Author: kannadanewsnow05

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಜೆ.ಪಿ ನಗರದಲ್ಲಿ ಟ್ಯೂಷನ್‌ಗೆಂದು ಬರುತ್ತಿದ್ದ 16 ವರ್ಷದ ಬಾಲಕಿಯನ್ನು ಪ್ರೀತಿಸುವುದಾಗಿ ಪುಸಲಾಯಿಸಿ ಶಿಕ್ಷಕನೇ ಕರೆದೊಯ್ದಿರುವ ಪ್ರಕರಣ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಪಿ ನಗರ ಠಾಣೆಯ ಪೊಲೀಸರು ಶಿಕ್ಷಕನನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಕಳೆದ ಜನೆವರಿ 4 ರಂದು ಕನಕಪುರ ಮೂಲದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಪಾಲಕರು ನೀಡಿದ ದೂರಿನ ಅನ್ವಯ ಶಿಕ್ಷಕ ಅಭಿಷೇಕ ವಿರುದ್ಧ ಜೆ.ಪಿ.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು. ಇದೀಗ ಬಾಲಕಿಯ ಜೊತೆ ಪರಾರಿಯಾಗಿದ್ದ ಶಿಕ್ಷಕ ಅಭಿಷೇಕ ನಾನು ಜೆಪಿ ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ? ಅಭಿಷೇಕ್‌ ಖಾಸಗಿಯಾಗಿ ಟ್ಯೂಷನ್‌ ಕ್ಲಾಸ್‌ ನಡೆಸುತ್ತಿದ್ದ. ನಾಪತ್ತೆಯಾಗಿರುವ ವಿದ್ಯಾರ್ಥಿನಿಯೂ ಇಲ್ಲಿ ಟ್ಯೂಷನ್‌ ಪಡೆಯುತ್ತಿದ್ದಳು. ಈ ನಡುವೆ ಶಿಕ್ಷಕ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಕಳೆದ ನ.23 ರಂದು ಟ್ಯೂಷನ್‌ನಿಂದ ರಾತ್ರಿಯಾದರೂ ವಿದ್ಯಾರ್ಥಿನಿ ಮನೆಗೆ ಬಾರದಿದ್ದಾಗ ಆಕೆಯ ಪೋಷಕರು ಟ್ಯೂಷನ್‌…

