Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕರ್ನಾಟಕ ರಾಜ್ಯ ಪ್ರಗತಿ ಪಕ್ಷದ ಶಾಸಕ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿಗೆ ಸೇರ್ಪಡೆಯಾಗುವುದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಪಕ್ಷ ವಿಲಿನಕ್ಕೆ ಜನಾರ್ಧನ ರೆಡ್ಡಿ ಆಸಕ್ತಿ ತೋರಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.ಈಗಾಗಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದು ಇದರ ಬೆನ್ನಲ್ಲೇ ಜನಾರ್ಧನ್ ರೆಡ್ಡಿ ಅವರು ಕೂಡ ತಮ್ಮ ಕರ್ನಾಟಕ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನಗೊಳಿಸಲು ಆಸಕ್ತಿ ತೋರಿದ್ದಾರೆಂದು ಬಲ್ಲಮೂಲಗಳಿಂದ ತಿಳಿದುಬಂದಿದೆ. ಕಾಂಗ್ರೆಸ್ ಪಕ್ಷಕ್ಕೆ ಕೈಕೊಟ್ಟು ಈಗಾಗಲೇ ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾಗಿರುವ ಬೆನ್ನಲ್ಲೇ ಪಕ್ಷ ಬಿಟ್ಟು ಹೋದವರನ್ನು ಮತ್ತೆ ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ರಣತಂತ್ರ ಬಿಜೆಪಿ ಹೆಣದಿದ್ದು ಇದೀಗ ಕೆ ಆರ್ ಪಿ ಪಿ ಪಕ್ಷದ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ಧನ್ ರೆಡ್ಡಿ ಕೂಡ ಇದ್ದಾರೆ. ಇದೇ ವಿಷಯವಾಗಿ ಇಂದು ಅವರು,ಬೆಳಗ್ಗೆ 11 ಗಂಟೆಗೆ ಶಾಸಕ ಜನಾರ್ಧನ ರೆಡ್ಡಿ ಸಭೆ ನಡೆಸಲಿದ್ದು, ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಜನಾರ್ಧನ ರೆಡ್ಡಿ ಸಭೆ ನಡೆಸಲಿದ್ದಾರೆ.ಪಕ್ಷದ ಪದಾಧಿಕಾರಿಗಳೊಂದಿಗೆ…
ಬೆಂಗಳೂರು : ಕಾಂಗ್ರೆಸ್ಸಿಗೆ ಮತ ಹಾಕಿದರೆ ಐದು ಗ್ಯಾರಂಟಿ ಇರುತ್ತೆ ಎಂಬ ಶಾಸಕ HC ಬಾಲಕೃಷ್ಣ ಹೇಳಿಕೆಯ ಕುರಿತಾಗಿ ಬೆಂಗಳೂರಿನ ವಿಧಾನ ಸೌಧದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಹೇಳಿಕೆ ನೀಡಿದ್ದು, ನಮ್ಮ ಗ್ಯಾರಂಟಿಗಳು 5 ವರ್ಷ ಮುಂದುವರಿಯಲಿವೆ ಎಂದು ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಮಾಗಡಿ ಶಾಸಕ ಬಾಲಕೃಷ್ಣ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಇರಿ ಎಂದಿದ್ದಾರೆ.ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಬಿಜೆಪಿಗರು ಹೇಳುತ್ತಿದ್ದಾರೆ. ಆದರೆ ಗ್ಯಾರಂಟಿ ಯೋಜನೆಗಳು 5 ವರ್ಷ ಮುಂದುವರಿಯುತ್ತವೆ ಎಂದು ಅವರು ತಿಳಿಸಿದರು. ಶಾಸಕ ಬಾಲಕೃಷ್ಣ ಹೇಳಿದ್ದೇನು? ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಅಧಿಕಾರಕ್ಕೆ ಬಂದು ಆಡಳಿತ ನಡೆಸುತ್ತಿದೆ. ಆದರೆ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿಕೆಯು ಇದೀಗ ಸಂಚಲನ ಮೂಡಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ…
