Author: kannadanewsnow05

ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಹನಿ ಟ್ರ್ಯಾಪ್ ಕುರಿತು ಗಂಭೀರವಾದ ಚರ್ಚೆ ನಡೆಯಿತು.ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಹೇಳಿಕೆ ನೀಡಿದರು.ಬಳಿಕ ಕೆ ಎನ್ ರಾಜಣ್ಣ ಅವರು ಉತ್ತರಿಸಿ, ಯತ್ನಾಳ್ ಅವರಿಗೆ ಕ್ಲಾರಿಫಿಕೇಶನ್ ಕೊಡಲು ಬಯಸುತ್ತೇನೆ ಎಂದು ಈ ಕುರಿತು ಗೃಹ ಸಚಿವರಿಗೆ ದೂರು ನೀಡುತ್ತೇನೆ ಎಂದು ತಿಳಿಸಿದರು. ಬಳಿಕ ಗೃಹ ಸಚಿವರು ಸಚಿವ ಕೆ ಎನ್ ರಾಜಣ್ಣ ದೂರು ನೀಡಿದರೆ ಉನ್ನತಮಟ್ಟದ ತನಿಖೆಗೆ ಆದೇಶಿಸುತ್ತೇನೆ ಎಂದು ಪರಮೇಶ್ವರ್ ತಿಳಿಸಿದರು. ವಿಧಾನಸಭೆಯಲ್ಲಿ ಚರ್ಚೆಯ ಸಂದರ್ಭದಲ್ಲಿ ಸಚಿವ ಕೆ ಎನ್ ರಾಜಣ್ಣ ದೂರು ಕೊಡಲಿ ಉನ್ನತಮಟ್ಟದ ತನಿಖೆ ಮಾಡುತ್ತೇವೆ. ಒಬ್ಬರಿಗಾಯಿತು ಇಬ್ಬರಿಗೆ ಆಯ್ತು ಅನ್ನೋದಕ್ಕಿಂತ ಹೆಚ್ಚಾಗಿ ಇದಕ್ಕೆ ಒಂದು ಫುಲ್ ಸ್ಟಾಪ್ ಹಾಕಬೇಕಾಗಿದೆ. ಕರ್ನಾಟಕ ವಿಧಾನ ಮಂಡಲ ಏನಿದೆ ಇಡಿ ದೇಶದಲ್ಲಿ ಬಹಳ ಗೌರವ ಸಂಪಾದನೆ ಮಾಡಿದೆ. ಈ ಸದನದ ಸದಸ್ಯರು ನಮ್ಮ ತಂದೆಯವರು.ಅವರು ಕೂಡ…

Read More

ಬೆಂಗಳೂರು : ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಕುರಿತಂತೆ ಇಂದು ಗಂಭೀರವಾದ ಚರ್ಚೆ ನಡೆಯಿತು. ದೇವರು ಫೋಟೋ ಪ್ರದರ್ಶಿಸಿ ಶಾಸಕ ಮುನಿರತ್ನ ಭಾವಕರಾದರೆ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹಕಾರ ಸಚಿವರ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಆರೋಪಿಸಿದರು. ಇದಕ್ಕೆ ಕೆ.ಎನ್ ರಾಜಣ್ಣ ಕೇವಲ ನಮ್ಮ ರಾಜ್ಯಕ್ಕೆ ಮಾತ್ರ ಹನಿಟ್ರ್ಯಾಪ್ ಸೀಮಿತವಾಗಿಲ್ಲ. ರಾಷ್ಟ್ರಮಟ್ಟದಲ್ಲೂ ಕೂಡ 48 ಜನರ ಪೆನ್ ಡ್ರೈವ್ ಇದೆ ಎಂದು ಹೊಸ ಬಾಂಬ್ ಸಿಡಿಸಿದರು. ಈ ಕುರಿತು ಸಚಿವ ಕೆಎನ್ ರಾಜಣ್ಣ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆರೋಪಕ್ಕೆ ಉತ್ತರಿಸಿ, ಕರ್ನಾಟಕ ಸಿಡಿ ಪೆನ್ ಡ್ರೈವ್ ಕಾರ್ಖಾನೆಯಾಗಿದೆ. ಸಿಡಿ ಮಾಡುವಂತಹ 48 ಜನರು ಇದ್ದಾರೆ. ಇದು ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ ರಾಷ್ಟ್ರಮಟ್ಟದವರೆಗೂ ಹನಿ ಟ್ರ್ಯಾಪ್ ಆಗಿದೆ. 48 ಜನರ ಪೆನ್ ಡ್ರೈವ್ ಕೂಡ ಇದೆ ಈ ಕುರಿತು ನಾನು ಗ್ರಹ ಮಂತ್ರಿಗಳಿಗೆ ಲಿಖಿತವಾದ ದೂರು ನೀಡುತ್ತೇನೆ. ಹನಿ ಟ್ರ್ಯಾಕ್ ಹಿಂದೆ ದೊಡ್ಡ ಜಾಲವೇ ಇದೆ ಇದರ ಹಿಂದೆ ಯಾರೇ…

