Author: kannadanewsnow05

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಗೆ ಇಂದು ನಿಖಿಲ್ ಕುಮಾರಸ್ವಾಮಿಯವರು ಬೃಹತ್ ಮೆರವಣಿಗೆಯೊಂದಿಗೆ ತಮ್ಮ ಕಾರ್ಯಕರ್ತರು ಹಾಗೂ ಮುಖಂಡರ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸಿದರು.ಈ ಒಂದು ವಿಚಾರವಾಗಿ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ನೂರಕ್ಕೆ ನೂರು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿಖಿಲ್ ಅವರ ತಂದೆಗೆ ಬಲ ಭುಜವಾಗಿ ನಿಂತಿದ್ದಾರೆ. ದೇವೇಗೌಡರ ಕುಟುಂಬ ಮುಗಿದೇ ಹೋಯಿತು ಅಂದರು. ಈಗ ಕುಮಾರಣ್ಣ ಕೇಂದ್ರ ಮಂತ್ರಿ ಆಗಿಲ್ವಾ? ಇಂತಹವೆಲ್ಲ ಎದುರಿಸಿ ರಾಜಕೀಯದಲ್ಲಿ ಇನ್ನೂ ಉಳಿದಿದ್ದೇವೆ. ಹಾಸನ ಹಿಡಿತ ತೆಗೆದುಕೊಳ್ಳಲು ಕಾಂಗ್ರೆಸ್ಸಿಗರು ಹೋದರು. ಹಾಸನದಲ್ಲಿ ಒಂದು ರಾಷ್ಟ್ರೀಯ ಪಕ್ಷಕ್ಕೆ ನಾಚಿಕೆಯಾಗಬೇಕು ಎಂಪಿ ಚುನಾವಣೆಯ ಕೊನೆಯ ನಾಲ್ಕು ದಿನ ಏನೇನು ಮಾಡಿದ್ದಾರೆ ಮುಂದೆ ಟೈಮ್ ಬಂದಾಗ ಹೇಳುತ್ತೇನೆ ನನಗೆ ದೇವರ ಮೇಲೆ ನಂಬಿಕೆ ಇದೆ ಕಾಲ ಬರುತ್ತದೆ. ಚನ್ನಪಟ್ಟಣದಲ್ಲಿ ನಿಖಿಲ್ ನೂರಕ್ಕೆ ನೂರು ಗೆಲ್ಲುತ್ತಾರೆ ಎಂದು ವಿಧಾನಸೌಧದಲ್ಲಿ ಎಚ್ ಡಿ ರೇವಣ್ಣ ತಿಳಿಸಿದರು. ಅಧಿಕಾರಕ್ಕೆ ಅಂಟಿಕೊಂಡ…