ಬೆಂಗಳೂರು : ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿರುವ ಬಡವರ ಪಾಲಿನ ಆಶಾಕಿರಣವಾಗಿರುವಂತಹ ಡಾಕ್ಟರ್ ಸಿಎನ್ ಮಂಜುನಾಥ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡ ಅವರು, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ನಿವೃತ್ತರಾಗುತ್ತಿರುವ ನಾಡಿನ ಪ್ರಖ್ಯಾತ ವೈದ್ಯರಾದ ಡಾ.ಸಿ.ಎನ್.ಮಂಜುನಾಥ್ ಅವರ ನಿವೃತ್ತಿ ಜೀವನ ಸುಖಕರವಾಗಿರಲೆಂದು ಮನಸಾರೆ ಶುಭ ಹಾರೈಸುತ್ತೇನೆ. ಬಡರೋಗಿಗಳ ಪಾಲಿನ ಆಶಾಕಿರಣವಾಗಿ “ಟ್ರೀಟ್ಮೆಂಟ್ ಫಸ್ಟ್, ಪೇಮೆಂಟ್ ನೆಕ್ಸ್ಟ್” ಎಂಬ ಪರಿಕಲ್ಪನೆಯನ್ನಿಟ್ಟುಕೊಂಡು ಸಾವಿರಾರು ಬಡ ರೋಗಿಗಳಿಗೆ ಚಿಕಿತ್ಸೆ ಕೊಟ್ಟ ಡಾ.ಮಂಜುನಾಥ್ ಅವರು ಬಡವರ ಪಾಲಿನ ಧನ್ವಂತರಿ ಅಂದರೆ ಅತಿಶಯೋಕ್ತಿಯಲ್ಲ. ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಕಾಲದಲ್ಲಿ ಯಾವುದೇ ಖಾಸಗಿ ಕಾರ್ಪೊರೇಟ್ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಬಡವರಿಗೆ ಕೈಗೆಟಕುವ ದರದಲ್ಲಿ ಉತ್ಕೃಷ್ಟ ಆರೋಗ್ಯ ಸೇವೆ ನೀಡುವ…
ಶಿವಮೊಗ್ಗ : 2024ರ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳಿಂದ ಬಿಜೆಪಿ ಗೆಲ್ಲಲಿದೆ ಎಂದು ಸಂಸದಬಿ.ವೈ.ರಾಘವೇಂದ್ರ ಭವಿಷ್ಯ ನುಡಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ 2024ರ ಲೋಕಸಭಾ ಚುನಾವಣೆ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ ಎಂದರು. ಕಳೆದ ಬಾರಿಗಿಂತ ಹೆಚ್ಚು ಸ್ಥಾನವನ್ನು ನಾವು ಈ ಬಾರಿ ಗೆಲ್ಲುತ್ತೇವೆ. ಶಿವಮೊಗ್ಗದಲ್ಲಿಯೂ ಕೂಡ ಒಳ್ಳೆಯ ವಾತಾವರಣವಿದೆ. ಅಭಿವೃದ್ಧಿಯ ಹಿನ್ನಲೆಯಿದೆ. ನಾವು ಮಾಡಿದ ಅಭಿವೃದ್ಧಿ ಕೆಲಸಗಳೇ ನಮ್ಮನ್ನು ಬಾರಿ ಅತ್ಯಧಿಕ ದಾಖಲೆ ರೀತಿಯ ಗೆಲ್ಲಿಸುತ್ತದೆ. ಬಿಜೆಪಿ ಸೀಟುಗಳನ್ನು ಪಡೆದು ಕೇಂದ್ರದಲ್ಲಿ ಕಾರ್ಯಕರ್ತರನ್ನು ಒಳಗೊಂಡತೆ ನಾಯಕರುಗಳೆಲ್ಲ ಸೇರಿಕೊಂಡು ಈ ಬಿಜೆಪಿ ಸರ್ಕಾರ ರಚನೆಯಾಗುತ್ತದೆ ಎಂದರು. ಲೋಕಸಭಾ ಕ್ಷೇತ್ರದ ಸಂಚಾಲಕ ಹಾಗೂ ಮಾಜಿ ಶಾಸಕ ರಘುಪತಿ ಮಾತನಾಡಿ, ಶ್ರೀರಾಮಮಂದಿರ ಪ್ರತಿಷ್ಠಾಪನೆ ಆದ ಮೇಲೆ ಜನರು ಚುನಾವಣೆಗಾಗಿಯೇ ಕಾಯುತ್ತಿದ್ದಾರೆ. ಬಿಜೆಪಿಯನ್ನು ಯಾವಾಗ ಗೆಲ್ಲಿಸುತ್ತೇವೆ ಎಂಬ ಉತ್ಸಾಹದಲ್ಲಿ ಇದ್ದಾರೆ. ಬಿಜೆಪಿ ಗೆಲ್ಲುವಿಗೆ ಸಂಕಲ್ಪ ತೊಟ್ಟಿದ್ದಾರೆ. ಇಡೀ ಜಿಲ್ಲೆಯಲ್ಲೂ ಕೂಡ ಅಭಿವೃದ್ಧಿ ಕೆಲಸ ಆಗಿದೆ ಎಂದು…
