Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿ ಪತ್ನಿ ಚೈತ್ರ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕಮಿಷನರ್ ಹಾಗೂ ಉತ್ತರ ವಿಭಾಗದ ಡಿಸಿಪಿಗೆ ವಕೀಲರ ಸಂಘವು ಪತ್ರ ಬರೆದಿದ್ದು ಚೈತ್ರ ಪ್ರಕರಣ ಸೂಕ್ತವಾದ ರೀತಿಯಲ್ಲಿ ತನಿಖೆ ಆಗಬೇಕು ಎಂದು ಮನವಿ ಮಾಡಿದ್ದಾರೆ. ಪ್ರಕರಣ ಕುರಿತಂತೆ ಕಮಿಷನರ್ ಹಾಗೂ ಉತ್ತರ ವಿಭಾಗ ಡಿಸಿಪಿಗೆ ವಕೀಲರ ಸಂಘ ಪತ್ರ ಬರೆದಿದ್ದು, ಚೈತ್ರ ಸಾವು ವಕೀಲರಿಗೆ ಶಾಕ್ ಆಗುವಂತೆ ಮಾಡಿದೆ. ಚೈತ್ರ ವಕೀಲೆ. ಅಷ್ಟೇ ಅಲ್ಲ ಒಳ್ಳೆಯ ಬ್ಯಾಡ್ಮಿಂಟನ್ ಪ್ಲೇಯರ್ ಕೂಡ ಆಗಿದ್ದರು ಎಂದು ಮನವಿ ಪತ್ರದಲ್ಲಿ ಉಲ್ಲೇಖಸಲಾಗಿದೆ. ಚೈತ್ರದಿಟ್ಟ ಮಹಿಳೆ ಆತ್ಮಹತ್ಯೆಗೆ ಶರಣಾಗುವ ವ್ಯಕ್ತಿಯೇ ಅಲ್ಲ.ಹಾಗಾಗಿ ಚೈತ್ರಾಗೌಡ ಸಾವಿಗೆ ನ್ಯಾಯ ಸಿಗಬೇಕು ಎಂದು ಸೂಕ್ತ ರೀತಿಯಲ್ಲಿ ಪ್ರಕರಣದ ತನಿಖೆ ನಡೆಸುವಂತೆ ವಕೀಲರ ಸಂಘವು ಬೆಂಗಳೂರು ಕಮಿಷನರ್ ಹಾಗೂ ಉತ್ತರ ವಿಭಾಗದ ಡಿಸಿಪಿ ಅವರಿಗೆ ಪತ್ರ ಬರೆದಿದ್ದಾರೆ. ಇಂದು ಬೆಳಿಗ್ಗೆ 11:00 ಸುಮಾರಿಗೆ ಬೆಂಗಳೂರಿನ ಸಂಜಯ್ ನಗರದಲ್ಲಿ ತಮ್ಮ ನಿವಾಸದಲ್ಲಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದುಕೊಂಡು…
ಬೆಳಗಾವಿ : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ವರುಣ ತನ್ನ ಅಬ್ಬರವನ್ನು ಮುಂದುವರಿಸಿದ್ದಾನೆ. ಇದೀಗ ಹುಬ್ಬಳ್ಳಿ ಮಹಾನಗರ ಹಾಗೂ ಬೆಳಗಾವಿಯಲ್ಲೂ ಭಾರಿ ಮಳೆಯಾಗಿದ್ದು, ಮಳೆ ಬಂದಹಳ್ಳಿಯಲ್ಲಿ ನಿಂತ ನೀರಿನಲ್ಲಿ ವಾಹನ ಸವಾರರು ಪರದಾಟ ನಡೆಸಿದರು. ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದು, ಕೆಲವು ಪ್ರದೇಶಗಳಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಹೀಗಾಗಿ ಇದೀಗ ಮುಂಗಾರು ಹಂಗಾಮಿಗೆ ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ. ಅದೃಷ್ಟವಶಾತ್, ಈವರೆಗೆ ಮಳೆಯಿಂದ ಯಾವುದೇ ಹಾನಿಯಾದ ವರದಿಯಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಧ್ಯಾಹ್ನ ಭಾರಿ ಮಳೆ ಸುರಿಯಿತು. ಗಾಳಿ, ಗುಡುಗು ಸಹಿತ ಸುಮಾರು ಅರ್ಧಗಂಟೆಗಳ ಮಳೆಯಾಯಿತು. ಈ ಮಧ್ಯೆ, ಬೆಂಗಳೂರಿನಲ್ಲಿ ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಮಧ್ಯಾಹ್ನದ ವೇಳೆಗೆ ವಿಜಯಪುರ, ಚಿಕ್ಕಮಗಳೂರು, ಹುಬ್ಬಳ್ಳಿ, ದಕ್ಷಿಣ…
ಗದಗ : ಕಳೆದ ವರ್ಷ ಬೆಳಗಾವಿ ಜಿಲ್ಲೆಯ ವಂಟಮುರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಮಾಸುವ ಮುನ್ನವೇ ಗದಗದಲ್ಲಿ ಮತ್ತೊಂದು ಘಟನೆ ನಡೆದಿದೆ. ಹಾಡು ಹಗಲೇ ಮನೆಗೆ ನುಗ್ಗಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಯಾಕೆ ಹೀಗೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ ಮಹಿಳೆಯ ಸೀರೆಯನ್ನು ದುಷ್ಕರ್ಮಿಗಳು ಎಳೆದಾಡಿರುವ ಘಟನೆ ನಡೆದಿದೆ. ಗದಗದ ಪಂಚಾಕ್ಷರಿ ನಗರದಲ್ಲಿ ನಡೆದಿರುವಂತಹ ಘಟನೆಯಾಗಿದ್ದು, ಮನೆಗೆ ನುಗ್ಗಿ ಟಿವಿ ಫ್ರಿಜ್ ಧ್ವಂಸಗೊಳಿಸಿದ್ದಾರೆ. ಈ ವೇಳೆ ಐವರು ದುಷ್ಕರ್ಮಿಗಳ ಗ್ಯಾಂಗ್ ಜೀಪಿಗೆ ಬೆಂಕಿ ಹಚ್ಚಿದ್ದಾರೆ. ಈ ಕುರಿತು ಪ್ರಶ್ನೆ ಮಾಡಿದ ಮಹಿಳೆಯ ಸೀರೆ ಎಳೆದು ಅಸಭ್ಯವಾಗಿ ವರ್ತಿಸಿದ್ದಾರೆ. ಪ್ರಕಾಶ್ ನಿಡಗುಂದಿ ಎಂಬುವವರ ಮನೆಗೆ ನುಗ್ಗಿ ಅಟ್ಟಹಾಸ ಮೆರೆದಿದ್ದಾರೆ. ಹುಯ್ಲಗೋಳ ಗ್ರಾಮ ಪಂಚಾಯಿತಿ ಸದಸ್ಯನ ವಿರುದ್ಧ ಈ ಕುರಿದಂತೆ ಆರೋಪ ಕೇಳಿ ಬಂದಿದ್ದು, ಗ್ರಾಂ ಪಂ ಸದಸ್ಯ ಮಿಲಿಂದ್ ಕಾಳೆ ಹಾಗೂ ನಾಗರಾಜ್ ಕಾಳೆ, ಕುಮ್ಮಕ್ಕು ನೀಡಿದ್ದಾರೆ. ನಮ್ಮ ಜೀವಕ್ಕೆ ಏನಾದರು ಆದರೆ ಇವರೇ ಹೊಣೆಗಾರರು ಎಂದು ಹಲ್ಲೆಗೆ ಒಳಗದ ಕುಟುಂಬಸ್ಥರು…
