Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ವಿಚ್ಛೇದನದ ಬಳಿಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ನಿವೇದಿತಾ ಯಾವುದೇ ಜೀವನಾಂಶ ಪಡೆದುಕೊಂಡಿಲ್ಲ ನಿವೇದಿತಾ ಇಂಡಿಪೆಂಡೆಂಟ್ ಮಹಿಳೆಯಾಗಿದ್ದಾರೆ ಜೊತೆ ಇದಾಗಲೂ ತಮ್ಮ ಕೆಲಸ ತಾವು ನೋಡ್ಕೋತಿದ್ದರು. ಮೂರನೇ ವ್ಯಕ್ತಿ ಜೊತೆ ನಿವೇದಿತಾ ಸಂಬಂಧ ಕಲ್ಪಿಸುವುದು ಬೇಸರ ತರಿಸಿದೆ ಎಂದು ತಿಳಿಸಿದರು. ಇತ್ತೀಚಿಗೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವೈಯಕ್ತಿಕ ಕಾರಣಗಳಿಂದ ವಿಚ್ಛೇದನ ಪಡೆದಿದ್ದರು ಇ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ವದಂತಿಗಳು ಹರಡಿದ್ದವು. ಇದೀಗ ಈ ಒಂದು ವದಂತಿಗೆ ಚಂದನ್ ಶೆಟ್ಟಿ ತೆರೆ ಎಳೆದಿದ್ದು,ನಿವೇದಿತಾ ಯಾವುದೇ ಜೀವನಾಂಶ ಪಡೆದುಕೊಂಡಿಲ್ಲ ನಿವೇದಿತಾ ಇಂಡಿಪೆಂಡೆಂಟ್ ಮಹಿಳೆಯಾಗಿದ್ದಾರೆ ಜೊತೆ ಇದಾಗಲೂ ತಮ್ಮ ಕೆಲಸ ತಾವು ನೋಡ್ಕೋತಿದ್ದರು. ಮೂರನೇ ವ್ಯಕ್ತಿ ಜೊತೆ ನಿವೇದಿತಾ ಸಂಬಂಧ ಕಲ್ಪಿಸುವುದು ಬೇಸರ ತರಿಸಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮಿಬ್ಬರ ಆಲೋಚನೆ ಜೀವನಶೈಲಿ…

Read More

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ನಿರೀಕ್ಷಿತ ಸ್ಥಾನಗಳನ್ನು ಪಡೆಯದೆ ಇದದರಿಂದ ಇದೀಗ ಕಾಂಗ್ರೆಸ್ ಹಲವು ಶಾಸಕರು ನಾಲಿಗೆ ಹರಿಬಿಡುತ್ತಿದ್ದಿದ್ದು, ಈ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಶಾಸಕರು ಬಾಯಿ ಮುಚ್ಕೊಂಡಿದ್ದರೆ ಒಳ್ಳೆಯದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು 14 ಇಲ್ಲ 15 ಸೀಟ್ ಬರುತ್ತೆ ಅಂತ ನಮಗೆ ವಿಶ್ವಾಸವಿತ್ತು. ಆದರೆ ನಾವು ವಿಫಲರಾಗಿದ್ದೇವೆ. ಜನ ಏನು ತೀರ್ಪು ಕೊಟ್ಟಿದ್ದಾರೆ ಅದಕ್ಕೆ ನಾವು ತಲೆಬಾಗಲೇಬೇಕಾಗುತ್ತದೆ. ನನ್ನ ಕ್ಷೇತ್ರದಲ್ಲಿ ಕೆಲವು ಲೀಡ್ ಬರುವಂತಹ ಕ್ಷೇತ್ರಗಳಲ್ಲಿ ವೋಟ್ ಬರ್ಲಿಲ್ಲ. ನಾನು ಕೂಡ ಅದನ್ನು ಪರಿಶೀಲಿರಿಶೀಲನೆ ಮಾಡುತ್ತಿದ್ದೀನಿ ಯಾಕೆ ಹೀಗಾಗಿದೆ ಎಂದು ಸೋಲು ಕಡಿಮೆಯಾಗಿರುವುದು ಒಪ್ಪಿಕೊಳ್ಳಲೇ ಬೇಕಾಗುತ್ತದೆ ಜನ ತೀರ್ಮಾನ ಕೊಟ್ಟಿದ್ದಾರೆ ಸ್ವೀಕರಿಸಲೇಬೇಕು ಎಂದರು.

