Subscribe to Updates
Get the latest creative news from FooBar about art, design and business.
Author: kannadanewsnow05
ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಇದೀಗ ಬಳ್ಳಾರಿ ಜೈಲ್ನಲ್ಲಿ ಬೆನ್ನು ನೋವಿನಿಂದ ತೀವ್ರವಾಗಿ ಅವರು ನೋವು ಅನುಭವಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ಜೈಲಲ್ಲೇ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಬೆನ್ನು ನೋವು ಹೆಚ್ಚಾಗಿರುವುದರಿಂದ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿನಲ್ಲೇ ದರ್ಶನ್ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಈಗಾಗಲೇ ಬೆನ್ನಿನ ಹಿಂಭಾಗದಲ್ಲಿ ಊತ ಬಂದಿರುವ ಸಾಧ್ಯತೆ ಇದೆ. ಅವರಿಗೆ ಸರ್ಜರಿ ಮಾಡಿಸಲೇಬೇಕಾದ ಅಗತ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ದರ್ಶನ್ಗೆ ಸ್ಕ್ಯಾನ್ ಮಾಡಿಸಲು ವೈದ್ಯರು ಸೂಚನೆ ನೀಡಿದ್ದಾರೆ. ಈ ವೇಳೆ ನಟ ದರ್ಶನವರು ನಾನು ಬೆಂಗಳೂರಿಗೆ ಹೋದ ಮೇಲೆ ಸ್ಕ್ಯಾನ್ ಮಾಡಿಸಿಕೊಳ್ಳುತ್ತೇನೆ ಸದ್ಯಕ್ಕೆ, ನಾವು ಕಡಿಮೆಯಾಗುವಂತಹ ಯಾವುದಾದರೂ ಮಾತ್ರೆ ಇದ್ರೆ ಕೊಡಿ ಎಂದು ವೈದ್ಯರಿಗೆ ತಿಳಿಸಿದ್ದಾರೆ. ಹಾಗಾಗಿ ನಟ ದರ್ಶನ್ ಸದ್ಯ ಈ ಒಂದು ಬೆನ್ನು ನೋವಿನಿಂದ ಬಳಲುತ್ತಿರುವುದು ತಿಳಿದುಬಂದಿದೆ. ಇನ್ನೊಂದೆಡೆ ದರ್ಶನವರು ಜಾಮೀನು ಅರ್ಜಿ ಸಲ್ಲಿಸಿದ್ದು, ನಾಳೆ ಈ ಒಂದು ಅರ್ಜಿಯ…
ಕೋಲಾರ : ಬುಲೆರೋ ವಾಹನಕ್ಕೆ ವೇಗವಾಗಿ ಬಂದಂತಹ ಕಂಟೇನರ್ ಬಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ಮಡೇರಹಳ್ಳಿ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಬೆಂಗಳೂರು ಮೂಲದ ವಿಜಯಕುಮಾರ್ ಎಂದು ಹೇಳಲಾಗುತ್ತಿದ್ದು, ಕಂಟೇನರ್ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಬೋಲೇರೋ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಯಾದಗಿರಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡುವ ನೈತಿಕತೆ ಕೇಂದ್ರ ಸಚಿವ HD ಕುಮಾರಸ್ವಾಮಿಗೆ ಯಾವುದೇ ನೈತಿಕತೆ ಇಲ್ಲ. ಬಿ.