ಕಲಬುರಗಿ : ಕೌಟುಂಬಿಕ ಕಲಹದಿಂದ ಅಪ್ರಾಪ್ತೆ ಬಾಲಕಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಕಲಬುರ್ಗಿಯ ಉಪನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ 9 ಜನರ ವಿರುದ್ಧ ಇದೀಗ ದೂರು ದಾಖಲಾಗಿದೆ. ಕಲಬುರ್ಗಿ ನಗರದಲ್ಲಿ ಬಾಲಕಿಯ ಕುಟುಂಬ ವಾಸವಿತ್ತು. ಕೂಲಿ ಕೆಲಸ ಮಾಡಿಕೊಂಡು ಬಾಲಿಕೆಯ ಕುಟುಂಬ ವಾಸಿಸುತ್ತಿದ್ದರು. ಬಾಲಕಿ ಸಂಬಂಧಿಕರ ಜೊತೆಗೆ ಕೌಟುಂಬಿಕ ಕಲಹವಿತ್ತು. ಈ ಸೇಡಿಗೆ ಬಾಲಕಿಯನ್ನು ಬೈಕ್ನಲ್ಲಿ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಅಪ್ರಾಪ್ತೆ ಬಾಲಕಿಯ ಮೇಲೆ ಸಂಬಂಧಿಕರು ಹಲ್ಲೆ ಮಾಡಿದ್ದಾರೆ. ಇದೀಗ ಅಲ್ಲಿಗೆ ಒಳಗಾದಂತಹ ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರಲಿಂಗಪ್ಪ ಚತ್ತರಕಿ, ಈರಪ್ಪ ಚತ್ತರಕಿ, ಬಸಪ್ಪ ಚತ್ತರಕಿ ಸೇರಿ ಹಲ್ಲೆ ಮಾಡಿದ 9 ಜನರ ವಿರುದ್ಧ ಇದೀಗ ದೂರು ದಾಖಲಾಗಿದೆ ಐಪಿಸಿ ಸೆಕ್ಷನ್ 109, 354, 364, 307ರ ಅಡಿ ದೂರು ದಾಖಲಾಗಿದೆ.
ಬೆಂಗಳೂರು : ಇಂದು ಬೆಂಗಳೂರಿನ ಸಂಜಯ್ ನಗರದಲ್ಲಿ ಕೆಎಎಸ್ ಅಧಿಕಾರಿ ಪತ್ನಿ ಚೈತ್ರ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೀರೆಯಿಂದ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಸೈದುಲು ಅದಾವತ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೈತ್ರಾಗೌಡ ಆತ್ಮಹತ್ಯೆ ಮಾಡಿಕೊಂಡ ಕುರಿತಂತೆ ದೂರು ಸಲ್ಲಿಕೆಯಾಗಿದೆ.ಮೃತ ಚೈತ್ರಗೌಡ ತಮ್ಮ ಆಗಮಿಸಿ, ದೂರು ನೀಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.ಮನೆಯಲ್ಲಿ ಒಂದು ಡೆತ್ ನೋಟ್ ಸಹ ಪತ್ತೆಯಾಗಿದೆ ಎಂದು ಅವರು ತಿಳಿಸಿದರು. ನನ್ನ ಸಾವಿಗೆ ಯಾರೂ ಕಾರಣ ಅಲ್ಲ ಅಂತ ಬರೆದಿದ್ದಾರೆ.ಅದನ್ನು ಅವರೇ ಬರೆದಿದ್ದಾರಾ ಅಂತ ಪರಿಶೀಲಿಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಅರವಾನಿಸಲಾಗಿದೆ. ತನಿಖೆಯ ಬಳಿಕ ವಿಚಾರ ಗೊತ್ತಾಗಲಿದೆ. ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಸೈದುಲ್ ಅದಾವತ್ ಪ್ರತಿಕ್ರಿಯೆ ನೀಡಿದರು.
