Author: kannadanewsnow05

ಬೀದರ್ : ಹನುಮಾನ್ ಜಾತ್ರೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕಕ್ಕೆ ದಲಿತರ ಮೇಲೆ ಸವರ್ಣೀಯರು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಕಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ SC/ST ದೌರ್ಜನ್ಯ ತಡೆ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದ್ದು, 73 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಕಟಕ ಚಿಂಚೋಳಿ ಠಾಣೆಯಲ್ಲಿ 73 ಜನರ ವಿರುದ್ಧ ದಾಖಲಾಗಿದೆ.ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಇದೀಗ 73 ಜನರ ವಿರುದ್ಧ ದಾಖಲಾಗಿದೆ. ನವೆಂಬರ್ 2 ರಂದು ಚಳಕಾಪುರ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ನಡೆದಿತ್ತು. ಜಾತ್ರೆಯಲ್ಲಿ ದಲಿತರು ಪಾಲ್ಗೊಂಡಿದ್ದಕ್ಕೆ ಸವರ್ಣೀಯರು ಅವರ ಮೇಲೆ ಹಲ್ಲೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಗ್ರಾಮದ ಹನುಮಾನ್ ಜಾತ್ರೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ದಲಿತರ ಮನೆಗೆ ನುಗ್ಗಿ ಸವರ್ಣೀಯರು ಹಲ್ಲೆ ನಡೆಸಿರುವ ಆರೋಪ…

Read More

ರಾಮನಗರ : ರಾಜ್ಯದ ಮೂರು ಕ್ಷೇತ್ರಗಳಲ್ಲಿ ವಿಧಾನಸಭಾ ಉಪಚುನಾವಣೆಯ ರಂಗೇರಿದು ಅದರಲ್ಲೂ ಚನ್ನಪಟ್ಟಣ ಕ್ಷೇತ್ರ ತುಸು ಬಿರುಸಿನಿಂದ ಕೂಡಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಕಣಕ್ಕೆ ಇಳಿದಿದ್ದರೆ ಇನ್ನು ಎನ್.ಡಿ.ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈಗ ಡಿಸಿಎಂ ಡಿಕೆ ಶಿವಕುಮಾರ್ ಅವರು ನಿಖಿಲ್ ಕುಮಾರ್ ಸ್ವಾಮಿ ಪಾಪ ಒಬ್ಬ ಕಂದ. ಆತ ಅಳು ಅಂದರೆ ಅಳುತ್ತಾನೆ ನಗು ಅಂದ್ರೆ ನಗುತ್ತಾನೆ. ಆತನ ಕುರಿತು ಮಾತನಾಡುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರ ಪರವಾಗಿ ಪ್ರಚಾರದ ವೇಳೆ ಮಾತನಾಡಿದ ಅವರು, ಪಾಪ ಕಂದ ಇಲ್ಲಿ ನಿಲ್ಲು ಎಂದರೂ ನಿಲ್ಲುತ್ತಾನೆ, ಅಲ್ಲಿನಿಲ್ಲು ಎಂದರೂ ನಿಲ್ಲುತ್ತಾನೆ. ಕಣ್ಣೀರು ಹಾಕು ಅಂದರೂ ಹಾಕುತ್ತಾನೆ, ನಗು ಅಂದರೆ ನಗುತ್ತಾನೆ. ಆತನನ್ನು ನಾನು ಪ್ರಶ್ನಿಸುವುದಿಲ್ಲ. ಆತ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವುದಾಗಿ ಹೇಳಿದ್ದಾನೆ. ಆತ ಒತ್ತಾಯಕ್ಕೆ ಸ್ಪರ್ಧಿಸಿದ್ದಾನೆಯೇ ಹೊರತು. ಜನರ ಸೇವೆಗಾಗಿ ಅಲ್ಲಿ ನಿಮ್ಮ ಕಷ್ಟ…

