Author: kannadanewsnow05

ಹುಬ್ಬಳ್ಳಿ : ಇಂದು ಬಿಜೆಪಿಯ ಸಿಪಿ ಯೋಗೇಶ್ವರ್ ಅವರು ಹುಬ್ಬಳ್ಳಿಯಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ಒಂದೇ ಸಾಲಿನಲ್ಲಿ ರಾಜಿನಾಮೆ ನೀಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ನಾನು ಪಕ್ಷೇತರನಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ಘೋಷಿಸಿದ್ದಾರೆ. ಹೌದು ಚನ್ನಪಟ್ಟಣ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಅವರು ತಮ್ಮ ಎಂಎಲ್ಸಿ ಸ್ಥಾನಕ್ಕೆ ಇಂದು ಹುಬ್ಬಳ್ಳಿಗೆ ಆಗಮಿಸಿ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಬಳಿಕ ಸಿಪಿ ಯೋಗೇಶ್ವರ್ ಹೇಳಿಕೆ ನೀಡಿದ್ದು ಪಕ್ಷೇತರರಾಗಿ ಸ್ಪರ್ಧಿಸಲ ತೀರ್ಮಾನಿಸಿದ್ದೇನೆ ಎಂದು ತಿಳಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸಬೇಕಾದರೆ ರಾಜೀನಾಮೆ ನೀಡಬೇಕಾಗಿರುತ್ತದೆ. ಹಾಗಾಗಿ ಪರಿಷತ್ ನಾಮನಿರ್ದೇಶಿತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಅಷ್ಟೇ. ನಾನಿನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ವಿಧಾನ ಪರಿಷತ್ ಸದಸ್ಯತ್ವಕ್ಕೆ ನಾನು ರಾಜೀನಾಮೆ ಕೊಟ್ಟಿದ್ದೇನೆ. ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ಅಂಗೀಕರಿಸಿದ್ದಾರೆ. ನಾನು ಪಕ್ಷೇತರ…

Read More

ಬೆಂಗಳೂರು : ವಾಲ್ಮೀಕಿ, ಮುಡಾ ಹಗರಣದಿಂದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗಾಗಲೇ ತೀವ್ರ ಮುಜುಗರ ಉಂಟಾಗಿದೆ. ಇದರ ಬೆನ್ನಲ್ಲೇ ಪತ್ನಿಯ ಹೆಸರಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಚಿವ ಎನ್ಎಸ್ ಬೋಸರಾಜು ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲ ಥಾವರ್ ಚೆಂದ ಗೆಹ್ಲೊಟ್ ಅವರಿಗೆ ದೂರು ನೀಡಿದ್ದಾರೆ. ರಾಯಚೂರಿನಲ್ಲಿ ರಕ್ಷಿತಾರಣ್ಯ ಪ್ರದೇಶದಲ್ಲಿ 5 ಎಕರೆ 27 ಗುಂಟೆ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕುರಿತಂತೆ ರಾಯಚೂರು ಉಪವಲಯ ಅರಣ್ಯಾಧಿಕಾರಿ ತನಿಖೆ ನಡೆಸುತ್ತಿದ್ದು, ನ್ಯಾಯಾಲಯಕ್ಕೆ ವರದಿ ನೀಡಿದ್ದಾರೆ. ಈ ಭಾಗದಲ್ಲಿ ಪ್ರತಿ ಚದರ ಅಡಿಗೆ ಕನಿಷ್ಟ 4 ಸಾವಿರ ರೂ. ದರ ಇದೆ. ಒಟ್ಟು ಭೂಮಿಗೆ ನೂರಾರು ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವಿದೆ. ಎನ್ಎಸ್ ಬೋಸರಾಜು ಪತ್ನಿ ಕೃಷ್ಣವೇಣಿ ಅವರು 17 ಗುಂಟೆ ಜಮೀನನ್ನು ಕಬಳಿಸಿದ್ದಾರೆ ಎಂದು ದೂರಿದ್ದಾರೆ. ಭೂಮಿ ಒತ್ತುವರಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸೃಜನಪಕ್ಷಪಾತ ಎಸಗಲಾಗಿದೆ. ಗುಂಪು ರಚನೆ ಮಾಡಿಕೊಂಡು ರಕ್ಷಿತಾರಣ್ಯವನ್ನು…

