಯೋತ್ಸವದ ದಿನ ನಗರದಲ್ಲಿ ವಿವಿಧೆಡೆ ದಿ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟದ ರೀತಿ ಬಾಂಬ್‌ ಸ್ಫೋಟಿಸಲು ಸಂಚು ರೂಪಿಸಿದ್ದಾರೆ ಎಂದು ಹೇಳಿದ್ದ. ವಿಷಯ ತಿಳಿದು ಕಂಟ್ರೋಲ್ ರೂಂ ಪಿಎಸ್ಐ ಬೆಂಗಳೂರಿನ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಮೊಬೈಲ್ ಸಂಖ್ಯೆಯ ಸುಳಿವು ಆಧರಿಸಿ ವಿಧಾನಸೌಧ ಠಾಣೆ ಪೊಲೀಸರು ಇದೀಗ ಆರೋಪಿಯನ್ನು ಅರೆಸ್ಟ್ ಮಾಡಿದ್ದು, ಇದೊಂದು ಹೊಸ ಕರೆ…

Read More

ವಿಜಯಪುರ : ಕಳೆದ ಎರಡು ದಿನಗಳ ಹಿಂದೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದಲ್ಲಿ ಆಲಮಟ್ಟಿ ಎಡದಂಡೆ ಕಾಲುವೆಗೆ ತಾಯಿಯೊಬ್ಬಳು ತನ್ನ ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾನು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮಕ್ಕಳನ್ನು ಕಾಲುವೆಗೆ ತಳ್ಳಿದ್ದು ತಾಯಿ ಅಲ್ಲ ತಂದೆ ಎಂದು ಸ್ಪೋಟಕ ವಿಚಾರ ಬಯಲಾಗಿದೆ. ಹೌದು ಈ ಒಂದು ಘಟನೆಯಲ್ಲಿ ತಾಯಿ ಭಾಗ್ಯ ಬದುಕುಳಿದಿದ್ದು, ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಚೇತರಿಸಿಕೊಂಡ ಭಾಗ್ಯ ತನ್ನ ಗಂಡನ ಕರಾಳ ಮುಖವನ್ನು ತೆರೆದಿಟ್ಟಿದ್ದು. ಭಾಗ್ಯಳ ಗಂಡ ನಿಂಗರಾಜ್ ಹಾಗು ಆತನ ಅಣ್ಣತಮ್ಮಂದಿರ ನಡುವೆ ಅಸ್ತಿಯ ವಿಚಾರವಾಗಿ ಆಗಾಗ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರವಾಗಿ ಪತಿ ನಿಂಗರಾಜ್ ತನ್ನ ಮಕ್ಕಳನ್ನು ಕಾಲುವೆಗೆ ತಳ್ಳಿ ಬಳಿಕ ನನ್ನನ್ನು ಕೂಡ ಕಾಲವೆಗೆ ತಳ್ಳಿದ್ದ ಎಂದು ನಿಂಗರಾಜ್ ಭಜಂತ್ರಿಯ ಪತ್ನಿ ಭಾಗ್ಯ ಇದೀಗ ಪತಿಯ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದಾಳೆ. ಮೃತ ಮಕ್ಕಳು ಕೊಲ್ಹಾರ ತಾಲೂಕಿನ…

Read More

ಬಳ್ಳಾರಿ : ನಿನ್ನೆ ಬೆಂಗಳೂರಿನಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕಾಮುಕನೊಬ್ಬ ಭೀಕರವಾಗಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನಲ್ಲಿ ಅಪರಿಚಿತನೊಬ್ಬ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಹೌದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಐದು ವರ್ಷದ ಬಾಲಕಿ ಮೇಲೆ ಸೋಮವಾರ ಅಪರಿಚಿತನೊಬ್ಬ ಅತ್ಯಾಚಾರವೆಸಗಿದ್ದಾನೆ.ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆಂದು ಹತ್ತು ವರ್ಷಗಳ ಹಿಂದೆ ತೋರಣಗಲ್ಲಿಗೆ ಬಂದು ನೆಲೆಸಿದ್ದ ಉತ್ತರ ಭಾರತ ದಂಪತಿಯ ಮಗು ಸೋಮವಾರ ಮಕ್ಕಳೊಂದಿಗೆ ಮನೆ ಬಳಿ ಆಟವಾಡುತ್ತಿತ್ತು. ಮಗುವನ್ನು ಪುಸಲಾಯಿಸಿ ಕರೆದೊಯ್ದಿರುವ ದುಷ್ಕರ್ಮಿ ದೌರ್ಜನ್ಯ ವೆಸಗಿದ್ದಾನೆ. ಲೈಂಗಿಕ ದಾಳಿಯಿಂದಾಗಿ ಮಗುವಿಗೆ ಆಂತರಿಕ ಗಾಯವಾಗಿದ್ದು, ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಬಳ್ಳಾರಿಯ ಸರ್ಕಾರಿ ಆರೋಗ್ಯ ಸಂಸ್ಥೆಯೊಂದಕ್ಕೆ ಮಗುವನ್ನು ದಾಖಲಿಸಲಾಯಿತು ಎಂದು ಗೊತ್ತಾಗಿದೆ. ಸೋಮವಾರ ರಾತ್ರಿಯೇ ಮಗುವಿಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದ್ದು ಮಗು ಅಪಾಯದಿಂದ ಪಾರಾಗಿದೆ.ಘಟನೆ ಸಂಬಂಧ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ…