Read More

ಬೆಂಗಳೂರು : ಎಡಿಜಿಪಿ ಚಂದ್ರಶೇಖರ್ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಇದೀಗ ತಾರಕಕ್ಕೆ ಏರಿದ್ದು, ಎಚ್ ಡಿ ಕುಮಾರಸ್ವಾಮಿ ಬೆದರಿಸುವುದಾಗಿ ಹೇಳಿಕೆ ನೀಡಿದ್ದರಿಂದ ಈ ವಿಚಾರವಾಗಿ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಡಿಜಿಪಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಹೌದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಅವರು FIR ದಾಖಲಿಸಿದ್ದಾರೆ.ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಇತರರು ತೊಂದರೆ ಕೊಡುವುದಾಗಿ ನಾನಾಗೆ ಬೆದರಿಕೆ ಹಾಕಿದ್ದಾರೆ ಎಂದು ಎಫ್ ಐ ಆರ್ ನಲ್ಲಿ ಎಡಿಜಿಪಿ ಚಂದ್ರಶೇಖರ್ ಉಲ್ಲೇಖಿಸಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಅವರು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಆದ್ದರಿಂದ A1 ಆರೋಪಿಯಾಗಿ HD ಕುಮಾರಸ್ವಾಮಿ, A2 ನಿಖಿಲ್, ಹಾಗೂ A3 ಆರೋಪಿ ಜೆಡಿಎಸ್ ಮುಖಂಡ ಸುರೇಶ್ ಬಾಬು ವಿರುದ್ಧ…

Read More

ತುಮಕೂರು : ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ರಿಪೇರಿ ಮಾಡುವಾಗ ವಿದ್ಯುತ್‌ ಪ್ರವಹಿಸಿ ಲೈನ್‌ಮ್ಯಾನ್‌ ಒಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ತಾಲ್ಲೂಕಿನ ಹೆಬ್ಬೂರು ಹೋಬಳಿಯ ರಾಗಿಮುದ್ದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಲೈನ್‌ಮ್ಯಾನ್‌ ಅನ್ನು ದುರ್ಗಪ್ರಸನ್ನ (29) ಎಂದು ಹೇಳಲಾಗುತ್ತಿದೆ. ರಾಗಿಮುದ್ದೇನಹಳ್ಳಿಗೆ ಭೇಟಿ ನೀಡಿ ದುರಸ್ತಿ ಮಾಡುವ ವೇಳೆ ಈ ಅವಘಡ ಸಂಭವಿಸಿದೆ. ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದರು. ಗ್ರಾಮದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಈ ವೇಳೆ ದುರ್ಗಾ ಪ್ರಸನ್ನ ಗ್ರಾಮಕ್ಕೆ ಭೇಟಿ ನೀಡಿ ರಿಪೇರಿ ಮಾಡುತ್ತಿದ್ದರು. ಕೂಡಲೇ ಅವರಿಗೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ. ಇದಕ್ಕೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

Read More

ಬೆಂಗಳೂರು : ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಇದಿಗ ಸಿಬಿಐ ತನಿಖೆ ಭೀತಿ ಎದುರಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣ ಸಿಬಿಐ ತನಿಖೆಗೆ ಕೋರಿ ರಿಟ್ ಅರ್ಜಿ ಸಲ್ಲಿಸಿದರು. ಹಾಗಾಗಿ ಇಂದು ಹೈ ಕೋರ್ಟ್ ನಲ್ಲಿ ನ್ಯಾ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ಕಳೆದ ಸಪ್ಟೆಂಬರ್ 27ರಂದು ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯ ಮೇಲೆ ನಂಬಿಕೆ ಇಲ್ಲ ಎಂದು ಅವರು ಹೈಕೋರ್ಟಿಗೆ ಸಿಬಿಐ ತನಿಖೆಗೆ ಆದೇಶ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು.ಹಾಗಾಗಿ ಇಂದು ಲೋಕಾಯುಕ್ತ ಪೊಲೀಸ್, ಸಿಬಿಐ ಪ್ರತಿವಾದಿಗಳು, ಸಿದ್ದರಾಮಯ್ಯ ಪತ್ನಿ ಪಾರ್ವತಿ ಕೂಡ ಪ್ರತಿವಾದಿಗಳಾಗಿದ್ದಾರೆ. ಒಂದು ವೇಳೆ ಸಿಬಿಐ ತನಿಖೆಗೆ ಆದೇಶಿಸಿದರೆ ಲೋಕಾಯುಕ್ತ ಪೊಲೀಸರ ತನಿಖೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಲೋಕಾಯುಕ್ತ ಪೊಲೀಸರ ವಾದವನ್ನು ಇಂದು ಹೈಕೋರ್ಟ್ ಪಾಲಿಸಲಿದೆ ಹಾಗಾಗಿ ಕೆಲವೇ ಕ್ಷಣಗಳಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಸಿಬಿಐ ತನಿಖೆ ಕೋರಿ…

