Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಪರಸ್ತ್ರೀಗಾಗಿ ಪತ್ನಿಯ ಕೊಲೆಗೆ ಯತ್ನಿಸಿದ ಬೆಂಗಳೂರಿನ ಡಿವೈಎಸ್ಪಿ ಗೋವರ್ಧನ್ ಹಾಗೂ ಅವರ ತಂದೆ ತಾಯಿಯ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ Dysp ಗೋವರ್ಧನ್ ಪತ್ನಿ ಅಮೃತ ದೂರು ನೀಡಿದ್ದಾರೆ. ಪ್ರೊಫೆಷನಲ್ ಡಿವೈಎಸ್ಪಿ ಗೋವರ್ಧನ್ ವಿರುದ್ಧ ಇದೀಗ ಪತ್ನಿ ಗಂಭೀರವಾದ ಆರೋಪ ಮಾಡಿದ್ದಾರೆ. ಪತಿಯ ಜೊತೆಗೆ ಸಂಪರ್ಕದಲ್ಲಿದ್ದ ಮಹಿಳಾ ಪ್ರೊಬೆಷನರಿ ಡಿವೈಎಸ್ಪಿ ವಿರುದ್ಧ ಕೂಡ ಅಮೃತ ದೂರು ನೀಡಿದ್ದಾರೆ. ಅಲ್ಲದೇ ಅತ್ತೆ ಸೀಮೆಎಣ್ಣೆ ಸುರಿದು ಕೊಲೆಗೆ ಯತ್ನಾಸಿದ್ದಾಳೆ ಎಂದು ಆರೋಪಿಸಿದ್ದಾರೆ. ಪರಸ್ತ್ರೀಗೆ ಮಕ್ಕಳಿದ್ದರೂ ತನ್ನ ಪತಿಯ ಜೊತೆಗೆ ಸಲುಗೆಯಿಂದ ಇದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಪತಿ ಎಲ್ಲೇ ಕೆಲಸಕ್ಕೆ ಸೇರಿದರು ಪತಿಯ ಗೆಳತಿ ಅಲ್ಲಿಗೆ ಬರುತ್ತಿದ್ದಳು. ಪರಸ್ತ್ರೀ ಸಂಪರ್ಕದಲ್ಲಿ ಇದ್ದಿದ್ದಕ್ಕೆ ಪತ್ನಿ ಅಮೃತ ವಿರೋಧಿಸಿದ್ದಳು ಇದರಿಂದ ಕೋಪಗೊಂಡು Dysp ಗೋವರ್ಧನ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹೊಟ್ಟೆಗೆ ಒಂದು ಡಿವೋರ್ಸ್ ಕೊಡೊದಾಗಿ ಪತಿಯಿಂದ ಬೆದರಿಕೆ ಆರೋಪ ಕೇಳಿ ಬಂದಿದೆ. ಪತಿ ಜೊತೆಗಿನ ಸಹವಾಸ ಬಿಡುವಂತೆ ಆತನ ಗೆಳತಿಗೂ…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮನೆಗೆ ಲಕ್ಷ್ಮಿ ದೇವಿ ಬರುತ್ತಾಳೆ ಎಂದರೆ ಈ ರೀತಿಯ 5 ಸೂಚನೆಗಳು ಗೋಚರ ಆಗುತ್ತದೆ.ಲಕ್ಷ್ಮಿ ಒಲಿದರೆ ಜೀವನದಲ್ಲಿ ಖುಷಿಯಾಗಿ ಸಂತೋಷವಾಗಿ ಇರಬಹುದು. ಪ್ರತಿಯೊಂದಕ್ಕೂ ಹಣಕಾಸು ತುಂಬಾನೇ ಮುಖ್ಯ ಆಗಿರುತ್ತದೆ.ಲಕ್ಷ್ಮಿ ದೇವರಿಗೆ ಪೂಜೆಯನ್ನು ಮಾಡಬೇಕು.ಲಕ್ಷ್ಮಿ ದೇವಿ ನಿಮ್ಮ ಮನೆಗೆ ಬಂದು ಸ್ಥಿರ ನಿವಾಸ ಆಗುತ್ತಳೆ ಎನ್ನುವುದಾದರೆ ಈ 5 ಸೂಚನೆಗಳು ಮುಂಚಿತವಾಗಿ ಗೊತ್ತಾಗುತ್ತದೆ. 1, ಸುಮಂಗಲಿಯರು ಪ್ರತಿನಿತ್ಯ ಅತ್ತೆ ಮಾವರ ಸೇವೆ ಮತ್ತು ಹಿರಿಯರ ಸೇವನೆ ಮಾಡುತ್ತಾರೆ. ಅಂತವರ ಮನೆಯಲ್ಲಿ ಲಕ್ಷ್ಮಿ ದೇವಿ ಬರುವುದಕ್ಕೆ ಇಷ್ಟ ಪಡುತ್ತಾಳೆ. 2, ಪ್ರತಿನಿತ್ಯ ಅಂಗಳವನ್ನು ಗುಡಿಸಿ ಮತ್ತು ರಂಗೋಲಿ ಹಾಕಿ ಪ್ರತಿನಿತ್ಯವೂ ಕೂಡ ಈ ರೀತಿ ಮಾಡಿದರೆ ಅಂತವರ ಮನೆಗೆ ಲಕ್ಷ್ಮಿ ದೇವಿ ಪ್ರವೇಶ ಮಾಡುವುದಕ್ಕೆ ಇಷ್ಟ ಪಡುತ್ತಾಳೆ. 3, ಸ್ವಚ್ಛತೆ ಇರುವ ಜಾಗಾದಲ್ಲಿ ಲಕ್ಷ್ಮಿ ದೇವತೆ ಇರುವುದಕ್ಕೆ ಇಷ್ಟ ಪಡುತ್ತಾಳೆ 4, ಮನೆಯಲ್ಲಿ ಇರುವ…
