Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಉಡುಪಿ : ಇತ್ತೀಚಿಗೆ ಹೃದಯಾಘಾತ ಎನ್ನುವುದು ಸಹಜ ಕಾಯಿಲೆ ಎಂಬಂತಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಕೂಡ ಈ ಒಂದು ಹೃದಯಘಾತ ಕಾಯಿಲೆ ಸಾಮಾನ್ಯವಾಗಿದೆ. ದಿಗ ಉಡುಪಿ ಜಿಲ್ಲೆಯ ಪಡುಬಿದರೆಯಲ್ಲಿ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹಠಾತ್ ಹೃದಯಾಘಾತವಾಗಿದೆ. ತಕ್ಷಣ ಬಸ್ ಅನ್ನೋ ರಸ್ತೆ ಪಕ್ಕ ಇಳಿಜಾರಿಗೆ ಇಳಿಸಿ ಪ್ರಯಾಣಿಕರ ಪ್ರಾಣ ಚಾಲಕ ಕಾಪಾಡಿದ್ದಾನೆ. ತೆಂಕ ಎರ್ಮಾಳಿನ ಮಸೀದಿ ಬಳಿ ಉಡುಪಿಯತ್ತ ಹೋಗುತ್ತಿದ್ದ ತಡೆರಹಿತ ಬಸ್ ನ ಚಾಲ ಕ ಶಂಭು ಎಂಬವರಿಗೆ ಹಠಾತ್ ಎದೆನೋವು ಕಾಣಿಸಿಕೊಂಡು ಬಸ್ ಹೆದ್ದಾರಿ ಪಕ್ಕದ ಇಳಿಜಾರಿಗಿಳಿದು ನಿಂತ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಕೂಡಲೇ ಬಸ್ ಚಾಲಕ ಹಾಗೂ ಗಾಯಗೊಂಡಿದ್ದ ಕೆಲ ಪ್ರಯಾಣಿಕರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

Read More

ಬೆಂಗಳೂರು : ಶಿವಮೊಗ್ಗ ಜಲಿಯಲ್ಲಿ ನಿನ್ನೆ ಆ ಮರಳು ಮಾಫಿಯಾ ಘಟನಾ ಸ್ಥಳಕ್ಕೆ ತೆರಳಿದ ವೇಳೆ ಗಣಿ ಮತ್ತು ಮಗುವಿಜ್ಞಾನ ಇಲಾಖೆ ಮೇಳಾಧಿಕಾರಿಗೆ ಶಾಸಕ ಸಂಗಮೇಶ್ ಪುತ್ರ ಬಸವೇಶ್ ಬೆದರಿಕೆ ಹಾಗೂ ಅವಾಚೆ ಪದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನ ಸಚಿವ ಜಿ ಪರಮೇಶ್ವರ್ ಮಹಿಳಾಧಿಕಾರಿಗೆ ಸಂಗಮೇಶ್ ಪುತ್ರ ಬೆದರಿಕೆ ಹಾಕಿದ್ದು ನಿಜವಾದರೆ ಬಸವೇಶ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಈ ಪ್ರಕರಣ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳಾ ಅಧಿಕಾರಿಗೆ ಸಂಗಮೇಶ್ ಪುತ್ರನಿಂದ ನಿಂದನೆ ಆರೋಪದ ಕುರಿತಾಗಿ ಸಂಗಮೇಶ್ ಪುತ್ರ ಬೆದರಿಕೆ ಹಾಕಿರುವುದು ಗೊತ್ತಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆಗೆ ಆದೇಶ ಆಗಿದೆ ಎಂದರು. ಆದಷ್ಟು ಬೇಗ ಪ್ರಕರಣದ ತನಿಖೆಯ ವರದಿ ಬರಲಿದೆ ವರದಿಯ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ ಉದಯಗಿರಿ ಠಾಣೆ ಕೇಸ್ ವಿಚಾರವಾಗಿಯೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ನಮಗೆ ಸಿಕ್ಕಿರುವಂತಹ ವಿಡಿಯೋವನ್ನು ಆಧರಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಇನ್ನು…