Read More

ಬೆಂಗಳೂರು : ರಾಜ್ಯದ ಸಚಿವರು ಒಬ್ಬರಿಗೆ ಎರಡು ಸಲ ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕವಾದ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೆ ಈಗ ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ವಿಷಯ ಮಾರ್ಧನಿಸುತ್ತಿದ್ದು, ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ವಿಧಾನಸಭೆಯಲ್ಲಿ ಹನಿ ಟ್ರ್ಯಾಪ್ ಕುರಿತು ಗಂಭೀರವಾಗಿ ಚರ್ಚೆ ನಡೆಯಿತು. ಈ ವೇಳೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹಕಾರ ಸಚಿವರಿಗೆ ಹನಿ ಟ್ರ್ಯಾಕ್ ಮಾಡಲಾಗಿದೆ ಎಂದು ಹೇಳಿಕೆ ನೀಡಿದರು. ಬಳಿಕ ಹನಿಟ್ರ್ಯಾಪ್ ಬಗ್ಗೆ ವಿಧಾನಸಭೆಯಲ್ಲಿ ಸಚಿವ ಕೆ ಏನ್ ರಾಜಣ್ಣ ಪ್ರಸ್ತಾಪಿಸಿದರು. ಗೃಹ ಸಚಿವರಿಗೆ ಈ ಕುರಿತು ನಾನು ಲಿಖಿತ ದೂರು ಕೊಡುತ್ತೇನೆ. ಗೃಹ ಸಚಿವರು ವಿಶೇಷ ತನಿಖೆ ಮಾಡಿಸಲಿ. ಇದರ ಹಿಂದಿರುವ ನಿರ್ದೇಶಕರು ಯಾರು ಎಂದು ಗೊತ್ತಾಗಲಿ, ನೆಪ ಮಾತ್ರಕ್ಕೆ ತನಿಖೆ ಎಂದು ಹೇಳುವುದು ಬೇಡ ಎಂದು…

Read More

ಬೆಂಗಳೂರು : ಬೆಂಗಳೂರು ಇಂಟರ್ನ್ಯಾಷನಲ್ ಸಿಟಿ ಆಗಿರುವದರಿಂದ ರಾತ್ರಿಯ ವೇಳೆಯೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲಸ ಮಾಡುವವರು ಇರುತ್ತಾರೆ ಹಾಗಾಗಿ ರಾತ್ರಿ ಒಂದು ಗಂಟೆಯವರೆಗೂ ಸಬ್ ಓಪನ್ ಮಾಡಬೇಕು ಎಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಚ್ಎಸ್ ಗೋಪಿನಾಥ್ ಅವರು ಪ್ರಶ್ನಿಸಿದಾಗ, ಡಿಸಿಎಂ ಡಿಕೆ ಶಿವಕುಮಾರ್ ಶೀಘ್ರದಲ್ಲಿ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು. ಇಂದು ಪರಿಷತ್ ನಲ್ಲಿ ಎಚ್ಎಸ್ ಗೋಪಿನಾಥ ಅವರು ಬೆಂಗಳೂರಿನಲ್ಲಿ ರಾತ್ರಿ ಒಂದು ಗಂಟೆವರೆಗೆ ಓಪನ್ ಮಾಡುವ ಕುರಿತು ಪ್ರಶ್ನಿಸಿದರು. ಇದಕ್ಕೆ ದನಿಗೂಡಿಸಿದ ಡಿಕೆ ಶಿವಕುಮಾರ್ ಬೆಂಗಳೂರು ಇಂಟರ್ನ್ಯಾಷನಲ್ ಸಿಟಿ. ಇಲ್ಲಿ ರಾತ್ರಿ ಸಮಯವು ಕೆಲಸ ಮಾಡುವವರು ಇರುತ್ತಾರೆ. ಹೀಗಾಗಿ ಬೆಂಗಳೂರಿ ನಗರವನ್ನು ಅಲೈವ್ ಇಡಬೇಕಾಗುತ್ತದೆ. ಗೃಹ ಸಚಿವರು ಅಬಕಾರಿ ಸಚಿವರ ಜೊತೆಗೆ ಚರ್ಚೆ ಮಾಡುತ್ತೇನೆ. ಕುಳಿತು ಚರ್ಚೆ ಮಾಡಿ ಈ ಬಗ್ಗೆ ನಿರ್ಣಯ ಮಾಡುತ್ತೇವೆ.ಸದಸ್ಯ ಹೆಚ್ ಎಸ್.ಗೋಪಿನಾಥ್ ಬೇಡಿಕೆಯಲ್ಲಿ ಅರ್ಥವಿದೆ. ರಾತ್ರಿ 1 ಗಂಟೆವರೆಗೆ ಪಬ್ ಓಪನ್ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ವಿಧಾನ ಪರಿಷತ್…