ಬೆಂಗಳೂರು : ಮನೆಯ ಬೆಡ್ ರೂಂ ಅಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು ಕಳೆದ ಮೂರು ತಿಂಗಳ ಹಿಂದೆಯೇ ಮೃತ ಚೈತ್ರ ಗೌಡ ಡೆತ್ ನೋಟ್ ಬರೆದಿದ್ದರು ಎಂದು ತನಿಖೆಯ ವೇಳೆ ಗೊತ್ತಾಗಿದೆ. ಇಂದು ಬೆಳಿಗ್ಗೆ ಸಂಜಯ್ ನಗರದಲ್ಲಿ ಮನೆ ಒಂದರಲ್ಲಿ ಕೆಎಎಸ್ ಅಧಿಕಾರಿ ಪತ್ನಿ ಹಾಗೂ ವೃತ್ತಿಯಲ್ಲಿ ವಕೀಲೆಯಾಗಿರುವಂತಹ ರೈತರ ಗೌಡ ಅವರು ಮನೆಯ ಬೆಡ್ ರೂಮಿನಲ್ಲಿ ಫ್ಯಾನಿಗೆ ನೇಣು ಬಿಗಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಅವರ ಶವವನ್ನು ರವಾನಿಸಲಾಗಿತ್ತು ಇದೀಗ ಪೊಲೀಸರು ಅವರ ಮನೆಯನ್ನು ಪರಿಶೀಲ ನಡೆಸಿದಾಗ ಈ ಒಂದು ಡೆತ್ ನೋಟ್ ಪ್ರತಿ ಪತ್ತೆಯಾಗಿದೆ. ಡೆತ್ ನೋಟ್ ಅಲ್ಲಿ ಏನಿದೆ? ಮಾರ್ಚ್ 11 ರಂದು ಚೈತ್ರಾಗೌಡ ಡೆತ್ ನೋಟ್ ಬರೆದಿಟ್ಟಿದ್ದರು. ಜೀವನ ಎಂಜಾಯ್ ಮಾಡಿ ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಡಿಪ್ರೆಶನ್ ಇಂದ ಬಳಲುತ್ತಿದ್ದೇನೆ. ಡಿಪ್ರೆಶನ್…
ಶಿವಮೊಗ್ಗ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಜಸ್ಟ್ ಪಾಸ್ ಆದಂತಹ ವಿದ್ಯಾರ್ಥಿಗಳು ಕೂಡ ಮತ್ತೊಮ್ಮೆ ಪರೀಕ್ಷೆ ಬರೆಯಬಹುದು ಎಂದು ಶಿವಮೊಗ್ಗ ನಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಸ್ಟ್ ಪಾಸ್ ಆದಂತ ವಿದ್ಯಾರ್ಥಿಗಳು ಕೂಡ ಮತ್ತೆ ಪರೀಕ್ಷೆ ಬರೆಯಬಹುದು. ಹೀಗಾಗಿ ಅಂತಹ ವಿದ್ಯಾರ್ಥಿಗಳಿಗೆ ಸ್ಪೆಷಲ್ ಕ್ಲಾಸ್ ತೆಗೆದುಕೊಳ್ಳುತ್ತೇವೆ. ಫೇಲಾದವರು ಮತ್ತೆ ಪರೀಕ್ಷೆ ಬರೆದು ಪಾಸ್ ಆಗಿ ಈ ವರ್ಷ ಅಷ್ಟೇ ಕೃಪಾಂಕ ಅಂಕ ಸೀಮಿತವಾಗುತ್ತದೆ ಎಂದರು. ಅಲ್ಲದೆ ಈ ಒಂದು ವರ್ಷದಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿ ಮೂರನೇ ಸ್ಥಾನಕ್ಕೆ ಏರಿಕೆ ಆಗಿದೆ. ಶಿವಮೊಗ್ಗ ಮೂರನೇ ಸ್ಥಾನಕ್ಕೆ ಬಂದಿದ್ದು ಸಂತಸ ತಂದಿದೆ. ಎಂದು ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮತ್ತು ಬಂಗಾರಪ್ಪ ಹೇಳಿಕೆ ನೀಡಿದರು. ಪ್ರಸ್ತಕ ಸಾಲಿನಲ್ಲಿ ಉಡುಪಿ ಮೊದಲ ಸ್ಥಾನ ಗಳಿಸಿದ್ದು,ಯಾದಗಿರಿ ಮತ್ತೆ ಕೊನೆ ಸ್ಥಾನ ಪಡೆದುಕೊಂಡಿದೆ. ಇನ್ನು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಕುರಿತು ಮಾತನಾಡಿದ ಅವರು,…
