Author: kannadanewsnow05

ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ನಟನೆಯ ಕಲ್ಟ್ ಚಿತ್ರದ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಎಂಬುವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರು ಮಾಗಡಿ ರಸ್ತೆಯಲ್ಲಿರುವ ಪೊಲೀಸ್ ಠಾಣೆಯಲ್ಲಿ ಚಿತ್ರತಂಡದ ವಿರುದ್ಧ NCR ದಾಖಲಾಗಿದೆ. ನವೆಂಬರ್ 25 ರಂದು ಚಿತ್ರದುರ್ಗದಲ್ಲಿ ಕಲ್ಟ್ ಸಿನಿಮಾ ಶೂಟಿಂಗ್ ಗೆ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಗೆ ದಿನಕ್ಕೆ 25 ಸಾವಿರ ರೂ. ನಿಗದಿ ಮಾಡಿ ಶೂಟ್ ಮಾಡುತ್ತಿದ್ದರು. ಶೂಟಿಂಗ್ ವೇಳೆ ಡ್ರೋನ್ ತುಂಡಾಗಿದ್ದು, ನಷ್ಟ ಭರಿಸದ ಚಿತ್ರದ ನಾಯಕ ಜೈದ್ ಖಾನ್ ಹಾಗು ನಿರ್ದೇಶಕ ಮೇಲೆ ಆರೋಪ ಮಾಡಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಲ್ಟ್ ಚಿತ್ರ ತಂಡದ ವಿರುದ್ಧ ಠಾಣೆಯಲ್ಲಿ NCR ದಾಖಲಾಗಿದೆ. ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಇದೀಗ ಎನ್ ಸಿ ಆರ್ ದಾಖಲಾಗಿದೆ. ಚಿತ್ರತಂಡಕ್ಕೆ ವಿಚಾರಣೆಗೆ ಬರುವಂತೆ ಪೊಲೀಸರು ಇದೀಗ ತಿಳಿಸಿದ್ದಾರೆ. ಮಂಗಳವಾರ…

