Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ತುಮಕೂರು : ಟೆಂಪೋ ವಾಹನ ಪಲ್ಟಿಯಾಗಿ 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬುಗುಡೂರು ಗ್ರಾಮದ ಬಳಿ ಈ ಒಂದು ಘಟನೆ ಸಂಭವಿಸಿದೆ.  ಗ್ರಾಮದ ತಿರುವಿನ ಬಳಿ ನಿಯಂತ್ರಣದ ತಪ್ಪಿ ಟೆಂಪೋ ಪಲ್ಟಿ ಆಗಿದೆ. ಸೆಂಟ್ರಿಂಗ್ ಕೆಲಸ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಈ ಭೀಕರವಾದ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಿರುಮಣಿ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.

Read More

ನವದೆಹಲಿ: ಕಳೆದ ಕೆಲವು ದಿನಗಳ ಹಿಂದೆ ವಾರಕ್ಕೆ 60ರಿಂದ 90 ಗಂಟೆ ಕೆಲಸ ಮಾಡುವ ಅಗತ್ಯದ ಬಗ್ಗೆ ಇನ್ಫೋಸಿಸ್‌ನ ‌ ಸಂಸ್ಥಾಪಕ ಅಧ್ಯಕ್ಷ ನಾರಾಯಣ ಮೂರ್ತಿ ಮತ್ತು ಎಲ್ ಆ್ಯಂಡ್ ಟಿ ಅಧ್ಯಕ್ಷ ಸುಬ್ರಹ್ಮಣ್ಯಂ ಅವರ ಸಲಹೆ ಕುರಿತು ದೇಶವ್ಯಾಪಿ ಚರ್ಚೆ ನಡೆದ ಬೆನ್ನಲ್ಲೇ, ವಾರಕ್ಕೆ 60 ಗಂಟೆಗಿಂತ ಹೆಚ್ಚಿನ ದುಡಿಮೆಯು ಸಿಬ್ಬಂದಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷೆ ಹೇಳಿರು ವುದು ಸಂಚಲನ ಮೂಡಿಸಿದೆ. ಹೌದು ಉತ್ಪಾದಕತೆಯ ಹೆಸರಲ್ಲಿ ಕಚೇರಿಗಳಲ್ಲಿ ಸುದೀರ್ಘ ಅವಧಿಗೆ ಕೆಲಸ ಮಾಡುವುದು ಆರೋಗ್ಯಕ್ಕೆ ಹಾನಿಕಾರಕ.ನಿತ್ಯವೂ ಕುಳಿತಲ್ಲೇ 12 ತಾಸಿಗಿಂತ ಅಧಿಕ ಕೆಲಸ ಮಾಡುವುದು ಮಾನಸಿಕಸ್ವಾಸ್ಥ್ಯಕ್ಕೆ ಅಪಾಯಕಾರಿ ಎಂದು ಹಲವು ಅಧ್ಯಯನ ವರದಿಗಳು ಹೇಳಿವೆ ಎಂದು ಸರ್ಕಾರ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಆದರೆ ಇಂಥ ಅಭಿಪ್ರಾಯದ ಜೊತೆಜೊತೆಗೇ, ದೇಶದ ಕಾರ್ಮಿಕ ಕಾನೂನುಗಳು ಗರಿಷ್ಠ ಕೆಲಸ ಅವಧಿಗೆ ಹೊಂದಿರುವ ಬಿಗಿ ನಿಯಮಗಳ ಬಗ್ಗೆ ಆಕ್ಷೇಪವನ್ನೂ ವ್ಯಕ್ತಪಡಿಸಿದೆ. ಇಂಥ ಬಿಗಿ ನಿಯಮಗಳು ಉದ್ಯಮಗಳ…