Read More

ಕೋಲಾರ : ಇತ್ತೀಚಿನ ದಿನಗಳಲ್ಲಿ ಹೃದಯಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಿದ್ದನಹಳ್ಳಿಯಲ್ಲಿ ಬೆಸ್ಕಾಂ ಸಿಬ್ಬಂದಿ ಒಬ್ಬರು ಮನೆಯೊಂದಕ್ಕೆ ಕರೆಂಟ್ ಬಿಲ್ ನೀಡುವ ಸಂದರ್ಭದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ. ಹೌದು ಹೃದಯಾಘಾತದಿಂದ ಕರ್ತವ್ಯ ನಿರತ ಬೆಸ್ಕಾಂ ಸಿಬ್ಬಂದಿ ಸಾವನ್ನಾಪ್ಪಿದ್ದರೆ. ಸಿದ್ದನಹಳ್ಳಿ ಬೆಸ್ಕಾಂ ಸಿಬ್ಬಂದಿ ಪ್ರಕಾಶ್ ಕುಮಾರ್ ಎನ್ನುವವರು ಸಾವನ್ನಪ್ಪಿದ್ದಾರೆ.. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಿದ್ದನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಸಿದ್ದನನಹಳ್ಳಿಯಲ್ಲಿ ವಿದ್ಯುತ್ ಬಿಲ್ ಕೊಡುವಾಗ ಹೃದಯಾಘಾತವಾಗಿದೆ. ಮೃತನ ಕುಟುಂಬಕ್ಕೆ ಇದೀಗ ಸಿಬ್ಬಂದಿಗಳು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಘಟನೆ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ದಾವಣಗೆರೆ : ಮನೆಯಲ್ಲಿ ಗ್ಯಾಸ್ ಲೀಕ್ ಆಗಿ ಸಿಲಿಂಡರ್ ಸ್ಪೋಟಗೊಂಡು ಇಡೀ ಮನೆ ಹೊತ್ತಿ ಉರಿದಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಚೆನ್ನೇಶಪುರ ಎಂಬ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ ಅದೃಷ್ಟವಶಾತ್ ಮನೆಯಲ್ಲಿದ್ದ ತಾಯಿ ಹಾಗೂ ಮಗ ಮನೆಯಿಂದ ಹೊರಗೋಡಿ ಪ್ರಾಣ ಉಳಿಸಿಕೊಂಡಿದ್ದಾರೆ. ಗ್ರಾಮದ ರೈತ ಕಾಶಪ್ಪ ಎಂಬುವರ ಮನೆ ಹೊತ್ತಿ ಉರಿದಿದೆ. ಮನೆಯಲ್ಲಿ ತಾಯಿ ಮಗ ಇಬ್ಬರೇ ವಾಸವಾಗಿದ್ದರು. ಅಡುಗೆ ಮನೆಯಲ್ಲಿ ಸಣ್ಣದಾಗಿ ಬೆಂಕಿ ಕಾಣಿಸಿಕೊಂಡಿತ್ತು, ಇದನ್ನ ನೋಡಿ ತಾಯಿ ಮಗ ಹೊರಗೆ ಓಡಿ ಬಂದಿದ್ದಾರೆ. ಇವರು ಹೊರ ಹೋದ ಎರಡು ನಿಮಿಷದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯಿಂದ ಹೊರಗೆ ಓಡಿ ಹೋಗಿ ತಾಯಿ ಮಗ ಪ್ರಾಣ ಉಳಿಸಿಕೊಂಡಿದ್ದಾರೆ. ಸಿಲಿಂಡರ್ ಸ್ಫೋಟದಿಂದ ಇಡೀ ಗ್ರಾಮವೇ ಬೆಸ್ಟ್ ಬಿದ್ದಿದೆ. ಸಿಲಿಂಡರ್ ಸ್ಫೋಟಕ್ಕೆ ಇಡೀ ಮನೆ ಸಂಪೂರ್ಣವಾಗಿ ಸುಟ್ಟು ಕರ್ಕಲಾಗಿದ್ದು ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ಬಿ ಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಯಿತು. ಬಳಿಕ ನ್ಯಾಯಾಧೀಶರು ವಿಚಾರಣೆಯನ್ನು ಜನವರಿ 10 ಕ್ಕೆ ಒಂದು ಮುಂದೂಡಿದರು. ವಿಚಾರಣೆ ಆರಂಭದ ವೇಳೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಪರ ಹಿರಿಯ ವಕೀಲ ಸಿ ವಿ ನಾಗೇಶ್ ಅವರು ವಾದ ಮಂಡಿಸಿದರು. ಪೊಲೀಸರು ಕೆಲವು ಸಾಕ್ಷಿಗಳ ಹೇಳಿಕೆಯನ್ನು ಕೋರ್ಟಿಗೆ ಸಲ್ಲಿಸಿಲ್ಲ. ಈ ಹೇಳಿಕೆಗಳು ಆರೋಪ ಪಟ್ಟಿಯ ಭಾಗವಲ್ಲದಿದ್ದರೂ ಕೂಡ ಕೋರ್ಟ್ ತರಿಸಿಕೊಳ್ಳಬಹುದು. ಪೊಲೀಸರ ಕೇಸ್ ಡೈರಿಯ ಕೂಡ ತನಿಖೆಯ ಭಾಗವಾಗಿದೆ ಎಂದು ವಾದಿಸಿದರು. ಈ ವೇಳೆ ವಿಚಾರಣೆ ಜನವರಿ 10 ಕ್ಕೆ ಮುಂದೂಡಿ ಹೈಕೋರ್ಟ ಆದೇಶಿಸಿತು. ಪ್ರಕರಣದ ಹಿನ್ನೆಲೆ? ಸಹಾಯ ಕೋರಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ತಾಯಿ ಮಗಳು ಭೇಟಿ ನೀಡಿದ್ದ ಸಂದರ್ಭದಲ್ಲಿ ಅಪ್ರಾಪ್ತ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು…