ಮೈಸೂರು : ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಾಡಾನೆ ದಾಳಿ ಪ್ರಕರಣಗಳು ಆಗಾಗ ನಡೆಯುತ್ತಿರುತ್ತವೆ ಕಾಡುಪ್ರಾಣಿ ಹಾಗೂ ಮಾನವ ಸಂಘರ್ಷದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಮೈಸೂರಲ್ಲಿ ಕಾಡಾನೆ ದಾಳಿಗೆ ಅವಿನಾಶ್ ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಗದೆಹಳ್ಳ ಗ್ರಾಮದಲ್ಲಿ ಆನೆ ದಾಳಿಗೆ ಅವಿನಾಶ್ ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ.ಅವಿನಾಶ್ ಎಂದಿನಂತೆ ಜಮೀನಿಗೆ ತೆರಳಿದ ವೇಳೆ ದಾಳಿ ಮಾಡಿದೆ.ಆನೆ ದಾಳಿಯಿಂದ ಅವಿನಾಶ್ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಡ್ಯ : ಮರಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬಸ್ ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕುಂದನಹಳ್ಳಿ ಗೇಟ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಈ ಒಂದು ಘಟನೆಯಲ್ಲಿ ಮಕ್ಕಳಿಗೆ ಕೈ, ಕಾಲು ಮುರಿತವಾಗಿದ್ದು, ಇನ್ನು 5 ಜನರ ಸ್ಥಿತಿ ಚಿಂತಾಜನಕವಾಗಿದೆ.ಅಲಹಳ್ಳಿ ಗ್ರಾಮದಿಂದ ಕೆ ಆರ್ ಪೇಟೆಗೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು. ಬಸ್ನಲ್ಲಿ ಸುಮಾರು 25ಕ್ಕೂ ಹೆಚ್ಚು ಜನ ಮತ್ತು ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ತಕ್ಷಣ ಕೆಆರ್ ಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಅಪಘಾತದ ಕುರಿತಂತೆ ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಬಳಿ ಇರುವ ತುಂಗಾ ನದಿ ತೀರದಲ್ಲಿ ಅಕ್ರಮ ಮರಳು ದಂಧೆಗೆ ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶೃಂಗೇರಿ ಪೊಲೀಸ್ ಠಾಣೆಯ ಪಿಎಸ್ಐ ಜಕ್ಕಣ್ಣನವರ್ ನನ್ನು ಅಮಾನತು ಮಾಡಲಾಗಿದೆ. ಹೌದು ತುಂಗಾನದಿ ತೀರದಲ್ಲಿ ಅಕ್ರಮ ಮರಳು ದಂಧೆಗೆ ಅವಕಾಶ ನೀಡಿದ ಆರೋಪದ ಹಿನ್ನೆಲೆ ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಪಿಎಸ್ಐ ಠಾಣೆ ಜಕ್ಕಣ್ಣನವರ್ ನನ್ನು ಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಮರಳು ದಂಧೆ, ಬಜರಂಗದಳ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ ಸೇರಿದಂತೆ ಒಟ್ಟು ನಾಲ್ಕು ಕಾರಣಗಳನ್ನು ನೀಡಿ ಪಿಎಸ್ಐ ಜಕ್ಕಣ್ಣನವರನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವ ಐಶ್ವರ್ಯ ಗೌಡ ಕೇಸ್ ಸಂಬಂಧಿಸಿದಂತೆ ಈಗ ಸ್ಫೋಟಕ ತಿರುವು ಸಿಕ್ಕಿದ್ದು ಪೊಲೀಸರೇ ಸಿಡಿಆರ್ ನೀಡಲು ಸಹಕರಿಸಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಈಗಾಗಲೇ ಎಸಿಪಿ ಚಂದನ್ ಕುಮಾರ್ ನೋಟಿಸ್ ನೀಡಿದ್ದು, ಆಕೆಯ ಕಾಲ್ ಡಿಟೇಲ್ ಆಧರಿಸಿ ಮತ್ತು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಿದ್ದಾರೆ. ಇಂದು ವಿಚಾರಣೆಗೆ ಐಶ್ವರ್ಯ ಗೌಡ ಹಾಜರಾಗುವ ಸಾಧ್ಯತೆ ಇದೆ. ಎಸಿಪಿ ಚಂದನ್ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಐಶ್ವರ್ಯಗೌಡ ಹಾಜರಾಗುವ ಸಾಧ್ಯತೆ ಇದೆ. ಅಕ್ರಮವಾಗಿ ಐಶ್ವರ್ಯ ಗೌಡ ಹಲವರ ಸಿಡಿಆರ್ ಪಡೆದಿದ್ದ ಆರೋಪ ಹಿನ್ನೆಲೆಯಲ್ಲಿ 2022 ಮಾರ್ಚ್ ನಿಂದ 2024ರ ನವೆಂಬರ್ ವರೆಗೆ ಐಶ್ವರ್ಯ ಗೌಡ ಹಲವರ ಸಿಡಿಆರ್ ಪಡೆದ ಆರೋಪ ಕೇಳಿ ಬಂದಿದೆ. ಈ ಕುರಿತು ಎಸಿಪಿ ಭರತ್ ರೆಡ್ಡಿ ಬ್ಯಾಟರಾಯನಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ನಡೆಸುತ್ತಿದ್ದಾರೆ ಐಶ್ವರ್ಯ ವಿಚಾರಣೆ ಬೆನ್ನಲ್ಲೇ ಸದ್ಯ ಕೆಲ…
ಮೈಸೂರು : ಮೈಸೂರಿನ ಉದಯಗಿರಿ ಪೋಲಿಸ್ ಠಾಣೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನೆ ನಡೆದ ಮೂರು ದಿನಗಳ ಬಳಿಕ ಇಂದು ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ಅವರು ಮೈಸೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದ ಮರುದಿನವೇ ಆರ್ ಅಶೋಕ್ ಸ್ಥಳಕ್ಕೆ ಭೇಟಿ ನೀಡಿದ್ದರು. ಇದೀಗ ಮೂರು ದಿನಗಳ ಬಳಿಕ ಗೃಹ ಸಚಿವ ಜಿ ಪರಮೇಶ್ವರ್ ರವರು ಮೈಸೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪೊಲೀಸ್ ಅಧಿಕಾರಿಗಳ ಜೊತೆಗೆ ಇಂದು ಡಾ.ಜಿ ಪರಮೇಶ್ವರ್ ಸಭೆ ನಡೆಸಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 15 ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಅದರಲ್ಲಿ ಓರ್ವ ಬಾಲಕ ಕೂಡ ಇದ್ದಾನೆ. ಈಗಾಗಲೇ ಎಲ್ಲಾ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದ್ದು, ಓರ್ವ ಬಾಲಾಪರಾಧಿಯನ್ನು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ.
ಬೆಂಗಳೂರು : ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಇದೀಗ ಮೆಟ್ರೋ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಡಿಸುತ್ತಿದ್ದು, ದರ ಏರಿಕೆ ಬೆನ್ನಲ್ಲೆ ಇದೀಗ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಮೆಟ್ರೋನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಶೇ. 35 ರಿಂದ 40 ರಷ್ಟು ಇಳಿಕೆಯಾಗಿದೆ ಎಂದು ತಿಳಿದು ಬಂದಿದೆ. ಎಂದು ತಿಳಿದುಬಂದಿದೆ. ಹೌದು 2017ರ ಜೂನ್ ಬಳಿಕ ಇದೇ ಮೊದಲ ಸಲ ಪ್ರಯಾಣ ದರ ಏರಿಸಿರುವ ಬೆಂಗಳೂರು ಮೆಟ್ರೊ ರೈಲು ನಿಗಮವು ರಿಯಾಯಿತಿ ರಹಿತ ದರದಲ್ಲಿ ಸರಾಸರಿ ಶೇ 51.55ರಷ್ಟು ಹಾಗೂ ರಿಯಾಯಿತಿ ಸಹಿತ ದರದಲ್ಲಿ ಶೇ 45-46 ರಷ್ಟು ಏರಿಕೆ ಮಾಡಿರುವುದಾಗಿ ತಿಳಿಸಿದೆ. ಒಂದು ಬಾರಿಯ ಪ್ರಯಾಣಕ್ಕೆ ಬೇಕಾಗುವ ಗರಿಷ್ಠ ದರದಷ್ಟು ಮೊತ್ತ ಕಾರ್ಡ್ನಲ್ಲಿ ಇರಬೇಕು ಎಂದು ನಿಗಮದ ಅಧಕಾರಿಗಳು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಯಾಣಿಕರೊಬ್ಬರು, ಈ ಹಿಂದೆ ಗರಿಷ್ಠ ಮೊತ್ತ 60 ಇದ್ದಾಗ ಕಾರ್ಡ್ನ ಉಳಿತಾಯ ಮಿತಿ 50 ಇದ್ದದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.…
ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಿಡಿಗೇಡಿಗಳಿಂದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ FIR ದಾಖಲಾಗಿದ್ದು ಈಗಾಗಲೇ ಪೊಲೀಸರು 12 ಜನ ಆರೋಪಿ ಹಾಗೂ ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಇದೀಗ ಮತ್ತೆ ಇಬ್ಬರನ್ನು ಅರೆಸ್ಟ್ ಮಾಡಿದ್ದು, ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಹೌದು, ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದ ಕಿಡಿಗೇಡಿಗಳನ್ನು ಬಂಧಿಸಿದ್ದ ಪೊಲೀಸರು ನಿನ್ನೆ ಮೈಸೂರಿನ ಕೆಆರ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಜಡ್ಜ್ ಮುಂದೆ ಹಾಜರುಪಡಿಸಿದ್ದರು. ಈ ವೇಳೆ 14 ದಿನಗಳ ಕಾಲ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಜಡ್ಜ್ ಆದೇಶ ನೀಡಿದ್ದಾರೆ. ಏನಿದು ಘಟನೆ? ಮುಸ್ಲಿಂ ಸಮುದಾಯದ ಬಗ್ಗೆ ವ್ಯಕ್ತಿವೋರ್ವ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾನೆ ಎಂಬ ಕಾರಣಕ್ಕಾಗಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ರಾಹುಲ್ ಗಾಂಧಿ,…
ವಿಜಯನಗರ : ಪಟ್ಟಣದ ಹೊರವಲಯದಲ್ಲಿ ಭರತ ಹುಣ್ಣಿಮೆ ದಿನ ನಡೆದ ದೊಡ್ಡಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಕೋಟೆಪ್ಪ ‘ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್’ಎಂದು ದೈವವಾಣಿ ನುಡಿದರು. 9 ದಿನ ಉಪವಾಸ ವ್ರತ ಆಚರಿಸಿದ್ದ ಗೊರವಯ್ಯ ಕೋಟೆಪ್ಪ ಅವರನ್ನು ಪಾದಗಟ್ಟೆಯ ಮರಡಿಯಿಂದ ಮೆರವಣಿಗೆ ಮೂಲಕ ಕರೆತರಲಾಯಿತು. ಗೊರವಪ್ಪ ಸಂಜೆ 5.46ಕ್ಕೆ ಬಿಲ್ಲನ್ನೇರಿ ಸದ್ದಲೇ ಎನ್ನುತ್ತಿದ್ದಂತೆ ನೆರೆದವರೆಲ್ಲ ನಿಶ್ಯಬ್ದವಾದರು. ಕೆಲವೇ ಕ್ಷಣಗಳಲ್ಲಿ ಮೇಲಿನಂತೆ ಕಾರಣಿಕ ನುಡಿದು ಬೀಳುತ್ತಿದ್ದ ಕೋಟೆಪ್ಪನನ್ನು ಗೊರವ ಸಮೂಹ ಎತ್ತಿ ಹಿಡಿದರು. ಪ್ರಸಕ್ತ ವರ್ಷದ ಮಳೆಗೆ ಸಮೃದ್ಧವಾಗಿ ಉತ್ತಮ ಫಸಲು ಬರುತ್ತದೆ. ಆದರೆ, ಇಳುವರಿ ಕುಂಠಿತ ಎಂಬ ಸಂದೇಶ ನೀಡಿದ್ದಾರೆ ಎಂದು ಭಕ್ತರು ತಿಳಿಸಿದರು. ಇನ್ನು ಅದೇ ರೀತಿಯಾಗಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಕಾರ್ಣಿಕ ನುಡಿದಿದ್ದು, ನೀರಿನ ಕೊಡ ಉರಡತಲೆ ತುಪ್ಪದ ಕೊಡ ಉಕ್ಕತಲೆ ಪರಾಕ್ ಎಂದು 12 ಅಡಿ ಎತ್ತರದ ಬಿಲ್ಲೆರಿ ಗೊರವಯ್ಯ ಹನುಮಗೌಡ ಗುರೇಗೌಡರ ದೈವವಾಣಿ ನುಡಿದಿದ್ದಾರೆ.