Read More

ಬೆಂಗಳೂರು : ಸದ್ಯಕ್ಕೆ ರಾಜ್ಯದಲ್ಲಿ ರಾಜಕಾರಣಿಗಳ ಮೇಲೆ ಹನಿಟ್ರ್ಯಾಪ್ ಆರೋಪ ಕೇಳಿ ಬರುತ್ತಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ಇದೀಗ ಲೋಕೋಪಯೋಗಿ ಇಲಾಖೆಯ ಸಚಿವರಾದಂತಹ ಸತೀಶ್ ಜಾರಕಿಹೊಳಿಯವರು ಸಚಿವರೊಬ್ಬರ ಮೇಲೆ ಎರಡು ಬಾರಿ ಹನಿಟ್ರ್ಯಾಪ್ ಆಗಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸಚಿವ ಸತೀಶ ಜಾರಕಿಹೊಳಿ ಸ್ಪೋಟಕವಾದ ಹೇಳಿಕೆ ನೀಡಿದ್ದು, ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್ ಆಗಿದೆ. ಸಚಿವರಿಗೆ ಹನಿಟ್ರ್ಯಾಪ್ ಆಗಿರುವುದು ನಿಜ. ಈ ಒಂದು ಹನಿಟ್ರ್ಯಾಪ್ ನಲ್ಲಿ ನಮ್ಮವರು ಅಷ್ಟೇ ಅಲ್ಲದೆ ಬೇರೆ ಪಕ್ಷದ ನಾಯಕರು ಕೂಡ ಹನಿಟ್ರ್ಯಾಪ್ ನಲ್ಲಿ ಸಿಲುಕಿದ್ದಾರೆ ಎಂದು ತಿಳಿಸಿದರು. ಕೆಲವರು ಹನಿಟ್ರ್ಯಾಪ್ ಅನ್ನು ಬಂಡವಾಳ ಮಾಡಿಕೊಂಡಿದ್ದಾರೆ. ಸಂಬಂಧಪಟ್ಟ ಸಚಿವರಿಗೆ ದೂರು ಕೊಡಲು ಹೇಳಿದ್ದೇನೆ. ಇದಕ್ಕೆ ಕಡಿವಾಣ ಹಾಕಬೇಕು. ಅಲ್ಲದೆ ನಮ್ಮಲ್ಲಿ ಒಬ್ಬ ಸಚಿವರ ವಿಕೆಟ್ ಬೀಳಿಸಲು ಯತ್ನಿಸಲಾಗುತ್ತಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಈ ಕುರಿತು ಗೃಹ ಸಚಿವರ ಜೊತೆಗೆ ಮಾತನಾಡಿ ಸೂಕ್ತವಾದಂತಹ ಕ್ರಮ ಕೈಗೊಳ್ಳುವಂತೆ ಹೇಳುತ್ತೇನೆ ಎಂದು ಅವರು ತಿಳಿಸಿದರು.