Read More

ಬೆಂಗಳೂರು : ಚೀನಾದಲ್ಲಿ ಹುಟ್ಟಿಕೊಂಡಿರುವ HMPV ವೈರಸ್ ಸದ್ಯ ಭಾರತಕ್ಕೂ ಕಾಲಿಟ್ಟಿದ್ದು, ನಿನ್ನೆಯಿಂದ ಒಟ್ಟು ಭಾರತದಲ್ಲಿ ಕರ್ನಾಟಕ ಸೇರಿದಂತೆ ಇದುವರೆಗೂ 7 ಪ್ರಕರಣಗಳು ಪತ್ತೆಯಾಗಿವೆ.ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಈ ಒಂದು ಸಭೆ ನಡೆಯಲಿದ್ದು, HMPV ಬಗ್ಗೆ ಈಗಾಗಲೇ ಆರೋಗ್ಯ ಅಧಿಕಾರಿಗಳು ವರದಿ ತಯಾರಿಸಿದ್ದು ಆರೋಗ್ಯ ಇಲಾಖೆಯಲ್ಲಿ ವರದಿ ಸಿದ್ದವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರಿಗಳು ಈ ಒಂದು ವರದಿ ಸಲ್ಲಿಸಲಿದ್ದಾರೆ.ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಎಂಪಿವಿ ಬಗ್ಗೆ ಸಂಪೂರ್ಣ ವರದಿಯನ್ನು ಕೇಳಿದ್ದಾರೆ. ಸಂಪೂರ್ಣ ವರದಿಯೊಂದಿಗೆ ಸಭೆಗೆ ಬರಲು ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಿಕ ಇಲಾಖೆಯ ಅಧಿಕಾರಿಗಳಿಗೆ ಕೆಲವು ಸಲಹೆ ಮತ್ತು ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ…

Read More

ರಾಮನಗರ : ಕಳೆದ ಶನಿವಾರದಂದು ರಾಮನಗರ ಜಿಲ್ಲೆಯ ಬಿಡದಿ ಬಳಿ ಕೈಗಾರಿಕಾ ಪ್ರದೇಶದಲ್ಲಿ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡು ಗಾಯಗೊಂಡಿದ್ದ 5 ಕಾರ್ಮಿಕರ ಪೈಕಿ ಇಂದು ಓರ್ವ ಕಾರ್ಮಿಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಮೃತನನ್ನು ಉಮೇಶ್ ಕುಮಾರ್ (32) ಎಂದು ತಿಳಿದುಬಂದಿದೆ. ಹೌದು ಬಿಡದಿಯ ಭೈರಮಂಗಲ ಕ್ರಾಸ್ ಬಳಿ ಇರುವ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಾಯ್ಲರ್ ಪೈಪ್ ಸ್ಫೋಟಗೊಂಡು ಐದು ಮಂದಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದವು. ಗಾಯಾಳುಗಳಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದ್ದು, ಈ ಪೈಕಿ ಇಬ್ಬರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಒಣ ಕಸ ಸುಟ್ಟ ಬಳಿಕ, ಬೂದಿ ಹೊರಹೋಗುವ ಬಾಯ್ಲರ್ ಪೈಪ್ ನಲ್ಲಿ ಬ್ಲಾಕ್ ಆಗಿದೆ.ಈ ಸಂದರ್ಭದಲ್ಲಿ ಕಾರ್ಮಿಕರು ಯಾವುದೇ ಮುಂಜಾಗ್ರತಾ ಕ್ರಮವನ್ನು ವಹಿಸದೆ ಓಪನ್ ಮಾಡಿದ್ದಾರೆ. ಈ ವೇಳೆ ಬಾಯ್ಲರ್ ಸ್ಪೋಟಗೊಂಡು ಇದು ಅಂತ ಸಂಭವಿಸಿತ್ತು ಅಲ್ಲದೆ ಇಂದು ಘಟನಾ ಸ್ಥಳಕ್ಕೆ…

