Author: kannadanewsnow05

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಲೋಕಸಭಾ ಚುನಾವಣೆ ಅಭ್ಯರ್ಥಿ ಗೋವಿಂದ ಕಾರಜೋಳ ಹಾಗೂ ಇತರೆ ನಾಯಕರ ಸಮ್ಮುಖದಲ್ಲಿ ಸಮನ್ವಯ ಸಭೆಯ ನಡೆಯಿತು. ಸಭೆಯ ಬಳಿಕ ನೋಡು ನೋಡುತ್ತಿದ್ದಂತೆ ಗಲಾಟೆ ನಡೆದು ಓರ್ವ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಹೌದು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಮನ್ವಯ ಸಭೆ ನಡೆಯಿತು ಸಭೆಯ ಬಳಿಕ ಅಭ್ಯರ್ಥಿ ಗೋವಿಂದ ಕಾರಜೋಳ್ ಅವರು ತೆರಳಿದಾಗ ಈ ವೇಳೆ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೌಷ್ಟಿ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಆಗಿದೆ. ಈ ವೇಳೆ ಪಾವಗಡ ಬಿಜೆಪಿ ಕಾರ್ಯಕರ್ತ ಚೈತನ್ಯ ಎನ್ನುವವರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪ ಕೇಳಿ ಬಂದಿದೆ. ಪಾವಗಡ ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಮಧು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧದ ಪೋಸ್ಟ್ ಹಿನ್ನೆಲೆಯಲ್ಲಿ ಈ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ.…

Read More

ನವದೆಹಲಿ : ಕಾಂಗ್ರೆಸ್ ಸೇರಿ ಎಲ್ಲಾ ವಿಪಕ್ಷಗಳ ಬ್ಯಾಂಕ್ ಅಕೌಂಟ್ ಅನ್ನು ಫ್ರೀಜ್ ಮಾಡಿದ್ದಾರೆ ಎಂದು ಇಂಡಿಯಾ ಒಕ್ಕೂಟದ ಮಹಾ ರ್‍ಯಾಲಿಯಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿದರು. ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟ ಕೇಂದ್ರ ಸರ್ಕಾರದ ವಿರುದ್ಧ ರ್ಯಾಲಿ ನಡೆಸುತ್ತಿದೆ. ಲೋಕಸಭಾ ಚುನಾವಣೆಗೆ ವೆಚ್ಚ ಮಾಡಲು ನಮ್ಮ ಬಳಿ ಹಣವೇ ಇಲ್ಲ. ಸಾಂವಿಧಾನಿಕ ಸಂಸ್ಥೆಗಳನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಐಟಿ ಇಡಿ ಸಿಬಿಐ ಪೊಲೀಸರನ್ನು ಬಳಸಿ ಚುನಾವಣೆ ನಡೆಸುತ್ತಿದೆ. ಚುನಾವಣೆಗೆ ಘೋಷಣೆಗೂ ಮೊದಲೇ ನಾಲ್ಕು ಸ್ಥಾನ ಗೆಲ್ಲುತ್ತೇವೆ ಅಂತಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಹೇಳಿಕೆಯನ್ನು ನೀಡುತ್ತಿದ್ದಾರೆ. ಯಾವ ಆಧಾರದಲ್ಲಿ 400 ಸ್ಥಾನ ಗೆಲ್ಲುವುದಾಗಿ ಬಿಜೆಪಿಯವರು ಹೇಳುತ್ತಾರೆ ಇಂಡಿಯಾ ಒಕ್ಕೂಟದ ಮಹಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ವಿಪಕ್ಷಗಳ ಬ್ಯಾಂಕ್ ಖಾತೆಯನ್ನು ಕೇಂದ್ರ ಸರ್ಕಾರ ಫ್ರೀಜ್ ಮಾಡಿದೆ. ಇದನ್ನೆಲ್ಲಾ ನೋಡಿದ್ರೆ ಮ್ಯಾಚ್ ಫಿಕ್ಸಿಂಗ್ ಆದಂತೆ ಆಗಿದೆ. ಈ ಚುನಾವಣೆ ಸಾಮಾನ್ಯ ಚುನಾವಣೆ…