Read More

ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ ದಾರಿ ಹುಡುಕಾಟ ನಡೆಸಿರುವ ಸರ್ಕಾರದ ಮುಂದೀಗ ‘ಅತ್ಯಾಚಾರಿಗಳಿಗೆ ಆಸ್ತಿಯಲ್ಲಿ ಹಕ್ಕಿಲ್ಲ’ ಎಂಬ ಪ್ರಸ್ತಾವನೆ ಇದ್ದು, ಅಧಿಕಾರಿಗಳು ಕಾನೂನು ಸಾಧ್ಯಾಸಾಧ್ಯತೆ ಗಮನಿಸಿ ಪ್ರಸ್ತಾವನೆಗೆ ಅನುಮತಿ ನೀಡುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಈ ಒಂದು ಪ್ರಸ್ತಾವನೆಗೆ ಅನುಮತಿ ದೊರೆತರೆ ಅತ್ಯಾಚಾರವಾಗುವುದನ್ನು ತಡೆಯಬಹುದಾಗಿದೆ. ಈ ಕುರಿತಂತೆ ಈಗಾಗಲೇ ತಜ್ಞರ ಸಮಿತಿ ಮಾಡಿರುವ ಈ ಶಿಫಾರಸನ್ನು ಪರಾಮರ್ಶೆ ಮಾಡಲು ಮುಖ್ಯಕಾರ್ಯದರ್ಶಿಗೆ ಸರ್ಕಾರ ಸೂಚಿಸಿದೆ. ತಜ್ಞರ ವರದಿಯಲ್ಲಿ ರೇಪಿಸ್ಟ್ ಗಳಿಗೆ ಆಸ್ತಿ ಹಕ್ಕು ಹಿಂಪಡೆಯುವ ಪ್ರಸ್ತಾಪ ಇದೆ. ಅಷ್ಟೇ ಅಲ್ಲದೆ, ಸರ್ಕಾರದ ಎಲ್ಲ ಸೌಲಭ್ಯಗಳನ್ನು ಹಿಂಪಡೆಯುವ ಬಗ್ಗೆ ಕ್ರಮಗಳಾಗಬೇಕೆಂದು ಉಲ್ಲೇಖವಿದೆ. ಅಂದರೆ, ಪಡಿತರ ವಿತರಣೆ, ಸ್ಕಾಲರ್ ಶಿಪ್ ಸೇರಿ ಯಾವುದೇ ಸೌಲಭ್ಯ ನೀಡದ ತೀರ್ಮಾನ ಅಗಬೇಕೆಂದು ಹೇಳಲಾಗಿದೆ. 2014ರಲ್ಲಿ ರಾಜ್ಯದ ವಿವಿಧ ಕಡೆಗಳಲ್ಲಿ ಮಹಿಳೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಸರಣಿ ರೀತಿ ನಡೆದಾಗ ಅಂದಿನ ಸರ್ಕಾರ ಎಂ.ಸಿ.ನಾಣಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ತಜ್ಞರ…

Read More

ಬೆಂಗಳೂರು : ಇಂದು ರಾಜ್ಯದಾದ್ಯಂತ ಹಾಲು ಮೊಸರು ಸಿಗೋದು ಅನುಮಾನ ಎಂದೇ ಹೇಳಲಾಗುತ್ತಿತ್ತು. ಏಕೆಂದರೇ ಕೆಎಂಎಫ್ ಆಡಳಿತ ಮಂಡಳಿ ವಿರುದ್ಧ ಅಧಿಕಾರಿಗಳು ಹಾಗೂ ನೌಕರರು ಸಮರ ಸಾರಿದ್ದು, ಫೆಬ್ರವರಿ 1ರಿಂದ ಅಂದರೆ ಇಂದಿನಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ನಿರ್ಧಾರ ಮಾಡಿದ್ದರು. ಆದರೆ ಇದೀಗ ಮುಷ್ಕರವನ್ನು ಫೆಬ್ರವರಿ 7ಕ್ಕೆ ಮುಂದೂಡಿದ್ದು, ಇಂದು ಹಾಲಿನ ಉತ್ಪನ್ನಗಳಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಈ ಕುರಿತು ನಿನ್ನೆ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಕೆಎಂಎಫ್ ಮತ್ತು ಜಿಲ್ಲಾ ಹಾಲು ಒಕ್ಕೂಟಗಳ ಅಧಿಕಾರಿ, ನೌಕರರ ಸಂಘದ ಅಧ್ಯಕ್ಷ ಗೋವಿಂದೇಗೌಡ, ಕೆಎಂಎಫ್ ಅಧ್ಯಕ್ಷರು ಮತ್ತು ಸಹಕಾರ ಇಲಾಖೆ ಫೆ.7ರೊಳಗೆ ಏಳನೇ ವೇತನ ಆಯೋಗದ ಶಿಫಾರಸು ಜಾರಿ ಕುರಿತು ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಫೆ.1ರಿಂದ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.ಒಂದು ವೇಳೆ ಫೆಬ್ರವರಿ ಮೊದಲ ವಾರದೊಳಗೆ ಬೇಡಿಕೆ ಈಡೇರಿ ಇ ಸದಿದ್ದರೆ ಸಂಘದ ಕಾರ್ಯಕಾರಿ ಮಂಡಳಿ ಸಭೆ ಕರೆದು ಮುಂದಿನ ಹೋರಾಟ ತೀರ್ಮಾನಿಸಲಾಗು 0 ವುದು ಎಂದು ತಿಳಿಸಿದರು.…