Read More

ಬೆಂಗಳೂರು : ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದರಾಗಿದ್ದು ಇದೀಗ ಬೆಂಗಳೂರಿನ 42ನೇ ಎಸಿಎಂ ನ್ಯಾಯಾಲಯವು ಜೂನ್ 24ರ ವರೆಗೆ ನ್ಯಾಯಾಂಗ ಬಂದನ ವಿಧಿಸಿ ಆದೇಶ ಹೊರಡಿಸಿದೆ. ಎಸ್ಐಟಿ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಎಸ್ಐಟಿ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟಿಗೆ ಹಾಜರುಪಡಿಸಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಜ್ವಲ್ ರೇವಣಗೆ 14 ದಿನಗಳ ಕಾಲ ಅಂದರೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಎಸ ಐ ಟಿ ಅಧಿಕಾರಿಗಳು ಕೋರ್ಟಿಗೆ ಹಾಜರುಪಡಿಸಿದ್ದ ವೇಳೆ ಎಸ್ಐಟಿ ಅಧಿಕಾರಿಗಳು ಈ ವೇಳೆ ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ಸಲ್ಲಿಸಿದ್ದರು. ಈ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣಗೆ ಜೂನ್ 24ರ ವರೆಗೆ ನ್ಯಾಯಮದ ವಿಧಿಸಿ ಆದೇಶ ಹೊರಡಿಸಿದ್ದಾರೆ.

Read More

ಶಿವಮೊಗ್ಗ : ದೊಡ್ಮನೆ ರಾಜಕುಮಾರ್ ಕುಟುಂಬದ ನಟ ಯುವರಾಜ್ ಕುಮಾರ್ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು ಈಗಾಗಲೇ ಅವರು ಸಲ್ಲಿಸುತ್ತಾರೆ ಈ ವಿಚಾರವಾಗಿ ಶಿವಮೊಗ್ಗದಲ್ಲಿ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು ನನಗೆ ಈ ವಿಚಾರವಾಗಿ ಯಾವುದೇ ವಿಷಯ ಗೊತ್ತಿಲ್ಲ. ಗೊತ್ತಿಲದೇ ನಾನು ಯಾವುದೇ ವಿಷಯವನ್ನು ಮಾತನಾಡುವುದಿಲ್ಲ ಎಂದು ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಗೊತ್ತಿದ್ರೆ ಮಾತ್ರ ಮಾತಾಡಬೇಕು. ಗೊತ್ತಿಲ್ಲದೆ ನಾನು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲ್ಲ ಅದು ಅವರವರ ವೈಯಕ್ತಿಕ ವಿಚಾರ. ನಾನು ಮಾತಾಡೋದು ಸರಿಯಲ್ಲ. ಬೆಂಗಳೂರಿಗೆ ನಾನು ಹೋಗುತ್ತಿದ್ದೇನೆ ಏನಾಗುತ್ತದೆ ನೋಡೋಣ ಎಂದು ಶಿವಮೊಗ್ಗದಲ್ಲಿ ನಟ ಶಿವರಾಜ್ ಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನು ಇದೇ ವಿಚಾರವಾಗಿ ಗೀತಾ ಶಿವರಾಜಕುಮಾರ್ ಅವರು ಕೂಡ ಪ್ರತಿಕ್ರಿಯೆ ನೀಡಿದ್ದು, ಇದು ನಮ್ಮ ಮನೆಯ ಒಂದು ವಿಚಾರ ವೈಯಕ್ತಿಕ ವಿಚಾರವಾಗಿರುವುದರಿಂದ ಈ ವಿಚಾರವಾಗಿ ನಾನು ಯಾವುದೇ ಹೇಳಿಕೆಗಳನ್ನು ನೀಡಲು ಇಷ್ಟಪಡುವುದಿಲ್ಲ ಎಂದು ಗೀದಾ ಶಿವರಾಜಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

