Author: kannadanewsnow05

ಬೆಂಗಳೂರು : ಮುಂದಿನ ತಿಂಗಳು ಫೆಬ್ರವರಿ 28ರಿಂದ ಮೂರು ದಿನಗಳ ಕಾಲ ವಿಜಯನಗರ ಜಿಲ್ಲೆಯಲ್ಲಿ ಹಂಪಿ ಉತ್ಸವ ನಡೆಯಲಿದ್ದು, ಈ ಒಂದು ಉತ್ಸವಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದು, ಫೆಬ್ರವರಿ 18ರಂದು ಹಂಪಿ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಹಂಪಿ ಉತ್ಸವ ನಡೆಸುವ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಅವರಿಗೆ ಸೂಚನೆ ನೀಡಿದ್ದು, ಫೆಬ್ರುವರಿ 28ರಂದು ದಿನಾಂಕ ನಿಗದಿಯಾಗಿದ್ದು ಫೆಬ್ರವರಿ 28ರಿಂದ ಮಾರ್ಚ್ 1 ಮತ್ತು 2ನೇ ತಾರೀಖಿನವರೆಗೂ ಸುಮಾರು ಮೂರು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಹಂಪಿ ಉತ್ಸವ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ಜಿಲ್ಲಾಧಿಕಾರಿಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಮಾರ್ಚ್ 2 ರಂದು ಹಂಪಿ ಉತ್ಸವದ ಸಮಾರೋಪ ಸಮಾರಂಭ ನಡೆಯಲಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಗಾರ್ಮೆಂಟ್ ಗೋದಾಮಿನಲ್ಲಿ ಬೆಂಕಿ ಹತ್ತಿ ಹೊಡೆದಿದ್ದು ಗುದಾಮಿನಲ್ಲಿರುವಂತಹ ಬಟ್ಟೆ ವೆದರ್ ಸೇರಿದಂತೆ ಹಲೋ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿರುವ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಒಂದು ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಬಟ್ಟೆ, ಲೆದರ್ ಸೇರಿ ಕೆಮಿಕಲ್ ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ನಿನ್ನೆ ಬೈಕ್ ಶೋ ರೂಂ ಗೂ ಬೆಂಕಿ! ಇದಕ್ಕೂ ಮುನ್ನ ನಿನ್ನೆ ಸಂಜೆ ಬೆಂಗಳೂರಿನ ಮಹದೇವಪುರ ವ್ಯಾಪ್ತಿಯ ಬಿ.ನಾರಾಯಣಪುರದಲ್ಲಿ ಬೈಕ್ ಶೋರೂಂಗೆ ಬೆಂಕಿ ಬಿದ್ದು, ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.ಶಾರ್ಟ್ ಸರ್ಕ್ಯೂಟ್‌ನಿಂದ…