Read More

ಬೆಂಗಳೂರು : ತೀವ್ರ ಕುತೂಹಲ ಮೂಡಿಸಿದ ಚನ್ನಪಟ್ಟಣ ಉಪ ಚುನಾವಣೆಯು ಇದೀಗ ರೋಚಕ ಟ್ವಿಸ್ಟ್ ಗೆ ಕಾರಣವಾಗಿದೆ. ಒಂದು ಕಡೆ ಸಿಪಿ ಯೋಗೇಶ್ವರ್ ಬಿಜೆಪಿ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತ ಡಿಕೆ ಬ್ರದರ್ಸ್ ಸಿಪಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಗೆ ಕರೆತಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲು ಪ್ಲಾನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಈ ಕುರಿತಂತೆ ಹಲವು ಸುದ್ದಿಗಳು ಹರಿದಾಡುತ್ತಿದ್ದು, ಬಿಜೆಪಿ ಎಂಎಲ್ಸಿ ಸಿಪಿ ಯೋಗೇಶ್ ಅವರಿಗೆ ಕಾಂಗ್ರೆಸ್ಸಿನ ಬಾಗಿಲು ತೆರೆದಿದೆಯಾ ಎಂಬ ಸುದ್ದಿ ಹರಿದಾಡುತ್ತಿವೆ. ಸಿಪಿವೈ ಅವರನ್ನು ಕಾಂಗ್ರೆಸ್ ಗೆ ಕರೆತರಲು ಅಭ್ಯಂತರವಿಲ್ಲ ಎಂದು ಕಾಂಗ್ರೆಸ್ ಸಚಿವರು ಈಗಾಗಲೇ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆ ಸಹೋದರರಿಗೆ ಆಪ್ತರಾದ ಇಬ್ಬರು ಶಾಸಕರ ಮೂಲಕ ಸಿಪಿ ಯೋಗೇಶ್ವರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇಂದು ರಾತ್ರಿ ಒಳಗೆ ಒಂದಿಷ್ಟು ತ್ವರಿತಗತಿಯ ಬೆಳವಣಿಗೆ ಸಾಧ್ಯತೆ ಇದ್ದು, ಇದುವರೆಗೆ ಸ್ಪರ್ಧೆ ಮಾಡುವುದನ್ನೇ ಅಂತಿಮ ಗೊಳಿಸಿದ ಡಿಕೆ ಸುರೇಶ್ ಆಪ್ತರಿಗೂ ಈ ವಿಚಾರದಲ್ಲಿ…

