Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಇಂದು ಬೆಂಗಳೂರಿನ ಯಲಹಂಕದ ವಾಯು ನೆಲೆಯಲ್ಲಿ 15ನೇ ಆವೃತ್ತಿಯ ಏರ್ ಶೋ 2025 ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಒಂದು ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚಾಲನೆ ನೀಡಿದ್ದು ಡಿಕೆ ಶಿವಕುಮಾರ್ ಸೇನಾ ಮುಖ್ಯಸ್ಥರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ. ಹಿರಿಬೆಳೆ ಡಿಸಿಎಂ ಡಿಕೆ ಶಿವಕುಮಾರ್ ಏರ್ ಫೋರ್ಸ್ ನಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಿದೆ ಎಂದು ತಿಳಿಸಿದರು. 15ನೇ ಆವೃತ್ತಿಯ ಏರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗದಕ್ಕೆ ಸಂತೋಷವಾಗುತ್ತಿದೆ. ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ 2025 ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬೆಂಗಳೂರು ಭಾರತದ ಏರ್ ಫೋರ್ಸ್ ನ ರಾಜಧಾನಿ ಇಲ್ಲಿನ ಏರ್ ಫೋರ್ಸ್ ನಲ್ಲಿ ಒಂದು 1.5 ಲಕ್ಷ ಜನರು ಕೆಲಸ ಮಾಡುತ್ತಿದ್ದಾರೆ. ಇದು ಬರೀ ಪ್ರದರ್ಶನವಲ್ಲ ನಮ್ಮ ಭದ್ರತಾ ಸಮರ್ಥ್ಯದ ಪ್ರದರ್ಶನ ಎಂದು ತಿಳಿಸಿದರು. ಏರ್ ಫೋರ್ಸ್ ನಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಿದೆ. ಹೆಲಿಕ್ಯಾಪ್ಟರ್ ತಯಾರಿಕೆಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಏರ್ ಕ್ರಾಫ್ಟ್ ಅಧ್ಯಯನಕ್ಕೆ ಸಂಬಂಧಿಸಿದ ಅನೇಕ ಕಾಲೇಜು…

Read More

ರಾಯಚೂರು : ವೈದ್ಯರ ನಿರ್ಲಕ್ಷಕ್ಕೆ ನವಜಾತ ಶಿಶು ಬಲಿಯಾಗಿದ್ದು ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ. ರಾಯಚೂರಿನ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದ್ದು, ಚಂದ್ರಶೇಖರ್ ಮತ್ತು ಪಾರ್ವತಮ್ಮ ಎಂಬ ದಂಪತಿಯ ಮಗು ಸಾವನಪ್ಪಿದೆ. ರಾಯಚೂರು ತಾಲೂಕಿನ ಮರ್ಚೆಡ್ ಗ್ರಾಮದ ಚಂದ್ರಶೇಖರ್ ಮತ್ತು ಪಾರ್ವತಮ್ಮ ದಂಪತಿಯ ಮಗು ಇದೀಗ ವೈದ್ಯರ ನಿರ್ಲಕ್ಷಕ್ಕೆ ಬಲಿಯಾಗಿದೆ.ಕಳೆದ ಹಲವಾರು ದಿನಗಳಿಂದ ಎಷ್ಟೋ ಬಾಣಂತಿಯರು ಸಾವನಪ್ಪಿದ್ದರು ಇದೀಗ ನವಜಾತ ಶಿಶುಗಳು ಸಾವನ್ನಪ್ಪುತ್ತಿವೆ. ಗಂಡು ಮಗು ಸಾವನ್ನಪ್ಪಿದ್ದನ್ನು ವೈದ್ಯರು ತಾಯಿಗೆ ತಿಳಿಸಿಲ್ಲ. ಮಗುವಿಗ್ ICU ನಲ್ಲಿ ಚಿಕಿತೆ ನೀಡಲಾಗುತ್ತಿದೆ ಎಂದು ವೈದ್ಯರು ಹೇಳುತ್ತಲೇ ಬಂದಿದ್ದಾರೆ ಹೊರತು ತಾಯಿ ಪಾರ್ವತಮ್ಮಗೆ ಮಗು ಸಾವನ್ನಪ್ಪಿದ ವಿಚಾರ ತಿಳಿಸಿಲ್ಲ. ಪಾರ್ವತಮ್ಮ ಪತಿ ಚಂದ್ರಶೇಖರ ಮಾತನಾಡಿ, ನಾವು ಸಿಸೆರಿಯನ್ ಮಾಡಿ ಎಂದು ವೈದ್ಯರಿಗೆ ಹೇಳಿದ್ದೇವು. ಆದರೆ ಅವರು ನಿರ್ಲಕ್ಷ ತೋರಿ ನಾರ್ಮಲ್ ಹೆರಿಗೆ ಮಾಡಿದ್ದಾರೆ. ಈ ವೇಳೆ ಸಮಸ್ಯೆ ಆಗಿದೆ. ಮಗು ತಲೆ…