ಎಸ್ ಯಡಿಯೂರಪ್ಪ, HD ಕುಮಾರಸ್ವಾಮಿ ಇಬ್ಬರು ಕಳ್ಳರೇ. ಕುಮಾರಸ್ವಾಮಿ ದೊಡ್ಡ ಕಳ್ಳ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಜಾಗ ವಾಪಸ್ ಕೊಟ್ಟಿದ್ದು, ಮುಖ್ಯಮಂತ್ರಿ ಪತ್ನಿ ಅವರ ನೈತಿಕತೆ ಎದ್ದು ಕಾಣುತ್ತದೆ. ಆದರೆ, ಇದನ್ನೇ ಯುಟರ್ನ್ ಹೊಡಿದ್ದಾರೆಂಬ ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪದಲ್ಲಿ ಯಾವುದೇ ಹುರುಳಿಲ್ಲ.ಮುಡಾದಲ್ಲಿ ಕುಮಾರಸ್ವಾಮಿ ಕುಟುಂಬದವರ ಎಷ್ಟು ಸೈಟ್ಗಳಿವೆ ಗೊತ್ತಾ, ಆ ಬಗ್ಗೆ ತುಟ್ಟಿ ಬಿಚ್ಚದ ಅವರು, ಸುಖಾಸುಮ್ಮನೆ ಆರೋಪ ಮಾಡುವುದರಲ್ಲಿ ಕುಮಾರಸ್ವಾಮಿ ಎತ್ತಿದ ಕೈ ಎಂದರು. ಮುಡಾ ವಿಷಯದಲ್ಲಿ ಸಿಎಂ ಸಿದ್ದರಾಯಮ್ಮ ಅವರ ಪಾತ್ರ ಎಲ್ಲೂ ಇಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಜನಪ್ರಿಯತೆ ತಗ್ಗಿಸುವ ಕೆಲಸವನ್ನು ವಿರೋಧ ಪಕ್ಷದವರು ಮಾಡುತ್ತಿದ್ದಾರೆ.ಮುಖ್ಯಮಂತ್ರಿ ರಾಜೀನಾಮೆ ಕೊಡುವ ಪ್ರಶ್ನೆ ಬರುವುದಿಲ್ಲ, ಮುಡಾ ಪರ್ಯಾಯವಾಗಿ ಸ್ಥಳ ಹಂಚಿಕೆ…
ದಾವಣಗೆರೆ : ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ, ಅದರಲ್ಲೂ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಇನ್ನು ಮುಂದೆ ಕನ್ನಡದಲ್ಲೂ ಪರೀಕ್ಷೆ ಬರೆಯಬಹುದು ಎಂದು ಕೇಂದ್ರ ಸಚಿವರಾದಂತಹ ವಿ.ಸೋಮಣ್ಣ ಅವರು ಘೋಷಣೆ ಮಾಡಿದರು. ದಾವಣಗೆರೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಕನ್ನಡದಲ್ಲೇ ರೈಲ್ವೇ ಇಲಾಖೆ ಪರೀಕ್ಷೆಗಳನ್ನು ಇಲಾಖೆ ನಡೆಸಲಿದೆ. ಕಳೆದ 40 ವರ್ಷಗಳಿಂದ ಇದ್ದಂತಹ ಬೇಡಿಕೆಯನ್ನು ಇಂದು ಈಡೇರಿಸಲಾಗಿದೆ ಎಂದು ತಿಳಿಸಿದರು. ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು,15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.
ಉಡುಪಿ : ಉಡುಪಿ ಮಾರುಕಟ್ಟೆಯಲ್ಲಿ ಇಂದು ಚೀನಾ ಬೆಳೆದಿರುವ ಬೆಳ್ಳುಳ್ಳಿ, ದೇಶಿಯ ಉತ್ಪನ್ನಕ್ಕೆ ಪರ್ಯಾಯವಾಗಿ ಮಾರಾಟವಾಗುತ್ತಿತ್ತು. ಇದನ್ನು ಅರಿತ ವರ್ತಕರು ನಗರಸಭೆಗೆ ದೂರು ನೀಡಿದ್ದು, ಸಗಟು ವ್ಯಾಪಾರದ ಮಳಿಗೆಯೊಂದರ ಮೇಲೆ ನಗರಸಭೆ ಆಯುಕ್ತರು ದಾಳಿ ನಡೆಸಿ, ಐದು ಕ್ವಿಂಟಲ್ ಚೀನಾ ಬೆಳ್ಳುಳ್ಳಿಯನ್ನು ಜಪ್ತಿ ಮಾಡಿದ್ದಾರೆ. ಹೌದು ಎಲೆಕ್ಟ್ರಾನಿಕ್ ವಸ್ತುಗಳ ಅಗ್ಗದ ಬೆಲೆಯಲ್ಲಿ ಮಾರಾಟದಲ್ಲಿ ಚೀನಾ ಅಕ್ಕಪಕ್ಕದ ದೇಶಗಳಿಗೆ ಭಾರಿ ಹೊಡೆತವನ್ನು ನೀಡಿದೆ.