Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಅಲ್ಲಿ ರಾಜಾತಿಥ್ಯ ಪಡೆದುಕೊಳ್ಳುವ ವಿಚಾರವಾಗಿ ನಂತರ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾದರಿಯಲ್ಲೇ ಇದೀಗ ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಆರೋಪಿಗಳು ಜೈಲಿನಲ್ಲಿ ಇದ್ದುಕೊಂಡೆ ಸ್ಮಾರ್ಟ್ ಫೋನ್ ಬಳಸಿ ವಿಡಿಯೋ ಕಾಲ್ ಮಾಡಿರುವ ಫೋಟೋ ಇದೀಗ ವೈರಲ್ ಆಗಿದೆ. ಹೌದು ವಿಶಾಲ, ಸಾಗರ ಹಾಗೂ ಸೋನು ಎಂಬುವವರು ಜೈಲಿನ ಕೋಣೆಯೊಳಗೆ ಕುಳಿತು ತಮ್ಮ ಸ್ನೇಹಿತರೊಂದಿಗೆ ಮಾತನಾಡುತ್ತಾ, ಗಾಂಜಾ ಸೇದುತ್ತಿದ್ದಾರೆ ಎನ್ನಲಾದ ದೃಶ್ಯಗಳು ಬಹಿರಂಗವಾಗಿವೆ.ಈ ಮೂವರು ಬೇರೆ ಬೇರೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಸೇರಿದ್ದಾರೆ. ಜೈಲಿನಲ್ಲಿ ಇರುವ ಕೆಲ ಕೈದಿಗಳು ಐಷರಾಮಿ ಸೌಲಭ್ಯ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಮೂವರು ಕೈದಿಗಳು ಸ್ಮಾರ್ಟ್ಫೋನ್ ಬಳಸಿ ತಮ್ಮ ಸ್ನೇಹಿತರಿಗೆ ವಿಡಿಯೊ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.ಕಳೆದ…
ನೌಕಾನೆಲೆಯ ಸಮರಾಭ್ಯಾಸ ಹಿನ್ನೆಲೆ : 3 ದಿನಗಳ ಕಾಲ ‘ನೇತ್ರಾಣಿ’ ದ್ವೀಪದಲ್ಲಿ, ಮೀನುಗಾರರಿಗೆ, ಪ್ರವಾಸಿಗರಿಗೆ ನಿರ್ಬಂಧ!
ಉತ್ತರಕನ್ನಡ : ನೌಕಾನೆಲೆ ಸಮಾರಾಭ್ಯಾಸ ಹಿನ್ನೆಲೆಯಲ್ಲಿ ನಾಳೆಯಿಂದ ಅಂದರೆ ಅಕ್ಟೋಬರ್ 14 ರಿಂದ 16 ವರೆಗೆ ಮೂರು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ನೇತ್ರಾಣಿ ದ್ವೀಪದಲ್ಲಿ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿರುವ ನೇತ್ರಾಣಿ ದ್ವೀಪದಲ್ಲಿ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.ಅಕ್ಟೋಬರ್ 14 ರಿಂದ 16 ರವರೆಗೆ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ನೇತ್ರಾಣಿ ದ್ವೀಪದಿಂದ 10 ನಾಟಿಕಲ್ ಮೈಲಿ ದೂರದಿಂದ ಸಮರಭ್ಯಾಸ ನಡೆಸಲಾಗುತ್ತದೆ. ಆಗಸದಿಂದ ಯುದ್ಧ ಫೈಟರ್ ಮೂಲಕ ನೌಕಾದಳದಿಂದ ಸಮಾರಾಭ್ಯಾಸ ನಡೆಸಲಿದೆ. ಆಗಸದಿಂದ ನೇತ್ರಾಣಿ ದ್ವೀಪದಲ್ಲಿ ಫೈರಿಂಗ್ ನಡೆಯುವುದರಿಂದ ಈ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ. ನೇತ್ರಾಣಿ ದ್ವೀಪದಲ್ಲಿ ಮೀನುಗಾರರು ಹಾಗೂ ಪ್ರವಾಸಿಗರಿಗೆ ಮೂರು ದಿನ ನಿರ್ಬಂಧ ವಿಧಿಸಲಾಗಿದೆ.
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಸೇರಿದಂತೆ ರೌಡಿ ಶೀಟರ್ ಗಳಿಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೊಬೈಲ್ ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದರು. ಇದಾದ ಬಳಿಕವೂ ಜೈಲಿನಲ್ಲಿ ಮೊಬೈಲ್ ಬಳಕೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಹೌದು ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲಲ್ಲಿರುವ ಆರೋಪಿ, ನಟ ದರ್ಶನ್ ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದರು. ಅಲ್ಲಿ ದರ್ಶನ್ಗೆ ಹಾಗೂ ಕೆಲ ರೌಡಿ ಶೀಟರ್ಗಳಿಗೆ ರಾಜಾತಿಥ್ಯ ನೀಡಿರುವ ಪ್ರಕರಣ ಸದ್ದು ಮಾಡಿತ್ತು. ಆದರೂ ಸಹ ಜೈಲಿನಲ್ಲಿ ಇದ್ದುಕೊಂಡೆ ಕೆಲ ರೌಡಿ ಶೀಟರ್ ಗಳು ಬೆದರಿಕೆ ಹಾಕುವ ಘಟನೆಗಳು ನಡೆದಿದ್ದು ಬೆಳಕಿಗೆ ಬಂದಿದೆ. ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿದ ರೌಡಿ ಶೀಟರ್! ದರ್ಶನ್ ಪ್ರಕರಣದ ಬಳಿಕ ಕೂಡ ಜೈಲಲ್ಲಿ ಮೊಬೈಲ್ ಬಳಕೆ ಮುಂದುವರೆದಿದೆ. ಜೈಲ್ಲಿನಿಂದಲ್ಲೇ ಇನ್ಸ್ಟಾಗ್ರಾಮ್ ಮೂಲಕ ಬೆದರಿಕೆ ಹಾಕಿರುವ ಗಂಭೀರ ಆರೋಪ ಕೇಳಿಬಂದಿದೆ. 2021…
ಧಾರವಾಡ : ಈಗಾಗಲೇ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಇದರ ಬೆನ್ನಲ್ಲೇ ಕೆಲವು ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಯ ಮೇಲೆ ಟವಲ್ ಹಾಕಿದ್ದಾರೆ. ಇದರ ಮಧ್ಯ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ನಾನೊಬ್ಬ ಮುಖ್ಯಮಂತ್ರಿ ಅಂತ ಇಲ್ಲಿ ಬಂದಿಲ್ಲವೆಂದು ಹೇಳುವ ಮೂಲಕ ಬಹಿರಂಗವಾಗಿಯೇ ಮುಖ್ಯಮಂತ್ರಿಯಾಗುವ ಆಸೆ ಬಿಚ್ಚಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಇಂದು ಧಾರವಾಡದ ರಡ್ಡಿ ಬ್ಯಾಂಕ್ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡುವ ಭರದಲ್ಲಿ ಅವರು, ನಾನೊಬ್ಬ ಸಿಎಂ ಆಗಿ ಇಲ್ಲಿ ಬಂದಿಲ್ಲ ಎಂದು ಬಾಯಿ ತಪ್ಪಿ ತಾನೇ ಸಿಎಂ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಆ ಮೂಲಕ ಬಹಿರಂಗವಾಗಿ ನೆಕ್ಸ್ಟ್ ಸಿಎಂ ನಾನೇ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ ಎನ್ನಲಾಗುತ್ತಿದೆ. ಸಮಾರಂಭದಲ್ಲಿ ಮುಂದುವರೆದು ಮಾತನಾಡುತ್ತ, ನಾನು ಕೂಡ ಸಹಕಾರ ಕ್ಷೇತ್ರದವನಾಗಿ ಬಂದಿದ್ದೇನೆ. ನಾನು ಕೂಡ ಸೊಸೈಟಿ ಎಲೆಕ್ಷನ್ ನಿಂದ ರಾಜಕೀಯಕ್ಕೆ ಬಂದವನು. ಹೀಗೆ ಕಾರ್ಯಕ್ರಮದಲ್ಲಿ ತಮ್ಮ ಮೊದಲ ಚುನಾವಣೆ…