Read More

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಸ್ಥಾನಗಳು ಬಂದಿಲ್ಲವಾದ್ದರಿಂದ ಈಗಾಗಲೇ ಕಾಂಗ್ರೆಸ್ಸಿನ ಹಲವು ಶಾಸಕರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಕುರಿತಂತೆ ಹೇಳಿಕೆಗಳನ್ನು ನೀಡಿದ್ದು, ಇದೀಗ ಮಾರಿ ಶಾಸಕ ಎಚ್ಎಮ್ ರೇವಣ್ಣ ಅವರು ಯೋಜನೆಗಳಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೆ ಸರಿಪಡಿಸುತ್ತೇವೆ ಆದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯೋಜನೆಗಳಲ್ಲಿ ಮಾರ್ಪಾಡು ಅಥವಾ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೆ ಅದನ್ನು ಸರಿಪಡಿಸುತ್ತೇವೆ ಅದು ಬಿಟ್ಟು ಯಾವುದೇ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಎಲ್ಲಾ ಹಿರಿಯರು ಕೂತು ಪರಾಮರ್ಶೆ ಮಾಡುತ್ತೇವೆ. ಸಿಎಂ ಡಿಸಿಎಂ ಕೂಡ ಯೋಜನೆಗಳನ್ನು ನಿಲ್ಲಿಸಲ್ಲ ಅಂತ ಹೇಳಿದ್ದಾರೆ. ಸಿಎಂ ಮಾತಿಗೆ ಬೆಲೆ ಕೊಡಬೇಕಾ? ಶಾಸಕನ ಮಾತಿಗೆ ಬೆಲೆ ಕೊಡಬೇಕಾ? ದೇಶದ ಜನರು ಬಿಜೆಪಿ ತಿರಸ್ಕರಿಸಿದ್ದಾರೆ. ಸ್ಪಷ್ಟ ಬಹುಮತ ಬಂದಿಲ್ಲ. ಮೈತ್ರಿ ಮಾಡಿಕೊಂಡು ಮೋದಿ ಪ್ರಧಾನಿಯಾಗಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಎಚ್ ಎಂ ರೇವಣ್ಣ ಹೇಳಿಕೆ ನೀಡಿದರು.

