Author: kannadanewsnow05

ಬೆಂಗಳೂರು : ಆದಾಯ ಮೀರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಕೇಸ್ ಅನ್ನು ರಾಜ್ಯ ಸರ್ಕಾರ ಹಿಂಪಡೆದ ವಿಚಾರವನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಿಚಾರಣೆ ನಡೆಸಲಿದೆ. ಸರ್ಕಾರದ ಸಮ್ಮತಿ ಪಡೆದಿದ್ದನ್ನು ಪ್ರಶ್ನಿಸಿ ಸಿಬಿಐ ಅರ್ಜಿ ಸಲ್ಲಿಸಿದೆ. ಅಲ್ಲದೆ ಸಿಬಿಐ ಜೊತೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಕೂಡ ವಿಚಾರಣೆ ನಡೆಸಲಿದೆ.ಅರ್ಜಿ ಕುರಿತಂತೆ ಹೈಕೋರ್ಟ್ ನ್ಯಾ. ಕೆ ಸೋಮಶೇಖರ್, ನ್ಯಾ. ಉಮೇಶ್ ಹಾಗೂ ನ್ಯಾ. ಅಡಿಗರ ಪೀಠ  ಅರ್ಜಿ ವಿಚಾರಣೆ ನಡೆಸಲಿದ್ದಾರೆ. ಸಿಬಿಐ ತನಿಖೆಗೆ ಸರ್ಕಾರದ ಸಮ್ಮತಿ ಪಡೆದಿದ್ದು ಪ್ರಶ್ನಿಸಿ ಸಿಬಿಐ ಅರ್ಜಿ ಸಲ್ಲಿಸಿದ್ದು, ಸಿಬಿಐ ಹಾಗೂ ಯತ್ನಾಳ್ ಅರ್ಜಿ ವಿಚಾರಣೆಯನ್ನು ಎಂದು ಹೈಕೋರ್ಟ್ ನಡೆಸಲಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಭಾಗಿಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ…

Read More

ಬೆಂಗಳೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಮತಗಳನ್ನು ನೀಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಒಂದು ವೇಳೆ ಕಾಂಗ್ರೆಸ್ ಪಕ್ಷ ಸೋತರೆ ಐದು ಗ್ಯಾರಂಟಿ ಯೋಜನೆಗಳು ಮುಂದಿನ ದಿನಗಳಲ್ಲಿ ರದ್ದಾಗಲಿವೆ ಎಂಬ ಶಾಸಕ ಹೇಳಿಕೆಗೆ ಮಾರಿ ಸಚಿವ ಎಂಪಿ ರೇಣುಕಾಚಾರ್ಯ ಕಿಡಿ ಕಾರಿದು ಇವರು ಜನರಿಗೆ ಬ್ಲಾಕ್ ಮೇಲ್ ಮಾಡಲು ಹೊರಟಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು,ಜನರಿಗೆ ಬ್ಲಾಕ್ ಮೇಲ್ ಮಾಡಲು ಹೊರಟಿದ್ದಾರೆ. ಚುನಾವಣೆ ಪೂರ್ವದಲ್ಲಿ ಐದು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದರು. ಇನ್ನು ಬ್ರಹ್ಮಲೋಕದಲ್ಲಿ ತೇಲಾಡುತ್ತಿದ್ದಾರೆ.ಆದರೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿಲ್ಲ. ಶಕ್ತಿ ಯೋಜನೆಯ ಗ್ರಾಮೀಣ ಭಾಗಗಳಲ್ಲಿ ಬಸ್ಸುಗಳೇ ಇಲ್ಲ. ಶೇಕಡ 80 ರಷ್ಟು ಮಹಿಳೆಯರಿಗೆ ಅನುಕೂಲವಾಗಿಲ್ಲ. ಮಹಾಲಕ್ಷ್ಮಿ ಯೋಜನೆ ಅಡಿಯಲ್ಲಿ ಶೇಕಡ 60ರಷ್ಟು ಮಹಿಳೆಯರಿಗೆ ಇನ್ನೂ ಹಣ ತಲುಪಿಲ್ಲ ಎಂದು ಆಕ್ರೋಶ ಹೊರ ಹಾಕಿದರು. ಒಂದು ಚುನಾವಣೆ ಸಂದರ್ಭದಲ್ಲಿ ಆಮಿಷಗಳನ್ನು ಒಡ್ಡಲು ಹೊರಟಿದ್ದಾರೆ. ಈ ರಾಜ್ಯದ ಜನ ಬಹಳ ಪ್ರಜ್ಞಾವಂತ ಮತದಾರರಿದ್ದಾರೆ.ದೇಶದಲ್ಲಿ ಮತ್ತೊಮ್ಮೆ ಮಗದೊಮ್ಮೆ…