Read More

ಬೆಂಗಳೂರು : ಇತ್ತೀಚಿಗೆ ಸೇರಿಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಒಟ್ಟು 43 ಕೇಸ್ ಗಳನ್ನು ಹಿಂಪಡೆಯಲಾಗಿದೆ. ಅದರಲ್ಲಿ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಕೂಡ ಇದೆ. ಹಾಗಾಗಿ ಇದೇ ರೀತಿಯಾಗಿ ಡಿಜೆ ಹಳ್ಳಿ ಹಾಗೂ ಕೆ ಜಿ ಹಳ್ಳಿ ಪ್ರಕರಣದಲ್ಲಿ ಅಮಾಯಕರ ಮೇಲಿನ ಕೇಸನ್ನು ಹಿಂಪಡೆಯಿರಿ ಎಂದು ಕಾಂಗ್ರೆಸ್‌ನ ಮಾಜಿ ಸಚಿವ ಆರ್ ರೋಷನ್ ಬೇಗ್ ತಿಳಿಸಿದ್ದಾರೆ. ಡಿಜೆ ಹಳ್ಳಿ ಕೆ ಜಿ ಹಳ್ಳಿ ಕೇಸ್ ವಾಪಸ್ ಗೆ ಮನವಿ ಮಾಡಿದ ವಿಚಾರವಾಗಿ ಬೆಂಗಳೂರಿನಲ್ಲಿ ಮಾಜಿ ಸಚಿವ ಆರ್ ರೋಷನ್ ಬೇಗ್ ಪ್ರತಿಕ್ರಿಯೆ ನೀಡಿದ್ದು, ಅವರ ಮಕ್ಕಳು ತಂದೆ ತಾಯಿ ಭೇಟಿಯಾಗಿದ್ದರು. ಕಳೆದ ನಾಲ್ಕು ವರ್ಷದಿಂದ ಜೈಲಿನಲ್ಲಿ ಇದ್ದಾರೆ ಅವರು ಕಳ್ಳತನ ಮಾಡಿಲ್ಲ. ಹುಬ್ಬಳ್ಳಿಯ ಕೇಸ್ ಹಿಂಪಡೆದರು ಹಾಗಾಗಿ ಬಗ್ಗೆ ಯೋಚಿಸಿ ಎಂದರು. ಆದ್ದರಿಂದ ಗೃಹ ಸಚಿವ ಪರಮೇಶ್ವರ್ ಬಳಿಯೂ ಈ ಕುರಿತು ಮಾತನಾಡಿದ್ದೇನೆ.ತಪ್ಪು ಮಾಡಿದವರು ಬೆಂಕಿ ಹಚ್ಚಿದವರನ್ನು ಎಂದಿಗೂ ಬಿಡಬೇಡಿ. ಅಮಾಯಕರನ್ನು ಹೊರಗೆ ಬಿಡಿ ಎಂದಿದ್ದೇವೆ. ಪೊಲೀಸ್…

Read More

ಬೆಂಗಳೂರು : ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದೆ. ಅಲ್ಲದೆ ಎರಡು ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಜಾಮೀನು ಅರ್ಜಿಯನ್ನು ಕೂಡ ವಜಾಗೊಳಿಸಿ ಹೈ ಕೋರ್ಟ್ ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ ಆದೇಶ ಹೊರಡಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದಂತ ಆರೋಪದಲ್ಲಿ ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನಡೆಸಿ, ತೀರ್ಪು ಕಾಯ್ದಿರಿಸಿದ್ದರು.ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮನೆ ಕೆಲಸದಾಕೆ ನೀಡಿರುವ ದೂರಿನ ಅನ್ವಯ ದಾಖಲಾಗಿದ್ದಂತ ಅತ್ಯಾಚಾರ ಕೇಸ್, ಸೇರಿದಂತೆ ಮೂರು ಅತ್ಯಾಚಾರ…

Read More

ಚಿತ್ರದುರ್ಗ : ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 13ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ, ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು ಮೂರು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚಿತ್ರದುರ್ಗದ ಚಳ್ಳೆಕೆರೆ ತಾಲೂಕಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಿಪಿ ಯೋಗೇಶ್ವರ್ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಜೆಡಿಎಸ್ ನಾಯಕರು ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ಮೊದಲು ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಲಿ. ನಾವು ಕೂಡ ಇಂದು ಅಥವಾ ನಾಳೆ ಚನ್ನಪಟ್ಟಣದ ಅಭ್ಯರ್ಥಿ ಹೆಸರು ಘೋಷಣೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಲ್ಲಿ ಮಳೆ ಜಾಸ್ತಿಯಾಗಿದೆ. ಆದರೆ ಬೆಳೆಗಳಿಗೆ ಯಾವುದೇ ತೊಂದರೆ ಆಗಿಲ್ಲ. ನಮ್ಮ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ನಮ್ಮ ಸರ್ಕಾರ ಬೀಳಿಸಲು ಸಾವಿರ ಕೋಟಿ ರೂ. ಖರ್ಚೆಂದು ಯತ್ನಾಳ್ ಹೇಳಿದ್ದರು. ಸಾವಿರ…