ಬೆಳಗಾವಿ : ರೇಣುಕಾ ಎಲ್ಲಮ್ಮ ದೇವಸ್ಥಾನಕ್ಕೆ ಕೆಳವರ್ಗದ ಜನರೇ ಜಾಸ್ತಿ ಬರುತ್ತಾರೆ. ದೇಶ ವಿದೇಶಗಳಿಂದಲೂ ಸಹ ಭಕ್ತಾದಿಗಳು ದೇವಸ್ಥಾನಕ್ಕೆ ಬರುತ್ತಾರೆ. ಯಲ್ಲಮ್ಮ ತಾಯಿ ಬಹಳ ಶಕ್ತಿ ದೇವತೆ ಅಂತ ಭಕ್ತರು ನಂಬಿದ್ದಾರೆ.ಆದರೆ ದೇವರು ಕೂಡ ಕೆಟ್ಟದ್ದು ಮಾಡಲಿ ಎಂದು ಬಯಸುವುದಿಲ್ಲ. ದೇವರು ಹಾಗೂ ಧರ್ಮ ಮನುಷ್ಯ ಮನುಷ್ಯನನ್ನ ಪ್ರೀತಿಸಿ ಎನ್ನುತ್ತವೆ ಎಂದು ರೇಣುಕಾ ಎಲ್ಲಮ್ಮ ದೇವಸ್ಥಾನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ರೇಣುಕಾ ಎಲ್ಲಮ್ಮ ದೇವಸ್ಥಾನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ್ದೇವೆ. ಇದುವರೆಗೂ ರಾಜ್ಯದಲ್ಲಿ ಪ್ರಯಾಣದ ಟಿಕೆಟ್ ವೆಚ್ಚ 300 ಕೋಟಿ ಆಗಿದೆ. ಅಷ್ಟು ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದಾರೆ.ಈ ರೀತಿ ಯಾವ ಸರ್ಕಾರಗಳು ಕೂಡ ಮಾಡಿರಲಿಲ್ಲ.ಬಿಜೆಪಿಯವರು ಧರ್ಮ ಆಚಾರ ವಿಚಾರ ಸಂಸ್ಕೃತಿ ಹಾಗೂ ಸಂಸ್ಕಾರದ ಬಗ್ಗೆ ಮಾತಾಡುತ್ತಾರೆ. ಇಂತಹ ಕೆಲಸ ಅವರು ಮಾಡಿದ್ದಾರಾ? ಎಂದು ಪ್ರಶ್ನಿಸಿದರು. ಸೌದತ್ತಿ ಕ್ಷೇತ್ರಕ್ಕೆ ಒಂದೂವರೆ ಕೋಟಿ ಭಕ್ತರು ಬಂದು ಹೋಗುತ್ತಾರೆ.ಪ್ರವಾಸೋದ್ಯಮ…
ಬೆಂಗಳೂರು : ದಸರಾ ಹಬ್ಬದ ಅಂಗವಾಗಿ ಮನೆಯ ಮಾಲೀಕ ಪೂಜೆ ಹಾಗೂ ಭಜನೆ ಕಾರ್ಯಕ್ರಮಕ್ಕೆ ತೆರಳಿದಾಗ ಇದೇ ಸಮಯ ನೋಡಿಕೊಂಡು, ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಹಣವನ್ನು ದೋಚಿ ಪರಾರಿ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ಉದ್ಯಮಿಯ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಉದ್ಯಮಿ ಲಾಲಾರಂ ಎಂಬವರಿಗೆ ಸೇರಿದ ಮನೆಯಲ್ಲಿ ದುಷ್ಕರ್ಮಿಗಳು ಕಳ್ಳತನ ಮಾಡಿದ್ದಾರೆ. ಮನೆ ಬಾಗಿಲು ಮುರಿದು 15 ಲಕ್ಷ ಮೌಲ್ಯದ 355 ಗ್ರಾಂ ಚಿನ್ನಾಭರಣ, 5 ಕೆಜಿ ಬೆಳ್ಳಿ 70 ಸಾವಿರ ನಗದನ್ನು ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ನೆಲಮಂಗಲ ಟೌನ್ ಪೋಲಿಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ದಸರಾ ಹಬ್ಬದ ಅಂಗವಾಗಿ ಪೂಜೆ ಭಜನೆ ಕಾರ್ಯಕ್ರಮಕ್ಕೆ ಉದ್ಯಮಿ ಲಾಲಾರಾಂ ತೆರಳಿದ್ದಾಗ ದುಷ್ಕರ್ಮಿಗಳು ಈ ಕೃತ್ಯವನ್ನು…
