Author: kannadanewsnow05

ರಾಯಚೂರು : ಬಟ್ಟೆ ತೊಳೆಯುವಾಗ ತಾಯಿ ಮಗಳು ಇಬ್ಬರು ಕಾಲುವೆಯಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಬಿ ಯದ್ಲಾಪುರ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ತಾಯಿ ಸುಜಾತ (27) ಮಗಳು ಶ್ರಾವಣಿ (10) ಕೊಚ್ಚಿ ಹೋದವರು ಎಂದು ತಿಳಿದು ಬಂದಿದೆ. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ತಾಯಿ ಹಾಗೂ ಮಗಳು ಕೊಚ್ಚಿ ಹೋಗಿದ್ದಾರೆ. ತಾಯಿಯ ಶವ ಪತ್ತೆಯಾಗಿದ್ದು, ಪುತ್ರಿಯ ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಧಾರವಾಡ : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಲು ಧಾರವಾಡದ ಶಿವಾಜಿ ವೃತ್ತದಲ್ಲಿ ಶಾಸಕ ಅರವಿಂದ್ ಬೆಲ್ಲ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಈ ವೇಳೆ ಪೊಲೀಸರು ಶಾಸಕ ಅರವಿಂದ್ ಬೆಲ್ಲದ ಸೇರಿದಂತೆ 50 ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಹುಬ್ಬಳ್ಳಿಗೆ ಹೋಗುವಾಗ ಸಿಎಂ ಸಿದ್ದರಾಮಯ್ಯಗೆ ಕಪ್ಪು ಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ನಿರ್ಧರಿಸಿತ್ತು. ಶ್ರೀ ಸಿದ್ದರಾಮಯ್ಯ ತೇಳುವ ರಸ್ತೆ ಬದಿಯಲ್ಲಿ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ನಿರ್ಧರಿಸಿತ್ತು. ಈ ವೇಳೆ ಕಾರ್ಯಕರ್ತರ ಬಳಿ ಇದ್ದ ಕಪ್ಪುಬಟ್ಟೆಯನ್ನು ಪೊಲೀಸರು ಕಸಿದುಕೊಂಡಿದ್ದಾರೆ. ಶಾಸಕ ಬೆಲ್ಲದ, ಅಮೃತ ದೇಸಾಯಿ ಸೇರಿದಂತೆ 50 ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಸರ್ಕಾರ ಹಳೆ ಹುಬ್ಬಳ್ಳಿ ಗಲಭೆಯ ವಿಚಾರವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪು ಪಟ್ಟಿಗೆ ಪ್ರದರ್ಶಿಸಲು…

