Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ಕರ್ನಾಟಕ ರಾಜ್ಯ ರಾಜಕಾರಣದ ಇತಿಹಾಸವನ್ನು ತಿರುಗಿ ನೋಡಿದಾಗ ಹಲವು ರಾಜಕಾರಣಿಗಳು ಈ ಒಂದು ಸಿಡಿ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಅವರು ಯಾರೆಂದು ಎಲ್ಲರಿಗೂ ಗೊತ್ತಿರುವ ವಿಷಯವೇ. ಹಾಗಾಗಿ ಅವರ ಹೆಸರು ಹೇಳುವ ಅವಶ್ಯಕತೆ ಇಲ್ಲ. ಆದರೆ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಮುಸ್ಲಿಂ ಮುಖಂಡರು ನಿಮ್ಮ ಸಿಡಿ ಕೂಡ ಬಿಡುಗಡೆ ಮಾಡುವುದು ಗ್ಯಾರಂಟಿ ಎಂದು ಎಚ್ಚರಿಕೆ ನೀಡಿದ್ದಾರೆ. ಹೌದು ನಾಳೆ ವಿಜಯಪುರದಲ್ಲಿ ‘ವಕ್ಫ್ ಹಠಾವೋ ದೇಶ ಬಚಾವೋ’ ಆಂದೋಲನ ಪ್ರತಿಭಟನೆಗೆ ಯತ್ನಾಳ್ ಕರೆ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಮುಸ್ಲಿಂ ಮುಖಂಡರು, ನಿಮ್ಮ ರಾಜಕಾರಣ ಏನು ಇದೆಯೋ ಅದನ್ನು ಮಾಡಿಕೊಂಡು ಹೋಗಿ. ಇಲ್ಲದಿದ್ದರೆ ನವೆಂಬರ್ 6ರಂದು ನಿಮ್ಮ ಸಿಡಿ ಬಿಡುಗಡೆ ಮಾಡುವುದು ಗ್ಯಾರಂಟಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವಾಗಿ ಇಂದು ಮುಸ್ಲಿಂ ಮುಖಂಡರಾದ ಎಸ್ ಎಸ್ ಖಾದ್ರಿ ಅವರು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ತಿ…ಮುಚ್ಚಿಕೊಂಡು ರಾಜಕಾರಣ ಮಾಡಬೇಕು. ಇಲ್ಲದಿದ್ದರೆ ನವೆಂಬರ್…
ಉಡುಪಿ : ಮದರಸ ಹಾಸ್ಟೆಲ್ನಲ್ಲಿ ರಾತ್ರಿ ವೇಳೆ ಬಾತ್ರೂಂನಲ್ಲಿ ಮದರಸಾ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಉಡುಪಿ ಜಿಲ್ಲೆಯ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ರಂಗನಕೆರೆಯಲ್ಲಿ ನಡೆದಿದೆ. ಹೌದು ಸಿದ್ದಾಪುರ ಮೂಲದ ರಿಹಾನ್ ಬೇಗಮ್ ಎನ್ನುವವರ ಪುತ್ರ ಮಹಮ್ಮದ್ ಜಹೀದ್ (12) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ತಿಳಿಬಂದಿದೆ.ಮೃತ ಮಹಮ್ಮದ್ ಜಹೀದ್ ಕಳೆದ ನಾಲ್ಕು ತಿಂಗಳಿಂದ ಮದರಸ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದ. ಹೇರಾಡಿ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ. ರಜೆಯಲ್ಲಿ ಮನೆಗೆ ತೆರಳಿದ್ದ ಜಹೀದ್ ರಜೆ ಮುಗಿಸಿ ಹಾಸ್ಟೆಲ್ ಮರಳಿದ್ದ. ರಾತ್ರಿ ವೇಳೆ ಮದರಸ ಹಾಸ್ಟೆಲ್ ಬಾತ್ರೂಮಿನಲ್ಲಿ ನೇಣಿಗೆ ಶರಣಾಗಿದ್ದಾನೆ.ಸದ್ಯ ಮಗನ ಸಾವಿನ ಕುರಿತು ತಾಯಿ ರಿಹಾನ ಬೇಗಂ ಸಂಶಯ ವ್ಯಕ್ತಪಡಿಸಿದ್ದಾರೆ.