ದಾವಣಗೆರೆ : ಶ್ರೀ ಸಾಯಿ ಮಿನರಲ್ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನನ್ನ ವಿರುದ್ಧ ದೂರು ಕೊಟ್ಟಿರುವ ಹಿಂದೆ ಯಾರಿದ್ದಾರೆ ಎಂದು ನನಗೆ ತಿಳಿದಿದೆ. ನನ್ನ ಕೇಸ್ 2012 ರಿಂದ ಎಸ್ಐಟಿಯಲ್ಲಿ ನಡೆಯುತ್ತಿದೆ. ಹತ್ತು ವರ್ಷವಾದರೂ ಅದನ್ನ ಯಾಕೆ ಇನ್ನೂ ಜೀವಂತವಾಗಿ ಇಟ್ಟುಕೊಂಡಿದ್ದಾರೆ ಎಂದು ಅವರೇ ಹೇಳಬೇಕು. ತನಿಖೆ ನಡೆಯುತ್ತಿದೆ ಕೊರ್ಟ್ನಲ್ಲಿ ಉತ್ತರ ನೀಡುತ್ತೇನೆ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ತಿಳಿಸಿದರು. ದಾವಣಗೆರೆಯಲ್ಲಿ ರಾಜ್ಯ ಸರ್ಕಾರ ಹಳೇ ಹುಬ್ಬಳ್ಳಿ ಪ್ರಕರಣ ಹಿಂಪಡೆದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಹುಬ್ಬಳ್ಳಿಯಲ್ಲಿ ಪೊಲೀಸರ ಮೇಲೆ ನಡೆದ ಹಲ್ಲೆ ಹಾಗೂ ಪೊಲೀಸ್ ಠಾಣೆಗೆ ಬೆಂಕಿ ಇಡಲು ಮುಂದಾಗಿದ್ದ ಗಲಭೆಕೋರರ ಪ್ರಕರಣವನ್ನು ಹಿಂಪಡೆಯಲು ನಿರ್ಧಾರ ಕೈಗೊಂಡಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಗಲಭೆಕೋರರ ರಕ್ಷಣೆಗೆ ಮುಂದಾಗಿದೆ. ಈ ಸರ್ಕಾರಕ್ಕೆ ಸಮಾಜ ಉತ್ತಮ ರೀತಿಯಲ್ಲಿ ನಡೆದುಕೊಂಡು ಹೋಗುವುದು ಇಷ್ಟವಿಲ್ಲ ಎಂದು ವಾಗ್ದಾಳಿ ನಡೆಸಿದರು. ಹುಬ್ಬಳ್ಳಿ ನಡೆದ ಹಿಂದಿನ ಹಲವು ಪ್ರಕರಣಗಳಲ್ಲಿನ ಕೇಸ್ಗಳನ್ನು ಹಿಂಪಡೆಯುವ ಕುರಿತು ಚರ್ಚೆ ನಡೆಯುತ್ತಿದೆ. ಕೇಸ್ಗಳನ್ನು ವಾಪಾಸ್…
ಬೆಳಗಾವಿ : ಪ್ರಯತ್ನ ವಿಫಲ ಆಗಬಹುದು ಆದರೆ ಪ್ರಾರ್ಥನೆ ವಿಫಲವಾಗುವುದಿಲ್ಲ. ಎಲ್ಲರ ದುಃಖ ದೂರ ಮಾಡುವಂತೆ ದೇವಿಯ ಬಳಿ ಪ್ರಾರ್ಥಿಸಿದ್ದೇನೆ. ಈ ಜಾಗವನ್ನು ಅಭಿವೃದ್ಧಿ ಮಾಡಬೇಕೆಂದು ದಿಟ್ಟ ಪಣ ತೊಟ್ಟಿದ್ದೇವೆ. ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಲಿದ್ದೇವೆ.ಇಲ್ಲಿ 200 ರೂಂಗಗಳನ್ನು ಕಟ್ಟಿಕೊಡುವ ವಾಗ್ದಾನ ಲಕ್ಷ್ಮಿ ಹೆಬ್ಬಾಳ್ಕರ್ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನಲ್ಲಿರುವ ಶ್ರೀ ರೇಣುಕಾ ಎಲ್ಲಮ್ಮ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಇದು ಭಾಗ್ಯ ಇದು ಭಾಗ್ಯ ಎಂದು ಪುರಂದರ ದಾಸರ ಹೇಳಿಕೆಯನ್ನು ಪ್ರಸ್ತಾಪಿಸಿ ನಾವು ಇಲ್ಲಿಗೆ ಬಂದಿದ್ದೆ ಭಾಗ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಭಕ್ತನಿಗೂ ದೇವರಿಗೂ ವ್ಯವಹಾರ ನಡೆಯುವ ಸ್ಥಳ ಅದು ದೇವಸ್ಥಾನ ಮಾತ್ರ. ನನಗೆ ಕಾನೂನು ಸಚಿವ ಎಚ್ ಕೆ ಪಾಟೀಲ್ ಕರೆ ಮಾಡಿ ಕರೆದರು.ಪ್ರಾಧಿಕಾರ ಮಾಡಬೇಕು ಅಂತ ಯಾರು ಕೇಳಿರಲಿಲ್ಲ. ಇದಕ್ಕೆ ಒಂದು ಸ್ವರೂಪ ಕೊಡಬೇಕು…
