Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ಒಂಟೆಗಳನ್ನು ಹುಡುಕಿಕೊಂಡು ಮನೆಯಿಂದ ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ ವಿಜಯಪುರದ ಇಂಡಿ ರಸ್ತೆಯಲ್ಲಿರುವ ತ್ಯಾಜ್ಯ ನೀರಿನ ಸಂಸ್ಕರಣ ಘಟಕದಲ್ಲಿ ಕಾಣೆಯಾಗಿದೆ ಮೂವರು ಮಕ್ಕಳು ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ನಗರದ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ಶವಗಳು ಪತ್ತೆ ಆಗಿವೆ. ಗದಗ ಮೂಲದ ಅನುಷ್ಕಾ ಅನೀಲ ದಹಿಂಡೆ (9) ವಿಜಯ ಅನಿಳ ದಹಿಂಡೆ (7) ಮತ್ತು ವಿಜಯಪುರ ಮೂಲದ ಮಿಹಿರ್ ಶ್ರೀಕಾಂತ ಜಾನಗೌಳಿ (7) ಮೃತ ಬಾಲಕರು ಎಂದು ಹೇಳಲಾಗುತ್ತಿದೆ. ಗದಗ ಮೂಲದ ಅನುಷ್ಕಾ ಹಾಗೂ ವಿಜಯ ಬೇಸಿಗೆ ರಜೆಗಾಗಿ ವಿಜಯಪುರದಲ್ಲಿರುವ ಮಾವನ ಮನೆಗೆ ಬಂದಿದ್ದರು. ನಿನ್ನೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ವಿಜಯಪುರದ ಚಾಬಕಸಾಬ್ ದರ್ಗಾದ ಬಳಿಯ ಮನೆಯ ಮುಂದೆ ಒಂಟೆ ಸವಾರಿ ಮಾಡಿದ್ದಾರೆ. ನಂತರ ಒಂಟೆಗಳನ್ನು ಹುಡುಕಿಕೊಂಡು ಮನೆಯಿಂದ ಹೋಗಿದ್ದರು ಎಂದು ಹೇಳಲಾಗುತ್ತಿದೆ. ಮಕ್ಕಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಟಿಟಿಸಿವಿಯಲ್ಲಿ ಸೆರೆಯಾಗಿದ್ದು, ಬಹಳ ಸಮಯವಾದರೂ ಮನೆಗೆ ಮಕ್ಕಳು ಬಾರದ ಕಾರಣ…
ಬೆಂಗಳೂರು : ಮಹಾರಾಷ್ಟ್ರದ ಮಾದರಿಯಲ್ಲಿಯೇ ಕರ್ನಾಟಕದಲ್ಲಿ ಕೂಡ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಕರ್ನಾಟಕದಲ್ಲಿ ಸರ್ಕಾರ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂಬ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಹಿಂದೆ ಹೇಳಿಕೆ ಇದೀಗ ಬಾರಿ ಸಂಚಲನ ಸೃಷ್ಟಿಸಿದೆ. ಈ ಒಂದು ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಮಾಜಿ ಸಚಿವ ಅಶ್ವಥ್ ನಾರಾಯಣ್ ಉತ್ತರಿಸಿದ್ದಾರೆ. ಬಿವೈ ವಿಜಯೇಂದ್ರ ಹೇಳಿದ್ದೇನು? ಇನ್ನು ಇದೇ ವಿಷಯವಾಗಿ ಬಿವೈ ವಿಜಯೇಂದ್ರ ಮಾತನಾಡಿದ್ದು ವಿರೋಧ ಪಕ್ಷವಾಗಿ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇವೆ ಸರ್ಕಾರ ಬಿಡಿಸುವ ಕೆಲಸ ನಾವು ಮಾಡುವುದಿಲ್ಲ ಆದರೆ ಚುನಾವಣಾ ರಿಸಲ್ಟ್ ಸರಕಾರದ ಮೇಲೆ ಪರಿಣಾಮ ಬೀರುತ್ತದೆ ಯಾವ ರೀತಿ ಪರಿಣಾಮ ಬೀಳುತ್ತೆ ಎಂಬುದಕ್ಕೆ ನಾವು ಹೊಣೆಗಾರರಲ್ಲ. ವಿರೋಧ ಪಕ್ಷದಲ್ಲೇ ನಾವು ಜವಾಬ್ದಾರಿಯಾಗಿ ಕೆಲಸ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು. ಅಶ್ವಥ್ ನಾರಾಯಣ ಹೇಳಿದ್ದೇನು? ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಡಾ. ಅಶ್ವತ್ ನಾರಾಯಣ್…