Read More

ಚಿಕ್ಕಮಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಕ್ಸಲರಿಗೆ ಶರಣಾಗತಿ ಆಗುವಂತೆ ಸೂಚಿಸಿದ ಬೆನ್ನಲ್ಲೆ ಕರ್ನಾಟಕದ ನಾಲ್ವರು ಹಾಗೂ ಕೇರಳ, ತಮಿಳುನಾಡಿನ ತಲಾ ಒಬ್ಬೊಬ್ಬರಂತೆ ಒಟ್ಟು ಆರು ಜನ ನಕ್ಸಲರು ನಾಳೆ ಚಿಕ್ಕಮಗಳೂರು ಜಿಲ್ಲಾ ಆಡಳಿತದ ಮುಂದೆ ಶರಣಾಗಲಿದ್ದಾರೆ. ಹೌದು ಕರ್ನಾಟಕದ ನಾಲ್ವರು ನಕ್ಸಲರು ಸೇರಿದಂತೆ ನಾಳೆ 6 ನಕ್ಸಲರು ಶರಣಾಗತಿ ಆಗಲಿದ್ದಾರೆ. ಕೇರಳದ ದೀಪ, ತಮಿಳುನಾಡಿನ ವಸಂತ ಅಲಿಯಾಸ್ ರಮೇಶ, ರಾಯಚೂರು ಮೂಲದ ಜಯಣ್ಣ ಅಲಿಯಾಸ್ ಮಾರಪ್ಪ ಅರೋಲಿ, ಮೂಲತಃ ಚಿಕ್ಕಮಂಗಳೂರು ಜಿಲ್ಲೆಯ ಮುಂಡಗರು ಲತಾ, ವನಜಾಕ್ಷಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಂದರಿ ನಾಳೆ ಶರಣಾಗತಿ ಅಗಲಿದ್ದಾರೆ. ಆರು ನಕ್ಸಲರ ಜೊತೆ ಶಾಂತಿಗಾಗಿ ನಾಗರೀಕ ವೇದಿಕೆಯಿಂದ ಮಾತುಕತೆ ನಡೆಸಲಾಗಿದೆ. ಕಳೆದ ವರ್ಷ ಚಿಕ್ಕಮಂಗಳೂರು ಭಾಗದಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿತ್ತು.ಈ ಹಿನ್ನೆಲೆಯಲ್ಲಿ, ANF ಚಿಕ್ಕಮಂಗಳೂರು ಸೇರಿದಂತೆ ಇತರೆ ಭಾಗಗಳಲ್ಲಿ ಕಾರ್ಯಚರಣೆ ನಡೆಸಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿತ್ತು. ಬಳಿಕ ನಕ್ಸಲರಿಗೆ ಶರಣಾಗಲು ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ…

Read More

ಬೆಂಗಳೂರು : ಕಾಂಗ್ರೆಸ್ಸಿನ ಮಾಜಿ ಸಂಸದ ಡಿಕೆ ಸುರೇಶ್ ಅವರ ಹೆಸರು ಹೇಳಿ ವಂಚನೆ ಎಸಗಿದ್ದ ಐಶ್ವರ್ಯಗೌಡ ವಿರುದ್ಧ ಇದೀಗ ಮತ್ತೊಂದು FIR ದಾಖಲಾಗಿದ್ದು, ಸ್ತ್ರೀ ರೋಗ ತಜ್ಞೆ ಮಂಜುಳಾ ಪಾಟೀಲ್ ಅವರ ಬಳಿ 2.52 ಕೋಟಿ ಹಣ ಅಲ್ಲದೇ 2 ಕೆಜಿಗು ಅಧಿಕ ಚಿನ್ನ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೌದು ವೈದ್ಯೆ ಮಂಜುಳ ಪಾಟೀಲ್ ಅವರ ಕ್ಲಿನಿಕ್‌ಗೆ ಬಂದು ಐಶ್ವರ್ಯಗೌಡ ತಾನು ಡಿಕೆ ಸುರೇಶ್ ತಂಗಿ ಎಂದು ಹೇಳಿ ವೈದ್ಯೆಯನ್ನು ಪರಿಚಯ ಮಾಡಿಕೊಂಡಿದ್ದರು. ಜೊತೆಗೆ ಗೋಲ್ಡ್ ಬಿಸಿನೆಸ್, ಕೆಸಿನೊ, ಹಾಗೂ ದೊಡ್ಡ ಮಟ್ಟದಲ್ಲಿ ಬಿಸಿನೆಸ್ ಮಾಡುತ್ತಿರುವುದಾಗಿ ತಿಳಿಸಿದ್ದಳು. 2022ರಿಂದ ಹಂತ ಹಂತವಾಗಿ ಹೂಡಿಕೆ ನೆಪದಲ್ಲಿ ಐಶ್ವರ್ಯಾಗೌಡ ಹಣ ಪಡೆದಿರುತ್ತಾಳೆ. ಒಟ್ಟು 2.52 ಕೋಟಿ ಹಣ ಹಾಗೂ 2.350 ಕೆಜಿ ಚಿನ್ನಾಭರಣ ಪಡೆದು ವಂಚನೆ ಮಾಡಿದ್ದಾಳೆ ಎಂದು ವೈದ್ಯೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಚಂದ್ರಲೇಔಟ್‌ನಲ್ಲಿ ಎಫ್‌ಐಆರ್ ದಾಖಲಾಗಿದ್ದ ಬಗ್ಗೆ ತಿಳಿದು ವೈದ್ಯೆ ಶಾಕ್‌ಗೆ ಒಳಗಾಗಿದ್ದರು. ಬಳಿಕ ವೈದ್ಯೆ ಮನೆ ಬಳಿ ಹೋಗಿ…