Read More

ಮೈಸೂರು : ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರು ಮುಡಾ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಮೂರು ಗಂಟೆಗಳ ಕಾಲ ನಡೆದ ವಿಚಾರಣೆಯಲ್ಲಿ ಅವರು ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ. ಈ ವೇಳೆ ಅವರು ನಾನು ಯಾವುದೇ ತಪ್ಪು ಮಾಡಿಲ್ಲ ಕಾನೂನು ಬದ್ಧವಾಗಿಯೇ ಸೈಟ್ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುವ ಸಂದರ್ಭದಲ್ಲಿ, ಪತ್ರವನ್ನು ವೈಟ್ನರ್ ನಿಂದ ಅಳಿಸಿ ಹಾಕಿದ್ದು ಯಾಕೆ ಎಂಬ ಪ್ರಶ್ನೆಗೆ ನನಗೆ ಸರ್ಕಾರದ ರೀತಿ ಪತ್ರ ಬರೆಯಲು ಬರುವುದಿಲ್ಲ. ಏನೋ ತಪ್ಪಾಗಿದೆ ಎಂಬ ಅನಿಸಿದ್ದಕ್ಕೆ ಹಾಗೆ ಮಾಡಿದೆ ಎಂದು ಉತ್ತರಿಸಿದ್ದಾರೆ. ನೀವು ಹಲವು ಕಡೆ ಹಾಕಿರುವ ಸಹಿಯಲ್ಲಿ ಸಾಕಷ್ಟು ವ್ಯತ್ಯಾಸವಿದೆ ಏಕೆ ಎಂಬ ಪ್ರಶ್ನೆಗೆ ನಾನು ಯಾವಾಗಲೂ ಸಹಿ ಹಾಕುವುದಿಲ್ಲ. ಯಾವಾಗಲಾದರೂ ಒಮ್ಮೆ ಸಹಿ ಹಾಕುತ್ತೇನೆ. ಹಾಗಾಗಿ ಸಹಿಯಲ್ಲಿ ವ್ಯತ್ಯಾಸಗಳು ಆಗಿರಬೇಕು ಎಂದು ಪಾರ್ವತಿ ಉತ್ತರಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ಕಚೇರಿಯಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ವಿಚಾರಣೆಗೆ ಹಾಜರಾಗಿದ್ದು,…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಮಹಿಳೆಯರಿಗೆ ಸೂಕ್ತವಾದ ರಕ್ಷಣೆಯೇ ಇಲ್ಲದಂತಾಗಿದೆ. ಮಹಿಳೆಯರ ಮೇಲೆ ಕಿರುಕುಳ, ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ನಡೆಯುತ್ತಲೇ ಇವೆ.ಇದೀಗ ಬೆಂಗಳೂರಿನಲ್ಲಿ ತಡರಾತ್ರಿ ಮಹಿಳೆಯೋರ್ವಳನ್ನು 6 ಜನ ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಬೆಂಗಳೂರಿನ ಪೀಣ್ಯದ ಸುವರ್ಣ ನಗರ ಬಸ್ ನಿಲ್ದಾಣದ ಬಳಿ ನಡೆದಿದೆ. ಕಳೆದ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ 6 ಜನರಿಂದ ಮಹಿಳೆಯ ಕಿಡ್ನ್ಯಾಪ್​ ಮಾಡಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯನ್ನು ಕಿಡ್ನ್ಯಾಪ್ ಮಾಡಿರುವುದನ್ನು​ ನೋಡಿದ್ದೇನೆ ಎಂದು ಯುವಕನಿಂದ ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ. ಸತ್ಯಜೀತ್ ಚೌದರಿ ಎಂಬ ಯುವಕನು ಹಳದಿ ಬಣ್ಣದ ನಂಬರ್ ಪ್ಲೇಟ್ ಇಲ್ಲದ ಟಿಂಟೆಡ್ ಗ್ಲಾಸ್ ಕಾರ್​ನಲ್ಲಿ ಬಂದು ದುಷ್ಕೃತ್ಯ ಎಸಗಲಾಗಿದೆ. ಕಪ್ಪು ಬಣ್ಣದ ಜಾಕೆಟ್ ಧರಿಸಿ, ಮಹಿಳೆಯ ಮುಖಕ್ಕೆ ಹಿಂಭಾಗದಿಂದ ವ್ಯಕ್ತಿ ಓರ್ವ ಬಟ್ಟೆಯಿಂದ ಅದುಮಿದ. ಮಹಿಳೆಯನ್ನು 6 ಜನ ವ್ಯಕ್ತಿಗಳು ಎತ್ತಿಕೊಂಡು ಕಾರ್​ನ ಎಡಭಾಗದ ಡೋರ್ ತೆಗೆದು ಒಳಗೆ ಹಾಕಿಕೊಂಡು ಪರಾರಿ ಆಗಿದ್ದಾರೆ…

Read More

ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ಸಚಿವ ಬೈರತಿ ಸುರೇಶ್ ಕೆಲವು ದಿನಗಳ ಹಿಂದೆ ಸ್ಪೋಟ ಆರೋಪ ಮಾಡಿದ್ದರು. ಇದೀಗ ಶೋಭಾ ಕರಂದ್ಲಾಜೆ ವಿರುದ್ಧ ಮತ್ತೊಂದು ಆರೋಪ ಮಾಡಿರುವ ಅವರು, ಬಿಜೆಪಿ ಅಧಿಕಾರ ಅವಧಿಯಲ್ಲಿ ಇಂಧನ ಸಚಿವರಾಗಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣದ ದಾಖಲೆಯನ್ನು ಹೊರಹಾಕುತ್ತೇವೆ.ದಾಖಲೆ ಸಂಗ್ರಹಿಸಲು ಪೊನ್ನಣ್ಣ ಅವರಿಗೆ ಸೂಚಿಸಲಾಗಿದೆ. ಈ ಹಿಂದೆ ಇಂಧನ ಸಚಿವರಾಗಿದ್ದಾಗ ಭ್ರಷ್ಟಾಚಾರ ಮಾಡಿದ್ದಾರೆ. 15 ದಿನಗಳಲ್ಲಿ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು. ಇನ್ನು ಪರಿಷತ್ ಸದಸ್ಯ ಎಚ್ ವಿಶ್ವನಾಥ್ ವಿರುದ್ಧ ವಾಗ್ದಾಳಿ ನಡೆಸಿರುವ ಸಚಿವ ಭೈರತಿ ಸುರೇಶ್ ಅವರು, ಎಚ್. ವಿಶ್ವನಾಥ್ ಒಬ್ಬ ರೋಲ್ ಕಾಲ್ ಬ್ಲಾಕ್ ಮೇಲರ್ ಕಾಂಗ್ರೆಸ್ ಪಕ್ಷ ಏನು ಎಚ್.…