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಾಸಕ ಎಚ್ ಡಿ ರೇವಣ್ಣ ಅವರ ಅರ್ಜಿ ವಿಚಾರಣೆ ನಡೆಯುತ್ತಿದ್ದು ಇದೀಗ ವಿಚಾರಣೆಯನ್ನು ಕೋರ್ಟ್ 2.45ಕ್ಕೆ ಮುಂದೂಡಿದೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮಧ್ಯಾಹ್ನ 2:45 ಕ್ಕೆ ವಿಚಾರಣೆಯನ್ನು ಮುಂದೂಡಿತು. ಕಳೆದ ಎರಡು ಗಂಟೆಯಿಂದ ಎಚ್ಡಿ ರೇವಣ್ಣ ಅವರ ಜಾಮಿನ್ ಅರ್ಜಿ ವಿಚಾರಣೆ ನಡೆಯುತ್ತಿದ್ದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಾದ ಮತ್ತು ಪ್ರತಿವಾದ ನಡೆಯುತ್ತಿದೆ. ಶಾಸಕ ಎಚ್ ಡಿ ರೇವಣ್ಣ ಪರ ಸಿ ಎಸ್ ನಾಗೇಶ್ ಅವರು ವಾದ ಮಾಡುತ್ತಿದ್ದಾರೆ. ಎಸ್ ಐ ಟಿ ಪರ ಎಸ್ಪಿಪಿ ಜಾಯ್ನ ಕೊಥರಿ ಅವರು ವಾದ ಮಾಡುತ್ತಿದ್ದಾರೆ.
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎಸ್ ಐ ಟಿ ಅಧಿಕಾರಿಗಳು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದು ಈ ಒಂದು ವಿಚಾರಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಮೊಬೈಲ್ಗಳಲ್ಲಿ ಯಾವುದೇ ಕಾರಣಕ್ಕೂ ವಿಡಿಯೋಗಳನ್ನು ಇಟ್ಟುಕೊಳ್ಳಬೇಡಿ ಎಂದು ನಮ್ಮ ಕಾರ್ಯಕರ್ತರಿಗೆ ಹೇಳಿದ್ದೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ನಡೆಯುತ್ತಿರುವಾಗ ಆ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಬೆಂಗಳೂರಿನಲ್ಲಿ ಹಾಸನ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಹೇಳಿಕೆಯನ್ನು ನೀಡಿದರು. ಯಾರು ಏನು ಮಾಡಿದ್ದಾರೆ ಅಂತ ತನಿಖೆಯ ಮೂಲಕ ಗೊತ್ತಾಗುತ್ತದೆ ಯಾವುದೇ ಕಾರಣಕ್ಕೂ ಅಶ್ಲೀಲ ವಿಡಿಯೋಗಳನ್ನು ಇಟ್ಟುಕೊಳ್ಳಬೇಡಿ ಫಾರ್ವರ್ಡ್ ಮಾಡಬೇಡಿ ಅಂತ ನಮ್ಮ ಕಾರ್ಯಕರ್ತರಿಗೆ ಹೇಳಿದ್ದೆ. ಇಂದಿನವರೆಗೂ ಜವಾಬ್ದಾರಿಯುತ ವ್ಯಕ್ತಿಯಾಗಿ ನಡೆದುಕೊಂಡಿದ್ದೇನೆ ಎಂದು ತಿಳಿಸಿದರು. ಈ ರೀತಿ ಆದರೆ ಒಂದುವರೆ ಲಕ್ಷ ಜನರನ್ನು ವಶಕ್ಕೆ ಪಡೆಯಬೇಕು.…