Read More

ಕಲಬುರ್ಗಿ: ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆಗೆ ಆಯ್ಕೆಯಾಗಿದ್ದವನ ವಿರುದ್ಧ ಇದೀಗ fir ದಾಖಲಾಗಿದೆ. ಕಲಬುರ್ಗಿ ತಾಲೂಕಿನ ಕಡಣಿ ಗ್ರಾಮದ ನಿವಾಸಿ ಬೀರಪ್ಪ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಬೀರಪ್ಪ ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆಗೆ ಆಯ್ಕೆಯಾಗಿದ್ದಾನೆ ಬಳಿಕ ಆತನ ಅಸಲಿ ಮುಖ ಬಯಲಾಗುತ್ತಿದ್ದಂತೆ ಇದೀಗ ಆತನ ವಿರುದ್ಧ ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆಗೆ ಬೀರಪ್ಪ ಆಯ್ಕೆಯಾಗಿದ್ದ. 2023 ಡಿಸೆಂಬರ್ 21ರಂದು ಆನ್ಲೈನ್ ಮೂಲಕ ಅರ್ಜಿ ಹಾಕಿದ ಬಿರಪ್ಪ, 2014 ಏಪ್ರಿಲ್ ನಲ್ಲಿ ಎಸ್ ಎಸ್ ಎಲ್ ಸಿ ಅಂಕಪಟ್ಟಿಯನ್ನು ಸಲ್ಲಿಸಿದ್ದ.ಎಸ್ ಎಸ್ ಎಲ್ ಸಿ ಯಲ್ಲಿ 605 ಅಂಕಗಳಿಸಿ ಉತ್ತೀರ್ಣನಾಗಿದ್ದಾಗಿ ಬೀರಪ್ಪ ಅಂಕಪಟ್ಟಿ ಸಲ್ಲಿಸಿದ್ದಾನೆ. ಶಿಕ್ಷಣ ಇಲಾಖೆಯಿಂದ ದಾಖಲೆಯ ಪರಿಶೀಲನೆ ವೇಳೆ ಈ ಒಂದು ಕೃತ್ಯ ಬಯಲಾಗಿದೆ. ಬೀರಪ್ಪ ಎಸ್ ಎಲ್ ಸಿ ಯಲ್ಲಿ ಪಡೆದಿದ್ದು ಕೇವಲ 316 ಅಂಕಗಳು ಮಾತ್ರ ಅಂಕಪಟ್ಟಿ ತಿದ್ದುಪಡಿ…

Read More

ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿತ್ತು. ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಅನ್ನು ಪ್ರಶ್ನಿಸಿ, ಹೈಕೋರ್ಟಿಗೆ ಸಿಎಂ ಪತ್ನಿ ಪಾರ್ವತಿ ಅವರು ರಿಟ್ ಅರ್ಜಿ ಸಲ್ಲಿಸಿದ್ದು ಇಂದು ಮಧ್ಯಾಹ್ನ ಈ ಒಂದು ಅರ್ಜಿಯ ವಿಚಾರಣೆ ನಡೆಯಲಿದೆ. ಹೌದು ಇಂದು ಧಾರವಾಡದ ಹೈಕೋರ್ಟ್ ಪೀಠದಲ್ಲಿ ಸಿಎಂ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಯಲಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಅರ್ಜಿಯ ವಿಚಾರಣೆ ಕೂಡ ಇಂದು ನಡೆಯಲಿದೆ. ಮುಡಾ ಸೈಟ್ ಹಂಚಿಕೆ ಸಂಬಂಧ ಜಾರಿ ನಿರ್ದೇಶನಲಯ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ…