Read More

ಬೆಳಗಾವಿ : ಕಾಂಗ್ರೆಸ್ ಪಕ್ಷದಲ್ಲಿದ್ದಾಗ ನನಗೆ ಪಕ್ಷ ಯಾವುದೇ ರೀತಿ ಕೆಟ್ಟದ್ದು ಮಾಡಿರಲಿಲ್ಲ. ಆದರೆ ಆ ಪಕ್ಸದಲ್ಲಿದ್ದಾಗ ಒಬ್ಬ ವ್ಯಕ್ತಿಯ ಷಡ್ಯಂತರದಿಂದ ನಾನು ಕಾಂಗ್ರೆಸ್ನಿಂದ ಹೊರಬಂದು ಬಿಜೆಪಿಗೆ ಸೇರಿದ್ದೇನೆ. ಆದರೆ ಬಿಜೆಪಿಯಲ್ಲಿ ಇದ್ದಾಗಲೂ ನನ್ನ ಮೇಲೆ ಷಡ್ಯಂತರ ಮಾಡಿದ್ದರು ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದರು. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿದ್ದಾಗ ಎಲ್ಲರೂ ಸೇರಿ ಷಡ್ಯಂತರ ಮಾಡಿದರಿಂದ ಕಾಂಗ್ರೆಸ್ ಪಕ್ಷದಿಂದ ಹೊರಬಂದೆ. ಬಳಿಕ ಬಿಜೆಪಿ ಸೇರಿಕೊಂಡೆ ಆದರೆ ಬಿಜೆಪಿಯಲ್ಲಿ ಬೆಳೆಯುತ್ತಿದ್ದಂತೆ ಇಲ್ಲೂ ಕೂಡ ಷಡ್ಯಂತರ ಮಾಡಿದರು. ಅದಕ್ಕೂ ನಾನು ಹೆದರಲಿಲ್ಲ ಎಂದು ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಶಾಸಕರ್ಮೇಶ್ ಜಾರಕಿಹೊಳಿ ಹೇಳಿದರು. ಜನರಿಗೆ ಮೋಸ ಮಾಡಿದ್ದರೆ ಹೆದರುತ್ತಿದ್ದೆ ಆದರೆ ಸಿಡಿಗೆ ಹೆದರಲ್ಲ ಎಂದಿದ್ದೆ. ನನಗೆ ಧೈರ್ಯ ಹೇಳಲು ಬಂದಿದ್ದ ಸ್ವಾಮೀಜಿಗಳಿಗೆ ನಾನು ಹೇಳಿದ್ದೆ. ನನ್ನ ವಿರುದ್ಧ ವೈಯಕ್ತಿಕ ಷಡ್ಯಂತರ ನಡೆದಿದೆ ಅಂತ ಹೇಳಿದ್ದೆ. ಒಡೆದು ಆಳುವ ನೀತಿಯಿಂದ ಹಿಂದುಳಿದ ಸಮುದಾಯಗಳಿಗೆ ಧಕ್ಕೆಯಾಗಿದೆ. ಕೊನೆ ಗಳಿಗೆಯಲ್ಲಿ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿಚಾರಣೆಯನ್ನು ಡಿಸೆಂಬರ್ 3ಕ್ಕೆ ಮುಂದೂಡಿ ಆದೇಶ ಹೊರಡಿಸಿದರು. ವಿಚಾರಣೆ ಸಂದರ್ಭದಲ್ಲಿ ಈಗಾಗಲೇ ನಟ ದರ್ಶನ್ ಪರ ವಕೀಲ ಸಿ ವಿ ನಾಗೇಶ್ ಅವರು ನಿನ್ನೆ ಸುದೀರ್ಘ ವಾದಂತಹ ವಾದ ಮಂಡನೆ ಮಾಡಿದ್ದರು. ನಿನ್ನೆ ನ್ಯಾಯಾಧೀಶರಾದಂತಹ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶಿಸಿದ್ದರು. ಇಂದು ಕೂಡ ವಿಚಾರಣೆ ನಡೆಸಿದ ಅವರು ಡಿಸೆಂಬರ್ 3ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಆದೇಶಿಸಿದರು. ಈ ಸಂದರ್ಭದಲ್ಲಿ ಆರೋಪಿ ನಾಗರಾಜು ಪರ ವಕೀಲರ ವಾದ ಮಂಡನೆ ಅಂತ್ಯವಾಯಿತು. ಹಾಗಾಗಿ ವಿಚಾರಣೆ ಡಿಸೆಂಬರ್ 3ಕ್ಕೆ ಹೈಕೋರ್ಟ್ ಮುಂದೂಡಿತು. ಇನ್ನೂ ಪವಿತ್ರಗೌಡ ಸೇರಿದಂತೆ ಉಳಿದವರ ಪರ ವಾದ ಮಂಡನೆ ಬಾಕಿ ಇದ್ದು, ಡಿಸೆಂಬರ್ 3ರಂದು ಸರ್ಕಾರದ ಪರವಾಗಿ ಎಸ್.ಪಿ.ಪಿ ವಾದಮಂಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Read More