Read More

ಬೆಂಗಳೂರು : ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಕಂಡಕ್ಟರ್ ಮೇಲೆ ಮರಾಠಿಗರು ಹಲ್ಲೆ ಮಾಡಿದನ್ನು ಖಂಡಿಸಿ, ಇದೇ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಅಲ್ಲದೆ ಮಾರ್ಚ್ 22 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿದ್ದು, ಈ ಕುರಿತು ವಿಧಾನ ಪರಿಷತ್ತಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಸದ್ಯಕ್ಕೆ ಬಂದ್ ಅವಶ್ಯಕತೆ ಇರಲಿಲ್ಲ. ಸಂಜೆ ವೇಳೆಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಕುರಿತು ತೀರ್ಮಾನಿಸಲಾಗುತ್ತದೆ ಎಂದು ತಿಳಿಸಿದರು. ಪರಿಷತ್ ನಲ್ಲಿ ಕನ್ನಡ ಸಂಘಟನೆಗಳು 22ನೇ ತಾರೀಕು ಕರ್ನಾಟಕ ಬಂದ್ ಘೋಷಣೆ ಮಾಡಿದ್ದಾರೆ. ಅದೇ ದಿವಸ ಲಕ್ಷಾಂತರ ವಿದ್ಯಾರ್ಥಿಗಳು SSLC ಪರೀಕ್ಷೆ ಬರೆಯುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಆತಂಕದಲ್ಲಿ ಇದ್ದಾರೆ. ಈ ರೀತಿ ಬಂದ್ ಆಚರಣೆ ಆಗಿದ್ದೆ ಆದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ.ಅದಕ್ಕೆ ಸರ್ಕಾರದ ಕ್ರಮ ಏನು? ಎಂದು ಪರಿಷತ್ ನಲ್ಲಿ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್ ಬಂದ್ ಗಳನ್ನು ನಾವು ಎನ್ ಕರೆಜ್…

Read More

ಚಿಕ್ಕಮಗಳೂರು : ಚಿಕ್ಕಮಂಗಳೂರಿನಲ್ಲಿ ಭೀಕರವಾದ ಕೊಲೆಯಾಗಿದ್ದು, ತಂದೆಯ ಆಸ್ತಿಗಾಗಿ ಅಕ್ಕ ಮತ್ತು ತಮ್ಮನ ನಡುವೆ ಗಲಾಟೆ ನಡೆದಿದೆ. ಈ ವೇಳೆ ತಮ್ಮ ಅಕ್ಕನಿಗೆ ಕೆಲವು ಕೆಟ್ಟ ಪದಗಳಿಂದ ಬೈದಿದ್ದಾನೆ. ಇದರಿಂದ ಸಿಟ್ಟಿಗೆದ್ದ ಅಕ್ಕನ ಮಗ ಸ್ವಂತ ಸೋದರಮಾವನ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಗ್ರಾಮದ ಸಿದ್ದರಾಮೇಗೌಡ ಎಂದು ತಿಳಿದುಬಂದಿದ್ದು, ಇನ್ನು ಸಿದ್ದರಾಮೇಗೌಡನ ಅಕ್ಕನ ಮಗ ಸಂಜಯ್ ಕೊಲೆ ಮಾಡಿರುವ ಆರೋಪಿ ಎಂದು ತಿಳಿದುಬಂದಿದೆ. ಸಿದ್ದರಾಮೇಗೌಡ ಮತ್ತು ಆತನ ಅಕ್ಕ ನಿರ್ಮಲ ನಡುವೆ 26 ಎಕರೆ ತೆಂಗಿನ ತೋಟ, 24 ವಾಣಿಜ್ಯ ಮಳಿಗೆ, ಸೈಟ್ ವಿಚಾರವಾಗಿ ವಿವಾದವಿತ್ತು. ತಂದೆಯ ಆಸ್ತಿಗಾಗಿ ನಿರ್ಮಲ ನ್ಯಾಯಾಲಯದಲ್ಲಿ ದಾವೆ ಕೂಡ ಹೂಡಿದ್ದರು. ಇದೇ ವಿಚಾರವಾಗಿ ಗಲಾಟೆ ನಡೆದಿತ್ತು. ಗಲಾಟೆ ವೇಳೆ  ಸಿದ್ದರಾಮೇಗೌಡ ಅಕ್ಕನನ್ನು ಕೆಟ್ಟ ಪದಗಳಿಂದ ಬೈದಿದ್ದ, ಇದನ್ನೇ ಮನಸ್ಸಿನಲ್ಲಿ ಇಟ್ಟುಕೊಂಡ ಅಕ್ಕನ ಮಗ ಸಂಜಯ್ ಮರ್ಡರ್ ಪ್ಲಾನ್ ಮಾಡಿದ್ದ. ಅದರಂತೆ…

