Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ರಾಮನ ಮಂದಿರ ಉದ್ಘಾಟನೆಯ ಆಹ್ವಾನವನ್ನು ಕಾಂಗ್ರೆಸ್ ಪಕ್ಷ ಗೌರವ ಯುತವಾಗಿ ತಿರಸ್ಕರಿಸಿದೆ. ಈ ವಿಷಯದ ಕುರಿತಾಗಿ ಹುಬ್ಬಳ್ಳಿಯಲ್ಲಿ ಅಬಕಾರಿ ಸಚಿವ ಆರ್ ಬಿ ತಿಮ್ಮಪೂರ್ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು,ಶ್ರೀರಾಮ ಒಬ್ಬನೇ ದೇವರ ನಮ್ಮೂರಲ್ಲೂ ಅನೇಕ ದೇವರುಗಳಿವೆ ಮತದಾರರಿಗೆ ಅಕ್ಷತೆಗಳು ಕೊಟ್ಟು ಮತ ಕೇಳುತ್ತಾರೆ ಎಂದು ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದರು. ಶ್ರೀರಾಮ ಒಬ್ಬನೇ ದೇವರ ನಮ್ಮೂರಲ್ಲಿ ಕೂಡ ಅನೇಕ ದೇವರುಗಳು ಇವೆ ಕಾಳವ್ವ ಹನುಮಂತ ದುರ್ಗವ್ವ ಇವರೆಲ್ಲರೂ ದೇವರು ಅಲ್ಲವಾ? ರಾಮಮಂದಿರಕ್ಕೆ ಹೋದವರು ಮಾತ್ರ ಹಿಂದೂಗಳ? ಹಳ್ಳಿಯಲ್ಲಿರೋ ದೇವರು ಬಿಜೆಪಿಯವರಿಗೆ ಕಾಣುವುದಿಲ್ವಾ? ರಾಮನ ಹೆಸರಲ್ಲಿ ಚುನಾವಣೆಗೆ ಹೊರಟಿದ್ದಾರೆ ಬಿಜೆಪಿಯವರಿಗೆ ಮೋದಿ ಅವರೇ ದೇವರು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರಿಗೆ ಬೇರೆ ಕೆಲಸವಿಲ್ಲ ಅಕ್ಷತೆ ಕೊಡುತ್ತೇವೆ ನಮಗೆ ಮತ ಹಾಕಿ ಎಂದು ರಾಜಕಾರಣ ಮಾಡಲು ಹೊರಟಿದ್ದಾರೆ. ಲೋಕಸಭೆ ಚುನಾವಣೆಗೆ ರಾಮನ ಹೆಸರನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ…
ಬೆಂಗಳೂರು : ಕಳೆದ ನಾಲ್ಕು ದಿನಗಳ ಹಿಂದೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯ ತಲೆ ಮೇಲೆ ರುಬ್ಬುವ ಗುಂಡು ಕಲ್ಲನ್ನು ಎತ್ತಿ ಹಾಕಿ ಕೊಲೆ ಮಾಡಿರುವ ಪ್ರೇಮಿಗಳಿಬ್ಬರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ನಂದಿನಿಬಾಯಿ ಮತ್ತು ನಿತೀಶ್ ಕುಮಾರ್ ಬಂಧಿತ ಆರೋಪಿಗಳು. ವೆಂಕಟ್ ನಾಯಕ್(30) ಕೊಲೆಯಾದ ವ್ಯಕ್ತಿ (Murder). ಇದೇ ತಿಂಗಳ 09ರಂದು ಹೆಚ್ಎಸ್ಆರ್ ಲೇಔಟ್ನ ಮನೆಯಲ್ಲಿ ಆರೋಪಿ ನಂದಿನಿಬಾಯಿ ತನ್ನ ಪ್ರಿಯಕರ ನಿತೀಶ್ ಕುಮಾರ್ ಜೊತೆ ಸೇರಿ ತನ್ನ ಪತಿ ವೆಂಕಟ್ ನಾಯಕ್ ತಲೆ ಮೇಲೆ ರುಬ್ಬುವ ಗುಂಡು ಹಾಕಿ ಕೊಲೆ ಮಾಡಿದ್ದರು. ಸದ್ಯ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಗಂಡ ಮನೆಯಲ್ಲಿ ಇಲ್ಲ ಎಂದು ಹೇಳಿ ನಂದಿನಿ ಬಾಯಿ ಜನವರಿ 09 ರಂದು ಪ್ರಿಯಕರ ನಿತೇಶ್ನನ್ನು ಹೆಚ್ಎಸ್ಆರ್ ಲೇಔಟ್ನ ತನ್ನ ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಗಂಡ ವೆಂಕಟನಾಯಕ್ ಧಿಡೀರ್ ಮನೆಗೆ ಬಂದಿದ್ದ. ಮನೆಗೆ ಕಾಲಿಡುತ್ತಿದ್ದಂತೆ ರೂಮ್ನಲ್ಲಿ ತನ್ನ ಪತ್ನಿ ಬೇರೊಬ್ಬನ ಜೊತೆ ಆತ್ಮೀಯ ಸಲುಗೆಯಲ್ಲಿದ್ದದನ್ನು…