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಇಂದಿರಾನಗರದ ಅಪಾರ್ಟ್‌ಮೆಂಟ್‌ನಲ್ಲಿ ಅಸ್ಸಾಂ ಮೂಲದ ಯುವತಿ ಮಾಯಾ ಗೊಗಾಯ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಪಟ್ಟಂತೆ ಕೊಲೆ ಆರೋಪಿ ಆರವ್ ಹನೋಯ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು ಮಾಯಾಳನ್ನು ಆತನ ಪ್ರಿಯಕರ ಆರವ್ ಅಪಾರ್ಟ್ಮೆಂಟ್ ನಲ್ಲಿ ಚಾಕುವಿನಿಂದ ಭೀಕರವಾಗಿ ಕೊಂದು ಅಲ್ಲಿಂದ ಪರಾರಿಯಾಗಿದ್ದ. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ಇದೀಗ ಹೊರ ರಾಜ್ಯದಲ್ಲಿ ಆತನ ಹೆಡೆಮುರಿ ಕಟ್ಟಿ ರಾಜ್ಯಕ್ಕೆ ಕರೆದುಕೊಂಡು ಬರುತ್ತಿದ್ದು, ವಿಚಾರಣೆಯ ಬಳಿಕವಷ್ಟೇ ಮಾಯಾಳ ಹತ್ಯೆಗೆ ಏನು ಕಾರಣ ಎನ್ನುವುದು ತಿಳಿಯಲಿದೆ . ಕಳೆದ ಕೆಲ ತಿಂಗಳ ಹಿಂದಷ್ಟೇ ಪರಿಚಯವಾಗಿದ್ದ ಇವರಿಬ್ಬರ ನಡುವೆ ಪ್ರೀತಿ ಶುರುವಾಗಿದೆ.ಇದೇ 23 ರಂದು ಇಂದಿರಾನಗರ ಸರ್ವೀಸ್ ಅಪಾರ್ಟ್‌ಮೆಂಟ್‌ಗೆ ಬಂದಿದ್ದರು. ಶನಿವಾರದಿಂದ ಅಪಾರ್ಟ್‌ಮೆಂಟ್‌ನಲ್ಲಿದ್ದ ಆರವ್ ಹನೋಯ್, ಮೂರು ದಿನಗಳ ಅಂತರದಲ್ಲಿ ಮಾಯಾ ಗೊಗಾಯ್‌ಳನ್ನು ಕೊಲೆ ಮಾಡಿದ್ದು, ಬಳಿಕ ಮಂಗಳವಾರ ಬೆಳಗ್ಗೆ 8.19 ಕ್ಕೆ ರೂಂನಿಂದ ಹೊರ ಹೋಗಿದ್ದಾನೆ ಎಂದು ತಿಳಿದು ಬಂದಿತ್ತು. ಇನ್ನು…

Read More

ತುಮಕೂರು : ಶಾಲೆಯಲ್ಲಿ ಶೇಂಗಾ ಚಿಕ್ಕಿ ತಿಂದು ಸುಮಾರು 46 ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥ ಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೋಣನಕುರಿಕೆ ಎಂಬಲ್ಲಿ ನಡೆದಿದೆ. ಇಂದು ಕೋಣನಕುರಿಕೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟದ ವೇಳೆ ನೀಡಿದ ಚಿಕ್ಕಿ ತಿಂದು 46 ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದಂತಹ ಮಕ್ಕಳಿಗೆ ಪಾವಗಡ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ವರದರಾಜು,.ಬಿಇಒ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

Read More

ಬೆಂಗಳೂರು : ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ, ಇದೀಗ ಉಪ್ಪಾರಪೇಟೆ ಪೊಲೀಸರು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದಾರೆ. ಹೌದು ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ಡಿಸೆಂಬರ್ 2 ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.ಇಂದು ಬೆಳಿಗ್ಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 299 ರ ಅಡಿ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸ್ವಾಮೀಜಿ ಹೇಳಿದ್ದೇನು? ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಚಂದ್ರಶೇಖರ ಸ್ವಾಮೀಜಿ ಮುಸ್ಲಿಮರಿಗೆ ಮತದಾನದ ಹಕ್ಕು ನಿಷೇಧಿಸುವಂತೆ ಒತ್ತಾಯಿಸಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆ ಬಗ್ಗೆ ಸೈಯದ್ ಎಂಬುವವರು ದೂರು ನೀಡಿದ್ದು, ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಮುಖ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದೆ. ಈ ಒಂದು ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಹಣ ಬಳಸಲಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದ್ದವು. ಆದರೆ ಇದೀಗ ಅಂಗವಿಕಲರ ಅನುದಾನದ ಹಣ ಕೂಡ ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂದು ಅಂಧ ಚೇತನ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಗೌತಮ್ ಅಗರ್ವಾಲ್ ಆರೋಪಿಸಿದ್ದಾರೆ ಹೌದು ಅಂಧ ಚೇತನ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಗೌತಮ್ ಅಗರ್ವಾಲ್ ಈ ಒಂದು ಆರೋಪ ಮಾಡಿದ್ದಾರೆ. ಸರ್ಕಾರದಿಂದ ವಿಕಲಚೇತನರಿಗೆ ಶೇಕಡ 80ರಷ್ಟು ಹಣ ಕಡಿತ ಮಾಡಿದ್ದಾರೆ. ಕಳೆದ ವರ್ಷ 54 ಕೋಟಿ ಹಣ ಮೀಸಲಿಟ್ಟಿದ್ದ ಸರ್ಕಾರ, ಈ ವರ್ಷ ಕೇವಲ 10 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದಾರೆ. ಫೆಡರೇಷನ್ ಗೆ ಮೀಸಲಿಟ್ಟ ಬಾಕಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಗೌತಮ್ ಅಗರ್ವಾವಾಲ್ ಅವರು ಗಂಭೀರವಾದ ಆರೋಪ ಮಾಡಿದ್ದಾರೆ. ಈಗಾಗಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ಹಗರಣಗಳನ್ನ ಇಟ್ಟುಕೊಂಡು ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದು, ಇದೀಗ…