Read More

ಕಲಬುರ್ಗಿ : ದಂಪತಿಗಳ ನಡುವೆ ಮಕ್ಕಳು ನೋವು ಅನುಭವಿಸುತ್ತಿದ್ದು, ಕ್ಷುಲ್ಲಕ ಕಾರಣಕ್ಕೆ ತಾಯಿಯೊಬ್ಬಳು ತನ್ನ ಮೂರು ಮಕ್ಕಳಿಗೆ ವಿಷ ಉಣಿಸುವುದಲ್ಲದೆ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ. ಹೌದು ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಜಂಗ್ಲಿ ಪೀರ್ ತಾಂಡಾದ ಗೀತಾಬಾಯಿ ಸಂತೋಷ ರಾಠೋಡ್ (30) ಎಂಬವರು ಈ ಕೃತ್ಯ ಎಸಗಿದ ಮಹಿಳೆ. ಮಕ್ಕಳಾದ ಚೈತನ್ಯ (4) ಧನುಷ್ (3) ಮತ್ತು ಲಕ್ಷ್ಮೀ (ಒಂದೂವರೆ ತಿಂಗಳ ಮಗು)ಗೆ ವಿಷ ಕುಡಿಸಿದ ಗೀತಾಬಾಯಿ ಸಹ ವಿಷ ಸೇವನೆ ಮಾಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ರಾತ್ರಿ ಕ್ಷುಲ್ಲಕ ಕಾರಣಕ್ಕೆ ಗೀತಾ ಬಾಯಿ ಪತಿ ಸಂತೋಷ್ ನೊಂದಿಗೆ ಗಲಾಟೆ ಮಾಡಿದ್ದಾಳೆ, ಇದರಿಂದ ಇದೇ ಕಾರಣಕ್ಕೆ ಗೀತಾಬಾಯಿ ತನ್ನ ಮೂರೂ ಮಕ್ಕಳಿಗೆ ಕ್ರಿಮಿನಾಶಕವನ್ನು ತಂಪು ಪಾನೀಯಕ್ಕೆ ಬೆರೆಸಿ ಮಕ್ಕಳಿಗೆ ಕುಡಿಸಿ ಬಳಿಕ ತಾನು ಕುಡಿದಿದ್ದಾಳೆ. ಸ್ವಲ್ಪ ಸಮಯದ ನಂತರ ಮಕ್ಕಳ ಚಿರಾಟ ಕೇಳಿ ಅಕ್ಕಪಕ್ಕದವರು ಕೂಡಲೇ ತಾಯಿ ಹಾಗೂ ಮಕ್ಕಳನ್ನು…

Read More

ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ. ಹೌದು ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿತ್ತು. ಅರ್ಜುನ್ ವಿಚಾರಣೆ ನಡೆಸಿದ ನ್ಯಾಯಾಧೀಶರು ಗ್ರಾಮೀಣ ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ. ಅಲ್ಲದೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯೂ ಕೂಡ ವಜಾ ಆಗಿದೆ ಎಂದು ತಿಳಿದು ಬಂದಿದೆ. ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಇತ್ತು. ಈ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್ ನಲ್ಲಿ ಈ ಮೂರು ಪ್ರಕರಣಗಳ ವಿಚಾರಣೆ ಕೈಗೊತ್ತಿಕೊಂಡ ನ್ಯಾಯಾಧೀಶರು ಜಾಮೀನು ಅರ್ಜಿ ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೂಡ ವಜಾಗೊಳಿಸಿ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೈ ಕೋರ್ಟ್ ಪ್ರಜ್ವಲ್ ರೇವಣ್ಣ ಅವರಿಗೆ ಬಿಗ್…