Read More

ಬೆಂಗಳೂರು : ಈಗಾಗಲೇ ಬೀದರ್ ನ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಕೇಸ್ ನಲ್ಲಿ ಗಂಭೀರವಾದ ಆರೋಪ ಎದುರಿಸುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಇದೀಗ ಮತ್ತೊಂದು ಆರೋಪ ಕೇಳಿ ಬರುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಶರತ್ ಬಚ್ಚೇಗೌಡ ವಿರುದ್ಧ ಆರೋಪ ಕೇಳಿ ಬಂದಿದೆ. ಈ ಕುರಿತು ದಯಾಮರಣ ಕೋರಿ ವೆಂಡರ್ಸ್ ಗಳು ಇದೀಗ ಪತ್ರ ಬರೆದಿದ್ದಾರೆ. ಹೌದು ಕಿಯೋನಿಕ್ಸ್ ವೆಂಡರ್ಸ್ ಅಸೋಸಿಯೇಷನ್ ಈ ಕುರಿತು ಪತ್ರ ಬರೆದಿದ್ದು ವೆಂಡರ್ಸ್ ಗಳು ಆತ್ಮಹತ್ಯೆ ಮಾಡಿಕೊಂಡರೆ ನಾಲ್ವರು ಹೊಣೆ. ಪ್ರಿಯಾಂಕ್ ಖರ್ಗೆ ಸೇರಿ ನಾಲ್ವರು ಹೊಣೆ ಎಂದು ಪತ್ರ ಬರೆದಿದ್ದಾರೆ. ವೆಂಡರ್ಸ್ ಗಳ ಬಾಕಿ ಬಿಲ್ ಪಾವತಿ ಮಾಡುತ್ತಿಲ್ಲ ಒಂದು ವರ್ಷದಿಂದ ತನಿಖೆಯ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ. 400 ರಿಂದ 500 ವೆಂಡರ್ಸ್ ಗಳಿಗೆ ಬಿಲ್ ಪಾವತಿ ಬಾಕಿ ಇದೆ. ಪ್ರಿಯಾಂಕ್ ಖರ್ಗೆ, ಶರತ್ ಬಚ್ಚೇಗೌಡ ಕಷ್ಟವನ್ನು ಆಲಿಸುತ್ತಿಲ್ಲ. ಯಾರಾದರೂ ವೆಂಡರ್ಸ್ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ…

Read More

ಉತ್ತರಪ್ರದೇಶ : 144 ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಐತಿಹಾಸಿಕ ಮಹಾ ಕುಂಭಮೇಳ ನಡೆಯುತ್ತಿದ್ದು, ಈ ಒಂದು ಕುಂಭಮೇಳದಲ್ಲಿ ಕರ್ನಾಟಕದ ಬ್ರಾಂಡ್ ನಂದಿನಿ ಹಾಲು ಇದೀಗ ಉತ್ತರಪ್ರದೇಶದಲ್ಲೂ ಧೂಳೆಬ್ಬಿಸಿದೆ. ಹೌದು ಮಹಾಕುಂಭಮೇಳದಲ್ಲಿ 10 ಟೀ ಪಾಯಿಂಟ್ ತೆರೆಯಲು ಕೆಎಂಎಫ್ ಒಪ್ಪಂದ ಮಾಡಿಕೊಂಡಿದೆ. ಮಹಾಕುಂಭಮೇಳದಲ್ಲಿ ಕೆಎಂಎಫ್ ಸಹಭಾಗಿತ್ವದಲ್ಲಿ 10 ಟೀ ಪಾಯಿಂಟ್ ತೆರೆಯಲು ಸಿದ್ಧತೆ ನಡೆಸಲಾಗಿದ್ದು, ಜೊತೆಗೆ ನಂದಿನಿ ಹಾಲಿನ ಬಳಕೆ ಹಾಗೂ ನಂದಿನಿ ಉತ್ಪನ್ನಗಳ ಮಾರಾಟ ನಡೆಯಲಿದೆ. ಈ ಟೀ ಪಾಯಿಂಟ್‌ನಿಂದ ಸುಮಾರು ಒಂದು ಕೋಟಿ ಟೀ ಮಾರಾಟ ಮಾಡುವ ಗುರಿಯನ್ನು ಕೆಎಂಎಫ್ ಹಾಕಿಕೊಂಡಿದೆ. ಈ ಮೂಲಕ ಒಂದು ಮೇಳದಲ್ಲಿ ಅತೀ ಹೆಚ್ಚು ಟೀ ಮಾರಾಟ ಮಾಡಿದ ಸಂಸ್ಥೆಯೆಂದು ಗಿನ್ನಿಸ್ ದಾಖಲೆ ನಿರ್ಮಿಸುವ ಪ್ರಯತ್ನ ಮಾಡಲಿದೆ. ಇನ್ನೂ ಮಾಹಕುಂಭಮೇಳದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ನಾಗ ಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದು, ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯುತ್ತಿದೆ. ಫೆ.26ರ ಮಹಾ ಶಿವರಾತ್ರಿವರೆಗೂ ಮಹಾಕುಂಭಮೇಳ ನಡೆಯಲಿದೆ.ಪ್ರಯಾಗ್‌ರಾಜ್‌ನಲ್ಲಿ…