Read More

ಬೆಂಗಳೂರು : ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿಯು ಈಗಾಗಲೇ ದೇಶದ ಇತರೆ ರಾಜ್ಯಗಳ ಘನತ್ಯಾಜ್ಯ ಶುಲ್ಕದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಾಗೂ ಕಡಿಮೆ ಹಣ ವಸೂಲಿಗೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ. ಸರ್ಕಾರ ಇದಕ್ಕೆ ಒಪ್ಪಿದರೆ ಆದಷ್ಟು ಬೇಗ ಬೆಂಗಳೂರಿನಲ್ಲಿ ಪ್ರತಿಯೊಂದು ಮನೆಯಿಂದ 100ರೂ ಘನತ್ಯಾಜ್ಯ ಶುಲ್ಕ ಸಂಗ್ರಹಿಸಲಾಗುತ್ತೆ. ರಾಜ್ಯ ಸರ್ಕಾರದ ಈ ಗ್ರಾಮವನ್ನು ಖಂಡಿಸಿ ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯನ್ನು ಮಾಡಿಲ್ಲ. ಹೀಗಾಗಿ ಸಚಿವರು ಕೈ ಶಾಸಕರ ಕ್ಷೇತ್ರಗಳಲ್ಲಿ ಬಿಜೆಪಿಗೆ ಲೀಡ್ ಕೊಟ್ಟಿದ್ದಾರೆ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು. ಈಗಾಗಲೇ ಹಾಲು, ಲಿಕ್ಕರ್, ವಿದ್ಯುತ್, ಮನೆ ತೆರಿಗೆ ಹೆಚ್ಚಳವಾಗಿದೆ. ಈಗ ಘನ ತ್ಯಾಜ್ಯಕ್ಕೆ ತೆರಿಗೆ ಹಾಕಲು ಸರ್ಕಾರ ಮುಂದಾಗಿದೆ. ಕಸದ ಮೇಲೆ ತೆರಿಗೆ ವಿಧಿಸುವುದನ್ನು ಬಿಜೆಪಿ ವಿರೋಧಿಸುತ್ತದೆ.ಸರ್ಕಾರ ಕಸಕ್ಕೆ ತೆರಿಗೆ ವಿಧಿಸಿದರೆ ಬಿಜೆಪಿ ಹೋರಾಟ ಮಾಡುತ್ತದೆ.ಕಸದ ಮೇಲು ತೆರಿಗೆ…

Read More

ಬೆಂಗಳೂರು : ದೊಡ್ಮನೆ ರಾಜಕುಮಾರ್‌ ಕುಟುಂಬದ ನಟ ಯುವರಾಜ್‌ ಕುಮಾರ್‌ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನಕ್ಕೆ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ನನಗೆ ಮಾನಸಿಕವಾಗಿ ಹಿಂಸೆ ನೀಡಲಾಗುತ್ತಿದೆ ಎಂದು ಆರೋಪಿಸಿ ಕೋರ್ಟ್ ಮೂಲಕ ನಟ ಯುವರಾಜ್‌ ಕುಮಾರ್‌ ಪತ್ನಿ ಶ್ರೀದೇವಿಗೆ ನೋಟಿಸ್ ಕೂಡ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಆರು ತಿಂಗಳಿನಿಂದ ಪತ್ನಿ ಶ್ರೀದೇವಿಯಿಂದ ದೂರವಿರುವ ನಟ ಯುವರಾಜ್‌ ಕುಮಾರ್‌ ಅವರು ವಿಚ್ಚೇದನಕ್ಕೆ ಫ್ಯಾಮೀಲಿ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್​ಕುಮಾರ್ ಅಲಿಯಾಸ್‌ ಯುವ ರಾಜ್​ಕುಮಾರ್ ಅವರು ಫ್ಯಾಮಿಲಿ ಕೋರ್ಟ್​​ನಲ್ಲಿ ಡಿವೋರ್ಸ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ. ಯುವ ರಾಜ್‌ಕುಮಾರ್ 2019 ಮೇ 26ರಂದು ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿ ಶ್ರೀದೇವಿ ಭೈರಪ್ಪ ಎಂಬುವವರನ್ನು ಮದುವೆಯಾದರು. ಶ್ರೀದೇವಿ ಮೂಲತಃ ಸಾಂಸ್ಕೃತಿಕ ನಗರಿ ಮೈಸೂರಿನವರು. ಇವರಿಬ್ಬರು ಏಳು ವರ್ಷಗಳಿಂದ ಪರಸ್ಪರ ಸ್ನೇಹಿತರಾಗಿದ್ದರು. ಈ ಸ್ನೇಹ ಪ್ರೀತಿಗೆ ತಿರುಗಿ ಮದುವೆಯಾದರು. ಡಿವೋರ್ಸ್ ವಿಚಾರಕ್ಕೆ ಈಗಾಗಲೇ…

