Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಕಲಬುರ್ಗಿ : ಆಕಸ್ಮಿಕ ಬೆಂಕಿಯಿಂದಾಗಿ 8 ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಜೇವರ್ಗಿ ತಾಲೂಕಿನ ಬುಟ್ನಾಳ ರಸ್ತೆಯಲ್ಲಿರುವ 8 ಅಂಗಡಿಗಳು ಆಕಸ್ಮಿಕ ಬೆಂಕಿಯಿಂದಾಗಿ ಸುಟ್ಟು ಕರಕಲಾಗಿವೆ . ದೇವೇಂದ್ರ, ಮನೋಹರ, ಶ್ರೀಶೈಲ್, ಪ್ರಕಾಶ್, ಮೋಹನ್ ಹಾಗೂ ಬಸವರಾಜ್ ಎಂಬುವವರ ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಈ ವೇಳೆ 8 ಅಂಗಡಿಯಲ್ಲಿದ್ದ ಸಾಗುವಾನಿ ಬಾಗಿಲಗಳು, ಯಂತ್ರಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾಸ್ಥಳಕ್ಕೆ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ವರ್ತೂರು ಪ್ರಕಾಶ್ ಆಪ್ತೆ ಶ್ವೇತಾ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ಮೋಹನ್ ಲಾಲ್ ಎನ್ನುವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರಿಂದ ಆರೋಪಿಯನ್ನು ಬಂಧಿಸಲಾಗಿದೆ. ರಾಜಸ್ಥಾನದಲ್ಲಿ ಬೆಂಗಳೂರು ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.ಆರೋಪಿಗೆ ಶ್ವೇತಾ ಚಿನ್ನಾಭರಣ ಕೊಟ್ಟಿದ್ದ ಆರೋಪ ಕೇಳಿ ಬಂದಿತ್ತು. ಮೋಹನ್ ಲಾಲ್ ಗೆ ಸುಮಾರು 1ಕೆಜಿ 800 ಗ್ರಾಂ ಚಿನ್ನಾಭರಣ ಕೊಟ್ಟಿದ್ದ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಮೋಹನ್ ಲಾಲ್ ಪರಾರಿಯಾಗಿದ್ದ. ಸದ್ಯ ಆತನನ್ನು ರಾಜಸ್ಥಾನದಲ್ಲಿ ಬಂಧಿಸಿ ಬೆಂಗಳೂರು ಪೊಲೀಸರು ಕರೆತಂದಿದ್ದಾರೆ. ಆರೋಪಿಯನ್ನು ಕಸ್ಟಡಿಗೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ವ್ಯಕ್ತಿಯೊಬ್ಬರು 10 ಸಾವಿರಕ್ಕೆ ಕಾರು ಬುಕ್ ಮಾಡಿ ಬಳಿಕ ಕ್ಯಾನ್ಸಲ್ ಮಾಡಿದ್ದರು. ನಂತರ ಕಸ್ಟಮರ್ ಕೇರ್ ಗೆ ಕರೆ ಮಾಡಿ ಹಣ ವಾಪಸ್ ನೀಡುವಂತೆ ತಿಳಿಸಿದಾಗ ಇದೇ ವೇಳೆ ಸೈಬರ್ ವಂಚಕರು ವ್ಯಕ್ತಿಯಿಂದ ಸುಮಾರು 20 ಲಕ್ಷ ರೂಪಾಯಿ ಪಡೆದು ವಂಚನೆ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಿನ ಇಂದಿರಾನಗರ ನಿವಾಸಿ ಕೆ. ಸುಮನಾ ಪ್ರಸಾದ್ ಎಂಬುವರು ವಂಚನೆಗೊಳಗಾಗಿದ್ದು,ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸುಮನಾ ಪ್ರಸಾದ್ ಅವರು ಕೆಲಸ ನಿಮಿತ್ತ ಹೊರ ಹೋಗಲು ಜ.23ರಂದು ಕಾರು ಬಾಡಿಗೆ ಪಡೆಯಲು ಗೂಗಲ್​ನಲ್ಲಿ ಶೋಧ ನಡೆಸಿದ್ದರು. ಈ ವೇಳೆ ಸ್ಪೇನಿ ಕಾರ್ ಎಂಬ ವೆಬ್​ಸೈಟ್​ನಲ್ಲಿ ಕಾರನ್ನ ಬುಕ್ ಮಾಡಿ ಕ್ಯೂ ಆರ್ ಕೋಡ್ ಮೂಲಕ 10 ಸಾವಿರ ರೂಪಾಯಿ ಪಾವತಿಸಿದ್ದರು. ಬಳಿಕ ಆರ್ಡರ್ ರದ್ದು ಮಾಡಿದ್ದರು. ಗೂಗಲ್ ಮುಖಾಂತರ ಕಸ್ಟಮರ್ ಕೇರ್ ನಂಬರ್ ಪಡೆದು ಹಣ ವಾಪಸ್ ನೀಡುವಂತೆ ಮನವಿ ಮಾಡಿದ್ದರು. ಈ ವೇಳೆ ವಾಟ್ಸಪ್ ಮೂಲಕ ಶೇರ್ ದಿ…