Read More

ಕಲಬುರ್ಗಿ : ಯುವಕನೊಬ್ಬ  ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಮಹಿಳೆಗೆ ನಿನ್ನ ಪತಿಯನ್ನು ಬಿಟ್ಟು ಬರುವಂತೆ ತಿಳಿಸಿದ್ದಾನೆ. ಇದಕ್ಕೆ ಒಪ್ಪದ ಆಕೆಗೆ ನಿರಂತರವಾಗಿ ಕಿರುಕುಳ ನೀಡಿದ್ದಾನೆ ಇದಕ್ಕೆ ಮನನೊಂದು ಮಹಿಳೆ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಬುರ್ಗಿ ನಗರದ ರಾಮತೀರ್ಥ ಬಡಾವಣೆಯಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಕಮಲನಗರ ತಾಲ್ಲೂಕಿನ ಬಾಲೂರ ಮೂಲದ ವೈಷ್ಣವಿ ಮಾರುತಿ (24) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎನ್ನಲಾಗಿದೆ.ವೈಷವಿ ಕಲಬುರಗಿ ನಗರದ ರಾಮತೀರ್ಥ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು ಎನ್ನಲಾಗುತ್ತಿದೆ. ಇನ್ನು ಕಿರುಕುಳ ನೀಡಿದ ಕಮಲನಗರದ ವಿಷ್ಣು ಅಂಕುಶ ವಗ್ದರೆ ವಿರುದ್ಧ ಸಬ್‌ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈಷ್ಣವಿ ಬೀದರ್ ನಲ್ಲಿ ವಾಸಿಸುತ್ತಿದ್ದಾಗ ಅವರ ಮನೆಯಲ್ಲಿ ಸಂಬಂಧಿಕರ ಮಗಳೊಬ್ಬರು ಓದುತ್ತಿದ್ದರು. ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿಷ್ಣು ವೈಷ್ಣವಿಗೆ ಪರಿಚಯವಾಗಿದ್ದಾನೆ.ಈ ವೇಳೆ ಸಂಬಂಧಿಕರ ಮಗಳ ನಡತೆ ಸರಿ ಇಲ್ಲ ಈ ಕುರಿತು ಪೋಷಕರಿಗೆ ತಿಳಿಸುತ್ತೇನೆ ಎಂದು ವೈಷ್ಣವಿಗೆ ಬೆದರಿಕೆ ಹಾಕಿದ್ದಾನೆ. ವೈಷ್ಣವಿ…

Read More

ಬೆಂಗಳೂರು : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಇಂದು ಹುಬ್ಬಳ್ಳಿಗೆ ತೆರಳಿ ಸಭಾಪತಿಯಾಗಿರುವ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ಚನ್ನಪಟ್ಟಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕೂಡ ತಿಳಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಪಟ್ಟಂತೆ ಈಗಾಗಲೇ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ ಚನ್ನಪಟ್ಟಣದಲ್ಲಿ ಮಾತ್ರ ಕಗ್ಗಂಟಾಗಿ ಪರಿಣಮಿಸಿದ್ದು, ಇದುವರೆಗೂ ಬಿಜೆಪಿಯಾಗಲಿ, NDA ಮೈತ್ರಿ ಕೂಟದ ಜೆಡಿಎಸ್ ಆಗಲಿ ಹಾಗೂ ಕಾಂಗ್ರೆಸ್ ಕೂಡ ಅಭ್ಯರ್ಥಿಯನ್ನು ಘೋಷಿಸಿಲ್ಲ. ಇನ್ನೊಂದು ಕಡೆ ಸಿಪಿ ಯೋಗೇಶ್ವರ್ ಅವರು ನಾನು ಸ್ಪರ್ಧಿಸಿದರೆ ಬಿಜೆಪಿಯಿಂದ ಮಾತ್ರ ಸ್ಪರ್ಧಿಸುತ್ತೇನೆ. ಬಿಜೆಪಿಯಿಂದ ಸ್ಪರ್ಧಿಸುವುದು ನನ್ನ ಆಸೆಯಾಗಿದೆ. ಆದರೆ ಕುಮಾರಸ್ವಾಮಿಯವರು ಅವರ ಮಗನಿಗೆ ಟಿಕೆಟ್ ಕೊಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಹಾಗಾಗಿ ನಾನು ಸ್ವತಂತ್ರವಾಗಿ ಸ್ಪರ್ಧಿಸಿದರು ಸ್ಪರ್ಧಿಸುತ್ತೇನೆ ಎಂದು ಸಿ ಪಿ ಯೋಗೇಶ್ವರ್…

Read More