Author: kannadanewsnow05

ಬೆಂಗಳೂರು: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುರವರೆಗೂ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 13 ಜನರನ್ನ ಕೆಲವೇ ಹೊತ್ತಲ್ಲಿ ಬೆಂಗಳೂರಿನ 24ನೆ ACMM ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಈ ಮೊದಲು ಪವಿತ್ರ ಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಇದೀಗ ಪೊಲೀಸರು ಸ್ಪಷ್ಟನೆ ನೀಡಿದ್ದು, ನಟ ದರ್ಶನ್ ಸೇರಿದಂತೆ ಪವಿತ್ರಾಗೌಡ ಹಾಗೂ 13 ಜನರನ್ನು ಬಂಧಿಸಲಾಗಿದೆ. ಇನ್ನೇನು ಕೆಲವೇ ಹೊತ್ತಲ್ಲಿ ಎಲ್ಲರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಆರೋಪಿಗಳಿಗೆ ವೈದ್ಯರು ವೈದ್ಯಕೀಯ ತಪಾಸಣೆ ಮಾಡಿ ತೆರಳಿದ್ದಾರೆ. ದರ್ಶನ್, ಪವಿತ್ರ ಗೌಡ ಸೇರಿ 13 ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮಾಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಪೊಲೀಸರು ವೈದ್ಯರನ್ನು ಕರೆಸಿಕೊಂಡಿದ್ದರು. ಈ ವೇಳೆ ಠಾಣೆಗೆ ಬಂದಿದ್ದ ವೈದ್ಯರು ಎಲ್ಲಾ ಆರೋಪಿಗಳ ವೇದಿಕೆ ಪರೀಕ್ಷೆ ಮಾಡಿ ವಾಪಸ್ ತೆರಳಿದ್ದಾರೆ. ಕೆಲವೇ…

Read More

ಬೆಂಗಳೂರು: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುರವರೆಗೂ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 13 ಜನರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಈ ಮೊದಲು ಪವಿತ್ರ ಗೌಡರ ನೋ ಪೊಲೀಸರು ವಶಕ್ಕೆ ಪಡೆದಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಇದೀಗ ಪೊಲೀಸರು ಸ್ಪಷ್ಟನೆ ನೀಡಿದ್ದು, ನಟ ದರ್ಶನ್ ಸೇರಿದಂತೆ ಪವಿತ್ರಾಗೌಡ ಹಾಗೂ 13 ಜನರನ್ನು ಬಂಧಿಸಲಾಗಿದೆ. ಇಂದು ಸಂಜೆ ಎಲ್ಲರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಮೃತರನ್ನು ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬೆಂಗಳೂರು ನಗರ ಆಯುಕ್ತ ಬಿ.ದಯಾನಂದ, “ಜೂನ್ 9 ರಂದು ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಇದೀಗ 13 ಜನರನ್ನು ಬಂಧಿಸಲಾಗಿದೆ. ಒಬ್ಬ ನಟನನ್ನು ವಶಕ್ಕೆ ತೆಗೆದುಕೊಳ್ಳಲಾಗುತ್ತದೆ. ತನಿಖೆಯ ನಂತರ ಕ್ರಮ ಕೈಗೊಳ್ಳಲಾಗುವುದು” ಎಂದು…