Read More

ಮೈಸೂರು : ಇಂದು ಮೈಸೂರಲ್ಲಿ ಘೋರ ದುರಂತ ಸಂಭವಿಸಿದ್ದು, ಕಾಮಗಾರಿ ವೇಳೆ ಕಾಲೇಜು ಕಟ್ಟಡ ಕುಸಿದಿದೆ. ಈ ವೇಳೆ ಅವಶೇಷಗಳ ಕಟ್ಟಡದ ಅವಶೇಷಗಳ ಅಡಿ ಓರ್ವ ಕಾರ್ಮಿಕ ಸಿಲುಕಿದ್ದಾನೆ ಎಂದು ಹೇಳಲಾಗುತ್ತಿದೆ. ಹೌದು ಕಾಲೇಜು ಕಟ್ಟಡ ಕಾಮಗಾರಿಯ ವೇಳೆ ಕಿಟಕಿ ತೆಗೆಯುವಾಗ ಕಾಲೇಜು ಕಟ್ಟಡ ಕುಸಿದಿದೆ. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ. ಕಟ್ಟಡದ ಅವಶೇಷಗಳ ಅಡಿ ಸದ್ದಾಂ (32) ಎನ್ನುವ ಕಾರ್ಮಿಕ ಸಿಲುಕಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಗೌಡಾಯಿಸಿ ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ ಪೊಲೀಸರು ಕೂಡ ಘಟನೆ ಸ್ಥಳಕ್ಕೆ ದೌಡಯಿಸಿದ್ದಾರೆ.

