Author: kannadanewsnow05

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳಲ್ಲಿ ಹೊಸದಾಗಿ 5 ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಉದ್ದೇಶಿಸಿದೆ. ಹಾಗಾಗಿ ಕಾಲೇಜುಗಳನ್ನು ಆರಂಭ ಮಾಡಲು ಸಿದ್ಧತೆ ಮಾಡಿಕೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಹೌದು ಬಾಗಲಕೋಟೆ, ತುಮಕೂರು, ಕೋಲಾರ, ದಾವಣಗೆರೆ ಮತ್ತು ಬಿಜಾಪುರದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಉದ್ದೇಶಿಸಲಾಗಿದೆ.ಎಲ್ಲಾ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭ ಮಾಡಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವೈದ್ಯಕೀಯ ಇಲಾಖೆ ಮೂಲಗಳು ತಿಳಿಸಿವೆ. ವೈದ್ಯಕೀಯ ಕಾಲೇಜು ಪ್ರಾರಂಭ ಮಾಡಲು ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ ಸಂಬಂದಿಸಿದ ಜಿಲ್ಲೆಯಲ್ಲಿ ಸ್ಥಳ ಆಯ್ಕೆಯಿಂದ ಹಿಡಿದು ಅನೇಕ ಕೆಲಸಗಳನ್ನು ಮಾಡಿಕೊಳ್ಳುವಂತೆ ಮೌಖಿಕವಾಗಿ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿರುವ ಸದ್ಯ 22 ವೈದ್ಯ ಕಾಲೇಜುಗಳಿದ್ದು, ಕನಕಪುರ ಮತ್ತು ರಾಮನಗರ ವೈದ್ಯ ಕಾಲೇಜು ಈ ವರ್ಷ ಪ್ರಾರಂಭವಾಗುವ ನಿರೀಕ್ಷೆ ಇದೆ.

Read More

ಕೋಲಾರ : ದುಷ್ಕರ್ಮಿಗಳು ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಾಳ್ಯ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಹೌದು ಪಾಳ್ಯ ಗ್ರಾಮದಲ್ಲಿ ಕತ್ತು ಕೊಯ್ದು ಮಹಿಳೆಯ ಬರ್ಬರ ಕೊಲೆಯಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಾಳ್ಯ ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ.ಕತ್ತು ಕೊಯ್ದು ರೂಪ (38) ಎಂಬವರ ಬರ್ಬರ ಹತ್ಯೆ ನಡೆದಿದೆ. ಗ್ರಾಮದ ಹೊರವಲಯದಲ್ಲಿ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : 40,000 ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಹಾಯಕ ಡ್ರಗ್ಸ್ ಕಂಟ್ರೋಲರ್ ಅಧಿಕಾರಿ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯನ್ನು ಸಹಾಯಕ ಡ್ರಗ್ಸ್ ಕಂಟ್ರೋಲರ್ ಅಧಿಕಾರಿ ಅಜಯ್ ಡಿ.ಶಾ ಎಂದು ತಿಳಿದುಬಂದಿದೆ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಗಿ ಬಿದ್ದಿದ್ದಾರೆ. ಹೊಲ್ಸೇಲ್ ಮೆಡಿಕಲ್ ಶಾಪ್ ಲೈಸೆನ್ಸ್ ಗೆ ಸುಬ್ರಮಣ್ಯ ಎನ್ನುವವರು ಅರ್ಜಿ ಹಾಕಿದ್ದರು. ಮೆಡಿಕಲ್ ಶಾಪ್ ಗೆ ಲೈಸೆನ್ಸ್ ನೀಡಲು ಲಂಚಕ್ಕೆ ಅಜಯ್ ಡಿಮ್ಯಾಂಡ್ ಮಾಡಿದ್ದರು. ಸುಬ್ರಮಣ್ಯ ಬಳಿ 40,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಕಾರಿನಲ್ಲಿ ಲಂಚ ಸ್ವೀಕರಿಸುವಾಗ ಅಧಿಕಾರಿ ಅಜಯ್ ಲೋಕಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಅಧಿಕಾರಿ ಅಜಯ್ ರಾಜ್ ಡಿ.ಶಾನನ್ನು ಇದೀಗ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Read More