Read More

ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನನ್ನು ಬಂಧಿಸಲಾಗಿದೆ. ಈವರೆಗೆ 10 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಇದೀಗ ರೇಣುಕಾ ಸ್ವಾಮಿಯ ಕೊಲೆಯ ನಂತರ ಆತನ ಮೃತ ದೇಹವನ್ನು ಶಿಫ್ಟ್ ಮಾಡಿದ್ದೆ ರೋಚಕವಾಗಿದೆ. ವಿನಯ್ ಶೆಡ್ ನಲ್ಲಿ ರೇಣುಕಾ ಸ್ವಾಮಿಯ ಮರ್ಡರ್ ಮಾಡಲಾಗಿತ್ತು. ನಂತರ ಶೆಡ್ ನಿಂದ ಆಟೋದಲ್ಲಿ ರೇಣುಕಾ ಸ್ವಾಮಿ ಮೃತ ದೇಹವನ್ನು ಗ್ಯಾಂಗ್ ಸಾಗಿಸಿತ್ತು. ಬಡ್ಡಿ ಕಟ್ಟದೇ ಇದ್ದಿದ್ದಕ್ಕೆ ವಿನಯ್ ಆಟೋ ಒಂದನ್ನು ವಶಕ್ಕೆ ಪಡೆದಿದ್ದ ಎನ್ನಲಾಗಿದೆ. ಅದೇ ಆಟೋದಲ್ಲಿ ರೇಣುಕಾ ಸ್ವಾಮಿಯ ಮೃತದೇಹವನ್ನು ಈ ಗ್ಯಾಂಗ್ ಸಾಗಿಸಿತ್ತು. ಬಳಿಕ ರೇಣುಕಾ ಸ್ವಾಮಿ ಶವವನ್ನು ಸ್ಕಾರ್ಪಿಯೋ ಕಾರಿಗೆ ಶಿಫ್ಟ್ ಮಾಡಲಾಗಿತ್ತು. ಬಳಿಕ ಅಲ್ಲಿಂದ ರೇಣುಕಾ ಸ್ವಾಮಿ ಶವವನ್ನು ನಂತರ ಕಾಮಾಕ್ಷಿ ಪಾಳ್ಯದ ಮೋರಿಯಲ್ಲಿ ಮೃತದೇಹ ಎಸೆಯಲಾಗಿದೆ. ಮೃತದೇಹವನ್ನು ಮೊದಲಿಗೆ…

Read More

ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನನ್ನು ಬಂಧಿಸಲಾಗಿದೆ. ಈವರೆಗೆ 10 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರೇಣುಕಾಸ್ವಾಮಿ ಮೇಲೆ ಬೆಲ್ಟ್ ನಿಂದ ದರ್ಶನ್ ಹಲ್ಲೆ ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ನನ್ನ ಗೆಳತಿಗೆ ಕೆಟ್ಟದಾಗಿ ಮೆಸೇಜ್ ಮಾಡ್ತೀಯಾ ಅಂದ್ರು ಪಟ್ಟಿ ಮಾದರಿಯ ವಸ್ತುವಿನಿಂದ ಹಲ್ಲೆ ನಡೆಸಿದ್ದರು. ಎಂದು ವಿಚಾರಣೆಯ ವೇಳೆ ಮಾಹಿತಿ ಸಿಕ್ಕಿದೆ. ಹತ್ಯೆಯ ಬಳಿಕ ದರ್ಶನಗೆ ಆಪ್ತರು ಮಾಹಿತಿ ನೀಡಿದ್ದು, ರೇಣುಕಾಸ್ವಾಮಿಯನ್ನ ಗೋಡೆಗೆ ಎತ್ತಿ ಎತ್ತಿ ಬಿಸಾಕಿದ್ದಾರಂತೆ ಎಂದು ತನಿಖೆಯ ವೇಳೆ ಬಹಿರಂವಾಗಿದೆ. ಮೃತರನ್ನು ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬೆಂಗಳೂರು…

Read More

ತುಮಕೂರು : ಬೇಲಿಯೇ ಎದ್ದು ಹೊಲ ಮೆಯ್ದಂತೆ ಎಂಬ ಗಾದೆಯಂತೆ, ಕ್ರಿಮಿನಲ್ ಗಳ ಹೆಡೆಮುರಿ ಕಟ್ಟಿ ಒದ್ದು ಒಳಗೆ ಹಾಕಬೇಕಿರುವ ಪೊಲೀಸರೇ ಇದೀಗ ಪೊಲೀಸ್ ಇಲಾಖೆಯ ಮಾಹಿತಿಯನ್ನು ಕ್ರಿಮಿನಲ್ ಗಳಿಗೆ ರವಾನಿಸಿದ ಆರೋಪದ ಮೇರೆಗೆ ಐವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಹೌದು ಕ್ಯಾತಸಂದ್ರ ಠಾಣೆಯ ಮಂಜು, ಅಹೋಬಲ ನರಸಿಂಹಮೂರ್ತಿ, ಜಯನಗರ ಠಾಣೆ ಮನು ಎಸ್.ಗೌಡ, ಸಂಚಾರ ಪೊಲೀಸ್ ಠಾಣೆ ರಾಮಕೃಷ್ಣ ಹಾಗೂ ಎಸ್ಪಿ ಕಚೇರಿಯ ಸುರೇಶ್ ಅಮಾನತುಗೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಈ ಕುರಿತಂತೆ ಪೊಲೀಸ್ ಇಲಾಖೆಯ ಮಾಹಿತಿ ರವಾನಿಸುತ್ತಿದ್ದ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ತುಮಕೂರು ಎಸ್ಪಿ ಕೆ.ವಿ ಅಶೋಕ್ ಆದೇಶ ಹೊರಡಿಸಿದ್ದಾರೆ.ಮಂಜುನಾಥ್ ರೆಡ್ಡಿ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇವರು ಕ್ರಿಮಿನಲ್‍ಗಳಾದ ಮಂಜುನಾಥ್ ರೆಡ್ಡಿ, ನವೀನ್, ನರಸಿಂಹಮೂರ್ತಿ ಎಂಬವರಿಗೆ ಪೊಲೀಸ್ ಇಲಾಖೆಯ ಮಾಹಿತಿ ಸೋರಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಈ ಮೂವರು ಆರೋಪಿಗಳ ವಿರುದ್ಧ ದಂಡಿನಶಿವರ ಹಾಗೂ ತಿಲಕ್ ಪಾರ್ಕ್…

Read More

ಚಾಮರಾಜನಗರ : ಕಳೆದ ಜೂ.8 ರಂದು ಮೈಸೂರು ಜಿಲ್ಲೆಯ ಕೆ.ಆರ್​​.ನಗರ ತಾಲೂಕಿನ ಚಂದಗಾಲು ಗ್ರಾಮದ ಕುಟುಂಬ, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಹದೇಶ್ವರನ ದರ್ಶನ ಪಡೆದ ಬಳಿಕ ತಾಳಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ದೂರು ನೀಡಿದರೂ ಎಫ್ಐಆರ್ ದಾಖಲಿಸದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವ್ಯಕ್ತಿಯೊಬ್ಬನಿಂದ ಈ ಕುಟುಂಬದ ಅಪ್ರಾಪ್ತೆಯೊಬ್ಬಳು ಲೈಂಗಿಕ ಕಿರುಕುಳ ಹಾಗೂ ಬ್ಲ್ಯಾಕ್ ಮೇಲ್ ಗೆ ಒಳಗಾಗಿದ್ದಳು. ಆದರೆ, ಆ ಕುಟುಂಬ ಪೊಲೀಸರಿಗೆ ದೂರು ನೀಡಲು ಮುಂದಾದಾಗ ಅದನ್ನು ನಿರ್ಲಕ್ಷಿಸಿದ ಪೊಲೀಸರು ಆರೋಪಿಯ ವಿರುದ್ಧ ಎಫ್ಐಆರ್ ದಾಖಲಿಸಿರಲಿಲ್ಲ. ಅದೇ ಕಾರಣಕ್ಕೆ ಕುಟುಂಬ ಸದಸ್ಯರು ಆತ್ಮಹತ್ಯೆಗೆ ಮುಂದಾಗಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಕರ್ತವ್ಯ ಲೋಪ ವಹಿಸಿದ ಆರೋಪ ಮೇರೆಗೆ ಕೆಆರ್ ನಗರ ಠಾಣೆಯ ಇನ್‌ಸ್ಪೆಕ್ಟರ್ ಪಿ ಪಿ ಸಂತೋಷ್, ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಗಿರೀಶ್ ಹಾಗೂ ಮುಖ್ಯಪೇದೆ ರಾಘವೇಂದ್ರ ಅಮಾನತು ಶಿಕ್ಷೆ ವಿಧಿಸಿದೆ. ಜಿಲ್ಲಾ ಹೆಚ್ಚುವರಿ…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಒಂದು ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ A1, ಬಿ.ನಾಗೇಂದ್ರ A2, ನಿಗಮದ ಅಧ್ಯಕ್ಷ A3 ಆರೋಪಿಗಳಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರವಾದ ಆರೋಪ ಮಾಡಿದರು. ಇಂದು ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಬಿ.ನಾಗೇಂದ್ರ ಇಲ್ಲ. ಇದರ ಹಿಂದೆ ದೊಡ್ಡ ನಾಯಕರೇ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗೊತ್ತಿದ್ದೇ ಈ ಹಗರಣ ನಡೆದಿದೆ. ಇದರ ಜೊತೆ ಇನ್ನಷ್ಟು ಸಚಿವರೂ ಸೇರಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರಿಗೆ ಆರ್ಥಿಕತೆಯ ಬಗ್ಗೆ ಗೊತ್ತಿದೆಯೇ? ಇಲಾಖೆಯ ಮೇಲೆ ಇವರಿಗೆ ಹಿಡಿತವಿಲ್ಲವೇ? ಈ ಹಣ ಹೈದರಾಬಾದ್‌ಗೆ ಹೋಗಿದ್ದು ತಿಳಿದರೂ ಬೇರೆಯವರ ವಿರುದ್ಧ ಕಠಿಣ ಕ್ರಮ ವಹಿಸಿಲ್ಲ. ದಲಿತರ ಹಣವನ್ನು ವಾಪಸ್ ಮಾಡದಿದ್ದರೆ ಜನರ ಶಾಪ ತಟ್ಟಲಿದೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿಯೇ ಮೊದಲ ಆರೋಪಿಯಾಗಿದ್ದು, ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು. ಕಸದ…