ಆದರೆ ಇದೀಗ ಎಲೆಕ್ಟ್ರಾನಿಕ್ ವಸ್ತುಗಳ ಜೊತೆಗೆ ಅಡುಗೆಗೆ ಬಳಸುವ ಹಲವು ವಸ್ತುಗಳನ್ನು ಮಾರಾಟ ಹಾಗೂ ಸರಬರಾಜು ಮಾಡುವ ಮೂಲಕ ಭಾರತೀಯರಲ್ಲಿ ಆತಂಕ ಸೃಷ್ಟಿ ಮಾಡಿದೆ. ನಮ್ಮ ದೇಶದಲ್ಲಿ ಬೆಳೆಯುವ ಬೆಳ್ಳುಳ್ಳಿಗೂ, ಚೀನದಿಂದ ಬರುವ ಬೆಳ್ಳುಳ್ಳಿಗೂ, ರುಚಿ ವಾಸನೆ ಹಾಗೂ ದರದಲ್ಲು ಬಹಳ ವ್ಯತ್ಯಾಸವಿದೆ. ಬೆಂಗಳೂರಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಕೆ.ಜಿ.ಗೆ 160 ರಿಂದ 320 ರೂ. ನಂತೆ ಮಾರಾಟವಾಗುತ್ತಿದೆ. ಆದರೆ, ಚೀನಾದ ಬೆಳ್ಳುಳ್ಳಿ ಕೇವಲ 50 ರಿಂದ 60 ರೂ.ಗಳಿಗೆ ಮಾರಾಟವಾಗುತ್ತಿದೆ. ಭಾರತವು ತನ್ನ ಆಮದನ್ನು 2014 ರಲ್ಲಿ…
ಹಾವೇರಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆಂದು ಹಾಗೂ ತನ್ನ ವಿಪರೀತ ಕಾಮತೃಷೆಗಾಗಿ ತಾಳಿ ಕಟ್ಟಿದ್ದ ಗಂಡನನ್ನೇ ಹೆಂಡತಿಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಭೀಕರವಾಗಿ ಕೊಂದಿರುವ ಘಟನೆ ಹಿರೆಕೇರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ಹೌದು, ಸಾಧಿಕ್ ಮತ್ತೂರು(30) ಕೊಲೆಯಾದ ದುರ್ದೈವಿ ಎಂದು ಹೇಳಲಾಗುತ್ತಿದ್ದು, ಇನ್ನೂ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಂದ ಪತ್ನಿಯನ್ನು ಸಲ್ಮಾ (26) ಹಾಗೂ ಪ್ರಿಯಕರ ಜಾಫರ್ (28) ಆರೋಪಿಗಳು ಎಂದು ತಿಳಿದುಬಂದಿದೆ.ಕಳೆದ ಸೆಪ್ಟೆಂಬರ್ 25 ರಂದು ಈ ಒಂದು ಕೊಲೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಲ್ಮಾ ಜಾಫರ್ ಎಂಬುವವನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಸಲ್ಮಾ – ಜಾಫರ್ ಸರಸ ಸಲ್ಲಾಪ ನೋಡಿ ಸಾಧಿಕ್ ಬೇಸತ್ತಿದ್ದನು. ಪತ್ನಿ ಸಲ್ಮಾಗೆ ಸಾಕಷ್ಟು ಸಲ ಸಾಧಿಕ್ ವಾರ್ನಿಂಗ್ ಕೂಡ ಮಾಡಿದ್ದನಂತೆ. ನಿಮ್ಮಿಬ್ಬರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಸಾಧಿಕ್ ವಾರ್ನಿಂಗ್ ಮಾಡಿದ್ದನು. ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡರೆ ನಮಗೆ ಸಂಕಷ್ಟ ಎಂದು ತಿಳಿದು ಪತ್ನಿ ಸಲ್ಮಾ, ಪ್ರಿಯಕರನೊಂದಿಗೆ ಸೇರಿ ಸೆ.…
ರಾಯಚೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಈ ಒಂದು ಪ್ರಕರಣ ತನಿಖೆಯಲ್ಲಿ ಇರುವಾಗಲೇ, ಇದೀಗ ರಾಯಚೂರು ಜಿಲ್ಲೆಯಲ್ಲಿ ಸಹಕಾರ ಇಲಾಖೆಯ ಬ್ಯಾಂಕ್ನಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮಣ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿದೆ. ಹೌದು RDCC ಯ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದ್ಗಲ್ ಪಟ್ಟಣದ ಶಾಖೆಯ ಬ್ಯಾಂಕ್ ಮ್ಯಾನೇಜರ್ ಸ್ವತಃ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ಅಕ್ರಮ ಹಣವನ್ನು ವರ್ಗಾವಣೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.ಒಟ್ಟು 22 ಗ್ರಾಹಕರಿಗೆ 2.20 ಕೋಟಿ ರೂಪಾಯಿ ಆಕ್ರಮ ವರ್ಗಾವಣೆ ಆಗಿರುವ ಆರೋಪ ಕೇಳಿ ಬಂದಿತ್ತು. ಆರೋಪ ಬಂದ ಕೂಡಲೇ ಸ್ವತಃ ಇಲಾಖೆಯೇ ತನಿಖೆ ನಡೆಸಿದ್ದು ಬ್ಯಾಂಕ್ ಮ್ಯಾನೇಜರನ ವಂಚನೆ ಬಯಲಾಗಿದೆ. ಬ್ಯಾಂಕ್ ಮ್ಯಾನೇಜರ್ ನನ್ನು ಶಿವಪುತ್ರಪ್ಪ ಎಂದು ಹೇಳಲಾಗುತ್ತಿದ್ದು, ಬ್ಯಾಂಕ್ನ 11 ಜನ ಸಿಬ್ಬಂದಿಯ ಐಡಿ ಬಳಸಿ, ನಕಲಿ ಖಾತೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆಯಾಗಿದ್ದು ಇಲಾಖಾ ತನಿಖೆಯಲ್ಲಿ ಗೊತ್ತಾಗಿದೆ. 2017 ಜೂನ್ನಿಂದ…
ಬೆಂಗಳೂರು : ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ 1924 ಡಿಸೆಂಬರ್ 24 ರಂದು, ಕರ್ನಾಟಕ ರಾಜ್ಯದ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಇದೀಗ ಮುಂಬರುವ ಡಿಸೆಂಬರ್ 24ಕ್ಕೆ ನೂರು ವರ್ಷ ಪೂರೈಸುವ ಹಿನ್ನೆಲೆಯಲ್ಲಿ ಡಿಸೆಂಬರ್ 24 ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಆಚರಿಸಲಾಗುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಸಾಧನೆ ಮಾಡಿದಂತಹ ಸಾಧಕರಿಗೆ ಗಾಂಧಿಜಿ ಸೇವಾ ಪ್ರಶಸ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೆಳಗಾವಿಯಲ್ಲಿ 1924ರ ಡಿಸೆಂಬರ್ 24ರಂದು ಕಾಂಗ್ರೆಸ್ ಅಧಿವೇಶ ನಡೆಯಿತು. ಇದರ ಶತಮಾನೋತ್ಸವ ಆಚರಣೆ ಮಾಡುತ್ತಿದ್ದೇವೆ. ಮೊದಲ ಶತಮಾನೋತ್ಸವ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯುತ್ತದೆ. ಸಚಿವ ಹೆಚ್.ಕೆ ಪಾಟೀಲ್ ಅವರು ಇದಕ್ಕೆ ಅಧ್ಯಕ್ಷರಾಗಿರುತ್ತಾರೆ. ಮಹಾತ್ಮ ಗಾಂಧಿಜಿಯವರು ಶಾಂತಿಯುತವಾಗಿ, ಸತ್ಯಗ್ರಹದಿಂದ ಬ್ರಿಟಿಷರನ್ನು ದೇಶದಿಂದ ಓಡಿಸಿ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಹೇಳಿದರು.