ಚಿಕ್ಕಬಳ್ಳಾಪುರ : ಕೋಲಾರ -ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ 9.86 ಕೋಟಿ ರೂಪಾಯಿ ಅವ್ಯವಹಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಕೋಲಾರ, ಕೆಜಿಎಫ್, ಚಿಂತಾಮಣಿ ತಾಲ್ಲೂಕು ಶಾಖೆಗಳ ವ್ಯವಸ್ಥಾಪಕರನ್ನು ಅಮಾನತು ಮಾಡಲಾಗಿದೆ. ಹೌದು ಕೋಲಾರ ಶಾಖೆಯಲ್ಲಿ 1.50 ಕೋಟಿ ರೂ., ಕೆಜಿಫ್ ನಲ್ಲಿ 4.17 ಕೋಟಿ ರೂ., ಚಿಂತಾಮಣಿ ಶಾಖೆಯಲ್ಲಿ 2.23 ಕೋಟಿ ರೂ. ಹಣ ದುರ್ಬಳಕೆಯಾಗಿದೆ. ಈ ಹಿನ್ನೆಲೆಯಲ್ಲಿ ವ್ಯವಸ್ಥಾಪಕರಾದ ಎಂ. ಅಮರೇಶ್, ಜಿ.ಎನ್. ಗಿರೀಶ್, ಜಿ. ನಾಗರಾಜ್ ಅವರ ವಿರುದ್ಧ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಅಕ್ರಮ ಕುರಿತಂತೆ ಮುನೀಶ್ ಎಂಬುವವರು ದೂರು ನೀಡಿದ್ದರು. ಹಾಗಾಗಿ ಬ್ಯಾಂಕಿನ ಆಂತರಿಕ ಪರೀಕ್ಷಣಾ ತಂಡ ತನಿಖೆ ಕೈಗೊಂಡಿತ್ತು. 2017 -18ನೇ ಸಾಲಿನಿಂದ 2020 -21ನೇ ಸಾಲಿನವರೆಗೆ ನಡೆದ ಅಕ್ರಮಗಳ ತನಿಖೆ ನಡೆಸಿದಾಗ ಈ ಅವ್ಯವಹಾರ ಬೆಳಕಿಗೆ ಬಂದಿದೆ. ಹಾಗಾಗಿ ಮೂವರು ವ್ಯವಸ್ಥಾಪಕರನ್ನು ಇದೀಗ ಸಸ್ಪೆಂಡ್ ಮಾಡಲಾಗಿದೆ.

Read More

ವಿಜಯಪುರ : ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಮೊದಲು ವಿಜಯಪುರ ಜಿಲ್ಲೆಯಲ್ಲಿ ಈ ಒಂದು ವಿವಾದ ಆರಂಭವಾಯಿತು. ಜಿಲ್ಲೆಯ ಅನೇಕ ರೈತರ ಜಮೀನು ವಕ್ಫ್ ಆಸ್ತಿಯೆಂದು ರೈತರ ಜಮೀನಿನ ಪಹಣಿಯಲ್ಲಿ ನಮೂದಾಗಿದ್ದು ಕಂಡು ರೈತರು ಆತಂಕಕ್ಕೆ ಒಳಗಾಗಿದ್ದರು.ಈ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಇದೀಗ ವಿಜಯಪುರ ಜಿಲ್ಲೆಯಲ್ಲಿ ವಕ್ಫ್‌ ಬೋರ್ಡ್‌ನಿಂದಾದ ಅವಾಂತರ ಕುರಿತು ಬಿಜೆಪಿಯ ಸತ್ಯಶೋಧನಾ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸೋಮವಾರ ವರದಿ ಸಲ್ಲಿಸಿದ್ದಾರೆ.ಜಿಲ್ಲೆಯಲ್ಲಿ 14,210 ಎಕರೆ ಜಮೀನು ವಕ್ಫ್‌ ಬೋರ್ಡ್ ಹೆಸರಿನಲ್ಲಿ ಕಬಳಿಕೆಯಾಗಿದೆ ಎಂದು ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ. ಸಿಂದಗಿಯಲ್ಲಿ 12ನೇ ಶತಮಾನದಲ್ಲಿ ಬಸವಾದಿ ಶರಣರ ಕಾಲದಲ್ಲಿ ನಿರ್ಮಿಸಲಾದ ಮಠದ ಆಸ್ತಿ, ದೇವರ ಹಿಪ್ಪರಗಿ ತಾಲೂಕಿನ ಪಡಗನೂರು ಗ್ರಾಮದಲ್ಲಿ ಸರ್ವೆ ಸಂಖ್ಯೆ 220ರಲ್ಲಿ 57 ಎಕರೆ ಜಮೀನು, ಪಡಗನೂರು ಗ್ರಾಮದಲ್ಲಿನ ಕಾಲದ ಚಾಲುಕ್ಯರ ದೇವಸ್ಥಾನ, ವಿಜಯಪುರ ನಗರದಲ್ಲಿನ ಲೋಕೋಪಯೋಗಿ ಇಲಾಖೆಗೆ ಸೇರಿದ ಸರ್ವೆ ಸಂಖ್ಯೆ 811ರ 77 ಎಕರೆ 10…