ಶಿವಮೊಗ್ಗ : ಯುವನಿಧಿ ಕಾರ್ಯಕ್ರಮಕ್ಕೆ ಸಂಸದ ಬಿ ವೈ ರಾಘವೇಂದ್ರ ಕಿಡಿಕಾರಿದ್ದು ಇನ್ನೆರಡು ತಿಂಗಳಲ್ಲಿ ಲೋಕಸಭೆ ಚುನಾವಣೆ ಇದೆ.ತರಾತುರಿಯಲ್ಲಿ ಯುವನಿಧಿ ಚಾಲನೆ ನೀಡಿದ್ದಾರೆ ಯುವನಿಧಿ ಯೋಜನೆಯ ಮುಂದುವರೆಯುವುದು ಅನುಮಾನವಾಗಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಶಿವಮೊಗ್ಗದಲ್ಲಿ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮರಳು ಮಾಡಲು ಹೊರಟಿದೆ. ಗ್ಯಾರೆಂಟಿಗೆ ಶರತ್ತು ಹಾಕಿ ಸಂಖ್ಯೆ ಕಡಿಮೆ ಮಾಡುತ್ತಿದೆ.ಸರ್ಕಾರ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತಿದೆ.ಚುನಾವಣೆಯ ಬಳಿಕ ಮುಂದುವರೆಯುವುದು ಅನುಮಾನವಾಗಿದೆ ಈ ಗ್ಯಾರಂಟಿ ಮುಂದುವರಿಯುವ ವಿಶ್ವಾಸವೇ ಇಲ್ಲದಂತಾಗಿದೆ ಎಂದು ಆಕ್ರೋಶ ಹೊರಹಕಿದ್ದಾರೆ. ಸರ್ಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ ಶಿವಮೊಗ್ಗದಲ್ಲಿ ಸಂಸದ ಬಿ ವೈ ರಾಘವೇಂದ್ರ ವಾಗ್ದಾಳಿ ನಡೆಸಿದರು.ಯುವಜನರ ಕಣ್ಣಿಗೆ ಮಣ್ಣೆತ್ತಿಸುವ ಕೆಲಸ ಮಾಡಿದೆ ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುವ ಭರವಸೆ ನೀಡಿದೆ.ಆದರೆ ಈ ಯೋಜನೆಯಲ್ಲಿ ಫಲಾನುಭವಿಗಳನ್ನು ಪಡೆಯಲು ಮಾನದಂಡಗಳನ್ನು ಹಾಕಲಾಗಿದ್ದು ಯುವಕರು ಮತ್ತು ಮತದಾರರಿಗೆ ಕಾಂಗ್ರೆಸ್ ಸರ್ಕಾರ ಮೋಸ ಮಾಡಿದೆ ಎಲ್ಲರ ನಿರೀಕ್ಷೆ ಸುಳ್ಳಾಗಿದೆ ಎಂದು…
ಹಾಸನ : ಯುವತಿಯ ಹಿಂದೆ ಬಿದ್ದು ತನ್ನನ್ನು ಪ್ರೀತಿಸು ಎಂದು ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಿಡಗೂಡು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಯುವತಿಯನ್ನು ಸಂಗೀತ (21) ಎಂದು ಹೇಳಲಾಗುತ್ತಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ.ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಎಡಗೂಡು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮೃತ ಸಂಗೀತಾ ಬಿಕಾಂ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿದ್ದಳು.ಸಂಗೀತಾಳಿಗೆ ಪ್ರೀತಿಸು ಎಂದು ಶಿವು ಎನ್ನುವ ಯುವಕ ಪಡಿಸುತ್ತಿದ್ದ ಎಂದು ಹೇಳಲಾಗುತ್ತಿದೆ.