Read More

ದಕ್ಷಿಣಕನ್ನಡ : ಕಾರಿನಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಮರ್ಧಾಳದಲ್ಲಿ ನಡೆದಿದೆ.ಮೃತರನ್ನು ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ವಿಠಲ ರೈ ಅವರು ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಡಿಕ್ಕಿ ಹೊಡೆದಿದೆ. ಕಾರನ್ನು ಚಾಲಕ ನಿಲ್ಲಿಸದೇ ಪರಾರಿಯಾಗಿದ್ದಾನೆ. ವಿಠಲ ರೈ ಸ್ಥಳದಲ್ಲೇ ಮೃತಪಟ್ಟಿದ್ದಾರೆ. https://kannadanewsnow.com/kannada/case-registered-against-rebel-bjp-leader-ks-eshwarappa-for-violating-model-code-of-conduct/ ವಿಷಯ ತಿಳಿಯುತ್ತಿದ್ದಂತೆ ಕಡಬ ಸರಕಾರಿ ಆಸ್ಪತ್ರೆಯ ಬಳಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ದಕ್ಷಿಣ ಕನ್ನಡ ಎಸ್​ಪಿ ಸ್ಥಳಕ್ಕೆ ಬರುವಂತೆ ಆಗ್ರಹಿಸಿದರು. ಮಧ್ಯರಾತ್ರಿ ಎರಡು ಗಂಟೆಯವರೆಗೂ ರಾಜ್ಯ ಹೆದ್ದಾರಿ ರಸ್ತೆ ತಡೆ ನಡೆಸಿದರು. ಪ್ರತಿಭಟನೆಯಲ್ಲಿ ನೂರಾರು ಜನರು ಸೇರಿದ್ದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಅರುಣ್ ಕುಮಾರ್…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕೃಷರ್ ಮಾಲಿಕನಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು ಶಾಸಕ ಭೈರತಿ ಬಸವರಾಜ್ ಸಹಾಯಕ ಅಳಿಯ ಹಾಗೂ ಕೃಷರ್ ಮಾಲೀಕರಾದಂತಹ ಲೋಕೇಶ್ ಎನ್ನುವವರ ಮನೆಯ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿ ಸುಮರು 1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಹೊಸೂರು ನಿವಾಸಿ ಲೋಕೇಶ್ ಮನೆಯ ಮೇಲೆ ಐಟಿ ಅಧಿಕಾರಿಗಳು ಇದೀಗ ದಾಳಿ ನಡೆಸಿದ್ದಾರೆ.ಇತ್ತೀಚಿಗೆ ತಮಿಳುನಾಡಿನ ಹೊಸೂರು ಚೆಕ್ ಪೋಸ್ಟ್ ನಲ್ಲಿ ಕ್ರಷರ್ ಮಾಲೀಕರಾಗಿರುವ ಲೋಕೇಶ್ ಅವರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ರೂಪಾಯಿಗಳ ಜೊತೆಗೆ ಸಿಗಿಬಿದ್ದಿದ್ದರು ಎಂದು ತಿಳಿದುಬಂದಿದೆ. ಈ ನೆಲೆಯಲ್ಲಿ ಇಂದು ಐಟಿ ಅಧಿಕಾರಿಗಳು ಅವರ ಮನೆಯ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೆ ಇವರು ಬೆಂಗಳೂರಿನಲ್ಲಿ ಕೆಆರ್ ಪುರಂ ಬಿಜೆಪಿ ಶಾಸಕರಾಗಿರುವ ಭೈರತಿ ಬಸವರಾಜ್ ಆಪ್ತ ಸಹಾಯಕ ಮಂಜುನಾಥ ಅವರ ಅಳಿಯ ಎಂದು ಹೇಳಲಾಗುತ್ತಿದೆ. ಇದೀಗ ಅವರ ಮನೆ ಮೇಲೆ…

