Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ರಾಜ್ಯದಲ್ಲಿನ ಆಸ್ತಿ ದಸ್ತಾವೇಜು ನೋಂದಣಿ ಪ್ರಕ್ರಿಯೆ ಹಾಗೂ ಇಸಿ/ಸಿಸಿ ಸೇವೆ ನೀಡುವ ಕಾವೇರಿ 2.0 ತಂತ್ರಾಂಶದಲ್ಲಿನ ಸರ್ವರ್ ಸಮಸ್ಯೆಯಿಂದಾಗಿ ಏಳನೇ ಸಾರ್ವಜನಿಕರು ಪರದಾಡುವಂತಾಗಿದೆ.ಕಳೆದ ಒಂದು ವಾರದಿಂದ ಇದ್ದ ಸರ್ವರ್ ಸಮಸ್ಯೆ ಬುಧವಾರವೂ ಮುಂದುವರೆದಿದ್ದು, ಬೆಳಗ್ಗೆಯೂ ಕಾವೇರಿ 2.0 ತಂತ್ರಾಂಶದ ನಾಗರಿಕರ ಲಾಗಿನ್ ತೆರೆದುಕೊಳ್ಳಲಿಲ್ಲ. ಉಪ ನೋಂದಣಾಧಿಕಾರಿಗಳ ಲಾಗಿನ್ ತೆರೆದು ಕೊಂಡಿದ್ದರೂ ತಾಂತ್ರಿಕ ಸಮಸ್ಯೆ ಮುಂದು ವರೆದಿದ್ದರಿಂದಗೊಂದಲಗಳಿಗೆ ಇನ್ನೂ ಮುಕ್ತಿ ಸಿಕ್ಕಿಲ್ಲ ಎಂದು ತಿಳಿದುಬಂದಿದೆ. ಆದರೆ ಸಂಜೆ ವೇಳೆಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಸಮಸ್ಯೆಗೆ ತುತ್ತಾಗಿದ್ದ ಕಾವೇರಿ 2.0 ತಂತ್ರಾಂಶವನ್ನೀಗ ಪೂರ್ಣ ಪುನಃಸ್ಥಾಪಿಸಲಾಗಿದೆ ಎಂದಿದ್ದಾರೆ. ಕಳೆದ 1 ವಾರದಿಂದ DDoS ದಾಳಿಯಿಂದ ಸಮಸ್ಯೆಗೆ ತುತ್ತಾಗಿದ್ದ ಕಾವೇರಿ 2.0 ತಂತ್ರಾಂಶ ಈಗ ಸಂಪೂರ್ಣವಾಗಿ ಪುನಃಸ್ಥಾಪಿಸಲಾಗಿದೆ ಮತ್ತು ಈ ತಂತ್ರಾಂಶ ಇದೀಗ ಎಂದಿನಂತೆ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದೆ. ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಕಳೆದ ಕೆಲ ದಿನಗಳಿಂದ ಆಸ್ತಿ ನೋಂದಣಿ ಪ್ರಕ್ರಿಯೆ ಮತ್ತು EC/CC ಸೇವೆಗಳ ಮೇಲೆ ಪರಿಣಾಮ…