Read More

ಮೈಸೂರು : ಮೈಸೂರಲ್ಲಿ ನಿನ್ನೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ವಿಜಯನಗರ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಅತ್ಯಾಚಾರ ನಡೆದ ಬಳಿಕ ಸಂತ್ರಸ್ತೆ ಯುವತಿ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.ಇದೀಗ ಪೊಲೀಸರು, ಸಂತ್ರಸ್ತೆ ದೂರು ನೀಡಿದ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು, ಶ್ರೇಯಸ್ ಹಾಗೂ ಶಶಾಂಕ್ ಎಂದು ತಿಳಿದುಬಂದಿದೆ. ಮೈಸೂರಿನ ಪಬ್ ಒಂದರಲ್ಲಿ ಯುವತಿ ಇವರು ಇಬ್ಬರಿಗೆ ಪರಿಚಯವಾಗಿದ್ದಾಳೆ. ಈ ವೇಳೆ ಓರ್ವ ಆರೋಪಿ ರೂಂ ಬುಕ್ ಮಾಡಿ ಸಂತ್ರಸ್ತೆ ಯುವತಿಯನ್ನು ಕರೆದೋಯ್ದಿದ್ದಾನೆ. ಬಳಿಕ ಸ್ನೇಹಿತನನ್ನು ರೂಂಗೆ ಕರೆಸಿಕೊಂಡು ಇಬ್ಬರು ಅತ್ಯಾಚಾರ ಎಸಗಿದ್ದಾರೆ. ಬಳಿಕ ಅತ್ಯಾಚಾರದ ವಿಡಿಯೋ ಮಾಡಿಕೊಂಡಿದ್ದರು ಎನ್ನಲಾಗಿದೆ. ವಿಜಯನಗರ ಪೊಲೀಸ್ ಠಾಣೆಗೆ ಅತ್ಯಾಚಾರದ ಬಳಿಕ ಯುವತಿ ದೂರು ನೀಡಿದ್ದಳು. ಈಗ ಬಂಧಿತರಿಂದ ಪೊಲೀಸರು ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ನಾಳೆ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ಈ ಒಂದು ಹಗರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು, ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ನಿವಾಸದ ಸಿಸಿಟಿವಿ ಕ್ಯಾಮೆರಾ ಹಾಗೂ ಡಿವಿಆರ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಹೌದು ಮುಡಾದಲ್ಲಿ ನಡೆದಿರುವಂತಹ ಅಕ್ರಮ ನಿವೇಶನಗಳ ಮಾರಾಟ ಕುರಿತಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅಲ್ಲದೆ ಜಾರಿ ನಿರ್ದೇಶನಾಲಯಕ್ಕೂ ಅವರು ದೂರು ನೀಡಿದ್ದರು. ED ತನಿಖೆಯನ್ನು ಚುರುಕುಗೊಳಿಸಿ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಮೇಲೆ ಇತ್ತೀಚಿಗೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಯಾವಾಗ ED ಅಧಿಕಾರಿಗಳು ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ನಿವಾಸದ ಮೇಲೆ ದಾಳಿ ಮಾಡಿದರೊ, ಅಂದು ಬೆಳಿಗ್ಗೆ ವಾಕಿಂಗ್ ಗೆ ಎಂದು ಹೋದವರು ತಮ್ಮ ಮನೆಯ ಮೇಲೆ ಇಡಿ ದಾಳಿ ಮಾಡಿದ್ದ ಕುರಿತು…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ವರುಣ ಶಾಂತವಾಗಿದ್ದು ಬೆಂಗಳೂರಿನ ಜನತೆ ಸಹಜ ಸ್ಥಿತಿಯತ್ತ ಮರುಳುತ್ತಿದ್ದರು. ಇದೀಗ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆ ಆಗುವ ಮುನ್ಸೂಚನೆ ನೀಡಿದೆ. ಇದೀಗ ಕರ್ನಾಟಕದಾದ್ಯಂತ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ. ನವೆಂಬರ್ 9 ರಿಂದ ಮೂರು ದಿನಗಳ ಕಾಲ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Read More