Read More

ಬೀದರ್ : ಬೀದರ್ ನಲ್ಲಿ ಭೀಕರವಾದಂತಹ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕಾರ್ಪಿಯೋ ಕಾರು ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ಯರಭಾಗ ಬಳಿ ಈ ಒಂದು ಭೀಕರವಾದ ಅಪಘಾತ ನಡೆದಿದೆ. ಮೃತ ದಂಪತಿಯನ್ನು ಪ್ರಕಾಶ್ ಹಾಗೂ ಬಬಿತ ಎಂದು ಗುರುತಿಸಲಾಗಿದೆ. ಅಪಘಾತ ಬಳಿಕ ಪತಿ ಪ್ರಕಾಶ್ ಸ್ಥಳದಲ್ಲೆ ಸವಣ್ಣಪ್ಪಿದರೆ, ಇನ್ನು ಗಾಯಗೊಂಡ ಪತ್ನಿ ಬಬಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಹಾರಾಷ್ಟ್ರದಿಂದ ಸೋಲಾಪುರದ ಕಡೆಗೆ ಸ್ಕಾರ್ಪಿಯೋ ಕಾರು ತೆರಳುತ್ತಿತ್ತು. ಇತ್ತ ನಾರಾಯಣಪುರದಿಂದ ಬೈಕ್ ನಲ್ಲಿ ಚಿಟುಗುಪ್ಪ ಕಡೆಗೆ ದಂಪತಿ ಹೊರಟಿದ್ದ ವೇಳೆ ಅಪಘಾತವಾಗಿದೆ.ಅಪಘಾತದ ಕುರಿತು ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಹೊಸ ವರ್ಷದ ಆರಂಭದಲ್ಲಿ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಇದೀಗ ಬಿಗ್ ಶಾಕ್ ನೀಡಿದೆ.ಸಾರಿಗೆ ಬಸ್ಗಳಲ್ಲಿ ಟಿಕೆಟ್ ದರ ಶೇಕಡ 15ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಟಿಕೆಟ್ ದರ ಹೆಚ್ಚಳಕ್ಕೆ ಅನುಮೋದನೆ ದೊರೆತಿದೆ. ಇನ್ನು ಈ ವಿಚಾರವಾಗಿ ರಾಜ್ಯದ ಜನರು ಆಕ್ರೋಶ ಹೊರ ಹಾಕಿದ್ದು, ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ ಒಂದು ಕಡೆಗೆ ಬಸ್ ನಲ್ಲಿ ಫ್ರೀ ಕೊಟ್ಟು ಇನ್ನೊಂದು ಕಡೆಗೆ ಕಿತ್ತುಕೊಳ್ಳುತ್ತಿದ್ದಾರೆ. 2 ರೂಪಾಯಿ ಫ್ರೀ ಕೊಟ್ಟು ರೂ.10 ಕಿತ್ತುಕೊಳ್ಳುತ್ತಿದ್ದಾರೆ ದರ ಏರಿಕೆ ನಿರ್ಧಾರ ಒಳ್ಳೆಯದಲ್ಲ ಎಂದು ಪ್ರಯಾಣಿಕರು ಕಿಡಿ ಕಾರುತ್ತಿದ್ದಾರೆ. ಅದೇ ರೀತಿಯಾಗಿ ಹುಬ್ಬಳ್ಳಿಯಲ್ಲಿ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ಬಸ್ ಟಿಕೆಟ್ ದರ ಹೆಚ್ಚಳ ಮಾಡಬಾರದು. ಬಸ್ ನಲ್ಲಿ ಮಹಿಳೆಯರಿಗೆ ಅಷ್ಟೇ ಏಕೆ ಫ್ರೀ? ನಮಗೂ ಫ್ರೀ…

Read More

ಚಾಮರಾಜನಗರ : ಕೇವಲ ಸೌತೆಕಾಯಿಗಾಗಿ ನರಹಂತಕ ಅಣ್ಣನೊಬ್ಬ ತನ್ನ ತಂಗಿಯ ಕುತ್ತಿಗೆಯನ್ನು ಕತ್ತಿಯಿಂದ ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಈದ್ಗಾ ಮೊಹಲ್ಲ ಎಂಬಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಐಮನ್ ಬಾನು ಎಂದು ತಿಳಿದುಬಂದಿದ್ದು, ಇನ್ನೂ ಆಕೆಯನ್ನು ಹತ್ಯೆಗೈದ ಹಂತಕ ಅಣ್ಣನನ್ನು ಫರ್ಮಾನ್ ಪಾಷಾ ಎಂದು ತಿಳಿದುಬಂದಿದೆ.ಸೌತೆಕಾಯಿ ಗಾಗಿ ಅಣ್ಣನೊಬ್ಬ ಭೀಕರವಾಗಿ ಕತ್ತಿಯಿಂದ ತಂಗಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾನೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಈದ್ಗ ಮೊಹಲ್ಲಾದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ನಿನ್ನೆ ರಾತ್ರಿ ಅಣ್ಣನ ಮಗನಿಗೆ ಕೊಲೆ ಆರೋಪಿ ಫರ್ಮಾನ್ ಪಾಷಾ ಸೌತೆಕಾಯಿ ತಿನಿಸುತ್ತಿದ್ದ. ಮಗನಿಗೆ ಜ್ವರ ಇದೆ ತಿನ್ನಿಸಬೇಡ ಎಂದು ಆತನ ಅತ್ತಿಗೆ ಹೇಳಿದ್ದಾಳೆ. ಇದೆ ವಿಚಾರವಾಗಿ ಅಣ್ಣ ಫರ್ಮಾನ್ ಪಾಷಾಗೆ ತಂಗಿ ಐಮನ್ ಬಾನು ಬೈದಿದ್ದಾಳೆ.ಇದರಿಂದ ಕೋಪಗೊಂಡ ಫರ್ಮಾನ್ ಕತ್ತಿ ತೆಗೆದುಕೊಂಡು ತಂಗಿಯ ಕುತ್ತಿಗೆಗೆ ಕೊಯ್ದು ಭೀಕರವಾಗಿ ಕೊಲೆ ಮಾಡಿದ್ದಾನೆ. ಇದನ್ನು ಬಿಡಿಸಲು ಬಂದ ಅತ್ತಿಗೆ ಹಾಗೂ ತಂದೆಯ…