Read More

ಚಿಕ್ಕಮಗಳೂರು : ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಚಿಕ್ಕಮಂಗಳೂರು ಜಿಲ್ಲೆಯ 6 ಮೋಸ್ಟ ವಾಂಟೆಡ್ ನಕ್ಸಲರು ಶರಣಾಗತಿಯಾಗಿದ್ದರು ಬಳಿದ ಕೆಲವು ದಿನಗಳ ಹಿಂದೆ ನಕ್ಸಲ್ ರವೀಂದ್ರ ಕೂಡ ಚಿಕ್ಕಮಗಳೂರು ಜಿಲ್ಲಾಡಳಿತದ ಎದುರು ಶರಣಾಗತಿಯಾಗಿದ್ದ. ಇದರ ಬೆನ್ನಲ್ಲೇ ಕಾಡಿನಲ್ಲಿ 1 ನಾಡ ಬಂದೂಕು 10 ಕಾರ್ಟ್ರೇಜ್ ಗಳು ಪತ್ತೆಯಾಗಿರುವುದು ತಿಳಿದುಬಂದಿದೆ. ಹೌದು ಹುಲಗಾರುಬಯಲು ಅರಣ್ಯದಲ್ಲಿ ನಾಡ ಬಂದು ಪತ್ತೆಯಾಗಿದೆ. 1 ನಾಡ ಬಂದು 10 ಕಾಲಿ ಕಾಟ್ರೇಜ್ ಗಳು ಪತ್ತೆಯಾಗಿವೆ. ಚಿಕ್ಕಮಗಳೂರು ಜಿಲ್ಲೆಯ ಶ್ರೀಗೀರಿ ತಾಲೂಕಿನ ಗ್ರಾಮದಲ್ಲಿ ಪತ್ತೆಯಾಗಿವೆ. ಕಳೆದ ಶನಿವಾರ ನಕ್ಸಲ್ ರವೀಂದ್ರ ಶರಣಾಗತಿಯಾಗಿದ್ದ. ಶಸ್ತ್ರ ರೈತವಾಗಿ ನಕ್ಷಲ್ ರವೀಂದ್ರ ಶರಣಾಗತಿಯಾಗಿದ್ದ ಶರಣಾಗತಿಗೂ ಮೊದಲೇ ಕಾಡಿನಲ್ಲಿ ಬಂದು ಎಸೆದಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ ಒಂದು ಬಂದೂಕು ಹತ್ತು ಕಾಲಿ ಕಾದ್ರೇಜ್ ಗಳನ್ನು ಪೊಲೀಸರು ಸದ್ಯಕ್ಕೆ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Read More

ಕಲಬುರ್ಗಿ : ಕಳೆದ ಡಿಸೆಂಬರ್ 26 ರಂದು ಬೀದರ್ ನಲ್ಲಿ ರೈಲಿಗೆ ತಲೆ ಕೊಟ್ಟು ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣದ ಪ್ರಮುಖ ಆರೋಪಿ ಆಗಿರುವ ರಾಜು ಕಪನೂರ್ ನವರಿಗೆ ಕಲ್ಬುರ್ಗಿ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೌದು ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾದ ರಾಜು ಕಪನೂರ್ ಗೆ ತನ್ನ ಹುಟ್ಟು ಹಬ್ಬದ ದಿನದಂದೇ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಅರ್ಜಿದಾರರ ಹತ್ತಿರ ಶಸ್ತ್ರಾಸ್ತ್ರಗಳಿದ್ದಲ್ಲಿ ಕಲಬುರ್ಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಒಪ್ಪಿಸಬೇಕು. ಅವರು ಸಾಕ್ಷಿ ನಾಶಪಡಿಸಲು ಪ್ರಯತ್ನಿಸದೆ, ತನಿಖೆಗೆ ಸಹಕರಿಸಬೇಕು. ತನಿಖಾಧಿಕಾರಿಯು ಅವರಿಗೆ ನಿರ್ದಿಷ್ಟವಾಗಿ ಸಮನ್ಸ್ ನೀಡಿದಾಗ ತನಿಖಾ ಉದ್ದೇಶಕ್ಕಾಗಿ ಹೊರತುಪಡಿಸಿ ಯಾವುದೇ ಕಾರಣಕ್ಕೂ ಬೀದರ್ ಜಿಲ್ಲೆಗೆ ಪ್ರವೇಶ ಮಾಡಬಾರದು. ತನಿಖೆ ಪೂರ್ಣಗೊಂಡ ನಂತರ…

Read More

ಬೆಂಗಳೂರು : ಲೋಕಾಯುಕ್ತ ಕಚೇರಿ ಬಳಿ ಕೆಆರ್‌ಎಸ್ ಪಕ್ಷದಿಂದ ಪ್ರತಿಭಟನೆ ವಿಚಾರವಾಗಿ ಇದೀಗ ಪ್ರತಿಭಟನೆ ನಡೆಸಿದ್ದ 15 ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ಅನುಮತಿ ಪಡೆಯದೆ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ. ಪ್ರತಿಭಟನೆ ನಡೆಸಿದ 15 ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.ಲೋಕಾಯುಕ್ತರು ಆಸ್ತಿ ಘೋಷಿಸಬೇಕು ಎಂದು KRS ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