ಕೊಪ್ಪಳ : ಮಸೀದಿ ಕಮಿಟಿ ರಚನೆ ವಿಚಾರವಾಗಿ ಪೊಲೀಸ್ ಅವರಣದಲ್ಲೇ 2 ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸ್ ಠಾಣೆ ಆವರಣದಲ್ಲಿ ನಡೆದಿದೆ. ಕಿಲ್ಲಾ ಏರಿಯಾದ ಮರ್ಕಾಸ್ ಮಸೀದಿ ಕಮಿಟಿ ರಚನೆ ವಿಚಾರವಾಗಿ ಈ ಒಂದು ಗಲಾಟೆ ನಡೆದಿದೆ ಎಂದು ಹೇಳಲಗುತ್ತಿದೆ. ಸಮುದಾಯದ ಎರಡು ಗುಂಪುಗಳ ನಡುವೆ ಮಾರಾಮಾರಿ ಯಾಗಿದೆ.ಪೊಲೀಸ್ ಠಾಣೆ ಆವರಣದಲ್ಲಿ ಗಲಾಟೆ ಕಂಡು ಕೆಲಕಾಲ ಜನರು ಆತಂಕಗೊಂಡಿದ್ದರು. ಗಲಾಟೆ ಮಾಡಿಕೊಂಡವರನ್ನು ಇದೀಗ ಗಂಗಾವತಿ ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಯ ಪತ್ನಿಯ ನಿಗೂಢ ಸಾವಾಗಿದ್ದು, ಬೆಂಗಳೂರಿನ ಸಂಜಯ್ ನಗರದ ಮನೆಯಲ್ಲಿ KAS ಅಧಿಕಾರಿಯ ಪತ್ನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ತಿಳಿದುಬಂದಿಲ್ಲ. ಸ್ಥಳಕ್ಕೆ ಸಂಜಯನಗರ ಪೊಲೀಸರು ಭೇಟಿ ನೀಡಿ ಇದೀಗ ಪರಿಶೀಲನೆ ನಡೆಸುತ್ತಿದ್ದಾರೆ. ಹೌದು KAS ಅಧಿಕಾರಿ ಪತ್ನಿ ಚೈತ್ರಾಗೌಡ ಎನ್ನುವ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ., ಸಂಜಯ್ ನಗರದ ನಿವಾಸದ ಮನೆಯಲ್ಲಿ ಚೈತ್ರಾಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಂಜಯ್ ನಗರದ ನಿವಾಸದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇದೀಗ ಶವ ಪತ್ತೆಯಾಗಿದೆ, ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಮನೆಯಲ್ಲಿ ಯಾವುದೇ ರೀತಿಯಾದ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ತುಮಕೂರು : ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣ ಇನ್ನೂ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ತಂದೆಯೇ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ನಗರದ ಗಾಂಧಿನಗರದ ಹಿಪ್ಪೇತೋಪು ಎಂಬಲ್ಲಿ ನಡೆದಿದೆ. ಹೌದು ತಂದೆಯೇ ತನ್ನ 13 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಬಾಲಕಿಯ ತಾಯಿ ತಿಪಟೂರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ತಂದೆಯ ವಿರುದ್ಧ ಪೋಸ್ಕೋ ಪ್ರಕರಣ ದಾಖಲಾಗಿದೆ. ಇವರದ್ದು ಬಡ ಕುಟುಂಬವಾಗಿದ್ದು, ಪತಿ – ಪತ್ನಿ ಇಬ್ಬರೂ ಕೂಲಿಗಾರರಾಗಿದ್ದಾರೆ. ಆದರೆ, ತಾಯಿ ಕೂಲಿ ಹೋದ ಸಂದರ್ಭದಲ್ಲಿ ಮನೆಯಲ್ಲೇ ಉಳಿಯುತ್ತಿದ್ದ ಪತಿಯು ತನ್ನ ಸ್ವಂತ 13 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಾಯಿ ತನ್ನ ದೂರಿನಲ್ಲಿ ವಿವರಿಸಿದ್ದಾರೆ. ಬಾಲಕಿ 13 ವರ್ಷದವಳಾಗಿದ್ದರಿಂದ ಇದೀಗ ತಿಪಟೂರು ನಗರ ಠಾಣೆ ಪೋಲೀಸರು ತಂದೆಯ ವಿರುದ್ಧ ಪೋಕ್ಸೋ ಪ್ರಕರಣವನ್ನು…