Read More

ಹಾಸನ : ಹಸೆಮಣೆ ಎರಬೇಕಿದ್ದ ಕೆ ಎಸ್ ಐ ಎಸ್ ಎಫ್ ಕಾನ್ಸ್ಟೇಬಲ್ ಒಬ್ಬರನ್ನು ಬರ್ಬರ ಹತ್ಯೆ ಮಾಡಲಾಗಿದೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ವಿ ಹರೀಶ್ (32) ಭೀಕರವಾಗಿ ಕೊಲೆಯಾಗಿದ್ದಾರೆ.ಮೃತ ಹರೀಶ್ ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಕೆ ಎಸ್ ಐ ಎಸ್ ಎಫ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. (KSISF) ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲೇ ಕಾರ್ಯ ನಿರ್ವಹಿಸುತ್ತಿದ್ದರು. ಇದೇ ನವೆಂಬರ್ 11ರಂದು ಹರೀಶ್ ಮದುವೆ ನಿಗದಿಯಾಗಿತ್ತು. ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ತೆರುಳುವಾಗ ಹರೀಶ್ ಅನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮಾರಕಾಷ್ಟಗಳಿಂದ ಹಲ್ಲೆ ನಡೆಸಿ ಹರೀಶ್ ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಘಟನಾ ಸ್ಥಳಕ್ಕೆ ಹಾಸನದ ಎಸ್ಪಿ ಮೊಹಮ್ಮದ್ ಸುಜಿತಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಾಸನ ತಾಲೂಕಿನ ದುದ್ದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಹಾವೇರಿ : ಇತ್ತೀಚಿಗೆ ಶಕ್ತಿ ಯೋಜನೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ ಹೇಳಿಕೆ ಭಾರಿ ಸಂಚಲನ ಸೃಷ್ಟಿಸಿತ್ತು. ಇದಕ್ಕೆ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಕೂಡ ಅಸಮಾಧಾನ ಹೊರ ಹಾಕಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ನಾನು ಅಧಿಕಾರದಲ್ಲಿ ಇರುವವರೆಗೂ ಯಾವುದೇ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಹಿಂದೂ ಮುಸ್ಲಿಮರನ್ನು ಎತ್ತಿ ಕಟ್ಟುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಾದ ಅಗತ್ಯವಿಲ್ಲ. ಬಿಜೆಪಿ ಜೆಡಿಎಸ್ ನಾಯಕರು ವಿಚಾರವಾಗಿ ವಿವಾದ ಮಾಡುತ್ತಿದ್ದಾರೆ.ಗ್ಯಾರಂಟಿ ಘೋಷಣೆ ಮಾಡಿದಾಗ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರೋಧಿಸಿದ್ದರು. ಈಗ ಶಕ್ತಿ ಯೋಜನೆ ದುರ್ಬಲ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ.ಆದರೆ ನಾನು ರಾಜ್ಯದ ಜನರಿಗೆ ಭರವಸೆ ನೀಡಲು ಬಯಸುತ್ತೇನೆ . ನಾವು ಅಧಿಕಾರದಲ್ಲಿ ಇರುವವರೆಗೂ ಎಲ್ಲಾ ಯೋಜನೆಗಳು ಮುಂದುವರೆಸುವೆ.ಯಾವುದೇ ಯೋಜನೆ ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಇನ್ನು ಮುಡಾ ಹಗರಣಕ್ಕೆ…

