Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : ಮಂಡ್ಯ ಲೋಕಸಭಾ ರಣಕಣ ರಂಗೇರಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ವಾರ್ ಚಂದ್ರು) ಸೋಮವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನಾ ಟೆಂಪಲ್ ರನ್ ಮಾಡಿದ್ದ ಅವರು, ಶ್ರೀ ಆದಿ ಚುಂಚನಗಿರಿ ಮಠದಲ್ಲಿ ಶ್ರೀ ಕಾಲ ಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದರು. https://kannadanewsnow.com/kannada/breaking-%e0%b2%ae%e0%b3%88%e0%b2%b8%e0%b3%82%e0%b2%b0%e0%b2%b2%e0%b3%8d%e0%b2%b2%e0%b2%bf-jds%e0%b2%97%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%8a%e0%b2%82%e0%b2%a6%e0%b3%81/ ಮಂಡ್ಯ ನಗರದ ಶಕ್ತಿ ದೇವತೆ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಬೆಳಿಗ್ಗೆ 10.30 ರ ವೇಳೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ಶಾಸಕರಾದ ನರೇಂದ್ರ ಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಕದಲೂರು ಉದಯ್, ಪುಟ್ಟಸ್ವಾಮಿಗೌಡ, ಶರತ್ ಬಚ್ಚೇಗೌಡ, ಗಣಿಗ ರವಿಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರು ಸೇರಿದಂತೆ ಸಾವಿರಾರು ಕಾರ್ಯಕರ್ತರು ಜೊತೆಗೂಡಿ ವಿಶೇಷ ಪೂಜೆ ಸಲ್ಲಿಸಿದರು. https://kannadanewsnow.com/kannada/hc-adjourns-hearing-for-2-weeks-on-pil-petition-seeking-steps-not-to-lure-voters-during-elections/ ಬಳಿಕ ತೆರೆದ ವಾಹನದಲ್ಲಿ ಶ್ರೀ ಕಾಳಿಕಾಂಬ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಮೆರವಣಿಗೆ ಮಾಡುವ ಮೂಲಕ ಕಾಂಗ್ರೇಸ್ ಅಭ್ಯರ್ಥಿ ಸ್ವಾರ್ ಚಂದ್ರು ತಮ್ಮ ಬಲ ಪ್ರದರ್ಶನ ಮಾಡಿದರು.ನಂತರ 1.15…
ಮೈಸೂರು : ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದೆ. ಹೌದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಭಾರತಿ ಶಂಕರ್ ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು. ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸೇರ್ಪಡೆಗೊಂಡರು. ಈ ವೇಳೆ ಕಾಂಗ್ರೆಸ್ ಬಾವುಟ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾರತೀ ಶಂಕರ್ ರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರತಿ ಶಂಕರ್ ವರುಣ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದರು. ಕೆ.ಪಿ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ಇನ್ನೂ ನಿನ್ನೆ ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪರಮಾಪ್ತ, ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ ಅವರು ಜೆಡಿಎಸ್ ತೊರೆದು, ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್…
ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾರಿಗೆ ಗ್ಯಾರಂಟಿ ಕಾರ್ಡ್ ಗಳ ಮೂಲಕ ಅಮಿಷ ಒಡ್ಡಲಾಗಿತ್ತು. ಹೀಗಾಗಿ ಈ ಬಾರಿ ಲೋಕಸಭೆ ಚುನಾವಣೆ ವೇಳೆ ಮತದಾರರಿಗೆ ಆಮಿಷ ಒಡ್ಡದಂತೆ ಕ್ರಮ ಕೋರಿ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಇತರರು ಸಲ್ಲಿಸಿದ ಪಿಐಎಲ್ ಅನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಚುನಾವಣೆ ವೇಳೆ ಮತದಾರರಿಗೆ ಆಮಿಷ ಒಡದಂತೆ ಕ್ರಮ ಕೋರಿ ಇದೀಗ ಹೈಕೋರ್ಟಿಗೆ ಪಿ ಐ ಎಲ್ ಸಲ್ಲಿಸಲಾಗಿದೆ. ಹೈಕೋರ್ಟಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಮತ್ತಿತರರ PIL ಅರ್ಜಿ ಸಲ್ಲಿಸಲಾಗಿದ್ದು ಅರ್ಜಿಯ ಕುರಿತು ಆಕ್ಷೇಪಣೆ ಸಲ್ಲಿಸಲು ಚುನಾವಣಾ ಆಯೋಗ ಕಾಲಾವಕಾಶ ಕೋರಿದೆ. ಹೀಗಾಗಿ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್ 2 ವಾರಗಳ ಕಾಲ ಮುಂದೂಡಿತು. ಆಧುನಿಕ ತಂತ್ರಜ್ಞಾನ ಬಳಸಿ ಮತದಾರರಿಗೆ ಅಮಿಷ ಒಡ್ಡಲಾಗುತ್ತಿದೆ. ಮತದಾರರಿಗೆ ಗ್ಯಾರಂಟಿ ಕಾರ್ಡ್ ನೀಡಿ ಆಮಿಷ ಒಡ್ಡಲಾಗಿದೆ.ಇದರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಿಲ್ಲ.ಕರ್ನಾಟಕ ಮಾಡೆಲ್ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿದೆ. ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿದೆ. 2023 ವಿಧಾನಸಭಾ ಚುನಾವಣೆಯ…
ಮಂಡ್ಯ : ಮಂಡ್ಯ ಜಿಲ್ಲೆಯಿಂದ ನಮಗೆ ಅಧಿಕ ಸೀಟ್ ಕೊಟ್ಟಿದ್ದೀರಿ ನಿಮ್ಮ ನಂಬಿಕೆಯನ್ನು ಹೊಸಿಗೊಳಿಸಿಲ್ಲ ಹಾಗಾಗಿ ಈ ಬಾರಿ ಎಂಟು ಮಂದಿ ವಕ್ಕಲಿಗರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ನಾನು ಸದಾ ಮಂಡ್ಯದ ಸ್ವಾಭಿಮಾನದ ಜೊತೆಗೆ ಇರುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. https://kannadanewsnow.com/kannada/case-registered-against-comedy-khiladi-shivaraj-k-r-pet-for-abusing-woman/ ನಾನು ಮಂಡ್ಯ ಸ್ವಾಭಿಮಾನದ ಜೊತೆಗೆ ಇರುತ್ತೇನೆ ಎಂದು ಮಂಡ್ಯದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಸ್ಥಳೀಯರನ್ನು ಆಯ್ಕೆ ಮಾಡಿ ಮಂಡ್ಯದ ಗೌಡಿಕೆಯನ್ನು ಬೇರೆಯವರಿಗೆ ಕೊಟ್ಟಿಲ್ಲ. ಕಳೆದ ಬಾರಿ ಮೈತ್ರಿಯಂತೆ ಎಚ್ ಡಿ ಕುಮಾರಸ್ವಾಮಿಗೆ ಸಹಾಯ ಮಾಡಲು ಬಂದಿದ್ದೆ. ಆದರೆ ಎಚ್ ಡಿ ಕುಮಾರಸ್ವಾಮಿಗೆ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ ತಮ್ಮ ಅಧಿಕಾರ ತೆಗೆದವರ ಜೊತೆ ಎಚ್ ಡಿ ಕುಮಾರಸ್ವಾಮಿ ಹೋಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. https://kannadanewsnow.com/kannada/lokayukta-has-no-power-to-direct-government-employees-to-be-held-responsible-for-inquiry-hc/ ಈ ಬಾರಿ ಎಂಟು ಮಂದಿ ಒಕ್ಕಲಿಗರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದೇವೆ.ನನ್ನ ನೋಡಿ ಮಂಡ್ಯ ಜಿಲ್ಲೆಯಲ್ಲಿ ಅಧಿಕ ಸೀಟ್ ಕೊಟ್ಟಿದ್ದೀರಿ.ನಿಮ್ಮ ನಂಬಿಕೆಯನ್ನು ಹೊಸಿಗೊಳಿಸಿಲ್ಲ. ಎಚ್ ಡಿ ಕುಮಾರಸ್ವಾಮಿ ಹಾಸನದಿಂದ…