Read More

ಶಿವಮೊಗ್ಗ : ಸಿಗಂದೂರಿಗೆ ಪ್ರವಾಸಕ್ಕೆ ಎಂದು ತೆರಳುತ್ತಿದ್ದ ಯುವಕರ ತಂಡ ಒಂದು ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ರಸ್ತೆ ಬದಿಯ ಭತ್ತಕ್ಕೆ ಪಲ್ಟಿಯಾಗಿದ್ದ ಪರಿಣಾಮ ಕಾರಿನಲ್ಲಿದ್ದ ಓರ್ವ ಯುವಕ ಸಾವನ್ನಪ್ಪಿದ್ದು ಇನ್ನೂ ಹಲವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಎಂಬಲ್ಲಿ ನಡೆದಿದೆ.  ಹೌದು ಕೆರೆಕೋಡಿ ಬಳಿ ಕಾರು ಪಲ್ಟಿಯಾಗಿ ಓರ್ವ ಯುವಕ ದುರ್ಮರಣ ಹೊಂದಿದ್ದಾನೆ. ಬೆಂಗಳೂರು ಜಿಲ್ಲೆಯ ನೆಲಮಂಗಲ ಮೂಲದ ಚಂದನ್ (26) ಎಂಬ ಯುವಕ ದಾರುಣವಾಗಿ ಸಾವನ್ನಪ್ಪಿದ್ದಾನೆ. ಸಿಗಂದೂರಿಗೆ ಪ್ರವಾಸಕ್ಕೆ ಯುವಕರ ತಂಡವನ್ನು ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಯಲ್ಲಿ ಕಾರು ಪಲ್ಟಿಯಾಗಿದೆ. ಈ ಒಂದು ಅಪಘಾತದಲ್ಲಿ ನೆಲಮಂಗಲ ಮೂಲದ ಚಂದನ್ ಎಂಬ ಯುವಕ ಸಾವನ್ನಪ್ಪಿದ್ದಾನೆ. ಇವರ ಜೊತೆಗೆ ಕಾರಿನಲ್ಲಿದ್ದ ಆತನ ಗೆಳೆಯರಾದ ನಂದನ್, ಕೋದಂಡ, ಭರತ್ ಹಾಗೂ ಯೋಗೇಶ್ ಗೆ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಮುಡಾ ಹಗರಣದಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನ ಶ್ರೀ ರೇಣುಕಾ ಎಲ್ಲಮ್ಮ ದೇವಿ ದರ್ಶನ ಪಡೆದುಕೊಂಡರು. ಇದೆ ವೇಳೆ ಪತ್ನಿ ಪಾರ್ವತಿ ಹೆಸರಿನಲ್ಲಿ ವಿಶೇಷ ಪೂಜೆ ಹಾಗೂ ಅರ್ಚನೆ ಮಾಡಿಸಿದರು. ಹೌದು ಇಂದು ಸಿಎಂ ಸಿದ್ದರಾಮಯ್ಯ ರೇಣುಕಾ ಎಲ್ಲಮ್ಮ ದೇವಿ ದರ್ಶನ ಪಡೆದುಕೊಂಡರು. ಎಲ್ಲಮ್ಮನ ಗುಡಿಯಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಲ್ಲಿ ಅರ್ಚನೆ ಮಾಡಿಸಿದರು. ಪಾರ್ವತಿ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು. ಬಳಿಕ ಆರತಿ ಮುಗಿಯುವವರೆಗೂ ಗರ್ಭಗುಡಿಯಲ್ಲಿಯ ನಿಂತು ಸಿಎಂ ಸಿದ್ದರಾಮಯ್ಯ ಎಲ್ಲಮ್ಮ ದೇವಿಯ ದರ್ಶನ ಪಡೆದರು.ಈ ವೇಳೆ ಆರತಿ ತಟ್ಟೆಗೆ 500 ರೂಪಾಯಿ ದಕ್ಷಿಣೆ ಹಾಕಿದರು. ಅಲ್ಲದೆ ಹಣೆಗೆ ತಾವೇ ಕುಂಕುಮ ಹಚ್ಚಿಕೊಂಡರು. ಈ ಸಂದರ್ಭದಲ್ಲಿ ಸಿಎಂ ತಲೆಯ ಮೇಲೆ ಅರ್ಚಕರು ನಾಗಮುದ್ರಿಕೆ ಇಟ್ಟು ಆಶೀರ್ವದಿಸಿದರು. ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗರ್ಭಗುಡಿಯಲ್ಲಿಯೇ ಸಾಷ್ಟಾಂಗ ನಮಸ್ಕಾರ ಹಾಕಿದರು. ಬಳಿಕ ಎಲ್ಲಮ್ಮ ದೇವಿ ಸನ್ನಿಧಾನದಲ್ಲಿ ಶಾಸಕ ವಿಶ್ವಾಸ ವೈದ್ಯ…