Read More

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಗೆ NDA ಅಭ್ಯರ್ಥಿಯಾಗಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಯವರು ಇಂದು ತಮ್ಮ ಅಪಾರ ಬೆಂಬಲಿಗರೊಂದಿಗೆ ಹಾಗೂ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಆಫೀಡಿವೇಟ್ ನಲ್ಲಿ ಅವರ ಆಸ್ತಿಯ ಕುರಿತು ಉಲ್ಲೇಖಿಸಿದ್ದಾರೆ. ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 113 ಕೋಟಿ ಆಸ್ತಿ ಒಡೆಯನಾಗಿದ್ದು, ನಿಖಿಲ್ ಚರಾಸ್ತಿ ಮೌಲ್ಯ 78.15 ಕೋಟಿ ಹಾಗೂ ಸ್ಥಿರಾಸ್ತಿ ಮೌಲ್ಯ 29.34 ಕೋಟಿ ಇದೆ. ಇನ್ನು ನಿಖಿಲ್ ಪತ್ನಿ ರೇವತಿ ಹೆಸರಿನಲ್ಲಿ 5.49 ಕೋಟಿ ಮೌಲ್ಯದ ಚರಾಸ್ತಿ ಇದೆ. ನಿಖಿಲ್ ಪತ್ನಿ ರೇವತಿ ಹೆಸರಿನಲ್ಲಿ 43 ಲಕ್ಷ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಇದೆ. ಇನ್ನು ನಿಖಿಲ್ ಕುಮಾರಸ್ವಾಮಿ ಮಗ ಅವ್ಯಾನದೇವ ಹೆಸರಲ್ಲಿ 11 ಲಕ್ಷ ರೂಪಾಯಿ ಇದೆ. ನಿಖಿಲ್ ಹೆಸರಿನಲ್ಲಿ 1.488 ಕೆಜಿ ಚಿನ್ನ ಹಾಗೂ 16 ಕೆಜಿ ಬೆಳ್ಳಿ ಇದೆ. ರೇವತಿ ಹೆಸರಿನಲ್ಲಿ 1.411 ಕೆಜಿ ಚಿನ್ನ ಹಾಗೂ…