ಬೆಂಗಳೂರು : ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಧ್ವಜಸ್ತಂಬದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜವನ್ನು ಪೊಲೀಸರು ತೆರವುಗೊಳಿಸಿದ್ದರು. ಇದಕ್ಕೆ ಗ್ರಾಮಸ್ಥರು ಮತ್ತು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಈ ಬೆನ್ನಲ್ಲೆ ಧಾರ್ಮಿಕ ಧ್ವಜ ಹಾರಾಟ ವಿಚಾರ ಬೆಂಗಳೂರಿಗು ಹಬ್ಬಿದೆ. ಹೌದು ಇದೀಗ ಬೆಂಗಳೂರಿನ ಚಾವರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಜೆ ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಸಿರು ಮತ್ತು ಹಳದಿ ಬಣ್ಣದ ಧ್ವಜ ಹಾರಿಸಿರುವ ವಿಚಾರವಾಗಿ ಆಕ್ಷೇಪ ವ್ಯಕ್ತವಾಗಿದೆ.ಈ ಬಗ್ಗೆ ಶಶಾಂಕ್ ಜೆಎಸ್ ಎಂಬುವರು ಟ್ವೀಟ್ ಮಾಡಿ ಚಾವರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಜೆ ನಗರ ಪೊಲೀಸ್ ಠಾಣೆ ಎದುರಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಹಸಿರು ಧ್ವಜ ಹಾರಿಸಲಾಗಿದೆ. ಇದಕ್ಕೆ ಹೇಗೆ ಅವಕಾಶ ಮಾಡಿಕೊಟ್ಟಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪ್ರಶ್ನಿಸಿದ್ದಾರೆ. ಹಾಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಟ್ಯಾಗ್ ಮಾಡಿದ್ದಾರೆ.…
BREAKING : ಬಿಜೆಪಿಗೆ ಮರಳುವ ಕುರಿತು ಜನಾರ್ಧನ್ ರೆಡ್ಡಿ ಇಂದು ಮಹತ್ವದ ಸಭೆ : ಪಕ್ಷ ಸೇರ್ಪಡೆ ಕುರಿತು ನಿರ್ಧಾರ ಪ್ರಕಟ
ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಕೈಕೊಟ್ಟು ಈಗಾಗಲೇ ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾಗಿರುವ ಬೆನ್ನಲ್ಲೇ ಪಕ್ಷ ಬಿಟ್ಟು ಹೋದವರನ್ನು ಮತ್ತೆ ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ರಣತಂತ್ರ ಬಿಜೆಪಿ ಹೆಣದಿದ್ದು ಇದೀಗ ಈ ಒಂದು ಲೀಸ್ಟ್ ಅಲ್ಲಿ ಕೆ ಆರ್ ಪಿ ಪಿ ಪಕ್ಷದ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ಧನ್ ರೆಡ್ಡಿ ಕೂಡ ಇದ್ದಾರೆ. ಇದೇ ವಿಷಯವಾಗಿ ಇಂದು ಅವರು,ಬೆಳಗ್ಗೆ 11 ಗಂಟೆಗೆ ಶಾಸಕ ಜನಾರ್ಧನ ರೆಡ್ಡಿ ಸಭೆ ನಡೆಸಲಿದ್ದು, ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಜನಾರ್ಧನ ರೆಡ್ಡಿ ಸಭೆ ನಡೆಸಲಿದ್ದಾರೆ.