Read More

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ ರಾಜ್ಯದ ಜನತೆಗೆ ಇದೀಗ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ಸಂಕ್ರಾಂತಿ ಬಳಿಕ ಎಲ್ಲ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಶೇ.15 ರಷ್ಟು ಏರಿಕೆ ಮಾಡಿ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ ಪ್ರಯಾಣದ ಟಿಕೆಟ್ ದರ ಶೇಕಡ 15ರಷ್ಟು ಏರಿಕೆ ಮಾಡಿ ಸಂಪುಟ ಅನುಮೋದನೆ ನೀಡಿದೆ.ಈ ಕುರಿತಂತೆ ಈಗಾಗಲೇ ಈ ಹಿಂದೆ ಶೇ. 25 ರಷ್ಟು ಟಿಕೆಟ್ ದರ ಏರಿಕೆಗೆ ಎಲ್ಲಾ ಸಾರಿಗೆ ನಿಗಮಗಳು ಮನವಿ ಮಾಡಿದ್ದವು. ಪೆಟ್ರೋಲ್-ಡೀಸೆಲ್ ದರ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಅದರೆ, ಕಳೆದ ನಾಲ್ಕೈದು ವರ್ಷದಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಇಂಧನ ದರ ನಾಲ್ಕೈದು ವರ್ಷದಲ್ಲಿ ಏರಿಕೆಯಾಗುತ್ತಲೇ ಬಂದಿದೆ. ಅದಕ್ಕೆ ಅನುಗುಣವಾಗಿ ಟಿಕೆಟ್ ದರ ಏರಿಕೆಗೆ ನಾಲ್ಕೂ ನಿಗಮಗಳು ಮನವಿ ಮಾಡಿದ್ದವು. ಹಾಗಾಗಿ ಇಂದು ನಡೆದ ಸಂಪುಟ ಸಭೆಯಲ್ಲಿಎಲ್ಲಾ ನಾಲ್ಕು…

Read More

ಬೆಂಗಳೂರು : ರಾಜ್ಯದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24 ನೇ ಸಾಲಿನಲ್ಲಿ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಸದರಿ ವಿದ್ಯಾರ್ಥಿಗಳಿಗೆ ಮಂಡಳಿಯ ವತಿಯಿಂದ ಒಟ್ಟು 5.85 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24 ನೇ ಸಾಲಿನಲ್ಲಿ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಸದರಿ ವಿದ್ಯಾರ್ಥಿಗಳಿಗೆ ಮಂಡಳಿಯ ವತಿಯಿಂದ ಬಿಡುಗಡೆಯಾದ ಅನುದಾನ ವಿವರ ಈ ಕೆಳಕಂಡಂತಿದೆ. 2023-24 ನೇ ಸಾಲಿಗೆ ಸ್ವೀಕರಿಸಲಾದ ಅರ್ಜಿಸಲ್ಲಿಸಿದ ಸಂಖ್ಯೆ ಒಟ್ಟು 4474…