Read More

ಮೈಸೂರು : ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಪಟ್ಟಂತೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಲ್ಲಿ ಅಭ್ಯರ್ಥಿಯ ಕುರಿತಂತೆ ಗೊಂದಲ ಮೂಡಿದ್ದು, ಇನ್ನೂ ಕೂಡ ಯಾವುದೇ ಅಭ್ಯರ್ಥಿ ಘೋಷಣೆ ಮಾಡಿಲ್ಲ ಆದರೆ ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ನಾನೇ ಸ್ಪರ್ಧಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದರು. ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾವು ವ್ಯಕ್ತಿ ಮೇಲೆ ಚುನಾವಣೆ ಮಾಡಲ್ಲ. ಪಕ್ಷದ ಸಿದ್ಧಾಂತದ ಮೇಲೆ ಚುನಾವಣೆ ಮಾಡಲು ಹೊರಟಿದ್ದೇವೆ. ಚನ್ನಪಟ್ಟಣದಿಂದ ನಾನೇ ಸ್ಪರ್ಧಿಸುತ್ತೇನೆ. MP ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಹಿನ್ನಡೆ ಆಗಿತ್ತು. MLA ಚುನಾವಣೆಯಲ್ಲಿಯೂ ಹೆಚ್ಚು ಹಿನ್ನಡೆಯಾಗಿತ್ತು. ಈಗ ನಮ್ಮ ಬೇಸ್ ಸ್ಟ್ರಾಂಗ್ ಮಾಡುತ್ತಿದ್ದೇವೆ. ಜನ ಓಟ್ ಹಾಕಿ ಗೆಲ್ಲಿಸುತ್ತಾರೆಂಬ ನಂಬಿಕೆ ನನಗಿದೆ ಎಂದರು.

Read More

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಮೈಸೂರಿನಲ್ಲಿ ಒಂದು ತಿಂಗಳ ಪರ್ಯಂತ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತವೆ. ಅದರಲ್ಲಿ ಫಲಪುಷ್ಪ ಪ್ರದರ್ಶನ ಕೂಡ ಒಂದು. ಇದೀಗ ಈ ಒಂದು ಫಲ ಪುಷ್ಪ ಪ್ರದರ್ಶನದಲ್ಲಿ ಉಚಿತ ಪ್ರವೇಶ ಇದ್ದರೂ ಕೂಡ ಸಿಬ್ಬಂದಿಗಳು ಪ್ರವಾಸಿಗರಿಂದ ಅಕ್ರಮ ಹಣವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೌದು ಮೈಸೂರು ಫಲ ಪುಷ್ಪ ಪ್ರದರ್ಶನದಲ್ಲಿ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಸಿಬ್ಬಂದಿಗಳು ಟಿಕೆಟ್ ನೀಡಿ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಕಳೆದ ಹತ್ತು ದಿನಗಳಿಗೆ ಮಾತ್ರ ಟಿಕೆಟ್ ಪಡೆದು ವೀಕ್ಷಣೆಗೆ ಅವಕಾಶ ನೀಡಲಾಗಿತ್ತು. ಅದಾದ ಬಳಿಕ ಉಚಿತ ಪ್ರವೇಶ ಇದ್ದರೂ ಕೂಡ ಅಕ್ರಮವಾಗಿ ಸಿಬ್ಬಂದಿಗಳು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಇಂದು ಸಹ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಪ್ರದರ್ಶನಕ್ಕೆ ಆಗಮಿಸಿದ್ದಾರೆ.ಪ್ರವಾಸಿಗರಿಗೆ ಸಿಬ್ಬಂದಿಗಳು ಟಿಕೆಟ್ ನೀಡಿ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಈ ಕುರಿತು ಪ್ರಶ್ನೆ ಮಾಡಿದವರ…