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ಅಪಘಾತ ಒಂದು ನಡೆದಿದ್ದು, ಆಟೋಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ತಾವರೆ ಚಟ್ನಳ್ಳಿ ಬಳಿ ನಡೆದಿದೆ.ಆದರೆ ಡಿಕ್ಕಿ ಹೊಡೆದ ಕ್ಯಾಂಟರ್ ಚಾಲಕ ನೋಡಿಯೂ ನೋಡದಂತೆ ಪರಾರಿಯಾಗಿದ್ದಾನೆ. ಗಾನವಿ (17) ಮೃತ ದುರ್ದೈವಿ ಎಂದು ಹೇಳಲಗುತ್ತಿದೆ. ಘಟನೆಯಲ್ಲಿ ಈಕೆಯ ತಾಯಿ ಹಾಗೂ ಅಜ್ಜಿ ಗಾಯಗೊಂಡಿದ್ದಾರೆ. ಗಾನವಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ತನ್ನ ಕಾಲೇಜಿನ ಎದುರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ. ವೇಗವಾಗಿ ಬಂದ ಕ್ಯಾಂಟರ್ ಆಟೋಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ಎಡಕ್ಕೆ ಬಿದ್ದಿದೆ. ಆಟೋ ಎಡ ಭಾಗದಲ್ಲಿದ್ದ ಗಾನವಿ ಮೊದಲು ನೆಲಕ್ಕೆ ಬಿದ್ದಿದ್ದಾಳೆ. ಇದರಿಂದ ಆಕೆಯ ಹೊಟ್ಟೆ ಭಾಗಕ್ಕೆ ತೀವ್ರವಾಗಿ ಹೊಡೆತ ಬಿದ್ದಿದೆ. ಪರಿಣಾಮ ರಕ್ತಸ್ರಾವದಿಂದ ಗಾಯಗೊಂಡಿದ್ದ ಗಾನವಿ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾಳೆ. ಈಕೆಯ ತಾಯಿ ಹಾಗೂ ಅಜ್ಜಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತಂತೆ ಚೀಲೂರಿನಲ್ಲಿ ಪೊಲೀಸರು ಕ್ಯಾಂಟರ್ ಹಾಗೂ ಚಾಲಕನನ್ನು ವಶಕ್ಕೆ…
ಚಿಕ್ಕಮಗಳೂರು : ಜಿಲ್ಲೆಯ ಆಲ್ದೂರು ಸಮೀಪದ ಕಂಚಿನಕಲ್ಲು ದುರ್ಗದ ಖಾಸಗಿ ಕಾಫಿತೋಟದಲ್ಲಿ ವಿದ್ಯುತ್ ತಂತಿ ತಗುಲಿ ಆನೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಲ್ಲದೆ ಮೃತ ಪಟ್ಟಿರುವ ಆನೆ ಆಲ್ದೂರು ಸಮೀಪ ಕಾರ್ಮಿಕ ಮಹಿಳೆಯೋರ್ವರನ್ನು ತುಳಿದು ಸಾಯಿಸಿತ್ತು. ಮನುಷ್ಯರ ಮೇಲೆ ದಾಳಿ ಮಾಡಿ ಸಾಯಿಸುತ್ತಿದ್ದ ಆನೆಯೇ ಈಗ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.ಇತ್ತೀಚೆಗೆ ಈ ಭಾಗದಲ್ಲಿ ಆನಂದ ಪೂಜಾರಿ ಎಂಬುವರನ್ನು ಕಾಡಾನೆ ತುಳಿದು ಸಾಯಿಸಿತ್ತು. ಕೆಲ ತಿಂಗಳ ಹಿಂದೆಯೂ ಇದೇ ಭಾಗದಲ್ಲಿ ಕಾರ್ಮಿಕರೊಬ್ಬರನ್ನು ತುಳಿದು ಸಾಯಿಸಿತ್ತು. ಆನೆಯು ವಿದ್ಯುತ್ ಪ್ರವಹಿಸಿದ್ದರಿಂದ ಮೃತಪಟ್ಟಿರುವಂತೆ ತೋರುತ್ತಿದ್ದು, ಆನೆ ಸಾವನ್ನಪ್ಪಿರುವ ಜಾಗದಲ್ಲಿ ವಿದ್ಯುತ್ ತಂತಿ ಹಾದು ಹೋಗಿದೆ. ವಿದ್ಯುತ್ ಲೈನ್ ಪಕ್ಕದಲ್ಲಿ ಹಲಸಿನ ಮರವೂ ಇದೆ. ಆನೆ ಹಲಸಿನ ಹಣ್ಣು ತಿನ್ನುವ ಪ್ರಯತ್ನದಲ್ಲಿ ವಿದ್ಯುತ್ ತಂತಿಗೆ ದೇಹ ತಾಗಿ ಮೃತಪಟ್ಟಿದೆ. ಪಕ್ಕದಲ್ಲಿರುವ ಹಲಸಿನ ಮರದ ಕೊಂಬೆ ಮುರಿದು ಬಿದ್ದಿದೆ.ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೀದರ : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಖಚಿತ ಮಾಹಿತಿಯ ಮೇರೆಗೆ ಬೆಂಗಳೂರಿನ NCB ಅಧಿಕಾರಿಗಳು ಹಾಗೂ ಬೀದರ್ ಪೊಲೀಸರು ದಾಳಿ ಮಾಡಿ ಸುಮಾರು 15 ಕೋಟಿಗೂ ಮೌಲ್ಯದ ಅಧಿಕ ಗಾಂಜಾವನ್ನು ಇದೀಗ ಬೀದರ್ ಜಿಲ್ಲೆಯ ಔರಾದ ತಾಲೂಕಿನ ವನಮಾರಪಳ್ಳಿ ಬಳಿ ಜಪ್ತಿ ಮಾಡಿಕೊಂಡಿದ್ದಾರೆ. ಜಿಲ್ಲೆಯ ಔರಾದ ತಾಲೂಕಿನ ವನಮಾರಪಳ್ಳಿ ಬಳಿ NCB ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಒಡಿಶಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದರು. ಹಾಗಾಗಿ ಖಚಿತವಾದಂತ ಮಾಹಿತಿಯನ್ನು ಪಡೆದುಕೊಂಡು ಬೆಂಗಳೂರಿನ ಎನ್ ಸಿ ಬಿ ಅಧಿಕಾರಿಗಳು ಹಾಗೂ ಪೊಲೀಸರಿಂದ ಈ ಒಂದು ಕಾರ್ಯಾಚರಣೆ ನಡೆಸಲಾಗಿದೆ. ಔರಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಇಲ್ಲಿನ ಬುರಾರಿ ಸರ್ಕಾರಿ ಆಸ್ಪತ್ರೆ ಮತ್ತು ಮಂಗೋಲ್ಪುರಿಯ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಬಾಂಬ್ ಬೆದರಿಕೆ ಕೇಳಿ ಬಂದಿತ್ತು. ಇದಾದ ಬಳಿಕ ಅಂದರೆ 2 ಗಂಟೆ ಅಂತರದಲ್ಲೇ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಸ್ವೀಕರಿಸಿದ 2 ಗಂಟೆಗಳ ಅಂತರದಲ್ಲೇ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಇಮೇಲ್ ಬಂದಿದೆ.ಕೂಡಲೇ ಎಚ್ಚೆತ್ತುಕೊಂಡಿರುವ ದೆಹಲಿ ಪೊಲೀಸರು ಅಗ್ನಿಶಾಮಕ ದಳದ ಅಧಿಕಾರಿಗಳೊಂದಿಗೆ ಶೋಧಕಾರ್ಯ ನಡೆಸುತ್ತಿದ್ದಾರೆ. IGI ಟರ್ಮಿನಲ್-3 ರಲ್ಲಿ ಭಾನುವಾರ ಸಂಜೆ 6:19ಕ್ಕೆ ಕರೆ ಬಂದಿದೆ. ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಕ್ರೈಂ ಬ್ರಾಂಚ್ ಅಧಿಕಾರಿ ತಂಡಗಳು ಆಸ್ಪತ್ರೆಗೆ ತೆರಳಿ ಶೋಧಕಾರ್ಯ ನಡೆಸುತ್ತಿವೆ. ಮತ್ತೊಂದು ಕಡೆ ಇ-ಮೇಲ್ ಮೂಲವನ್ನು ತನಿಖೆ ನಡೆಸುತ್ತಿದ್ದಾರೆ. ಸದ್ಯ ಆಸ್ಪತ್ರೆ ಹೊರಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯಪುರ : ಕಳೆದ ವರ್ಷದಿಂದ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿತ್ತು. ಇದರಿಂದ ಇಡೀ ರಾಜ್ಯದ ಜನರು ಬರಗಾಲಕ್ಕೆ ತತ್ತರಿಸಿ ಹೋಗಿದ್ದರು. ಇದೀಗ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೇ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ರುಕ್ಮವ್ವ ದುಂಡಪ್ಪ ಬಾಡಿಗಿ ಆತ್ಮಹತ್ಯೆಗೆ ಶರಣಾದ ರೈತ ಮಹಿಳೆ ಎಂದು ತಿಳಿದುಬಂದಿದೆ. ಹೌದು ಕಳೆದ ವರ್ಷದಿಂದ ರಾಜ್ಯವು ಮಳೆ ಬಾರದೇ ತೀವ್ರ ಬರಗಾಲ ಎದುರಿಸಿತ್ತು. ರೈತರು ಬೆಳೆಗಳಿಗೆ ನೀರಿಲ್ಲದೆ ಸಾಕಷ್ಟು ಕಷ್ಟ ಅನುಭವಿಸಿದ್ದರು. ಇದೀಗ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೇ ರೈತ ಮಹಿಳೆ ರುಕ್ಮವ್ವ ದುಂಡಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ. ರುಕ್ಮಿವ್ವ ದುಂಡಪ್ಪ ಅವರು, ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗದ್ಯಾಳ ಗ್ರಾಮದಲ್ಲಿ ಜಮೀನು ಹೊಂದಿದ್ದರು.ಹಾಗಾಗಿ ಅದೇ ಗ್ರಾಮದ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕಿನಲ್ಲಿ 1 ಲಕ್ಷ, ವಿಜಯಪುರ ಎಚ್ಡಿಎಫ್ಸಿ ಬ್ಯಾಂಕಿನಲ್ಲಿ 2.5 ಲಕ್ಷ, ಬಬಲೇಶ್ವರದ ಚೈತನ್ಯ ಪೈನಾನ್ಸ್ನಲ್ಲಿ 50…
ಬೀದರ್ : ಜಿಲ್ಲೆಯ ಬಸವಕಲ್ಯಾಣದಲ್ಲಿ ನೈತಿಕ ಪೊಲೀಸ್ಗಿರಿ ಘಟನೆ ನಡೆದಿದ್ದು, ಬಸವಕಲ್ಯಾಣದ ಹೊರವಲಯದ ಪಾರ್ಕ್ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜತೆ ಕುಳಿತಿದ್ದಕ್ಕೆ ಮುಸ್ಲಿಂ ಧರ್ಮೀಯ ಮಹಿಳೆ ಮೇಲೆ ಅದೇ ಧರ್ಮದ ಕೆಲ ಯುವಕರು ಹಲ್ಲೆ ಮಾಡಿದ್ದರು ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಘಟನೆ ಕುರಿತಂತೆ ಇದೀಗ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ ಬಸವಕಲ್ಯಾಣದ ಹೊರವಲಯದ ಪಾರ್ಕ್ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ ಧರ್ಮೀಯ ಮಹಿಳೆ ಮೇಲೆ ಅದೇ ಧರ್ಮದ ಕೆಲ ಯುವಕರು ಹಲ್ಲೆ ಮಾಡಿದ್ದರು.ವ್ಯಕ್ತಿ ಆಟೋ ಚಾಲಕನಾಗಿದ್ದು, ಈತನ ಜೊತೆಗೆ ನೀನು ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ, ಮುಸ್ಲಿಮರ ಹೆಸರು ಹಾಳು ಮಾಡುತ್ತೀಯಾ ಎಂದು ಕೆಲ ಮುಸ್ಲಿಂ ಯುವಕರು ಮಹಿಳೆ ಮೇಲೆ ಹಲ್ಲೆ ನಡೆಸಿದ್ದರು. ಸದ್ಯ ಪೊಲೀಸರು ಮೂವರನ್ನ ಬಂಧಿಸಿದ್ದಾರೆ.ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೈತಿಕ ಪೊಲೀಸ್ ಗಿರಿ ನಡೆಸಿದ ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು…