Read More

ಬೆಳಗಾವಿ : ಮದುವೆಯಾಗಿ ಒಂದು ತಿಂಗಳಾಗಿತ್ತು ಅಷ್ಟೇ ಆದರೆ ಹೆಂಡತಿ ಪ್ರಿಯಕರ ನೊಂದಿಗೆ ಪರಾರಿಯಾಗಿದ್ದಳು. ಈ ವೇಳೆ ಪ್ರಿಯಕರೊಂದಿಗೆ ಹೆಂಡತಿ ಚೆನ್ನಾಗಿರುವುದನ್ನು ಸಹಿಸದ ಪತಿ ಇಬ್ಬರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಯಾಸಿನ ಬಾಗೊಡೆ (21) ಹಾಗೂ ಹೀನಾಕೌಸರ್ ಸುದಾರಾಣೆ (19) ಕೊಲೆಯಾದ ಜೋಡಿಯಾಗಿದ್ದಾರೆ. ತೌಫಿಕ್ ಕ್ಯಾಡಿ (24) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇನ್ನು ಇಬ್ಬರ ಮೇಲೆ ಹಲ್ಲೆ ಮಾಡುವ ವೇಳೆ ಬಿಡಿಸಲು ಬಂದಿದ್ದ ತಾಯಿ ಅಮಿನಾಬಾಯಿ ಬಾಗೂಡ ಹಾಗೂ ಮಾವ ಮುಸ್ತಫಾ ಮುಲ್ಲಾನ ಮೇಲು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾದ ಈ ಇಬ್ಬರನ್ನು ಮಿರಜ್ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಬಲ್ ಮರ್ಡರ್ ಮಾಡಿದ ಆರೋಪಿ ತೌಫಿಕ್ ಸ್ಥಳದಿಂದ ಪರಾರಿ ಆಗಿದ್ದಾನೆ. ತೌಫಿಕ್ ಹಾಗೂ ಹೀನಾ ಕೌಸರ್‌ಳಿಗೆ ಕಳೆದ 4 ತಿಂಗಳ ಹಿಂದೆ ಮದುವೆಯಾಗಿತ್ತು. ಮದುವೆಯಾಗಿ ಕೇವಲ 1 ತಿಂಗಳಿಗೆ (30 ದಿನಗಳು) ಹೆಂಡತಿ ಹೀನಾ ಕೌಸರ್…

Read More

ರಾಯಚೂರು : ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಒಂದೇ ದಿನದಲ್ಲಿ ಇಬ್ಬರು ಮಕ್ಕಳ ಮೇಲೆ ದಾಳಿ ನಡೆಸಿ ಗಂಭೀರವಾದಂತಹ ಗಾಯಗೊಳಿಸಿವೆ ಎಂದು ಹೇಳಲಾಗುತ್ತಿದೆ.ಬಾಲಕ ಅಖಿಲ್ ಹಾಗೂ ಬಾಲಕಿ ಜೋಯ ಫಾರೂಕಿ ಎಂಬ ಮಕ್ಕಳ ಮೇಲೆ ದಾಳಿ ನಾಯಿಗಳು ದಾಳಿ ನಡೆಸಿವೆ. ಒಂದೇ ದಿನ ಇಬ್ಬರು ಮಕ್ಕಳ ಮೇಲೆ ದಾಳಿ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿವೆ.ಚಾಕ್ಲೆಟ್ ತರಲು ಹೋದ ಬಾಲಕನ ಮೇಲೆ ನಾಯಿ ಒಂದು ದಾಳಿ ನಡೆಸಿದ್ದು ಬಾಲಕನ ಬಾಯಿ ಮತ್ತು ಕೆನ್ನೆಗೆ ಗಂಭೀರವಾದಂತಹ ಗಾಯಗಳಾಗಿವೆ.ತಕ್ಷಣ ಬಾಲಕನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೇ ರೀತಿ ಶಾಲೆಯಿಂದ ವಾಪಸ್ ಬರುತ್ತಿದ್ದ ಬಾಲಕಿಯ ಮೇಲು ಕೂಡ ಬೀದಿ ನಾಯಿ ದಾಳಿ ನಡೆಸಿದ್ದು ಮಕ್ಕಳ ಹೀನಾಯ ಸ್ಥಿತಿ ಕಂಡು ಹೆತ್ತವರು ಇದೀಗ ಕಣ್ಣೀರು ಸುರಿಸುತ್ತಿದ್ದಾರೆ. ಮಂಗಳವಾರ ಪೇಟೆ ನಿವಾಸಿ ಅಖಿಲ್ ಈ ವೇಳೆ ಗಾಯಗಳಾಗಿದೆ ಇಂದಿರಾನಗರ ನಿವಾಸಿ ಜೋಯಾ ಫಾರೂಕಿಯು ಗಾಯಗಳಾಗಿವೆ ಚಿಕಿತ್ಸೆ ನೀಡಲಾಗುತ್ತಿದೆ.