Read More

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದ್ದೆ ಪ್ರಮುಖ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ ತಡ ಅದರಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯ ಜಾರಿಯಾದ ಬಳಿಕ ಮಹಿಳೆಯರು ಹೇಳದೆ ಕೇಳದೆ ಹೊರಟು ಹೋಗುತ್ತಿರುವ ಘಟನೆಗಳು ನಡೆಯುತ್ತಿವೆ. ಇದೀಗ ತವರಿಗೆ ಪತ್ನಿಯೊಬ್ಬಳು ಹೇಳದೆ ಕೇಳದೆ ತೆರಳಿರುವುದಕ್ಕೆ ಕುಪಿತಗೊಂಡ ಪತಿ ಕೆಎಸ್ಆರ್ಟಿಸಿ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ನಡೆದಿದೆ.ಹೌದು ಪತ್ನಿ ಫ್ರೀ ಬಸ್​ನಲ್ಲಿ ತವರಿಗೆ ಹೋಗಿದ್ದನ್ನ ಕಂಡು ಸಿಟ್ಟಿಗೆದ್ದ ಕುಡುಕ ಗಂಡ ಕೆಎಸ್​ಆರ್​ಟಿಸಿ (KSRTC) ಸಿಬ್ಬಂದಿ ಮೇಲೆ ಚಾಕು, ದೊಣ್ಣೆಯಿಂದ ಹಲ್ಲೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಉಚಿತ ಬಸ್ ಇದೆ ಎಂದು ತನಗೆ ಹೇಳದೆ ಪತ್ನಿ ತವರಿಗೆ ಹೊಗಿದ್ದಾಳೆ ಎಂದು ಚಿಕ್ಕಸಂದ್ರದ ನಾಗ ಎಂಬಾತ ಸಿಟ್ಟಿಗೆದ್ದು ರಂಪಾಟ ನಡೆಸಿದ್ದಾನೆ. ಮೊದಲು ಚಾಕು ಹಿಡಿದು ಹಲ್ಲೆ ನಡೆಸಲು ಯತ್ನಿಸಿದಾಗ ಸ್ಥಳೀಯರು ತಡೆದಿದ್ದಾರೆ. ಬಳಿಕ ದೊಣ್ಣೆ ಹಿಡಿದುಕೊಂಡು ಹಲ್ಲೆಗೆ ಮುಂದಾದಾಗ ಅಲ್ಲೇ ಇದ್ದ ವ್ಯಕ್ತಿಯೊಬ್ಬರು…

Read More

ಶಿವಮೊಗ್ಗ : ಮಕ್ಕಳಾಗಿಲ್ಲವೆಂದು ಪತಿ ಹಾಗೂ ಆತನ ಮನೆಯ ಕಡೆಯವರು ಕಿರುಕುಳ ನೀಡಿದ್ದರಿಂದ ಮನನೊಂದು ಮಹಿಳೆ ಒಬ್ಬರು ಆ ನೇಣು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಗಾಡಿಕೊಪ್ಪದಲ್ಲಿ ನಡೆದಿದೆ. https://kannadanewsnow.com/kannada/tcs-jobs-recruitment-of-newcomers-in-tcs-begins-ai-training-for-3-5-lakh-employees/ ಶಿವಮೊಗ್ಗದ ಗಾಡಿಕೊಪ್ಪದ ಮನೆಯಲ್ಲಿ ಅಶ್ವಿನಿ (31)ನೇಣಿಗೆ ಶರಣಾದ ಮಹಿಳೆ ಎಂದು ಹೇಳಲಾಗುತ್ತಿದ್ದು, ಮದುವೆಯಾಗಿ 5 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂದು ಪತಿ ಅಭಿಷೇಕ್ ಹಾಗೂ ಮನೆಯವರಿಂದ ಕಿರುಕುಳ ಆರೋಪ ಕೇಳಿಬಂದಿದೆ. ಹೀಗಾಗಿ ಘಟನೆ ಕುರಿತಂತೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೋಲಾರ : ಎರಡು ಬನಗಳನ್ನು ಹೊರತುಪಡಿಸಿ ಇದೀಗ ಕಾಂಗ್ರೆಸ್ ಹೈಕಮಾಂಡ್ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕೆ ವಿ ಗೌತಮ್ ಅವರ ಹೆಸರನ್ನು ಘೋಷಣೆ ಮಾಡಿದ್ದು ಇದೀಗ ಕೋಲಾರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ಕೆ ವಿ ಗೌತಮಗೂ ಗೋ ಬ್ಯಾಕ್ ಬಿಸಿ ತಟ್ಟಿದೆ ಎನ್ನಲಾಗುತ್ತಿದೆ. https://kannadanewsnow.com/kannada/bjp-trying-to-send-siddaramaiah-to-jail-like-kejriwal-m-venkaiah-naidu-lakshmanas-serious-allegations/ ಕೆವಿ ಗೌತಮ್ ಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಗೋ ಬ್ಯಾಕ್ ಪೋಸ್ಟ್ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು. ಸಾಮಾಜಿಕ ಜಾಲತಾಣದಲ್ಲಿ ಗೌತಮ್ ಗೋ ಬ್ಯಾಕ್ ಪೋಸ್ಟ್ ಹರಿದಾಡುತ್ತಿದೆ. ಸ್ಥಳೀಯರನ್ನು ಕಡೆಗಣಿಸಿ ಹೊರಗಿನವರಿಗೆ ಮನೆಯ ಹಾಕಿದ್ದಾರೆ ಎಂದು ಕಾರ್ಯಕರ್ತರು ಇದೀಗ ಆಕ್ರೋಶಗೊಂಡಿದ್ದಾರೆ. https://kannadanewsnow.com/kannada/breaking-nta-announces-nittt-result-heres-the-direct-link-to-check-the-result/ ಕಾಂಗ್ರೆಸ್ ಹೈಕಮಾಂಡ್ ನಡೆ ಖಂಡಿಸಿ ಕಾರ್ಯಕರ್ತರು ಗೋ ಬ್ಯಾಕ್ ಪೋಸ್ಟ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಹೈಕಮಾಂಡ್ ನಡೆಯಿಂದ ಬೇಸರಗೊಂಡಿದ್ದಾರೆ. ಇದೀಗ ಕೋಲಾರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಅಸಮಾಧಾನವಿದ್ದು ಹೀಗಾಗಿ ಇದೀಗ ಅಭ್ಯರ್ಥಿ ಕೆ ವಿ ಗೌತಮ್ ವಿರುದ್ಧ ಗೋ ಬ್ಯಾಕ್ ಪೋಸ್ಟ್ ಅಭಿಯಾನ ಆರಂಭಿಸಿದ್ದಾರೆ.