ರಾಯಚೂರು : ಒಂದೇ ಬೈಕ್ ನಲ್ಲಿ ನಾಲ್ವರು ಯುವಕರು ಚಲಿಸುತ್ತಿದ್ದ ವೇಳೆ ಬೈಕ್ ಹಾಗೂ ಕಾರು ಮದ್ಯ ಭೀಕರವಾದ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಯುವಕರು ಸಾವನಪ್ಪಿದ್ದು, ಇನ್ನಿಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ರಾಯಚೂರು ನಗರದ ಹೊರವಲಯದ ಪವರ್ ಗ್ರಿಡ್ ಬಳಿ ಇಂದು ನಡೆದಿದೆ. ಹೌದು ಮೃತ ಯುವಕರನ್ನು ಶರಣಬಸವ(28), ಶಿವು (26) ಮೃತ ದುರ್ದೈವಿಗಳು ಎಂದು ಹೆಕಲಾಗುತ್ತಿದೆ.ಬೈಕ್ ನಲ್ಲಿದ್ದ ಇನ್ನಿಬ್ಬರು ಇರ್ಫಾನ್ ಹಾಗೂ ಗರೀಬ್ ಎಂಬುವರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿಯಮ ಉಲ್ಲಂಘಿಸಿ ಬೈಕ್ ನಲ್ಲಿ ನಾಲ್ವರು ಯುವಕರು ಚಲಿಸುತ್ತಿದ್ದ ವೇಳೆ ರಾಯಚೂರಿನಿಂದ ಕಲ್ಲೂರಿಗೆ ತೆರಳುತ್ತಿದ್ದ ವೇಳೆ ಪವರ್ ಗ್ರೀಡ್ ಬಳಿ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಕೆಳಗೆ ಬಿದ್ದ ಸಂದರ್ಭದಲ್ಲಿ ಇಬ್ಬರು ಯುವಕರ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.ಘಟನಾ ಸ್ಥಳಕ್ಕೆ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಹಾವೇರಿ : ನನ್ನನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಆಪರೇಷನ್​ ಕಮಲದ ಮೂಲಕ ಶಾಸಕರಿಗೆ 50 ಕೋಟಿ ರೂಪಾಯಿ ನೀಡಲಾಗಿದೆ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಿನ್ನೆ ಹಾವೇರಿ ಜಿಲ್ಲೆಯ ಸಮಣೂರು ತಾಲೂಕಿನ ಹುರಳಿಕುಪ್ಪಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಭಾಷಣ ಮಾಡಿದ ಅವರು, ಎಲ್ಲರೂ ಸೇರಿ ನನ್ನ ವಿರುದ್ಧ ಹುನ್ನಾರ ಮಾಡಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಗ ಭರತ್ ಬೊಮ್ಮಾಯಿನನ್ನು ಸೋಲಿಸಿ ಉತ್ತರ ಕೊಡಿ. ನನ್ನ ವಿರುದ್ಧ ನಡೆಯುತ್ತಿರುವ ಹುನ್ನಾರಕ್ಕೆ ಉತ್ತರ ಕೊಡಬೇಕಿದೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ.ಹೊಟ್ಟೆ ಕಿಚ್ಚಿನಿಂದ ಸಹಿಸದೆ ಹೇಗಾದರೂ ಮಾಡಿ ನನ್ನನ್ನು ಇಳಿಸಲು ಪ್ರಯತ್ನಿಸಲಾಗುತ್ತಿದೆ ಎಂದರು. ಆಪರೇಷನ್ ಕಮಲದ ಮೂಲಕ ಅಧಿಕಾರದಿಂದ ನನ್ನ ಇಳಿಸಲು ಯತ್ನಿಸಲಾಗುತ್ತಿದೆ. ಒಬ್ಬ ಶಾಸಕರಿಗೆ 50 ಕೋಟಿ ಆಫರ್ ನೀಡಿ ಆಪರೇಷನ್ ಕಮಲಕ್ಕೆ ಯತ್ನಿಸಲಾಗಿದೆ. ಈಗ ನಾನು ರಾಜೀನಾಮೆ ಕೊಡಬೇಕು ಎಂದು ಅಂತಿದ್ದಾರೆ. ಕಾನೂನಿನಡಿ ಎದುರಿಸಲು ಸಿದ್ಧನಿದ್ದೇನೆ ಎಂದು ಹೇಳಿದ್ದೇನೆ ಆದರೂ ನನ್ನ ವಿರುದ್ಧ ಮಸಲತ್ತು…

Read More