ಅಲ್ಲದೆ ಇದೆ ವಿಷಯವಾಗಿ ಅವಾಚ್ಯವಾಗಿ ನಿಂದಿಸಿ ಆರೋಪಿಯು ಹಲ್ಲೆ ಕೂಡ ಮಾಡಿದ್ದ ಎಂದು ಹೇಳಲಾಗುತ್ತಿದ್ದು ಪ್ರೀತಿಸದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗಿದೆ. ಇದರಿಂದ ಮನನೊಂದ ಸಂಗೀತ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಆರೋಪಿಸಿ ಶಿವುನನ್ನು ಬೇಲೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಘಟನೆ ಕುರಿತಂತೆ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಗರದ ರೇಸ್ ಕೊರ್ಸ್ ಮೇಲೆ ಸಿಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯ ರಾತ್ರಿ 1 ಗಂಟೆಗೆ ದಾಳಿ ಅಂತ್ಯಗೊಳಿಸಲಾಗಿದೆ. ದಾಳಿ ವೇಳೆ ಸುಮಾರು 3 ಕೋಟಿ 47 ಲಕ್ಷ ಹಣ ಪತ್ತೆಯಾಗಿದೆ. ಲೆಕ್ಕವಿಲ್ಲದ ಹಣ ಹಾಗೂ ಜಿಎಸ್ಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ 60 ಜನರನ್ನು ವಶಕ್ಕೆ ಪಡೆದು ಸ್ಟೇಷನ್ ಬೇಲ್ ಮೇಲೆ ಬಿಡುಗಡೆಗೊಳಿಸಲಾಗಿದೆ. ಸಿಸಿಬಿ ದಾಳಿಯಲ್ಲಿ ಸಿಕ್ಕವರ ಮೇಲೆ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸುಮಾರು 60 ಜನರನ್ನು ವಶಕ್ಕೆ ಪಡೆದು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ನೊಟೀಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ದಾಳಿ ವೇಳೆ ಲೆಕ್ಕಕ್ಕಿಂತ ಅಧಿಕ ಹಣ ಪತ್ತೆಯಾಗಿದ್ದು ಜೊತೆಗೆ ಜಿಎಸ್ಟಿ ವಂಚಿಸಿರುವ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ. ದಾಳಿ ವೇಳೆ ಸಿಕ್ಕ ಹಣಕ್ಕೆ ದಾಖಲೆ ಸಲ್ಲಿಸುವಂತೆ ಸಿಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ದಾಖಲೆ…
ನವದೆಹಲಿ: ಕಳೆದ 1965ರಿಂದ 2016ರವರೆಗೆ ಸುಮಾರು 50 ವರ್ಷಗಳ ಕಾಲ ಕಾವೇರಿ ಕಣಿವೆಯ 12,850 ಚದರ ಕಿ.ಮೀ. ಹಸಿರು ನಾಶವಾಗಿದೆ ಎಂಬ ಭಾರತೀಯ ವಿಜ್ಞಾನ ಸಂಸ್ಥೆಯ ವರದಿಯ ಆಧಾರದಲ್ಲಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳ ಸರ್ಕಾರಗಳಿಗೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ (ಎನ್ಜಿಟಿ) ಪ್ರಧಾನ ಪೀಠ ನೋಟಿಸ್ ನೀಡಿದೆ. ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ನೇತೃತ್ವದ ತ್ರಿಸದಸ್ಯ ಪೀಠವು ಕೇಂದ್ರ ಪರಿಸರ, ಅರಣ್ಯ ಹಾಗೂ ತಾಪಮಾನ ಬದಲಾವಣೆ ಸಚಿವಾಲಯದ ಮಹಾನಿರ್ದೇಶಕರು, ಫಾರೆಸ್ಟ್ ಸರ್ವೆ ಆಫ್ ಇಂಡಿಯಾವನ್ನು ಪ್ರತಿವಾದಿಗಳನ್ನಾಗಿ ಮಾಡಿ ನೋಟಿಸ್ ಕೊಟ್ಟಿದೆ. 