Subscribe to Updates
Get the latest creative news from FooBar about art, design and business.
Author: kannadanewsnow05
ತೆಲಂಗಾಣ : ಇತ್ತೀಚಿಗೆ ಕೇರಳದಲ್ಲಿ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ 50 ವರ್ಷದ ವ್ಯಕ್ತಿ ಒಬ್ಬರಿಗೆ ಗಂಟಲಲ್ಲಿ ಇಡ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ವರದಿಯಾಗಿತ್ತು. ಇದೀಗ ದೋಸೆ ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿ ಒಬ್ಬರು ಸಾವನಪ್ಪಿರುವ ಘಟನೆ ತೆಲಂಗಾಣದ ನಾಗರ್ ಕರ್ನೂಲ್ ಜಿಲ್ಲೆಯ ಕಲ್ವಕುರ್ತಿಯಲ್ಲಿ ನಡೆದಿದೆ. ಹೌದು ತೆಲಂಗಾಣದಲ್ಲಿ ಈ ದುರಂತ ಸಂಭವಿಸಿದೆ. ವೆಂಕಟಯ್ಯ(43) ಮೃತ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಪಟ್ಟಣದ ಸುಭಾಷನಗರ ನಿವಾಸಿಯಾಗಿರುವ ಈತ ದೋಸೆ ಗಂಟಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ನಾಗರ್ ಕರ್ನೂಲ್ ಜಿಲ್ಲೆಯ ಕಲ್ವಕುರ್ತಿಯಲ್ಲಿ ಈ ಘಟನೆ ನಡೆದಿದೆ. ಕುಟುಂಬದವರು ಹೇಳುವ ಪ್ರಕಾರ,ವೆಂಕಟಯ್ಯ ಮದ್ಯ ಸೇವಿಸಿ ದೋಸೆ ತಿನ್ನುತ್ತಿದ್ದನು. ಈ ಅನುಕ್ರಮದಲ್ಲಿ, ದೋಸೆ ಗಂಟಲಿಗೆ ಸಿಲುಕಿಕೊಂಡು ಉಸಿರಾಡಲು ಸಾಧ್ಯವಾಗಲಿಲ್ಲ. ನೀರು ಕುಡಿಯುವಾಗ ಪಕ್ಕಕ್ಕೆ ಬಿದ್ದು ಪ್ರಜ್ಞಾಹೀನರಾದರು. ಕೂಡಲೇ ಆಸ್ಪತ್ರೆಗೆ ಸಾಗಿಸಿದಾಗ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಇತ್ತೀಚೆಗಷ್ಟೇ ಕೇರಳದಲ್ಲೂ ಇಂತಹದ್ದೇ ಘಟನೆ ಬೆಳಕಿಗೆ ಬಂದಿದೆ. ವಾಳಯಾರ್ ನಲ್ಲಿ ಇಡ್ಲಿ ತಿನ್ನುವ ಸ್ಪರ್ಧೆ ನಡೆದಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 50 ವರ್ಷದ…
ಚನ್ನಪಟ್ಟಣ : ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಬೃಹತ್ ರೋಡ್ ಶೋ ಮುಖಾಂತರ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಿಷ್ಠ 50 ಸಾವಿರ ಮತಗಳಿಂದ ಸಿಪಿ ಯೋಗೇಶ್ವರ್ ಗೆಲ್ಲಬೇಕು ಎಂದು ಯೋಗೆಶ್ವರ್ ಪರ ರೋಡ್ ಶೋ ನಲ್ಲಿ ಭಾಗವಹಿಸಿ ಮಾತನಾಡಿದರು. ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೀಶ್ವರ್ ಗೆಲ್ಲುವ ಮೂಲಕ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದು ಕರೆ ನೀಡಿದರು. ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ,…
ಬೆಂಗಳೂರು : ಚನ್ನಪಟ್ಟಣ ಕ್ಷೇತ್ರಕ್ಕೆ ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಅವರು ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಇಂದು ಬೃಹತ್ ಮೆರವಣಿಗೆ ಮೂಲಕ ಜನಪಟ್ಟಣ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.