Read More

ಚಿತ್ರದುರ್ಗ : ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಮರಕ್ಕೆ ಕಾರುಡಿಕ್ಕಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಂಭೀರವಾದಂತಹ ಗಾಯಗಳಾಗಿವೆ.ಕಾರಿನಲ್ಲಿ ಇದ್ದ ವೆಂಕಟೇಶ್ (50) ಇನ್ನೊಬ್ಬ ವ್ಯಕ್ತಿಯಾದ ವೆಂಕಟೇಶ್ (48) ಸಾವನಪ್ಪಿದ್ದಾರೆ. ಮೃತರು ಚಳ್ಳಕೆರೆ ತಾಲೂಕಿನ ಜನೆನಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಇನ್ನೊರ್ವ ವ್ಯಕ್ತಿಯಾದ ಗಾಯಾಳು ಕಿಶೋರ್ನನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರು, ಚಿಕ್ಕಮಗಳೂರು ಹಾಸನ್ ಹಾಗೂ ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಮಂಡ್ಯದ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಇ.ಇ ಆಗಿರುವ ಅಧಿಕಾರಿ ಹರ್ಷ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ ನಡೆಸಿದೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ ಮೇಲೆ ಕೂಡ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಮಂಡ್ಯ ಜಿಲ್ಲೆಯಲ್ಲಿರುವ ಸಂಬಂಧಿಕರ ಮನೆಗಳ ಮೇಲು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಮಂಡ್ಯದ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ ನಾಗಮಂಗಲದಲ್ಲಿರುವ ಫಾರ್ಮ ಹೌಸ್ ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅದೇ ರೀತಿಯಾಗಿ ಚಿಕ್ಕಮಗಳೂರು ಹಾಸನದಲ್ಲೂ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ಮನೆ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲಿ ನೆಡೆಸುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಫುಡ್ ಇನ್ಸ್ಪೆಕ್ಟರ್ ಜಗನ್ನಾಥ್ ಅವರ ನಿವಾಸ ಹಾಗೂ ಕಚೇರಿಯ ಮೇಲು ಕೂಡ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಅಲ್ಲದೆ ಜಗನ್ನಾಥ ಸಹೋದರ ಕಿರಣ್ ನಿವಾಸ ಮೇಲು ಅಧಿಕಾರಿಗಳು…

Read More

ಮೆಕ್ಸಿಕೋ :ಮೆಕ್ಸಿಕೋದಲ್ಲಿ ಭೀಕರ ಅಪಘಾತ ಸಂಭವಿಸಿ 19 ಜನ ದುರ್ಮರಣ ಹೊಂದಿದ್ದಾರೆ. ಡಬಲ್ ಡೆಕ್ಕರ್ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ 19 ಜನರು ಸಾವನಪ್ಪಿದ್ದು 22 ಜನರಿಗೆ ಗಂಭೀರವಾದಂತಹ ಗಾಯಗಳಾಗಿವೆ. ಡಿಕ್ಕಿ ರಬಸಕೆ ವಾಹನಗಳ ನಡುವೆ ಬೆಂಕಿ ಹತ್ತಿಕೊಂಡು ಈ ದುರಂತ ಸಂಭವಿಸಿದೆ ವಾಯುವ್ಯ ಮೆಕ್ಸಿಕೋದ ಸೀನಾಲೋವ ಎಂಬಲ್ಲಿ ಈ ದುರಂತ ಸಂಭವಿಸಿದೆ. ಹತ್ತೊಂಬತ್ತು ಜನರು ಸಜೀವ ದಹನ ಹೊಂದಿದ್ದು, 22 ಜನರು ಗಾಯಗಿಂಡಿದ್ದಾರೆ ಎಂದು ಸಿನಾಲೋವಾ ರಾಜ್ಯದ ಅಟಾರ್ನಿ ಜನರಲ್ ಸಾರಾ ಕ್ವಿನೋನೆಜ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದರು, ಅವಶೇಷಗಳನ್ನು ಗುರುತಿಸಲು ಸಮಯ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.ಪಶ್ಚಿಮ ರಾಜ್ಯದ ಜಲಿಸ್ಕೋದ ಗ್ವಾಡಲಜರಾ ನಗರದಿಂದ ಸಿನಾಲೋವಾದ ಲಾಸ್ ಮೋಚಿಸ್‌ಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ನ ಸುಟ್ಟ ಅವಶೇಷಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿರುವುದು ಕಂಡುಬಂದಿದೆ. ಸುಮಾರು 50 ಜನರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಸಿನಾಲೋವಾ ನಾಗರಿಕ…