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರ ದುರಂತ ಒಂದು ನಡೆದಿದ್ದು, ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಬುರ್ಗಿ ನಗರದ ಬಿದ್ದಾಪುರ್ ಕಾಲೋನಿ ರೈಲ್ವೆ ಗೇಟ್ ಬಳಿ ಈ ಒಂದು ದುರ್ಘಟನೆ ಸಂಭವಿಸಿದೆ. ರೈಲಿಗೆ ತಲೆ ಕೊಟ್ಟು SSLC ವಿದ್ಯಾರ್ಥಿ ವೀರೇಶ ಸ್ವಾಮಿ (16) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಬೆಳಿಗ್ಗೆ ಮನೆಯಿಂದ ಟ್ಯೂಷನ್ ಗೆ ಹೋಗಿ ಬರುತ್ತೇನೆ ಎಂದು ಹೇಳಿ ವೀರೇಶ್ ಸ್ವಾಮಿ ಮನೆ ಬಿಟ್ಟಿದ್ದ. ಬಳಿಕ ವಾಂತಿ ಬರುತ್ತಿದೆ ಎಂದು ಹೇಳಿ ಟ್ಯೂಷನ್ ಕ್ಲಾಸ್ನಿಂದ ವೀರೇಶ್ ಸ್ವಾಮಿ ಹೊರಗಡೆ ಬಂದಿದ್ದಾನೆ. ಆದರೆ ಟ್ಯೂಷನ್ ನಿಂದ ಹೋದವನು ರೈಲ್ವೆ ಹಳಿಯ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ. ವಿದ್ಯಾರ್ಥಿ ವೀರೇಶ್ ಸ್ವಾಮಿ ಆತ್ಮಹತ್ಯೆಗೆ ನಿಖರವಾದಂತಹ ಕಾರಣ ತಿಳಿದು ಬಂದಿಲ್ಲ ಎಂದು ಹೇಳಲಾಗುತ್ತಿದ್ದು, ಘಟನೆ ಕುರಿತಂತೆ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾವೇರಿ : ರಾಜ್ಯದ ಮೂರು ಉಪಚುನಾವಣೆಗಳ ಕ್ಷೇತ್ರಗಳ ಪೈಕಿ ಇದೀಗ ಶಿಗ್ಗಾವಿ ಕಾಂಗ್ರೆಸ್ ಅಲ್ಲಿ ಬಂಡಾಯದ ಬಿಸಿ ಹೆಚ್ಚಿದ್ದು ಈಗಾಗಲೇ ಅಜ್ಜಂಪೀರ್ ಖಾದ್ರಿ ಅವರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಸಂಸದ ಮಂಜುನಾಥ್ ಕುನ್ನೂರ್ ಕೂಡ ಪಕ್ಷೇತರ ಅಭ್ಯರ್ಥಿಯಾಗಿ ನಾವ್ ಪತ್ರ ಸಲ್ಲಿಸಿದ್ದಾರೆ. ಹೌದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮಂಜುನಾಥ್ ಕುನ್ನೂರ್. ಶಿಗ್ಗಾವಿ ಪಕ್ಷೇತರ ಅಭ್ಯರ್ಥಿಯಾಗಿ ಮಂಜುನಾಥ್ ಕುನ್ನೂರ್ ನಾಮಪತ್ರ ಸಲ್ಲಿಸಿದ್ದಾರೆ. ಮಗ ರಾಜು ಕುನ್ನುರ್ ರಿಗೆ ಮಂಜುನಾಥ್ ಕುನ್ನೂರ್ ಕಾಂಗ್ರೆಸ್ ಟಿಕೆಟ್ ಕೇಳಿದ್ದರು. ಆದರೆ ಯಾಸಿರ್ ಅಹ್ಮದ್ ಪಠಾನ್ ಗೆ ಟಿಕೆಟ್ ನೀಡಿದೆ ಹಿನ್ನೆಲೆಯಲ್ಲಿ ಶಿಗ್ಗಾವಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈಗಾಗಲೇ ಅಜ್ಜಂಪಿರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಗ್ಗಾವಿ ಕಾಂಗ್ರೆಸ್ ನಲ್ಲಿ ಈ ಇಬ್ಬರು ನಾಯಕರ ನಡೆಯಿಂದ ಕಾಂಗ್ರೆಸ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ.

