Author: kannadanewsnow05

ಪಂಜಾಬ್ : ಹೆಂಡತಿ ತನ್ನ ಗಂಡನನ್ನು ನಪುಂಸಕ ಎಂದು ಕರೆದರೆ ಅದು ಮಾನಸಿಕ ಕ್ರೌರ್ಯಕ್ಕೆ ಸಮನಾಗುತ್ತದೆ. ಅಥವಾ ಅವಳು ನಪುಂಸಕನಿಗೆ ಜನ್ಮ ನೀಡಿದ್ದಾಳೆಂದು ಆತನ ತಾಯಿಗೆ ಹೇಳುವುದು ಕ್ರೂರವಾದದ್ದು ಎಂದು ಪಂಜಾಬ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣ ಏನು? ಮಹಿಳೆಯೊಬ್ಬಳು ಮೊಬೈಲ್ ನಲ್ಲಿ ಗಂಟೆಗಟ್ಟಲೆ ಅಶ್ಲೀಲ ವಿಡಿಯೋ ನೋಡಿ, ಪತಿಯ ಬಳಿ ಪ್ರತಿ ರಾತ್ರಿ ತನ್ನೊಂದಿಗೆ ಮೂರು ಬಾರಿ 10-15 ನಿಮಿಷಗಳ ಕಾಲ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದಳಂತೆ.ಇದಕ್ಕೆ ಒಪ್ಪದ ಪತಿಯನ್ನು ನಪುಂಸಕ ಅಂತಾ ಹೀಯಾಳಿಸುತ್ತಾಳಂತೆ. ಇದರಿಂದ ಬೇಸತ್ತ ಪತಿ ಪಂಜಾಬ್ ಹರಿಯಾಣ ಹೈಕೋರ್ಟ್‍ಗೆ ವಿಚ್ಛೇದನದ ಅರ್ಜಿ ಸಲ್ಲಿಸಿದ್ದಾನೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಸುಧೀರ್ ಸಿಂಗ್ ಮತ್ತು ನ್ಯಾಯಮೂರ್ತಿ ಜಸ್ಜಿತ್ ಸಿಂಗ್ ಬೇಡಿ ಅವರಿದ್ದ ನ್ಯಾಯಪೀಠವು ಈ ವಿಚ್ಛೇದನ ಪ್ರಕರಣದ ವಿಚಾರಣೆ ನಡೆಸಿ, ಹೆಂಡತಿ ತನ್ನ ಗಂಡನನ್ನು ನಪುಂಸಕ ಎಂದು ಕರೆದರೆ ಅದು ಮಾನಸಿಕ ಕ್ರೌರ್ಯಕ್ಕೆ ಸಮನಾಗುತ್ತದೆ. ಪತಿಯನ್ನು ನಪುಂಸಕ ಅಂತಾ ಕರೆಯುವುದು ಅಥವಾ ಅವಳು ನಪುಂಸಕನಿಗೆ…

Read More

ಬೆಂಗಳೂರು : ಮುಂದಿನ ಮೂರು ಗಂಟೆಗಳ ಅವಧಿಯಲ್ಲಿ ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಹಾಗಾಗಿ ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಮುಂದಿನ ಮೂರು ಗಂಟೆ ಮಳೆ ಆಗುವ ಬಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ದಕ್ಷಿಣ ಕನ್ನಡ, ವಿಜಯಪುರ,ಬಳ್ಳಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ,ಚಿಕ್ಕಮಗಳೂರು, ಕೋಲಾರ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದ ಆನೇಕಲ್ ನಲ್ಲಿ ಭಾರಿ ಮಳೆಯಾಗುತ್ತಿದೆ. ಆನೇಕಲ್ ಸುತ್ತಮುತ್ತ ಅತ್ತಿಬೆಲೆ, ಚಂದಾಪುರ, ಬನ್ನೇರುಘಟ್ಟ, ಗೊಟ್ಟಿಗೆರೆ ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆಯಿಂದಾಗಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.