Read More

ಹುಬ್ಬಳ್ಳಿ : ಕಳೆದ ವರ್ಷ ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ ಇಡೀ ದೇಶದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಒಂದು ಕೇಸ್ ಗೆ ಸಂಬಂಧಿಸಿದಂತೆ ಕೊಲೆ ಆರೋಪಿ ಫಯಾಜ್ ನನ್ನು ಕಾಲೇಜಿನಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲೀಕ್ ಹೋರಾಟ ಮಾಡಿದ್ದರು.ಇದೀಗ ಕೊಲೆ ಆರೋಪಿ ವಿದ್ಯಾರ್ಥಿ ಫಯಾಜ್ ಅಮಾನತು ಮಾಡಿಸಿ ಅಮಾನತು ಪತ್ರ ಪಡೆದುಕೊಂಡಿದ್ದಾರೆ.ಇದೆ ವೇಳೆ ಇದುವರೆಗೆ ಫಯಾಜ್ ಎನ್ನುವ ವಿದ್ಯಾರ್ಥಿಯನ್ನು ಅಮಾನತು ಮಾಡದ ಪ್ರಿನ್ಸಿಪಾಲ್ ಅವರನ್ನು ತರಾಟೆಗೆ ತೆಗೆದುಕೊಳ್ಳಲಾಯಿತು. ಪಿಸಿ ಜಾಬಿನ್ ಕಾಲೇಜ್​ನಲ್ಲಿ ಫಯಾಜ್ 2022ರಲ್ಲಿ​​ BCA ವ್ಯಾಸಂಗ ಮಾಡುತಿದ್ದ. 5 ಮತ್ತು 6ನೇ ಸೆಮಿಸ್ಟರ್​ನಲ್ಲಿ ಕೆಲ ವಿಷಯಗಳಲ್ಲಿ ಫೇಲ್ ಕೂಡ ಆಗಿದ್ದ. ಇನ್ಮುಂದೆ ಫಯಾಜ್ ಕಾಲೇಜ್​ಗೆ ಬರಲು ಬಿಡಲ್ಲ ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ಕಳೆದ ವರ್ಷ ಏ.18ರಂದು ನೇಹಾ ಅವರ ಕಾಲೇಜಿನ ಆವರಣದಲ್ಲೇ ಹಂತಕ ಫೈಯಾಜ್​ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದ.…

Read More

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಇದುವರೆಗೂ ಆಸ್ತಿ ತೆರಿಗೆ ಪಾವತಿಸದವರಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಲು ಮುಂದಾಗಿದ್ದು, ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ 608 ಆಸ್ತಿ ಮಾಲೀಕರು ಹಲವು ವರ್ಷಗಳಿಂದ ಆಸ್ತಿ ತೆರಿಗೆ ಪಾವತಿ ಮಾಡದ ಹಿನ್ನೆಲೆಯಲ್ಲಿ ಅವರ ಸ್ಥಿರ ಆಸ್ತಿಗಳನ್ನು ಹರಾಜಿನ ಮೂಲಕ ಮಾರಾಟ ಮಾಡಿ, ಆಸ್ತಿ ತೆರಿಗೆಗೆ ವಜಾ ಮಾಡಿಕೊಳ್ಳಲು ಮುಂದಾಗಿವೆ. ಹೌದು ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ವಿಚಾರವಾಗಿ ಕಾರಣ ಕೇಳಿ ನೋಟೀಸ್, ಬೇಡಿಕೆ ನೋಟೀಸ್, ಆಸ್ತಿಗಳ ಮುಟ್ಟೊಗೋಲು, ವಸತಿಯೇತರ ಆಸ್ತಿಗಳಿಗೆ ಬೀಗಮುದ್ರೆ ಸೇರಿದಂತೆ ಇನ್ನಿತರೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಕೂಡಾ ಸಾಕಷ್ಟು ಆಸ್ತಿ ಮಾಲೀಕರು ದೀರ್ಘಕಾಲದಿಂದ ಪಾಲಿಕೆಗೆ ಆಸ್ತಿ ತೆರಿಗೆ ಪಾವತಿಸುತ್ತಿಲ್ಲ. ಈ ಸಂಬಂಧ ಆಸ್ತಿ ತೆರಿಗೆ ಬಾಕಿ ವಸೂಲಿ ಮಾಡುವ ಸಲುವಾಗಿ ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರ ಸ್ಥಿರ ಆಸ್ತಿಗಳನ್ನು ತುರ್ತು ಮಾರಾಟ ಮಾಡಲು ಹರಾಜು ಪ್ರಕ್ರಿಯೆಯನ್ನು ಆರಂಭಿಸಲಾಗುತ್ತಿದೆ. ಹಾಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ 2 ಲಕ್ಷಕ್ಕಿಂತ ಹೆಚ್ಚು ಆಸ್ತಿ…