ಬೆಂಗಳೂರು : ನಾಗರಿಕ ಸೇವಾ ನಿಯಮ 14ಎ ಅಡಿ ಸರ್ಕಾರಿ ನೌಕರರ ವಿರುದ್ಧ ವಿಚಾರಣೆಗೆ ಕೇವಲ ಶಿಫಾರಸು ಮಾಡಬಹುದೇ ಹೊರತು, ವಿಚಾರಣೆ ನಡೆಸುವ ಹೊಣೆ ವಹಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಲೋಕಾಯುಕ್ತ, ಉಪ ಲೋಕಾಯುಕ್ತರಿಗೆ ಯಾವುದೇ ಅಧಿಕಾರವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಹೌದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಂ.ಜಿ. ಯತೀಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಎಂ.ಜಿ.ಯತೀಶ್ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿರುವ ನ್ಯಾಯಮೂರ್ತಿ ಎನ್. ಎಸ್. ಸಂಜಯಗೌಡ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೇ, ತನ್ನ ಸಿಬ್ಬಂದಿ ವಿರುದ್ಧದ ಶಿಸ್ತು ಕ್ರಮದ ವಿಚಾರಣೆಯನ್ನು ಯಾರಿಗೆ ನೀಡಬೇಕೆಂಬ ಅಧಿಕಾರ ರಾಜ್ಯ ಸರ್ಕಾರಕ್ಕೆ ಮಾತ್ರ ಇರಲಿದೆ ಎಂದು ಪೀಠ ತಿಳಿಸಿದೆ. ವಿಚಾರಣೆ ವೇಳೆ ಅರ್ಜಿದಾರರ ವಿಚಾರ ಪರಿಶೀಲಿಸಿ ವಿವರವಾದ ವರದಿ ಪಡೆಯಲಾಗಿದೆ. ಅದರಂತೆ ಅರ್ಜಿದಾರರ ಕಡೆಯಿಂದ ಯಾವುದೇ ಲೋಪವಾಗಿಲ್ಲ. ಹಾಗಾಗಿ ಸರ್ಕಾರ ಇಲಾಖಾ ವಿಚಾರಣೆ…
ದಕ್ಷಿಣಕನ್ನಡ : ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರಲ್ಲಿ ಓರ್ವ ಯುವಕ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭುರೂ ಬಳಿ ನಡೆದಿದೆ. ಉಳಿದ ಇನ್ನಿಬ್ಬರು ಯುವಕರನ್ನು ಸ್ಥಳೀಯ ನಿವಾಸಿ ರಕ್ಷಿಸಿದ್ದಾರೆ. ಬಂಟ್ವಾಳ ತಾಲೂಕಿನ ಶಂಭುರು ಬಳಿ ನೇತ್ರಾವತಿ ನದಿಯಲ್ಲಿ ಮುಳುಗಿ ಯುವಕನೋರ್ವ ಸಾವನ್ನಪ್ಪಿದ್ದು, ನದಿಯಲ್ಲಿ ಈಜಲು ಮೂವರು ಯುವಕರು ತೆರಳಿದ್ದರು. ಈ ವೇಳೆ ಓರ್ವ ಯುವಕ ಸಾವನ್ನಪ್ಪಿದ್ದು ಸ್ಥಳೀಯ ನಿವಾಸಿ ಮತ್ತಿಬರನ್ನು ಸ್ಥಳೀಯ ನಿವಾಸಿ ಮಹಮ್ಮದ್ ಎನ್ನುವವರು ರಕ್ಷಿಸಿದ್ದಾರೆ.ಘಟನೆ ಕುರಿತಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಕ್ಷುಲ್ಲಕ ಕಾರಣಕ್ಕಾಗಿ ಸಹೋದರರ ಇಬ್ಬರ ನಡುವೆ ಗಲಾಟೆ ನಡೆದಿದ್ದು ಗಲಾಟೆಯು ವಿಕೋಪಕ್ಕೆ ತಿರುಗಿ, ತಮ್ಮ ತನ್ನ ಅಣ್ಣನನ್ನೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ನಾಲ್ಕೂರು ಗ್ರಾಮದ ಕಜ್ಜೆ ಅರಮನೆ ಜೆಡ್ಡು ಎಂಬಲ್ಲಿ ನಡೆದಿದೆ. https://kannadanewsnow.com/kannada/engagement-on-april-4-marriage-on-april-26-mla-samriddhi-manjunath-on-bjp-jds-alliance/ ಮೃತರನ್ನು ನಾಲ್ಕೂರು ಗ್ರಾಮದ ಕಜ್ಜೆ ಅರಮನೆಜೆಡ್ಡು ನಿವಾಸಿ ಗುಲಾಬಿ ಎಂಬವರ ಮಗ ಮಂಜುನಾಥ (35) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ, ಮೃತರ ತಮ್ಮ ವಿಶ್ವನಾಥ್ (30) ಎಂದು ಹೇಳಲಾಗುತ್ತಿದ್ದು ಇದೀಗ ಅಣ್ಣನನ್ನು ಹತ್ಯೆ ಮಾಡಿರುವಂತಹ ಆರೋಪಿ ವಿಶ್ವನಾಥ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. https://kannadanewsnow.com/kannada/former-cm-hd-k-p-bachegowda-quits-jds-joins-congress/ ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಮತ್ತು ವಿಶ್ವನಾಥ ಒಂದೇ ಮನೆಯಲ್ಲಿ ವಾಸವಾಗಿದ್ದು, ಆಗಾಗ ಗಲಾಟೆ ಮಾಡುತ್ತಿದ್ದರು. ಮಧ್ಯರಾತ್ರಿ ವೇಳೆ ಮಂಜುನಾಥ, ತನ್ನ ತಮ್ಮ ವಿಶ್ವನಾಥನನ್ನು ಉದ್ದೇಶಿಸಿ, ನನ್ನ ಹೆಂಡತಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿದನು. ಇದೇ ವಿಚಾರದಲ್ಲಿ ವಿಶ್ವನಾಥ ಕೋಪ ಗೊಂಡು ಛಾವಣಿಯಲ್ಲಿದ್ದ ದೊಣ್ಣೆಯಿಂದ ಮಂಜುನಾಥ ಅವರ ತಲೆಗೆ ಬಲವಾಗಿ…
ಕೋಲಾರ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರುತ್ತಿದ್ದು, ಇದೀಗ ಕೋಲಾರದಲ್ಲಿ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತಾಗಿ ವಿಶೇಷವಾಗಿ ಬಣ್ಣಿಸಿದ್ದಾರೆ.ಬಿಜೆಪಿ ಜೆಡಿಎಸ್ ಮೈತ್ರಿ ಸಂಬಂಧವನ್ನು ಮದುವೆ ಎಂದು ಬಣ್ಣಿಸಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ಪಕ್ಷದ ಶಾಸಕ ಸಮೃದ್ಧಿ ಮಂಜುನಾಥ್ ಈ ರೀತಿ ಹೇಳಿಕೆಯನ್ನ ನೀಡಿದ್ದು, ನಾವು ಗಂಡಿನ ಕಡೆಯವರು ಬಿಜೆಪಿಯವರು ಹೆಣ್ಣಿನ ಕಡೆಯವರು. ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಕೆ. 6 ರಂದು ನಿಶ್ಚಿತಾರ್ಥ. ಎಪ್ರಿಲ್ 26ರಂದು ಮದುವೆ ಎಂದು ಬನ್ನಿಸಿದ್ದಾರೆ. https://kannadanewsnow.com/kannada/sumalatha-ambareesh-i-will-announce-my-decision-on-april-3-after-collecting-the-views-of-my-supporters-and-workers/ ಕೋಲಾರ ಕ್ಷೇತ್ರದಲ್ಲಿ ಕೈನಿಂದ ಅಚ್ಚರಿ ಅಭ್ಯರ್ಥಿ ಕಣಕ್ಕೆ ಇಳಿಸಿರುವ ವಿಚಾರವಾಗಿ ಮಾತನಾಡಿದ ಅವರು ಕಳೆದೊಂದು ತಿಂಗಳಿನಿಂದ ಕೋಲಾರ ಜಿಲ್ಲೆಯನ್ನು ಹರಾಜು ಹಾಕುತ್ತಿದ್ದಾರೆ. ಇಡೀ ದೇಶದಲ್ಲೇ ಕೋಲಾರ ಜಿಲ್ಲೆಯನ್ನು ಲಜ್ಜೆ ಕೆಟ್ಟವರಂತೆ ಮಾಡಿದ್ದಾರೆ ಎಂದು ಕೋಲಾರದಲ್ಲಿ ಜೆಡಿಎಸ್ ಪಕ್ಷದ ಶಾಸಕ ಸಮೃದ್ಧಿ ಮಂಜುನಾಥ್ ಹೇಳಿಕೆ ನೀಡಿದರು. https://kannadanewsnow.com/kannada/rahul-gandhi-cautions-about-election-fixing-by-modi/ ನಾವು ಮೂರು ದಿನ ಅಭ್ಯರ್ಥಿಗಳಿದ್ದೇ ಮೊದಲೇ ತೊಡೆತಟ್ಟಿದ್ದೆವು ನಮ್ಮ ವಿರುದ್ಧ ಅಭ್ಯರ್ಥಿಗಳನ್ನು…