Read More

ದಕ್ಷಿಣಕನ್ನಡ : 3ನೇ ಬಾರಿ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಪದಗ್ರಹಣ ಸ್ವೀಕಾರದ ನಂತರ ಮಂಗಳೂರಿನ ಬೋಳಿಯಾರುನಲ್ಲಿ ವಿಜಯೋತ್ಸವದ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿದ ಐವರು ಮುಸ್ಲಿಂ ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಹೌದು ನಿನ್ನೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಮಾಣವಚನ ಸ್ವೀಕರಿಸಿದರು. ಈ ಒಂದು ಸಂತೋಷದ ಘಳಿಗೆಯಲ್ಲಿ ಮಂಗಳೂರಿನ ಬೋಳಿಯಾರುನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸುತ್ತಿದ್ದರು ಈ ವೇಳೆ ಬಿಜೆಪಿಯ ಇಬ್ಬರು ಕಾರ್ಯಕರ್ತರಿಗೆ ಚಾಕು ಇರಿದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಸ್ಲಿಂನ ಐವರನ್ನು ಬಂಧಿಸಲಾಗಿದೆ. ಬಂಧಿತರನ್ನು ಶಾಕೀರ್(28), ಅಬ್ದುಲ್ ರಜಾಕ್(40), ಅಬೂಬಕ್ಕರ್ ಸಿದ್ದಿಕ್ (35), ಸವಾದ್(18) ಹಾಗೂ ಹಫೀಝ್ (24) ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಹಲ್ಲೆಗೆ ಒಳಗಾದವರನ್ನು ಹರೀಶ್ (41) ಹಾಗೂ ನಂದಕುಮಾರ್ (24)ಎಂದು ಗುರುತಿಸಲಾಗಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಬೊಳಿಯಾರ್ ಬಾರ್‌ನ ಮುಂಭಾಗದಲ್ಲಿ ಅಳವಡಿಕೆ ಮಾಡಿದ್ದ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಈ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೋಳಿಯಾರು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು…