Read More

ಬೆಂಗಳೂರು : ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈಗಾಗಲೇ ಈ ಒಂದು ಅಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿಯಲ್ಲೇ ಬಣ ಬಡಿದಾಟ ಶುರುವಾಗಿದೆ. ಒಂದು ಕಡೆ ಬಿವೈ ವಿಜಯೇಂದ್ರ ಹಾಗೂ ಇನ್ನೊಂದು ಕಡೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ನಡುವೇ ವಾಕ್ಸಮರ ನಡೆಯುತ್ತಿದೆ. ಇದರ ಮಧ್ಯ ರಾಜ್ಯ ಬಿಜೆಪಿ ಅಧ್ಯಕ್ಷನಾಗಿ ನಾನೇ ಮುಂದುವರೆಯುತ್ತೇನೆ ಎಂದು ಹೇಳುವ ಮೂಲಕ ಶಾಸಕ ಯತ್ನಾಳ್ ಬಣಕ್ಕೆ ಬಿವೈ ವಿಜಯೇಂದ್ರ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿ ವೈ ವಿಜಯೇಂದ್ರ ನಾನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತೇನೆ ಬಳಿಕ ನಾನೇ ರಾಜ್ಯಾಧ್ಯಕ್ಷನಾಗಿ ಮುಂದುವರೆಯುತ್ತೇನೆ ಎಂದು ಅವರು ವಿಶ್ವಾಸವನ್ನು ವ್ಯಕ್ತಪಡಿಸಿದರು. ಈ ಒಂದು ಹೇಳಿಕೆಯ ಮೂಲಕ ತಮ್ಮ ವಿರುದ್ಧ ತಿರುಗಿಬಿದ್ದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣಕ್ಕೆ ನೇರವಾಗಿ ತಿರುಗೇಟು ನೀಡಿದ್ದಾರೆ. ಇನ್ನು ಶಾಸಕ ಯತ್ನಾಳ್ ಅವರು ಬಿ ವೈ ವಿಜಯೇಂದ್ರ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು, ಪಕ್ಷ ವಿರೋಧಿ ಕೆಲಸ ಮಾಡಿರುವವರನ್ನೇ ಇದೀಗ ಜಿಲ್ಲಾಧ್ಯಕ್ಷರನ್ನು…

Read More

ಬೆಂಗಳೂರು : 16 ವರ್ಷದ ಬಾಲಕಿ ಮೇಲೆ ಪಾಪಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಸಿದಂತೆ ಹೈಕೋರ್ಟ್ ಇದೀಗ 26 ವಾರಗಳ ಗರ್ಭ ಧರಿಸಿದ್ದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡಿದೆ.ಅಲ್ಲದೇ ಅಪ್ರಾಪ್ತೆಯ ಜೀವಕ್ಕೆ ಹಾನಿಯಾಗುವ ಸಾಧ್ಯತೆ ಇದ್ದರೆ ಗರ್ಭಪಾತ ಮಾಡಬೇಕೇ, ಬೇಡವೇ ಎಂಬುದನ್ನು ವೈದ್ಯರು ನಿರ್ಧರಿಸಬಹುದು ಎಂದು ಹೈಕೋರ್ಟ್​ ಹೇಳಿದೆ. ಸಂತ್ರಸ್ತೆ ಪರವಾಗಿ ಅವರ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌.ದೇವದಾಸ್‌ ಅವರಿದ್ದ ನ್ಯಾಯಪೀಠ ವಾಣಿವಿಲಾಸ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ಅಭಿಪ್ರಾಯ ಪಡೆದ ನಂತರ ಈ ಆನುಮತಿ ನೀಡಿದೆ. ಅಪ್ರಾಪ್ತೆಗೆ ವೈದ್ಯಕೀಯ ಗರ್ಭಪಾತ ನಿಯಮಗಳು 1971 ಆಸ್ಪತ್ರೆಯ ವೆಚ್ಚದಲ್ಲಿ ಗರ್ಭಪಾತ ಪ್ರಕ್ರಿಯೆ ಸರ್ಕಾರಿ ವೆಚ್ಚದಲ್ಲಿ ನಡೆಸಬೇಕು. ಅಲ್ಲದೇ, ಚಿಕಿತ್ಸೆಗಾಗಿ ಸಂತ್ರಸ್ತೆ ಮತ್ತವರ ಪೋಷಕರು ಆಸ್ಪತ್ರೆಗೆ ಕರೆದೊಯ್ಯಲು ಮತ್ತು ಅಲ್ಲಿಂದ ಮನೆಗೆ ಕರೆದುಕೊಂಡು ಬರುವುದು ಹಾಗೂ ಹೆಚ್ಚುವರಿ ಚಿಕಿತ್ಸೆಗಾಗಿ ಮತ್ತೊಂದೆಡೆ ಹೋಗಬೇಕಾದರೂ ಸ್ಥಳೀಯ ಪೊಲೀಸ್​ ಠಾಣೆಯಿಂದ ಉಚಿತವಾಗಿ ವಾಹನವನ್ನು ವ್ಯವಸ್ಥೆ ಮಾಡಬೇಕು. ಆದೇಶಕ್ಕೆ ಸಂಬಂಧಿಸಿದಂತೆ ಮುಂದಿನ ಎರಡು ವಾರಗಳಲ್ಲಿ ವಸ್ತುಸ್ಥಿತಿ…