Read More

ಮೈಸೂರು : ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವಿಚಾರದಿಂದ ಸಂಬಂಧಿಸಿದಂತೆ ಉದಯಗಿರಿ ಠಾಣೆ ಎದುರು ಸೋಮವಾರ ರಾತ್ರಿ ನಡೆದ ಪ್ರತಿಭಟನೆ ವೇಳೆ ಕಲ್ಲು ತೂರಾಟದಿಂದ ಉದ್ವಿಗ್ನಗೊಂಡಿತ್ತು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪೊಲೀಸರದ್ದು ಯಾವ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲ ಮಾಹಿತಿ ಪಡೆದಿದ್ದೇನೆ ಪೊಲೀಸರು ಅನಾಹುತ ತಪ್ಪಿಸಿದ್ದಾರೆ.ಯಾರು ಏನು ಹೇಳಿದರೂ ಎಂಬುವುದು ಮುಖ್ಯವಲ್ಲ. ನಾನು ಡಿಸಿಎಂ ಆಗಿ ಹೇಳುತ್ತಿದ್ದೇನೆ ಪೊಲೀಸರದ್ದು ಯಾವ ತಪ್ಪಿಲ್ಲ. ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಪೊಲೀಸರು ಗಾಯಗೊಂಡರು ಸಮಯ ಪ್ರಜ್ಞೆಯಿಂದ ಕೆಲಸ ಮಾಡಿದ್ದಾರೆ ನಾನು ನಮ್ಮ ಪೊಲೀಸರ ಪರವಾಗಿಯೇ ಇದ್ದೇನೆ ಎಂದರು. ಇನ್ನು ಸಚಿವ ಕೆ ಎನ್ ರಾಜಣ್ಣ ಹೇಳಿರುವ ಮಾತಿಗೆ ಸಿಎಂ ಸಿದ್ದರಾಮಯ್ಯ ಅವರು ಉತ್ತರಿಸುತ್ತಾರೆ. ಸಿಎಂಗೆ ಸದ್ಯಕ್ಕೆ ಮಾತನಾಡಲು ಆಗುತ್ತಿಲ್ಲ. 8 ರಿಂದ 10 ದಿನದಲ್ಲಿ ಮುಖ್ಯಮಂತ್ರಿಗಳೇ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ಕೊಡುತ್ತಾರೆ. ಮೈಸೂರಿನ…

Read More

ತುಮಕೂರು : ಕಳೆದ ಜನವರಿ 29 ರಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಪುಣ್ಯಸ್ನಾನ ಮಾಡುವ ವೇಳೆ ಭಾರಿ ಕಾಲ್ತುಳಿತದಿಂದ ಹಲವು ಜನರು ಸಾವನ್ನಪ್ಪಿದ್ದರು. ಅದರಲ್ಲಿ ಕರ್ನಾಟಕದ ಬೆಳಗಾವಿ ಮೂಲದ ನಾಲ್ವರು ಸಾವನಪ್ಪಿದ್ದರು. ಅಲ್ಲದೆ ಇತ್ತೀಚಿಗೆ ಕೆಲವರು ಹೃದಯಾಘಾತದಿಂದ ಕೂಡ ಸಾವನ್ನಪ್ಪಿದ್ದರು. ಇದೀಗ ಮತ್ತೊಂದು ಹಾರ್ಟ್ ಅಟ್ಯಾಕ್ ಪ್ರಕರಣ ವರದಿಯಾಗಿದ್ದು, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ವ್ಯಕ್ತಿ ಒಬ್ಬರು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡುವ ವೇಳೆ ಹೃದಯಾಘಾತವಾಗಿ ಸಾವನಪ್ಪಿದ್ದಾರೆ. ಹೌದು ಕುಂಭಮೇಳದಲ್ಲಿ ಹೃದಯಾಘಾತದಿಂದ ರಾಜ್ಯದ ಮತ್ತೊರ್ವ ವ್ಯಕ್ತಿ ಸಾವನಪ್ಪಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದು ಈ ಒಂದು ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾಗ ಹೃದಯಘಾತದಿಂದ ವ್ಯಕ್ತಿಯು ಒಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ವ್ಯಕ್ತಿಯು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬರಗೂರು ಗ್ರಾಮದ ನಾಗರಾಜು (57) ಎಂದು ತಿಳಿದು ಬಂದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬರಗೂರು ಗ್ರಾಮದ ನಿವಾಸಿ ಯಾಗಿದ್ದು,…

