Author: kannadanewsnow05

ಕಲಬುರ್ಗಿ : ಕಳೆದ ಎರಡು ದಿನಗಳಿಂದ ಕಲ್ಬುರ್ಗಿ ಯಾದಗಿರಿ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ ಇದರಿಂದ ಜನಜೀವನ ಸಂಪೂರ್ಣವಾಗಿಅಸ್ತವೆಸ್ತಗೊಂಡಿದ್ದು, ಭಾರಿ ಮಳೆಯಿಂದಾಗಿ ಮಳಖೇಡದಲ್ಲಿನ ಉತ್ತರಾದಿಮಠ ಇದೀಗ ಜಲಾವೃತವಾಗಿದೆ. ಹೌದು ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿರುವ ಮಳಖೇಡ ಗ್ರಾಮದಲ್ಲಿರುವ ಉತ್ತರಾದಿಮಠದ ಜಯತೀರ್ಥರ ಮೂಲ ಬೃಂದಾವನ ಭಾರಿ ಮಳೆ ಸುರಿದ ಪರಿಣಾಮ ಮಠ ಇದೀಗ ಜಲಾವೃತವಾಗಿದೆ. ಕಳೆದ ಎರಡು ದಿನಗಳಿಂದ ಕಲಬುರ್ಗಿ ಜಿಲ್ಲೆಯಾದ್ಯಂತ ಭಾರಿ ಮಳೆ ಆಗುತ್ತಿದೆ. ಭಾರಿ ಮಳೆಯಿಂದಾಗಿ ಕಾಗಿಣ ನದಿ ಉಕ್ಕಿ ಹರಿಯುತ್ತಿದ್ದು, ಕಾಗಿಣ ನದಿ ಬಳಿಯ ಉತ್ತರಾದಿಮಠಕ್ಕೂ ನದಿಯ ನೀರು ನುಗ್ಗಿದೆ. ಉತ್ತರಾದಿ ಮಠದ ಜಯತೀರ್ಥರ ಮೂಲ ಬೃಂದಾವನ ಜಲಾವೃತವಾಗಿದೆ.

Read More

ಬೆಂಗಳೂರು : ರಿವರ್ಸ್ ಬರುತ್ತಿದ್ದ ಲಾರಿಗೆ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಗ ಸಾವನ್ನಪ್ಪಿದ್ದು, ಹಿಂಬದಿ ಕುಳಿತಿದ್ದ ಆತನ ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆಯಲ್ಲಿ ಈ ಒಂದು ಅಪಘಾತ ನಡೆದಿದೆ. ಹೌದು ಲಾರಿಯ ಚಾಲಕ ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ ಲಾರಿಗೆ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮಗ ಸಾವನ್ನಪ್ಪಿದ್ದು, ತಾಯಿಗೆ ಗಂಭೀರವಾದ ಗಾಯಗಳಾಗಿವೆ. ಚಿತ್ರದುರ್ಗದ ನಿವಾಸಿ ಕುಶಾಲ್ (20) ಸ್ಥಳದಲ್ಲಿ ಸಾವನ್ನಪ್ಪಿದ್ದು ತಾಯಿ ಮಮತಾ (45) ಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಮತ್ತು ಮಗ ಬೈಕ್ ಮೇಲೆ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಹೊರಟಿದ್ದ ವೇಳೆ ಈ ಒಂದು ಅಪಘಾತ ನಡೆದಿದೆ. ನಿರ್ಲಕ್ಷ ಆರೋಪದ ಅಡಿ ಲಾರಿ ಚಾಲಕ ದಿವಾಕರ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಕುರಿತಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಧಾರವಾಡ : ಕಳೆದ ಕೆಲವು ವರ್ಷಗಳ ಹಿಂದೆ ಪಿಎಸ್ಐ ಹುದ್ದೆಗೆ ನಡೆದ ನೇಮಕಾತಿಯಲ್ಲಿ ನಡೆದ ಅಕ್ರಮ ಇಡಿ ದೇಶದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇದೀಗ ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಇಂದು ನಡೆದ ನೇಮಕಾತಿ ಪರೀಕ್ಷೆಯ ವೇಳೆ ಕೂಡ ನಕಲು ಮಾಡಿರುವ ಆರೋಪ ಕೇಳಿ ಬಂದಿದೆ. ಹೌದು ಧಾರವಾಡ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ವೇಳೆ ನಕಲು ಮಾಡಿರುವ ಆರೋಪ ಕೇಳಿಬಂದಿದ್ದು, ಬಾಸೆಲ್ ಮಿಷನ್ ಪಿಯು ಕಾಲೇಜಿನ ಕಟ್ಟಡದ ಬಳಿ ಕಾಪಿ ಚೀಟಿ ಪತ್ತೆಯಾಗಿದೆ. ಸಾಮಾನ್ಯ ಜ್ಞಾನ ಪರೀಕ್ಷೆ ವೇಳೆ ಕಾಪಿ ಚೀಟಿ ನಡೆದ ಆರೋಪ ಕೇಳಿ ಬಂದಿದೆ. ಚೀಟಿಯಲ್ಲಿ ಪ್ರಶ್ನೋತ್ತರ ಬರೆದು ಕಟ್ಟಡದಿಂದ ಕೆಳಗಡೆ ಎಸೆಯಲಾಗಿದೆ ಎಂದು ಆರೋಪಿಸಲಾಗುತ್ತಿದೆ. ಪರೀಕ್ಷೆ ನಡೆದ ಕಟ್ಟಡದ ಬಳಿ ಅಭ್ಯರ್ಥಿ ಮಹಾಂತೇಶ್ ಗೆ ಚೀಟಿ ಸಿಕ್ಕಿದೆ. ಕೂಡಲೇ ಅಭ್ಯರ್ಥಿ ಮಹಾಂತೇಶ್ ಪರೀಕ್ಷಾ ಕೇಂದ್ರದ ಸಿಬ್ಬಂದಿಗೆ ಪ್ರಶ್ನೋತ್ತರ ಚೀಟಿ ಒಪ್ಪಿಸಿದ್ದಾನೆ. ಚೀಟಿಯಲ್ಲಿ ಐದು ಪ್ರಶ್ನೆಗಳಿಗೆ ಉತ್ತರ ಬರೆದಿರುವ ಆರೋಪ ಕೇಳಿ ಬಂದಿದೆ. ತಹಶೀಲ್ದಾರ್ ದೊಡ್ಡಪ್ಪ, ಶಹರ ಪೊಲೀಸ್ ಠಾಣೆಯ…