Read More

ಬೆಂಗಳೂರು : ಯಶಸ್ವಿನಿ ಯೋಜನೆಯಡಿಯ ಫಲಾನುಭವಿಗಳಿಗೆ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗಳಿಗೆ ವಾರದೊಳಗೆ ಬಿಲ್ ಪಾವತಿಸುವಂಥ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ಅದರ ಜೊತೆಯಲ್ಲೇ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ರಾಜಣ್ಣ ತಿಳಿಸಿದ್ದಾರೆ. ಸದ್ಯದಲ್ಲೇ ಯಶಸ್ವಿನಿ ಚಿಕಿತ್ಸಾ ದರಗಳನ್ನು ಆಯುಷ್ಮಾನ್ ಭಾರತ್ ಅಥವಾ ಆರೋಗ್ಯ ಕರ್ನಾಟಕ ಯೋಜನೆಗಳಲ್ಲಿ ನೀಡಲಾಗುವ ಚಿಕಿತ್ಸಾ ದರಗಳಿಗೆ ತತ್ಸಮನಾಗಿ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ. ಯಶಸ್ವಿನಿ ಯೋಜನೆಯಡಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದ ಒಂದು ವಾರದೊಳಗೆ ಬಿಲ್‌ ಪಾವತಿ ವ್ಯವಸ್ಥೆ ಜಾರಿಗೊ ಳಿಸ ಲಾಗಿದೆ. ಹಾಗೆಯೇ ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರ ಸರಕಾರದ ‘ಆಯು ಷ್ಮಾನ್‌ ಭಾರತ್‌- ಆರೋಗ್ಯ ಕರ್ನಾಟಕ’ ಯೋಜನೆಯ ಚಿಕಿತ್ಸಾ ದರಕ್ಕೆ ಸಮಾ ನವಾಗಿ ಪರಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೆ.ಎನ್‌.ರಾಜಣ್ಣ ಹೇಳಿದರು. ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರದ ‘ಆಯುಷ್ಮಾನ್‌ ಭಾರತ್‌- ಆರೋಗ್ಯ ಕರ್ನಾಟಕ’ ಯೋಜನೆಯ ದರಕ್ಕೆ ಸಮಾನವಾಗಿ ಪರಿಷ್ಕರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಖಾಸಗಿ ಆಸ್ಪತ್ರೆಗಳು ಸಮ್ಮತಿಸಿವೆ.…