ಘಟನೆ ಕುರಿತಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ನಮ್ಮ ಜೊತೆ ಸಭೆ ನಡೆಸಿ ಒಂದು ತೀರ್ಮಾನಕ್ಕೆ ಬರದೇ ಹೋದರೆ, ಮುಂಬರುವ ದಿನಗಳಲ್ಲಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಲಿಂಗಾಯತ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೀಸಲಾತಿ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಅಕ್ಟೋಬರ್ 15ಕ್ಕೆ ಬನ್ನಿ ಮಾತನಾಡೋಣ ಎಂದು ದಿನಾಂಕ ಕೊಟ್ಟಿದ್ದರು.ಆದರೆ, ಕಳೆದ ಮೂರು ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ನಮಗೆ ಮಾಹಿತಿ ನೀಡಿದ್ದು, 15ರಂದು ಮುಖ್ಯಮಂತ್ರಿಗಳು ದೆಹಲಿಗೆ ಹೋಗುತ್ತಾರೆ ಎಂದು ಹೇಳಿದ್ದಾರೆ. ಈ ವೇಳೆ ಮತ್ತೊಂದು ದಿನಾಂಕ ನೀಡುವಂತೆ ಕೇಳಿದ್ದೆವು. ಆದರೆ, ಇದುವರೆಗೂ ಯಾವುದೇ ದಿನಾಂಕ ಕೊಡದೆ ವಿಳಂಬ ಮಾಡುತ್ತಿದ್ದಾರೆ. ಆದರೆ ನಮ್ಮ ವಕೀಲರು ಅವರು ದಿನಾಂಕ ಕೊಡಲಿ ಬಿಡಲಿ ಅಕ್ಟೋಬರ್ 18ರಂದು ದೆಹಲಿಗೆ ಹೋಗೋಣ ಅಲ್ಲಿ ಎಲ್ಲಿ ಯಾವ ಸ್ಥಳದಲ್ಲಿ ಭೇಟಿಯಾಗುತ್ತಾರೆ ನೋಡೋಣ ಒಂದು ವೇಳೆ ಭೇಟಿಯಾದಗದೆ ಹೋದರೆ…
ಬೆಂಗಳೂರು : ಇತ್ತೀಚ್ಚಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಪೊಲೀಸರು ಅಕ್ರಮಕ್ಕೆ ಭಾರತಕ್ಕೆ ನುಸುಳಿದ್ದ ಪಾಕಿಸ್ತಾನಿ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದರು.ಈ ವಿಚಾರವಾಗಿ ಪ್ರಿಯಾಂಕ ಖರ್ಗೆ ಅವರು ವಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದು, ನಿಮಗೆ ಅಲ್ಲಿ ಬಾರ್ಡರ್ ಮೆಂಟೇನ್ ಮಾಡೋಕೆ ಆಗ್ತಿಲ್ಲ, ನಮಗೆ ಇಲ್ಲಿ ಪಾಠ ಮಾಡ್ತೀರಾ? ಎಂದು ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆದ ವಿಚಾರವಾಗಿ, ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಭಯೋತ್ಪಾಕ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರಿಯಾಂಕ್ ಖರ್ಗೆ 10 ವರ್ಷದಿಂದ ಅವರದೇ ಸರ್ಕಾರ ಇತ್ತಲ್ವಾ? ಭಯೋತ್ಪಾದನೆ ನಿರ್ಮೂಲನೆಗೆ ಏನು ಮಾಡಿದ್ದಾರೆ? ಬೆಂಗಳೂರಿಗೆ ಪಾಕಿಸ್ತಾನಿಗಳು ಬರ್ತಾರೆ ಅಂದ್ರೆ, ಅವ್ರು ಎಲ್ಲಿಂದ ಬರ್ತಾರೆ? ನಿಮಗೆ ಅಲ್ಲಿ ಬಾರ್ಡರ್ ಮೆಂಟೇನ್ ಮಾಡೋಕೆ ಆಗ್ತಿಲ್ಲ. ನಮಗೆ ಇಲ್ಲಿ ಪಾಠ ಮಾಡ್ತೀರಾ? ಎಂದು ತಿರುಗೇಟು ನೀಡಿದ್ದಾರೆ.
ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬಳಿಕ, ವಾದ ಪ್ರತಿವಾದ ಆಲಿಸಿ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತು. ನಟ ದರ್ಶನ್ ಜಾಮೀನು ಅರ್ಜಿ ವಜಾ ಆದ ವಿಷಯ ತಿಳಿಯುತ್ತಿದ್ದಂತೆ ವಿಜಯಲಕ್ಷ್ಮಿ ಅವರು ಕಣ್ಣೀರು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಅತಿಯಾ ಜಾಮಿನ್ ಅರ್ಜಿ ವಜಾ ಆದ ಬೆನ್ನಲ್ಲೇ ಪ್ರತಿ ವಿಜಯಲಕ್ಷ್ಮಿ ಕಣ್ಣೀರು ಹಾಕಿದ್ದಾರೆ. ಬಳ್ಳಾರಿ ಖಾಸಗಿ ಹೋಟೆಲಲ್ಲಿ ತಂಗಿದ್ದ ಪ್ರತಿಮೆ ಜಯಲಕ್ಷ್ಮಿ ಕಾನೂನು ಹೋರಾಟದ ಬಗ್ಗೆ ವಕೀಲರ ಜೊತೆಗೆ ಚರ್ಚಿಸುತ್ತಿದ್ದಾರೆ. ಪ್ರತಿ ಬಾರಿ ನಟ ದರ್ಶನ್ ಅವರನ್ನು ಭೇಟಿ ಮಾಡಲು ವಿಜಯಲಕ್ಷ್ಮಿ ಅವರು ಜೈಲಿಗೆ ಆಗಮಿಸುತ್ತಿದ್ದರು. ಆದರೆ ಇವತ್ತು ಜೈಲಿಗೆ ಆಗಮಿಸದೆ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದರು. ದರ್ಶನ್ ಅವರನ್ನು ಭೇಟಿಯಾಗಲು ನಟ ಧನ್ವೀರ್ ಅವರು ಬಳ್ಳಾರಿ ಜೈಲಿಗೆ ಆಗಮಿಸಿದ್ದರು. ಇತ್ತ ದರ್ಶನ್ ಜಾಮೀನು ಅರ್ಜಿ ವಜಾ…
ಬೆಂಗಳೂರು : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದ ವಿಚಾರವಾಗಿ ಬಿಜೆಪಿಯು ಈ ಸರ್ಕಾರದ ಸಚಿವರು ಭಯೋತ್ಪಾದಕರು ಎಂದು ವಾಗ್ದಾಳಿ ನಡೆಸಿದೆ. ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇವಲ ಹಳೆ ಹುಬ್ಬಳ್ಳಿ ಗಲಭೆ ಅಷ್ಟೇ ಅಲ್ಲ ಸಿಟಿ ರವಿ, ವಿ.ಸೋಮಣ್ಣ ಪ್ರಕರಣವನ್ನು ಕೂಡ ಹಿಂಪಡೆದಿದ್ದೇವೆ. ಹಾಗಾದರೆ ಅವರೆಲ್ಲರೂ ಭಯೋತ್ಪಾದಕರ ಎಂದು ಕಿಡಿ ಕಾರಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 60 ಪ್ರಕರಣದ ಪೈಕಿ 43 ಪ್ರಕರಣವನ್ನು ವಾಪಸ್ ಪಡೆದಿದ್ದೇವೆ. ಎಲ್ಲವೂ ಕೂಲಂಕಷವಾಗಿ ಚರ್ಚಿಸಿ ತೀರ್ಮಾನ ಮಾಡಿ ವಾಪಸ್ ಪಡೆದಿದ್ದೇವೆ. ಇದರಲ್ಲಿ ತಪ್ಪೇನಿದೆ?. ವಿ.ಸೋಮಣ್ಣ ಅವರದು ನಾಲ್ಕೈದು ಕೇಸ್ ವಾಪಸ್ ಪಡೆದಿದ್ದೇವೆ. ಸಿ.ಟಿ.ರವಿ ಹಾಗೂ ಸುಕುಮಾರ್ ಶೆಟ್ಟಿ, ಮೈಸೂರು ಮಹಿಳಾ ಮೋರ್ಚಾ ಕೇಸ್ ವಾಪಸ್ ಪಡೆದಿದ್ದೇವೆ. ಇವರೆಲ್ಲರೂ ದೇಶದ್ರೋಹಿಗಳಾ?. ಇವರೆಲ್ಲರೂ ಭಯೋತ್ಪಾದನೆ ನಡೆಸುತ್ತಾರಾ?. ಏನಾದರೂ ಲಾಜಿಕ್ ಇರಬೇಕಲ್ವಾ? ಎಂದರು. ಹಿಂದಿನ ಸರ್ಕಾರದಲ್ಲಿ ಯಾರೆಲ್ಲ ಎಷ್ಟು ಕೇಸ್ ವಾಪಸ್ ಪಡೆದಿದ್ದಾರೆ ಪಟ್ಟಿ ಮಾಡಲಿ. ಯಡಿಯೂರಪ್ಪ ಸರ್ಕಾರ 100ಕ್ಕಿಂತ…