Read More

ಬೆಂಗಳೂರು : ಇಂದಿನಿಂದ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರ್ ಶೋ ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ. ಈ ಒಂದು ಏರ್ ಶೋ ಕಾರ್ಯಕ್ರಮದಲ್ಲಿ ರಕ್ಷಣಾ ಇಲಾಖೆಯು ನಟ ಪುನೀತ್ ರಾಜಕುಮಾರ್ ಅವರ ಯುವರತ್ನ ಸಿನೆಮಾದ ‘ಪವರ್ ಆಫ್ ಯೂಥ್’ ಎಂಬ ಹಾಡನ್ನು ಪ್ಲೇ ಮಾಡಿತು. ಹೌದು ಇಂದಿನಿಂದ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ 2025ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದು, ರಕ್ಷಣಾ ಸಚಿವರು ಬರುತ್ತಿದ್ದಂತೆ ಭಾರತದ ಯುದ್ಧ ವಿಮಾನಗಳ ಹಾರಾಟ ಆರಂಭವಾಯಿತು. ಮುಖ್ಯ ವೇದಿಕೆ ಮುಂಭಾಗದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಸೀನರಾಗಿದ್ದು, ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್, ವಾಯು ಸೇನೆಯ ಮುಖ್ಯಸ್ಥರು ಸೇರಿದಂತೆ ಹಲವರು ಗಣ್ಯರು ಭಾಗಿಯಾಗಿದ್ದಾರೆ. ವಿಮಾನಗಳ ಹಾರಾಟ ಆರಂಭವಾಗುತ್ತಿದ್ದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ ನಟನೆಯ ಯುವರತ್ನ ಸಿನಿಮಾದ ‘ಪವರ್ ಆಫ್ ಯೂಥ್’ ಹಾಡು ಹಾಕಿದ ರಕ್ಷಣಾ ಇಲಾಖೆ, ಫೆಬ್ರವರಿ 10…

Read More

ಮಧ್ಯಪ್ರದೇಶ : ಇತ್ತೀಚಿಗೆ ಈ ಹೃದಯಾಘಾತ ಎನ್ನುವುದು ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ, ವಯೋ ವೃದ್ಧರು ಸಹ ಈ ಒಂದು ಹಾರ್ಟ್ ಅಟ್ಯಾಕ್ ಗೆ ಬಲಿಯಾಗುತ್ತಿದ್ದಾರೆ. ಇದೀಗ ಮಧ್ಯಪ್ರದೇಶದಲ್ಲಿ ಕೂಡ ಅಂದೆ ಘಟನೆ ನಡೆದಿದ್ದು, ಸಹೋದರಿಯ ಮದುವೆಯಲ್ಲಿ ವೇದಿಕೆ ಮೇಲೆ ಕುಣಿಯುತ್ತಲೇ ಕುಸಿದು ಬಿದ್ದು ಹಾರ್ಟ್ ಅಟ್ಯಾಕ್ ಆಗಿ ಯುವತಿ ಸಾವನಪ್ಪಿದ್ದಾಳೆ. ಹೌದು ಸಹೋದರಿಯ ಮದುವೆ ಸಂಭ್ರಮದಲ್ಲಿ ನೃತ್ಯ ಮಾಡುವಾಗಲೇ ಹಾರ್ಟ್​​​​​ ಅಟ್ಯಾಕ್​​​​ಗೆ ಬಲಿಯಾಗಿರುವ ಘಟನೆ ಮಧ್ಯಪ್ರದೇಶದ ವಿದಿಶಾ ಎಂಬಲ್ಲಿ ನಡೆದಿದೆ.ಅಂದಾಜು 25 ವರ್ಷದ ಯುವತಿಯು, ಹಿಂದಿ ಗೀತೆಗೆ ಡ್ಯಾನ್ಸ್ ಮಾಡುವಾಗಲೇ ಹೃದಯಾಘಾತವಾಗಿದೆ. ಈ ವೇಳೆ ವೇದಿಕೆ ಮೇಲೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಅಲ್ಲಿದ್ದ ಸಂಬಂಧಿಕರು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಯುವತಿಯ ಪ್ರಾಣ ವೇದಿಕೆಯಲ್ಲಿ ಹೃದಯಾಘಾತವಾಗಿ ಬಿದ್ದಾಗಲೇ ಸಾವಾಗಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಯುವತಿ ಡ್ಯಾನ್ಸ್ ಮಾಡುತ್ತಲೇ ಸಾವನ್ನಪ್ಪಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. https://twitter.com/TeluguScribe/status/1888587997026607401?t=1jEYu-MSyzLnjeU74C-9Bg&s=19