Read More

ಬೆಂಗಳೂರು : ನಿನ್ನೆ ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಆಕಸ್ಮಿಕವಾಗಿ ಮೃತಪಟ್ಟ ಅಣ್ಣ-ತಂಗಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಮೃತ ಬಾಲಕ ಮತ್ತು ಬಾಲಕಿಯ ತಾಯಿ ನಾಗಮ್ಮಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಈಗಾಗಲೇ ಈ ಕುರಿತು ಎಸ್ ಟಿ ಸೋಮಶೇಖರ್ ಅವರೊಂದಿಗೆ ಮಾತನಾಡಿದ್ದೇನೆ. ಅಲ್ಲದೆ ಬಿಬಿಎಂಪಿ ಹಾಗೂ ಅವರಿಂದ ಸೇರಿ ಒಟ್ಟು 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತೆ.ಪರಿಹಾರ ನೀಡುವ ಸಂಬಂಧ ಸೋಮಶೇಖರ ಜೊತೆಗೆ ಮಾತನಾಡಿದ್ದೇನೆ. ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಎಸ್ ಟಿ ಸೋಮಶೇಖರ್ ಅವರ ಜೊತೆಗೆ ಈ ಕುರಿತು ಮಾತನಾಡಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಕೆಂಗೇರಿ ಬೆಂಗಳೂರಿನ ಯಶವಂತಪುರ ಕ್ಷೇತ್ರದ ವ್ಯಾಪ್ತಿಗೆ ಸೇರುತ್ತದೆ ನಾಗಮ್ಮ ಪುತ್ರಿ ಮಹಾಲಕ್ಷ್ಮಿ ಹಾಗೂ ಪುತ್ರ ಜಾನ್ ಸೀನ ಇಬ್ಬರು ಮೃತಪಟ್ಟಿದ್ದರು. ನಿನ್ನೆ ಬೆಳಗ್ಗೆ ಆಕಸ್ಮಿಕವಾಗಿ ಮಹಾಲಕ್ಷ್ಮಿ ಕೆರೆಗೆ ಬಿದ್ದಿದ್ದಳು. ಈ ವೇಳೆ ತಂಗಿಯ ರಕ್ಷಣೆಗೆ ಕೆರೆಗೆ ಇಳಿದಿದ್ದ ಅಣ್ಣ ಜಾನ್ ಸೆನಾ ಕೂಡ…

Read More

ಕೊಪ್ಪಳ : ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ ಎಂದು ಸಿಪಿ ಯೋಗೇಶ್ವರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಅವರನ್ನು ಸ್ವಾಗತಿಸಿದರು. ಈ ಕುರಿತಾಗಿ ಸಚಿವ ದಿನೇಶ್ ಗುಂಡೂರಾವ್ ಅವರು ನಾವು ಯಾವುದೇ ಆಪರೇಷನ್ ಕಮಲ ಮಾಡಿಲ್ಲ ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಅವರಾಗೆ ಬಂದಿದ್ದಾರೆ ಎಂದು ತಿಳಿಸಿದರು. ಕೊಪ್ಪಳದಲ್ಲಿ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಸಮಸ್ಯೆ ತಡೆಗಟ್ಟುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ಯಾವುದೇ ಆಪರೇಷನ್ ಮಾಡಿಲ್ಲ. ಅವರೇ ಒಪ್ಪಿಕೊಂಡು ಬಂದಿದ್ದಾರೆ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ. ಬಿಜೆಪಿಯವರು ಮಾಡಬಾರದು ಮಾಡಿದ್ದಾರೆ. ಅವರು ನಮಗೆ ಪಾಠ ಮಾಡಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ. ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷದವರು, ಮರಳಿ ಪಕ್ಷ ಸೇರಿದ್ದಾರೆ. ಪಕ್ಷದ ಅಭ್ಯರ್ಥಿಯಾದರೆ ಸಂತೋಷ. ಅದು ಉಪಮುಖ್ಯಮಂತ್ರಿಗಳ ಜವಾಬ್ದಾರಿ ಕ್ಷೇತ್ರ. ಇನ್ನು ಆರೋಗ್ಯ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ ಮಾಡಿಕೊಳ್ಳುತ್ತೇವೆ. ಆರೋಗ್ಯ ಇಲಾಖೆಯಿಂದ ಉಚಿತವಾಗಿ ಮನೆಮನೆಗೆ…