Read More

ಉತ್ತರಕನ್ನಡ : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೂ ಚಿರತೆ ನುಗ್ಗಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಾಗೇರಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿವಾಸದಲ್ಲಿ ಈ ಒಂದು ಘಟನೆ ನಡೆದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿ ಇರುವಾಗಲೇ ಈ ಒಂದು ಘಟನೆ ನಡೆದಿದೆ. ನಿನ್ನೆ ರಾತ್ರಿ 11 ಗಂಟೆ ವೇಳೆ ಚಿರತೆ ವಿಶ್ವೇಶ್ವರ ಹೆಗಡೆ ಮನೆಗೆ ನುಗ್ಗಿದೆ. ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿದ್ದ ಸಾಕು ನಾಯಿಗಳನ್ನು ಚಿರತೆ ಅಟ್ಟಾಡಿಸಿಕೊಂಡು ಬಂದಿದೆ. ಈ ವೇಳೆ ನಾಯಿಗಳು ಚಿರತೆಯಿಂದ ತಪ್ಪಿಸಿಕೊಂಡು ಓಡಿ ಹೋಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Read More

ಕಲಬುರ್ಗಿ : ಶಾರ್ಟ್ ಸರ್ಕ್ಯೂಟ್ ನಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಕಚೇರಿಯನ್ನು ಆವರಿಸಿದ ಪರಿಣಾಮ ಕಚೇರಿಯಲ್ಲಿದ್ದ ಕಂಪ್ಯೂಟರ್ ಕೆಲವು ಪೀಠೋಪಕರಣಗಳು ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಅಫ್ಜಲ್ಪುರ ತಾಲೂಕಿನ ಬಿ ಇ ಓ ಕಚೇರಿಯಲ್ಲಿ ಈ ಒಂದು ದುರಂತ ಸಂಭವಿಸಿದೆ. ಹೌದು ಕಲಬುರ್ಗಿ ಜಿಲ್ಲೆಯ ಅಫ್ಜಲಪುರ ಪಟ್ಟಣದಲ್ಲಿರುವ ಬಿ ಇ ಓ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಚೇರಿಯಲ್ಲಿನ ಕೆಲ ದಾಖಲಾತಿಗಳು, ಪೀಠೋಪಕರಣಗಳು ಹಾಗೂ ಕಂಪ್ಯೂಟರ್ ಸೇರಿ ಎಲೆಕ್ಟ್ರಿಕಲ್ ಉಪಕರಣಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ತಕ್ಷಣ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಕುರಿತು ಅಫ್ಜಲ್ಪುರ ಪೊಲೀಸ್ ಸ್ಟೇಷನಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಳೆದ ಲೋಕಸಭಾ ಚುನಾವಣೆಯಲ್ಲಿ ನಾನು ಡಾ.ಸಿ.