ಬೆಂಗಳೂರು : ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರಕ್ಕೆ ಸಂಸದ ಸುಮಲತಾ ಅಂಬರೀಶ್ ಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬೆಂಬಲಿಗರ ಕಾರ್ಯಕರ್ತರು ಹಾಗೂ ಹಿತೈಷಿಗಳ ಅಭಿಪ್ರಾಯವನ್ನು ಸಂಗ್ರಹಿಸಿ ಏಪ್ರಿಲ್ 3 ರಂದು ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ತಿಳಿಸಿದರು. https://kannadanewsnow.com/kannada/ask-for-his-home-address-in-belagavi-first-lakshmi-hebbalkar-on-jagadish-shettar/ ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸಕ್ಕೆ ಇಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್ ಡಿ ಕುಮಾರಸ್ವಾಮಿ ಭೇಟಿ ಆರೋಗ್ಯಕರವಾಗಿದೆ ಎಂದು ಕುಮಾರಸ್ವಾಮಿ ಭೇಟಿ ನಂತರ ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಸಂಸದೆ ಸುಮಲತಾ ಅವರು ಈ ವೇಳೆ ತಿಳಿಸಿದರು. https://kannadanewsnow.com/kannada/vintage-cars-bikes-rally-in-bengaluru-to-create-voter-awareness/ ಚರ್ಚೆಯ ವೇಳೆ ಹಳೆಯದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಡಿ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಸಹಕಾರ ನೀಡುವಂತೆ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಏಪ್ರಿಲ್ 3 ರಂದು ರಂದು ಮಂಡ್ಯದಲ್ಲಿ ಬೆಂಬಲಿಗರ ಸಭೆ ಕರೆದಿರುವ ಬಗ್ಗೆ ಅವರಿಗೆ ತಿಳಿಸಿದ್ದೇನೆ ಎಂದರು. https://kannadanewsnow.com/kannada/rashid-khan-breaks-mohammed-shami-record/ ಏಪ್ರಿಲ್ 3 ರಂದು ಮಂಡ್ಯದಲ್ಲಿ…
ಬೆಳಗಾವಿ : ಲೋಕಸಭೆ ಚುನಾವಣೆಗೆ ಬಿಜೆಪಿ ಬೆಳಗಾವಿ ಕ್ಷೇತ್ರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಟಿಕೆಟ್ ನೀಡಿದ್ದು ಇದೀಗ ಜಗದೀಶ್ ಶೆಟ್ಟರ್ ವಿರುದ್ಧ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಕಿಡಿ ಕಾರಿದ್ದು ಮೊದಲು ಬೆಳಗಾವಿಯಲ್ಲಿನ ಅವರ ಮನೆ ವಿಳಾಸ ಕೇಳಿ ಎಂದು ತಿಳಿಸಿದರು. https://kannadanewsnow.com/kannada/rashid-khan-breaks-mohammed-shami-record/ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಆರು ಬಾರಿ ಹುಬ್ಬಳ್ಳಿಯಲ್ಲಿ ಶಾಸಕರಾಗಿದ್ದಾರೆ. ಈಗ ಬೆಳಗಾವಿಗೆ ಬಂದು, ‘ಇದು ನನ್ನ ಕರ್ಮಭೂಮಿ’ ಎಂದು ಹೇಳುತ್ತಿದ್ದಾರೆ. ಮೊದಲು ಬೆಳಗಾವಿಯಲ್ಲಿನ ಅವರ ಮನೆ ವಿಳಾಸ ಕೇಳಿ.ನರೇಂದ್ರ ಮೋದಿ ಹೆಸರಿನಲ್ಲಿ ಗೆದ್ದುಬಂದ ಇಲ್ಲಿನ ಸಂಸದರು ಕಳೆದ 10 ವರ್ಷಗಳಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ. ಮೂಕ, ಕಿವುಡ ಮತ್ತು ಕುರುಡರಾಗಿರುವ ಇಂಥ ಸಂಸದರು ನಮಗೆ ಬೇಕೇ?’ ಎಂದು ಪ್ರಶ್ನಿಸಿದರು. https://kannadanewsnow.com/kannada/sumalatha-to-file-nomination-papers-in-mandya-on-april-4/ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಬಗ್ಗೆ ಮಾತನಾಡುವ ನರೇಂದ್ರ ಮೋದಿ ಅವರು, ಹಾಲಿ ಸಂಸದರಾಗಿದ್ದರೂ ಸುಮಲತಾ ಮತ್ತು ಮಂಗಲಾ ಅಂಗಡಿ ಅವರಿಗೆ ಏಕೆ ಟಿಕೆಟ್ ಕೊಡಲಿಲ್ಲ?ಬಿಜೆಪಿಯವರು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವುದನ್ನು…