Read More

ರಾಯಚೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀ ಸಿದ್ದರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವ ಅನುಮತಿ ವಿರುದ್ಧ ಹೈಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಸಿದ್ದಾರೆ. ಇದರ ಮಧ್ಯ, ಮುಡಾ ಹಗರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ರಾಯಚೂರಿನ ಹಾಲಿ ಸಂಸದ ಜಿ ಕುಮಾರ್ ನಾಯಕ್ ಅವರ ಹೆಸರು ಕೂಡ ಇದರಲ್ಲಿ ಕೇಳಿಬಂದಿದೆ. ಹೌದು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಪ್ರಕರಣ ವಿಚಾರಣೆ ಹೈಕೋರ್ಟ್ ಮುಂದೂಡಿರುವುದರಿಂದ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಆದರೆ, ನ್ಯಾಯಾಲಯದಲ್ಲಿ ವಾದ-ಪ್ರತಿವಾದದ ವೇಳೆ ಹಗರಣದಲ್ಲಿ ರಾಯಚೂರಿನ ಹಾಲಿ ಸಂಸದ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯಕ್ ಹೆಸರು ಕೇಳಿಬಂದಿದೆ. ಇದರಿಂದ ಜಿ.ಕುಮಾರ್ ನಾಯಕ್‌ಗೆ ಸಂಕಷ್ಟ ಎದುರಾಗುವ ಲಕ್ಷಣಗಳು ಇವೆ ಎನ್ನಲಾಗುತ್ತಿದೆ. ಈ ಕುರಿತು ಸ್ಪಷ್ಟನೆ ನೀಡಿದ ಜಿ ಕುಮಾರ ನಾಯಕ್, 3 ವರ್ಷ ಮೈಸೂರಿನಲ್ಲಿ ಡಿಸಿ ಯಾಗಿದ್ದೆ. ರೂಲ್ಸ್ ಪ್ರಕಾರ ಇದ್ದಿದ್ದರೆ ಮಾಡಿಕೊಡುತ್ತಿದ್ದೆ. ಇವರೊಬ್ಬರದ್ದೆ ಅಲ್ಲಾ ತುಂಬಾ ಜನರದ್ದು ಎನ್‌ಎ ಮಾಡಿದ್ದೇನೆ. ಭೂಪರಿವರ್ತನೆ ಎಲ್ಲಾ ಜಿಲ್ಲೆಗಳಲ್ಲೂ…