Read More

ವಿಜಯಪುರ : ಭೀಮಾತೀರ ಅಂದರೆ ಈಗಲೂ ಆ ಭಾಗದಲ್ಲಿ ಜನರು ಹೆದರುತ್ತಾರೆ. ಇದಕ್ಕೆ ಕಾರಣ ಅಂದಿನ ಕಾಲದ ಮೋಸ್ಟ್ ವಾಂಟೆಡ್ ರೌಡಿಶೀಟರ್ ಚಂದಪ್ಪ ಹರಿಜನ್. ಇದೀಗ ಈತನ ಖಾಸಾ ಶಿಷ್ಯ ಭಾಗಪ್ಪ ಹರಿಜನ್ ನ ಬರ್ಬರ ಕೊಲೆ ನಡೆದಿದ್ದು, ಭಾಗಪ್ಪನ ಗುಪ್ತಾಂಗವನ್ನೇ ಕಟ್ ಮಾಡಿ ದುಷ್ಕರ್ಮಿಗಳು ಕೊಡಲಿಯಿಂದ ಭೀಕರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಹೌದು ಮದೀನಾ ನಗರದಲ್ಲಿ ಬಾಗಪ್ಪ ಹರಿಜನ ಭೀಕರ ಹತ್ಯೆಯಾಗಿದೆ. ಕಳೆದ ರಾತ್ರಿ 9.25ರ ವೇಳೆಗೆ ಈ ಘಟನೆ ನಡೆದಿದ್ದು, ಕೊಡಲಿ ಸೇರಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈಯಲಾಗಿದೆ. ಬಾಡಿಗೆ ಮನೆ ಮಾಡಿ ನಗರದ ಹೊರ ವಲಯದ ರೇಡಿಯೋ ಕೇಂದ್ರದ ಬಳಿ ಬಾಗಪ್ಪ ವಾಸವಿದ್ದ. ಇನ್ನು ಫೆಬ್ರವರಿ 19 ರಂದು ವಿಜಯಪುರ ಕೋರ್ಟ್‌ಗೆ ಹಾಜರಾಗಿ, ಪ್ರಮುಖ ಸಾಕ್ಷಿ ಹೇಳುವವನಿದ್ದ ಆದ್ರೆ ಅಷ್ಟರಲ್ಲೇ ಇದೀಗ ಈ ಒಂದು ಕೊಲೆ ನಡೆದಿದೆ. ಇನ್ನು ರಾತ್ರಿ ಬಾಗಪ್ಪ ಊಟ ಮಾಡಿ ವಾಕಿಂಗ್‌ಗೆ ಹೊರಬಂದಿದ್ದ ವೇಳೆ ಕರೆಂಟ್ ಕಟ್ ಮಾಡಿ, ಟಂಟಂನಲ್ಲಿ ಬಂದು ಅಟ್ಯಾಕ್…