Read More

ಹಾವೇರಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 6ರಂದು ವಿಚಾರಣೆಗೆ ಹಾಜರಾಗಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ನಾನು ಯಾವತ್ತೂ ಕಳಂಕವಾಗಿ ಕೆಲಸ ಮಾಡಿಲ್ಲ ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ತಿಳಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಗಾಪುರದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಭಾಷಣದಲ್ಲಿ ತಿಳಿಸಿದ ಅವರು, ಬಡವರಿಗೆ ನಾನು ಮಾಡಿದ ಕೆಲಸ ಸಹಿಸಿಕೊಳ್ಳಲಾಗದೆ ನನ್ನ ವಿರುದ್ಧ ಇಂತಹ ಆರೋಪ ಮಾಡಿದ್ದಾರೆ. ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆರೋಪ ಮಾಡಿದರು. ನಾನು ಯಾವತ್ತೂ ಕಳಂಕವಾಗಿ ಕೆಲಸ ಮಾಡಿಲ್ಲ. ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ. ತಪ್ಪು ಮಾಡದಿದ್ದರೂ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಎಲ್ಲೆಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿಗಳು ಇದ್ದಾರೋ ಅಲ್ಲಿ ಸುಳ್ಳು ಕೇಸ್ ಗಳನ್ನು ಹಾಕಿಸಿ…

Read More

ಬೆಂಗಳೂರು : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ನಟ ಹಾಗೂ ರಾಜಕಾರಣಿ ಸಿ.ಪಿ. ಯೋಗೇಶ್ವರ್ ಅವರ ವಿರುದ್ಧ ಮಗಳು ನಿಶಾ ಯೋಗೇಶ್ವರ್ ಅವರು ಮಾತನಾಡದಂತೆ ತಾಯಿ ಪಿವಿ ಶೀಲಾ ಕೋರ್ಟ್‌ನಿಂದ ತಡೆಯಾಜ್ಞೆಯನ್ನು ತಂದಿದ್ದಾರೆ. ಹೌದು ಸಿಪಿ ಯೋಗೇಶ್ವರ್ ಪತ್ನಿ ಪಿವಿ ಶೀಲಾ ಅವರು ಈ ಕುರಿತಂತೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬಳಿಕ ಸಿಪಿವೈ ವಿರುದ್ಧ ಮಗಳು ನಿಶಾ ಅವಹೇಳನಕಾರಿ ಹೇಳಿಕೆ ಪ್ರಕಟಿಸಿದಂತೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶಿಸಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳಿಗೆ ಹೈಕೋರ್ಟ್ ಮಧ್ಯಂತರ ನಿರ್ಬಂಧ ವಿಧಿಸಿದೆ. ಪ್ರತಿವಾದಿ ನಿಶಾ ಯೋಗೇಶ್ವರ್ ಗೆ ಹೈಕೋರ್ಟ್ ಈ ಕುರಿತು ನೋಟಿಸ್ ನೀಡಿದೆ. ಯೋಗೇಶ್ವರ್ ಪತ್ನಿ ಪಿ.ವಿ.ಶೀಲಾ ನನ್ನ ಪತಿ ಸಿ.ಪಿ.ಯೋಗೇಶ್ವರ್ ವಿರುದ್ದ ಮಲಮಗಳು ನಿಶಾ ಯೋಗೇಶ್ವರ್‌ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಈ ಸಂಬಂಧ ಬೆಂಗಳೂರಿನ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದರು. ಈ…

Read More

ಬೀದರ್ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಜಾತ್ರೆಯಲ್ಲಿ ಭಾಗವಹಿಸಿದ್ದ ದಲಿತರ ಮೇಲೆ ಸವರ್ಣೀಯರು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಜಾತ್ರೆಗೆ ಬಂದಿದ್ದಕ್ಕೆ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ ನ.1ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ದಲಿತ ಸಮುದಾಯದ ಹಲವು ಯುವಕರಿಗೆ ಗಾಯಗಳಾಗಿವೆ. ನ.1ರಂದು ಹನುಮಾನ್ ದೇವರ ಜಾತ್ರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ದಲಿತರು ಮತ್ತು ಸವರ್ಣೀಯರ ನಡುವೆ ವಾಗ್ವಾದ ನಡೆದಿದೆ. ಸವರ್ಣೀಯ ಯುವಕರು ಮನೆಗೆ‌ ನುಗ್ಗಿ ಹಲ್ಲೆ ಮಾಡಿದ್ದಾರೆಂದು ದಲಿತ ಯುವಕರು ಗಂಭೀರ ಆರೋಪ ಮಾಡಿದ್ದಾರೆ.ಕಟಕ ಚಿಂಚೋಳಿ ಪೊಲೀಸ್ ಠಾಣೆಗೆ ಯುವಕರು ದೂರು ನೀಡಿದ್ದು, ಎಸ್​ಸಿ, ಎಸ್​​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಿಸುವಂತೆ ಮನವಿ ಮಾಡಲಾಗಿದೆ.

Read More