50 ವರ್ಷಗಳಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಶೇ 15.19ರಷ್ಟು ಅರಣ್ಯ ಪ್ರದೇಶ ಕಡಿಮೆಯಾಗಿದೆ. ಅಭಿವೃದ್ಧಿ ಚಟುವಟಿಕೆಗಳು ಹಾಗೂ ಕಾಳ್ಗಿಚ್ಚಿನಿಂದಾಗಿ ರಾಷ್ಟ್ರೀಯ ಉದ್ಯಾನದ ಪೂರ್ವಭಾಗದಲ್ಲಿ ಅರಣ್ಯ ಗಣನೀಯವಾಗಿ ಕಡಿಮೆಯಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಅರಣ್ಯ ಪ್ರಮಾಣ ಶೇ 11ರಷ್ಟು ಕಡಿಮೆಯಾಗಿದೆ. ಇದಕ್ಕೆ ಮಾನವನ ಹಸ್ತಕ್ಷೇಪ ಕಾರಣ. ಮೀಸಲು ಪ್ರದೇಶದಲ್ಲಿ ತೋಟಗಾರಿಕೆ ಚಟುವಟಿಕೆಗಳು ಭಾರಿ ಹೆಚ್ಚಳ…
ಬೆಂಗಳೂರು : ಕಳೆದ ಎರಡು ವರ್ಷದಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನು ಯುವತಿಗೆ ಬೇರೊಬ್ಬರ ಜೊತೆಗೆ ಮದುವೆ ಆಗಿದ್ದರಿಂದ ಕೂಡಲೇ ಇದರಿಂದ ಮನನೊಂದ ಯುವಕನೊಬ್ಬ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸುಭಾಷ್ ನಗರದಲ್ಲಿ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಪ್ರವೀಣ್ (30) ಎನ್ನುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳಿಂದ ಪ್ರವೀಣ್ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬರ ಜೊತೆ ವಿವಾಹವಾಗಿತ್ತು.ಇದಕ್ಕೆ ಮನನೊಂದು ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ಕುರಿತಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ಕುರಿತಂತೆ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು : ಇದೇ 17ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಫ್ಘಾನಿಸ್ತಾನ್ ದೇಶಗಳ ನಡುವೆ ಹೊನಲು ಬೆಳಕಿನ T-20 ಪಂದ್ಯ ನಡೆಯಲಿದ್ದು, ಸಾವಜನಿಕರಿಗೆ ಅನುಕೂಲವಾಗಲು ಪಂದ್ಯ ವೀಕ್ಷಣೆಗೆ ಹೆಚ್ಚುವರಿ ಬಸ್ ಗಳ ಸೇವೆಯನ್ನು ಒದಗಿಸಲಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ 12 ಕಡೆಗಳಿಗೆ ಹೆಚ್ಚುವರಿ ಬಸ್ ಕಾರ್ಯಾಚರಣೆ ನಡೆಸಲಿವೆ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್, ಕೆಂಗೇರಿ, ನೆಲಮಂಗಲ, ಯಲಹಂಕ 5ನೇ ಹಂತ 5ನೇ ಹಂತ, ಬಾಗಲೂರು, ಹೊಸಕೋಟೆಗೆ ಹೆಚ್ಚಿನ ಬಸ್ ವ್ಯವಸ್ಥೆ ಮಾಡಲಾಗಿದೆ. ಮಾರ್ಗಸಂಖ್ಯೆ ಎಸ್ಬಿಎಸ್ -1ಕೆ ಬಸ್ ಎಚ್ಎಎಲ್ ಮಾರ್ಗವಾಗಿ ಕಾಡುಕೋಡಿ ತಲುಪಲಿದೆ. ಎಸ್ಬಿಎಸ್-13ಕೆ ನಂಬರಿನ ಬಸ್ ಹೂಡಿ ಮಾರ್ಗವಾಗಿ ಕಾಡುಗೋಡಿ ಬಸ್ ನಿಲ್ದಾಣ ತಲುಪಲಿದೆ. ಜಿ-2 ಬಸ್ ಅಗರ, ದೊಮ್ಮಸಂದ್ರ ಮಾರ್ಗವಾಗಿ ಸರ್ಜಾಪುರ, ಜಿ-3ಬಸ್ ಹೊಸೂರು ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ, ಜಿ-4 ಜಯದೇವ ಆಸ್ಪತ್ರೆ ಮಾರ್ಗವಾಗಿ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ತಲುಪಲಿದೆ. ಜಿ-6 ಬಸ್…