Read More

ಹುಬ್ಬಳ್ಳಿ : ಹಳೆ ಹುಬ್ಬಳ್ಳಿ ಗಲಭೆಯನ್ನು ಕೇಸ್ ಅನ್ನು ರಾಜ್ಯ ಸರ್ಕಾರ ಹಿಂಪಡೆದ ವಿಚಾರವಾಗಿ, ಪ್ರಹ್ಲಾದ ಜೋಶಿ ಭಯೋತ್ಪಾದಕ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ, ಪ್ರಹ್ಲಾದ ಜೋಶಿ ಭಯೋತ್ಪಾದಕರಲ್ಲ ಜೋಶಿ ದೇಶಭಕ್ತರು. ಸಿಎಂ ಸಿದ್ದರಾಮಯ್ಯನವರೇ ಭಯೋತ್ಪಾದಕರು ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ವಿವಾದಾತ್ಮಕ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದವರ ಮೇಲೆ ದಾಖಲಾದ ಕೇಸ್ ಹಿಂಪಡೆದಿದ್ದೀರಿ. ಸಿದ್ದರಾಮಯ್ಯನವರೇ ಭಯೋತ್ಪಾದಕರು ರಾಜ್ಯದಲ್ಲಿ ನೀವು ರಾಜಕತೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದೀರಿ ಪೊಲೀಸರ ನೈತಿಕತೆ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಹೇಶ್ ತೆಂಗಿನಕಾಯಿ ಕಿಡಿ ಕಾರಿದರು.. ರಾಜಕತೆ ಸೃಷ್ಟಿ ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ಆಕ್ರೋಶ ಹೊರ ಹಾಕಿದರು.

Read More

ಹುಬ್ಬಳ್ಳಿ : ಕಳೆದ ಎರಡು ವರ್ಷಗಳ ಹಿಂದೆ ಅಂದರೆ 2022 ರಲ್ಲಿ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಅನ್ನು ಇತ್ತೀಚಿಗೆ ರಾಜ್ಯ ಸರ್ಕಾರ ಹಿಂಪಡೆದಿತ್ತು. ಈ ಒಂದು ವಿಚಾರವಾಗಿ ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದರು. ಅಲ್ಲದೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಗೆ ಭೇಟಿ ನೀಡಿದಾಗ ಹಲವು ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಕಾರಿಗೆ ಕಪ್ಪುಪಟ್ಟಿ ಪ್ರದರ್ಶಿಸಿದ ಘಟನೆ ನಡೆಯಿತು. ರಾಜ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ವಿಚಾರವಾಗಿ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಸಿಎಂ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಿದರು. ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಬಿಜೆಪಿ ಕಾರ್ಯಕರ್ತರಾದ ಜಗದೀಶ್ ಕಂಬಳಿ, ಮಂಜುನಾಥ್ ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಮುಡಾದಲ್ಲಿ 14 ಸೈಟ್ ಗಳನ್ನು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಿಂತಿರುಗಿಸಿದ್ದಾರೆ. ಇದರ ಮಧ್ಯ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಸ್ಥರು ಟ್ರಸ್ಟಿಗಳಾಗಿರುವ ಸಿದ್ದಾರ್ಥ್ ವಿಹಾರ ಟ್ರಸ್ಟ್​ ಸಹ 5 ಎಕರೆ ವಿಸ್ತೀರ್ಣದ ಸಿಎ ನಿವೇಶವನ್ನು ವಾಪಸ್ ನೀಡಲು ತೀರ್ಮಾನಿಸಿದೆ. ಹೌದು ಈ ಕುರಿತು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸಿ ತಮ್ಮ ಕುಟುಂಬದ ಟ್ರಸ್ಟ್​ಗೆ ನೀಡಲಾಗಿದ್ದ ಸೈಟ್​ ಹಿಂದಿರುಗಿಸುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ಕೆಐಎಡಿಬಿ ಹಂಚಿಕೆ ಮಾಡಿದ್ದ ಭೂಮಿ ವಾಪಸ್​​ಗೆ ನಿರ್ಧರಿಸಲಾಗಿದೆ. ಕಾನೂನು ಬಾಹಿರವಾಗಿ ಸೈಟ್ ಹಂಚಿಕೆಯಾಗಿದೆ ಎಂಬ ಆರೋಪವಿತ್ತು. ಈ ವಿಚಾರದಲ್ಲಿ ಟ್ರಸ್ಟ್ ಅಧ್ಯಕ್ಷ ರಾಹುಲ್​ಗೆ ಮಾಹಿತಿ ಇರಲಿಲ್ಲ ಅನಿಸುತ್ತೆ. ನಮ್ಮ ಕುಟುಂಬದಲ್ಲಿ ಮೂವರು ಅಷ್ಟೇ ರಾಜಕೀಯದಲ್ಲಿ ಇದ್ದೇವೆ. ನಮ್ಮ ಅಣ್ಣ ಅವರು ಮೃದು ಸ್ವಭಾವದವರು. ಅವರಿಂದ ಕುಟುಂಬದ ಸದಸ್ಯರರಿಗೆ ಹಿಂಸೆ ಆಗುತ್ತಿದೆ ಎಂದು ನೊಂದಿದ್ದಾರೆ . ಹೀಗಾಗಿ ಸೆಪ್ಟೆಂಬರ್ 29 ರಂದು ಅವರು ಕೆಐಎಡಿಬಿಗೆ ಪತ್ರ ಬರೆದಿದ್ದಾರೆ. ಸೈಟ್ ಕೊಟ್ಟಿರೋದನ್ನ ಕಾನೂನಾತ್ಮಕ…