Read More

ಮೈಸೂರು : ಬಿಜೆಪಿ ತಮ್ಮ ವಿರೋಧಿಗಳನ್ನು ವ್ಯವಸ್ಥಿತವಾಗಿ ಮುಗಿಸಲು ಸಂಚು ರೂಪಿಸಿದೆ. ಹಾಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರೀತಿ ಸಿಎಂ ಸಿದ್ದರಾಮಯ್ಯರವರು ಜೈಲಿಗೆ ಕಳುಹಿಸಲು ಬಿಜೆಪಿಯ ತಿನಿಸುತ್ತಿದೆ ಎಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ‍ಅಭ್ಯರ್ಥಿ ಎಂ.ಲಕ್ಷ್ಮಣ ಗಂಭೀರ ‍ಆರೋಪ ಮಾಡಿದರು. https://kannadanewsnow.com/kannada/breaking-nta-announces-nittt-result-heres-the-direct-link-to-check-the-result/ ಕಾಂಗ್ರೆಸ್‌ ‍ಭವನದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ,ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು. https://kannadanewsnow.com/kannada/pv-narasimha-raos-contribution-will-always-be-respected-pm-modi/ ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ನನ್ನನ್ನು ಸೋಲಿಸಿ ಮತ್ತೆ ಸಿದ್ದರಾಮಯ್ಯ ಅವರಿಗೆ ಅವಮಾನ ಮಾಡಬೇಡಿ. ನನ್ನನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ ಅವರಿಗೆ ಗೌರವ ಸಲ್ಲಿಸಿ. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಅವರು ಮನವಿ ಮಾಡಿದರು.