Read More

ಬೆಂಗಳೂರು : ಸತತ ಮಳೆ ಆಗುತ್ತಿರುವುದರಿಂದ ಬೆಂಗಳೂರಿನ ಜನತೆ ಸಂಪೂರ್ಣವಾಗಿ ತತ್ತರಿಸಿ ಹೋಗಿದ್ದು ಮನೆಯಿಂದ ಹೊರಗಡೆ ಕಾಲಿಡಲು ಸಹ ಸಾಧ್ಯವಾಗುತ್ತಿಲ್ಲ. ಇದೀಗ ಇಂದು ಬೆಂಗಳೂರಿನಲ್ಲಿ ಮತ್ತೆ ಭಾರಿ ಮಳೆಯಾಗಿದ್ದು ಅದರಲ್ಲೂ, ರಿಚ್ಮಂಡ್ ಟೌನ್ ಬಳಿ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದೆ. ಇದೇ ವೇಳೆ ಬೆಂಗಳೂರಿನ ರಿಚ್ಮಂಡ್ ಟೌನ್ ಬಳಿ ರಸ್ತೆಯ ಪಕ್ಕ ನಿಲ್ಲಿಸಿದ್ದ ಸುಮಾರು 30ಕ್ಕೂ ಅಧಿಕ ಬೈಕ್ ಗಳು ಅರ್ಧದಷ್ಟು ನೀರಿನಲ್ಲಿ ಮುಳುಗಿವೆ. ಈ ಸಂದರ್ಭದಲ್ಲಿ ಮರ ಒಂದು ಬೈಕ್ ಗಳ ಮೇಲೆ ಬಿದ್ದಿರುವ ಘಟನೆ ನಡೆದಿದೆ.ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಲ್ಲದೆ ಫುಟ್ ಪಾತ್ ನಲ್ಲಿದ್ದ ಸಣ್ಣಪುಟ್ಟ ಅಂಗಡಿಗಳಿಗೂ ಸಹ ಮಳೆ ನೀರು ನುಗ್ಗಿದೆ. ಬೆಂಗಳೂರು ಮಹಾನಗರದ ವಿಧಾನಸೌಧ, ಕೆ ಆರ್ ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಶಾಂತಿನಗರ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ.

Read More

ಬೆಂಗಳೂರು : ಬೆಂಗಳೂರಿನ ಬಾಬಾ ಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಅಲ್ಲದೆ ಅವಶೇಷಗಳ ಅಡಿ ಇನ್ನೂ ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗುತ್ತಿದೆ. ಇದುವರೆಗೂ 8 ಶವಗಳನ್ನು ಹೊರಗಡೆ ತೆಗೆಯಲಾಗಿದೆ. ಅಲ್ಲದೆ 13 ಕಾರ್ಮಿಕರನ್ನು ರಕ್ಷಿಸಲಾಗಿದೆ, ಸ್ಥಳದಲ್ಲಿ ಎನ್ ಡಿ ಆರ್ ಎಫ್ ಹಾಗೂ ಎಸ್‌ಡಿಆರ್ಎಫ್, ಅಗ್ನಿಶಾಮಕ ದಳ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಿಹಾರ್ ಮೂಲದ ಟೈಲ್ಸ್ ಕಾರ್ಮಿಕ ಎಂದು ಹೇಳಲಾಗುತ್ತಿದ್ದು, ತಿರುಪಾಲಿ, ಅರ್ಮಾನ್ ಸೇರಿದಂತೆ ಇದುವರೆಗೂ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಲೀಕ ಭುವನ್ ರೆಡ್ಡಿ, ಮುನಿರಾಜ ರೆಡ್ಡಿ ಗುತ್ತಿಗೆದಾರ ಮುನಿಯಪ್ಪ ಇಬ್ಬರನ್ನು ಕೂಡ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಟ್ಟಡದ ಮಾಲೀಕ ಭುವನ್ ರೆಡ್ಡಿ ನಾಲ್ಕು ಕಟ್ಟಡ ನಿರ್ಮಾಣ ಮಾಡಲಾಗುತ್ತೆ ಎಂದು ಅನುಮತಿ ಪಡೆದು, ಆರು ಅಂತಸ್ತಿನ ಕಟ್ಟಡ ನಿರ್ಮಾಣ…