Read More

ಚಿಕ್ಕಮಂಗಳೂರು : ಜಾತ್ರೆಗೆ ಎಂದು ಬೈಕ್ ನಲ್ಲಿ ಹೊರಟಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಬಳಿ ಘಟನೆ ನಡೆದಿದೆ. ಮೃತರನ್ನು ಬಗ್ಗಬಳ್ಳಿಯ ಸಂಜು (26) ಹಾಗೂ ಪ್ರದೀಪ್ (30) ಎಂದು ತಿಳಿದುಬಂದಿದೆ. ಇಬ್ಬರು ಬೈಕ್ ಮೇಲೆ ಅಂತರಘಟ್ಟಮ್ಮ ಜಾತ್ರೆಗೆ ತರುತ್ತಿದ್ದರು. ಈ ವೇಳೆ ಈ ಒಂದು ದುರ್ಘಟನೆ ಸಂಭವಿಸಿದೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಗಿದೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಸ್ವಪಕ್ಷದ ನಾಯಕರ ವಿರುದ್ಧವೆ ಅಪಸ್ವರ ಎತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಇದೀಗ ಕೇಂದ್ರ ಬಿಜೆಪಿಯ ಶಿಸ್ತು ಸಮೀತಿ ಶೋಕಾಸ್ ನೋಟಿಸ್ ನೀಡಿದ್ದು, 72 ಗಂಟೆಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ.ಅಕಸ್ಮಾತ್ ಉತ್ತರಿಸದಿದ್ದರೆ ಪಕ್ಷದಿಂದ ಅಮಾನತು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆಯೂ ಯತ್ನಾಳ್ಗೆ ಶಿಸ್ತು ಸಮಿತಿ ನೋಟೀಸ್ ನೀಡಿತ್ತು. ಆಗ ಅವರು ನೀಡಿದ್ದ ಉತ್ತರ ತೃಪ್ತಿಕರವಾಗಿಲ್ಲ ಎಂದು ಸಮಿತಿ ಆಕ್ಷೇಪ ವ್ಯಕ್ತಪಡಿಸಿತ್ತು. ತಮ್ಮ ನಡವಳಿಕೆಯನ್ನು ತಿದ್ದುಕೊಳ್ಳುವುದಾಗಿ ಹೇಳಿದ್ದ ಯತ್ನಾಳ್, ಎಂದಿನಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ನಾಲಿಗೆ ಹರಿಬಿಟ್ಟಿದ್ದರು. ಇದೀಗ ಯತ್ನಾಳ್ ನೋಟೀಸ್ಗೆ ಯಾವ ಉತ್ತರ ನೀಡಲಿದ್ದಾರೆ ಎಂಬುದು ಕುತೂಹಲಕಾರಿಯಾಗಿದೆ. ಎಂದಿನಂತೆ ಅವರು ಅದೇ ವಿಜಯೇಂದ್ರ, ಯಡಿಯೂರಪ್ಪ, ಕುಟುಂಬ ರಾಜಕಾರಣ, ಹೊಂದಾಣಿಕೆ ಮತ್ತಿತರ ಕ್ಷಣಿಕ ಕಾರಣಗಳನ್ನು ನೀಡಿದರೆ, ಶಿಸ್ತು ಸಮಿತಿ ಸಹಿಸುವುದಿಲ್ಲ. ಬದಲಾಗಿ ಮುಲಾಜಿಲ್ಲದೆ, ಶಿಸ್ತುಕ್ರಮ ಕೈಗೊಳ್ಳಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಹಾಗಾಗಿ ಶೋಕಾಸ್ ನೋಟಿಸ್ ಗೆ ಮೂರು…

Read More

ಚಿತ್ರದುರ್ಗ : ನಿಧಿ ಪಡೆಯುವ ಆಸೆಯಿಂದಾಗಿ ಅಮಾಯಕ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ನಡೆದಿದೆ. ಈ ಒಂದು ಕೊಲೆಗೆ ಸಂಬಂಧಿಸಿದಂತೆ ಜ್ಯೋತಿಷಿ ಸೇರಿದಂತೆ ಇಬ್ಬರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಪ್ರಭಾಕರ್ (52) ಎಂದು ಗುರುತಿಸಲಾಗಿದೆ.ಪ್ರಭಾಕರ್ ಪರಶುರಾಂಪುರದ ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲೆಯುತ್ತಿದ್ದರು. ಕೊಲೆಗೈದ ಆರೋಪಿಯನ್ನು ಆನಂದ್ ರೆಡ್ಡಿ ಎಂದು ತಿಳಿದುಬಂದಿದೆ. ಈತ ಕುಂದುರ್ಪಿಯಲ್ಲಿ ಬಾರ್ ಸಪ್ಲೆಯರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಆನಂದ ರೆಡ್ಡಿಗೆ ಪಾವಗಡದ ಜ್ಯೋತಿಷಿ ರಾಮಕೃಷ್ಣ, ಪಶ್ಚಿಮ ದಿಕ್ಕಿನಲ್ಲಿ ನರಬಲಿ ಕೊಟ್ಟರೆ ಚಿನ್ನ ಸಿಗಲಿದೆ ಎಂದು ಹೇಳಿದ್ದ. ಹಾಗಾಗಿ ಅಮಾಯಕ ಪ್ರಭಾಕರ್‌ಗೆ ಲಿಫ್ಟ್ ಕೊಡುವ ನೆಪದಲ್ಲಿ ಕರೆದೊಯ್ದು ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಆರೋಪಿಯ ಬೈಕ್ ಡೀಟೈಲ್ ಪ್ರಕಾರ ಆತನನ್ನು ಪತ್ತೆ ಮಾಡಲಾಗಿದೆ. ಮಚ್ಚು ಹಾಗೂ ಬಟ್ಟೆಯನ್ನು ಪೊಲಿಸರು ಸೀಜ್ ಮಾಡಿದ್ದಾರೆ. ಸದ್ಯ ಇಬ್ಬರನ್ನು ಬಂಧಿಸಿರುವ ಪೊಲೀಸರು ಆರೋಪಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ.