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಮಗನ ಭೀಕರ ಮರ್ಡರ್ ಆಗಿದ್ದು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಮಗನನ್ನು ಭೀಕರವಾಗಿ ಕೊಲೆಗೈದ ಬಳಿಕ ದುಷ್ಕರ್ಮಿಗಳು ಶವವನ್ನು ಚರಂಡಿಯಲ್ಲಿ ಬಿಸಾಕಿ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರದ ಮರಸನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಕೊಲೆಗೈದು ಚರಂಡಿಯಲ್ಲಿ ಬಿಸಾಕಿದ ದುಷ್ಕರ್ಮಿಗಳು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಮಗನ ಬರ್ಬರ ಹತ್ಯೆ ಚಿಕ್ಕಬಳ್ಳಾಪುರ ಮರಸನಹಳ್ಳಿಯಲ್ಲಿ ಒಂದು ಘಟನೆ ನಡೆದಿದೆ ಹಾರೋಬಂಡೆ ಗ್ರಾಮದ ಮಾರುತೇಶ್ (30) ಎನ್ನುವ ಯುವಕನನ್ನು ಬರ್ಬರವಾಗಿ ಕೊಲೆಮಾಡಲಾಗಿದೆ. ಕೊಲೆಯಾದಂತಹ ಮಾರುತೇಶ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಎನ್ನಲಾಗುತ್ತಿದೆ. ಇದೀಗ ಈತನ ಶವ ಚರಂಡಿಯಲ್ಲಿ ಪತ್ತೆಯಾಗಿದೆ. ಸದ್ಯ ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳಿಗಾಗಿ ಪೊಲೀಸರು ಇದೀಗ ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ನಾಡಕಚೇರಿಯ ಇಬ್ಬರು ಗ್ರಾಮ ಲೆಕ್ಕಾಧಿಕಾರಿಗಳು ಜಮೀನು ಪೌತಿ ಖಾತೆ ಮಾಡಿಕೊಡಲು ವ್ಯಕ್ತಿ ಒಬ್ಬರ ಬಳಿ 2.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆದಿದೆ. ಹೌದು ವಿಜಯಪುರ ಪಟ್ಟಣದಲ್ಲಿ ನಾಡಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಗೌತಮ್ ಎನ್ನುವವರ ಬಳಿ ಜಮೀನು  ಪೌತಿ ಖಾತೆ ಪೋಡಿ ಮಾಡಿಕೊಡಲು 2.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಎಳುವಳ್ಳಿ ಗ್ರಾಮಲೆಕ್ಕಾಧಿಕಾರಿ ಮಡಿವಾಳಪ್ಪ ಹಾಗೂ ವಿಜಯಪುರ ಗ್ರಾಮಲೆಕ್ಕಾಧಿಕಾರಿ ಸುನಿಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಆರ್‌ಐ ಸತ್ಯನಾರಾಯಣ, ಮಡಿವಾಳಪ್ಪ ಮತ್ತು ಸುನಿಲ್ ಎನ್ನುವ ವ್ಯಕ್ತಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಗ್ರಾಮ ಲೆಕ್ಕಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಲೋಕಾಯುಕ್ತ ದಾಳಿ ಬಳಿಕ ವಿಜಯಪುರ ಆರ್…

Read More