Read More

ತುಮಕೂರು : ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹಲವು ಪ್ರದೇಶಗಳಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಇದೀಗ ತುಮಕೂರಿನಲ್ಲಿ ನಿರಂತರವಾದ ಸುರಿದ ಮಳೆಗೆ ಮನೆ ಗೋಡೆ ಹಸಿಯಾಗಿದ್ದು, ಈ ವೇಳೆ ಸ್ನಾನಕ್ಕೆ ತೆರಳಿದ್ದ ಮಹಿಳೆಯ ಮೇಲೆ ಗೋಡೆ ಕುಸಿದ್ದು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ಹೌದು ಸ್ನಾನ ಮಾಡಲು ಹೋಗಿದ್ದ ಸಹನಾ (27) ಎನ್ನುವ ಮಹಿಳೆಯ ಮೇಲೆ ಗೋಡೆ ಕುಸಿದು ಬಿದ್ದಿತ್ತು. ಮಣ್ಣಿನ ಆಡಿ ಸಿಲುಕಿದ್ದ ಸಹನಾಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಸಹನಾ ಮೃತ ಪಟ್ಟಿರುವುದಾಗಿ ವೈದ್ಯರು ಧೃಡಪಡಿಸಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮುಂಬೈ : ಜೂಜಾಟದ ಜಾಹಿರಾತು ಒಂದರಲ್ಲಿ ಮುಂಬೈ ಪೊಲೀಸರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬಾಲಿವುಡ್ ಖ್ಯಾತ ನಟ ನವಾಜುದ್ದೀನ್ ಸಿದ್ದಿಕ್ ವಿರುದ್ಧ ಹಿಂದೂ ಪರ ಸಂಘಟನೆ ದೂರು ನೀಡಿದೆ. ಹೌದು ನವಾಜುದ್ಧೀನ್ ಸಿದ್ಧಿಕಿ ಬಿಗ್ ಕ್ಯಾಶ್ ಹೆಸರಿನ ಗೇಮಿಂಗ್ ಅಪ್ಲಿಕೇಶನ್ ಒಂದರ ರಾಯಭಾರಿ ಆಗಿದ್ದು, ಈ ಗೇಮಿಂಗ್ ಅಪ್ಲಿಕೇಶನ್​ನ ಜಾಹೀರಾತುಗಳಲ್ಲಿ ನವಾಜುದ್ಧೀನ್ ಸಿದ್ಧಿಕಿ ನಟಿಸಿದ್ದಾರೆ. ನವಾಜುದ್ಧೀನ್ ಸಿದ್ಧಿಕಿ, ಮುಂಬೈ ಪೊಲೀಸರಿಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿರುವ ಹಿಂದೂ ಜಾಗರಣ ವೇದಿಕೆ ಸದಸ್ಯರು ಮುಂಬೈ ಪೊಲೀಸ್ ಆಯುಕ್ತರಿಗೆ ನವಾಜುದ್ಧೀನ್ ಸಿದ್ಧಿಕಿ ವಿರುದ್ಧ ದೂರು ನೀಡಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ. ಪೊಲೀಸ್ ಸಮವಸ್ತ್ರ ಧರಿಸಿ, ಕ್ರೈಂ ವಿಭಾಗದಲ್ಲಿ ದೊಡ್ಡ ಹೆಸರು ಮಾಡಬೇಕೆಂದರೆ ದೊಡ್ಡ ಕೆಲಸ ಮಾಡಬೇಕಾಗುತ್ತದೆ. ಈ ಅಪರಾಧಿಗಳು ನನ್ನನ್ನು ಸಾಮಾನ್ಯ ಅಂದುಕೊಂಡು ಬಿಟ್ಟಿದ್ದಾರೆ. ಅವರ ಹಾವ ಭಾವದಿಂದಲೇ ಅವರ ಆಟ ಎಂಥಹದ್ದು ನಾನು ಕಂಡು ಹಿಡಿದುಬಿಡುತ್ತೇನೆ. ಏಕೆಂದರೆ ಆ ಆಟವನ್ನು ನಾನು ಐದು ಕೋಟಿ ಜನರೊಟ್ಟಿಗೆ ಪ್ರತಿ ದಿನವೂ ಆಡುತ್ತೇನೆ’ ಎಂದು ಸಂಭಾಷಣೆ ಹೇಳುವ…