Read More

ಮಂಡ್ಯ : ಬಾಲಕಿಗೆ ಅದೇ ಗ್ರಾಮದ ಬಾಲಕರು ಹಿಂದೆ ಬಿದ್ದು ನನ್ನನ್ನು ಪ್ರೀತಿಸು ಎಂದು ಕಿರುಕುಳ ನೀಡಿದ್ದಾರೆ. ಈ ವಿಚಾರವಾಗಿ ಬಾಲಕರ ಮಧ್ಯ ಮಾತಿನ ಚಕಮಕಿ ನಡೆದಿದ್ದು ಇದರಿಂದ ಮನನೊಂದ ಬಾಲಕಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ ನಡೆದಿದೆ. ಹೌದು ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಾಲಕರಿಂದ ಕಿರುಕುಳ ಆರೋಪ ಕೇಳಿಬಂದಿದ್ದು, ಇದರಿಂದ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಇಂಪನಾ (15) ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿ ಎಂದು ತಿಳಿದುಬಂದಿದೆ. ಪ್ರೀತಿಸುವ ವಿಚಾರವಾಗಿ ಬಾಲಕರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಹನಕೆರೆ ಗ್ರಾಮದ ಬಾಲಕರು ಪ್ರೀತಿಸುವಂತೆ ಬಾಲಕಿಗೆ ಒತ್ತಾಯ ಮಾಡಿದ್ದಾರೆ.ಬಾಲಕರ ಮಾತಿನ ಚಕಮಕಿಯ ಆಡಿಯೋ ಕೂಡ ವೈರಲ್ ಆಗಿತ್ತು. ಬಾಲಕಿ ತಾಯಿಯ ವಾಟ್ಸಪ್ ಗೆ ಬಾಲಕರು ಅವರು ಮಾತನಾಡಿರುವ ಆಡಿಯೋ ಕಳುಹಿಸಿದ್ದಾರೆ. ಇದರಿಂದ ಮನನೊಂದು ಬಾಲಕಿ ಇಂಪನಾ ನೇಣಿಗೆ ಶರಣಾಗಿದ್ದಾಳೆ. ಘಟನೆಯ ಬಳಿಕ ಬಾಲಕರು ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ…