Read More

ತುಮಕೂರು : ತುಮಕೂರಲ್ಲಿ ಇಂದು ಘೋರವಾದ ದುರಂತ ಸಂಭವಿಸಿದ್ದು, ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದರೆ. ತುಮಕೂರಿನ ಅಂತಸರನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಪರಿಮಳ ಆಗ್ರೋ ಫುಡ್ ಇಂಡಸ್ಟ್ರಿಯಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ. ಹೌದು ಪರಿಮಳ ಆಗ್ರೋ ಫುಡ್ ಇಂಡಸ್ಟ್ರಿಯಲ್ಲಿ ಈ ದುರಂತ ಸಂಭವಿಸಿದ್ದು, ಬತ್ತದ ಹೊಟ್ಟಿನಿಂದ ಎಣ್ಣೆ ತೆಗೆಯುವಾಗ ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿದೆ. ಈ ವೇಳೆ ಟ್ಯಾಂಕ್ ಬಳಿ ಕೆಲಸ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.ಇನ್ನು ಉಳಿದ ಮೂವರು ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿದ್ದು, ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಇಂದು ಮೈಸೂರಲ್ಲಿ ಘೋರ ದುರಂತ ಸಂಭವಿಸಿದ್ದು, ಕಾಮಗಾರಿ ವೇಳೆ ಕಾಲೇಜು ಕಟ್ಟಡ ಕುಸಿದಿದೆ. ಈ ವೇಳೆ ಅವಶೇಷಗಳ ಕಟ್ಟಡದ ಅವಶೇಷಗಳ ಅಡಿ ಓರ್ವ ಕಾರ್ಮಿಕ ಸಿಲುಕಿದ್ದಾನೆ ಎಂದು ಹೇಳಲಾಗುತ್ತಿದೆ. ಹೌದು ಕಾಲೇಜು ಕಟ್ಟಡ ಕಾಮಗಾರಿಯ ವೇಳೆ ಕಿಟಕಿ ತೆಗೆಯುವಾಗ ಕಾಲೇಜು ಕಟ್ಟಡ ಕುಸಿದಿದೆ. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ. ಕಟ್ಟಡದ ಅವಶೇಷಗಳ ಅಡಿ ಸದ್ದಾಂ (32) ಎನ್ನುವ ಕಾರ್ಮಿಕ ಸಿಲುಕಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಯಿಸಿ, ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ ಪೊಲೀಸರು ಕೂಡ ಘಟನೆ ಸ್ಥಳಕ್ಕೆ ದೌಡಯಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಕಾವೇರಿ ನೀರಿನ ದರ ಹೆಚ್ಚಳ ಕುರಿತು ಇಂದು ಬಿಬಿಎಂಪಿ ಹಾಗು BWSSB ಅಧಿಕಾರಿಗಳ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಭೆ ನಡೆಸಿದರು ಸಭೆಯಲ್ಲಿ ಕಾವೇರಿ ನೀರಿನ ದರ ಏರಿಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಈ ವಿಚಾರವಾಗಿ BWSSB ಅಧ್ಯಕ್ಷ ರಾಮ್ ಪ್ರಸಾತ್ ಅವರು ಇಡೀ ದೇಶದಲ್ಲಿ ಬೆಂಗಳೂರಲ್ಲೇ ನೀರಿನ ದರ ಕಡಿಮೆ ಇದೆ.ಜಲ ಮಂಡಳಿಗೆ ನಷ್ಟ ಆಗುತ್ತಿದೆ ಹಾಗಾಗಿ ದರ ಏರಿಕೆ ಅನಿವಾರ್ಯ ಎಂದು ತಿಳಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರಿನ ಅದರ ಹೆಚ್ಚಳ ಅನಿವಾರ್ಯ ಎಂದು ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವರಿಕೆ ಮಾಡಿದ್ದೇವೆ. ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸಭೆಯ ಬಳಿಕ BWSSB ಚೇರ್ಮನ್ ಡಾ.ರಾಮಪ್ರಸಾತ್ ಮನೋಹರ್ ಅವರು ಹೇಳಿಕೆ ನೀಡಿದರು. ಜಲ ಮಂಡಳಿಯಿಂದ 120 ಕೋಟಿ ರೂಪಾಯಿ ಆದಾಯ ಬರುತ್ತಿದೆ. ಆದರೆ 180 ರಿಂದ 210 ಕೋಟಿ ರೂಪಾಯಿ…