Read More

ಬೆಂಗಳೂರು : ಮೈತ್ರಿ ಪಕ್ಷಗಳಿಗೆ ಬಿಗ್ ಶಾಕ್ ಕೊಟ್ಟ ಸಿಪಿ ಯೋಗೇಶ್ವರ್ ಅವರು ಬಿಜೆಪಿ ಪಕ್ಷವನ್ನು ತೊರೆದು ಅಧಿಕೃತವಾಗಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇದರಿಂದ ಬಿಜೆಪಿ ಹಾಗೂ ಜೆಡಿಎಸ್ ಗೆ ಸಿಪಿ ಯೋಗೇಶ್ವರ್ ಸೆಡ್ಡು ಹೊಡೆದಿದ್ದಾರೆ. ಇನ್ನು ಚನ್ನಪಟ್ಟಣ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ ಎಂದು ಕಾದು ನೋಡಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರ ಜೊತೆ ಮಾತಮಾಡಿದ ಅವರು, ಚನ್ನಪಟ್ಟಣದ ಅಭ್ಯರ್ಥಿ ಬಗ್ಗೆ ಪ್ರತಿಕ್ರಿಸಿ, ಯಾರು ಅಂತ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಎನ್​ಡಿಎ ಕೂಟದಿಂದಲೇ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು. ಅನಸೂಯ ಮಂಜುನಾಥ್ ಅಭ್ಯರ್ಥಿ ಆಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ನಿಖಿಲ್, ಕಾದು ನೋಡಿ ಎಂದಷ್ಟೇ ಹೇಳಿದರು. ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ‌ಸೇರ್ಪಡೆ ಆಶ್ಚರ್ಯವನ್ನೇನು ತಂದಿಲ್ಲ. ಅವರು ವಿಧಾನ ಪರಿಷತ್​ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗಲೇ ನಿರೀಕ್ಷೆ ಇತ್ತು. ಹಾಗಾಗಿ ಸಿ…

Read More

ಬೆಂಗಳೂರು : ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಸಿಪಿ ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂದು ಅವರೇ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ ನಾಳೆ ಬೃಹತ್ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಪಕ್ಷದ ಬಾವುಟ ನೀಡಿ ಸಿಪಿ ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಇವಳೆ  ಡಿಕೆ ಶಿವಕುಮಾರ್ ಅವರು ಇಂದು ಸಂಜೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ. ಹಾಗಾಗಿ ನಾಳೆ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ನಾಳೆ ಬೆಳಿಗ್ಗೆ 11 ಗಂಟೆಗೆ ಚನ್ನಪಟ್ಟಣ ತಾಲೂಕು ಕಚೇರಿಗೆ ಬೃಹತ್ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.ಸಿಪಿ ಯೋಗೇಶ್ವರ್ ಅವರಿಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ಸೇರಿದಂತೆ ಕಾಂಗ್ರೆಸ್ ನಾಯಕರು ಸಾಥ್ ನೀಡಲಿದ್ದಾರೆ.

Read More