Read More

ಕಲಬುರ್ಗಿ : ಅಂಗನವಾಡಿಯಲ್ಲಿ ಸಹಾಯಕಿ ಹುದ್ದೆ ಕೊಡಿಸುವುದಾಗಿ ಮಹಿಳೆಯಿಂದ ಹದಿನೈದು ಸಾವಿರ ರೂಪಾಯಿ ಸ್ವೀಕರಿಸುತ್ತಿದ್ದ ವೇಳೆ ಸಿಡಿಪಿಒ ಕಚೇರಿಯ FDA ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಹೌದು 15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ.ಕಚೇರಿಯಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ FDA ಶಿಲ್ಪಾ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅಂಗನವಾಡಿ ಸಹಾಯಕಿ ಹುದ್ದೆ ಕೊಡಿಸುವುದಕ್ಕೆ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಒಂದು ಹುದ್ದೆಗಾಗಿ ಈಗಾಗಲೇ ಮಹಿಳೆಯಿಂದ ಈಗಾಗಲೇ FDA ಶಿಲ್ಪ 35,000 ಲಂಚ ಪಡೆದಿದ್ದರು. ಉಳಿದ 15 ಸಾವಿರ ರೂಪಾಯಿ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಶಿಲ್ಪಾ ಬಿದ್ದಿದ್ದಾರೆ. FDA ಶಿಲ್ಪಾಳನ್ನು ಸದ್ಯ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಇದೀಗ ಒತ್ತುವರಿ ಮಾಡಿಕೊಂಡಂತಹ ಜಮೀನು ಸರ್ವೆ ಮಾಡಲು ಹೈಕೋರ್ಟ್ ಆದೇಶ ಹೊರಡಿಸಿದ್ದು, ಜನೆವರಿ 15 ರಂದು ಜಂಟಿಯಾಗಿ ಸರ್ವೆ ನಡೆಸಲು ಆದೇಶಿಸಿದೆ. ಹೌದು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಡು ಹೋಬಳಿಯ ಹೊಸಹುಡ್ಯ ಗ್ರಾಮದ ವ್ಯಾಪ್ತಿಯ ಸರ್ವೆ ನಂ.1 ಮತ್ತು 2ರಲ್ಲಿನ 61 ಎಕರೆ 39 ಗುಂಟೆ ಅರಣ್ಯ ಜಮೀನು ಕುರಿತು ಜ.15ರಂದು ಜಂಟಿ ಸರ್ವೇ ನಡೆಸಲು ಹೈಕೋರ್ಟ್ ಆದೇಶಿಸಿದೆ. ಜಮೀನಿನ ಸರ್ವೇನಡೆಸಲು ರಚಿಸಲಾಗಿದ್ದ ಸಮಿತಿಯನ್ನು ಬದಲಾಯಿಸಿ ಬೆಂಗಳೂರು ಜಿಲ್ಲಾ ಪ್ರಾದೇಶಿಕ ಆಯುಕ್ತರು ನೀಡಿರುವ ಪತ್ರವನ್ನು ರದ್ದುಪಡಿಸಬೇಕು ಎಂದು ಕೋರಿ ಮತ್ತು ಕೆ.ಆರ್.ರಮೇಶ್ ಕುಮಾರ್ ಅವರು ಲಭ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ ಜಮೀನಿನ ಸರ್ವೇಯನ್ನು ವಿಳಂಬ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿ ರಾಯಲ್ಪಡು ಹೋಬಳಿ ನಿವಾಸಿ ಕೆ.ವಿ.ಶಿವಾರೆಡ್ಡಿ ಎಂಬುವವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜು…

Read More

ಬೆಂಗಳೂರು : ಬೆಂಗಳೂರಿನ ಜನತೆಗೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು ಜನವರಿ 2ನೇ ವಾರದಲ್ಲಿ ನೀರಿನ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದ್ದು, ಈ ಕುರಿತು ಶಾಸಕರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿ ನಿರ್ಧರಿಸಲಾಗುತ್ತೆ ಎಂದು ಜಲಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ತಿಳಿಸಿದರು. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಡಿಸಿಎಂ ಸಭೆ ಮಾಡ್ತಾರೆ. ಬೆಂಗಳೂರಿನ ಎಲ್ಲಾ ಶಾಸಕರಿಗೆ ಪತ್ರ ಬರೆದಿದ್ದೇವೆ.ಎಷ್ಟು ಪರ್ಸೆಂಟೇಜ್ ಏರಿಕೆ ಆಗುತ್ತೆ ಅನ್ನೋದು ನಿರ್ಧಾರ ಆಗುತ್ತೆ. ಉಪಮುಖ್ಯಮಂತ್ರಿಗಳು ನಿರ್ಧಾರ ಮಾಡ್ತಾರೆ. ಬೆಂಗಳೂರಿನ ಎಲ್ಲಾ ಶಾಸಕರಿಗೂ ಜಲಮಂಡಳಿ ನಷ್ಟದ ಬಗ್ಗೆ ಪತ್ರದಲ್ಲಿ ವಿವರಿಸಿದ್ದೇವೆ ಎಂದು ತಿಳಿಸಿದರು. ಜಲಮಂಡಳಿ 1000 ಲೀಟರ್ ನೀರು ಪೂರೈಕೆ ಮಾಡುವುದಕ್ಕೆ 52 ರೂಪಾಯಿ ಖರ್ಚು ಮಾಡ್ತಿದೆ. ಆದರೆ, 25 ರಿಂದ 40 ರೂ. ಮಾರುತ್ತಾ ಇದ್ದೇವೆ. ಇದರಿಂದ ಜಲಮಂಡಳಿಗೆ ನಷ್ಟ ಆಗ್ತಿದೆ. ಪ್ರತಿ ತಿಂಗಳಿಗೆ ಜಲಮಂಡಳಿಗೆ 41 ಕೋಟಿ ರೂಪಾಯಿ ನಷ್ಟ ಆಗ್ತಿದೆ.ಕಾವೇರಿ ಐದನೇ ಹಂತ ಆದ ಮೇಲೆ 82 ಕೋಟಿ…

Read More