Read More

ಹುಬ್ಬಳ್ಳಿ : ರಾಜ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ವಿಚಾರವಾಗಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಕೇಸ್ ಇದ್ದಿದ್ದರಿಂದ ಉದ್ದೇಶಪೂರ್ವಕವಾಗಿ ಮೊಕದ್ದಮೆ ಹಾಕಿದ್ದಾರೆ. ಹೋರಾಟ ಮಾಡಿದಾಗ ಕೇಸ್ ಹಾಕಿದ್ದರೆ ವಾಪಸ್ ತೆಗೆದುಕೊಳ್ಳುವ ಅವಕಾಶವಿದೆ ಎಂದು ಹುಬ್ಬಳ್ಳಿಯ ಏರ್ಪೋರ್ಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲರ ಕಾಲದಲ್ಲೂ ಪ್ರಕರಣ ವಾಪಸ್ ಪಡೆದ ಉದಾಹರಣೆಗಳಿವೆ ಸುಳ್ಳು. ಕೇಸ್ ಇದೆ ಎಂಬ ಕಾರಣಕ್ಕೆ ವಾಪಸ್ ಪಡೆಯಲಾಗಿದೆ. ಕೋರ್ಟ್ ಅವಕಾಶ ಕೊಟ್ಟರೆ ಮಾತ್ರ ಕೇಸ್ ಹಿಂಪಡೆಯುತ್ತೇವೆ. ನಮ್ಮ ಕ್ಯಾಬಿನೆಟ್ ನಿರ್ಧಾರವನ್ನು ನ್ಯಾಯಾಲಯಕ್ಕೆ ತಿಳಿಸುತ್ತೇವೆ ಎಂದರು. ನ್ಯಾಯಾಲಯ ಒಪ್ಪಿದರೆ ಮಾತ್ರ ಕೇಸ್ ವಾಪಸ್ ಆಗುತ್ತದೆ ಸುಖಾ ಸುಮ್ಮನೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಾರೆ. ಸಂಪುಟ ಸಭೆಯಲ್ಲಿ ಹುಬ್ಬಳ್ಳಿ ಗಲಭೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 43 ಕೇಸ್ ಗಳನ್ನು ಹಿಂಪಡೆಯಲಾಗಿದೆ.ಆದರೆ ಬಿಜೆಪಿ ಸುಮ್ಮನೆ ಪ್ರತಿಭಟನೆ ಮಾಡುತ್ತಿದೆ ಎಂದು ಹುಬ್ಬಳ್ಳಿಯ ಏರ್ಪೋರ್ಟ್ ನಲ್ಲಿ…

Read More