Read More

ಉಡುಪಿ: ಕಳೆದ ವರ್ಷ ಉಡುಪಿಯ ನೇಜಾರು ಎಂಬಲ್ಲಿ ತಾಯಿ ಹಾಗೂ ಮೂವರು ಮಕ್ಕಳನ್ನು ಬರ್ಬರವಾಗಿ ಕೊಲೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಎರಡನೇ ಬಾರಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿ ಇಂದು ಆದೇಶ ನೀಡಿದೆ. https://kannadanewsnow.com/kannada/four-people-including-three-children-killed-in-cylinder-blast-in-uttar-pradesh/ ಆರೋಪಿ ಮೇಲಿನ ಆರೋಪಗಳು ಎಫ್ ಎಸ್ ಎಲ್ ವರದಿ ಸೇರಿದಂತೆ ಇನ್ನಿತರ ಸಾಕ್ಷಿಗಳಿಂದ ಮೇಲ್ನೋಟಕ್ಕೆ ಕಂಡು ಬಂದಿದ್ದು ಜಾಮೀನು ನೀಡಿದರೆ ಸಾಕ್ಷಿಗಳಿಗೆ ಹೆದರಿಸುವ ಸಾಧ್ಯತೆ ಇದೆ. ನ್ಯಾಯಾಂಗ ಬಂಧನದಲ್ಲೂ ಆರೋಪಿಗೆ ಚಿಕಿತ್ಸೆ ಪಡೆಯುವ ಅವಕಾಶ ಇರುವುದರಿಂದ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದಾಗಿ ನ್ಯಾಯಾಧೀಶರು ಆದೇ ತಿಳಿಸಿದ್ದಾರೆ. https://kannadanewsnow.com/kannada/we-dont-have-any-room-for-group-politics-dk-shivakumar-to-ministers-mlas/ ಚೌಗುಲೆ ಮಾ.13ರಂದು ಎರಡನೇ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಮಾ.27ರಂದು ಆಕ್ಷೇಪಣೆ ಸಲ್ಲಿಸಿದ್ದರು. ಈ ಕುರಿತು ಆರೋಪಿ ಪರ ವಕೀಲ ರಾಜೇಶ್ ಹಾಗೂ ವಿಶೇಷ ಸರಕಾರಿ ಅಭಿಯೋಜಕರ ಮಧ್ಯೆ ವಾದ ಪ್ರತಿವಾದಗಳು ನಡೆದವು.…

Read More

ಬೆಂಗಳೂರು : ಲೋಕಸಭಾ ಚುನಾವಣೆಗೆ ಕೋಲಾರ ಕ್ಷೇತ್ರ ಕಾಂಗ್ರೆಸ್ ಎಕ ಗಂಟೆ ಆಗಿ ಪರಿಣಮಿಸುತ್ತಿತ್ತು. ಇದೀಗ ಕಾಂಗ್ರೆಸ್ ಹೊಸ ಅಭ್ಯರ್ಥಿಯಾದ ಕೆ ವಿ ಗೌತಮ್ಗೆ ಮನೆ ಹಾಕಿದೆ ಈ ಕುರಿತಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು ಹೊಸ ಮುಖ ಗೌತಮಗೆ ಅವಕಾಶವನ್ನು ನೀಡಿದ್ದೇವೆ ಎಲ್ಲರೂ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೇಟ್ ವಿಚಾರವಾಗಿ ಸಾ ಕೆ ಎಚ್ ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಜೊತೆ ನಾನು ಚರ್ಚಿಸಿದ್ದೇನೇ. ಅವರವರ ಅಭಿಪ್ರಾಯವನ್ನು ಅವರು ತಿಳಿಸಿದ್ದಾರೆ. ಅವರವರ ಸ್ವಾರ್ಥಕ್ಕಾಗಿ ಅವರು ಹೇಳಿದ್ದಾರೆ. ಎರಡು ಗುಂಪಿಗೂ ನಾವು ಅವಕಾಶ ಕೊಡುವುದಿಲ್ಲ ಎಂದು ಅವರು ತಿಳಿಸಿದರು.ಯಾರೇ ಆದರೂ ಲಕ್ಷ್ಮಣ ರೇಖೆ ದಾಟಲು ಆಗುವುದಿಲ್ಲ ಸೀಟು ಗೆಲ್ಲೋದು ಬಿಡುವುದು ಅನಂತರ ಪಕ್ಷದಲ್ಲಿ ಮೊದಲು ಶಿಸ್ತು ಬಹಳ ಮುಖ್ಯ ಯಾರೇ ಸಿಕ್ತು ಉಳ್ಳಂಗಿಸಿದರು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು ನಮ್ಮ ಪಕ್ಷದಲ್ಲಿ ಯಾವುದೇ ರೀತಿಯಾಗಿ ಗುಂಪು ರಾಜಕಾರಣ…

Read More