ಬಾಗಲಕೋಟೆ : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ಇದೀಗ ಸಚಿವ ಆರ್ಮಿ ತಿಮ್ಮಾಪುರಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಬಾಗಲಕೋಟೆ ಜಿಲ್ಲಾ ಮಾದಿಗ ಸಮುದಾಯ ಆಗ್ರಹಿಸಿದೆ. ಕೂಡಲಸಂಗಮದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿದಲ್ಲಿದ್ದು ಅವರಿಗೆ ಮನವಿ ಸಲ್ಲಿಸಲಾಗುತ್ತದೆ. ಬಾಗಲಕೋಟೆಯ ಜಿಲ್ಲಾ ಮಾದಿಗ ಸಮುದಾಯದಿಂದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಲಾಗುತ್ತದೆ.ಅಗತ್ಯ ಬಿದ್ದರೆ ಹೈಕಮಾಂಡ್ ಭೇಟಿ ಮಾಡಲು ಮುಖಂಡರು ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಸಮುದಾಯದ ಮುಖಂಡ ಬೀರಪ್ಪ ಮ್ಯಾಗೇರಿ ಈ ಕುರಿತಂತೆ ಮಾಹಿತಿ ನೀಡಿದರು. ಕೂಡಲಸಂಗಮದಲ್ಲಿ ಇಂದು ಬಸವ ಧರ್ಮಪೀಠದಿಂದ ಶರಣ ಮೇಳ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಒಂದು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಕೂಡಲಸಂಗಮದಲ್ಲಿ ಇಂದು ಬಸವ ಧರ್ಮಪೀಠದಿಂದ ಶರಣ ಮೇಳ ಕಾರ್ಯಕ್ರಮ ಆಯೋಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಶರಣ ಮೇಳದಲ್ಲಿ ಭಾಗಿಯಾಗಲಿದ್ದಾರೆ. ಯಾದಗಿರಿ ಜಿಲ್ಲೆ ತಿಂಥಣಿ ಗ್ರಾಮದಿಂದ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಮಧ್ಯಾಹ್ನ 1:30ಕ್ಕೆ ಹೆಲಿಕ್ಯಾಪ್ಟರ್ ನಲ್ಲಿ ಹೊರಟು…
ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಇಂದು ಶರಣಮೇಳ ಕಾರ್ಯಕ್ರಮ ನಡೆಯಲಿದ್ದು ಈ ಒಂದು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಕೂಡಲಸಂಗಮದಲ್ಲಿ ಇಂದು ಬಸವ ಧರ್ಮಪೀಠದಿಂದ ಶರಣ ಮೇಳ ಕಾರ್ಯಕ್ರಮ ಆಯೋಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಶರಣ ಮೇಳದಲ್ಲಿ ಭಾಗಿಯಾಗಲಿದ್ದಾರೆ. ಯಾದಗಿರಿ ಜಿಲ್ಲೆ ತಿಂಥಣಿ ಗ್ರಾಮದಿಂದ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಮಧ್ಯಾಹ್ನ 1:30ಕ್ಕೆ ಹೆಲಿಕ್ಯಾಪ್ಟರ್ ನಲ್ಲಿ ಹೊರಟು ಮಧ್ಯಾಹ್ನ 3.30ಕ್ಕೆ ಆಗಮಿಸಲಿದ್ದು, ಬಸವ ಧರ್ಮ ಪೀಠದ ಶರಣ ಮೇಳದಲ್ಲಿ ಭಾಗಿಯಾಗಲಿದ್ದಾರೆ. ನಂತರ ಹೆಲಿಕ್ಯಾಪ್ಟರ್ ನಲ್ಲಿ ಜಿಂದಾಲ್ ಏರ್ ಸ್ಟ್ರಿಪ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.