Read More

ಬೆಂಗಳೂರು :ಒಂದು ವಾರದೊಳಗೆ ರೈತರಿಗೆ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. 40-41 ಲಕ್ಷ ರೈತರಿಗೆ ಪರಿಹಾರ ಪಾವತಿ ವಿತರಣೆ ಮಾಡಿದಂತಾಗುತ್ತೆ. 17 ಲಕ್ಷದ 9 ಸಾವಿರ ರೈತ ಕುಟುಂಬಕ್ಕೆ ಜೀವನೋಪಾಯ ಪರಿಹಾರ ನೀಡಲಿದ್ದೇವೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯ ಮದವರೊಂದಿಗೆ ಮಾತನಾಡಿದ ಅವರು, ಈ ವರ್ಷದ ಮುಂಗಾರು ಪರಿಸ್ಥಿತಿಯ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಜೂ.2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಹೀಗಾಗಿ ಮುಂದಿನ 15 ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಡಿಮೆ ಆಗಲಿದೆ ಎಂದು ಹೇಳಿದ್ದಾರೆ. ಒಂದು ವಾರದೊಳಗೆ ರೈತರಿಗೆ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. 2800 ರೂ. ಅಥವಾ 3000 ರೂ. ಬರಬಹುದು. ಇದು ಜೀವನೋಪಾಯ‌ ನಷ್ಟದ ಪರಿಹಾರ. ಇದು ಸಣ್ಣ, ಅತಿ ಸಣ್ಣ ರೈತರಿಗೆ ನೀಡುವ ಪರಿಹಾರವಾಗಿದೆ. 40-41 ಲಕ್ಷ ರೈತರಿಗೆ ಪರಿಹಾರ ಪಾವತಿ ವಿತರಣೆ ಮಾಡಿದಂತಾಗುತ್ತೆ. 17 ಲಕ್ಷದ 9 ಸಾವಿರ ರೈತ ಕುಟುಂಬಕ್ಕೆ ಜೀವನೋಪಾಯ ಪರಿಹಾರ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.…

Read More

ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆಯಲ್ಲಿ ಡಾ.ಕೆ ಸುಧಾಕರ ಗೆದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಯ ವಿಚಾರವಾಗಿ ಇದೀಗ ಏಕೆ ಪ್ರದೀಪ ಈಶ್ವರ ರಾಜೀನಾಮೆ ಕೊಡಿಸಿಲ್ಲ ಎಂದು ವ್ಯಕ್ತಿಯ ಮೇಲೆ ಡಾ.ಸುಧಾಕರ್ ಬೆಂಬಲಿಗರಿಬ್ಬರೂ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಹೌದು ನೂತನ ಸಂಸದ ಡಾ. ಸುಧಾಕರ್ ಬೆಂಬಲಿಗರ ವಿರುದ್ಧ ಇದೀಗ ಹಲ್ಲೆ ಆರೋಪ ಕೇಳಿ ಬಂದಿದ್ದು, ಬಿಯರ್ ಬಾಟಲ್ ನಿಂದ ತಿವಿದು ಕೊಲೆಗೆ ಯತ್ನಿಸಲಾಗಿದೆ ಎಂದು ಆರೋಪ ಕೇಳಿ ಬಂದಿದೆ. ಘಟನೆಯು ಚಿಕ್ಕಬಳ್ಳಾಪುರ ತಾಲೂಕಿನ ಕಣಜೇನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಗೋಪಾಲ ಎಂಬುವರ ಮೇಲೆ ಚಂದ್ರಪ್ಪ ಮತ್ತು ಅರ್ಜುನ್ ಹಲ್ಲೆ ನಡೆಸಿದ್ದಾರೆ. ಪ್ರದೀಪ್ ಈಶ್ವರ್ ಕರೆಸುವಂತೆ ದಮ್ಕಿ ಹಾಕಿದ ಆರೋಪ ಕೂಡ ಕೇಳಿ ಬಂದಿದೆ. ಸಂಸದ ಡಾ. ಸುಧಾಕರ್ ಬೆಂಬಲಿಗರ ವಿರುದ್ಧ ಇದೀಗ ಹಲ್ಲೆ ಆರೋಪ ಕೇಳಿ ಬಂದಿದ್ದು, ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸೆಕ್ಷನ್ 324, 504, 506…

Read More