ಪಕ್ಷದ ಪದಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಸಭೆ ಬಳಿಕ ಬಿಜೆಪಿ ಸೇರ್ಪಡೆ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಪಕ್ಷ ಬಿಟ್ಟು ಹೋದವರನ್ನು ಮರಳಿ ಪಕ್ಷಕ್ಕೆ ಕರೆತರುವ ಒಂದು ಕೆಲಸಕ್ಕೆ ಕೈ ಹಾಕಿದ್ದು, ಅದೀಗ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಮರಳಿ ಕರೆತರುವ ಕೆಲಸ ಯಶಸ್ವಿಯಾಗಿದೆ. ಅದರಂತೆ ಇದೀಗ…
ಹುಬ್ಬಳ್ಳಿ : ಕಾಂಗ್ರೆಸ್ ಕಚೇರಿ ಮುಂದೆ ವ್ಯಕ್ತಿಯ ಬರಬರ ಕೊಲೆ ಮಾಡಲಾಗಿದ್ದು, ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಮುಂದೆ ವ್ಯಕ್ತಿ ಒಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಭೀಕರವಾಗಿ ಕೊಲೆ ಗೈಯಲಾಗಿದೆ. ಕಾಂಗ್ರೆಸ್ ಕಚೇರಿಯ ಮುಂದೆ 28 ವರ್ಷದ ಯುವಕನನ್ನು ಹತ್ಯೆ ಮಾಡಲಾಗಿದ್ದು, ರಾತ್ರಿ ಸ್ನೇಹಿತರೆಲ್ಲರೂ ಸೇರಿ ಪಾರ್ಟಿ ಮಾಡಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗುತ್ತಿದೆ. ತಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಟನೆ ಕುರಿತಂತೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾದಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಆದಾಯ ಮೀರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಕೇಸ್ ಅನ್ನು ರಾಜ್ಯ ಸರ್ಕಾರ ಹಿಂಪಡೆದ ವಿಚಾರವನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಿಚಾರಣೆ ನಡೆಸಲಿದೆ. ಸರ್ಕಾರದ ಸಮ್ಮತಿ ಪಡೆದಿದ್ದನ್ನು ಪ್ರಶ್ನಿಸಿ ಸಿಬಿಐ ಅರ್ಜಿ ಸಲ್ಲಿಸಿದೆ. ಅಲ್ಲದೆ ಸಿಬಿಐ ಜೊತೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಕೂಡ ವಿಚಾರಣೆ ನಡೆಸಲಿದೆ.ಅರ್ಜಿ ಕುರಿತಂತೆ ಹೈಕೋರ್ಟ್ ನ್ಯಾ. ಕೆ ಸೋಮಶೇಖರ್, ನ್ಯಾ. ಉಮೇಶ್ ಹಾಗೂ ನ್ಯಾ. ಅಡಿಗರ ಪೀಠ ಅರ್ಜಿ ವಿಚಾರಣೆ ನಡೆಸಲಿದ್ದಾರೆ. ಸಿಬಿಐ ತನಿಖೆಗೆ ಸರ್ಕಾರದ ಸಮ್ಮತಿ ಪಡೆದಿದ್ದು ಪ್ರಶ್ನಿಸಿ ಸಿಬಿಐ ಅರ್ಜಿ ಸಲ್ಲಿಸಿದ್ದು, ಸಿಬಿಐ ಹಾಗೂ ಯತ್ನಾಳ್ ಅರ್ಜಿ ವಿಚಾರಣೆಯನ್ನು ಎಂದು ಹೈಕೋರ್ಟ್ ನಡೆಸಲಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಭಾಗಿಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ…
ಬೆಂಗಳೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಮತಗಳನ್ನು ನೀಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಒಂದು ವೇಳೆ ಕಾಂಗ್ರೆಸ್ ಪಕ್ಷ ಸೋತರೆ ಐದು ಗ್ಯಾರಂಟಿ ಯೋಜನೆಗಳು ಮುಂದಿನ ದಿನಗಳಲ್ಲಿ ರದ್ದಾಗಲಿವೆ ಎಂಬ ಶಾಸಕ ಹೇಳಿಕೆಗೆ ಮಾರಿ ಸಚಿವ ಎಂಪಿ ರೇಣುಕಾಚಾರ್ಯ ಕಿಡಿ ಕಾರಿದು ಇವರು ಜನರಿಗೆ ಬ್ಲಾಕ್ ಮೇಲ್ ಮಾಡಲು ಹೊರಟಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು,ಜನರಿಗೆ ಬ್ಲಾಕ್ ಮೇಲ್ ಮಾಡಲು ಹೊರಟಿದ್ದಾರೆ. ಚುನಾವಣೆ ಪೂರ್ವದಲ್ಲಿ ಐದು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದರು. ಇನ್ನು ಬ್ರಹ್ಮಲೋಕದಲ್ಲಿ ತೇಲಾಡುತ್ತಿದ್ದಾರೆ.ಆದರೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿಲ್ಲ. ಶಕ್ತಿ ಯೋಜನೆಯ ಗ್ರಾಮೀಣ ಭಾಗಗಳಲ್ಲಿ ಬಸ್ಸುಗಳೇ ಇಲ್ಲ. ಶೇಕಡ 80 ರಷ್ಟು ಮಹಿಳೆಯರಿಗೆ ಅನುಕೂಲವಾಗಿಲ್ಲ. ಮಹಾಲಕ್ಷ್ಮಿ ಯೋಜನೆ ಅಡಿಯಲ್ಲಿ ಶೇಕಡ 60ರಷ್ಟು ಮಹಿಳೆಯರಿಗೆ ಇನ್ನೂ ಹಣ ತಲುಪಿಲ್ಲ ಎಂದು ಆಕ್ರೋಶ ಹೊರ ಹಾಕಿದರು. ಒಂದು ಚುನಾವಣೆ ಸಂದರ್ಭದಲ್ಲಿ ಆಮಿಷಗಳನ್ನು ಒಡ್ಡಲು ಹೊರಟಿದ್ದಾರೆ. ಈ ರಾಜ್ಯದ ಜನ ಬಹಳ ಪ್ರಜ್ಞಾವಂತ ಮತದಾರರಿದ್ದಾರೆ.ದೇಶದಲ್ಲಿ ಮತ್ತೊಮ್ಮೆ ಮಗದೊಮ್ಮೆ…
ಬೆಳಗಾವಿ : ಮದುವೆಯಾಗಿ ಒಂದು ತಿಂಗಳಾಗಿತ್ತು ಅಷ್ಟೇ ಆದರೆ ಹೆಂಡತಿ ಪ್ರಿಯಕರ ನೊಂದಿಗೆ ಪರಾರಿಯಾಗಿದ್ದಳು. ಈ ವೇಳೆ ಪ್ರಿಯಕರೊಂದಿಗೆ ಹೆಂಡತಿ ಚೆನ್ನಾಗಿರುವುದನ್ನು ಸಹಿಸದ ಪತಿ ಇಬ್ಬರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಯಾಸಿನ ಬಾಗೊಡೆ (21) ಹಾಗೂ ಹೀನಾಕೌಸರ್ ಸುದಾರಾಣೆ (19) ಕೊಲೆಯಾದ ಜೋಡಿಯಾಗಿದ್ದಾರೆ. ತೌಫಿಕ್ ಕ್ಯಾಡಿ (24) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇನ್ನು ಇಬ್ಬರ ಮೇಲೆ ಹಲ್ಲೆ ಮಾಡುವ ವೇಳೆ ಬಿಡಿಸಲು ಬಂದಿದ್ದ ತಾಯಿ ಅಮಿನಾಬಾಯಿ ಬಾಗೂಡ ಹಾಗೂ ಮಾವ ಮುಸ್ತಫಾ ಮುಲ್ಲಾನ ಮೇಲು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾದ ಈ ಇಬ್ಬರನ್ನು ಮಿರಜ್ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಬಲ್ ಮರ್ಡರ್ ಮಾಡಿದ ಆರೋಪಿ ತೌಫಿಕ್ ಸ್ಥಳದಿಂದ ಪರಾರಿ ಆಗಿದ್ದಾನೆ. ತೌಫಿಕ್ ಹಾಗೂ ಹೀನಾ ಕೌಸರ್ಳಿಗೆ ಕಳೆದ 4 ತಿಂಗಳ ಹಿಂದೆ ಮದುವೆಯಾಗಿತ್ತು. ಮದುವೆಯಾಗಿ ಕೇವಲ 1 ತಿಂಗಳಿಗೆ (30 ದಿನಗಳು) ಹೆಂಡತಿ ಹೀನಾ ಕೌಸರ್…