Read More

ನವದೆಹಲಿ : ಕರ್ನಾಟಕ ರಾಜ್ಯದ ಹಾಗೂ ಕೇಂದ್ರದಲ್ಲಿ ವಿತ್ತ ಸಚಿವೆಯಾಗಿ ಕಾರ್ಯನಿರ್ವಹಿಸುತ್ತಿರುವ ನಿರ್ಮಲ ಸೀತಾರಾಮನ್ ಅವರು, ಇಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ. ಇದು 1962 ರಲ್ಲಿ ಜವಾಹರಲಾಲ್ ನೆಹರು ಮಾತ್ರ ಸಾಧಿಸಿದ ಸಾಧನೆಯಾಗಿದೆ. ಇದಕ್ಕೂ ಮೊದಲು ಜೆಪಿ ನಡ್ದಾ, ಅಮಿತ್ ಶಾ, ರಾಜನಾಥ ಸಿಂಗ್, ಅವರಿಗೆ ರಾಷ್ಟ್ರಪತಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ರಾಜ್ಯದ ನೂತನ ಸಂಸದರಾಗಿರುವ ಎಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಪ್ರಭಾಕರಂದರಾಜೆ ಅವರಿಗೂ ಕೂಡ ರಾಷ್ಟ್ರಪತಿಯವರು ಪ್ರತಿಜ್ಞಾವಿಧಿ ಬೋಧಿಸಿದರು.

Read More

ನವದೆಹಲಿ : ಈ ಬಾರಿ ಚಿಕ್ಕಮಂಗಳೂರು ಉಡುಪಿ ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು ಇಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಶೋಭಾ ಕರಂದ್ಲಾಜೆ ಅವರು 2004ರಲ್ಲಿ ಬಿಜೆಪಿ ಎಂಎಲ್ಸಿಯಾಗಿ ಆಯ್ಕೆಯಾಗಿದ್ದಾರೆ. 2014ರಲ್ಲಿ ಉಡುಪಿ ಚಿಕ್ಕಮಂಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. 2019 ರಲ್ಲಿ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿದ್ದು, ಶಾಸಕಿ,ಎಂಎಲ್ಸಿ ಹಾಗೂ ಸಂಸದರಾಗಿ ಆಯ್ಕೆಯಾಗಿದ್ದಾರೆ. 2018 ರಲ್ಲಿ ಬೆಂಗಳೂರಿನ ಯಶವಂತಪುರದ ಶಾಸಕಿಯಾಗಿದ್ದಾರೆ. ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ.…

Read More

ಜಮ್ಮುಕಾಶ್ಮೀರ : ಇಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ದೇಗುಲದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 10 ಯಾತ್ರಾರ್ಥಿಗಳು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಶಿವಖೋಡಾ ದೇವಸ್ಥಾನದಿಂದ ಕತ್ರಾಕ್ಕೆ ಹಿಂತಿರುಗುತ್ತಿದ್ದಾಗ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ರಜೌರಿ, ಪೂಂಚ್ ಮತ್ತು ರಿಯಾಸಿಯ ಮೇಲ್ಭಾಗದಲ್ಲಿ ಅಡಗಿರುವ ಭಯೋತ್ಪಾದಕರ ಗುಂಪೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಈ ವೇಳೆ ತಕ್ಷಣ ತಳಕ್ಕೆ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದರು. ಈ ವೇಳೆ ಪೊಲೀಸ್, ಸೇನೆ ಮತ್ತು ಅರೆಸೇನಾ ಪಡೆಗಳ ಬಲವರ್ಧನೆಯು ಸ್ಥಳಕ್ಕೆ ಧಾವಿಸಿತು. ದಾಳಿ ನಡೆಸಿದ್ದರಿಂದ ಈ ಪ್ರದೇಶವು ಇದೀಗ ಉದ್ವಿಗ್ನವಾಗಿದೆ, ಸಾವುನೋವುಗಳ ಬಗ್ಗೆ ಅಧಿಕಾರಿಗಳು ಇನ್ನಷ್ಟೇ ಮಾಹಿತಿ ನೀಡಲಿದ್ದಾರೆ.

Read More