Read More

ಮೈಸೂರು : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ. ಸಚಿವನಾಗಿ ದಣಿದಿದ್ದೇನೆ. ಇನ್ನೇನಿದರೂ ಸಿಎಂ ಆಗಬೇಕು ಅಷ್ಟೇ ಎಂದು ಮೈಸೂರಲ್ಲಿ ಕಾಂಗ್ರೆಸ್ ನಾಯಕ ಆರ್.ವಿ ದೇಶಪಾಂಡೆ ಅಚ್ಚರಿಯ ಹೇಳಿಕೆಯನ್ನು ನೀಡಿದರು. ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅನುಮತಿ ಕೊಟ್ಟರೆ ಸಿಎಂ ಆಗುತ್ತೇನೆ. ಆದರೆ ಈಗ ಸಿಎಂ ಬಲ್ಲವಣೆ ಪ್ರಶ್ನೆಯೇ ಇಲ್ಲ. ನನಗೆ ಆಸೆ ಇದೆ ನಿಮ್ಮಂತಹ ಜನರಿಗೂ ಕೂಡ ಆಸೆ ಇದೆ .ಸಿಎಂ ಸಿದ್ದರಾಮಯ್ಯಗಿಂತ ನಾನು ಎರಡು ವರ್ಷ ದೊಡ್ಡವನು. ವರಿಷ್ಠರು ಅವಕಾಶಕೊಟ್ಟರು ಸಿಎಂ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ.ಈ ಹಿಂದೆ ರಾಮಕೃಷ್ಣ ಹೆಗಡೆ ವಿರುದ್ಧ ಕೂಡ ಫೋನ್ ಟ್ಯಾಪಿಂಗ್ ಆರೋಪ ಬಂದಿತ್ತು. ಆರೋಪ ಬಂದ ಕೂಡಲೇ ರಾಮಕೃಷ್ಣ ಹೆಗಡೆಯವರು ರಾಜೀನಾಮೆ ನೀಡಿದ್ದರು. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ಆರ್.ವಿ ದೇಶಪಾಂಡೆ ಟಾಂಗ್ ನೀಡಿದರು. ಈಗ ಪ್ರತಿದಿನ ಫೋನ್…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ಗೆ ಅನುಮತಿ ವಿಚಾರವಾಗಿ ಹೈಕೋರ್ಟ್ ನಲ್ಲಿ ಇದರ ವಿರುದ್ಧ ವಿಚಾರಣೆ ನಡೆಯುತ್ತಿದೆ. ಈ ಮಧ್ಯ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧದ ಪ್ರಾಸಿಕ್ಯೂಷನ್​​ಗೆ ಲೋಕಾಯುಕ್ತ ಎಸ್​ಐಟಿ ಮನವಿಯನ್ನು ಪುರಸ್ಕರಿಸಬೇಕೆಂದು ರಾಜ್ಯಪಾಲರನ್ನು ಒತ್ತಾಯಿಸುತ್ತಿದೆ. ಆದ್ರೆ, ಇದೀಗ ರಾಜಭವನ, ಕುಮಾರಸ್ವಾಮಿ ಸೇರಿದಂತೆ ಇತರೆ ಯಾರದೇ ಪ್ರಾಸಿಕ್ಯೂಷನ್ ಅರ್ಜಿ ಬಾಕಿ ಇಲ್ಲ ಎಂದು ಸ್ಪಷ್ಟನೆ ನೀಡಿದೆ. ಹೌದು ಈ ಕುರಿತಂತೆ ಬಿಜೆಪಿ, ಜೆಡಿಎಸ್​ ನಾಯಕರ ಮೇಲಿನ ಪ್ರಕರಣಗಳ ಸಂಬಂಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಯಾಗಿ ಸಚಿವರು, ಕಾಂಗ್ರೆಸ್​ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನ ಚಲೋ ನಡೆಸಿದರು. ಇದರ ಬೆನ್ನಲ್ಲೇ ರಾಜಭವನವು, ಪ್ರಾಸಿಕ್ಯೂಷನ್​ ಕಡತಗಳು ನಮ್ಮ ಕಚೇರಿಯಲ್ಲಿ ಬಾಕಿ ಇಲ್ಲ ಎಂದು ಮಾಹಿತಿ ನೀಡಿದೆ. ವಿವಿಧ ಸಕ್ಷಮ ಪ್ರಾಧಿಕಾರಗಳು ವಿಚಾರಣೆಗೆ ಅನುಮತಿ ಕೋರಿರುವ ಪ್ರಸ್ತಾವಣೆಗಳ ಬಾಕಿ ಇರು ಕುರಿತಂತೆ ರಾಜ್ಯಪಾಲರ ಕಚೇರಿಗೆ ಮಾಹಿತಿ ಹಕ್ಕಿನ ಅಡಿಯಲ್ಲಿ ಟಿಜೆ ಅಬ್ರಹಾಂ…