Read More

ಬೆಂಗಳೂರು : ರೂಪ ಮೌದ್ಗಿಲ್ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ 5ನೇ ACMM ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ಹಾಗಾಗಿ ಇಂದು ರೋಹಿಣಿ ಸಿಂಧೂರಿಗೆ ಕೋರ್ಟಿಗೆ ಹಾಜರಾಗಿದ್ದರು. ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರಾದ ವಿಜಯಕುಮಾರ್ ಜಾಟ್ಲ ಅವರು ಇಬ್ಬರು ಅಧಿಕಾರಿಗಳಿಗೆ ONE MINUTE APAOLOGY ಪುಸ್ತಕ ಓದುವಂತೆ ಜಡ್ಜ್ ಸಲಹೆ ನೀಡಿದರು. ಇಂದು ಬೆಂಗಳೂರಿನ 5ನೇ ACMM ಕೋರ್ಟ್ ನಲ್ಲಿ ಸಾಕ್ಷಿ ವಿಚಾರಣೆ ನಡೆಯಿತು. ರೋಹಿಣಿ ಸಿಂಧೂರಿ ಮತ್ತು ರೂಪಾ ಕೋರ್ಟಿಗೆ ಹಾಜರಾಗಿದ್ದಾರೆ. ರೂಪಾ ಪರ ವಕೀಲ ಪ್ರಸನ್ನ ಕುಮಾರ್ ಅವರಿಂದ ಪಾಟೀಸವಾಲು ಹಾಕಿದ್ದು, 45 ನಿಮಿಷಗಳ ಕಾಲ ರೋಹಿಣಿ ಸಿಂಧೂರಿ ಪಾಟೀಸವಾಲು ಹಾಕಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ನ್ಯಾಯಾಧೀಶರು ವಿಜಯಕುಮಾರ್ ಜಾಟ್ಲ ಸಲಹೆ ನೀಡಿದ್ದು. ಇಬ್ಬರು ಉತ್ತಮ ಹೆಸರು ಗಳಿಸಿದ ಹಿರಿಯ ಅಧಿಕಾರಿಗಳಾಗಿದ್ದೀರಿ. ನಿಮ್ಮ ಸಮಯ ಸಮಾಜಕ್ಕಾಗಿ ಮೀಸಲಿಡಬೇಕು. ಕೋರ್ಟ್ ಕಲಾಪದಲ್ಲಿ ಸಮಯ ವ್ಯರ್ಥ ಮಾಡುವ ಬದಲು ರಾಜಿ ಸಾಧ್ಯವೇ ಎನ್ನುವುದನ್ನು ಯೋಚಿಸಿ. ಒನ್…

Read More

ಶಿವಮೊಗ್ಗ : ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯ ಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮೆಸ್ಕಾಂ ಅಭಿಯಂತರರಿಗೆ ಸೂಚಿಸಿದರು.ಅವರು ಇಂದು ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾನು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸೊರಬ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿರಂತರ ವ್ಯತ್ಯಾಯವಾಗುತ್ತಿರುವ ಕಾರಣ ಕೃಷಿ ಚಟುವಟಿಕೆಗಳಿಗೆ ತೀವ್ರ ಅಡಚಣೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದರ ವ್ಯವಸ್ಥಿತ ನಿರ್ವಹಣೆಯ ಜವಾಬ್ದಾರಿ ಹೊತ್ತ ಅಧಿಕಾರಿಗಳು ವಿದ್ಯುತ್ ನ್ನು ಒದಗಿಸುವಂತೆ ಹಾಗೂ ಯಾವುದೇ ದೂರಗಳು ಬಾರದಂತೆ ನೋಡಿಕೊಳ್ಳಬೇಕು. ಮಾತ್ರವಲ್ಲ ಈ ಸಂಬಂಧ ಬರುವ ಸಾರ್ವಜನಿಕರ ಅಹವಾಲುಗಳಿಗೆ ಸಕಾಲಿಕವಾಗಿ ಸ್ಪಂದಿಸುವಂತೆ ಸೂಚಿಸಿದರು. ತಾಲೂಕಿನ ಆಯ್ದ ಭಾಗಗಳಲ್ಲಿ ಟ್ರಾನ್ಸ್ಫರ್ಮರ್ ಗಳು ಹಾಳಾಗಿದ್ದು ದುರಸ್ತಿ ಮಾಡುವ ಬಗ್ಗೆ ಹಾಗೂ ಅಗತ್ಯವಿರುವೆಡೆಗಳಲ್ಲಿ ಹೊಸ ಟ್ರಾನ್ಸ್ಫರ್ಮರ್…