Read More

ಚಾಮರಾಜನಗರ : ಶಾಲಾ ವಿದ್ಯಾರ್ಥಿಗಳಿದ್ದ ಆಟೋ ಹಾಗೂ ಬೈಕ್ ನಡುವೆ ಭೀಕರವಾದಂತಹ ಅಪಘಾತ ನಡೆದಿದ್ದು, ಈ ಒಂದು ಅಪಘಾತದಲ್ಲಿ ಓರ್ವ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಮಗೆರೆ ಎಂಬ ಗ್ರಾಮದಲ್ಲಿ ನಡೆದಿದೆ. ಇಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಮಗೆರೆ ಎಂಬಲ್ಲಿ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಮಂಗಲ ಗ್ರಾಮದ ಬಾಲಕ ವಿಮಲ್ ರಾಜ್ ಮೃತ ದುರ್ದೈವಿ. ಈ ಬಾಲಕ ಕಾಮಗೆರೆ ಗ್ರಾಮದ ಸೆಂಟ್​ ಕ್ಲೇವಿಯರ್ ಶಾಲೆಯಲ್ಲಿ 5ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ. ಬೈಕ್ ಹಾಗೂ ಆಟೋ ಅಪಘಾತ ನಡೆದು ಆಟೋ ಪಲ್ಟಿಯಾದ ಪರಿಣಾಮ ವಿಮಲ್ ರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಬಾಲಕರಿಗೆ ಗಂಭೀರ ಗಾಯವಾಗಿ‌ದ್ದರಿಂದ ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಓರ್ವ ಯೋಧ ವಿರುದ್ಧ ರಾಜ್ಯ ಮಹಿಳಾ ಹೋರಾಟಗಾರ್ತಿ ಲವ್, ಸೆಕ್ಸ್ ಮತ್ತು ದೋಖಾ ಆರೋಪ ಮಾಡಿದ್ದಾರೆ. ನಗರದ ಮಚ್ಚೆ ಗ್ರಾಮದ ನಿವಾಸಿ ಹೋರಾಟಗಾರ್ತಿ ಪ್ರಮೋದಾ ಹಜಾರೆ, ಬಿಜಗರ್ಣಿ ಗ್ರಾಮದ ಯೋಧ ಅಕ್ಷಯ್ ನಲವಡೆ ವಿರುದ್ಧ ವಂಚನೆ ಆರೋಪ ಮಾಡಿದ್ದಾರೆ. ಸದ್ಯ ನ್ಯಾಯಕ್ಕಾಗಿ ಯೋಧನ ಮನೆ ಮುಂದೆ ಹೋರಾಟಗಾರ್ತಿ ಧರಣಿ ಮಾಡಿದ್ದಾರೆ. ಹೌದು ನ್ಯಾಯಕ್ಕಾಗಿ ಯೋಧನ ಮನೆಯ ಮುಂದೆ ಪ್ರಮೋದ ಹಜಾರೆ ಪ್ರತಿಭಟನೆ ಮಾಡುತ್ತಿದ್ದಾರೆ. ಮದುವೆಯಾಗುವುದಾಗಿ ಯೋಧ ಅಕ್ಷಯ್ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಬೀಜಗರ್ಣಿ ಗ್ರಾಮದ ಅಕ್ಷಯ್ ನಲವಡೆ ವಿರುದ್ಧ ಇದೀಗ ವಂಚನೆ ಆರೋಪ ಕೇಳಿ ಬಂದಿದೆ. 6 ವರ್ಷದ ಹಿಂದೆ ಫೇಸ್ಬುಕ್ ಮೂಲಕ ಪ್ರಮೋದಾ ಅವರಿಗೆ ಅಕ್ಷಯ್ ಪರಿಚಯವಾಗಿದ್ದಾನೆ. ತನಗಿಂತ 14 ವರ್ಷದ ಹಿರಿಯಳಾದ ಪ್ರಮೋದಾ ಅವರೊಂದಿಗೆ ಅಕ್ಷಯ್ ಪ್ರೀತಿಯ ನಾಟಕ ಮಾಡಿದ್ದಾನೆ. ಮದುವೆಯಾಗುವುದಾಗಿ ಅಕ್ಷಯ್ ಹೋರಾಟಗಾರ್ತಿಗೆ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. 6 ವರ್ಷದ ಹಿಂದೆ ತಮ್ಮ ಮನೆಯ ದೇವರ ಕೋಣೆಯಲ್ಲಿ ಮದುವೆಯಾಗಿದ್ದ.…