Read More

ಬೆಂಗಳೂರು : 2028 ರ ಚುನಾವಣೆಯಲ್ಲಿ ಬಿಜೆಪಿಗೆ 40 ಸೀಟ್ ಸಹ ಬರುವುದಿಲ್ಲ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕೆಲಸ ಮಾಡಿಲ್ಲ. ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಯಾವುದು ಇಲ್ಲ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದರು. ಕಾಂಗ್ರೆಸ್ ನಲ್ಲಿ ಸಾಲು ಸಾಲು ಡಿನ್ನರ್ ಮೀಟಿಂಗ್ ವಿಚಾರವಾಗಿ ಊಟಕ್ಕೆ ಆಹ್ವಾನ ಮಾಡುತ್ತಾರೆ ಹಾಗಾಗಿ ಎಲ್ಲ ನಾಯಕರು ಹೋಗುತ್ತಾರೆ. ಪಾರ್ಟಿ ಔತಣಕೂಟ ಏನು ಇಲ್ಲ ನನ್ನನ್ನು ಸಹ ಯಾರು ಕರೆದಿಲ್ಲ. 2028 ರ ಚುನಾವಣೆಯಲ್ಲಿ ಬಿಜೆಪಿಗೆ 40 ಸೀಟ್ ಸಹ ಬರುವುದಿಲ್ಲ. ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಕೆಲಸ ಮಾಡಿಲ್ಲ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಯಾವುದು ಇಲ್ಲ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದರು. 60 ಪರ್ಸೆಂಟ್ ಅಂತ ಹೆಚ್ ಡಿ ಕುಮಾರಸ್ವಾಮಿ ಹತಾಶರಾಗಿ ಮಾತನಾಡುತ್ತಿದ್ದಾರೆ. ಹಿಂದೆ ಕೆಂಪಣ್ಣ 40 ಪರ್ಸೆಂಟ್ ಕಮಿಷನ್ ಅಂತ ಆರೋಪ ಮಾಡಿದ್ದರು. ಕುಮಾರಸ್ವಾಮಿ ಕನಸು ಕಾಣುವುದನ್ನು ಬಿಡಬೇಕು. 32 ಸಾವಿರ ಕೋಟಿ…

Read More

ಬೆಂಗಳೂರು : ನಿನ್ನೆ ತಾನೆ ಬೆಂಗಳೂರಿನಲ್ಲಿ ಸಾಲದಿಂದಾಗಿ ಟೆಕ್ಕಿ ದಂಪತಿಗಳು ತಮ್ಮ ಇಬ್ಬರೂ ಮಕ್ಕಳಿಗೆ ವಿಷ ಹಾಕಿ ಕೊಂದು, ತಾವು ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಸಾಲದಿಂದ ಬಡ್ಡಿ ಟಾರ್ಚರ್ಗೆ ಬೇಸತ್ತು, ಉದ್ಯಮಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಅಕ್ಷಯ ನಗರದಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಸಾಲದಿಂದ ಬೇಸತ್ತು ಉದ್ಯಮಿ ನೇಣಿಗೆ ಶರಣಾಗಿದ್ದಾರೆ. ಹುಳಿಮಾವು ಠಾಣಾ ವ್ಯಾಪ್ತಿಯ ಅಕ್ಷಯ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ಕಲಾಲ್ ದತ್ತ (40) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ ಎಂದು ತಿಳಿದುಬಂದಿದೆ. ಸಾಲಕ್ಕೆ ಬಡ್ಡಿ ನೀಡುವ ಟಾರ್ಚರ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಇದೀಗ ಆರೋಪ ಕೇಳಿ ಬಂದಿದೆ.ನಿನ್ನೆ ಸಂಜೆ ಉದ್ಯಮಿ ಕಲಾಲ್ ದತ್ತ ನೇಣಿಗೆ ಶರಣಾಗಿದ್ದಾರೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More