ಇತ್ತ ಎನ್ಡಿಎ ಮೈತ್ರಿ ಪಕ್ಷದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಗೆ ಚನ್ನಪಟ್ಟಣಕ್ಕೆ ಯಾವ ಅಭ್ಯರ್ಥಿ ನಿಲ್ಲಿಸಬೇಕೆಂಬ ಗೊಂದಲದಲ್ಲಿ ಇದ್ದಾರೆ. ಇದೀಗ ಸಾರಾ ಮಹೇಶ್ ಅವರು ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಸಾರಾ ಮಹೇಶ್ ಅವರು, HD ಕುಮಾರಸ್ವಾಮಿ ಕೇಂದ್ರದ ಜವಾಬ್ದಾರಿ ಹೊತ್ತಿರುವುದರಿಂದ ಪಕ್ಷದ ಸಂಘಟನೆ ಜವಾಬ್ದಾರಿ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ತೊಡಗಿಸಿಕೊಂಡಿದ್ದಾರೆ. ಆದರೆ ಪ್ರಾರಂಭದಿಂದಲೂ ನಾನು ಅಭ್ಯರ್ಥಿಯಲ್ಲ ನಾವು NDA ಅಭ್ಯರ್ಥಿ ಗೆಲ್ಲಿಸುವುದು ನಮ್ಮ ಗುರಿ ಎಂದು ಎಲ್ಲ ಸಭೆ ಸಮಾರಂಭಗಳಲ್ಲಿ ಕುಮಾರಸ್ವಾಮಿವೂ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈಗ ನಮ್ಮೆಲ್ಲರ ಪಕ್ಷದ ಇವತ್ತಿನ ಕಾರ್ಯಕರ್ತರ, ಮುಖಂಡರ, ಒತ್ತಾಯ ಇರುವಂತದ್ದು ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿರುವುದರಿಂದ ನಿಖಿಲ್ ಕುಮಾರಸ್ವಾಮಿಗೆ…
ಬಿಜೆಪಿಯವರ ‘ಭ್ರಷ್ಟಾಚಾರದ’ ಹಿಸ್ಟರಿ ತೆಗೆದ್ರೆ ಚುನಾವಣಾ ಪ್ರಚಾರಕ್ಕೂ ಅವರು ಬರೊಕ್ಕಾಗಲ್ಲ : ಡಿಸಿಎಂ ಡಿಕೆ ಶಿವಕುಮಾರ್
ರಾಮನಗರ : ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಇಂದು ಬೃಹತ್ ಮೆರವಣಿಗೆಯೊಂದಿಗೆ ಚನ್ನಪಟ್ಟಣ ತಾಲೂಕು ಕಚೇರಿಗೆ ನಾಮಪತ್ರ ಸಲ್ಲಿಸಲು ತೆರಳಿದ್ದಾ. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದು, ಬಿಜೆಪಿಯವರ ಭ್ರಷ್ಟಾಚಾರದ ಹಿಸ್ಟರಿ ತೆಗೆದರೆ ಅವರಿಗೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೂ ಬರಕ್ಕಾಗಲ್ಲ ಎಂದು ವಾಗ್ದಾಳಿ ನಡೆಸಿದರು. ಸಿ ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆಗೂ ಮುಂಚೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚನ್ನಪಟ್ಟಣದಲ್ಲಿ ಅಜೆಂಡಾ ಶುರು ಮಾಡಿದೆ ಬಿಜೆಪಿ ಮತ್ತು ಜೆಡಿಎಸ್ ನವರು. ಯೋಗೇಶ್ವರ್ ಅವರನ್ನು ನಾವು ಗೆದ್ದೇ ಗೆಲ್ಲಿಸುತ್ತೇವೆ. ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದರು ಎಂದು ಅವರು ತಿಳಿಸಿದರು. ಆದರೆ ಅವರನ್ನ MLC ಸ್ಥಾನಕ್ಕೆ ರಾಜೀನಾಮೆ ಕೊಡಕ್ಕೆ ಕಳಿಸಿದ್ದು ಯಾರು? ಈ ಬಗ್ಗೆ ತನಿಖೆ ಮಾಡಿ. ನಾನು ಅವರನ್ನು ಸಂಪರ್ಕಿಸಿ ಇಲ್ಲ ಅವರು ನಿನ್ನೆನೇ ನಮ್ಮ ಮನೆಗೆ ಬಂದು ಭೇಟಿಯಾಗಿ ಚರ್ಚೆ ಮಾಡಿದ್ದು. ಹಾಗಾಗಿ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದು ಯಾರು ಎಂದು ತನಿಖೆ ಮಾಡಿಸಿ ಎಂದು ಮಾಧ್ಯಮಗಳಿಗೆ…