Read More

ಹಾವೇರಿ : ಇಲ್ಲಿನ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಜ್ಯೋತಿ ಎಂಬಾಕೆ ಬಾಲಕನ ಗಾಯಕ್ಕೆ ಹೊಲಿಗೆ ಹಾಕೋ ಬದಲು ಫೆವಿಕ್ವಿಕ್ ಹಾಕಿ ಅಂಟಿಸಿ ಕಳುಹಿಸಿದ್ದ ಘಟನೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆಟವಾಡುವ ವೇಳೆ ಬಿದ್ದು ಗಾಯಗೊಂಡಿದ್ದ 7 ವರ್ಷದ ಬಾಲಕ ಗುರುಶಿಕನ್ ಅಣ್ಣಪ್ಪ ಹೊಸಮನಿಯನ್ನು ಈ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆತರಲಾಗಿತ್ತು. ಆದ್ರೆ ಈ ವೇಳೆ ವೈದ್ಯರಿಲ್ಲದ ಕಾರಣ ನರ್ಸ್ ಜ್ಯೋತಿ ಗಾಯಗೊಂಡಿದ್ದ ಜಾಗಕ್ಕೆ ಡ್ರೆಸ್ಸಿಂಗ್ ಮಾಡಿ, ಫೆವಿಕ್ವಿಕ್ ಹಚ್ಚಿ, ಅದರ ಮೇಲೆ ಬ್ಯಾಂಡೇಜ್ ಟೇಪ್ ಹಚ್ಚಿ ಕಳುಹಿಸಿದ್ದಳು.ಈ ಬಗ್ಗೆ ವ್ಯಾಪಕ ಟೀಕೆ ಮತ್ತು ಸಾರ್ವಜನಿಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಯಾಕೆ ಈ ರೀತಿ ಮಾಡಿದ್ದೀರಿ ಎಂದು ವ್ಯಕ್ತಿಯೊಬ್ಬರು ನರ್ಸ್ ಅನ್ನು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನರ್ಸ್ ದರ್ಪ ಮೆರೆದಿದ್ದು, ತಾನು ಮಾಡಿದ್ದೇ ಸರಿ ಎಂಬಂತೆ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾಳೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ, ನರ್ಸ್ ಜ್ಯೋತಿ ಅವರನ್ನು ಅಮಾನತು ಮಾಡಲಾಗಿದೆ. ಈ ಕುರಿತು…

Read More

ಬೆಂಗಳೂರು: ಇದೇ 11ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಶಿ ತರೂರ್, ಆನಂದ್ ಮಹೀಂದ್ರ, ಕಿರಣ್ ಮಜುಂದಾರ್ ಷಾ, ಪ್ರಶಾಂತ್ ಪ್ರಕಾಶ್, ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಪಪಾಂಡ್ರಿಯೂ, ವೋಲ್ವೊ ಸಮೂಹದ ಅಧ್ಯಕ್ಷ ಮಾರ್ಟಿನ್ ಲುಂಡ್ ಸ್ಟೆಡ್ ಸೇರಿದಂತೆ 75 ಸಾಧಕ ಉದ್ಯಮಿಗಳು ಮಾತನಾಡಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಬುಧವಾರ ತಿಳಿಸಿದ್ದಾರೆ. ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ಆದಿತ್ಯ ಬಿರ್ಲಾ ಗ್ರೂಪ್ ಅಧ್ಯಕ್ಷ ಕುಮಾರಮಂಗಲಂ‌ ಬಿರ್ಲಾ, ಜಿಂದಾಲ್ ಸ್ಟೀಲ್ ವರ್ಕ್ಸ್ ವ್ಯವಸ್ಥಾಪಕ‌ ನಿರ್ದೇಶಕ ಸಜ್ಜನ್ ಜಿಂದಾಲ್, ಆಯುಷ್ಮಾನ್ ಭಾರತ ಯೋಜನೆಯ ಮಾಜಿ‌ ಸಿಇಒ ಇಂದುಭೂಷಣ್, ಸಿನಿಮಾ ನಿರ್ಮಾಪಕಿ‌ ಕಿರಣ್ ರಾವ್, ಇಸ್ರೋ ಮಾಜಿ ಅಧ್ಯಕ್ಷ ಸೋಮನಾಥ್, ಏಕಸ್ ಸಿಇಒ ಅರವಿಂದ್ ಮೆಳ್ಳಿಗೇರಿ, ಅಮೆರಿಕದ ಇಂಧನ‌ ಇಲಾಖೆಯ ಸಿಐಒ ಆ್ಯನ್ ಡಂಕಿನ್, ಝೆರೋದಾ ಸಹ ಸಂಸ್ಥಾಪಕ ನಿಖಿಲ್ ಕಾಮತ್, ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ,…