ಚಿತ್ರದುರ್ಗ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಯಶಂಕರ್ ಅವರು ವಜಾಗೊಳಿಸಿ ಆದೇಶ ಹೊರಡಿಸಿದ್ದರು. ಇನ್ನು ಈ ಒಂದು ವಿಚಾರವಾಗಿ ಮೃತ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋರ್ಟ್ ತೀರ್ಪು ಏನು ಕೊಟ್ಟಿದೆಯೊ ಆ ಆದೇಶವನ್ನು ಸ್ವಾಗತ ಮಾಡುತ್ತೇವೆ ಎಂದು ರೇಣುಕಾ ಸ್ವಾಮಿ ತಂದೆ ಕಾಶಿನಾಥಯ್ಯ ಹೇಳಿಕೆ ನೀಡಿದರು. ಇನ್ನು ಎಸ್.ಪಿ.ಪಿ ಪ್ರಸನ್ನ ಕುಮಾರ್ ಅವರ ಕುರಿತಾಗಿ, ಮೊದಲಿಂದನೂ ಅವರು ನಮಗೆ ಧೈರ್ಯ ಹೇಳಿದ್ದಾರೆ. ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಅವರ ಬಗ್ಗೆ ಕೂಡ ನಮಗೆ ಗೌರವವಿದೆ ಹಾಗಾಗಿ ಅವರಿಗೆ ಕೂಡ ನಾನು ಧನ್ಯವಾದ ತಿಳಿಸುತ್ತೇನೆ ಎಂದರು. ಇನ್ನು ರೇಣುಕಾ ಸ್ವಾಮಿ ಚಿಕ್ಕಪ್ಪ ಮಾತನಾಡಿ, ನ್ಯಾಯಾಂಗದ ಮೇಲೆ ಹೆಚ್ಚಿನ ಭರವಸೆ ಉಂಟಾಗಿದೆ. ಸಾಮಾನ್ಯ ಜನರಿಗೂ ನ್ಯಾಯ ಸಿಗುತ್ತೇ ಎನ್ನುವ ಭರವಸೆ ಇದೆ. ತಪ್ಪಿತಸ್ಥರು…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ನಟ ದರ್ಶನ್ ಹಾಗೂ A1 ಆರೋಪಿ ಆಗಿರುವಂತಹ ಪವಿತ್ರ ಗೌಡ ಜಾಮೀನು ಅರ್ಜಿ ವಜಾಗೊಳಿಸಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದ ನಟ ದರ್ಶನ್ ಹಾಗೂ ಪವಿತ್ರಗೌಡ ಇಬ್ಬರ ಜಾಮೀನು ಅರ್ಜಿ ಕೂಡ ಕೋರ್ಟ್ ವಜಾಗೊಳಿಸಿದೆ. ಜಾಮೀನು ಅರ್ಜಿ ವಜಾ ವಿಷಯ ತಿಳಿದಿದ್ದಂತೆ ಪವಿತ್ರ ಗೌಡ ಜೈಲಿನಲ್ಲಿ ಕಣ್ಣೀರು ಹಾಕಿದ್ದಾಳೆ. ಟಿವಿ ನೋಡಿ ಪವಿತ್ರ ಗೌಡ ಕಣ್ಣೀರು ಹಾಕಿದ್ದಾಳೆ ಎಂದು ತಿಳಿದು ಬಂದಿದೆ. ಇನ್ನು ನಟ ದರ್ಶನ್ ಅವರು ಸಲ್ಲಿಸಿದ ಜಾಮೀನು ಅರ್ಜಿ ಕೂಡ ಕೋರ್ಟ್ ವಜಾ ಗೊಳಿಸಿದೆ. ಹಾಗಾಗಿ ದರ್ಶನ್ ಪರ ವಕೀಲರು ನಾಳೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಬಳ್ಳಾರಿ ಜೈಲಿನಿಂದ ನಟ ದರ್ಶನ ಅವರು ಹೊರಗಡೆ ಬರುತ್ತಾರೆ…