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜೈಲು ಸೇರಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ನಿವಾಸದ ಮೇಲೆ ಇತ್ತೀಚಿಗೆ SIT ಅಧಿಕಾರಿಗಳು ದಾಳಿ ಮಾಡಿ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಹೌದು ವಿರೋಧಿಗಳನ್ನು ಹತ್ತಿಕ್ಕಲು ಎಚ್ಐವಿ ಸೋಂಕಿತ ಮಹಿಳೆಯರನ್ನು ಹನಿಟ್ರ್ಯಾಪ್ಗೆ ಶಾಸಕ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಇದೀಗ, ಶಾಸಕನ ಮನೆಯಲ್ಲಿ ಸಿಕ್ಕ ಲ್ಯಾಪ್ಟಾಪ್ ಮತ್ತು ಪೆನ್ಡ್ರೈವ್ನಲ್ಲಿ ಬಿಜೆಪಿ ಸೇರಿ ವಿವಿಧ ರಾಜಕೀಯ ನಾಯಕರ ಅಶ್ಲೀಲ ವಿಡಿಯೊ ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಿದ SIT ಅಧಿಕಾರಿಗಳು ಶಾಸಕ ಮುನಿರತ್ನ ಮನೆ ಮೇಲೆ ಸೆ.28ರಂದು ದಾಳಿ ನಡೆಸಿ, ಲ್ಯಾಪ್ಟಾಪ್ ಮತ್ತು ಪೆನ್ಡ್ರೈವ್ ಸೇರಿ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಅವುಗಳನ್ನು ಪರಿಶೀಲನೆ ಮಾಡಿದ ವೇಳೆ ಹಲವು ಅಧಿಕಾರಿಗಳು ಹಾಗೂ ರಾಜಕಾರಣಿಗಳ ಖಾಸಗಿ ವಿಡಿಯೊಗಳು ಸಿಕ್ಕಿವೆ ಎನ್ನಲಾಗಿದೆ. ಹನಿಟ್ರ್ಯಾಪ್ ಮಾಡಲು ಈ ವಿಡಿಯೊಗಳನ್ನು ಚಿತ್ರೀಕರಣ ಮಾಡಿರಬಹುದು ಎಂದು ಶಂಕಿಸಲಾಗಿದೆ.…
ಚಿತ್ರದುರ್ಗ : ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನ ಎದುರಿಸಲಿ. ಕ್ಲೀನ್ ಚಿಟ್ ಸಿಕ್ಕರೆ ಮತ್ತೆ ಸಿಎಂ ಆಗಲಿ ನಮ್ಮ ಅಭ್ಯಂತರ ಇಲ್ಲ. ಸಿದ್ದರಾಮಯ್ಯ ಎಲ್ಲರಂತಲ್ಲ ಎಂಬ ಮಾತಿನಂತೆ ಇರಲಿ ಎಂದು ಹೇಳುವ ಮೂಲಕ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆಯುವೆ ಎಂದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಟಾಂಗ್ ಕೊಟ್ಟಿದ್ದಾರೆ. ಇಂದು ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಒಂದು ತಪ್ಪು ಮಾಡಲು ಹೋಗಿ ಹತ್ತಾರು ತಪ್ಪು ಮಾಡುತ್ತಿದ್ದಾರೆ. ತಮ್ಮ ಕಾಲ ಮೇಲೆ ತಾವೇ ಕಲ್ಲು ಹಾಕಿಕೊಂಡು ಗಾಯ ಮಾಡಿಕೊಳ್ಳುತ್ತಿದ್ದಾರೆ. ಆತ್ಮಸಾಕ್ಷಿ ಅನ್ನೋದಕ್ಕಿಂತ ನೈತಿಕತೆ ಸಹ ದೊಡ್ಡದು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನ ಎದುರಿಸಲಿ. ಕ್ಲೀನ್ ಚಿಟ್ ಸಿಕ್ಕರೆ ಮತ್ತೆ ಸಿಎಂ ಆಗಲಿ ನಮ್ಮ ಅಭ್ಯಂತರ ಇಲ್ಲ ಎಂದು ಅವರು ತಿಳಿಸಿದರು. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ಶೀಘ್ರ ಬಿಡುಗಡೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನ…