ರಾಮನಗರ : ರಾತ್ರಿಯ ವೇಳೆ ಮಫ್ತಿಯಲ್ಲಿ ಇದ್ದಂತಹ ಪಿಎಸ್ಐ ಮೇಲೆ ಪಾನಮತ್ತರಾಗಿದ್ದ ಯುವಕರು ಬಿಯರ್ ಬಾಟಲ್ ನಿಂದ ಭುಜಕ್ಕೆ ಹೊಡೆದು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ರಾಮನಗರದ ರಾಯರದೊಡ್ಡಿಯಲ್ಲಿನ ಸುಪ್ರಿತ್ ವೈನ್ಸ್ ಬಳಿ ನಡೆದಿದೆ. ಹೌದು ನಿನ್ನೆ ರಾತ್ರಿ ಐಜೂರು ಪೊಲೀಸ್ ಠಾಣೆ ಪ್ರಭಾರ ಪಿಎಸ್ಐ ದುರುಗಪ್ಪ ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.ಈ ವೇಳೆ ರಾಯರದೊಡ್ಡಿ ನಿವಾಸಿ ಕಿರಣ್ ಕುಮಾರ್, ಪಾದರಹಳ್ಳಿ ವಾಸಿ ಶ್ರೀಕಾಂತ ಹಾಗೂ ಚೇತನ್ ಅಲಿಯಾಸ್ ಕುಂತಿ PSI ದುರುಗಪ್ಪ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇದೀಗ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣವೊಂದರ ಆರೋಪಿ ಮತ್ತು ಮಾಲು ಪತ್ತೆ ಮಾಡುವ ಸಲುವಾಗಿ ಮಫ್ತಿಯಲ್ಲಿ ಪಿಎಸ್ ಐ ದುರುಗುಪ್ಪರವರು ಪೇದೆಗಳಾದ ಚನ್ನಬಸಪ್ಪ ಮತ್ತು ಶಿವರಾಜ ಅವರೊಂದಿಗೆ ರಾಯರದೊಡ್ಡಿಗೆ ತೆರಳಿದ್ದಾರೆ.ದುರುಗುಪ್ಪ ಸುಪ್ರೀತಾ ವೈನ್ಸ್ ಮುಂಭಾಗ ಆರೋಪಿ ಮತ್ತು ಮಾಲಿನ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾಗ ಪಾನಮತ್ತರಾಗಿದ್ದ ಮೂವರು ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಪಿಎಸ್ಐ ದುರ್ಗಪ್ಪ ಅವರು ನಾನು ಪೊಲೀಸ್…
ದಕ್ಷಿಣಕನ್ನಡ : ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿಗೆ ತೀವ್ರ ಮುಖಭಂಗವಾಗಿದೆ. ಹೌದು ಇಂದು ಬೆಳಿಗ್ಗೆಯಿಂದ ಮತ ಎಣಿಕೆ ಪ್ರಾರಂಭವಾಗಿದ್ದು ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ವಿರುದ್ಧ ಕಿಶೋರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಂದಾಜು 3654 ಮತಗಳನ್ನು ಬಿಜೆಪಿಯ ಕಿಶೋರ್ ಕುಮಾರ್ ಪಡೆದಿದ್ದಾರೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಅಕ್ಟೊಬರ್ 21 ರಂದು ಈ ಒಂದು ಪರಿಷತ್ ಉಪ ಚುನಾವಣೆ ನಡೆದಿತ್ತು. ಕೋಟಾ ಶ್ರೀನಿವಾಸ್ ಪೂಜಾರಿ ರಾಜಿನಾಮೆಯಿಂದ ಒಂದು ಸ್ಥಾನ ತೆರವಾಗಿತ್ತು. ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಭರ್ಜರಿ ಜಯ ಸಿಕ್ಕಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು BMTC ಬಸ್ ಕಂಡಕ್ಟರ್ ಗೆ ಕಲ್ಲಿನಿಂದ ಹೊಡೆದು ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಒಂದು ಘಟನೆ ನಡೆದಿದೆ.ಕಳೆದ ಒಂದು ತಿಂಗಳಲ್ಲಿ ಬಿ ಎಂ ಟಿ ಸಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸುವ ಮೂಲಕ ಇದು 3ನೇ ಘಟನೆ ಯಾಗಿದೆ. ಹೌದು ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡಕ್ಟರ್ ಕೊಲೆಗೆ ಯತ್ನ ನಡೆದಿದ್ದು, ಪ್ರಯಾಣಿಕನೊಬ್ಬ ಕಂಡಕ್ಟರ್ ತಲೆಗೆ ಕಲ್ಲಿನಿಂದ ಹೊಡೆಡಿದ್ದಾನೆ.ಅಕ್ಟೋಬರ್ 18 ರಂದು ಟಿನ್ ಫ್ಯಾಕ್ಟರಿ ಬಳಿ ಈ ಒಂದು ಘಟನೆ ನಡೆದಿದೆ. ಕಂಡಕ್ಟರ್ ಹಾಗೂ ಪ್ರಯಾಣಿಕ ನಡುವೆ ಸಣ್ಣ ಗಲಾಟೆ ಆಗಿತ್ತು ಇದರಿಂದ ಕೋಪಗೊಂಡ ಪ್ರಯಾಣಿಕ ಕಲ್ಲಿನಿಂದ ಹೊಡೆದು ಕೊಲೆಗೆ ಎತ್ನಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಇದೀಗ ಕಲ್ಲಿನಿಂದ ಹೊಡೆಯುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಇದೀಗ ಸೆರೆಯಾಗಿದೆ.