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ ನಡೆದಿದ್ದು, ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮದುವೆ ಆಗಬೇಕಿದ್ದ ಯುವಕ ಗಂಭೀರ ಗಾಯಗೊಂಡಿದ್ದು, ತಾಯಿ ಮೃತಪಟ್ಟ ಘಟನೆ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಮಂಚೇನಹಳ್ಳಿ ತಾಲೂಕಿನ ಸವಿತಾ ಎಂದು ಗುರುತಿಸಲಾಗಿದೆ. ಅಲಕಾಪುರ ಬಳಿ ಮಂಗಳವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ.ಅಪಘಾತದಲ್ಲಿ ತಾಯಿ ಸವಿತಾ ಸ್ಥಳದಲ್ಲೇ ಮೃತಪಟ್ಟಿದ್ದು, ಮಗ ಕುಶಾಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಕುಶಾಲ್​ಗೆ ವಾರದ ಹಿಂದೆಯಷ್ಟೇ ಬಿಶ್ಚಿತಾರ್ಥವಾಗಿದ್ದು, ಡಿಸೆಂಬರ್​ನಲ್ಲಿ ಮದುವೆ ಮಾಡಲು ದಿನ ಫಿಕ್ಸ್​ ಮಾಡಲಾಗಿತ್ತು. ಇವರು ಗೌರಿಬಿದನೂರಿನ ಪಾಂಡುರಂಗ ಜ್ಯುವೆಲರಿ ಅಂಗಡಿ ಮಾಲೀಕರಾಗಿದ್ದು, ಅಂಗಡಿಗೆ ಬೇಕಾಗಿದ್ದ ವಸ್ತುಗಳ ಖರೀದಿಗೆ ಬೆಂಗಳೂರಿಗೆ ಹೋಗಿದ್ದರು. ನಂತರ ವಾಪಸ್ ಬರುವ ವೇಳೆ ಘಟನೆ ನಡೆದಿದೆ.ಮಂಚೇನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು : ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಕೋರ್ಟ್ ಅನುಮತಿ ನೀಡಿತ್ತು. ಆದರೆ ದರ್ಶನ್ ವಿರುದ್ಧ ಜೈಲಿನಲ್ಲಿ ದಾಖಲಾದ ಪ್ರಕರಣದ ಕುರಿತು ತನಿಖೆ ನಡೆಯುತ್ತಿರುವುದರಿಂದ ಇಂದು ದರ್ಶನ್ ಸ್ಥಳಾಂತರಕ್ಕೆ ವಿಳಂಬವಾಗಿದೆ. ಹೌದು ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ನಾಳೆ ಶಿಫ್ಟ್ ಅಗಲಿದ್ದಾರೆ.ನಾಳೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಶಿಫ್ಟ್ ಆಗಲಿದ್ದಾರೆ. ದರ್ಶನ್ ವಿರುದ್ಧ ದಾಖಲಾದ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಇಂದು ದೂರುದಾರ ಸೋಮಶೇಖರ್ ವಿಚಾರಣೆ ನಡೆಯಲಿದೆ.ಪರಪ್ಪನ ಅಗ್ರಹಾರ ಜೈಲಿನ ಉಪ ಮಹಾ ನಿರೀಕ್ಷಕ ದರ್ಶನ್ ಕುಳಿತಿದ್ದ ಜಾಗದಲ್ಲಿ ದೂರುದಾರ ಮತ್ತು ಆರೋಪಿ ದರ್ಶನ್ ಸಮಕ್ಷಮ ಮಹಜರು ಪ್ರಕ್ರಿಯೆ ನಡೆಯಲಿದೆ. ಮಹಜರು ನಡೆಸಿ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.

Read More

ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಇದೆ 30 ರಂದು ರಾಜಭವನ ಚಲೋಗೆ ಕರೆ ನೀಡಿದೆ. ಈ ವಿಚಾರವಾಗಿ ಕೇಂದ್ರ ಸಚಿವ HD ಕುಮಾರಸ್ವಾಮಿ ರಾಜಭವನ ಚಲೋ ಬದಲು ಸೋನಿಯಾ ಗಾಂಧಿ ಮನೆ ಚಲೋ ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ. ಮಂಡ್ಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು 30ನೇ ತಾರೀಖು ರಾಜಭವನ ಚಲೋ ಮಾಡುತ್ತಿರುವುದಕ್ಕೆ ಬಹಳ ಸಂತೋಷ. ಅವರು ರಾಜಭವನದ ಜೊತೆಗೆ ರಾಷ್ಟ್ರಪತಿ ಭವನ ಚಲೋ ಕೂಡ ಮಾಡಲಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮನೆಗೆ ಕೂಡ ಹೋಗಲಿ. ಸತ್ತಿರುವ ವಿಚಾರ ಇಟ್ಟುಕೊಂಡು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಮಹಾನ್ ಅಪರಾಧ ಮಾಡಿದ್ದಾರೆ ಎನ್ನುತ್ತಿದ್ದಾರೆ. ನಾನೇ ಕೈ ಜೋಡಿಸಿ ಮನವಿ ಮಾಡುತ್ತೇನೆ. ರಾಜ್ಯಪಾಲರ ಅನುಮತಿ ಪಡೆದು ತನಿಖೆ ಮಾಡಲಿ ಎಂದು ಸಚಿವರು ಸವಾಲು ಹಾಕಿದರು. ಖರ್ಗೆ ಅವರ ಕುಟುಂಬ ಕೆಐಡಿಬಿಯಿಂದ ಸಿಎ ಸೈಟ್ ಪಡೆದಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ…

Read More