ಬೆಳಗಾವಿ : ಈ ಬಾರಿಯ ಚಳಿಗಾಲ ಅಧಿವೇಶನದಲ್ಲಿ ಹೊಸ ಮುಖ್ಯಮಂತ್ರಿ ಬರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದು, ನಾನು ರಾಜೀನಾಮೆ ನೀಡುತ್ತೇನೆ ಹೊಸ ಸಿಎಂ ಬರುತ್ತಾರೆ ಎಂದು ಹೇಳೋಕೆ ವಿಜಯೇಂದ್ರ ಏನು ಜ್ಯೋತಿಷಿನ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ಇಂದು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾ ಮುಗಿದ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂದರು ನಾನು ರಾಜೀನಾಮೆ ಕೊಟ್ನಾ? ಅವರ ತಂದೆ ಯಡಿಯೂರಪ್ಪ ಪೋಕ್ಸೋ ಪ್ರಕರಣದಲ್ಲಿ ಬೇಲ್ ಮೇಲೆ ಹೊರಗಡೆ ಇದ್ದಾರೆ. ನನಗೆ ರಾಜೀನಾಮೆ ಕೇಳೋಕೆ ಬಿವೈ ವಿಜಯೇಂದ್ರ ಗೆ ಯಾವ ನೈತಿಕತೆ ಇದೆ ಎಂದು ಕಿಡಿ ಕಾರಿದರು. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನ್ಯಾಯಯುತ ತೆರಿಗೆ ಪಾಲು ವಿತರಣೆ ಪಾಲಿಸುತ್ತಿಲ್ಲ. ಈ ಬಗ್ಗೆ ರಾಜ್ಯಕ್ಕೆ ಅನ್ಯಾಯ ಆದರೂ ಬಿಜೆಪಿ ಸಂಸದರು…
ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಸಿಎಂ ಸಿದ್ದರಾಮಯ್ಯ ಭಯೋತ್ಪಾದಕ ಎಂದು ಕರೆದಿದ್ದರು. ಈ ಒಂದು ಹೇಳಿಕೆಗೆ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹೋಗುವ ಕನಸು ಬಿದ್ದಿದೆ. ಹಾಗಾಗಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಅವರು ಚಿಕಿತ್ಸೆ ಪಡೆಯುವುದು ಉತ್ತಮ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹತಾಶರಾಗಿರುವುದು ಸ್ಪಷ್ಟವಾಗಿ ಅರ್ಥವಾಗಿದೆ. ರಾಜಕಾರಣದಲ್ಲಿ ಅಧಿಕಾರ ಬರುತ್ತದೆ, ಹೋಗುತ್ತದೆ ಆದರೆ ಯಾವುದೇ ಕಾರಣಕ್ಕೂ ಹತಾಶರಾಗಬಾರದು. ಕೋರ್ಟ್ ಅವರನ್ನು ಸಿಕ್ಕಾಪಟ್ಟೆ ಜಾಡಿಸಿದೆ. ಸಿಎಂ ಸಿದ್ದರಾಮಯ್ಯಗೆ ಅಧಿಕಾರ ಹೋಗುವ ಕನಸು ಬೀಳುತ್ತಿದೆ.ಅಧಿಕಾರ ಹೋಗುವ ಹತಾಶೆಯಿಂದ ಸಿಎಂ ಸಿದ್ದರಾಮಯ್ಯ ಈ ರೀತಿ ಮಾತನಾಡುತ್ತಿದ್ದಾರೆ. ಅತ್ಯಂತ ಅಪ್ರಭುದ್ಧ ಹೇಳಿಕೆ ಕೊಡುತ್ತಿದ್ದಾರೆ. ನಾವು ಅವರನ್ನು ಟೀಕೆ ಮಾಡುತ್ತೇವೆ ಅವರು ನಮ್ಮನ್ನು ಟೀಕಿಸುತ್ತಾರೆ. ಅಧಿಕಾರ ಹೋಗುವ ಸ್ಥಿತಿ ಬಂದಿರುವುದರಿಂದ ಅವರು ಸ್ಥಿಮಿತ ಕಳೆದುಕೊಂಡಿದ್ದಾರೆ. ಮಾನಸಿಕ ಸೀಮಿತಕ್ಕೆ ಚಿಕಿತ್ಸೆ ತೆಗೆದುಕೊಳ್ಳುವುದು ಒಳ್ಳೆಯದು. ಬಜರಂಗದಳ ಯಾವಾಗಲೂ ಪಾಕಿಸ್ತಾನ ಜಿಂದಾಬಾದ್ ಎಂದಿಲ್ಲ.…