Read More

ಚಿಕ್ಕಮಗಳೂರು : ಚಿಕ್ಕಮಂಗಳೂರಿನಲ್ಲಿ ಇಂದು ಭೀಕರವಾದಂತಹ ಅಪಘಾತ ಸಂಭವಿಸಿದ್ದು ಕೂಲಿ ಕಾರ್ಮಿಕರನ್ನು ಹೊತ್ತು ತೆರಳುತ್ತಿದ್ದ ಟ್ರಾಕ್ಟರ್ ಒಂದು, ನಿಯಂತ್ರಣ ಕಳೆದುಕೊಂಡು 20 ಅಡಿ ಆಳಕ್ಕೆ ಬಿದ್ದ ಪರಿಣಾಮ, ಟ್ರ್ಯಾಕ್ಟರ್ ನಲ್ಲಿದ್ದ ಸುಮಾರು 40 ಕಾರ್ಮಿಕರ ಪೈಕಿ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ  ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ತೀರ್ಥಕೆರೆ ಬಳಿ ಈ ಒಂದು ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಟ್ರ್ಯಾಕ್ಟರ್ ಬಿದ್ದಿದೆ. ತೀರ್ಥಕೆರೆ ಸಮೀಪದ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕರು ಕೆಲಸಕ್ಕೆ ಇದ್ದರು. ಕೆಲಸ ಮುಗಿದ ಬಳಿಕ ದಿನಸಿ ಖರೀದಿಸಿ ಜಯಪುರದಿಂದ ಕಾರ್ಮಿಕರು ವಾಪಸ್ ಆಗುತ್ತಿದ್ದರು. ಈ ವೇಳೆ ಅಸ್ಸಾಂ ಸೇರಿದಂತೆ ಸ್ಥಳೀಯ 40 ಕಾರ್ಮಿಕರನ್ನು ಹೊತ್ತು ಟ್ರ್ಯಾಕ್ಟರ್ ತೆರಳುತ್ತಿತ್ತು. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ ವೇಳೆ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಜಯಪುರ ಮತ್ತು ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.…

Read More

ಚಿಕ್ಕಮಗಳೂರು : ಮುತ್ತಿನ ಕೊಪ್ಪದ ನೀಲಗಿರಿ ಪ್ಲಾಂಟೇಶನ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.ಚಿಕ್ಕಮಂಗಳೂರು ಜಿಲ್ಲೆಯ ಎನ್ಆರ್ ಪುರ ತಾಲೂಕು ಮುತ್ತಿನ ಕೊಪ್ಪ ನೀಲಗಿರಿ ಪ್ಲಾಂಟೇಶನ್ ನಲ್ಲಿ ಈ ಒಂದು ಭೀಕರವಾದ ಅಗ್ನಿ ದುರಂತ ಸಂಭವಿಸಿದೆ ಹೌದು ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮುತ್ತಿನ ಕೊಪ್ಪದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ನೀಲಿಗಿರಿ ಪ್ಲಾನೆಟ್ ನಲ್ಲಿರುವ ಸುಮಾರು 5 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಂಕಿ ಹತ್ತಿ ಉರಿಯುತ್ತಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.ನೀಲಗಿರಿ ಪ್ಲಾಂಟೇಶನ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ಇದೀಗ ವ್ಯಕ್ತವಾಗಿದೆ.