Read More

ಬೆಂಗಳೂರು : ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಸಿ. ಎನ್ ಮಂಜುನಾಥ್ ಅಧಿಕಾರವಧಿ ಇಂದು ಮುಕ್ತಾಯಗೊಂಡಿದ್ದು ಇಂದು ಮುಖ್ಯಮಂತ್ರಿ ಅವರಿಂದ ನೂತನ ನಿರ್ದೇಶಕರ ಆಯ್ಕೆ ಬಗ್ಗೆ ಅಂತಿಮ ನಿರ್ಧಾರಗೊಳ್ಳಲಿದೆ. ಇಂದು ಅಧಿಕೃತವಾಗಿ ನಿರ್ಧರಿಸಿ ಆಯ್ಕೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ತಿಳಿಸಲಿದ್ದಾರೆ ಎಂದು0 ತಿಳಿದುಬಂದಿದೆ. ಹೃದ್ರೋಗ ವೈದ್ಯಕೀಯ ಕ್ಷೇತ್ರದಲ್ಲಿ ಅಗಾಧ ಸಾಧನೆ ಮಾಡಿದ ಡಾ.ಸಿ.ಎನ್.ಮಂಜುನಾಥ್ ಈ ನಾಡು ಕಂಡ ಶ್ರೇಷ್ಠ ಮಟ್ಟದ ಹೃದ್ರೋಗ ತಜ್ಞರು. ಕಳೆದ ಬಾರಿ ಜಯದೇವ ಆಸ್ಪತ್ರೆ ನಿರ್ದೇಶಕರ ಅವಧಿ ಮುಗಿಯುತ್ತಿದೆ ಅಂದಾಗ ಸಾವಿರಾರು ರೋಗಿಗಳು ಆತಂಕಗೊಂಡಿದ್ದರು, ಸಿಬ್ಬಂದಿ ಕಣ್ಣೀರಿಟ್ಟಿದ್ದರು. ಆದರೆ ಆಗಿನ ಬಿಜೆಪಿ ಸರ್ಕಾರ ಇವರ ಸೇವೆಯನ್ನು ಒಂದು ವರ್ಷಗಳ ಕಾಲ ವಿಸ್ತರಿಸಿತ್ತು. ಆದರೆ ಈಗಿನ ಸರ್ಕಾರಕ್ಕೆ ಅಂತಹ ಯಾವ ಆಲೋಚನೆಯೂ ಇಲ್ಲದಿರುವುದು ಸ್ಪಷ್ಟವಾಗಿದೆ. ಡಾ.ಸಿ.ಎನ್.ಮಂಜುನಾಥ್ ಅವರ ಅವಧಿ ಇಂದು ಮುಕ್ತಾಯಗೊಳ್ಳಲಿದೆ. ಸರ್ಕಾರವೂ ಮಂಜುನಾಥ್ ಅವರ ಅವಧಿಯನ್ನ ಮುಂದುವರೆಸುವು ನಿರ್ಧಾರದಿಂದ ಹಿಂದೆ ಸರಿದಿದ್ದು ಹೊಸ ನಿರ್ದೇಶಕರ ಆಯ್ಕೆಗೆ ಪತ್ರಿಕಾ ಪ್ರಕಟನೆಯ ಮೂಲಕ ಅರ್ಜಿ ಸಲ್ಲಿಕೆಗೆ ತಿಳಿಸಿತ್ತು. ಇದರಂತೆ ನಿನ್ನೆ…

Read More

ಬೆಂಗಳೂರು : ಮಲ ಹೊರುವ ಪದ್ಧತಿ ನಿಷೇಧವಿದ್ದರೂ 1993 ರಿಂದ ಇಲ್ಲಿವರೆಗೆ ರಾಜ್ಯದಲ್ಲಿ ಒಟ್ಟು 134 ಪ್ರಕರಣಗಳು ದಾಖಲಾಗಿದ್ದು, ಏಳುಪ್ರಕರಣಗಳಲ್ಲಿ ದೋಷಿಗಳಿಗೆ ಶಿಕ್ಷೆಯಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಮನುಷ್ಯರಿಂದ ಮಲಗುಂಡಿ ಸ್ವಚ್ಛಗೊಳಿ ಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ -2013ರ ನಿಯಮಗಳನ್ನು ರಾಜ್ಯದಲ್ಲಿಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾ‌ರ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿದ್ದವು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಎಸ್.ವಿ. ಕಲಾವತಿ ಅವರ ಅನುಪಾಲನಾ ವರದಿಯನ್ನು ನ್ಯಾಯಪೀಠಕ್ಕೆಒದಗಿಸಿದರು. ಈವರದಿ ದಾಖಲಿಸಿಕೊಂಡ ನ್ಯಾಯಪೀಠ, ಸರ್ಕಾರದ ವರದಿಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿತು. ರಾಜ್ಯ ಸರ್ಕಾರ ನಡೆಸಿದ ಸಮೀಕ್ಷೆಯಲ್ಲಿ ಶೌಚಗುಂಡಿ ಸ್ವಚ್ಛಗೊಳಿಸುವ 7,483 ಕಾರ್ಮಿ ಕರನ್ನು ಗುರುತಿಸಲಾಗಿದೆ. ಕೇಂದ್ರ ಸರ್ಕಾರ…

Read More