Read More

ನವದೆಹಲಿ: ಇದೇ ತಿಂಗಳ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬುಧವಾರ ಖುದ್ದಾಗಿ ಆಹ್ವಾನಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಸಚಿವೆಯನ್ನು ಭೇಟಿಯಾದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಆಮಂತ್ರಣ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು, ಹೂಡಿಕೆದಾರರ ಸಮಾವೇಶದ ವೈಶಿಷ್ಟ್ಯಗಳನ್ನು ಮತ್ತು ರಾಜ್ಯ ಸರಕಾರದ ನೂತನ‌ ಕೈಗಾರಿಕಾ ನೀತಿ ಹಾಗೂ ಸ್ವಚ್ಛ ಇಂಧನ‌ ನೀತಿಯ ಬಗ್ಗೆ ನಿರ್ಮಲಾ ಅವರಿಗೆ ಮಾಹಿತಿ ನೀಡಿದರು. ಬಳಿಕ ಪಾಟೀಲ ಅವರು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಮತ್ತು ಎಐಸಿಸಿ ಕರ್ನಾಟಕ ಉಸ್ತುವಾರಿ, ಸಂಸದ ಕೆ ಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ, ಆಹ್ವಾನ ಪತ್ರಿಕೆ ನೀಡಿದರು.

Read More

ಬೆಂಗಳೂರು : ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಭಾರತದಲ್ಲಿಯೇ ಮೊದಲ ACT1 (ಬೋಗಿ ಕವರ್ಡ್ ಟಾಲರ್ ಹೈಟ್ ಆಟೋ-ಕಾರ್ ಕ್ಯಾರಿಯರ್) ರೇಕ್‌ ಇಂದು ಸಂಚರಿಸಿತು. ಈ ರೇಕ್ 264 ಎಸ್.ಯು.ವಿ. (ಸ್ಪೋರ್ಟ್ ಯುಟಿಲಿಟಿ ವೆಹಿಕಲ್) ಕಾರುಗಳನ್ನು ಹೊತ್ತು ಪೆನುಕೊಂಡದಿಂದ ಹರಿಯಾಣದ ಗುರ್ಗಾಂವ್ ಜಿಲ್ಲೆಯ ಫರ್ರುಖ್ ನಗರಕ್ಕೆ ಸಾಗಿತು. ಈ ಸರಕು ಸಾಗಣೆಯಿಂದ ರೈಲ್ವೆಗೆ ₹34 ಲಕ್ಷ ಆದಾಯ ಬಂದಿದೆ.ACT1 ರೇಕ್, 33 ವಿಶೇಷವಾಗಿ ವಿನ್ಯಾಸಗೊಳಿಸಿದ ವ್ಯಾಗನ್‌ಗಳನ್ನು ಒಳಗೊಂಡಿದ್ದು, 264 SUV ಕಾರುಗಳನ್ನು ಸಾಗಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಹೊಸ ವ್ಯವಸ್ಥೆ ಭಾರತದಾದ್ಯಂತ ದೊಡ್ಡ ವಾಹನಗಳ ಸಾಗಾಣಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದ್ದು, ಇದು ಸದ್ಯ ಬಳಕೆಯಲ್ಲಿರುವ BCACBM ರೇಕ್‌ ಗಳಿಗಿಂತ ಹೆಚ್ಚಿನ ಸಾಮರ್ಥ್ಯ ಹೊಂದಿದೆ. ACT1 ರೇಕ್‌ ವೈಶಿಷ್ಟ್ಯಪೂರ್ಣ ಡಬಲ್-ಡೆಕರ್ ವಿನ್ಯಾಸವನ್ನು ಹೊಂದಿದ್ದು SUVಗಳನ್ನು ಎರಡೂ ಡೆಕ್( ಮೇಲೆ ಮತ್ತು ಕೆಳಗೆ) ಗಳಲ್ಲಿ ಲೋಡ್ ಮಾಡಬಹುದಾಗಿದೆ. ಇದರಿಂದ ಒಟ್ಟಾರೆ ವಾಹನ ಸಾಗಣೆಯ ಸಾಮರ್ಥ್ಯ ವೃದ್ಧಿಯಾಗಲಿದ್ದು ಇದರಿಂದ ವಾಹನ ಸಾಗಣೆ ವೆಚ್ಚ ಇಳಿಕೆಯಾಗಲಿದೆ.ACT1 ರೇಕ್‌ನ…

Read More