Read More

ಬೆಂಗಳೂರು : ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚಿನಲ್ಲಿ ವಿಜಯನಗರ ಜಿಲ್ಲೆಯ ಮೂಲದ ಮಹಿಳೆಯೋರ್ವಳನ್ನು, ಮೀನು ಕದ್ದಿದ್ದಾಳೆ ಎಂದು ಆರೋಪಿಸಿ ಸ್ಥಳೀಯರು ಆಕೆಯನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ ಇನ್ನು ಈ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಪ್ರಕರಣ ಕುರಿತು ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು.ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ. ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ. ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ…

Read More

ಬೆಳಗಾವಿ : ಹೋಳಿ ಹಬ್ಬ ಆಚರಣೆ ಆರಂಭವಾದಾಗಿನಿಂದ ರಾಜ್ಯದಲ್ಲಿ ಅನೇಕ ಕಡೆಗಳಲ್ಲಿ ಹಲವರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದ್ದು, ಇದೀಗ ಬೆಳಗಾವಿಯಲ್ಲಿ ಕೂಡ ಹೋಳಿ ಹಬ್ಬ ಆಚರಣೆ ಬಳಿಕ ಇಬ್ಬರು ಬಾಲಕರು ಸ್ನಾನಕೆಂದು ಬಾವಿಗೆ ತೆರಳಿದ್ದಾರೆ. ಈ ವೇಳೆ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಾಕ್ಸಂಬಾ ಗ್ರಾಮದಲ್ಲಿ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಾಕ್ಸಂಬಾ ಗ್ರಾಮದಲ್ಲಿ ಹೋಳಿ ಆಚರಣೆ ಬಳಿಕ ಸ್ನಾನಕ್ಕೆಂದು ಬಾವಿಗೆ ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ.ಹೋಳಿ ಆಚರಿಸಿ ಬಾವಿಗೆ ಸ್ನಾನಕ್ಕೆ ಹೋಗಿದ್ದಾಗ ಇಬ್ಬರು ಬಾಲಕರು ಮುಳುಗಿ ಸಾವನ್ನಪ್ಪಿದ್ದಾರೆ.ಮೃತ ಬಾಲಕರನ್ನು ವೇದಾಂತ ಹಿರೇಕೋಡಿ (11) ಮನೋಜ್ ಕಲ್ಯಾಣಿ (9) ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಇಬ್ಬರು ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸದಲಕ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.

Read More

ಮಂಡ್ಯ : ಹೊಳಿ ಹಬ್ಬದ ನಿಮಿತ್ಯವಾಗಿ ಪಾರ್ಟಿಯಲ್ಲಿ ಕಲುಷಿತ ಆಹಾರ ಸೇವನೆಯಿಂದಾಗಿ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ ಕಾಗೇಪುರ ಗ್ರಾಮದ ಗೋಕುಲ ವಿದ್ಯಾ ಸಂಸ್ಥೆಯಲ್ಲಿ ನಡೆದಿತ್ತು. ಮೇಘಾಲಯ ಮೂಲದ ಕೇರ್ ಲಾಂಗ್ (14) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದ, ನಿನ್ನೆ ನಾಮೀಬಂತೈ (12) ಎಂಬ ವಿದ್ಯಾರ್ಥಿ ಕೂಡ ಮೃತಪಟ್ಟಿದ್ದ.ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ತಿಳಿಸಿದ್ದಾರೆ. ಪ್ರಕರಣ ಹಿನ್ನೆಲೆ? ಕಳೆದ ಮಾರ್ಚ್ 14 ರಂದು ಮಳವಳ್ಳಿ ಪಟ್ಟಣದ ಮದನ್ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬ ಆಚರಣೆ ಮಾಡಿದ್ದರು. ಈ ಹೋಳಿ ಹಬ್ಬಕ್ಕೆ ಸಿದ್ದರಾಜು ಎಂಬವರ ಹೋಟೆಲ್‌ನಲ್ಲಿ ಪಲಾವ್ ಮಾಡಿಸಲಾಗಿತ್ತು. ಉಳಿಕೆಯಾದ ಪಲಾವ್‌ ಅನ್ನು…

Read More