ಹಾಸನ : ಹಾಸನದ ಹಾಸನಂಬ ದೇಗುಲದ ಗರ್ಭಗುಡಿ ಇದೀಗ ಓಪನ್ ಆಗಿದೆ. ಅರಸು ವಂಶಸ್ಥರು ಬಾಳೆ ಗಿಡ ಕಡಿದ ನಂತರ ದೇಗುಲದ ಪ್ರಧಾನ ಅರ್ಚಕರು ಹಾಸನಾಂಬ ದೇಗುಲದ ಬಾಗಿಲನ್ನು ತೆರೆದರು. ಇಂದಿನಿಂದ ನವೆಂಬರ್ 3ರವರೆಗೆ ಹಾಸನಾಂಬೆ ಜಾತ್ರೆ ನಡೆಯಲಿದೆ. ನಾಳೆಯಿಂದ ನವೆಂಬರ್ 2ರವರೆಗೆ ಹಾಸನಾಂಬೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ,ಸಚಿವ ಕೆ ಎನ್ ರಾಜಣ್ಣ, ಹಾಸನ ಸಂಸದ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್ ಜಿಲ್ಲಾಧಿಕಾರಿ ಹಾಗೂ ಎಸ್ ಪಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಓಪನ್ ಮಾಡಲಾಯಿತು. ವಿಶೇಷ ಹೂವಿನ ಅಲಂಕಾರದಿಂದ ದೇವಸ್ಥಾನ ಕಂಗೊಳಿಸುತ್ತಿದೆ.
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ರದ್ದು ಕೋರಿ ಇಡಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಹೈ ಕೋರ್ಟ್ ಮಾಜಿ ಸಚಿವ ಬಿ ನಾಗೇಂದ್ರ ಗೆ ನೋಟಿಸ್ ನೀಡಿದೆ. ಹೌದು ಮಾಜಿ ಸಚಿವ ಬಿ.ನಾಗೇಂದ್ರಗೆ ಹೈಕೋರ್ಟಿನಿಂದ ನೋಟಿಸ್ ಜಾರಿಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಿ ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನೀಡಿತ್ತು. ಈ ಒಂದು ಜಾಮೀನು ರದ್ದು ಕೋರಿ ಇಡಿ ಅಧಿಕಾರಿಗಳು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ.15 ರಂದು ವಿಚಾರಣೆ ನಿಗದಿಪಡಿಸಿ ವಿಚಾರಣೆ ಮುಂದೂಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಾಸಕ ಬಿ. ನಾಗೇಂದ್ರ ಪ್ರಮುಖ ಆರೋಪಿಯಾಗಿದ್ದಾರೆ. ಈ ಹಿಂದೆ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದ್ದು, ಜಾಮೀನು ರದ್ದು ಕೋರಿ ಇಡಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿತ್ತು.
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಆರೋಗ್ಯ ಯೋಜನೆಗೆ ಕ್ಷಣಗಣನೆ ಆರಂಭವಾಗಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆ ವಿಚಾರದಲ್ಲಿ ಒಂದು ದೂರದೃಷ್ಟಿಯ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದೀಗ ‘ಗೃಹ ಆರೋಗ್ಯ’ ಹೆಸರಲ್ಲಿ ಯೋಜನೆಯನ್ನ ಅನುಷ್ಠಾನಕ್ಕೆ ತರುತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಲಿದ್ದು, ಕೋಲಾರ ಜಿಲ್ಲೆಯಿಂದ ಯೋಜನೆ ಆರಂಭವಾಗಿ, ಜನವರಿ ತಿಂಗಳಿನಲ್ಲಿ ರಾಜ್ಯಾದ್ಯಂತ ಯೋಜನೆ ಜಾರಿಗೆ ಬರಲಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅಸಾಂಕ್ರಾಮಿ ರೋಗಗಳ ನಿಯಂತ್ರಣ ಹಾಗೂ ನಿರ್ವಹಣೆಯ ಮಹತ್ವಾಕಾಂಕ್ಷೆಯೊಂದಿಗೆ “ಗೃಹ ಆರೋಗ್ಯ” ಯೋಜನೆಗೆ ಇಂದು ಚಾಲನೆ ನೀಡುತ್ತಿದ್ದೇನೆ. ಈ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯಲಿವೆ ಅಸಾಂಕ್ರಾಮಿಕ ರೋಗಗಳನ್ನ…