Read More

ಯಾದಗಿರಿ : ಇತ್ತೀಚಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಂದ ಎಷ್ಟೋ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆದರೆ ಯಾದಗಿರಿಯಲ್ಲಿ ಫೈನಾನ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೇ ಇದೀಗ ನೀಡು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ನಡೆದಿದೆ. ಹೌದು ಸುರಪುರದ ರಂಗಂಪೇಟ ಬಡಾವಣೆಯಲ್ಲಿ ಮಲ್ಲಿಕಾರ್ಜುನ (40) ಎಂಬ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಮಲ್ಲಿಕಾರ್ಜುನ ಮಹಾಲಕ್ಷ್ಮಿ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಫೈನಾನ್ಸಲ್ಲಿ ಪಿಗ್ಮಿ ಕಲೆಕ್ಟ್ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ 5 ಲಕ್ಷ ಹಣವನ್ನು ಫೈನಾನ್ಸ್ ಗೆ ಕಟ್ಟದೆ ಸ್ವಂತಕ್ಕೆ ಬಳಸಿದ ಆರೋಪ ಕೇಳಿ ಬಂದಿದೆ. ಹಾಗಾಗಿ ಹಣ ಕಟ್ಟುವಂತೆ ಮಹಾಲಕ್ಷ್ಮಿ ಫೈನಾನ್ಸ್ ಮಾಲೀಕರು ಒತ್ತಡ ಹೇರಿದ್ದಾರೆ.ಇದರಿಂದ ಮನನೊಂದ ಮಲ್ಲಿಕಾರ್ಜುನ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾಸನ : ರಸ್ತೆ ಬದಿಯಲ್ಲಿ ಟೈಯರ್ ಪಂಚಾಯತ್ ಆಗಿ ನಿಂತಿದ್ದ ಲಾರಿಗೆ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ಹಾಸನ ತಾಲೂಕಿನ ಶಾಂತಿ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹಾಸನದ ಸೆಂಟ್ರಲ್ ಕಾಮರ್ಸ್ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ, ದಾಸನಪುರ ಗ್ರಾಮ ನಿವಾಸಿ ರೇವಂತ್(18) ಎಂದು ತಿಳಿದುಬಂದಿದೆ. ಹಾಸನ ತಾಲೂಕಿನ, ಶಾಂತಿಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಲಾರಿಯೊಂದು ಟೈರ್ ಪಂಕ್ಚರ್ ಆಗಿ ರಸ್ತೆಯಲ್ಲೇ ನಿಂತಿತ್ತು. ಇದೇ ಸಂದರ್ಭದಲ್ಲಿ ರಸ್ತೆಯಲ್ಲಿ ಬೈಕ್ ನಲ್ಲಿ ವೇಗವಾಗಿ ಬಂದ ರೇವಂತ್ ಕತ್ತಲೆಯಲ್ಲಿ ಲಾರಿಯನ್ನು ಗಮನಿಸಿದೆ ಬೈಕ್ ನಿಯಂತ್ರಣ ಕಳೆದುಕೊಂಡು ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದಾನೆ ಕೂಡಲೇ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಶಾಂತಿಗ್ರಾಮ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು.

Read More

ದಾವಣಗೆರೆ : ಕಿಡಿಗೇಡಿಗಳ ಕೃತ್ಯಕ್ಕೆ ಇದೀಗ 2200 ಅಡಕೆ ಗಿಡಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ತಾಲೂಕಿನ ತಮಿಳೇನಹಳ್ಳಿ ಕಿಡಿಗೇಡಿಗಳು ಈ ಒಂದು ಕೃತ್ಯ ಎಸಗಿದ್ದಾರೆ. ಹೌದು ದಾವಣಗೆರೆ ಜಿಲ್ಲೆಯ ತಮಲೇನಹಳ್ಳಿ ಈ ಒಂದು ಘಟನೆ ನಡೆದಿದೆ. ರೈತ ಈರಪ್ಪ ಅವರ ಮೂರು ಎಕರೆ ಅಡಕೆ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಎರಡು ವರ್ಷಗಳಿಂದ 6 ಲಕ್ಷ ಖರ್ಚು ಮಾಡಿ ಅಡಿಕೆ ಬೆಳೆ ಬೆಳೆದಿದ್ದರು. ನೆನ್ನೆ ತೋಟದಲ್ಲಿ ಕಳೆ ತೆಗೆದು ಈರಪ್ಪ ದಂಪತಿ ಮನೆಗೆ ತೆರಳಿದ್ದರು. ಈ ವೇಳೆ ಕಿಡಿಗೇಡಿಗಳು ಒಣ ಬೆಳೆಗಳಿಗೆ ಬೆಂಕಿ ಹಚ್ಚಿದ್ದು, ಇಡಿ ತೋಟಕ್ಕೆ ಬೆಂಕಿ ಆವರಿಸಿದೆ. ಕಿಡಿಗೇಡಿಗಳ ಕೃತಕ್ಕೆ 2200 ಅಡಿಕೆ ಮರಗಳು ಸುಟ್ಟು ಭಸ್ಮವಾಗಿವೆ. ಕಿಡಿಗೇಡಿಗಳ ಕೃತ್ಯಕ್ಕೆ ಇದೀಗ ರೈತ ಈರಪ್ಪ ಕಂಗಾಲಾಗಿದ್ದಾರೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಯಾರು ಈ ಕೃತ್ಯ ಎಸಗಿದ್ದು, ಎನ್ನುವುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More