Read More

ಹಾಸನ : ಹಾಸನದಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ. ನಡು ರಸ್ತೆಯಲ್ಲಿಯೇ ನರ್ಸಿಂಗ್ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಹಾಸನ ನಗರದ ಶಂಕರೀಪುರಂನಲ್ಲಿ ಈ ಒಂದು ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ. ಕೇರಳದ ಮೂಲದ ವಿದ್ಯಾರ್ಥಿಗಳು ಹಾಸನದಲ್ಲಿ ನರ್ಸಿಂಗ್ ಓದುತ್ತಿದ್ದಾರೆ. ಈ ವೇಳೆ ಬೆಲ್ಟ್, ಹೆಲ್ಮೆಟ್ ಹಿಡಿದು ವಿದ್ಯಾರ್ಥಿಗಳು ನಡು ರಸ್ತೆಯಲ್ಲಿ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಈ ಗಲಾಟೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.ಸ್ಥಳೀಯ ಪುಂಡರನ್ನು ಕರೆದುಕೊಂಡು ವಿದ್ಯಾರ್ಥಿಗಳು ಈ ಗಲಾಟೆ ಮಾಡಿದ್ದಾರೆ.

Read More

ಮೈಸೂರು : ಮೈಸೂರು ನಗರದಲ್ಲಿ ನಿನ್ನೆ ರಾತ್ರಿ ನಡೆದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟದ ಘಟನೆ ಡಿಜೆ ಹಳ್ಳಿ, ಕೇಜೆ ಹಳ್ಳಿ ಮಾದರಿಯಲ್ಲಿ ಪೊಲೀಸರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್.ಅಶೋಕ್ ಈ ಘಟನೆಯನ್ನು ಖಂಡಿಸಿದ್ದು, ನವೆಂಬರ್ ವರೆಗೆ ಮಾತ್ರ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಅಲ್ಲಿವರೆಗೂ ಆದರೂ ಒಳ್ಳೆಯ ಆಡಳಿತ ಕೊಡಿ ಎಂದು ಆರ್ ಅಶೋಕ ಸಿದ್ದರಾಮಯ್ಯ ಅವರ ಕಾಲು ಎಳೆದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನವೆಂಬರ್ ವರೆಗೆ ಮಾತ್ರ ಸಿಎಂ ಆಗಿರುತ್ತಾರೆ. ಅಲ್ಲಿವರೆಗೂ ಸಿಎಂ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಲಿ. ಒಳಿತು ಮಾಡು ಮನುಷ್ಯ ನೀ ಇರೋದು ಮೂರು ದಿವಸ ಎಂದು ಹಾಡಿನ ಮೂಲಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಅವರ ಕಾಲು ಎಳೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಆಗೋದು ಬಿಟ್ಟು ಆಡಳಿತದತ್ತ ಗಮನಹರಿಸಬೇಕು ಎಂದು ಇದೆ ವೇಳೆ ತಿಳಿಸಿದರು.

Read More