ಬೆಂಗಳೂರು : ನಟ ದರ್ಶನ್ ತೂಗುದೀಪ ಜಾಮೀನು ಭವಿಷ್ಯ ಸೋಮವಾರ ಕೋರ್ಟ್ ನಿರ್ಧಾರ ಮಾಡಿದೆ. ದರ್ಶನ್ ಅವರ ಜಾರ್ಮಿನು ಅರ್ಜಿ ಸಂಬಂಧ ಬೆಂಗಳೂರಿನ 57 ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಾದ – ಪ್ರತಿವಾದ ನಡೆದ ನ್ಯಾಯಾಧೀಶರು ನಟ ದರ್ಶನ್ಗೆ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿ. ವಿ. ನಾಗೇಶ್ ಹಾಗೂ ಪೋಲೀಸರ ಪರ ವಕೀಲ ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಿದರು. ಈ ನಡುವೆ ಜಾಮೀನು ಸಿಗದಿರುವ ಕಾರಣಕ್ಕೆ ದರ್ಶನ್ ಪರ ವಕೀಲರು ನಾಳೆ ಹೈಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ಬಳ್ಳಾರಿ ಕಾರಾಗೃಹದಲ್ಲಿರುವ ದರ್ಶನ್ ಅವರಿಗೆ ಇದರಿಂದ ಬೇಸರವಾಗಿರುವುದು ಸುಳ್ಳಲ್ಲ. ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಆಗಸ್ಟ್ 29 ರಿಂದ ಬಳ್ಳಾರಿ ಕೇಂದ್ರ ಕಾರಾಗೃಹದ ಹೈಸೆಕ್ಯೂರಿಟಿ ಸೆಲ್ನಲ್ಲಿ ಬಂಧನದಲ್ಲಿ ಇಡಲಾಗಿದೆ. ನಾಳೆಯೊಳಗೆ ಜಾಮೀನು ಸಂಬಂಧ ಪ್ರಕ್ರಿಯೆಗಳನ್ನು ದರ್ಶನ್ ಪತ್ನಿ ಮಾಡಲಿದ್ದಾರೆ ಎನ್ನಲಾಗಿದೆ. ಅದು ಅಲ್ಲದೆ ವಿಚಾರಣೆಯ ವೇಳೆ ಪ್ರಕರಣದ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.ಮೂರು ತಿಂಗಳ ಬಳಿಕ ಸಚಿವ ಬಿ ನಾಗೇಂದ್ರ ಅವರಿಗೆ ಕೋರ್ಟ್ ಜಾಮೀನು ನೀಡಿದೆ. 82ನೇ ಸಿಟಿ ಸಿವಿಲ್ ಕೋರ್ಟ್ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬಿ.ನಾಗೇಂದ್ರ ಅವರನ್ನು ಬಂಧಿಸಿದ್ದರು.ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಒಂದು ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಇಡಿ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿ ಕೋರ್ಟಿಗೆ ಸಲ್ಲಿಸಿದರು. ಬಳಿಕ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಇಡಿ ಅಧಿಕಾರಿಗಳು ಇತ್ತೀಚಿಗೆ ಸಚಿವ ಬಿ ನಾಗೇಂದ್ರ ಸೇರಿದಂತೆ ಈ ಒಂದು ಪ್ರಕರಣದಲ್ಲಿ…