ಎನ್. ಮಂಜುನಾಥ್ ಪರ ಕೆಲಸ ಮಾಡಿದ್ದೇ ಮುಳುವಾಗಿದೆ. ಆ ಕಾರಣಕ್ಕಾಗಿ ನನ್ನನ್ನು ರಾಜೆಯವಾಗಿ ಟಾರ್ಗೆಟ್ ಮಾಡಿ ಹಿಂಸಿಸಲಾಗುತ್ತಿದೆ ಎಂದು ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಹೇಳಿಕೊಂಡಿದ್ದಾರೆ. ಸಂಕ್ರಾಂತಿ ಹಬ್ಬದ ಅಂಗವಾಗಿ ಇಂದು ಮಾತನಾಡಿದ ಅವರು, ಅವರು, ಇಂದು ನಾನು ಪ್ರಮಾಣ ಮಾಡುತ್ತಿದ್ದೇನೆ. ನನಗೆ ಬಹಳಷ್ಟು ಕಿರುಕುಳ ಇದೆ.ನನ್ನ ಜೀವಕ್ಕೂ ಕೂಡ ಅಪತ್ತು ಇದೆ.ನಾನು ಲೋಕಸಭಾ ಚುನಾವಣೆಯಲ್ಲಿ ಡಾ.ಸಿ.ಎನ್. ಮಂಜುನಾಥ್ ಪರ ಕೆಲಸ ಮಾಡಿದ್ದೇ ಮುಳುವಾಗಿದೆ. ಆ ಕಾರಣಕ್ಕಾಗಿ ನನ್ನನ್ನು ರಾಜೆಯವಾಗಿ ಟಾರ್ಗೆಟ್ ಮಾಡಿ ಹಿಂಸಿಸಲಾಗುತ್ತಿದೆ ಎಂದು ಮುನಿರತ್ನ ಹೇಳಿಕೊಂಡಿದ್ದಾರೆ. ತಮ್ಮ ಕ್ಷೇತ್ರದ ಜನರಿಗೆ ಪ್ರಮಾಣ ಮಾಡಿದ್ದಾರೆ. ತಮ್ಮ ಕ್ಷೇತ್ರದ ಜನತೆಗೆ ಸಂಕ್ರಾಂತಿ ಶುಭ ಕೋರಿಡಾ ಶಾಸಕ ಮುನಿರತ್ನ ತಮಗೆ ಕ್ಷೇತ್ರದಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.ನನಗೆ ಕ್ಷೇತ್ರದಲ್ಲಿ ಇಂದು ಬಲವಿಲ್ಲ, ಮತದಾರ ಬಂಧುಗಳ ಆಶೀರ್ವಾದ ಒಂದೇ ನನಗೆ ಶ್ರೀರಕ್ಷೆಯಾಗಿದೆ.ಮುಂದಿನ ದಿನಗಳಲ್ಲಿ ನಿಮಗೆ ಒಳ್ಳೆಯ ಕೆಲಸವನ್ನು ಮಾಡುವ ಶಕ್ತಿ ಬರಲಿ ಎಂದು…

Read More

ಹುಬ್ಬಳ್ಳಿ : ಸದ್ಯ ರಾಜ್ಯ ರಾಜಕಾರಣದಲ್ಲಿ ಒಂದು ಕಡೆ ಡಿನ್ನರ್ ಪಾಲಿಟಿಕ್ಸ್ ಜೋರಾಗಿದ್ದು, ಇದರ ಮಧ್ಯ ಅಧಿಕಾರ ಹಂಚಿಕೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಕೂಗು ಜೋರಾಗಿ ಕೇಳಿ ಬರುತ್ತಿದೆ.ಇದರ ಮಧ್ಯ, ಅಬಕಾರಿ ಇಲಾಖೆಯ ಸಚಿವ ಆರ್.ಬಿ ತಿಮ್ಮಾಪೂರ್ ಅವರು, ಇದೀಗ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಒಂದು ವೇಳೆ ಹೈಕಮಾಂಡ್ ಹೇಳಿದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಹೇಳಿದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಅಬಕಾರಿ ಸಚಿವ ಆರ್.ಬಿ ತಿಮ್ಮಾಪೂರ್ ಹೇಳಿಕೆ ನೀಡಿದರು. ದಲಿತರು ಯಾಕೆ ಸಿಎಂ ಆಗಬಾರದು? ಮುಖ್ಯಮಂತ್ರಿ ಮಾಡಿದರೆ ಯಾರು ಬೇಡ ಅಂತ ಹೇಳುತ್ತಾರೆ ಎಂದರು. ಸಿಎಂ ಆಗಲು ನನಗೆ ಅಷ್ಟು ಶಕ್ತಿ ಇದೆಯೋ ಇಲ್ಲವೋ, ಶಾಸಕಾಂಗ ಪಕ್ಷದ ಸಭೆಯಲ್ಲಿ ನನ್ನ ಒಪ್ಪುತ್ತಾರೋ ಇಲ್ಲವೋ ಅದೆಲ್ಲ ನಂತರದ ಮಾತು. ಆದರೆ ಹೈಕಮಾಂಡ್ ಹೇಳಿದರೆ ನಾನೇ ಸಿಎಂ ಆಗುತ್ತೇನೆ. ದಲಿತರು ಮುಖ್ಯಮಂತ್ರಿ ಆಗಬೇಕೆಂದರೆ…

Read More