Read More

ರಾಮನಗರ : ತೀವ್ರ ಕಗ್ಗಂಟಾಗಿದ್ದ ಚನ್ನಪಟ್ಟಣದ ಎನ್‌ಡಿಎ ಅಭ್ಯರ್ಥಿಯಾಗಿ ಯಾರನ್ನು ಕಣಕ್ಕೆ ಇಳಿಸಬೇಕೆಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಟೆನ್ಶನ್ ಆಗಿತ್ತು. ಇದೀಗ ಪುತ್ರ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿಯಾಗಿ ಇಂದು ಬೃಹತ್ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಹೆಚ್‍ಡಿ ಕುಮಾರಸ್ವಾಮಿಯವರು, ನಮ್ಮಿಂದ ಅನ್ಯಾಯ ಆಗಿದ್ದರೆ ಶಿಕ್ಷೆ ಕೊಡಿ ಎಂದು ಭಾವುಕರಾಗಿ ಮಾತನಾಡಿದರು. ಇಂದು ಎನ್ ಡಿ ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯವರು ಬೃಹತ್ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು, ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ದೇವೇಗೌಡರು ಹಾಗೂ ನನಗೆ ಅಮೃತ ಕೊಟ್ಟಿರುವವರು ನೀವು. ಎಲ್ಲಾ ತೀರ್ಮಾನವನ್ನು ನಿಮಗೆ ಬಿಡುತ್ತೇನೆ.ನಮ್ಮಿಂದ ಅನ್ಯಾಯ ಆಗಿದ್ದರೆ ಶಿಕ್ಷೆ ಕೊಡಿ ಎಲ್ಲಾ ನೀವೇ ತೀರ್ಮಾನಿಸಿ ಎಂದು ಭಾವುಕರಾದರು. ನನ್ನ ಹಳೆ ಸ್ನೇಹಿತ ಯೋಗೇಶ್ವರ್ ತಬ್ಬಿಕೊಂಡು ಬೆನ್ನು ತಟ್ಟುತ್ತಾರೆ ಎಂದು ಚೆಲುವರಾಯಸ್ವಾಮಿ ವಿರುದ್ಧ ಎಚ್ ಡಿ ಕುಮಾರಸ್ವಾಮಿ…

Read More

ಬೆಂಗಳೂರು : ಬೇಲೆಕೆರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನವಾಗಿದೆ. ಸತೀಶ್ ಸೈಲ್ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಶಿಕ್ಷೆ ಪ್ರಕಟಣೆಯ ಕುರಿತಂತೆ ವಾದ ಪ್ರತಿವಾದ ಆಲಿಸಿದ ಬಳಿಕ ಕೋರ್ಟ್ ಶಿಕ್ಷೆ ಪ್ರಮಾಣದ ಕುರಿತು ನಾಳೆ ಆದೇಶ ಪ್ರಕಟಿಸಲಿದೆ. ಹೌದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯವು ಶಿಕ್ಷ ಪ್ರಮಾಣದ ಬಗ್ಗೆ ನಾಳೆ ಆದೇಶ ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಇಂದು ಶಿಕ್ಷೆ ಪ್ರಕಟಣೆಯ ಕುರಿತು ಎರಡು ಕಡೆಗೂ ವಾದ ಮಂಡನೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಣೆಯ ಕುರಿತಂತೆ ಕೋರ್ಟ್ ನಾಳೆ ಆದೇಶ ಪ್ರಕಟಿಸಲಿದೆ. ಏನಿದು ಪ್ರಕರಣ? ಅಂಕೋಲಾ ತಾಲೂಕಿನ ಬೇಲೆಕೇರಿ ವ್ಯಾಪ್ತಿಯಲ್ಲಿ 2009- 2010ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ 200 ಕೋಟಿ ರೂ.ಗ ಳಿಗೂ…

Read More

ಹಾವೇರಿ : ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಇದೀಗ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಗುಲಿದ್ದು, ಕಾಂಗ್ರೆಸ್ ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಖಾದ್ರಿ ಅವರಿಗೆ ಟಿಕೆಟ್ ನೀಡಿರಲಿಲ್ಲ ಹಾಗಾಗಿ ಇಂದು ಖಾದ್ರಿ ಅವರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಜ್ಜಂಪಿರ್ ಖಾದ್ರಿ ಅವರ ಮನೆಗೆ ತೆರಳಿ ಅವರನ್ನು ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಮನವಳಿಕೆ ಪ್ರಯತ್ನ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಬೈಕ್ ನಲ್ಲಿ ತೆರಳಿ ಅಜ್ಜಂಪಿರ್ ಖಾದ್ರಿ ಅವರು ಓಡೋಡಿ ಹೋಗಿ ಕೊನೆಯ 13 ನಿಮಿಷಗಳು ಬಾಕಿ ಇರುವಾಗ ತಮ್ಮ ದಾಖಲೆಗಳೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಇತ್ತ ಸಚಿವ ಜಮೀರ್ ಅಹ್ಮದ್ ಖಾನ್ ತೆರಳುತ್ತಿದ್ದ ಕಾರಿನ ಮೇಲೆ ಕಲ್ಲಿನಿಂದ ದಾಳಿ ನಡೆಸಲಾಗಿದೆ. ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಗುಲಿದ್ದು ಹೂಲಗೂರು ಗ್ರಾಮದಲ್ಲಿ…

Read More