Read More

ಕೋಲಾರ : ಶಾಸಕ ಯತ್ನಾಳ್ ಕಾಂಗ್ರೆಸ್ ಜೊತೆಗೆ ಒಳ ಒಪ್ಪಂದ ಮಾಡಿಕೊಂಡಿರಬಹುದು. ಕಾಂಗ್ರೆಸ್ ಬೆಂಬಲದಿಂದ ಯತ್ನಾಳ್ ಗೆದ್ದಿದ್ದು, ಹಾಗಾಗಿ ಅದೊಂದು ಗೆಲುವಲ್ಲ. ಯತ್ನಾಳ್ ಅವರು ಹುಚ್ಚರಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಬಿಸಿ ಪಾಟೀಲ್ ಕಿಡಿ ಕಾರಿದರು. ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ಕುರುಡುಮಲೆ ದೇಗುಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದೊಳಗೆ ಇದ್ದು ಒಳಗೆ ಚೂರಿ ಹಾಕುವವರಿದ್ದಾರೆ. ಬಿಜೆಪಿ ಶಾಲು ಹಾಕೊಂಡು ಪಕ್ಷದ ಅಧ್ಯಕ್ಷರ ವಿರುದ್ಧ ಮಾತನಾಡುತ್ತಾರೆ. ಯಾರೇ ಮಾತನಾಡಿದರು ಅವರದ್ದು ಹೊರಗೆ ತೆಗೆಯುತ್ತೇನೆ ಅಂತಾರೆ. ತಾಕತ್ತಿದ್ದರೆ ಅದೇನು ಗೊತ್ತು ತೆಗೆಯಿರಿ. ಹುಚ್ಚರಂತೆ ಬಸನಗೌಡ ಪಾಟೀಲ ಯತ್ನಾಳ್ ಮಾತನಾಡುತ್ತಿದ್ದಾರೆ ಎಂದು ಕಿಡಿ ಕಾರಿದರು. ಹೈಕಮಾಂಡ್ ಸುಮ್ಮನೆ ಇರಲ್ಲ ಕಾದು ನೋಡುವ ತಂತ್ರ ಅನುಸರಿಸುತ್ತಿದೆ. ಬೈ ಎಲೆಕ್ಷನ್ ಸೋಲಿಗೆ ವಿಜಯೇಂದ್ರ ಅವರನ್ನು ಹೊಣೆ ಮಾಡುವುದು ಸರಿಯಲ್ಲ. ಬೈ ಎಲೆಕ್ಷನ್ ಅಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲು ಗ್ಯಾರಂಟಿ ಕಾರಣ. ಗಣಲಕ್ಷ್ಮಿ ಯೋಜನೆಯ ಹಣ ಹಾಕಿ ಉಪಚುನಾವಣೆಯಲ್ಲಿ ಗೆದ್ದರು ಎಂದು ಕುರುಡುಮಲೆ ದೇಗುಲದಲ್ಲಿ ಮಾಜಿ ಶಾಸಕ…

Read More