Read More

ಧಾರವಾಡ : ಪೋಕ್ಸೋ ಕೇಸಲ್ಲಿ ಅರೆಸ್ಟ್ ಆಗಿದ್ದಂತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕೋರ್ಟ್ ನೀಡಿತ್ತು. ಜೈಲಿಗೆ ಕರೆದೊಯ್ಯುತ್ತಿದ್ದಂತ ವೇಳೆ ಪೊಲೀಸರಿಂದ ತಪ್ಪಿಸಿಕೊಂಡ ಆರೋಪಿ ಮನೆ ಮೇಲೇರಿ ಆತ್ಮಹತ್ಯೆ ಮಾಡಿಕೊಳ್ಳೋ ಧಮ್ಕಿ ಹಾಕಿ ಹೈಡ್ರಾಮಾವನ್ನೇ ಮಾಡಿದ್ದನು.ಆದರೇ ಪೊಲೀಸರು ಮಾತ್ರ ಅಷ್ಟೇ ಜಾಣ್ಮೆ ಪ್ರದರ್ಶಿಸಿ ಆತನನ್ನು ಹಿಡಿದಿದ್ದಾರೆ. ಅದು ಹೇಗೆ ಅಂತ ಮುಂದೆ ಓದಿ. ಧಾರವಾಡದ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2021ರಲ್ಲಿ ವಿಜಯ್ ಉಣಕಲ್ ಎಂಬಾದ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಆ ಬಳಿಕ ಜಾಮೀನು ಪಡೆದು ಹೊರಗಿದ್ದನು. ಆದರೇ ನಿರಂತರವಾಗಿ ಕೋರ್ಟ್ ಗೆ ಹಾಜರಾಗದ ಕಾರಣ ವಿಜಯ್ ಉಣಕಲ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಲಾಗಿತ್ತು. ಕೋರ್ಟ್ ಆದೇಶದಿಂದಾಗಿ ವಿಜಯ್ ಉಣಕಲ್ ಅವರನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆಯ ಬಳಿಕ ಕೋರ್ಟ್ ವಿಜಯ್ ಉಣಕಲ್ ಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಹೀಗಾಗಿ ಆರೋಪಿಯನ್ನು ಜೈಲಿಗೆ ಧಾರವಾಡ ಉಪನಗರ ಠಾಣೆಯ ಪೊಲೀಸರು ಕರೆದೊಯ್ಯುತ್ತಿದ್ದಾಗ ಕುಮಾರೇಶ್ವರ ಬಡಾವಣೆಯ ಬಳಿಯಲ್ಲಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಮರ್ಡರ್ ಆಗಿದ್ದು, ಕೆಲಸ ಮಾಡುವ ವಿಚಾರಕ್ಕೆ ಇಬ್ಬರು ಕಾರ್ಮಿಕರ ನಡುವೆ ಗಲಾಟೆಯಾಗಿದ್ದು, ಓರ್ವ ಕಾರ್ಮಿಕನನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿಯ ಆಕಾಶವಾಣಿ ಲೇಔಟ್‌ನಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಸೈಯದ್ ಮೆಹಬೂಬ್ ಪಾಷ ಎಂದು ತಿಳಿದುಬಂದಿದ್ದು, ಇನ್ನು ಹತ್ಯೆಗೈದ ವ್ಯಕ್ತಿಯನ್ನು ಖಾನಿಯ ಎಂದು ತಿಳಿದುಬಂದಿದೆ. ಈ ಇಬ್ಬರು ಜೆಲ್ಲಿ, ಮರಳು ಟಾಟಾ ಏಸ್ ಗಾಡಿಗಳಿಗೆ ಲೋಡ್ ಮಾಡುವ ಕೆಲಸ ಮಾಡುತ್ತಿದ್ದರು. ಕಳೆದ ಕೆಲವು ವರ್ಷಗಳಿಂದ ರಾಜು ಎನ್ನುವ ವ್ಯಕ್ತಿ ಜೊತೆಗೂಡಿ ಮೃತ ಮೆಹಬೂಬ್ ಜೆಲ್ಲಿ, ಮರಳು ವ್ಯಾಪಾರ ಮಾಡುತ್ತಿದ್ದರು. ರಾಜು, ಮೆಹಬೂಬ್‌ಗೆ ಕರೆ ಮಾಡಿ ಬಾಡಿಗೆಯಿದೆ ಬಾ ಎಂದು ಕರೆದಿದ್ದ. 8:40ಕ್ಕೆ ಸ್ಥಳಕ್ಕೆ ಹೋಗಿದ್ದ ಮೆಹಬೂಬ್ ಖಾನ್ ಅಲ್ಲಿದ್ದ ಖಾನಿಯಾ ಎನ್ನುವ ಮತ್ತೊಬ್ಬ ಕಾರ್ಮಿಕ ಜೊತೆ ಗಲಾಟೆ ಮಾಡಿಕೊಂಡಿದ್ದಾರೆ. ಮಾತಿಗೆ ಮಾತು ಬೆಳೆದು ಸಿಮೆಂಟ್ ಚೀಲ ಕಟ್ ಮಾಡಲು ಬಳಸುತ್ತಿದ್ದ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಖಾನಿಯಾ ಅಲ್ಲಿಂದ ಪರಾರಿಯಾಗಿದ್ದಾನೆ.ಸದ್ಯ ಸಂಪಿಗೆ ಹಳ್ಳಿ…

Read More